Article Image 1 Article Image 2

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ ಚಿನ್ನದಂತ ನನ್ನ ಅಪ್ಪ ವಿಶೇಷ ಅನುಬಂಧದ ಕಾರ್ಯಕ್ರಮ ನಡೆಯಿತು

Article Image

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ ಚಿನ್ನದಂತ ನನ್ನ ಅಪ್ಪ ವಿಶೇಷ ಅನುಬಂಧದ ಕಾರ್ಯಕ್ರಮ ನಡೆಯಿತು

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುಧ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ 'ಚಿನ್ನದಂತ ನನ್ನ ಅಪ್ಪ' ವಿಶೇಷ ಅನುಬಂಧ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು. ಪ್ರಥಮ ಬಹುಮಾನವನ್ನು ತಂದೆ ಮಗಳಾದ ಕವಿತೇಶ್ ನಾವರ - ದಕ್ಷಿ, ದ್ವಿತೀಯ ಬಹುಮಾನವನ್ನು ತಂದೆ ಮಗನಾದ ಪ್ರಸನ್ನ - ಪ್ರತ್ಯುಷ್ ಹಾಗೂ ಸಾಮಾನದಕರ ಬಹುಮಾನವನ್ನು ಚೈತ್ರೇಶ್- ಶೈವಿ ಸಿ ಎಚ್, ರವಿಚಂದ್ರ ಶೆಣೈ-ಲತಾ ಶೆಣೈ ಹಾಗೂ ಹೆರಾಲ್ಡ್ ಪಿಂಟೊ - ಕ್ರಿಸ್ಟ ಪಡೆದುಕೊಂಡಿದ್ದಾರೆ. ಪ್ರಜ್ಞಾ ಓಡಿಲ್ನಾಳ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕರು ಲೋಹಿತ್ ಕುಮಾರ್, ಉಪ ಶಾಖಾಪ್ರಭಂಧಕರಾದ ದಿನೇಶ್ ಹಾಗೂ ಮುಳಿಯ ಸಿಬ್ಬಂದಿ ವರ್ಗದವರು, ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್ ಗೆ ಅತ್ಯುನ್ನತ ಗೌರವವಾದ ಡೈಮಂಡ್ ಪ್ಲಸ್ ಪ್ರಶಸ್ತಿ

Article Image

ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್ ಗೆ ಅತ್ಯುನ್ನತ ಗೌರವವಾದ ಡೈಮಂಡ್ ಪ್ಲಸ್ ಪ್ರಶಸ್ತಿ

ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್ ಗೆ ಅತ್ಯುನ್ನತ ಗೌರವವಾದ ಡೈಮಂಡ್ ಪ್ಲಸ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಕ್ಲಬ್‌ನ ಸಮರ್ಪಿತ ಸೇವಾ ಚಟುವಟಿಕೆಗಳು, ಸದಸ್ಯರ ಶ್ರಮ, ಹಾಗೂ ಹೊರಗಿನ ದಾನಿಗಳ ಬೆಂಬಲಕ್ಕೆ ಪ್ರತಿಫಲವಾಗಿದೆ. ಇದೊಂದು ಹೊಸ ಪ್ರೇರಣೆಯಾಗಿ, ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗಲಿದೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆ

Article Image

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆ

ಉಡುಪಿ : ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ.ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ. ಗೆ 1,275 ರೂ.ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಪರಿಹಾರ ವ್ಯಾಪ್ತಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ. 75 ರಷ್ಟು ಭಿತ್ತನೆಯಾಗದಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾ ಮೊತ್ತದ ಶೇ. 25ರಷ್ಟು ಪರಿಹಾರ ದೊರೆಯಲಿದೆ. ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ/ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಬಿತ್ತನೆಯಾದ ಒಂದು ತಿಂಗಳಿನಿಂದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆಯಲ್ಲಿ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿಯು, ಸಾಮಾನ್ಯ ಇಳುವರಿಯ ಶೇ. 50ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟ ಕಂಡುಬಂದಲ್ಲಿ ವಿಮೆ ಮಾಡಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ನಷ್ಟ ಪರಿಹಾರದಲ್ಲಿ ಶೇ. 25ರಷ್ಟು ಹಣ ಮುಂಚಿತವಾಗಿ ದೊರೆಯಲಿದೆ. ಬೆಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ ಮಾಡಲಾಗುವುದು. ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದ್ದು, ಅಧಿಸೂಚಿಸಿದ ಘಟಕದಲ್ಲಿ ಶೇ. 25ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ ವಿಮೆಗೆ ಒಳಪಟ್ಟ ಬೆಳೆ ನಷ್ಟದ ವರದಿ ಮಾಡಿದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರ ನೀಡಲಾಗುವುದು. ಕಟಾವಿನ ಅನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಹಾಗೂ ಕಟಾವು ಕೈಗೊಳ್ಳುವ 14 ದಿನಗಳ ಒಳಗೆ ಚಂಡಮಾರುತ, ಅಕಾಲಿಕ ಮಳೆಯಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭದಲ್ಲಿ ರೈತರು ವಿಮಾ ಸಂಸ್ಥೆ / ಆರ್ಥಿಕ ಸಂಸ್ಥೆ ಅಥವಾ ಕೃಷಿ ಇಲಾಖಾ ಕಚೇರಿಗೆ 72 ಗಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕು. ಪ್ರಸಕ್ತ ಸಾಲಿನ ಪಿ.ಎಂ.ಎಫ್.ಬಿ.ವೈ ಯೋಜನೆ ಅನುಷ್ಠಾನಗೊಳಿಸುವ ವಿಮಾ ಕಂಪನಿಯು ಇಸ್ರೋ ಟೋಕಿಯೋ ಜನರಲ್ಇನ್ಸುರೆನ್ಸ್ ಕಂಪೆನಿಯಾಗಿದೆ. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಚಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಚೇರಿ, ವಾಣಿಜ್ಯ ಬ್ಯಾಂಕ್ ಅಥವಾ ಸಂಬಂಧಿಸಿದ ಸೇವಾ ಸಹಕಾರ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಆಳ್ವಾಸ್: ವರ್ಷದ 4ನೇ ಉಚಿತ ನೇತ್ರ ತಪಾಸಣಾ ಶಿಬಿರ

Article Image

ಆಳ್ವಾಸ್: ವರ್ಷದ 4ನೇ ಉಚಿತ ನೇತ್ರ ತಪಾಸಣಾ ಶಿಬಿರ

ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ವರ್ಷದ 4ನೇ ನೇತ್ರ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿ ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಮೊದಲು ನಡೆಸಿದ ಒಂಬತ್ತು ಶಿಬಿರಗಳಲ್ಲಿ 1,478 ಜನರಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 784 ಜನರಿಗೆ ಉಚಿತ ಕನ್ನಡಕ ನೀಡಲಾಗಿತ್ತು. ಈ ಪೈಕಿ 221 ಜನರಿಗೆ ಶಸ್ತçಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದ್ದು, 109 ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದವು. ಈ ವರ್ಷವೂ ಇದೇ ಹಾದಿಯಲ್ಲಿ ಸಾಗುತ್ತಾ ಈಗಾಗಲೇ ಮೂರು ಶಿಬಿರಗಳು ನಡೆದಿದ್ದು, ನಡೆದ 4ನೇ ಶಿಬಿರವು ಸೇರಿದಂತೆ ಒಟ್ಟು 470 ಜನರು ತಪಾಸಣೆಗೆ ಒಳಪಟ್ಟಿದ್ದಾರೆ. 235 ಜನರಿಗೆ ಕನ್ನಡಕ ವಿತರಿಸಲಾಗಿದೆ ಮತ್ತು 45 ಜನರಿಗೆ ಶಸ್ತ್ರಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದೆ. ಇವರಲ್ಲಿ 11 ಜನರಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ. ಶರಣ್ ಶೆಟ್ಟಿ ಅವರು ಭಾಗವಹಿಸಿದ್ದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಸಜೀತ್ ಎಂ., ಮೂಡುಬಿದಿರೆ ಪುರಸಭೆಯ ಮುಖ್ಯ ಆಡಳಿತಾಧಿಕಾರಿ ಎಂ., ಬಂಟರ ಸಂಘ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ , ಸಿ.ಎಚ್. ಮೆಡಿಕಲ್ಸ್ ನ ಸಿ. ಎಚ್. ಗಫೂರ್, ಉದ್ಯಮಿಗಳಾದ ಅಬ್ದುಲ್ ಹಮೀದ್, ಸದಾಶಿವ ರಾವ್ ನೆಲ್ಲಿಮಾರು, ನವೀನ್ ಟಿ.ಆರ್., ಶಂಕರ್ ಎ. ಕೋಟ್ಯಾನ್, ಜೈನ್ ಮಿಲನ್ ಸಂಘಟನೆಯ ಅನಂತವೀರ್ ಜೈನ್, ವಿವಿಧ ಸಮುದಾಯ ಸಂಘಟನೆಗಳ ಹರೀಶ್ ಎಂ.ಕೆ , ಯೋಗೇಶ್ ಭಂಡಾರಿ ಮತ್ತು ಕೆ. ಎನ್. ಪ್ರಕಾಶ್ ಭಂಡಾರಿ, ಉಮೇಶ್ ನಾಯ್ಕ ಉಪಸ್ಥಿತರಿದ್ದರು. ಡಾ. ವಿಕ್ರಮ್ ಕುಮಾರ್ ಸ್ವಾಗತಿಸಿ, ಕಿರಿಯ ವೈದ್ಯ ಸುಮಂತ್ ಕಾರ್ಯಕ್ರಮ ನಿರೂಪಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ದಿನಾಂಕ 22-06-2025ನೇ ಆದಿತ್ಯವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ನಡೆಯಲಿದೆ. ಜನರಲ್ ಸರ್ಜನ್ ಡಾ| ಬಾಲಾಜಿ ಪ್ರಭಾಕರನ್ ಒಃBS, ಒS (General Surgery) ಹಾಗೂ ಡಾ| ಕಿರಣ್ ಕುಮಾರ್ MBBS, MS (General Surgery) ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ. ಸಾಮಾನ್ಯ ಶಸ್ತçಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು, ಕಿಬ್ಬೊಟ್ಟೆಯ ನೋವು, ಕಾಮಾಲೆ, ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾದಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು ಮತ್ತು ಗೆಡ್ಡೆಗಳ ತಪಾಸಣೆ ನಡೆಸಲಾಗುವುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ವಿಜಯ ಕೆ. ಕುಲಕರ್ಣಿ ನೇಮಕ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ವಿಜಯ ಕೆ. ಕುಲಕರ್ಣಿ ನೇಮಕ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ (ಆಡಳಿತ) ಮತ್ತು ಮಕ್ಕಳ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿರುವ ಡಾ. ವಿಜಯ ಕೆ. ಕುಲಕರ್ಣಿಯವರು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದಾರೆ. ಮೂಲತಃ ಧಾರವಾಡದವರಾದ ಡಾ. ವಿಜಯ ಕೆ. ಕುಲಕರ್ಣಿ, ಡಿಸೆಂಬರ್ 2003ರಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗವನ್ನು ಸೇರಿದ ಅವರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು ತಮ್ಮ ಎಂ.ಬಿ.ಬಿ.ಎಸ್. ಪದವಿಯನ್ನು 1999ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ, ವಿಜಯಪುರದ ಬಿ. ಎಂ. ಪಾಟೀಲ್ ವೈದ್ಯಕೀಯ ಕಾಲೇಜಿನಿಂದ ಪಡೆದಿದ್ದರು. ತಮ್ಮ ಸ್ನಾತಕೋತ್ತರ ಪದವಿ ಎಂ.ಡಿ. ಪಿಡಿಯಾಟ್ರಿಕ್ಸ ಅನ್ನು 2003ರಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ಬೆಂಗಳೂರಿನ ಬಿ. ಆರ್. ಅಂಬೇಡಕರ್ ವೈದ್ಯಕೀಯ ಕಾಲೇಜಿನಿಂದ ಪಡೆದಿದ್ದರು.

ಎಲೆಚುಕ್ಕಿ ರೋಗ: ಸಹಾಯ ಧನಕ್ಕೆ ರೈತರು ಹೀಗೆ ಅರ್ಜಿ ಸಲ್ಲಿಸಿ

Article Image

ಎಲೆಚುಕ್ಕಿ ರೋಗ: ಸಹಾಯ ಧನಕ್ಕೆ ರೈತರು ಹೀಗೆ ಅರ್ಜಿ ಸಲ್ಲಿಸಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ಅಡಿಕೆ ಎಲೆಚುಕ್ಕೆ ರೋಗದ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯ ಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ.ಎಸ್.ಟಿ. ನಮೂದು ಹೊಂದಿದ ಮತ್ತು ಎ.2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಈ ಮೂಲಕ ಸೂಚಿಸಲಾಗಿದೆ. ಅರ್ಜಿ ಜೊತೆಗೆ ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ.ಎ.ಟಿ. ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜೊತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಿ: ಬೆಳ್ತಂಗಡಿ ಹೋಬಳಿ: ಮಹಾವೀರ ಶೇಬಣ್ಣ ಮೊ.ನಂ: 8123921087 ವೇಣೂರು ಹೋಬಳಿ: ಭೀಮರಾಯ ಸೊಡಗಿ ಮೊ.ನಂ: 9741713598 ಕೊಕ್ಕಡ ಹೋಬಳಿ: ಮಲ್ಲಿನಾಥ ಬಿರಾದಾರ ಮೊ.ನಂ: 9986411477 ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್‌. ಚಂದ್ರಶೇಖರ್, ಮೊ.ನಂ: 9448336863

ಬೆಳ್ತಂಗಡಿ ಮುಳಿಯ ಗೋಲ್ಡ್ ಮತ್ತು ಡೈಮಂಡ್ ವತಿಯಿಂದ ವಿವಿಧ ಕಾ‍ರ್ಯಕ್ರಮಗಳು

Article Image

ಬೆಳ್ತಂಗಡಿ ಮುಳಿಯ ಗೋಲ್ಡ್ ಮತ್ತು ಡೈಮಂಡ್ ವತಿಯಿಂದ ವಿವಿಧ ಕಾ‍ರ್ಯಕ್ರಮಗಳು

ಬೆಳ್ತಂಗಡಿ: ಮುಳಿಯ ಗೋಲ್ಡ್ ಮತ್ತು ಡೈಮಂಡ್ಸ್ ಬೆಳ್ತಂಗಡಿ ಶೋರೂಮ್ ನ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ, ತಾಲೂಕು ಮಟ್ಟದ ಗ್ರಾಮ ಸೀಮಿತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಮೇ 25 ರಂದು ಬೆಳ್ತಂಗಡಿ ಮುಳಿಯದ ಹಿಂಭಾಗದ ಮೈದಾನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ವಿಟ್ಲ, ದೈಹಿಕ ಶಿಕ್ಷಕ ರಾಜೇಶ್ ಉಪಸ್ಥಿತರಿದ್ದರು. ಈ ವೇಳೆ ಎಸ್.ಎಸ್.ಎಲ್.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತನ್ವಿ ಭಟ್, ಶರೋನ್ ಡಿಸೋಜ, ಮನಶ್ರೀ, ಸುಪ್ರಿಯಾ, ಅಂಶಿತಾ ಜೋಸೆಫ್, ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತುಷಾರ ಬಿ ಎಸ್, ಸಿಂಚನಾ, ಜೋಶನ್ ರಾಫೆಲ್, ದೀಕ್ಷಾರವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಮುಳಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ ಸ್ವಾಗತಿಸಿದರು. ದೀಪಕ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಪಡಿಪಂಡ ಹಗ್ಗಜಗ್ಗಾಟದ ವೀಕ್ಷಕ ವೇಳೆ ವಿವರಣೆ ಮಾಡಿದರು. ಮುಳಿಯ ಸಿಬ್ಬಂದಿ ವರ್ಗ ಸಹಕರಿಸಿದರು. ಹಗ್ಗಜಗ್ಗಾಟ ಫಲಿತಾಂಶ: ಪುರುಷರ ವಿಭಾಗದ ಹಗ್ಗಜಗ್ಗಾಟ ಪ್ರಥಮ – ಬ್ರಹ್ಮಲಿಂಗೇಶ್ವರ ಮರೋಡಿ, ದ್ವಿತೀಯ - ಮಣಿಕಂಠ ಫ್ರೆಂಡ್ಸ್ ಬೆಳಾಲು, ತೃತೀಯ- ಫ್ರೆಂಡ್ಸ್ ಮಲ್ಲಿಪ್ಪಾಡಿ, ಚತುರ್ಥ- ವೀರ ಕಲ್ಕುಡ ಪದ್ಮುಂಜ ಮಹಿಳೆಯರ ವಿಭಾಗದ ಹಗ್ಗಜಗ್ಗಾಟ ಫಲಿತಾಂಶ ಪ್ರಥಮ- ತೃಪ್ತಿ ಫ್ರೆಂಡ್ಸ್ ಮೊಗ್ರು ಬಂದಾರು, ದ್ವಿತೀಯ- ವನದುರ್ಗಾ ಬರೆಂಗಾಯ, ತೃತೀಯ- ದುರ್ಗಾಂಬ ಇಳಂತಿಲ

ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ

Article Image

ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು. ಧ್ವಜಮರ ಅವರೋಹಣ ನಡೆಯಿತು. ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ. ಧರ್ಮಸ್ಥಳ ಯಕ್ಷಗಾನ ಮೇಳದ ಶ್ರೀ ಮಹಾಗಣಪತಿ ದೇವರ ಮೂರ್ತಿಯನ್ನು ಶನಿವಾರ ಸಂಜೆ ಬಿಡಾರದ ಮಣೆಗಾರರ ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಆನೆಗಳು, ಬಸವ, ಹೂವಿನ ಕೋಲು, ವಾದ್ಯ ಮೇಳ, ಚೆಂಡೆ ಮೇಳ, ಶಂಖ-ಜಾಗಟೆ ವಾದನ ಮೆರವಣಿಗೆಗೆ ವಿಶೇಷ ಮೆರುಗನ್ನು ನೀಡಿತು. ದೇವಸ್ಥಾನದ ಎದುರು ದರ್ಶನ ಸೇವೆ ನಡೆಸಿದ ಬಳಿಕ ಛತ್ರದ ಶ್ರೀ ಮಹಾಗಣಪತಿ ಗುಡಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಕುಟುಂಬಸ್ಥರು, ನೌಕರರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Article Image

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನ ಬಳಕೆ, ಸುರಕ್ಷತೆ, ಬದ್ಧತೆ, ಬ್ಯಾಂಕ್ ಮೂಲಕ ನಡೆಸುವ ವ್ಯವಹಾರಗಳ ದಾಖಲಾತಿ ನಿರ್ವಹಣೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ಅಂಶಗಳಲ್ಲಿ 109 ಪ್ರಮುಖ ಅಂಶಗಳನ್ನು ಗಮನಿಸಿದ ಲಂಡನ್‌ನ ಎನ್‌ಕ್ಯೂಎ (National Quality Assessment) ಸಂಸ್ಥೆ ಈ ಹಿಂದೆ 2024ರಲ್ಲಿ ಗ್ರಾಮಾಭಿವೃದ್ಧಿ ಯೋಜನೆಗೆ ಕೊಡಮಾಡಿದ ಐಎಸ್‌ಒ 27001–2013ಅನ್ನು ಮೇಲ್ದರ್ಜೆಗೇರಿಸಿದೆ. ಐಎಸ್‌ಒ ಸಂಸ್ಥೆಯಲ್ಲಿ ಸುಮಾರು 170 ದೇಶಗಳು ತಮ್ಮ ಸದಸ್ಯತ್ವವನ್ನು ಹೊಂದಿವೆ. ಎನ್‌ಕ್ಯÆಎ ಸಂಸ್ಥೆ 90 ದೇಶಗಳ ಪ್ರತಿಷ್ಠಿತ ಸಂಸ್ಥೆಗಳನ್ನು ಐಎಸ್‌ಒಗಾಗಿ ಆಡಿಟ್ ಮಾಡುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯನ್ನು 38 ನಿಯಮಗಳು ಮತ್ತು 93ರಲ್ಲಿ 90 ಅಂಶಗಳ ಕುರಿತು ಸೂಕ್ಷ್ಮವಾಗಿ ಗಮನಿಸಿ ಈ ಹಿಂದೆ ನೀಡಲಾದ ಐಎಸ್‌ಒ ಅನ್ನು ಇದೀಗ 27001–2022 ಆಗಿ ಮೇಲ್ದರ್ಜೆಗೇರಿಸಿದೆ. ಜಿ. ಎಸ್. ಭಾರ್ಗವ್ ಅವರು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಹೆಗ್ಗಡೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಭಾರತ ದೇಶದಲ್ಲಿಯೇ ISO 27001–2022 ಪ್ರಮಾಣಪತ್ರ ಪಡೆದ ಚಾರಿಟೇಬಲ್ ಟ್ರಸ್ಟ್ಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊದಲಿಗ ಸಂಸ್ಥೆಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳ ನಿರ್ವಹಣೆಯ ಅತ್ಯುತ್ತಮ ಗುಣಮಟ್ಟದ ತಂತ್ರಜ್ಞಾನ, ಪಾರದರ್ಶಕತೆ, ಲೆಕ್ಕಾಚಾರಗಳು, ನಿಯಮಪಾಲನೆ ಮುಂತಾದ ಅನೇಕ ಪ್ರಮುಖ ವಿಷಯಗಳಲ್ಲಿ ವಿಶ್ವದರ್ಜೆಯ ಗುಣಮಟ್ಟವನ್ನು ಹೊಂದಿರುವುದಕ್ಕೆ ಈ ಪ್ರಮಾಣಪತ್ರ ಸಾಕ್ಷಿಯಾಗಿದೆ. ಬ್ಯಾಂಕ್‌ಗಳ ವ್ಯವಹಾರಗಳ ಪಾರದರ್ಶಕತೆ, ನಿಖರತೆಯ ಉದ್ದೇಶದಿಂದ ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಲ್ಲಾ ಬ್ಯಾಂಕ್‌ಗಳಿಗೆ ISO 27001 ಮಾನ್ಯತೆಯನ್ನು ಪಡೆಯಲೇಬೇಕೆಂದು ನಿರ್ದೇಶಿಸಿದೆ. ಬ್ಯಾಂಕಿನ ಸೇವೆಗಳನ್ನು ಬ್ಯಾಂಕಿನ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಮೂಲಕ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಗ್ರಾಮ ಗ್ರಾಮಗಳಲ್ಲಿ ತರುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯು ಸ್ವಯಂಪ್ರೇರಿತವಾಗಿ ತನ್ನ ಸಂಸ್ಥೆಯನ್ನು ಈ ಉತ್ಕೃಷ್ಟ ಆಡಿಟ್‌ಗೆ ಒಳಪಡಿಸಿ ಈ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

ಸತ್ತೂರು, ಧಾರವಾಡ: ಒಂದು ದಿನದ ಕಾರ್ಯಾಗಾರ

Article Image

ಸತ್ತೂರು, ಧಾರವಾಡ: ಒಂದು ದಿನದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರ ಕ್ರೀಯಾ ಶಾಸ್ತ್ರ ವಿಭಾಗದಿಂದ ಹದಿಹರೆಯದಲ್ಲಿ ಉದ್ಬವಿಸುವ ಪ್ರಶ್ನೆಗಳು” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಮೇ ೧೭ ರಂದು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ: ನಾವು ಡೋಪಮೈನ್ ಮತ್ತು ಸಿರೊಟೋನಿನ್ ನಡುವೆ ಸಮತೋಲನವನ್ನು ಹೊಂದಬೇಕು. ಮೆದುಳಿನ ಕಾರ್ಯವನ್ನು ಅರ್ಥಮಾಡಿಕೊಳ್ಳುವುದರಿಂದ ಉತ್ತಮ ಜೀವನವನ್ನು ನಡೆಸಲು ಸಹಾಯವಾಗುತ್ತದೆ. ಮೆದುಳಿನ ಬೆಳವಣಿಗೆಗೆ ಜ್ಞಾನವು ಅತ್ಯಾವಶ್ಯಕ ಇಂತಹ ಕಾರ್ಯಗಾರವು ಹದಿಹರೆಯದವರ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ದಿಪಡಿಸಲು ಸಹಾಯವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಹಣಕಾಸು ಸಚಿವರಾದ ವಿ ಜಿ ಪ್ರಭು, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ. ದೇಶಾಯಿ ಹಾಗೂ ೨೦೦ಕ್ಕೂ ಹೆಚ್ಚು ಪ್ರಾಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಶ್ವಿನಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಚಿನ್ಮಯ ಮತ್ತು ಅಮುಲ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಾಗಾರದ ಸಂಘಟನಾ ಅಧ್ಯಕ್ಷರು ಮತ್ತು ಶರೀರ ಕ್ರೀಯಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಲಕ್ಷ್ಮೀ ಅವರು ವಂದನಾರ್ಪಣೆ ಸಲ್ಲಿಸಿದರು.

ಎಸೆಸೆಲ್ಸಿ ಪರೀಕ್ಷೆ: ಇಂದು ಫಲಿತಾಂಶ

Article Image

ಎಸೆಸೆಲ್ಸಿ ಪರೀಕ್ಷೆ: ಇಂದು ಫಲಿತಾಂಶ

ಬೆಂಗಳೂರು, ಮೇ 1: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸಿದ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರಿಂದ ಫಲಿತಾಂಶ https://karresults.nic.ind ವೀಕ್ಷಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ಮಂಡಳಿ ತಿಳಿಸಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? https://karresults.nic.inನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ (ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ) ಎಸೆಸೆಲ್ಸಿ ರಿಸಲ್ಟ್-2025 ಲಿಂಕ್ ಮೇಲೆ - ಕ್ಲಿಕ್ ಮಾಡಿದರೆ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ. ಬಳಿಕ ಸಬ್‌ ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಫಲಿತಾಂಶವನ್ನು ಸ್ಟೀನ್ ಮೇಲೆ ನೊಡಬಹುದಾಗಿದೆ.

ಉಜಿರೆ: ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ

Article Image

ಉಜಿರೆ: ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ

ಉಜಿರೆಯ ಎಸ್.ಡಿ.ಎಂ. ಪದವಿ, ಪದವಿಪೂರ್ವ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಮತ್ತು ಬೆಳದಿಂಗಳೂಟ ಕಾರ್ಯಕ್ರಮವು ಎ.24 ರಂದು ಪದವಿ ಕಾಲೇಜಿನ ಒಳಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಧ್ಯಾಪಕರನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿನಂದಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಪ್ರಾಸ್ತಾವಿಕವಾಗಿ ಮಾತನಾಡಿ, ಗುಣಮಟ್ಟದಿಂದ ಕೂಡಿದ ಸಂಸ್ಕಾರಯುತ ಶಿಕ್ಷಣದಿಂದ ಕಾಲೇಜು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅದಕ್ಕೆ ಕಾಲೇಜಿನ ಅಧ್ಯಾಪಕರ ಶ್ರಮ ಅಪಾರವಾಗಿದೆ ಎಂದರು. ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್., ಬೆಂಗಳೂರಿನ ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್, ಸೋನಿಯಾ ಯಶೋವರ್ಮ, ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಸವಿತಾ ಕುಮಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಾಪಕರು ಮತ್ತು ಅವರ ಕುಟುಂಬದವರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಕಾಲೇಜಿನ ಒಳಾಂಗಣದಲ್ಲಿ ಬೆಳದಿಂಗಳೂಟವನ್ನು ಮಾಡಲಾಯಿತು. ಪ್ರಾಧ್ಯಾಪಕರಾದ ಅಶ್ವಿತ್ ಮತ್ತು ದಿವಾಕರ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ : ಉಜಿರೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

Article Image

ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ : ಉಜಿರೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

ಉಜಿರೆ: “ದೇಹಕ್ಕೆ ರೋಗ ನಿರೋಧಕ ಶಕ್ತಿ ಇದೆ ಹಾಗೂ ಮರಳಿ ಪ್ರಕೃತಿಗೆ” ತತ್ವದ ನೆಲೆಯಲ್ಲಿ ಇದೇ ಮೇ 12 ರಿಂದ 16ರ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ಮೂರನೆ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಹೇಳಿದರು. ಅವರು ಬುಧವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಭಾರತೀಯ ಪ್ರಕೃತಿಚಿಕಿತ್ಸಾ ಮತ್ತು ಯೋಗ ಪದವೀಧರ ವೈದ್ಯರ ಸಂಘ ಹಾಗೂ ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ನಡೆಸುವ ಮೂರನೆ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸಂಶೋಧನೆ ಹಾಗೂ ವೈಜ್ಞಾನಿಕ ನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತು ಯೋಗವಿಜ್ಞಾನದ ಬಳಕೆ, ಆರೋಗ್ಯಭಾಗ್ಯ ಸಂರಕ್ಷಣೆ ಮತ್ತು ಆರೋಗ್ಯ ವರ್ಧನೆ ಕುರಿತು ಚರ್ಚಿಸಲಾಗುವುದು. ವಸ್ತುಪ್ರದರ್ಶನ, ಹಿರಿಯ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮತ್ತು ಸಂವಾದ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ. ಶಿವಪ್ರಸಾದ ಶೆಟ್ಟಿ ಮಾತನಾಡಿ, 3೦೦ ಮಂದಿ ಪ್ರತಿನಿಧಿಗಳು ಹಾಗೂ 10,000ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಭರದಿಂದ ಸಿದ್ಧತೆಗಳು ನಡೆಯುತ್ತಿವೆ ಎಂದರು. ಬೆಂಗಳೂರಿನ ಡಾ. ನವೀನ್, ಕೆ.ವಿ., ಕ್ಷೇಮವನದ ಮುಖ್ಯ ವೈದ್ಯಾಧಿಕಾರಿ ಡಾ. ನರೇಂದ್ರ ಶೆಟ್ಟಿ, ಡೀನ್ ಡಾ. ಗೀತಾ, ಬಿ. ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ. ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಚಿಣ್ಣರ ಮೇಳ- 2025’ ಉದ್ಘಾಟನೆ

Article Image

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಚಿಣ್ಣರ ಮೇಳ- 2025’ ಉದ್ಘಾಟನೆ

ಮೂಡುಬಿದಿರೆ: ‘ಮಕ್ಕಳಿಗೆ ಸಮಯ ನೀಡಿ , ಬೆನ್ತಟ್ಟಿ ಬೆಳೆಸಿ ’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಮೂಡುಬಿದಿರೆ ನಗರದ ಸ್ಕೌಟ್ಸ್ -ಗೈಡ್ಸ್ ಕನ್ನಡ ಭವನದಲ್ಲಿ ಸೋಮವಾರ ಆಯೋಜಿಸಿದ್ದ 34 ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ ಅಭಿನಯ ಪ್ರಧಾನ 'ಚಿಣ್ಣರ ಮೇಳ - 2025' ಉದ್ಘಾಟಿಸಿ ಅವರು ಮಾತನಾಡಿದರು. ‘ಬದುಕಿನಲ್ಲಿ ಎಲ್ಲರೂ ನಟರೇ. ಆದರೆ, ಅಭಿನಯ ವಿಭಿನ್ನ’. ಮಕ್ಕಳಿಗೆ ಸಮಯ ನೀಡುವುದು ಎಂದರೆ ಅವರ ಭಾವನೆಗಳಿಗೆ ಸ್ಪಂದಿಸುವುದು, ಮುಕ್ತವಾಗಿ ಸಂವಹನ ನಡೆಸುವುದು. ಮಕ್ಕಳಲ್ಲಿ ಅಡಗಿರುವ ಆತಂಕ, ಭಯ, ತುಂಟಾಟ, ಪ್ರತಿಭೆಯನ್ನು ಸರಿಯಾದ ಸಮಯದಲ್ಲಿ ಗುರುತಿಸುವುದು ಬಹಳ ಅವಶ್ಯಕ ಎಂದರು. ಮನುಷ್ಯ ಸಮಾಜಜೀವಿ. ಸಮಾಜದ ಜೊತೆ ಬೆರೆತಾಗಲೇ ನೆಮ್ಮದಿ, ಯಶಸ್ಸು ಎಲ್ಲವೂ ಸಾಧ್ಯ. ಮಕ್ಕಳು ಮಾತನಾಡಬೇಕು. ಎಲ್ಲರೊಂದಿಗೆ ಬೆರೆಯುವಂತೆ ಮಾಡಲು ಇಂತಹ ಶಿಬಿರ ಪೂರಕವಾಗಿರಲಿದೆ ಎಂದು ತಿಳಿಸಿದರು. ವಿದ್ವಾನ್ ಚಂದ್ರಶೇಖರ ನಾವಡ ಮಾತನಾಡಿ, ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೆತ್ತವರು ತಮ್ಮ ಮಕ್ಕಳ ವ್ಯಕ್ತಿತ್ವ ಬದಲಾವಣೆಯನ್ನು ಅವಲೋಕಿಸಬೇಕು. ವಿದ್ಯಾರ್ಥಿಗಳು ಶಿಬಿರದ ಅನುಭವವನ್ನು ಒಳ್ಳೆಯ ರೀತಿಯಲ್ಲಿ ವಿನಿಯೋಗಿಸಿಕೊಂಡು ದೇಶದ ಸತ್ಪçಜೆಗಳಾಗಿ ರೂಪುಗೊಳ್ಳುವಂತಾಗಲಿ ಎಂದು ಆಶಿಸಿದರು. ಶಿಬಿರದ ನಿರ್ದೇಶಕ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ಮಾತನಾಡಿ, ಅಭಿನಯನ ಪ್ರಧಾನ ಎಂಬುದು ಸಂವಹನಕ್ಕೆ ಸಂಬAಧಿಸಿದ ಕಲೆ. ಹಾಡು ಕುಣಿತ, ನಾಟಕ ಕಲೆಯ ಕಲಿಕೆಯಲ್ಲಿ ತೊಡಗಿಕೊಳ್ಳುವುದರ ಜೊತೆಗೆ, ಹಿರಿಯರನ್ನು ಗೌರವಿಸುವ, ಎಲ್ಲರೊಂದಿಗೆ ಬೆರೆತುಕೊಳ್ಳುವ ಮನೋಭಾವವನ್ನು ಬೆಳಸಲಿದೆ. ಬೇಸಿಗೆ ಶಿಬಿರವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳುವ ಸಲುವಾಗಿ ಪ್ರತಿ ವರ್ಷವು ಸುತ್ತಮುತ್ತಲಿನ ಶಾಲಾ ಮಕ್ಕಳಿಗೂ ಸಮಾನವಾಗಿ ಭಾಗವಹಿಸುವ ಅವಕಾಶವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ ಆಳ್ವ ನೀಡುತ್ತಿರುವುದು ಶ್ಲಾಘನೀಯ ಎಂದರು. ವಿಶೇಷವಾಗಿ, ನಾಡಿನ ಕಲಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 12 ಜನ ಶ್ರೇಷ್ಠ ಸಂಪನ್ಮೂಲ ವ್ಯಕ್ತಿಗಳು ತರಬೇತಿಗಾಗಿ ಆಗಮಿಸಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಚಿಣ್ಣರ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6-15 ವರ್ಷದ ಸುಮಾರು 138 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಶಿಬಿರದಲ್ಲಿ ಮಕ್ಕಳಿಗೆ ಕ್ರಾಫ್ಟ್ ವರ್ಕ್, ನವರಸ ಕಲಿಕೆ, ಸ್ವರಾಕ್ಷರ ಅಭಿನಯನ, ರಂಗಗೀತೆ, ನಾಟಕ ತರಬೇತಿ, ವಿವಿಧ ವಾದ್ಯಗಳ ಕಲಿಕಾ ಪರಿಚಯ, ರಂಗಭೂಮಿ ಆಟಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುವುದರೊಂದಿಗೆ ಮಕ್ಕಳ ಪ್ರತಿಭಾ ಅನಾವರಣಗೊಳಿಸುವ ಪ್ರಯತ್ನ ನಡೆಯಲಿದೆ ಎಂದರು. ಕಲಾವಿದ ತಾರಾನಾಥ ಕೈರಂಗಳ ಮತ್ತು ಇತರರು ಇದ್ದರು. ಸುಮನಾ ಪ್ರಸಾದ್ ಆಶಯ ಗೀತೆ ಹಾಡಿದರು. ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ ಯೋಗೀಶ್ ಕೈರೋಡಿ ನಿರೂಪಿಸಿದರು.

ನವಕಾರ್ ಮಹಾಮಂತ್ರ ದಿವಸ್: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Article Image

ನವಕಾರ್ ಮಹಾಮಂತ್ರ ದಿವಸ್: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ರಾಷ್ಟ್ರರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾನ್ಯ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಬುಧವಾರ ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.

ಇಂದು ದ್ವಿತೀಯ ಪಿಯು ಫಲಿತಾಂಶ

Article Image

ಇಂದು ದ್ವಿತೀಯ ಪಿಯು ಫಲಿತಾಂಶ

ಬೆಂಗಳೂರು: ಪ್ರಸಕ್ತ 2025ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು ಏ.8ರಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ವಿದ್ಯಾರ್ಥಿಗಳು www.karresults.nic.in ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ನೋಡಬಹುದು. ದ್ವಿತೀಯ ಪಿಯು ಪರೀಕ್ಷೆಯು ಮಾ. 1ರಿಂದ 20ರವರೆಗೆ ನಡೆದಿತ್ತು. 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು.

ಆಳ್ವಾಸ್ ಸ್ವಾಯತ್ತ ಕಾಲೇಜು: ವಿವಿಧ ವಿದ್ಯಾರ್ಥಿ ಘಟಕಗಳ ವಾರ್ಷಿಕ ಸಮಾರಂಭ

Article Image

ಆಳ್ವಾಸ್ ಸ್ವಾಯತ್ತ ಕಾಲೇಜು: ವಿವಿಧ ವಿದ್ಯಾರ್ಥಿ ಘಟಕಗಳ ವಾರ್ಷಿಕ ಸಮಾರಂಭ

ಮೂಡುಬಿದಿರೆ/ವಿದ್ಯಾಗಿರಿ: ‘ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು. ಆದರೆ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳುವ ಜಾಣ್ಮೆ ಪ್ರತಿಯೊಬ್ಬರಲ್ಲಿರಬೇಕು ಎಂದು ದ.ಕ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು. ಅವರು ಶನಿವಾರ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ವಿವಿಧ ವಿದ್ಯಾರ್ಥಿ ಘಟಕಗಳ ವಾರ್ಷಿಕ ದಿನಾಚರಣೆ ‘ಇನಾಮು – 2025’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯುವಜನತೆ ತಮ್ಮ ಇಚ್ಛಾಶಕ್ತಿಯ ಸಾಮರ್ಥ್ಯವನ್ನು ಅರಿತು, ತಮ್ಮ ಗುರಿಯನ್ನು ತಲುಪುವಲ್ಲಿ ಕಾರ್ಯಪ್ರವೃತ್ತರಾಗಬೇಕು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬಹಳ ಎತ್ತರಕ್ಕೆ ಬೆಳೆದು, ಎಲ್ಲರಿಗೂ ಮಾದರಿಯಾಗಿ ದೇಶಕ್ಕೆ ಹೆಮ್ಮೆ ತರುವ ಕಾರ್ಯ ನೆರವೇರಲಿ ಎಂದು ಆಶಿಸಿದರು. ವ್ಯಕ್ತಿತ್ವ ವಿಕಸನದಲ್ಲಿ ತರಗತಿ ಶಿಕ್ಷಣ ಒಂದು ಭಾಗವಷ್ಟೇ. ಅದನ್ನು ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳು ಸಾಕಷ್ಟಿವೆ. ಇಂತಹ ವಿಫುಲ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಆಳ್ವಾಸ್ ಕಲ್ಪಿಸುತ್ತಿರುವುದು ಶ್ಲಾಘಿನೀಯ. ಹಳೆ ವಿದ್ಯಾರ್ಥಿಗಳ ಪುನರ್ಮಿಲನದಂತಹ ಕರ‍್ಯಕ್ರಮಗಳನ್ನು ಆಯೋಜಿಸಿ ಸಂಸ್ಥೆ ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಭಾಂದವ್ಯವನ್ನು ಬೆಸೆಯುವ ವೇದಿಕೆ ಕಲ್ಪಿಸಿಬೇಕು ಎಂದು ಸಲಹೆಯಿತ್ತರು. ತುಳು ಮತ್ತು ಕನ್ನಡ ಚಲನಚಿತ್ರ ನಟ ಅರವಿಂದ್ ಬೋಳಾರ್ ಮಾತನಾಡಿ, ಪ್ರತಿಭೆಗೆ ಎಂದು ಬಡವ, ಶ್ರೀಮಂತ ಎಂಬ ಭೇಧಭಾವವಿಲ್ಲ. ಪ್ರತಿಭೆಗೆ ತಕ್ಕ ವೇದಿಕೆ ಸಿಗುವುದು ಬಹಳ ಮುಖ್ಯ. ಕಲಾವಿದರಿಗೆ ಸಭಿಕರ ಚಪ್ಪಾಳೆಯೆ ಆಶೀರ್ವಾದ ಎಂದರು. ವಿದ್ಯೆಯೊಂದಿಗೆ ಪ್ರತಿಭೆಯನ್ನು ಒಗ್ಗೂಡಿಸಿ ಕಂಡ ಕನಸನ್ನು ನನಸಾಗಿಸುವ ಜವಾಬ್ದಾರಿ ಪ್ರತಿ ವಿದ್ಯಾರ್ಥಿಗಿರುತ್ತದೆ. ಪ್ರತಿಭೆ ಇದ್ದವನಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆ ದೇವಾಲಯವಿದ್ದಂತೆ. ತನ್ನೊಂದಿಗೆ ತನ್ನವರನ್ನು ಬೆಳೆಸಿದ ಕೀರ್ತಿ ಡಾ. ಮೋಹನ್ ಆಳ್ವರಿಗೆ ಸಲ್ಲುತ್ತದೆ. ಇನಾಮು ಎಂಬ ಹೆಸರಿನಡಿಯಲ್ಲಿ ಆರಂಭಗೊಂಡ ಈ ಕಾರ್ಯಕ್ರಮ ಹೆಚ್ಚೆಚ್ಚು ಪ್ರತಿಭಾ ಅನಾವರಣಕ್ಕೆ ವೇದಿಕೆಯಾಗಲಿ ಎಂದು ಆಶಿಸಿದರು. ವಿದ್ಯಾರ್ಥಿ ಜೀವನ ಮುಗಿದ ನಂತರ ಕಲಿತ ವಿದ್ಯಾಸಂಸ್ಥೆಯನ್ನು ಎಂದಿಗೂ ಮರೆಯದಿರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳಿಂದ, ವಿದ್ಯಾರ್ಥಿಗಳಿಗಾಗಿ ನಡೆಯುವ ಅದ್ಭುತ ಕಾರ್ಯಕ್ರಮ ಇನಾಮು. ಕೇವಲ ತರಗತಿಯೊಳಗಿನ ಪಠ್ಯಕ್ಕೆ ಮಾತ್ರ ಸೀಮಿತವಾಗದೇ, ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ. ಇನಾಮು ಉದ್ಘಾಟನಾ ಸಮಾರಂಭದಲ್ಲಿ ಚಲನಚಿತ್ರ ನಟ, ನಿರ್ದೇಶಕ ಅನೀಶ್ ಪೂಜಾರಿ ಮಾತನಾಡಿ, ಶ್ರದ್ಧೆ ಮತ್ತು ಮಾಡುವ ಒಳ್ಳೆಯ ಕೆಲಸಗಳ ಮೂಲಕ ಸಾಧನೆಯ ಸಾವಿರ ಹೆಜ್ಜೆಗಳ ಪಯಣ ಆರಂಭವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವೃತ್ತಿ ಬದುಕಿಗೆ ಪೂರಕವಾಗಿ ಈ ರೀತಿಯ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಆಯೋಜನೆ ನಿಜಕ್ಕೂ ಶ್ಲಾಘನೀಯ. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಮಾತನಾಡಿ, ಇನಾಮು ಎನ್ನುವಂತದ್ದು ಬಹುಮಾನ, ಪ್ರಶಸ್ತಿ ಮತ್ತು ಸನ್ಮಾನವನ್ನು ಪ್ರತಿಬಿಂಬಿಸುವಂತದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಅನಾವರಣಗೊಳಿಸಲು, ವಿವಿಧ ಫೋರಂಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಸ್ತುತ್ಯರ್ಹ ಎಂದರು . ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಇನಾಮು ಸಂಯೋಜಕರಾದ ಡಾ ಯೋಗೀಶ್ ಕೈರೋಡಿ ಮತ್ತು ಮನು ಡಿಎಲ್, ವಿವಿಧ ಫೋರಂ ವಿದ್ಯಾರ್ಥಿ ಸಂಯೋಜಕರು ಮತ್ತು ಪ್ರಾದ್ಯಾಪಕರು ಇದ್ದರು. ಇನಾಮು -2025ರ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಗ್ರ ಪ್ರಶಸ್ತಿಯನ್ನು ಎನ್‌ಎಸ್‌ಎಸ್ ಫೋರಂ ಪಡೆದರೆ, ರನ್ನರ್ ಅಪ್ ಸ್ಥಾನವನ್ನು ತುಳು ಫೋರಂ ಪ್ರಶಸ್ತಿ ಮುಡಿಗೇರಿಸಿಕೊಂಡರೆ, ಡ್ಯಾನ್ಸ ಫೋರಂ ತೃತೀಯ ಸ್ಥಾನ ಪಡೆದರು. ಎನ್‌ಸಿಸಿ ನೌಕದಳ ಫೋರಂಗೆ ಉತ್ತಮ ಕಾರ‍್ಯಕ್ರಮ ಆಯೋಜಕ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಅಮೂಲ್ಯ ಜೈನ್ ನಿರೂಪಿಸಿ, ಸೌರಭ್ ಶೆಟ್ಟಿ ವಂದಿಸಿದರು. ನಂತರ ಇನಾಮು ಕಾರ್ಯಕ್ರಮದ ಪ್ರಯುಕ್ತ ನಡೆದ ಹಲವು ಸ್ಪರ್ಧೆಗಳ ವಿಜೇತರ ಪ್ರತಿಭಾ ಪ್ರದರ್ಶನ ನಡೆಯಿತು.

ಎಸ್.ಡಿ.ಎಮ್‌. ಕಾಲೇಜಿನಲ್ಲಿ ಎಸ್ಪರಾಂಜ ಫೆಸ್ಟಿವಲ್

Article Image

ಎಸ್.ಡಿ.ಎಮ್‌. ಕಾಲೇಜಿನಲ್ಲಿ ಎಸ್ಪರಾಂಜ ಫೆಸ್ಟಿವಲ್

ಉಜಿರೆ ಮಾರ್ಚ್ 2: ಮಾನವೀಯತೆಯ ಶ್ರೇಷ್ಠತೆ ಎತ್ತಿಹಿಡಿಯುವುದಕ್ಕೆ ಸಾಹಿತ್ಯದ ಅಧ್ಯಯನ ಅಗತ್ಯ ಎಂದು ಕೇರಳ ಮಲ್ಲಾಪುರಂನ ಮಂಕಡ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೈಕಸಿ ವಿ.ಎಸ್ ಅಭಿಪ್ರಾಯಪಟ್ಟರು. ಎಸ್.ಡಿ.ಎಂ. ಸ್ನಾತಕೊತ್ತರ ಕೇಂದ್ರದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಏರ್ಪಡಿಸಿದ್ದ ರಾಷ್ಟ್ರೀಯ ಮಟ್ಟದ ಅಂತರ್‌ಕಾಲೇಜು ಫೆಸ್ಟ್ "ಎಸ್ಪರಾಂಜಾ" ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಗೂಗಲ್, ಕೃತಕ ಬುದ್ಧಿಮತ್ತೆ, ಮೆಟಾ ಸೇರಿಂದತೆ ವಿವಿಧತಾಂತ್ರಿಕ ವೇದಿಕೆಗಳು ವಿದ್ಯಾರ್ಥಿಗಳ ಕಲಿಕೆಯಲ್ಲಿ ಪ್ರಭಾವ ಬೀರುತ್ತಿರುವುದು ಶೋಚನೀಯ ಸಂಗತಿ. ಸಾಹಿತ್ಯದಂತಹ ಜ್ಞಾನಶಿಸ್ತು ತಾಂತ್ರಿಕತೆಯ ಪ್ರಭಾವದೊಂದಿಗೆ ಮನವರಿಕೆಯಾಗುವಂಥದ್ದಲ್ಲ. ತಂತ್ರಜ್ಞಾನದಿಂದಲಷ್ಟೇ ಸಾಹಿತ್ಯದ ಸಮಗ್ರ ತಿಳುವಳಿಕೆ ಸಾಧ್ಯವಾಗುವುದಿಲ್ಲ. ತರಗತಿ ಬೋಧನೆಯ ಕ್ರಮಗಳು ಸಾಹಿತ್ಯಕ್ಕೆ ಸಂಬಂಧಿಸಿದಂತೆ ಮೌಲಿಕಚರ್ಚೆಯನ್ನು ಹುಟ್ಟುಹಾಕುತ್ತವೆ ಎಂದರು. ಸಾಹಿತ್ಯವು ಅನುಕರಿಸಿ ಅಥವಾ ಬಾಯಿಪಾಠ ಹೊಡೆದು ಕಲಿಯುವಂಥದ್ದಲ್ಲ. ಮನುಷ್ಯನ ಅನುಭವಗಳಿಗೆ ಜೀವ ತುಂಬುವ ಶ್ರೇಷ್ಠ ವಿಷಯವೇ ಸಾಹಿತ್ಯ. ಮನುಷ್ಯ ಜೀವಂತಿಕೆಗೆ ಸಾಕ್ಷಿಯಾಗಬಲ್ಲ ಸಾಮರ್ಥ್ಯ ಸಾಹಿತ್ಯಕ್ಕಿದೆ. ಮಾನವಜೀವಿಯು ಇತರ ಜೀವಿಗಳಿಗಿಂತ ವಿಭಿನ್ನವಾಗಿರಲು ಆತನ ಭಾವನೆಗಳೂ, ಮಾತುಗಳು ಕಾರಣ. ಇದರಿಂದಾಗಿಯೇ ಮನುಷ್ಯ ಜಗತ್ತಿನಲ್ಲಿ ಪ್ರಾಬಲ್ಯ ಸಾಧಿಸಲು ಸಾಧ್ಯವಾಗಿದೆ. ಕೇವಲ ಸಾಹಿತ್ಯ ಅಧ್ಯಯನ ಮಾಡಿದ ವ್ಯಕ್ತಿ ಮಾತ್ರ ಇನ್ನೋರ್ವ ವ್ಯಕ್ತಿಯ ನೋವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ, ಆ ನೋವನ್ನು ಮರೆಸುವ ಶಕ್ತಿಯೂ ಸಹ ಸಾಹಿತ್ಯದ ಓದಿಗೆ ಇದೆ ಎಂದರು. ಸಾಹಿತ್ಯ ಸಂಬಂಧಿತ ಮಹತ್ವದ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ರವಾನಿಸಲು ಸ್ಪರ್ಧಾತ್ಮಕ ಮನೋಭಾವ ಬಿತ್ತುವ ಕಾರ್ಯಕ್ರಮಗಳು ಆಯೋಜಿತವಾಗಬೇಕು. ಶಿಕ್ಷಣ ಸಂಸ್ಥೆ, ಅಧ್ಯಾಪಕರು ಮತ್ತು ಸಹಪಾಠಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ವೃದ್ಧಿಸುವುದಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಅಲ್ಲದೇ ಪರಸ್ಪರ ಸಹಕಾರ ಮನೋಭಾವ ಮತ್ತು ಕಾಳಜಿಯನ್ನು ಕಲಿಸುವುದಲ್ಲದೆ ಸಂಶೋಧನಾ ಪ್ರಜ್ಞೆಯನ್ನು ಅಳವಡಿಸಿಕೊಳ್ಳು ನೆರವಾಗುತ್ತವೆ ಎಂದರು. ಎಸ್.ಡಿ.ಎಂ. ಕಾಲೇಜಿನ ಉಪ ಪ್ರಾಂಶುಪಾಲೆ ನಂದಾಕುಮಾರಿ ಕೆ.ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜ್ಞಾನ ಮತ್ತು ಸೃಜನಶೀಲತೆ ಇವೆರಡೂ ಮಹತ್ವಾಕಾಂಕ್ಷಿ ಕನಸುಗಳ ಸಾಕಾರಕ್ಕೆ ಪೂರಕವಾಗುತ್ತವೆ ಎಂದು ಹೇಳಿದರು. ಈ ಕಾರ್ಯಕ್ರಮದ ಸಂಯೋಜಕರಾದ ದ್ವಿತೀಯ ಎಂ.ಎ.ಯ ಹಾಸಿನಿ ಸಿಂಗ್.ಪಿ ಮತ್ತು ಸಂಮ್ಯಕ್ ಜೈನ್ ಉಪಸ್ಥಿತರಿದ್ದರು. ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ಮುಖ್ಗಸ್ಥರಾದ ಡಾ. ಮಂಜುಶ್ರೀ ಆರ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಷ್ಣು ವಿನೀತ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಮನು ಎ.ಆರ್. ವಂದಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸಾ ಶಿಬಿರ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏ.2 ಬುದವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 2.30ರವರೆಗೆ ನೆಡೆಯಲಿದೆ. ಈ ಶಿಬಿರದಲ್ಲಿ ಮಂಗಳೂರು ಅತ್ತಾವರ ಕೆಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಲಿದ್ದಾರೆ. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಬಹುದು. ಈ ಶಿಬಿರದಲ್ಲಿ ಉಚಿತ ಸಮಾಲೋಚನೆಯ ಜತೆಗೆ ರಕ್ತ ಪರೀಕ್ಷೆ ಹಾಗೂ ಔಷಧಗಳಿಗೆ ಶೇ. 10 ರಿಯಾಯಿತಿಯನ್ನು ಪಡೆಯಬಹುದಾಗಿದೆ. ಹೆಸರು ನೊಂದಾಯಿಸಿಕೊಳ್ಳಲು 7760397878, 9972000438 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿವಿ ಮಟ್ಟದ ಅಂತರ್‌ಕಾಲೇಜು ಕನ್ನಡ ಚರ್ಚಾಸ್ಪರ್ಧೆ

Article Image

ಮಂಗಳೂರು ವಿವಿ ಮಟ್ಟದ ಅಂತರ್‌ಕಾಲೇಜು ಕನ್ನಡ ಚರ್ಚಾಸ್ಪರ್ಧೆ

ಉಜಿರೆ, ಮಾರ್ಚ್ 25: ವಿಚಾರಗಳ ಮಂಥನಕ್ಕೆ ಅವಕಾಶವೀಯುವ ಚರ್ಚೆಗಳು ಮೌಲ್ಯಯುತ ಗಮ್ಯ ತಲುಪಿಕೊಂಡಾಗಲೇ ವೈಚಾರಿಕ ಗೆಲುವು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್‌ಸಿಂಹ ನಾಯಕ್ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಮ್ಯಕ್‌ದರ್ಶನ ಸಭಾಂಗಣದಲ್ಲಿ ಶ್ರೀ ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಮಂಗಳವಾರ ಆಯೋಜಿತ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚರ್ಚೆ ಎಂದರೆ ಉತ್ತಮ ವಿಚಾರಗಳ ಮಂಥನ. ಮೌಲ್ಯಗಳ ಕುರಿತ ಸರಿಯಾದ ಅರ್ಥೈಸುವಿಕೆಯೇ ಚರ್ಚೆಯ ಸಂದರ್ಭದಲ್ಲಿ ಪ್ರಧಾನ ಪಾತ್ರವಹಿಸುತ್ತದೆ. ವ್ಯಕ್ತಿಯ ಮೂಲಕ ಅಭಿವ್ಯಕ್ತವಾಗುವ ಅಭಿಪ್ರಾಯಗಳು ವ್ಯಕ್ತಿಗತ ಪೊರೆಯನ್ನು ಕಳಚಿಕೊಂಡು ನಿಜವಾದ ಮೌಲ್ಯಗಳ ನಿಷ್ಕರ್ಷೆಗೆ ಬೇಕಾಗುವ ಒತ್ತಾಸೆ ಮೂಡಿಸುತ್ತವೆ. ಹಾಗಾದಾಗ ಮಾತ್ರ ಚರ್ಚೆ ರಚನಾತ್ಮಕವಾಗುತ್ತದೆ. ಚಿಂತನೆಯ ಗೆಲುವು ಸಾಧ್ಯವಾಗುತ್ತದೆ ಎಂದರು. ಮಾತುಗಳು ವ್ಯಕ್ತಿಯೊಬ್ಬನ ಜೀವನದ ಸಂಸ್ಕಾರ ಹಾಗೂ ಮೌಲ್ಯಬದ್ಧತೆ ಎಂಥದ್ದು ಎಂಬುದನ್ನು ತೋರ್ಪಡಿಸುತ್ತವೆ. ಮಾತುಗಳ ಪ್ರೇರಣೆಯಿಂದಲೇ ಶಿಸ್ತುಬದ್ಧ ಬದುಕು ರೂಪುಗೊಳ್ಳುತ್ತದೆ. ಸತತ ಅಧ್ಯಯನದ ಮೂಲಕ ಸಂವಹನ ಸಾಮರ್ಥ್ಯ ಹೆಚ್ಚಿಸಿಕೊಂಡು ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಚರ್ಚಾಸ್ಪರ್ಧೆಗಳು ಒಳಿತು-ಕೆಡಕುಗಳ ವಿವೇಚನೆ ತಂದುಕೊಳ್ಳುವುದಕ್ಕೆ ನೆರವಾಗುತ್ತವೆ. ಸಮಾಜಕ್ಕೆ ಬೇಕಾದ ಒಳಿತಿನ ಮಾದರಿಗಳನ್ನು ಕಟ್ಟಿಕೊಡುವುದರ ಕಡೆಗೇ ಹೆಚ್ಚಿನ ಆಸಕ್ತಿ ವಹಿಸಬೇಕು. ಆ ನಿಟ್ಟಿನಲ್ಲಿ ಚರ್ಚೆ ಹುಟ್ಟುಹಾಕುವ ಸಾಮರ್ಥ್ಯವನ್ನು ರೂಢಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಮಾತನಾಡಿದರು. ಚರ್ಚೆಯು ಸಂವಹನ ಕೌಶಲ್ಯದ ಒಂದು ಮುಖ್ಯ ಭಾಗವಾಗಿದೆ. ವಿದ್ಯಾರ್ಥಿಗಳು ಚರ್ಚಾ ಕಲೆಯನ್ನು ಕೌಶಲ್ಯವಾಗಿ ಅನ್ವಯಿಸಿಕೊಂಡಾಗ ವಿಭಿನ್ನ ಹೆಗ್ಗುರುತು ಮೂಡಿಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಆರಂಭದಲ್ಲಿ ರತ್ನವರ್ಮ ಹೆಗ್ಗಡೆಯವರ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ. ಪಿ. ಉಪಸ್ಥಿತರಿದ್ದರು. ಡಾ.ಕೃಷ್ಣಾನಂದ, ಪದ್ಮರಾಜ್, ಡಾ. ಮಾಧವ ಎಂ. ಕೆ. ಚರ್ಚಾಸ್ಪರ್ಧೆಯ ತೀರ್ಪುಗಾರರಾಗಿದ್ದರು. ಸಹಾಯಕ ಪ್ರಾಧ್ಯಾಪಕರಾದ ನಾಗಣ್ಣ ಡಿ. ಎ ಸ್ವಾಗತಿಸಿ, ಡಾ. ಸುಧೀರ್.ಕೆ.ವಿ. ವಂದಿಸಿದರು.

ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವ

Article Image

ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವ

ವಿದ್ಯಾಗಿರಿ: 'ಪ್ರಭಾವಿ ಸಂವಹನವೇ ಇಂದಿನ ಸವಾಲು ಮತ್ತು ಅವಶ್ಯಕತೆ' ಎಂದು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ವಾಸುದೇವ ಕಾಮತ್ ಹೇಳಿದರು. ಇಲ್ಲಿನ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ನಿಮ್ಮ ಕಲಿಕೆಯೇ (ಶಿಕ್ಷಣ) ಅದರ ವೇಗವರ್ಧಕವಾಗಿದೆ ಎಂದ ಅವರು, ಪರೀಕ್ಷೆಯೇ ಕಲಿಕೆಯ ಅಂತ್ಯವಲ್ಲ. ಬದುಕಿನಲ್ಲಿ ಪ್ರತಿನಿತ್ಯ ಕಲಿಕೆ ಅನಿವಾರ್ಯ ಎಂದರು. ಕೃತಕಬುದ್ಧಿಮತ್ತೆ (ಎಐ) ಎಂಬುದು ಮಿಥ್ಯೆ ಅಲ್ಲ. ಔದ್ಯೋಗಿಕ ಬದುಕಿನ ಅನಿವಾರ್ಯತೆ ಎಂದು ಅವರು ವಿವರಿಸಿದರು. ನೀವು ಉದ್ಯಮಶೀಲತೆಯನ್ನು ಮೈಗೂಡಿಸಿಕೊಂಡು ಯಶಸ್ವಿ ಆಗಬಹುದು ಎಂದ ಅವರು, ಕೋಟ್ಯಧಿಪತಿಗಳಾದ ಕರಾವಳಿ ಸಾಧಕರು ಇದ್ದಾರೆ ಎಂದು ಉದಾಹರಣೆ ನೀಡಿದರು. ನಿಮ್ಮ ಅಂತರAಗವನ್ನು ಆಲಿಸಿ. ಹೃದಯದ ಮಾತು ಕೇಳಿ. ನಿಮಗೆ ಅತ್ಯುತ್ತಮ ಅವಕಾಶವನ್ನು 'ಆಳ್ವಾಸ್' ನೀಡಿದೆ. ನೀವು ಇತರರಿಗೂ ತಿಳಿಸಿ, ಇತರರ ಏಳ್ಗೆಗೆ ನೆರವಾಗಿ ಎಂದು ಸಲಹೆ ನೀಡಿದರು. ಮುರಕಲ್ಲಿನ ಬೆಟ್ಟವನ್ನು ಮನಸ್ಸು ಕಟ್ಟುವ ಶೈಕ್ಷಣಿಕ ನೆಲೆಯಾಗಿ ಪರಿವರ್ತಿಸಿದ ಡಾ| ಮೋಹನ ಆಳ್ವ ಅವರ ಸಾಧನೆ ಅನನ್ಯ ಎಂದು ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ। ಎಂ.ಮೋಹನ ಆಳ್ವ ಮಾತನಾಡಿ, ಸಾಂಸ್ಕೃತಿಕ, ಕ್ರೀಡೆ ಜೊತೆ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಆಳ್ವಾಸ್, ಇಂದು ಶೈಕ್ಷಣಿಕ ಕ್ಷೇತ್ರದ ಮಾದರಿ ಆಗಿದೆ ಎಂದರು. 1998 ಆರಂಭಗೊಂಡ ಆಳ್ವಾಸ್ ಕಾಲೇಜಿನಲ್ಲಿ ಈವರೆಗೆ 68,401 ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. ನ್ಯಾಕ್ 'ಎ' ಶ್ರೇಣಿ ಪಡೆದಿದೆ. ನಾಲ್ಕು ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ನಮ್ಮ ಪ್ರತಿಷ್ಠಾನದ ಕಾಲೇಜುಗಳ ಕಾರ್ಯಕ್ರಮ ಹಾಗೂ ಯೋಜನೆಗಳು ನಡೆಯುತ್ತಿವೆ. ನಮ್ಮಲ್ಲಿ ಪ್ರಗತಿ ಉದ್ಯೋಗ ಮೇಳ ಪ್ರತಿವರ್ಷ ನಡೆಯುತ್ತಿದ್ದು, ಶೇ 80 ರಷ್ಟು ವಿದ್ಯಾರ್ಥಿಗಳಿಗೆ 'ಆಳ್ವಾಸ್ ಪ್ರಗತಿ' (ಬೃಹತ್ ಉದ್ಯೋಗ ಮೇಳ) ಮೂಲಕ ಉದ್ಯೋಗ ದೊರಕಿದೆ. ಪಠ್ಯದ ಜೊತೆ, ಸ್ಪರ್ಧಾತ್ಮಕ ಪರೀಕ್ಷೆ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಅಂಕದ ಜೊತೆ ವಿವಿಧ ಸಾಧನೆಗಳ ಮೂಲಕ ಬಯೋಡಾಟ ಗಟ್ಟಿಯಾಗಿರಲಿ. ಅದಕ್ಕಾಗಿ ಸಾಧನೆ ಅವಶ್ಯ ಎಂದರು. ಬೆಂಗಳೂರಿನ ದಿಶಾ ಭಾರತ್ ಸಂಸ್ಥಾಪಕಿ ರೇಖಾ ರಾಮಚಂದ್ರ ಮಾತನಾಡಿ, 'ನಾನು ಮತ್ತೆ ವಿದ್ಯಾರ್ಥಿಯಾದರೆ ಆಳ್ವಾಸ್ ಕಾಲೇಜಿಗೆ ಸೇರಿಕೊಳ್ಳುವೆ. ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಯ ಶಿಕ್ಷಣವು ಮಾದರಿಯಾಗಿದೆ' ಎಂದರು. ಎಲ್ಲ ವಿದ್ಯಾರ್ಥಿಗಳು ಮುಂದೊAದು ದಿನ ವೇದಿಕೆಗೆ ಬರಬೇಕು. ಅದಕ್ಕೆ, ತಾನು, ತನ್ನ ಕುಟುಂಬ, ತನ್ನ ಸಂಸ್ಥೆಯ ಜೊತೆ ದೇಶ ಹೆಮ್ಮೆ ಪಡುವ ಸಾಧನೆ ಮಾಡುವ ಛಲ ಬೇಕು ಎಂದರು. ನಮ್ಮಲ್ಲಿ ಧನಾತ್ಮಕ, ಭಾವುಕ ಛಲ, ಉದ್ದೇಶ ಮತ್ತು ದೇಶಭಕ್ತಿ ಇರಬೇಕು. ಸಾಮಾನ್ಯ ಬದುಕಿನ ಬದಲು ಅಸಮಾನ್ಯ ಸಾಧನೆ ಮೂಲಕ ಬದುಕಿ ಎಂದು ಹಾರೈಸಿದರು. ಯಶಸ್ಸು ಸದಾ ಸಕರಾತ್ಮಕ ಉದ್ದೇಶದಿಂದ ಸಾಧ್ಯ. ಸುನಿತಾ ವಿಲಿಯಮ್ಸ್ರವರಲ್ಲಿದ್ದ ಸಕರಾತ್ಮಕ ಗುಣವೇ ಅವರ ಯಶಸ್ಸಿಗೆ ಮುಖ್ಯ ಕಾರಣವಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಸ್ತು ಪಾಲನೆಗಾಗಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತೇನೆ ಎಂದರು. ಅವಿರತ ಶ್ರಮದ ಮಾದರಿ ವ್ಯಕ್ತಿತ್ವವನ್ನು ಡಾ.ಎಂ.ಮೋಹನ ಆಳ್ವ ಹೊಂದಿದ್ದಾರೆ. ಅದು ಅವರ ಸಾಧನೆಗೆ ಕಾರಣ ಎಂದರು. ಶಿಕ್ಷಣಕ್ಕೆ ನ್ಯಾಯ ನೀಡುವುದು ನಮ್ಮ ಉದ್ದೇಶ. ನಿಮ್ಮ ಸಾಧನೆ, ಸಾಮಾಜಿಕ ಕೊಡುಗೆಯೇ ನಮಗೆ ಪ್ರೇರಣೆ ಎಂದರು. ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ವಾರ್ಷಿಕ ವರದಿ ವಾಚಿಸಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜು ಕುಲಸಚಿವ (ಪರೀಕ್ಷಾಂಗ) ಕೆ ನಾರಾಯಣ ಶೆಟ್ಟಿ, ಆಳ್ವಾಸ್ (ಸ್ವಾಯತ್ತ) ಕಾಲೇಜು ಕುಲಸಚಿವ (ಶೈಕ್ಷಣಿಕ) ಟಿ.ಕೆ. ರವೀಂದ್ರನ್, ಆಳ್ವಾಸ್ (ಸ್ವಾಯತ್ತ) ಕಾಲೇಜು ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆಳ್ವಾಸ್ ವೆಲ್‌ನೆಸ್ ಸೆಂಟರ್ ನಿರ್ದೇಶಕಿ ಡಾ ದೀಪಾ ಕೊಠಾರಿ ಹೊರತಂದ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ರತ್ನಮಾನಸ: ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Article Image

ರತ್ನಮಾನಸ: ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ "ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಚಿಸುವ ಬಡ, ಹಿಂದುಳಿದ ಹಾಗೂ ಕೃಷಿಕ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ನಮ್ಮ ಆಯ್ಕೆ ಪರೀಕ್ಷೆಗೆ ಹಾಜರಾಗಿ ಮೂರು ದಿನ ರತ್ನಮಾನಸದಲ್ಲಿ ಉಳಿದು ಇಲ್ಲಿನ ಪರಿಸರ ಹಾಗೂ ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹೈಸ್ಕೂಲು ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕ್ರಮವನ್ನು ಅಳವಡಿಸಿಕೊಳ್ಳುವ ಅಂಗವಾಗಿ ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುವುದು. ಇಲ್ಲಿನ ಜೀವನ ಶಿಕ್ಷಣ ಕ್ರಮದ ಮಾಹಿತಿಯನ್ನು ಪಡೆದ ಬಆಕ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಯ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ದಿನಾಂಕ 05/04/2025 ರಿಂದ ಅರ್ಜಿಗಳನ್ನು ನೀಡಲಾಗುವುದು. ದಿನಾಂಕ 25/04/25ರಂದು ಅರ್ಜಿ ನೀಡಲು ಕೊನೆಯ ದಿನಾಂಕವಾಗಿರುತ್ತದೆ. ವಿ.ಸೂ: ಆಂಗ್ಲಮಾಧ್ಯಮ, 9ನೇ ಮತ್ತು 10ನೇ ತರಗತಿಗೆ ದಾಖಲಾತಿಗೆ ಅವಕಾಶವಿರುವುದಿಲ್ಲ ಹಾಗೂ ಹುಡುಗಿಯರಿಗೆ ದಾಖಲಾತಿ ಇರುವುದಿಲ್ಲ. ಅರ್ಜಿಯನ್ನು ರತ್ನಮಾನಸ ವಸತಿ ನಿಲಯದಲ್ಲಿಯೇ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 9480351201, 9449244425,

ರೋಟರಿ ಕ್ಲಬ್‌ : ಅಂತರಾಷ್ಟ್ರೀಯ ಮಹಿಳಾ ದಿನ ಸಂಭ್ರಾಮಚರಣೆ

Article Image

ರೋಟರಿ ಕ್ಲಬ್‌ : ಅಂತರಾಷ್ಟ್ರೀಯ ಮಹಿಳಾ ದಿನ ಸಂಭ್ರಾಮಚರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ಂಗಡಿ ಮತ್ತು ರೋಟರಿ ಸಂಸ್ಥೆಯ ಅಂಗ ಸಂಸ್ಥೆಯಾದ ಆನ್ಸ್ ಕ್ಲಬ್ ವತಿಯಿಂದ ರೋಟರಿ ಸೇವಾ ಭವನ ಕಾಶಿ ಬೆಟ್ಟು, ರೊ.ಕೆ. ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪರಿಸರದ 3 ಜನ ಮಹಿಳಾ ಸಾಧಕರನ್ನು ಅಭಿನಂದಿಸಲಾಯಿತು. ಕಳೆದ 20 ವರ್ಷಗಳಿಂದ ಸ್ವಾ ಇಚ್ಚೆಯಿಂದ ಹೆಬ್ಬಾವು, ನಾಗರ ಹಾವು ಸೇರಿದಂತೆ ಹಲವು ಬಗೆಯ 130 ಕ್ಕೂ ಅಧಿಕ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನಿವಾಸಿ ಎಂ. ಪ್ರಶಾಂತ್ ಅವರ ಪತ್ನಿ ಶೋಭಾರವರ ಸಹಾಸವನ್ನು ಪ್ರಶಂಸಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಕಾರ್ಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿರುವ, ಕಡಿರುದ್ಯಾವರ ಮಹಿಳಾ ಮಂಡಲದ ಸ್ಥಾಪಕ ಅಧ್ಯಕ್ಷೆ ಮತ್ತು ಬೆಳ್ತಂಗಡಿ ಮಹಿಳಾ ಮಂಡಲಗಳ ಗೌರವ ಅಧ್ಯಕ್ಷೆಯಾಗಿರುವ ಲೋಕೇಶ್ವರಿ ವಿನಯಚಂದ್ರರವರನ್ನು ಗೌರವಿಸಲಾಯಿತು. ಇದರ ಜೊತೆಯಲ್ಲಿ ಪ್ರಗತಿಪರ ಕೃಷಿಯಲ್ಲಿ ಸಾಧನೆಗೈದು ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಮಹಿಳಾ ಕೃಷಿಕೆ ಪ್ರಶಸ್ತಿ ಸ್ವೀಕರಿಸಿರುವ ಜಯಶ್ರೀ ಪ್ರಕಾಶ್ ಇವರನ್ನು ಸಹ ಇದೇ ವೇದಿಕೆಯಲ್ಲಿ ಅಭಿನಂದಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಸವಾಲುಗಳು ಹೆಣ್ಣಿನ ಬದುಕಿನಲ್ಲಿ ಸಹಜ ಇವೆಲ್ಲವುಗಳನ್ನು ಮೆಟ್ಟಿ ನಿಂತಾಗ ಆಕೆ ಸಾಧಕಿಯಾಗುತ್ತಾಳೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದಕ್ಕೆ ಸಮಾಜದ ಪ್ರತಿಯೊಬ್ಬ ಗಂಡಿನ ಸಹಕಾರ ಮತ್ತು ಪ್ರೋತ್ಸಾಹ ಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳ್ತಂಗಡಿ ರೋಟರಿ ಕ್ಲಬ್ ನಿಕಟಪೂರ್ವ ಕಾರ್ಯದರ್ಶಿ ರೋ. ವಿದ್ಯಾ ಕುಮಾರ್ ಕಾಂಚೋಡು ಮಾತನಾಡಿ, ಮಹಿಳೆ ಇಂದು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಶಕ್ತಳಾಗಿದ್ದಾಳೆ ಎಂದರು. ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ ಮತ್ತು ಕಾರ್ಯದರ್ಶಿ ಡಾ.ವಿನಯ ಕಿಶೋರ್ ಉಪಸ್ಥಿತರಿದ್ದರು. ರೋಟರಿ ಕ್ಲಬ್ ನ ಸದಸ್ಯರಾದ ಅನಂತ್ ಭಟ್, ಪ್ರವೀಣ್ ಗೋರೆ, ಶ್ರಿಕಾಂತ್, ಪ್ರಕಾಶ್ ಪ್ರಭಕ ಮತ್ತು ಆನ್ ಡಾ. ಭಾರತಿ, ಗೀತಾ ಪ್ರಭು ಸೇರಿದಂತೆ ಇತರೆ ಸದಸ್ಯರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ರೋ. ಮನೋರಮಾ ಭಟ್ ನಿರೂಪಿಸಿ ವಂದಿಸಿದರು.

ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ-2025

Article Image

ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ-2025

ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಸಮಗ್ರ ಚಾಂಪಿಯನ್ಸ್ ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಮಾಧ್ಯಮ ಪರ್ವ-2025ರಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಒಟ್ಟು 4 ವಿಭಾಗದಲ್ಲಿ ಪ್ರಥಮ, ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರು. ವಿದ್ಯಾರ್ಥಿಗಳಾದ ಇಶಿತ್ ಹಾಗೂ ಅಶ್ವಿನ್ ಕ್ರೈಸಿಸ್ ಮ್ಯಾನೇಜ್ಮೆಂಟ್ (ಬಿಕ್ಕಟ್ಟು ನಿರ್ವಹಣೆ)ನಲ್ಲಿ ಪ್ರಥಮ, ಪ್ರಧಾನ್ ಛಾಯಾಗ್ರಹಣದಲ್ಲಿ ಪ್ರಥಮ, ರುಧೀರ್ ಹಾಗೂ ಮಿಯಾರವರನ್ನು ಒಳಗೊಂಡ ತಂಡ ರಸಪ್ರಶ್ನೆಯಲ್ಲಿ ಪ್ರಥಮ, ರಚನ್, ಸರ್ವೇಶ್, ವಿಶಾಲ್, ದೀಕ್ಷಾ, ಸುರಕ್ಷಾ, ಆಕಾಶ್, ಸುಮಿತ್, ದಿಶಾ, ಪ್ರಗತಿ, ಸ್ವಾತಿ, ರಿಶಾಂತ್, ರಕ್ಷಿತಾ, ಶ್ರೀವಲ್ಲಿಯವರ ತಂಡ ವೆರೈಟಿ ಪ್ರದರ್ಶನದಲ್ಲಿ ( ವೈವಿಧ್ಯಮಯ ನೃತ್ಯ ಪ್ರಥಮ ಸ್ಥಾನ ಪಡೆದರು. ವೀಕ್ಷಿತಾ ಹಾಗೂ ರಾಹುಲ್ ಕ್ರಮವಾಗಿ ವರದಿಗಾರಿಕೆ ಹಾಗೂ ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಉಪನ್ಯಾಸಕ ಸುಧೀಂದ್ರ ಶಾಂತಿ ಹಾಗೂ ಉಪನ್ಯಾಸಕಿ ಹನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕಯಾಗಿ ಸಹಕರಿಸಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪ್ರಾಚರ‍್ಯ ಡಾ ಕುರಿಯನ್ ಅಭಿನಂದಿಸಿದ್ದಾರೆ.

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಭೌತಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ

Article Image

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಭೌತಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ, ಮಾರ್ಚ್ 17: ಮೂಲವಿಜ್ಞಾನದಲ್ಲಿ ಪರಿಣತಿ ಗಳಿಸಿ ವೈಜ್ಞಾನಿಕ ಸಂಶೋಧನೆಯ ಮೌಲ್ಯ ಹೆಚ್ಚಿಸಬೇಕಿದೆ. ಇದರಿಂದ ವಿಜ್ಞಾನದ ಸಮಾಜಪರತೆಗೆ ಅರ್ಥಪೂರ್ಣ ಸ್ಪರ್ಶ ದೊರಕುತ್ತದೆ ಎಂದು ಬೆಂಗಳೂರಿನ ಸಿಇಎನ್‌ಎಸ್‌ನ ವಿಜ್ಞಾನಿ, ಪ್ರಾಧ್ಯಾಪಕ ಡಾ.ಸಿ.ವಿ.ಯಳಮಗ್ಗದ್ ಅವರು ಅಭಿಪ್ರಾಯಪಟ್ಟರು. ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ಅಧ್ಯಯನ, ಸಂಶೋಧನಾ ವಿಭಾಗ ಮತ್ತು ರಿಸರ್ಚ್, ಡೆವಲಪ್‌ಮೆಂಟ್ ಸೆಲ್‌ನ ಸಹಭಾಗಿತ್ವದಲ್ಲಿ ‘ಬ್ರಿಡ್ಜಿಂಗ್ ದ ಮೆನಿ ಫೇಸಸ್ ಆಫ್ ಮ್ಯಾಟರ್’ ಕುರಿತು ಆಯೋಜಿತವಾದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಆಶಯ ಪ್ರಸ್ತುತಪಡಿಸಿದರು. ಮೂಲವಿಜ್ಞಾನದ ಅಧ್ಯಯನವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಮೂಲವಿಜ್ಞಾನದ ತಿಳುವಳಿಕೆಯೊಂದಿಗೆ ನಿರ್ವಹಿಸಲ್ಪಡುವ ಸಂಶೋಧನೆ ಸಮಾಜಕ್ಕೆ ಅನುಕೂಲವಾಗುತ್ತದೆ. ವಿಜ್ಞಾನಕ್ಕೆ ಮಾನವಿಕ ಆಯಾಮ ದೊರಕುತ್ತದೆ ಎಂದು ಹೇಳಿದರು. ಸಂಶೋಧನಾ ಪ್ರಬಂಧಗಳ ಸಾರಲೇಖಗಳನ್ನೊಳಗೊಂಡ ಸಂಚಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು. ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಭೌತಶಾಸ್ತ್ರ ವಲಯದಲ್ಲಿ ಆಗುತ್ತಿರುವ ಹೊಸ ಪಲ್ಲಟಗಳನ್ನು ತಿಳಿದುಕೊಳ್ಳಲು ರಾಷ್ಟ್ರೀಯ ವಿಚಾರ ಸಂಕಿರಣಗಳು ಪೂರಕವಾಗುತ್ತವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ವಿಶ್ವನಾಥ ಪಿ ವಿಚಾರ ಸಂಕಿರಣದ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಸ್.ಡಿ.ಎಂ ಎಜ್ಯುಕೇಷನ್ ಸೊಸೈಟಿಯ ಅಕಾಡೆಮಿಕ್ ಸಂಯೋಜಕರಾದ ಎಸ್. ಎನ್. ಕಾಕತ್ಕರ್, ರಿಸರ್ಚ್ ಡೆವಲಪ್‌ಮೆಂಟ್ ಸೆಲ್‌ನ ನಿರ್ದೇಶಕಿ ಡಾ. ಸೌಮ್ಯ ಬಿ.ಪಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಡಾ.ರಾಘವೇಂದ್ರ ಎಸ್ಉ ಪಸ್ಥಿತರಿದ್ದರು. ನಂತರ ನಡೆದ ಗೋಷ್ಠಿಗಳಲ್ಲಿ ಡಾ. ವಿನಯಕುಮಾರ್ ಕೆ.ಬಿ., ಡಾ. ಅರವಿಂದ ಎಸ್, ಡಾ.‌ ರ‍್ನಬ್ ದತ್ತಾ ವಿಚಾರಗಳನ್ನು ಮಂಡಿಸಿದರು. ವಿವಿಧ ಸ್ಪರ್ಧೆಗಳು ನಡೆದವು. ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಲಾಪ್ರದರ್ಶನ ನೀಡಿದರು. ಎರಡು ದಿನಗಳ ಕಾರ್ಯಕ್ರಮದಲ್ಲಿ 150 ವಿದ್ಯಾರ್ಥಿಗಳು, ಸಂಶೋಧಕರು, ಅಧ್ಯಾಪಕರು ಭಾಗವಹಿಸಿದ್ದರು.

ಅರಿಹಂತ್‌ ಆಹಾರ್‌ ಉದ್ಘಾಟನೆ

Article Image

ಅರಿಹಂತ್‌ ಆಹಾರ್‌ ಉದ್ಘಾಟನೆ

ಮೂಡುಬಿದಿರೆ ಕಲ್ಸಂಕ ಉದಯ ಕಿಚನ್‌ ನೆಕ್ಸ್ಟ್‌ನ ಎದುರು ದಿ. ಸುದರ್ಶನ್‌ ಜೈನ್‌ ಕಜಂಗೆ ಮತ್ತು ಕಮಲಾಜಿ ದಂಪತಿಗಳ ಪುತ್ರ ಸೌರವ್‌ ಅವರ ಮಾಲಿಕತ್ವದ ಅರಿಹಂತ್‌ ಆಹಾರ್‌ ಶುದ್ಧ ಸಸ್ಯಹಾರಿ ಹೋಟೇಲ್‌ ಇಂದು ಉದ್ಘಾಟನೆಗೊಂಡಿದೆ. ಸೌತ್‌ ಇಂಡಿಯನ್‌, ನಾರ್ಥ್‌ ಇಂಡಿಯನ್‌, ಚೈನೀಸ್‌, ಜೈನ್‌ ಫುಡ್‌, ಚಾಟ್ಸ್‌ ಮತ್ತು ಜ್ಯೂಸ್‌ ಇಲ್ಲಿ ದೊರೆಯುತ್ತದೆ.

ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತು ಐಐಐಟಿ, ಧಾರವಾಡ ಒಡಂಬಡಿಕೆಗೆ ಸಹಿ

Article Image

ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತು ಐಐಐಟಿ, ಧಾರವಾಡ ಒಡಂಬಡಿಕೆಗೆ ಸಹಿ

ಧಾರವಾಡದ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯವು ಮಾರ್ಚ 11, 2025ರಂದು ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT), ಇಟಿಗಟ್ಟಿ ಧಾರವಾಡದೊಂದಿಗೆ ಒಡಂಬಡಿಕೆಗೆ ಸಹಿ ಮಾಡಲಾಯಿತು. ಈ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತು ಐಐಐಟಿ ಧಾರವಾಡದ ಅಧ್ಯಾಪಕರು ಮತ್ತು ಸಂಶೋಧಕರು ಶೈಕ್ಷಣಿಕ ಉನ್ನತೀಕರಣ, ಸಂಶೋಧನಾ ಸಹಯೋಗ ಮತ್ತು ಮಾಹಿತಿ ತಂತ್ರಜ್ಞಾನದ ಜೊತೆಗೆ ಆರೋಗ್ಯ ವಿಜ್ಞಾನದ ಏಕೀಕರಣ ಮತ್ತು ಇನ್ನೂ ಹಲವು ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದು ಈ ಒಡಂಬಡಿಕೆಯ ಮುಖ್ಯ ಉದ್ದೇಶವಾಗಿದೆ. ಧಾರವಾಡದ ಎರಡು ಪ್ರತಿಷ್ಠತ ಸಂಸ್ಥೆಗಳ ಸಂಶೋಧನಾ ಸಹಯೋಗ ಮತ್ತು ನಾವೀನ್ಯತೆಗಾಗಿ ಒಟ್ಟಿಗೆ ಸೇರಿರುವುದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಧಾರವಾಡದ ಐಐಐಟಿಯನ್ನು ನಿರ್ದೇಶಕರಾದ ಡಾ. ಮಹಾದೇವ ಪ್ರಸನ್ನ, ಕುಲಸಚಿವರಾದ ಡಾ. ರವಿ ಬಿ. ವಿಟ್ಲಾಪುರ, ಡಾ. ಮಂಜುನಾಥ ಕೆ ವನಹಳ್ಳಿ, ಡಾ. ಕೆ. ಗೋಪಿನಾಥ ಮತ್ತು ಇತರ ಹಿರಿಯ ಅಧ್ಯಾಪಕರು ಮತ್ತು ಸಂಶೋಧಕರು ಪ್ರತಿನಿಧಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪಕುಲಪತಿಗಳಾದ ವಿ. ಜೀವಂಧರ್ ಕುಮಾರ, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಹಣಕಾಸು ಅಧಿಕಾರಿಗಳಾದ ವಿ.ಜಿ ಪ್ರಭು, ಸಂಶೋಧನಾ ನಿರ್ದೇಶಕರಾದ ಡಾ. ಕೆ ಸತ್ಯಮೂರ್ತಿ, ಉಪ ಕುಲಸಚಿವರಾದ ಡಾ. ಅಜಂತ ಜಿ. ಎಸ್., ಎಸ್.ಡಿ.ಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ. ದೇಸಾಯಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವರ್ಷಾವಧಿ ಜಾತ್ರಾ ಮಹೋತ್ಸವ

Article Image

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಪಡ್ಯಾರಬೆಟ್ಟ ಪೆರಿಂಜೆಯ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು ದಿನಾಂಕ 14.03.2025ನೇ ಶುಕ್ರವಾರ ಮೊದಲ್ಗೊಂಡು ದಿನಾಂಕ 19.03.2025ನೇ ಬುಧವಾರ ಪರ್ಯಂತ ನಡೆಯಲಿದೆ. ಕಾರ್ಯಕ್ರಮಗಳು ದಿನಾಂಕ 14.03.2025ನೇ ಶುಕ್ರವಾರ ಮೀನ ಸಂಕ್ರಮಣ ದಿನ ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಗಂಟೆ 09:30ಕ್ಕೆ ಪಡ್ಯೋಡಿಗುತ್ತಿನಲ್ಲಿ ಉಪಹಾರ, ರಾತ್ರಿ ಗಂಟೆ 10:00ಕ್ಕೆ ಪಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಯಾರಬೆಟ್ಟಕ್ಕೆ ಆಗಮನ, ದ್ವಜಾರೋಹಣ, ಬಲಿ, ಚೆಂಡು ದಿನಾಂಕ 15.03.2025ನೇ ಶನಿವಾರ ಭೂತಬಲಿ ಉತ್ಸವ ದಿನಾಂಕ 16.03.2025ನೇ ಭಾನುವಾರ ಅಂಬೋಡಿ, ಬಲಿ, ಉತ್ಸವ ಹೂವಿನ ಪೂಜೆ, ರಥಾರೋಹಣ ದಿನಾಂಕ 17.03.2025ನೇ ಸೋಮವಾರ ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ಗಂಟೆ 12:00ರಿಂದ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, 1:30 ರಿಂದ 7:30ರ ತನಕ ಮಹಾ ಅನ್ನಸಂತರ್ಪಣೆ, ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ದಿನಾಂಕ 18.03.2025ನೇ ಮಂಗಳವಾರ ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗುವುದು ದಿನಾಂಕ 19.03.2025ನೇ ಬುಧವಾರ ರಾತ್ರಿ ಗಂಟೆ 7:30ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ 19-03-2025 ನೇ ಬುಧವಾರ ರಾತ್ರಿ ಗಂಟೆ 8 ರಿಂದ ಜೀ ಕನ್ನಡ ಸರಿಗಮಪ ಖ್ಯಾತಿಯ ಕರ್ನಾಟಕದ ಹೆಸರಾಂತ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಮತ್ತು ತಂಡದವರಿಂದ "ಗಾನ ಸುರಭಿ" ಕಾರ್ಯಕ್ರಮ ಜರುಗಲಿದೆ (ಭಕ್ತಿಗೀತೆ, ಭಾವಗೀತೆ, ಜನಪದಗೀತೆ, ಹಳೆಯ ಚಲನಚಿತ್ರ ಗೀತೆಗಳ ಸಮ್ಮಿಲನ)

ಎಕ್ಸಲೆಂಟ್: ಜಿಲ್ಲಾ ಮಟ್ಟದ INSPIRE AWARD MANAK-2024 ಕ್ಕೆ ಆಯ್ಕೆ

Article Image

ಎಕ್ಸಲೆಂಟ್: ಜಿಲ್ಲಾ ಮಟ್ಟದ INSPIRE AWARD MANAK-2024 ಕ್ಕೆ ಆಯ್ಕೆ

ಭಾರತೀಯ ವಿಜ್ಞಾನ ಮಟ್ಟದ ಹಾಗೂ ತಂತ್ರಜ್ಞಾನ ಇಲಾಖೆಯು ಆಯೋಜಕತ್ವದ INSPIRE AWARD MANAK-2024ಕ್ಕೆ ಸ್ಪರ್ದೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಮನ್ವಿತ್‌ರಾಜ್ ಜೈನ್ ಹಾಗೂ ಮೈತ್ರಿ ಎಮ್. ಎಚ್. ಇವರುಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮನ್ವಿತ್‌ರಾಜ್ ಜೈನ್ ಇವರು Electricity generation by busy High way ಹಾಗೂ ಮೈತ್ರಿ ಎಮ್. ಎಚ್. ಇವರು Motar bike theft detector ವಿಷಯಕ್ಕೆ ಸಂಬAಧಿಸಿ ವೈಜ್ಞಾನಿಕ ಮಾದರಿಗಳನ್ನು ಸಿದ್ಧಗೊಳಿಸಿದ್ದರು. ಇವರೀರ್ವರ ಮಾದರಿಗಳು ಇದೀಗ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ರೂ.10,000 ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುತ್ತಾರೆ. ಈ ಹಿಂದೆಯೂ ಕೂಡ ವೈಜ್ಞಾನಿಕ ಮಾದರಿ, ವೈಜ್ಞಾನಿಕ ಪ್ರಬಂಧಗಳ ಮೂಲಕ ಎಕ್ಸಲೆಂಟ್ ಸಂಸ್ಥೆಯ ಹಲವು ವಿದ್ಯಾರ್ಥಿಗಳು ರಾಜ್ಯ- ರಾಷ್ಟ್ರ- ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿರುವುದನ್ನು ಇಲ್ಲಿ ಸ್ಮರಿಸಲಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಹಾಗೂ ಶಿಕ್ಷಕ ವೃಂದದವರು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

First Previous

Showing 3 of 10 pages

Next Last