Article Image 1 Article Image 2

ಮಾರ್ಚ್ ನಲ್ಲಿ ಕೇಂದ್ರೀಯ ವಿವಿ ಆನ್ ಲೈನ್ ಪ್ರವೇಶ ಪರೀಕ್ಷೆ

Article Image

ಮಾರ್ಚ್ ನಲ್ಲಿ ಕೇಂದ್ರೀಯ ವಿವಿ ಆನ್ ಲೈನ್ ಪ್ರವೇಶ ಪರೀಕ್ಷೆ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿಗೆ 2024ರ ಮಾರ್ಚ್ 11ರಿಂದ 28ರವರೆಗೆ ಆನ್ ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಡಿ.26ರಿಂದ ಆನ್ ಲೈನ್ ಮೂಲಕ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭಗೊಂಡಿದ್ದು, ಜ.24ರಂದು ಸಂಜೆ 5ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿ ತಿದ್ದುಪಡಿಗೆ ಜ.27ರಿಂದ 29ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ನಾತಕ ಪದವಿಯ ಅಂತಿಮ ಸೆಮಿಸ್ಟರ್ ನಲ್ಲಿ ಓದುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಸಹ http://pgcuet.samarth.ac.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಿಯುಕೆ ಕೋರ್ಸುಗಳ ವಿವರ ಮತ್ತು ನಿಗದಿಪಡಿಸಲಾಗಿರುವ ಅರ್ಹತೆ ಕುರಿತು ವಿಶ್ವವಿದ್ಯಾಲಯದ ವೆಬ್ ಸೈಟ್ www.cuk.ac.in ಮತ್ತು http://nta.ac.in ಹಾಗೂ http://pgcuet.samarth.ac.in ಮೂಲಕ ಪರಿಶೀಲಿಸಬಹುದಾಗಿದೆ ಎಂದರು.

ವಸಂತ ಗಿಳಿಯಾರ್ ರವರಿಂದ ಭುವನವಾಹಿನಿ ವೆಬ್ ಸೈಟ್ ಅನಾವರಣ

Article Image

ವಸಂತ ಗಿಳಿಯಾರ್ ರವರಿಂದ ಭುವನವಾಹಿನಿ ವೆಬ್ ಸೈಟ್ ಅನಾವರಣ

ಕುಂದಾಪುರ ಜ. 16: ಭುವನವಾಹಿನಿ ಜಿನಮಿತ್ರ ಮತ್ತು ಜನಮಿತ್ರ ಪತ್ರಿಕೆಯು ರಜತ ವಷ೯ ಪೂರೈಸಿರುವ ಈ ಸುಸಂದಭ೯ದಲ್ಲಿ ಭುವನವಾಹಿನಿಯ ನೂತನ ವೆಬ್ ಸೈಟ್ ನ್ನು ಪತ್ರಕತ೯ ವಸಂತ ಗಿಳಿಯಾರ್ ಇವರು ಉದ್ಘಾಟಿಸುವ ಮೂಲಕ ಅನಾವರಣಗೊಳಿಸಿ ಶುಭ ಹಾರೈಸಿದರು ಮತ್ತು ಭುವನವಾಹಿನಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ| ವಿಜಯ ಕುಮಾರ್ ಕತ್ತೋಡಿರವರು ಮೊದಲ ನ್ಯೂಸ್ ನ್ನು ಅಪ್ಲೋಡ್ ಮಾಡುವ ಮೂಲಕ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಭುವನವಾಹಿನಿಯ ಪರವಾಗಿ ಶ್ರೀಮುಖ ವಿ. ಕೆ, ಹರ್ಷೇಂದ್ರ ಕುಮಾರ್ ಮೂಡುಕೋಡಿ, ಪ್ರಣಾಮ್ ಎಂ. ಬಿ, ಮಮತಾ ಮತ್ತು ಪವಿತ್ರ ಉಪಸ್ಥಿತರಿದ್ದರು

ಎಂ. ಬಾಹುಬಲಿ ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆ

Article Image

ಎಂ. ಬಾಹುಬಲಿ ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ ಲಿ., ಇದರ ಅಧ್ಯಕ್ಷರಾಗಿ “ಸಹಕಾರ ರತ್ನ” ಎಂ. ಬಾಹುಬಲಿ ಪ್ರಸಾದ್ ನ್ಯಾಯವಾದಿ ಇವರು ಎರಡನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಕೆ. ಅಭಯಚಂದ್ರ ಜೈನ್, ಅಶೋಕ ಕಾಮತ್ ಎಂ.ಪಿ., ಎಂ. ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಮನೋಜ್ ಕುಮಾರ್ ಶೆಟ್ಟಿ, ಸಿ. ಎಚ್. ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಈಗಾಗಲೇ ಎಂ. ಗಣೇಶ್ ನಾಯಕ್, ಜಾರ್ಜ್ ಮೋನಿಸ್, ಎಂ. ಪದ್ಮನಾಭ ಹಾಗೂ ದಯಾನಂದ ನಾಯ್ಕರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಫೆ. 22 - ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಫೆ. 22 - ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು ಪರಮಪೂಜ್ಯ ಯುಗಳ ಮುನಿವರ್ಯರಾದ ೧೦೮ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ೧೦೮ ಅಮರಕೀರ್ತಿ ಮುನಿ ಮಹಾರಾಜರ ಪಾವನ ಸಾನಿಧ್ಯ-ಶುಭಾಶೀರ್ವಾದಗಳೊಂದಿಗೆ, ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ʼರಾಜರ್ಷಿʼ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಕಾರ್ಯಾಧ್ಯಕ್ಷತೆಯಲ್ಲಿ ಫೆ. 22ರಿಂದ ಮಾ. 1ರ ತನಕ ಜರಗಲಿದೆ.

First Previous

Showing 10 of 10 pages

Next Last