Article Image 1 Article Image 2

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Article Image

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ ಮುಳಿಯದಲ್ಲಿ ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆಯು ಆಗಸ್ಟ್ 23ರಂದು ಸಂಜೆ 3.00ಗಂಟೆಗೆ ಬೆಳ್ತಂಗಡಿ ಮುಳಿಯ ಶೋರೂಮ್ ಮುಂಭಾಗದಲ್ಲಿ ನಡೆಯಲಿದೆ. ಮುದ್ದು ಕೃಷ್ಣ- 0-3 ವರ್ಷ ಬಾಲ ಕೃಷ್ಣ- 4-7 ವರ್ಷ ರಾಧಾ ಕೃಷ್ಣ- 8-12 ವರ್ಷ (ಇಬ್ಬರು ಕಡ್ಡಾಯ). ಸ್ಪರ್ಧೆಯ ನಿಬಂಧನೆಗಳು * ಆಗಸ್ಟ್ 21 ರ ಒಳಗೆ ನೋಂದಾಯಿಸಿಕೊಳ್ಳಬೇಕು * ತೀರ್ಪುಗಾರರ ತೀರ್ಮಾನವೇ ಅಂತಿಮ * ನಿರ್ದಿಷ್ಟ ಸಮಯಕ್ಕೆ ಹಾಜರಿರಬೇಕು * ಸ್ಪರ್ಧಿಗಳು ತಮ್ಮ ಆಧಾರ್ ಕಾರ್ಡ್ ತರಬೇಕು * ಪ್ರತಿ ವಿಭಾಗಕ್ಕೂ ನಿರ್ದಿಷ್ಟ ಸಮಯ ನೀಡಲಾಗುವುದು (2-3 ನಿಮಿಷ) * ಪ್ರತಿ ವಿಭಾಗಕ್ಕೂ ವೇಷ ಭೂಷಣವನ್ನು ತಯಾರಿ ಮಾಡಿಕೊಂಡು ಬರಬೇಕು * ಸ್ಪರ್ಧಿಗಳು ತಮಗೆ ಬೇಕಾದ ಹಾಡನ್ನು ತಾವೇ ತರಬೇಕು * ಫೋಟೋಶೂಟ್ ಮಾಡಲು ಮುಕ್ತ ಅವಕಾಶ * ವಿಜೇತ ಸ್ಪರ್ಧಾಳುಗಳ ಫೋಟೋ ವೀಡಿಯೋವನ್ನು ಮುಳಿಯ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಾಕಲಾಗುವುದು * ವಿಜೇತ ಸ್ಪರ್ಧಿಗಳಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ನೋಂದಾವಣೆಗಾಗಿ: 9902349916 8792530916.

ಸತ್ತೂರು, ಧಾರವಾಡ: ಡೇಟಾ ಟು ಡಿಸಿಷನ್ - ಒಂದು ದಿನದ ಕಾರ್ಯಾಗಾರ

Article Image

ಸತ್ತೂರು, ಧಾರವಾಡ: ಡೇಟಾ ಟು ಡಿಸಿಷನ್ - ಒಂದು ದಿನದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗವು, ಭಾರತೀಯ ವೈದ್ಯಕೀಯ ಸೂಕ್ಷ್ಮಾಣು ಜೀವಶಾಸ್ತ್ರಜ್ಞರ ಸಂಘ, ಕರ್ನಾಟಕ ರಾಜ್ಯ ಘಟಕದ ಸಹಯೋಗದೊಂದಿಗೆ "ಡೇಟಾ ಟು ಡಿಸಿಷನ್" ಒಂದು ದಿನದ ನಿರಂತರ ಕಲಿಕಾ ಕಾರ್ಯಾಗಾರವನ್ನು “ರೋಗ ನಿರೋಧಕದ ನೀತಿ ಮತ್ತು ವೈದ್ಯರ ಸಲಹೆಗೆ ಕೃತಕ ಬುದ್ಧಿಮತೆಯ ಮಾಹಿತಿ” ಎಂಬ ಧ್ಯೇಯೆಯೊಂದಿಗೆ ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮತ್ತು ಮುಖ್ಯ ಅತಿಥಿಯವರಾದ ಕೆ.ಎಲ್.ಇ ವಿಶ್ವವಿದ್ಯಾಲಯದ, ಜೆ.ಎನ್. ವೈದ್ಯಕೀಯ ಕಾಲೇಜಿನ ಸೂಕ್ಷಾö್ಮಣು ಜೀವವಿಜ್ಞಾನದ ಪ್ರಾಧ್ಯಾಪಕರು ಮತ್ತು ವೈದ್ಯಕೀಯ ಸೂಕ್ಷ್ಮ ಜೀವಶಾಸ್ತ್ರಜ್ಞರ ಭಾರತೀಯ ಸಂಘದ ಅಧ್ಯಕ್ಷರಾದ ಡಾ. ಮಹಾಂತೇಶ್ ನಾಗಮೋತಿ ಮತ್ತಿತರ ಗಣ್ಯರು ಕಾರ್ಯಗಾರವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯಾದ್ಯಂತ 250ಕ್ಕೂ ಹೆಚ್ಚು ಸೂಕ್ಷ್ಮಾಣು ಜೀವಶಾಸ್ತ್ರಜ್ಞರು ಮತ್ತು ಇತರ ವೈದ್ಯಕೀಯ ವೃತ್ತಿಪರರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಡಾ. ಆರ್.ಡಿ. ಕುಲಕರ್ಣಿ, ಹಿರಿಯ ಸೂಕ್ಷ್ಮ ಜೀವಶಾಸ್ತ್ರಜ್ಞ ಡಾ. ಶಾರೂನ್, ಡಾ. ಅಮಿತ್ ಜೋಶಿ, ಡಾ. ಸುಘೋಷ್ ಕುಲಕರ್ಣಿ ಮತ್ತಿತರರು ಈ ಕಾರ್ಯಾಗಾರದಲ್ಲಿ ತಜ್ಞ ಉಪನ್ಯಾಸ ನೀಡಿದರು. ಡಾ. ಮಹಾಂತೇಶ್ ನಾಗಮೋತಿ ಮತ್ತು ಸಾಕೇತ್ ಶೆಟ್ಟಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡುತ್ತಾ: ರೋಗ ನಿರೋಧಕ ಮಾತ್ರೆಗಳ ದುರುಪಯೋಗ ಮತ್ತು ಅತಿಯಾದ ಬಳಕೆಯನ್ನು ನಿಯಂತ್ರಿಸಬೇಕು. ಸೂಕ್ಷ್ಮಾಣು ಜೀವಶಾಸ್ತ್ರಜ್ಞರು ರೋಗ ನಿರೋಧಕಗಳ ತರ್ಕಬದ್ಧ ಬಳಕೆಯಲ್ಲಿ ಸದಾ ಮಾರ್ಗದರ್ಶನ ಮಾಡುತ್ತಾ ಮುಂದಾಳತ್ವ ವಹಿಸುತ್ತಾರೆ. ಎಐ ತಂತ್ರಜ್ಞಾನವು ವೈದ್ಯಕೀಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತನ್ನ ಮಹತ್ತರ ಕೊಡುಗೆಯನ್ನು ನೀಡುತ್ತಿದೆ. ಎಐ ತಂತ್ರಜ್ಞಾನವು ಆರೋಗ್ಯ ವೃತ್ತಿಪರರ ಕಾರ್ಯಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಹೊರತು ವೃತ್ತಿಪರರಿಗೆ ಬದಲಿಯಾಗಲು ಸಾಧ್ಯವಿಲ್ಲ. ವೈದ್ಯಕೀಯ ಕ್ಷೇತ್ರಕ್ಕೆ ಎಐ ತಂತ್ರಜ್ಞಾನ ಪ್ರವೇಶಿಸಿದ್ದರಿಂದ ವೈದ್ಯರು ತಮ್ಮ ಜ್ಞಾನವನ್ನು ಉನ್ನತಿಕರಿಸಬೇಕಾದ ಅನಿವಾರ್ಯತೆಗಳಿವೆ. ಈ ಕಾರ್ಯಕ್ರಮದಲ್ಲಿ ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಭಾರತೀಯ ವೈದ್ಯಕೀಯ ಸೂಕ್ಷ್ಮ ಜೀವಶಾಸ್ತ್ರಜ್ಞರ ಸಂಘ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಯಾದಗಿರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ನವಾಜ್ ಒಮರ್, ಸೂಕ್ಷ್ಮಾಣು ಜೀವಿ ಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಂಘಟನಾ ಸಮಿತಿಯ ಅಧ್ಯಕ್ಷರಾದ ಡಾ. ಅಜಂತ್ ಜಿ.ಎಸ್. ಮತ್ತಿತ್ತರರು ಉಪಸ್ಥಿತರಿದ್ದರು. ಸಂಘಟನಾ ಸಮಿತಿಯ ಕಾರ್ಯದರ್ಶಿಗಳಾದ ಡಾ. ಮಂಜುನಾಥ್ ಎಚ್, ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಾಗಾರದ ಮಹತ್ವವನ್ನು ತಿಳಿಸಿದರು. ಡಾ. ಪವಿತ್ರಾ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಶುಭದಾ ಸಿ. ವಂದನಾಪರ್ಣೆ ಸಲ್ಲಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 46 ವರ್ಷ ಪ್ರಾಯದ ರೋಗಿಯೊಬ್ಬರಿಗೆ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಬೆನ್ನು ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಮಹೇಶ್ ಕೆ., ಮೂಳೆ ಶಸ್ತ್ರಚಿಕಿತ್ಸಾ ವೈದ್ಯರಾದ ಡಾ| ಶತಾನಂದ ಪ್ರಸಾದ್ ರಾವ್ ಮತ್ತು ಅರೆವಳಿಕೆ ತಜ್ಞರಾದ ಡಾ| ಚೈತ್ರಾ ಆರ್. ಇವರ ತಂಡ ಯಶಸ್ವಿಯಾಗಿ ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸರ್ಜರಿ ಬಳಿಕ ರೋಗಿಯಲ್ಲಿ ಕುತ್ತಿಗೆ ನೋವು ನಿವಾರಣೆಯಾಗಿದೆ ಮತ್ತು ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ಸರ್ಜರಿ ನಡೆಸಿದ ಮೂಳೆ ಶಸ್ತ್ರಚಿಕಿತ್ಸಾ ಡಾ| ಶತಾನಂದ ಪ್ರಸಾದ್ ರಾವ್ ತಿಳಿಸಿದ್ದಾರೆ. ಏನಿದು ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ? ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ ಎನ್ನುವುದು ಕುತ್ತಿಗೆಯ ಮೇಲೆ ಪರಿಣಾಮ ಬೀರುವ ವಿವಿಧ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುವ ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸಾ ವಿಧಾನವಾಗಿದೆ. ಈ ಶಸ್ತ್ರಚಿಕಿತ್ಸಾ ವಿಧಾನದಲ್ಲಿ ಅತೀ ಸಣ್ಣ ಛೇದನದೊಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುವುದರಿಂದ ಅತೀ ಕಡಿಮೆ ಅಂಗಾಂಶಗಳ ಹಾನಿ, ಶೀಘ್ರ ಚೇತರಿಕೆ, ಕಡಿಮೆ ನೋವು, ಅತೀ ಕಡಿಮೆ ರಕ್ತದ ನಷ್ಟ ಮತ್ತು ಸೋಂಕಿನ ಅಪಾಯವೂ ಕೂಡ ಕಡಿಮೆಯಾಗಿರುತ್ತದೆ. ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡುವುದರೊಂದಿಗೆ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳನ್ನು ಕೂಡ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಇಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Article Image

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರುಗೊಳಿಸಿದ್ದಾರೆ.

ಸಾಹಿತ್ಯಾಭಿರುಚಿ ಮತ್ತೆ ಬೆಳೆಯಲಿ: ಡಾ. ಹೆಚ್.ಎಸ್. ಸತ್ಯನಾರಾಯಣ

Article Image

ಸಾಹಿತ್ಯಾಭಿರುಚಿ ಮತ್ತೆ ಬೆಳೆಯಲಿ: ಡಾ. ಹೆಚ್.ಎಸ್. ಸತ್ಯನಾರಾಯಣ

ಉಜಿರೆ: ಕಳೆದು ಹೋಗಿರುವ ಸಾಹಿತ್ಯಾಭಿರುಚಿ ಮತ್ತೆ ಬೆಳೆಯಬೇಕು ಎಂದು ಪ್ರಸಿದ್ಧ ವಿಮರ್ಶಕ ಡಾ. ಹೆಚ್.ಎಸ್. ಸತ್ಯನಾರಾಯಣ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಜು.15ರಂದು ಕನ್ನಡ ವಿಭಾಗದ 2025-26 ನೇ ಸಾಲಿನ ಕಾರ್ಯ ಚಟುವಟಿಕೆ ಹಾಗೂ ಕನ್ನಡ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. “ಇವತ್ತಿನ ಬದುಕು ಸಾಹಿತ್ಯದ ಸಂಪರ್ಕದಿಂದ ದೂರವಾಗುತ್ತಿದೆ. ಪುಸ್ತಕ ಓದುವ ಹವ್ಯಾಸ ಮಕ್ಕಳಲ್ಲಿ ದೂರವಾಗುತ್ತಿದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು. ಎಸ್.ಡಿ.ಎಂ. ಕಾಲೇಜಿನ ಹಾ.ಮಾ. ನಾಯಕ ಸಂಶೋಧನಾ ಕೇಂದ್ರವು ಸಕ್ರಿಯವಾಗಿ ಸಾಹಿತ್ಯದ ಬಗೆಗಿನ ಸಂಶೋಧನೆ ನಡೆಸುತ್ತಿದೆ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣಗಳು, ಇನ್ನಿತರ ಸಾಹಿತ್ಯಿಕ ಕಾರ್ಯಕ್ರಮ ನಡೆಸುತ್ತಿದೆ. ವಿದ್ಯಾರ್ಥಿಗಳ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ಕನ್ನಡ ಸಂಘವು ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಮೊದಲು 'ಚಿಂತನ ವೇದಿಕೆ' ಎಂದು ಎನ್.ಜಿ. ಪಟವರ್ಧನ್ ಅವರು ಆರಂಭಿಸಿದರು. ಬಳಿಕ ಅದು ಕನ್ನಡ ಸಂಘವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಈಗಿನ ಕಾಲದಲ್ಲಿ ಕೌಶಲ್ಯಗಳು ಮುಖ್ಯ. ಎಂದಿಗೂ ಧನಾತ್ಮಕವಾಗಿ ಚಿಂತನೆ ಮಾಡಬೇಕು. ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಹಾಗೂ ಹೊಸತನವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆ ಅವರನ್ನು ಸನ್ಮಾನಿಸಲಾಯಿತು. ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು. ಸಂಘದ ಪದಾಧಿಕಾರಿಗಳಾದ ಮಾನಸ, ಅಮೃತ, ರಂಗಸ್ವಾಮಿ, ಶಿಫಾನ, ಸ್ವಪ್ನಾ ಹಾಗೂ ಸಂಕೇತ್, ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್. ಸ್ವಾಗತಿಸಿದರು. ಸಂಕೇತ್ ವಂದಿಸಿದರು. ಜೀವಿತ್ ಕಾರ್ಯಕ್ರಮ ನಿರೂಪಿಸಿದರು.

ಇಂಗ್ಲಿಷ್ ಭಾಷೆ ಜಗತ್ತಿನಾದ್ಯಂತ ಮನ್ನಣೆ ಪಡೆದ ಭಾಷೆ: ರಾಘವ್ ಶರ್ಮ

Article Image

ಇಂಗ್ಲಿಷ್ ಭಾಷೆ ಜಗತ್ತಿನಾದ್ಯಂತ ಮನ್ನಣೆ ಪಡೆದ ಭಾಷೆ: ರಾಘವ್ ಶರ್ಮ

ಇಂಗ್ಲಿಷ್ ಭಾಷೆಯನ್ನು ಕೇವಲ ಒಂದು ಭಾಷೆ ಎಂದು ಪರಿಗಣಿಸಿ ಕಡೆಗಣಿಸಬಾರದು. ಜಗತ್ತಿನಾದ್ಯಂತ ಮನ್ನಣೆ ಪಡೆದ ಒಂದೇ ಒಂದು ಭಾಷೆ ಎಂದರೆ ಅದು ಇಂಗ್ಲಿಷ್ ಎಂದು ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಘವ ಶರ್ಮ ಹೇಳಿದರು. ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.18ರಂದು ಇಂಗ್ಲಿಷ್ ವಿಭಾಗದ ಸಾಹಿತ್ಯ ಸಂಘದ 2025- 26ನೇ ಶೈಕ್ಷಣಿಕ ವರ್ಷದ ಚಟುವಟಿಕೆ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನಲ್ಲಿ ಇಂಗ್ಲಿಷ್ ಒಂದೇ ಭಾಷೆಯಲ್ಲ, ಹಲವಾರು ಭಾಷೆಗಳು ಇವೆ. ಆದರೂ ಇಂಗ್ಲಿಷ್ ವಿಶೇಷ ಮನ್ನಣೆ ಪಡೆದಿದೆ. ಆದ್ದರಿಂದ ಇಂಗ್ಲಿಷ್ ಭಾಷಾ ಜ್ಞಾನ ವೃದ್ಧಿ ಅಗತ್ಯ ಎಂದರು. “ನಾನು ಮೊದಲಿನಿಂದಲೂ ಇಂಗ್ಲಿಷ್ ಭಾಷೆಯನ್ನು ಓದಿಕೊಂಡು ಬಂದಿದ್ದವನಲ್ಲ. ಡಿಗ್ರಿ ಜೀವನದಲ್ಲಿ ಮೊದಲಾಗಿ ಪತ್ರಿಕೋದ್ಯಮದ ಜೊತೆಗೆ ಇಂಗ್ಲಿಷ್ ಸಾಹಿತ್ಯ ಓದಿದ್ದೆ. ಆದರೂ ಕೂಡ ನಾನು ಕೆಲಸಕ್ಕಾಗಿ ದೆಹಲಿಗೆ ತೆರಳಿದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಇಂಗ್ಲಿಷಿನಿಂದ ಇನ್ನೊಂದು ಭಾಷೆಗೆ ಭಾಷಾಂತರ ಮಾಡುವ ಸಂದರ್ಭದಲ್ಲಿ ಬಹಳಷ್ಟು ತೊಂದರೆ ಅನುಭವಿಸಿದ್ದೇನೆ. ದಿನನಿತ್ಯ ಕನ್ನಡ ಪತ್ರಿಕೆಗಳ ಜೊತೆಗೆ ಇಂಗ್ಲಿಷ್ ಪತ್ರಿಕೆ ಓದುವುದರಿಂದ ಭಾಷಾ ಕಲಿಕೆ ವೃದ್ಧಿಯಾಗುತ್ತದೆ” ಎಂದು ಸಲಹೆ ನೀಡಿದರು. “ವಿಭಾಗದ ವತಿಯಿಂದ ನಡೆಸುವ ಸ್ಕೂಲ್ ಅಡಾಪ್ಶನ್ ಕಾರ್ಯಕ್ರಮ, ಅತಿಥಿ ಉಪನ್ಯಾಸ ಇತ್ಯಾದಿ ಕಾರ್ಯಕ್ರಮಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ. ನಿಮಗೇ ಗೊತ್ತಿಲ್ಲದಂತೆ ನಿಮ್ಮ ಭಾಷಾ ಜ್ಞಾನ ವೃದ್ಧಿಸುತ್ತದೆ. ಇದು ವೈಜ್ಞಾನಿಕ ಜಗತ್ತು, ವಿಜ್ಞಾನದ ಜೊತೆಗೆ ನಾವು ಕೂಡ ಮುಂದುವರಿಯಬೇಕು. ಸೋಶಿಯಲ್ ಮೀಡಿಯಾ ಯುಗದಲ್ಲಿ ನಾವು ಅದರ ಒಂದು ಭಾಗವಾಗಿರಬೇಕು ಆದರೆ ಸಾಮಾಜಿಕ ಜಾಲತಾಣಗಳು ನಮ್ಮನ್ನು ಆಳ್ವಿಕೆ ಮಾಡದ ಹಾಗೆ ಜಾಗರೂಕರಾಗಿರಿ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗಜಾನನ ಆರ್. ಭಟ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಮಿತಿಗಳ ವಿದ್ಯಾರ್ಥಿ ಸಂಯೋಜಕರು ತಮ್ಮ ಯೋಜನೆ ಕುರಿತು ವಿವರಿಸಿದರು. ಲಿಟರರಿ ಸಂಘದ ಅಧ್ಯಕ್ಷ ಚಂದನ್, ಸಂಯೋಜಕ, ಸಹ ಪ್ರಾಧ್ಯಾಪಕ ಸೂರ್ಯ ನಾರಾಯಣ ಭಟ್ ಪಿ., ಇತರ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿ.ಎ. ವಿದ್ಯಾರ್ಥಿನಿಯರಾದ ಗೌರವಿಸಿ ಸ್ವಾಗತಿಸಿ, ಶ್ರೇಯಾ ಮಿಂಚಿನಡ್ಕ ನಿರೂಪಿಸಿದರು. ಅನುಷಾ, ಕೃಷ್ಣವೇಣಿ, ಸುಶೀರ ಪ್ರಾರ್ಥಿಸಿದರು. ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಸನುಷಾ ಪಿಂಟೋ ವಂದಿಸಿದರು.

ಪ್ರಮೋದ್ ಕುಮಾರ್ ಅವರಿಗೆ ವಿಜ್ಞಾನ ಒಲಿಂಪಿಯಾಡ್ ಫೌಂಡೇಶನ್ ನಿಂದ ಮೆಚ್ಚುಗೆಯ ಪ್ರಮಾಣಪತ್ರ

Article Image

ಪ್ರಮೋದ್ ಕುಮಾರ್ ಅವರಿಗೆ ವಿಜ್ಞಾನ ಒಲಿಂಪಿಯಾಡ್ ಫೌಂಡೇಶನ್ ನಿಂದ ಮೆಚ್ಚುಗೆಯ ಪ್ರಮಾಣಪತ್ರ

ಉಜಿರೆಯ ಎಸ್.ಡಿ.ಎಂ. ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರಿಗೆ ವಿಜ್ಞಾನ ಒಲಿಂಪಿಯಾಡ್ ಫೌಂಡೇಶನ್ (SOF) ನಿಂದ ಮೆಚ್ಚುಗೆಯ ಪ್ರಮಾಣಪತ್ರವನ್ನು ನೀಡಲಾಗಿದೆ. 2024–2025ರ ಶೈಕ್ಷಣಿಕ ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಜಿಸುವಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಶ್ರೇಷ್ಠತೆಯನ್ನು ಉತ್ತೇಜಿಸುವಲ್ಲಿ ಅವರ ಅತ್ಯುತ್ತಮ ನಾಯಕತ್ವ ಮತ್ತು ಸಮರ್ಪಿತ ಉಪಕ್ರಮಗಳನ್ನು ಈ ಮನ್ನಣೆ ಗುರುತಿಸುತ್ತದೆ. ಪ್ರಮಾಣಪತ್ರವು ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಮಾಡಿದ ಅಸಾಧಾರಣ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ, ಪ್ರತಿಷ್ಠಿತ ಒಲಿಂಪಿಯಾಡ್ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಯಶಸ್ಸು ಮತ್ತು ಭಾಗವಹಿಸುವಿಕೆಗೆ ಕೊಡುಗೆ ನೀಡುತ್ತದೆ. ಏಪ್ರಿಲ್ 30, 2025 ರಂದು ನೀಡಲಾದ ಈ ಮೆಚ್ಚುಗೆಯು ಶೈಕ್ಷಣಿಕ ಸಾಧನೆ ಮತ್ತು ಸ್ಪರ್ಧಾತ್ಮಕ ಮನೋಭಾವದ ಸಂಸ್ಕೃತಿಯನ್ನು ಬೆಳೆಸುವ ಕಾಲೇಜಿನ ಬದ್ಧತೆಯನ್ನು ಒತ್ತಿಹೇಳುತ್ತದೆ.

ಉಜಿರೆ ಎಸ್‌ ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Article Image

ಉಜಿರೆ ಎಸ್‌ ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಬೆಳ್ತಂಗಡಿ, ಜು. 21: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2025 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್‌ಲೈನ್‌ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಲಾಗಿದೆ. ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ| ಅಶೋಕ್ ಕುಮಾರ್ ತಿಳಿಸಿದ್ದಾರೆ. ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜತೆಗೆ ತರಲು ಕೋರಲಾಗಿದೆ.

ಸರಕಾರಿ ಹುದ್ದೆ ಗಿಟ್ಟಿಸಿಕೊಳ್ಳುವತ್ತ ಗಮನಹರಿಸಿ: ಡಾ. ಪ್ರಕಾಶ್ ಎಸ್

Article Image

ಸರಕಾರಿ ಹುದ್ದೆ ಗಿಟ್ಟಿಸಿಕೊಳ್ಳುವತ್ತ ಗಮನಹರಿಸಿ: ಡಾ. ಪ್ರಕಾಶ್ ಎಸ್

ಉಜಿರೆ: ದಕ್ಷಿಣ ಕನ್ನಡ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಿ ಸರಕಾರಿ ಹುದ್ದೆಗಳನ್ನು ಗಿಟ್ಟಿಸಿಕೊಳ್ಳುವತ್ತ ಕಾರ್ಯ ಪ್ರವೃತ್ತರಾಗಬೇಕು ಎಂದು ಕೊಯ್ಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ. ಪ್ರಕಾಶ್ ಎಸ್. ಹೇಳಿದರು. ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ 2025-26 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಜು.14ರಂದು ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಾ ಸವಲತ್ತು, ಅವಕಾಶಗಳಿದ್ದರೂ ಈ ಭಾಗದ (ದಕ್ಷಿಣ ಕನ್ನಡ) ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಹಿಂದೇಟು ಹಾಕುತ್ತಿದ್ದಾರೆ. ಪದವಿ ವಿದ್ಯಾಭ್ಯಾಸ ಸಂದರ್ಭದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿತುಕೊಂಡು ಪ್ರಯತ್ನಶೀಲರಾಗಬೇಕು ಎಂದು ಅವರು ಸಲಹೆ ನೀಡಿದರು. “ವಿದ್ಯಾರ್ಥಿ ಜೀವನದಲ್ಲಿ ಹತ್ತಾರು ಅವಕಾಶಗಳು ನಮ್ಮನ್ನು ಹುಡುಕಿಬರುತ್ತವೆ. ಅವುಗಳ ಸದುಪಯೋಗದಿಂದ ಯಶಸ್ಸು ಸಾಧ್ಯ. ಚಿಕ್ಕ ವಯಸ್ಸಿನಲ್ಲಿ ಅವಕಾಶಗಳು ಬಹಳಷ್ಟು ಇರುತ್ತವೆ ಆದರೆ ಬೆಳೆಯುತ್ತಾ ಹೋದಂತೆ ಅವಕಾಶ ಕಡಿಮೆಯಾಗುತ್ತದೆ. ವಯಸ್ಸು ಓಡುವ ಕುದುರೆಯಿದ್ದಂತೆ. ಹಾಗಾಗಿ ಆಯಾ ವಯಸ್ಸಿಗೆ ಸೂಕ್ತವಾದ ಕಾರ್ಯಗಳಲ್ಲಿ ನಾವು ತೊಡಗಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು. ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗ ಮುಖ್ಯಸ್ಥ ಡಾ. ಗಣರಾಜ ಕೆ., ಶಿಕ್ಷಣದಲ್ಲಿ ಸೃಜನಶೀಲತೆ ಬಹಳ ಮುಖ್ಯ, ಸೃಜನಶೀಲತೆಯಿಂದ ಉತ್ತಮ ಶಿಕ್ಷಣದ ಜೊತೆಗೆ ಯಶಸ್ಸು ಸಾಧ್ಯ ಎಂದರು. ವಿಭಾಗ ಬೆಳೆದು ಬಂದ ಹಾದಿಯನ್ನು ನೆನಪಿಸಿದ ಅವರು, ವಿಭಾಗದ ಯಶಸ್ಸನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಪುನೀತ್, ಸುಹೈಮಾ ಹಾಗೂ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿಎ ವಿದ್ಯಾರ್ಥಿಗಳಾದ ಸೂರ್ಯ, ಸೃಷ್ಟಿ ಪ್ರಾರ್ಥಿಸಿ, ಅಚಲ ಹಾಗೂ ವೀಕ್ಷಾ ಕಾರ್ಯಕ್ರಮ ನಿರೂಪಿಸಿ, ಮಾನವ್ ವಂದಿಸಿದರು.

ಪ್ರಕೃತಿಯ ಉಳಿವು, ನಮ್ಮೆಲ್ಲರ ಉಳಿವು - ಪ್ರಸನ್ನ ಪಡ್ಡಂದಡ್ಕ

Article Image

ಪ್ರಕೃತಿಯ ಉಳಿವು, ನಮ್ಮೆಲ್ಲರ ಉಳಿವು - ಪ್ರಸನ್ನ ಪಡ್ಡಂದಡ್ಕ

ಮೂಡುಬಿದಿರೆ: ಪರಿಸರ ಉಳಿಸಿ, ಪರಿಸರ ಬೆಳೆಸಿ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು. ಪರಿಸರ ಪ್ರೇಮಿಯಾದ ಪ್ರಸನ್ನರವರು ಮಾತನಾಡಿ ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಸನ್ನರವರ ಪುತ್ರಿಯಾದ ಹೇಮಲತಾರವರು ಉಪಸ್ಥಿತರಿದ್ದರು. ಶಿಕ್ಷಕಿಯಾದ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಆಳ್ವಾಸ್: ಮಾನ್ಸೂನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಚೊಚ್ಚಲ ಆಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ

Article Image

ಆಳ್ವಾಸ್: ಮಾನ್ಸೂನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಚೊಚ್ಚಲ ಆಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ

ಮೂಡುಬಿದಿರೆ: ಇತ್ತೀಚಿನ ದಿನಗಳಲ್ಲಿ ಬ್ಯಾಡ್ಮಿಂಟನ್ ಕ್ರೀಡೆಗೆ ಮೂಡುಬಿದಿರೆಯಲ್ಲಿ ಉತ್ತಮ ಪ್ರೋತ್ಸಾಹ ದೊರೆಯುತ್ತಿದೆ. ಈ ಕ್ರೀಡೆಯ ಮೂಲಕ ರಾಷ್ಟ್ರ ಮಟ್ಟದ ಇನ್ನಷ್ಟು ಪ್ರತಿಭೆಗಳು ಮೂಡಿ ಬರಲಿ ಎಂದು ಸಿಎ ಉಮೇಶ್ ರಾವ್ ನುಡಿದರು. ಅವರು ಆಳ್ವಾಸ್ ಬ್ಯಾಡ್ಮಿಂಟನ್ ಅಕಾಡೆಮಿಯು ಎಂ. ಕೆ. ಅನಂತರಾಜ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಚೊಚ್ಚಲ ಬಾರಿಗೆ ಮಕ್ಕಳಿಗಾಗಿ ಆಯೋಜಿಸಿದ್ದ ‘ಮಾನ್ಸೂನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ್ನು’ ಉದ್ಘಾಟಿಸಿ ಮಾತನಾಡಿದರು. "ಕ್ರೀಡೆಯಲ್ಲಿ ಎಂದೂ ಕೇವಲ ಗೆಲುವಿಗಾಗಿ ಆಟವಾಡಬೇಡಿ. ಅನುಭವದಿಂದ ಸಿಗುವ ಪಾಠ ಅಮೂಲ್ಯವಾದುದ್ದು. ಆಟದಲ್ಲಿ ಸೋಲೂ ಒಂದು ಪಾಠವಾಗಿದ್ದು, ನಿರಂತರ ಕಲಿಕೆ ಮತ್ತು ಅಭ್ಯಾಸವೇ ಕ್ರೀಡಾಪಟುವಿನ ನಿಜವಾದ ಬಲ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ, "ಕ್ರೀಡೆ ಎಂದರೆ ಕೇವಲ ಗೆಲುವು ಅಥವಾ ಸೋಲಲ್ಲ. ಕ್ರೀಡಾ ಮನೋಭಾವದ ಬೆಳೆವಣಿಗೆ ಮುಖ್ಯ. ಪ್ರತಿಯೊಬ್ಬ ಕ್ರೀಡಾಪಟುವೂ ತನ್ನ ಎದುರಾಳಿಗೆ ಗೌರವ ತೋರಬೇಕು, ನಿಯಮಗಳನ್ನು ಪಾಲಿಸಬೇಕು ಮತ್ತು ಫಲಿತಾಂಶವೇನು ಆದರೂ ತನ್ನ ಶ್ರೇಷ್ಠ ಪ್ರಯತ್ನ ನೀಡಬೇಕು," ಎಂದು ಯುವ ಕ್ರೀಡಾಪಟುಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಈ ಕ್ರೀಡಾಕೂಟವು 11, 13, 15 ಮತ್ತು 17 ವರ್ಷದೊಳಗಿನ ಬಾಲಕರು ಮತ್ತು ಬಾಲಕಿಯರಿಗಾಗಿ ವಿವಿಧ ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಕರ್ನಾಟಕದ ವಿವಿಧ ಜಿಲ್ಲೆಗಳ 300ಕ್ಕೂ ಹೆಚ್ಚು ಕಿರಿಯ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡರು. ವಿಜೇತರಿಗೆ ಟ್ರೋಫಿ ಮತ್ತು ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಆರ್‌ಎಫ್‌ಓ ಮಂಜುನಾಥ್, ಆಳ್ವಾಸ್ ಸಂಸ್ಥೆಯ ಹಣಕಾಸು ಅಧಿಕಾರಿ ಶಾಂತರಾಮ ಕಾಮತ್, ದೈಹಿಕ ನಿರ್ದೇಶಕ ಉದಯಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಚೈತ್ರ ಕಾರ‍್ಯಕ್ರಮ ನಿರ್ವಹಿಸಿದರು.

ಶೌರ್ಯ : ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಿಗೆ ಕೌಶಲಾಭಿವೃದ್ಧಿ ತರಬೇತಿ

Article Image

ಶೌರ್ಯ : ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಿಗೆ ಕೌಶಲಾಭಿವೃದ್ಧಿ ತರಬೇತಿ

ಉಜಿರೆ: ಜಾತಿ-ಮತ ಬೇಧವಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಮಾನವೀಯತೆಯೊಂದಿಗೆ “ಶೌರ್ಯ” ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರು ಮಾಡುವ ಸೇವೆ ಅದ್ಭುತವಾಗಿದ್ದು, ಹೆಚ್ಚಿನ ಸಂತೋಷ ಮತ್ತು ಅಭಿಮಾನ ಉಂಟು ಮಾಡಿದೆ. ಸೇವೆ ಮಾಡುವವರಿಗೆ ಸದಾ ದೇವರ ಅನುಗ್ರಹ ಇರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ವ್ಯಾಪ್ತಿಯ “ಶೌರ್ಯ” ವಿಪತ್ತು ನಿರ್ವಹಣಾ ತಂಡದ 330 ಸದಸ್ಯರಿಗೆ ಆಯೋಜಿಸಿದ ತುರ್ತು ಸ್ಪಂದನೆ ಮತ್ತು ಕೌಶಲಾಭಿವೃದ್ಧಿ ತರಬೇತಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬದುಕಿನಲ್ಲಿ ಏನೇ ಆಪತ್ತು, ವಿಪತ್ತು ಬಂದರೂ ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಬದುಕು ಕಟ್ಟಿಕೊಳ್ಳಬೇಕು. ಇದಕ್ಕೆ ಸ್ವಯಂ ಪ್ರೇರಣೆಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ “ಶೌರ್ಯ” ಘಟಕದ ಸ್ವಯಂ-ಸೇವಕರು ಆಪತ್ಕಾಲದ ಆಪದ್ಬಾಂಧವರಾಗಿ ಸಕಾಲಿಕ ನೆರವು, ರಕ್ಷಣೆ ನೀಡುತ್ತಾರೆ. ಅವರು ಕೂಡಾ ತಮ್ಮ ರಕ್ಷಣೆಯನ್ನು ಮೊದಲು ತಾವು ಮಾಡಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಆಪತ್ತು, ಆತಂಕದಲ್ಲಿದ್ದವರ ಸೇವೆ ದೇವರ ಪೂಜೆ, ಸೇವೆಯಷ್ಟೇ ಪವಿತ್ರ ಹಾಗೂ ಪುಣ್ಯದ ಕಾಯಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಂಧ್ರಪ್ರದೇಶದ ಗುಂಟೂರು ಎನ್.ಡಿ.ಆರ್.ಎಫ್. ತಂಡದ ಹಿರಿಯ ಅಧಿಕಾರಿ ಶಾಂತಿಲಾಲ್ ಜಟಿಯಾ “ಶೌರ್ಯ” ಸ್ವಯಂ ಸೇವಕರ ಸೇವೆಯನ್ನು ಶ್ಲಾಘಿಸಿ ಇಂತಹ ಘಟಕಗಳು ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಪ್ರಾರಂಭವಾಗಬೇಕು. ಸಂಘಟನೆಯೇ ಶಕ್ತಿಯಾಗಿದ್ದು, ಒಗ್ಗಟ್ಟಿನಿಂದ ಎಲ್ಲರೂ ಸೇವೆ ಮಾಡಿದರೆ ಉನ್ನತ ಸಾಧನೆ ಸಾಧ್ಯವಾಗುತ್ತದೆ. ಇದಕ್ಕೆ ಸರ್ಕಾರದ ಮಾನ್ಯತೆಯೂ ದೊರಕಿರುವುದು ಸ್ತುತ್ಯಾರ್ಹವಾಗಿದೆ ಎಂದು ಹೇಳಿ ಅವರು ಶುಭ ಹಾರೈಸಿದರು. ಸ್ವಯಂ-ಸೇವಕರ ಪರವಾಗಿ ಅವಿನಾಶ್ ಮತ್ತು ನಡ ಗ್ರಾಮದ ಸಂಯೋಜಕಿ ವಸಂತಿ ಅನುಭವ, ಅನಿಸಿಕೆ ವ್ಯಕ್ತಪಡಿದರು. ಸಾಧಕರ ಸನ್ಮಾನ: ಉತ್ತಮ ಸೇವೆ-ಸಾಧನೆ ಮಾಡಿದ ಸ್ವಯಂ-ಸೇವಕರಾದ ಉಜಿರೆಯ ರವೀಂದ್ರ , ಅರಸಿನಮಕ್ಕಿಯ ಅವಿನಾಶ್, ನಾರಾವಿಯ ದಿನೇಶ್ ಶೆಟ್ಟಿ ಮತ್ತು ತೆಂಕಕಾರಂದೂರು ಗ್ರಾಮದ ಸವಿತಾ ಪಿರೇರಾ ಅವರನ್ನು ಅಭಿನಂದಿಸಲಾಯಿತು. ಉತ್ತಮ ಸಾಧಕ ಘಟಕ ಪ್ರಶಸ್ತಿ: ಶಿಶಿಲ- ಅರಸಿನಮಕ್ಕಿ ಘಟಕ ಮತ್ತು ಮಡಂತ್ಯಾರ್ ಘಟಕಗಳಿಗೆ ಉತ್ತಮ ಸಾಧಕ ಘಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ನಿರ್ವಹಣಾ ಅಧಿಕಾರಿ ವಿಜಯ್ ಪೂಜಾರ್ ಉಪಸ್ಥಿತರಿದ್ದು, ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಆಶಯನುಡಿಗಳನ್ನಾಡಿ “ಶೌರ್ಯ” ತಂಡ 5 ವರ್ಷಗಳ ಸಾರ್ಥಕ ಸೇವೆ ಪೂರೈಸಿದ್ದು ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ ಎಂದರು. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್, ರಾಜ್ಯದ 91 ತಾಲ್ಲೂಕುಗಳಲ್ಲಿ 10,460 ಸ್ವಯಂ ಸೇವಕರು ಸೇವಾ ಕಾಯಕದಲ್ಲಿ ನಿರತರಾಗಿದ್ದಾರೆ ಎಂದರು. ಯೋಜನಾಧಿಕಾರಿ ಅಶೋಕ, ಬಿ. ಧನ್ಯವಾದವಿತ್ತರು. ಯೋಜನಾಧಿಕಾರಿ ಗಣೇಶ್ ಕಾರ್ಯಕ್ರಮ ನಿರ್ವಹಿಸಿದರು. ಶಾಂತಿಲಾಲ್ ಜಟಿಯಾ, ವಿನೋದ್ ಜಿ ಮತ್ತು ಅಧಿಕಾರಿಗಳು ವಿಪತ್ತು ನಿರ್ವಹಣೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಲಾಂಛನ ಬಿಡುಗಡೆ

Article Image

ಲಾಂಛನ ಬಿಡುಗಡೆ

ಉಜಿರೆ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಬುಧವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು. ಜುಲೈ 13 ರಂದು ಭಾನುವಾರ ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ರಾಷ್ಟ್ರ ಮಟ್ಟದ ವಿಶೇಷ ಮಾನ್ಯತೆ

Article Image

ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ರಾಷ್ಟ್ರ ಮಟ್ಟದ ವಿಶೇಷ ಮಾನ್ಯತೆ

ರಾಷ್ಟ್ರಮಟ್ಟದ ಪ್ರಸಿದ್ಧ ಹಾಗೂ ಜನಪ್ರಿಯ ನಿಯತಕಾಲಿಕೆಗಳಾದ 'ಇಂಡಿಯಾ ಟುಡೇ' ಹಾಗೂ 'ದಿ ವೀಕ್' ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧ.ಮಂ. ಕಾಲೇಜು ಎಲ್ಲಾ ವಿಭಾಗಗಳಲ್ಲೂ ಅತ್ಯುತ್ತಮ ಶ್ರೇಣಿಯೊಂದಿಗೆ ವಿಶೇಷ ಮಾನ್ಯತೆ ಪಡೆದಿದೆ. ಕಲೆ, ವಿಜ್ಞಾನ, ವಾಣಿಜ್ಯ, ಬಿಸಿಎ, ಬಿಬಿಎ, ಪತ್ರಿಕೋದ್ಯಮ ಹಾಗೂ ಎಂ.ಎಸ್.ಡಬ್ಲ್ಯೂ. ವಿಭಾಗಗಳ ಶೈಕ್ಷಣಿಕ ಸಾಧನೆ, ಚಟುವಟಿಕೆ, ಕಲಿಕಾ ಸೌಲಭ್ಯ, ಪ್ರವೇಶಾತಿ, ನೇಮಕಾತಿ, ಕಲಿಕಾ ಶುಲ್ಕ ಹಾಗೂ ಕಾಲೇಜಿಗೆ ಸಂದ ಪ್ರಶಸ್ತಿ, ಗೌರವ, ಪೋಷಕರು ಮತ್ತು ವಿದ್ಯಾರ್ಥಿಗಳ ಅಭಿಪ್ರಾಯಗಳು, ಆಡಳಿತ ನಿರ್ವಹಣಾ ವ್ಯವಸ್ಥೆ ಸೇರಿದಂತೆ ವಿವಿಧ ಪ್ರಮುಖ ಮಾನದಂಡಗಳನ್ನು ಆಧರಿಸಿ ಈ ಎರಡೂ ನಿಯತಕಾಲಿಕೆಗಳು ರಾಷ್ಟ್ರಮಟ್ಟದ ವಿವಿಧ ಕಾಲೇಜುಗಳ ಮೌಲ್ಯಮಾಪನ ಮಾಡಿ ಫಲಿತಾಂಶವನ್ನು ಇತ್ತೀಚೆಗೆ ಪ್ರಕಟಿಸಿದೆ. 'ಇಂಡಿಯಾ ಟುಡೇ' ಸಮೀಕ್ಷೆಯಲ್ಲಿ ಕಾಲೇಜಿನ ಬಿಎ ವಿಭಾಗ 62ನೇ ರ‍್ಯಾಂಕ್ ಗಳಿಸಿದ್ದು, ಬಿಎಸ್‌ಸಿಗೆ 77ನೇ ಸ್ಥಾನ ಲಭಿಸಿದೆ. ಕಾಮರ್ಸ್ ವಿಭಾಗವು 97ನೇ ಸ್ಥಾನದಲ್ಲಿದ್ದು, ಬಿಸಿಎ ವಿಭಾಗವು 30ನೇ ರ‍್ಯಾಂಕ್ ಗಳಿಸಿದೆ. ಬಿಬಿಎ ವಿಭಾಗವು 43ನೇ ಸ್ಥಾನದಲ್ಲಿದ್ದು ಎಂ.ಎಸ್.ಡಬ್ಲ್ಯೂ. ವಿಭಾಗಕ್ಕೆ 27ನೇ ಸ್ಥಾನ ಲಭ್ಯವಾಗಿದೆ. ಪತ್ರಿಕೋದ್ಯಮ ವಿಭಾಗಕ್ಕೆ 22ನೇ ಸ್ಥಾನ ಲಭಿಸಿದ್ದು, ರಾಷ್ಟ್ರಮಟ್ಟದ ಮುಂಚೂಣಿ ಕಾಲೇಜುಗಳ ಪಟ್ಟಿಯಲ್ಲಿ ಪತ್ರಿಕೋದ್ಯಮವು ನಾಲ್ಕನೇ ಸ್ಥಾನ ಹಾಗೂ ಎಂ.ಎಸ್.ಡಬ್ಲ್ಯೂ. ವಿಭಾಗವು ಹತ್ತನೇ ಸ್ಥಾನದ ಅಗ್ರಪಂಕ್ತಿಗೆ ಸೇರಿವೆ. 'ದಿ ವೀಕ್' ನಡೆಸಿದ ಸಮೀಕ್ಷೆಯಲ್ಲೂ ಬಿಎ ವಿಭಾಗಕ್ಕೆ 78ನೇ ಸ್ಥಾನ ಲಭಿಸಿದ್ದು, ಬಿಎಸ್‌ಸಿ ಹಾಗೂ ಬಿಕಾಂಗೆ ತಲಾ 96 ಹಾಗೂ 117ನೇ ಸ್ಥಾನ ಲಭ್ಯವಾಗಿದೆ. ಪತ್ರಿಕೋದ್ಯಮ ವಿಭಾಗಕ್ಕೆ 25ನೇ ಬ್ಯಾಂಕ್ ಪ್ರಾಪ್ತವಾಗಿದೆ. ಕಾಲೇಜಿನ ಈ ಸಾಧನೆಯನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಶ್ಲಾಘಿಸಿದ್ದಾರೆ. ಹಿಂದಿನ ವರ್ಷಗಳಲ್ಲೂ ಇವೆರಡೂ ನಿಯತಕಾಲಿಕೆಗಳ ಸಮೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಕಾಲೇಜು ಮೊದಲ 100 ಕಾಲೇಜುಗಳಲ್ಲಿ ರ‍್ಯಾಂಕ್ ಗಳಿಸಿದ್ದು, ಈ ವರ್ಷದ ಮೌಲ್ಯಮಾಪನದಲ್ಲೂ ಗಣನೀಯ ಸಾಧನೆಯೊಂದಿಗೆ ಮನ್ನಣೆ ಪಡೆದಿದೆ ಎಂದು ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ ಚಿನ್ನದಂತ ನನ್ನ ಅಪ್ಪ ವಿಶೇಷ ಅನುಬಂಧದ ಕಾರ್ಯಕ್ರಮ ನಡೆಯಿತು

Article Image

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ ಚಿನ್ನದಂತ ನನ್ನ ಅಪ್ಪ ವಿಶೇಷ ಅನುಬಂಧದ ಕಾರ್ಯಕ್ರಮ ನಡೆಯಿತು

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುಧ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ 'ಚಿನ್ನದಂತ ನನ್ನ ಅಪ್ಪ' ವಿಶೇಷ ಅನುಬಂಧ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು. ಪ್ರಥಮ ಬಹುಮಾನವನ್ನು ತಂದೆ ಮಗಳಾದ ಕವಿತೇಶ್ ನಾವರ - ದಕ್ಷಿ, ದ್ವಿತೀಯ ಬಹುಮಾನವನ್ನು ತಂದೆ ಮಗನಾದ ಪ್ರಸನ್ನ - ಪ್ರತ್ಯುಷ್ ಹಾಗೂ ಸಾಮಾನದಕರ ಬಹುಮಾನವನ್ನು ಚೈತ್ರೇಶ್- ಶೈವಿ ಸಿ ಎಚ್, ರವಿಚಂದ್ರ ಶೆಣೈ-ಲತಾ ಶೆಣೈ ಹಾಗೂ ಹೆರಾಲ್ಡ್ ಪಿಂಟೊ - ಕ್ರಿಸ್ಟ ಪಡೆದುಕೊಂಡಿದ್ದಾರೆ. ಪ್ರಜ್ಞಾ ಓಡಿಲ್ನಾಳ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕರು ಲೋಹಿತ್ ಕುಮಾರ್, ಉಪ ಶಾಖಾಪ್ರಭಂಧಕರಾದ ದಿನೇಶ್ ಹಾಗೂ ಮುಳಿಯ ಸಿಬ್ಬಂದಿ ವರ್ಗದವರು, ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್ ಗೆ ಅತ್ಯುನ್ನತ ಗೌರವವಾದ ಡೈಮಂಡ್ ಪ್ಲಸ್ ಪ್ರಶಸ್ತಿ

Article Image

ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್ ಗೆ ಅತ್ಯುನ್ನತ ಗೌರವವಾದ ಡೈಮಂಡ್ ಪ್ಲಸ್ ಪ್ರಶಸ್ತಿ

ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್ ಗೆ ಅತ್ಯುನ್ನತ ಗೌರವವಾದ ಡೈಮಂಡ್ ಪ್ಲಸ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಕ್ಲಬ್‌ನ ಸಮರ್ಪಿತ ಸೇವಾ ಚಟುವಟಿಕೆಗಳು, ಸದಸ್ಯರ ಶ್ರಮ, ಹಾಗೂ ಹೊರಗಿನ ದಾನಿಗಳ ಬೆಂಬಲಕ್ಕೆ ಪ್ರತಿಫಲವಾಗಿದೆ. ಇದೊಂದು ಹೊಸ ಪ್ರೇರಣೆಯಾಗಿ, ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗಲಿದೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆ

Article Image

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆ

ಉಡುಪಿ : ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ.ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ. ಗೆ 1,275 ರೂ.ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಪರಿಹಾರ ವ್ಯಾಪ್ತಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ. 75 ರಷ್ಟು ಭಿತ್ತನೆಯಾಗದಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾ ಮೊತ್ತದ ಶೇ. 25ರಷ್ಟು ಪರಿಹಾರ ದೊರೆಯಲಿದೆ. ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ/ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಬಿತ್ತನೆಯಾದ ಒಂದು ತಿಂಗಳಿನಿಂದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆಯಲ್ಲಿ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿಯು, ಸಾಮಾನ್ಯ ಇಳುವರಿಯ ಶೇ. 50ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟ ಕಂಡುಬಂದಲ್ಲಿ ವಿಮೆ ಮಾಡಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ನಷ್ಟ ಪರಿಹಾರದಲ್ಲಿ ಶೇ. 25ರಷ್ಟು ಹಣ ಮುಂಚಿತವಾಗಿ ದೊರೆಯಲಿದೆ. ಬೆಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ ಮಾಡಲಾಗುವುದು. ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದ್ದು, ಅಧಿಸೂಚಿಸಿದ ಘಟಕದಲ್ಲಿ ಶೇ. 25ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ ವಿಮೆಗೆ ಒಳಪಟ್ಟ ಬೆಳೆ ನಷ್ಟದ ವರದಿ ಮಾಡಿದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರ ನೀಡಲಾಗುವುದು. ಕಟಾವಿನ ಅನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಹಾಗೂ ಕಟಾವು ಕೈಗೊಳ್ಳುವ 14 ದಿನಗಳ ಒಳಗೆ ಚಂಡಮಾರುತ, ಅಕಾಲಿಕ ಮಳೆಯಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭದಲ್ಲಿ ರೈತರು ವಿಮಾ ಸಂಸ್ಥೆ / ಆರ್ಥಿಕ ಸಂಸ್ಥೆ ಅಥವಾ ಕೃಷಿ ಇಲಾಖಾ ಕಚೇರಿಗೆ 72 ಗಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕು. ಪ್ರಸಕ್ತ ಸಾಲಿನ ಪಿ.ಎಂ.ಎಫ್.ಬಿ.ವೈ ಯೋಜನೆ ಅನುಷ್ಠಾನಗೊಳಿಸುವ ವಿಮಾ ಕಂಪನಿಯು ಇಸ್ರೋ ಟೋಕಿಯೋ ಜನರಲ್ಇನ್ಸುರೆನ್ಸ್ ಕಂಪೆನಿಯಾಗಿದೆ. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಚಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಚೇರಿ, ವಾಣಿಜ್ಯ ಬ್ಯಾಂಕ್ ಅಥವಾ ಸಂಬಂಧಿಸಿದ ಸೇವಾ ಸಹಕಾರ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಆಳ್ವಾಸ್: ವರ್ಷದ 4ನೇ ಉಚಿತ ನೇತ್ರ ತಪಾಸಣಾ ಶಿಬಿರ

Article Image

ಆಳ್ವಾಸ್: ವರ್ಷದ 4ನೇ ಉಚಿತ ನೇತ್ರ ತಪಾಸಣಾ ಶಿಬಿರ

ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ವರ್ಷದ 4ನೇ ನೇತ್ರ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿ ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಮೊದಲು ನಡೆಸಿದ ಒಂಬತ್ತು ಶಿಬಿರಗಳಲ್ಲಿ 1,478 ಜನರಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 784 ಜನರಿಗೆ ಉಚಿತ ಕನ್ನಡಕ ನೀಡಲಾಗಿತ್ತು. ಈ ಪೈಕಿ 221 ಜನರಿಗೆ ಶಸ್ತçಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದ್ದು, 109 ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದವು. ಈ ವರ್ಷವೂ ಇದೇ ಹಾದಿಯಲ್ಲಿ ಸಾಗುತ್ತಾ ಈಗಾಗಲೇ ಮೂರು ಶಿಬಿರಗಳು ನಡೆದಿದ್ದು, ನಡೆದ 4ನೇ ಶಿಬಿರವು ಸೇರಿದಂತೆ ಒಟ್ಟು 470 ಜನರು ತಪಾಸಣೆಗೆ ಒಳಪಟ್ಟಿದ್ದಾರೆ. 235 ಜನರಿಗೆ ಕನ್ನಡಕ ವಿತರಿಸಲಾಗಿದೆ ಮತ್ತು 45 ಜನರಿಗೆ ಶಸ್ತ್ರಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದೆ. ಇವರಲ್ಲಿ 11 ಜನರಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ. ಶರಣ್ ಶೆಟ್ಟಿ ಅವರು ಭಾಗವಹಿಸಿದ್ದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಸಜೀತ್ ಎಂ., ಮೂಡುಬಿದಿರೆ ಪುರಸಭೆಯ ಮುಖ್ಯ ಆಡಳಿತಾಧಿಕಾರಿ ಎಂ., ಬಂಟರ ಸಂಘ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ , ಸಿ.ಎಚ್. ಮೆಡಿಕಲ್ಸ್ ನ ಸಿ. ಎಚ್. ಗಫೂರ್, ಉದ್ಯಮಿಗಳಾದ ಅಬ್ದುಲ್ ಹಮೀದ್, ಸದಾಶಿವ ರಾವ್ ನೆಲ್ಲಿಮಾರು, ನವೀನ್ ಟಿ.ಆರ್., ಶಂಕರ್ ಎ. ಕೋಟ್ಯಾನ್, ಜೈನ್ ಮಿಲನ್ ಸಂಘಟನೆಯ ಅನಂತವೀರ್ ಜೈನ್, ವಿವಿಧ ಸಮುದಾಯ ಸಂಘಟನೆಗಳ ಹರೀಶ್ ಎಂ.ಕೆ , ಯೋಗೇಶ್ ಭಂಡಾರಿ ಮತ್ತು ಕೆ. ಎನ್. ಪ್ರಕಾಶ್ ಭಂಡಾರಿ, ಉಮೇಶ್ ನಾಯ್ಕ ಉಪಸ್ಥಿತರಿದ್ದರು. ಡಾ. ವಿಕ್ರಮ್ ಕುಮಾರ್ ಸ್ವಾಗತಿಸಿ, ಕಿರಿಯ ವೈದ್ಯ ಸುಮಂತ್ ಕಾರ್ಯಕ್ರಮ ನಿರೂಪಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ದಿನಾಂಕ 22-06-2025ನೇ ಆದಿತ್ಯವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ನಡೆಯಲಿದೆ. ಜನರಲ್ ಸರ್ಜನ್ ಡಾ| ಬಾಲಾಜಿ ಪ್ರಭಾಕರನ್ ಒಃBS, ಒS (General Surgery) ಹಾಗೂ ಡಾ| ಕಿರಣ್ ಕುಮಾರ್ MBBS, MS (General Surgery) ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ. ಸಾಮಾನ್ಯ ಶಸ್ತçಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು, ಕಿಬ್ಬೊಟ್ಟೆಯ ನೋವು, ಕಾಮಾಲೆ, ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾದಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು ಮತ್ತು ಗೆಡ್ಡೆಗಳ ತಪಾಸಣೆ ನಡೆಸಲಾಗುವುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ವಿಜಯ ಕೆ. ಕುಲಕರ್ಣಿ ನೇಮಕ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ವಿಜಯ ಕೆ. ಕುಲಕರ್ಣಿ ನೇಮಕ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ (ಆಡಳಿತ) ಮತ್ತು ಮಕ್ಕಳ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿರುವ ಡಾ. ವಿಜಯ ಕೆ. ಕುಲಕರ್ಣಿಯವರು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದಾರೆ. ಮೂಲತಃ ಧಾರವಾಡದವರಾದ ಡಾ. ವಿಜಯ ಕೆ. ಕುಲಕರ್ಣಿ, ಡಿಸೆಂಬರ್ 2003ರಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗವನ್ನು ಸೇರಿದ ಅವರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು ತಮ್ಮ ಎಂ.ಬಿ.ಬಿ.ಎಸ್. ಪದವಿಯನ್ನು 1999ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ, ವಿಜಯಪುರದ ಬಿ. ಎಂ. ಪಾಟೀಲ್ ವೈದ್ಯಕೀಯ ಕಾಲೇಜಿನಿಂದ ಪಡೆದಿದ್ದರು. ತಮ್ಮ ಸ್ನಾತಕೋತ್ತರ ಪದವಿ ಎಂ.ಡಿ. ಪಿಡಿಯಾಟ್ರಿಕ್ಸ ಅನ್ನು 2003ರಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ಬೆಂಗಳೂರಿನ ಬಿ. ಆರ್. ಅಂಬೇಡಕರ್ ವೈದ್ಯಕೀಯ ಕಾಲೇಜಿನಿಂದ ಪಡೆದಿದ್ದರು.

ಎಲೆಚುಕ್ಕಿ ರೋಗ: ಸಹಾಯ ಧನಕ್ಕೆ ರೈತರು ಹೀಗೆ ಅರ್ಜಿ ಸಲ್ಲಿಸಿ

Article Image

ಎಲೆಚುಕ್ಕಿ ರೋಗ: ಸಹಾಯ ಧನಕ್ಕೆ ರೈತರು ಹೀಗೆ ಅರ್ಜಿ ಸಲ್ಲಿಸಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ಅಡಿಕೆ ಎಲೆಚುಕ್ಕೆ ರೋಗದ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯ ಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ.ಎಸ್.ಟಿ. ನಮೂದು ಹೊಂದಿದ ಮತ್ತು ಎ.2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಈ ಮೂಲಕ ಸೂಚಿಸಲಾಗಿದೆ. ಅರ್ಜಿ ಜೊತೆಗೆ ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ.ಎ.ಟಿ. ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜೊತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಿ: ಬೆಳ್ತಂಗಡಿ ಹೋಬಳಿ: ಮಹಾವೀರ ಶೇಬಣ್ಣ ಮೊ.ನಂ: 8123921087 ವೇಣೂರು ಹೋಬಳಿ: ಭೀಮರಾಯ ಸೊಡಗಿ ಮೊ.ನಂ: 9741713598 ಕೊಕ್ಕಡ ಹೋಬಳಿ: ಮಲ್ಲಿನಾಥ ಬಿರಾದಾರ ಮೊ.ನಂ: 9986411477 ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್‌. ಚಂದ್ರಶೇಖರ್, ಮೊ.ನಂ: 9448336863

ಬೆಳ್ತಂಗಡಿ ಮುಳಿಯ ಗೋಲ್ಡ್ ಮತ್ತು ಡೈಮಂಡ್ ವತಿಯಿಂದ ವಿವಿಧ ಕಾ‍ರ್ಯಕ್ರಮಗಳು

Article Image

ಬೆಳ್ತಂಗಡಿ ಮುಳಿಯ ಗೋಲ್ಡ್ ಮತ್ತು ಡೈಮಂಡ್ ವತಿಯಿಂದ ವಿವಿಧ ಕಾ‍ರ್ಯಕ್ರಮಗಳು

ಬೆಳ್ತಂಗಡಿ: ಮುಳಿಯ ಗೋಲ್ಡ್ ಮತ್ತು ಡೈಮಂಡ್ಸ್ ಬೆಳ್ತಂಗಡಿ ಶೋರೂಮ್ ನ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ, ತಾಲೂಕು ಮಟ್ಟದ ಗ್ರಾಮ ಸೀಮಿತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಮೇ 25 ರಂದು ಬೆಳ್ತಂಗಡಿ ಮುಳಿಯದ ಹಿಂಭಾಗದ ಮೈದಾನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ವಿಟ್ಲ, ದೈಹಿಕ ಶಿಕ್ಷಕ ರಾಜೇಶ್ ಉಪಸ್ಥಿತರಿದ್ದರು. ಈ ವೇಳೆ ಎಸ್.ಎಸ್.ಎಲ್.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತನ್ವಿ ಭಟ್, ಶರೋನ್ ಡಿಸೋಜ, ಮನಶ್ರೀ, ಸುಪ್ರಿಯಾ, ಅಂಶಿತಾ ಜೋಸೆಫ್, ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತುಷಾರ ಬಿ ಎಸ್, ಸಿಂಚನಾ, ಜೋಶನ್ ರಾಫೆಲ್, ದೀಕ್ಷಾರವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಮುಳಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ ಸ್ವಾಗತಿಸಿದರು. ದೀಪಕ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಪಡಿಪಂಡ ಹಗ್ಗಜಗ್ಗಾಟದ ವೀಕ್ಷಕ ವೇಳೆ ವಿವರಣೆ ಮಾಡಿದರು. ಮುಳಿಯ ಸಿಬ್ಬಂದಿ ವರ್ಗ ಸಹಕರಿಸಿದರು. ಹಗ್ಗಜಗ್ಗಾಟ ಫಲಿತಾಂಶ: ಪುರುಷರ ವಿಭಾಗದ ಹಗ್ಗಜಗ್ಗಾಟ ಪ್ರಥಮ – ಬ್ರಹ್ಮಲಿಂಗೇಶ್ವರ ಮರೋಡಿ, ದ್ವಿತೀಯ - ಮಣಿಕಂಠ ಫ್ರೆಂಡ್ಸ್ ಬೆಳಾಲು, ತೃತೀಯ- ಫ್ರೆಂಡ್ಸ್ ಮಲ್ಲಿಪ್ಪಾಡಿ, ಚತುರ್ಥ- ವೀರ ಕಲ್ಕುಡ ಪದ್ಮುಂಜ ಮಹಿಳೆಯರ ವಿಭಾಗದ ಹಗ್ಗಜಗ್ಗಾಟ ಫಲಿತಾಂಶ ಪ್ರಥಮ- ತೃಪ್ತಿ ಫ್ರೆಂಡ್ಸ್ ಮೊಗ್ರು ಬಂದಾರು, ದ್ವಿತೀಯ- ವನದುರ್ಗಾ ಬರೆಂಗಾಯ, ತೃತೀಯ- ದುರ್ಗಾಂಬ ಇಳಂತಿಲ

ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ

Article Image

ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು. ಧ್ವಜಮರ ಅವರೋಹಣ ನಡೆಯಿತು. ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ. ಧರ್ಮಸ್ಥಳ ಯಕ್ಷಗಾನ ಮೇಳದ ಶ್ರೀ ಮಹಾಗಣಪತಿ ದೇವರ ಮೂರ್ತಿಯನ್ನು ಶನಿವಾರ ಸಂಜೆ ಬಿಡಾರದ ಮಣೆಗಾರರ ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಆನೆಗಳು, ಬಸವ, ಹೂವಿನ ಕೋಲು, ವಾದ್ಯ ಮೇಳ, ಚೆಂಡೆ ಮೇಳ, ಶಂಖ-ಜಾಗಟೆ ವಾದನ ಮೆರವಣಿಗೆಗೆ ವಿಶೇಷ ಮೆರುಗನ್ನು ನೀಡಿತು. ದೇವಸ್ಥಾನದ ಎದುರು ದರ್ಶನ ಸೇವೆ ನಡೆಸಿದ ಬಳಿಕ ಛತ್ರದ ಶ್ರೀ ಮಹಾಗಣಪತಿ ಗುಡಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಕುಟುಂಬಸ್ಥರು, ನೌಕರರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Article Image

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನ ಬಳಕೆ, ಸುರಕ್ಷತೆ, ಬದ್ಧತೆ, ಬ್ಯಾಂಕ್ ಮೂಲಕ ನಡೆಸುವ ವ್ಯವಹಾರಗಳ ದಾಖಲಾತಿ ನಿರ್ವಹಣೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ಅಂಶಗಳಲ್ಲಿ 109 ಪ್ರಮುಖ ಅಂಶಗಳನ್ನು ಗಮನಿಸಿದ ಲಂಡನ್‌ನ ಎನ್‌ಕ್ಯೂಎ (National Quality Assessment) ಸಂಸ್ಥೆ ಈ ಹಿಂದೆ 2024ರಲ್ಲಿ ಗ್ರಾಮಾಭಿವೃದ್ಧಿ ಯೋಜನೆಗೆ ಕೊಡಮಾಡಿದ ಐಎಸ್‌ಒ 27001–2013ಅನ್ನು ಮೇಲ್ದರ್ಜೆಗೇರಿಸಿದೆ. ಐಎಸ್‌ಒ ಸಂಸ್ಥೆಯಲ್ಲಿ ಸುಮಾರು 170 ದೇಶಗಳು ತಮ್ಮ ಸದಸ್ಯತ್ವವನ್ನು ಹೊಂದಿವೆ. ಎನ್‌ಕ್ಯÆಎ ಸಂಸ್ಥೆ 90 ದೇಶಗಳ ಪ್ರತಿಷ್ಠಿತ ಸಂಸ್ಥೆಗಳನ್ನು ಐಎಸ್‌ಒಗಾಗಿ ಆಡಿಟ್ ಮಾಡುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯನ್ನು 38 ನಿಯಮಗಳು ಮತ್ತು 93ರಲ್ಲಿ 90 ಅಂಶಗಳ ಕುರಿತು ಸೂಕ್ಷ್ಮವಾಗಿ ಗಮನಿಸಿ ಈ ಹಿಂದೆ ನೀಡಲಾದ ಐಎಸ್‌ಒ ಅನ್ನು ಇದೀಗ 27001–2022 ಆಗಿ ಮೇಲ್ದರ್ಜೆಗೇರಿಸಿದೆ. ಜಿ. ಎಸ್. ಭಾರ್ಗವ್ ಅವರು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಹೆಗ್ಗಡೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಭಾರತ ದೇಶದಲ್ಲಿಯೇ ISO 27001–2022 ಪ್ರಮಾಣಪತ್ರ ಪಡೆದ ಚಾರಿಟೇಬಲ್ ಟ್ರಸ್ಟ್ಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊದಲಿಗ ಸಂಸ್ಥೆಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳ ನಿರ್ವಹಣೆಯ ಅತ್ಯುತ್ತಮ ಗುಣಮಟ್ಟದ ತಂತ್ರಜ್ಞಾನ, ಪಾರದರ್ಶಕತೆ, ಲೆಕ್ಕಾಚಾರಗಳು, ನಿಯಮಪಾಲನೆ ಮುಂತಾದ ಅನೇಕ ಪ್ರಮುಖ ವಿಷಯಗಳಲ್ಲಿ ವಿಶ್ವದರ್ಜೆಯ ಗುಣಮಟ್ಟವನ್ನು ಹೊಂದಿರುವುದಕ್ಕೆ ಈ ಪ್ರಮಾಣಪತ್ರ ಸಾಕ್ಷಿಯಾಗಿದೆ. ಬ್ಯಾಂಕ್‌ಗಳ ವ್ಯವಹಾರಗಳ ಪಾರದರ್ಶಕತೆ, ನಿಖರತೆಯ ಉದ್ದೇಶದಿಂದ ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಲ್ಲಾ ಬ್ಯಾಂಕ್‌ಗಳಿಗೆ ISO 27001 ಮಾನ್ಯತೆಯನ್ನು ಪಡೆಯಲೇಬೇಕೆಂದು ನಿರ್ದೇಶಿಸಿದೆ. ಬ್ಯಾಂಕಿನ ಸೇವೆಗಳನ್ನು ಬ್ಯಾಂಕಿನ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಮೂಲಕ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಗ್ರಾಮ ಗ್ರಾಮಗಳಲ್ಲಿ ತರುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯು ಸ್ವಯಂಪ್ರೇರಿತವಾಗಿ ತನ್ನ ಸಂಸ್ಥೆಯನ್ನು ಈ ಉತ್ಕೃಷ್ಟ ಆಡಿಟ್‌ಗೆ ಒಳಪಡಿಸಿ ಈ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

ಸತ್ತೂರು, ಧಾರವಾಡ: ಒಂದು ದಿನದ ಕಾರ್ಯಾಗಾರ

Article Image

ಸತ್ತೂರು, ಧಾರವಾಡ: ಒಂದು ದಿನದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರ ಕ್ರೀಯಾ ಶಾಸ್ತ್ರ ವಿಭಾಗದಿಂದ ಹದಿಹರೆಯದಲ್ಲಿ ಉದ್ಬವಿಸುವ ಪ್ರಶ್ನೆಗಳು” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಮೇ ೧೭ ರಂದು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ: ನಾವು ಡೋಪಮೈನ್ ಮತ್ತು ಸಿರೊಟೋನಿನ್ ನಡುವೆ ಸಮತೋಲನವನ್ನು ಹೊಂದಬೇಕು. ಮೆದುಳಿನ ಕಾರ್ಯವನ್ನು ಅರ್ಥಮಾಡಿಕೊಳ್ಳುವುದರಿಂದ ಉತ್ತಮ ಜೀವನವನ್ನು ನಡೆಸಲು ಸಹಾಯವಾಗುತ್ತದೆ. ಮೆದುಳಿನ ಬೆಳವಣಿಗೆಗೆ ಜ್ಞಾನವು ಅತ್ಯಾವಶ್ಯಕ ಇಂತಹ ಕಾರ್ಯಗಾರವು ಹದಿಹರೆಯದವರ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ದಿಪಡಿಸಲು ಸಹಾಯವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಹಣಕಾಸು ಸಚಿವರಾದ ವಿ ಜಿ ಪ್ರಭು, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ. ದೇಶಾಯಿ ಹಾಗೂ ೨೦೦ಕ್ಕೂ ಹೆಚ್ಚು ಪ್ರಾಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಶ್ವಿನಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಚಿನ್ಮಯ ಮತ್ತು ಅಮುಲ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಾಗಾರದ ಸಂಘಟನಾ ಅಧ್ಯಕ್ಷರು ಮತ್ತು ಶರೀರ ಕ್ರೀಯಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಲಕ್ಷ್ಮೀ ಅವರು ವಂದನಾರ್ಪಣೆ ಸಲ್ಲಿಸಿದರು.

ಎಸೆಸೆಲ್ಸಿ ಪರೀಕ್ಷೆ: ಇಂದು ಫಲಿತಾಂಶ

Article Image

ಎಸೆಸೆಲ್ಸಿ ಪರೀಕ್ಷೆ: ಇಂದು ಫಲಿತಾಂಶ

ಬೆಂಗಳೂರು, ಮೇ 1: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸಿದ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರಿಂದ ಫಲಿತಾಂಶ https://karresults.nic.ind ವೀಕ್ಷಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ಮಂಡಳಿ ತಿಳಿಸಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? https://karresults.nic.inನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ (ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ) ಎಸೆಸೆಲ್ಸಿ ರಿಸಲ್ಟ್-2025 ಲಿಂಕ್ ಮೇಲೆ - ಕ್ಲಿಕ್ ಮಾಡಿದರೆ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ. ಬಳಿಕ ಸಬ್‌ ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಫಲಿತಾಂಶವನ್ನು ಸ್ಟೀನ್ ಮೇಲೆ ನೊಡಬಹುದಾಗಿದೆ.

ಉಜಿರೆ: ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ

Article Image

ಉಜಿರೆ: ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ

ಉಜಿರೆಯ ಎಸ್.ಡಿ.ಎಂ. ಪದವಿ, ಪದವಿಪೂರ್ವ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಮತ್ತು ಬೆಳದಿಂಗಳೂಟ ಕಾರ್ಯಕ್ರಮವು ಎ.24 ರಂದು ಪದವಿ ಕಾಲೇಜಿನ ಒಳಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಧ್ಯಾಪಕರನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿನಂದಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಪ್ರಾಸ್ತಾವಿಕವಾಗಿ ಮಾತನಾಡಿ, ಗುಣಮಟ್ಟದಿಂದ ಕೂಡಿದ ಸಂಸ್ಕಾರಯುತ ಶಿಕ್ಷಣದಿಂದ ಕಾಲೇಜು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅದಕ್ಕೆ ಕಾಲೇಜಿನ ಅಧ್ಯಾಪಕರ ಶ್ರಮ ಅಪಾರವಾಗಿದೆ ಎಂದರು. ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್., ಬೆಂಗಳೂರಿನ ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್, ಸೋನಿಯಾ ಯಶೋವರ್ಮ, ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಸವಿತಾ ಕುಮಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಾಪಕರು ಮತ್ತು ಅವರ ಕುಟುಂಬದವರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಕಾಲೇಜಿನ ಒಳಾಂಗಣದಲ್ಲಿ ಬೆಳದಿಂಗಳೂಟವನ್ನು ಮಾಡಲಾಯಿತು. ಪ್ರಾಧ್ಯಾಪಕರಾದ ಅಶ್ವಿತ್ ಮತ್ತು ದಿವಾಕರ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ : ಉಜಿರೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

Article Image

ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ : ಉಜಿರೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

ಉಜಿರೆ: “ದೇಹಕ್ಕೆ ರೋಗ ನಿರೋಧಕ ಶಕ್ತಿ ಇದೆ ಹಾಗೂ ಮರಳಿ ಪ್ರಕೃತಿಗೆ” ತತ್ವದ ನೆಲೆಯಲ್ಲಿ ಇದೇ ಮೇ 12 ರಿಂದ 16ರ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ಮೂರನೆ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಹೇಳಿದರು. ಅವರು ಬುಧವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಭಾರತೀಯ ಪ್ರಕೃತಿಚಿಕಿತ್ಸಾ ಮತ್ತು ಯೋಗ ಪದವೀಧರ ವೈದ್ಯರ ಸಂಘ ಹಾಗೂ ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ನಡೆಸುವ ಮೂರನೆ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸಂಶೋಧನೆ ಹಾಗೂ ವೈಜ್ಞಾನಿಕ ನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತು ಯೋಗವಿಜ್ಞಾನದ ಬಳಕೆ, ಆರೋಗ್ಯಭಾಗ್ಯ ಸಂರಕ್ಷಣೆ ಮತ್ತು ಆರೋಗ್ಯ ವರ್ಧನೆ ಕುರಿತು ಚರ್ಚಿಸಲಾಗುವುದು. ವಸ್ತುಪ್ರದರ್ಶನ, ಹಿರಿಯ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮತ್ತು ಸಂವಾದ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ. ಶಿವಪ್ರಸಾದ ಶೆಟ್ಟಿ ಮಾತನಾಡಿ, 3೦೦ ಮಂದಿ ಪ್ರತಿನಿಧಿಗಳು ಹಾಗೂ 10,000ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಭರದಿಂದ ಸಿದ್ಧತೆಗಳು ನಡೆಯುತ್ತಿವೆ ಎಂದರು. ಬೆಂಗಳೂರಿನ ಡಾ. ನವೀನ್, ಕೆ.ವಿ., ಕ್ಷೇಮವನದ ಮುಖ್ಯ ವೈದ್ಯಾಧಿಕಾರಿ ಡಾ. ನರೇಂದ್ರ ಶೆಟ್ಟಿ, ಡೀನ್ ಡಾ. ಗೀತಾ, ಬಿ. ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ. ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಚಿಣ್ಣರ ಮೇಳ- 2025’ ಉದ್ಘಾಟನೆ

Article Image

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಚಿಣ್ಣರ ಮೇಳ- 2025’ ಉದ್ಘಾಟನೆ

ಮೂಡುಬಿದಿರೆ: ‘ಮಕ್ಕಳಿಗೆ ಸಮಯ ನೀಡಿ , ಬೆನ್ತಟ್ಟಿ ಬೆಳೆಸಿ ’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಮೂಡುಬಿದಿರೆ ನಗರದ ಸ್ಕೌಟ್ಸ್ -ಗೈಡ್ಸ್ ಕನ್ನಡ ಭವನದಲ್ಲಿ ಸೋಮವಾರ ಆಯೋಜಿಸಿದ್ದ 34 ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ ಅಭಿನಯ ಪ್ರಧಾನ 'ಚಿಣ್ಣರ ಮೇಳ - 2025' ಉದ್ಘಾಟಿಸಿ ಅವರು ಮಾತನಾಡಿದರು. ‘ಬದುಕಿನಲ್ಲಿ ಎಲ್ಲರೂ ನಟರೇ. ಆದರೆ, ಅಭಿನಯ ವಿಭಿನ್ನ’. ಮಕ್ಕಳಿಗೆ ಸಮಯ ನೀಡುವುದು ಎಂದರೆ ಅವರ ಭಾವನೆಗಳಿಗೆ ಸ್ಪಂದಿಸುವುದು, ಮುಕ್ತವಾಗಿ ಸಂವಹನ ನಡೆಸುವುದು. ಮಕ್ಕಳಲ್ಲಿ ಅಡಗಿರುವ ಆತಂಕ, ಭಯ, ತುಂಟಾಟ, ಪ್ರತಿಭೆಯನ್ನು ಸರಿಯಾದ ಸಮಯದಲ್ಲಿ ಗುರುತಿಸುವುದು ಬಹಳ ಅವಶ್ಯಕ ಎಂದರು. ಮನುಷ್ಯ ಸಮಾಜಜೀವಿ. ಸಮಾಜದ ಜೊತೆ ಬೆರೆತಾಗಲೇ ನೆಮ್ಮದಿ, ಯಶಸ್ಸು ಎಲ್ಲವೂ ಸಾಧ್ಯ. ಮಕ್ಕಳು ಮಾತನಾಡಬೇಕು. ಎಲ್ಲರೊಂದಿಗೆ ಬೆರೆಯುವಂತೆ ಮಾಡಲು ಇಂತಹ ಶಿಬಿರ ಪೂರಕವಾಗಿರಲಿದೆ ಎಂದು ತಿಳಿಸಿದರು. ವಿದ್ವಾನ್ ಚಂದ್ರಶೇಖರ ನಾವಡ ಮಾತನಾಡಿ, ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೆತ್ತವರು ತಮ್ಮ ಮಕ್ಕಳ ವ್ಯಕ್ತಿತ್ವ ಬದಲಾವಣೆಯನ್ನು ಅವಲೋಕಿಸಬೇಕು. ವಿದ್ಯಾರ್ಥಿಗಳು ಶಿಬಿರದ ಅನುಭವವನ್ನು ಒಳ್ಳೆಯ ರೀತಿಯಲ್ಲಿ ವಿನಿಯೋಗಿಸಿಕೊಂಡು ದೇಶದ ಸತ್ಪçಜೆಗಳಾಗಿ ರೂಪುಗೊಳ್ಳುವಂತಾಗಲಿ ಎಂದು ಆಶಿಸಿದರು. ಶಿಬಿರದ ನಿರ್ದೇಶಕ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ಮಾತನಾಡಿ, ಅಭಿನಯನ ಪ್ರಧಾನ ಎಂಬುದು ಸಂವಹನಕ್ಕೆ ಸಂಬAಧಿಸಿದ ಕಲೆ. ಹಾಡು ಕುಣಿತ, ನಾಟಕ ಕಲೆಯ ಕಲಿಕೆಯಲ್ಲಿ ತೊಡಗಿಕೊಳ್ಳುವುದರ ಜೊತೆಗೆ, ಹಿರಿಯರನ್ನು ಗೌರವಿಸುವ, ಎಲ್ಲರೊಂದಿಗೆ ಬೆರೆತುಕೊಳ್ಳುವ ಮನೋಭಾವವನ್ನು ಬೆಳಸಲಿದೆ. ಬೇಸಿಗೆ ಶಿಬಿರವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳುವ ಸಲುವಾಗಿ ಪ್ರತಿ ವರ್ಷವು ಸುತ್ತಮುತ್ತಲಿನ ಶಾಲಾ ಮಕ್ಕಳಿಗೂ ಸಮಾನವಾಗಿ ಭಾಗವಹಿಸುವ ಅವಕಾಶವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ ಆಳ್ವ ನೀಡುತ್ತಿರುವುದು ಶ್ಲಾಘನೀಯ ಎಂದರು. ವಿಶೇಷವಾಗಿ, ನಾಡಿನ ಕಲಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 12 ಜನ ಶ್ರೇಷ್ಠ ಸಂಪನ್ಮೂಲ ವ್ಯಕ್ತಿಗಳು ತರಬೇತಿಗಾಗಿ ಆಗಮಿಸಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಚಿಣ್ಣರ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6-15 ವರ್ಷದ ಸುಮಾರು 138 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಶಿಬಿರದಲ್ಲಿ ಮಕ್ಕಳಿಗೆ ಕ್ರಾಫ್ಟ್ ವರ್ಕ್, ನವರಸ ಕಲಿಕೆ, ಸ್ವರಾಕ್ಷರ ಅಭಿನಯನ, ರಂಗಗೀತೆ, ನಾಟಕ ತರಬೇತಿ, ವಿವಿಧ ವಾದ್ಯಗಳ ಕಲಿಕಾ ಪರಿಚಯ, ರಂಗಭೂಮಿ ಆಟಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುವುದರೊಂದಿಗೆ ಮಕ್ಕಳ ಪ್ರತಿಭಾ ಅನಾವರಣಗೊಳಿಸುವ ಪ್ರಯತ್ನ ನಡೆಯಲಿದೆ ಎಂದರು. ಕಲಾವಿದ ತಾರಾನಾಥ ಕೈರಂಗಳ ಮತ್ತು ಇತರರು ಇದ್ದರು. ಸುಮನಾ ಪ್ರಸಾದ್ ಆಶಯ ಗೀತೆ ಹಾಡಿದರು. ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ ಯೋಗೀಶ್ ಕೈರೋಡಿ ನಿರೂಪಿಸಿದರು.

ನವಕಾರ್ ಮಹಾಮಂತ್ರ ದಿವಸ್: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Article Image

ನವಕಾರ್ ಮಹಾಮಂತ್ರ ದಿವಸ್: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ರಾಷ್ಟ್ರರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾನ್ಯ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಬುಧವಾರ ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.

First Previous

Showing 3 of 10 pages

Next Last