Sat, Apr 26, 2025

Sat, Apr 26, 2025


ವೇಣೂರು ಐಟಿಐಯಲ್ಲಿ 108 ಯುನಿಟ್ ರಕ್ತದಾನ


Logo

Published Date: 21-Feb-2025

ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಂಜುಶ್ರೀ ರೋವರ್ಸ್ ಘಟಕ, ಹಳೆವಿದ್ಯಾರ್ಥಿ ಸಂಘ, ಪದ್ಮಾಂಬ ಸಮೂಹ ಸಂಸ್ಥೆಗಳು, ವೇಣೂರು, ಹಾಲು ಉತ್ಪಾದಕರ ಸಹಕಾರಿ ಸಂಘ, ಕುಕ್ಕೇಡಿ. ಕುಕ್ಕೇಡಿ ಗ್ರಾಮ ಪಂಚಾಯತ್, ಲಯನ್ಸ್ ಕ್ಲಬ್ ವೇಣೂರು, ಲಯನ್ಸ್‌ ಕ್ಲಬ್ ಮಂಗಳೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು, ಪಲ್ಗುಣಿ ಸೇವಾ ಸಂಘ[ರಿ] ವೇಣೂರು, ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್, ದ.ಕ. ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯ, ಮಂಜುಶ್ರೀ ಭಜನಾ ಮಂಡಳಿ, ಕುಂಡದಬೆಟ್ಟು, ಜನಸೇವಾ ಟ್ರಸ್ಟ್ (ರಿ) ಪಡ್ಡಂದಡ್ಕ, ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ಹಾಗೂ ಶ್ರೀ ದೇವಿ ಮಹಮ್ಮಾಯಿ ಮಾರಿಗುಡಿ ಮಂಗಳತೇರು ಸೇವಾ ಟ್ರಸ್ಟ್ (ರಿ.) ಇವರ ಸಹಭಾಗಿತ್ವದಲ್ಲಿ ರಕ್ತದಾನದ ಬೃಹತ್ ಶಿಬಿರ ವೇಣೂರು ಐಟಿಐಯಲ್ಲಿ ನಡೆಯಿತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು ಇದರ ಅಧ್ಯಕ್ಷರಾದ ಲ:ಸುಂದರ ಹೆಗ್ಡೆ, ಬಿ.ಇ. ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಕ್ತದಾನ ಅತ್ಯಂತ ಶ್ರೇಷ್ಠ ದಾನ ಇದರಿಂದ ಹಲವಾರು ಜೀವ ಉಳಿಸಿದಂತಹ ಪುಣ್ಯ ಪ್ರಾಪ್ತಿಯಾಗುತ್ತದೆ, ಇಂತಹ ಕಾರ್ಯಕ್ರಮಗಳಿಂದ ಯುವಜನತೆ ದಾನದ ಗುಣವನ್ನು ಮೈಗೂಡಿಸಿಕೊಳ್ಳಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ 266 ರಕ್ತದಾನ ಶಿಬಿರವನ್ನು ಸಂಯೋಜಿಸಿರುವ ಲ| ಎನ್. ಜೆ. ನಾಗೇಶ್ ಎಂ.ಜೆ.ಎಫ್., ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಲ| ಜಯರಾಜ್ ಪ್ರಕಾಶ್, ಖ್ಯಾತ ಪಾಕಶಾಸ್ತçಜ್ಞರಾದ ಶ್ರೀ ನಾಗಕುಮಾರ್ ಜೈನ್, ಜೀವವಿಮಾ ಪ್ರತಿನಿಧಿ ಜಗನ್ನಾಥ ದೇವಾಡಿಗ ಇವರುಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಮಾರಂಭದ ಅದ್ಯಕ್ಷತೆಯನ್ನು ವಹಿಸಿದ್ದ ಐಟಿಐ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಮಾತನಾಡಿ ವಿದ್ಯಾರ್ಥಿ ದಿಸೆಯಿಂದಲೇ ದಾನದ ಮಹತ್ವವನ್ನು ಅರಿತು ರಕ್ತದಾನದಂತಹ ಶ್ರೇಷ್ಠ ಸಮಾಜ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು. ಮಂಗಳೂರಿನ ಕೆ.ಎಂ.ಸಿ.ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ: ಪ್ರೇಮಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಿತಾ ಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದ್ಮಾಂಬ ಸಮೂಹ ಸಂಸ್ಥೆಗಳ ಮಾಲಕರು ಜಿನರಾಜ್ ಜೈನ್, ಪಲ್ಗುಣಿ ಸೇವಾ ಸಂಘದŒ ಅಧ್ಯಕ್ಷರಾದ ವಿ. ಎಸ್. ಜಯರಾಜ್, ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನಿರ್ಮಲ್‌ಕುಮಾರ್ ಬೊಳ್ಜಾಲ್ ಗುತ್ತು, ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿಲ್ವಿಯಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು ಇಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ಶ್ರೀ ದೇವಿ ಮಹಮ್ಮಾಯಿ ಮಾರಿಗುಡಿ ಮಂಗಳತೇರು ಸೇವಾ ಟ್ರಸ್ಟ್(ರಿ.) ಇದರ ಅಧ್ಯಕ್ಷರಾದ ಸತೀಶ್ ಗೌಡ, ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ಇದರ ಗೌರವಾಧ್ಯಕ್ಷರಾದ ಎಂ. ಸುಂದರ ಎಂ. ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 108 ಯುನಿಟ್ ರಕ್ತ ಸಂಗ್ರಹಿಸಲಾಯಿತು. ವಿದ್ಯಾರ್ಥಿ ವಿವೇಕ್ ಪ್ರಾರ್ಥಿಸಿದ ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪದ್ಮಪ್ರಸಾದ್ ಬಸ್ತಿ ಸ್ವಾಗತಿಸಿ, ಜಾಕೊಬ್ ಟಿ. ವಿ. ವಂದಿಸಿದ ಈ ಕಾರ್ಯಕ್ರಮವನ್ನು ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಸತೀಶ್ ನಿರ್ವಹಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img