ಪುತ್ತಿಗೆ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಹಸಿರುವಾಣಿ ಹೊರೆಕಾಣಿಕೆ
Published Date: 28-Feb-2025 Link-Copied
ಉಜಿರೆ: ಮೂಡಬಿದ್ರೆ ಬಳಿ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭ ಶುಕ್ರವಾರ ಧರ್ಮಸ್ಥಳದಿಂದ ಹೊರೆಕಾಣಿಕೆ ಸಾಗಾಣಿಕೆಗೆ ಡಿ. ನಿಶ್ಚಲ್ ಚಾಲನೆ ನೀಡಿ ಶುಭ ಹಾರೈಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಪಾರ್ಶ್ವನಾಥ ಜೈನ್, ಸುಬ್ರಹ್ಮಣ್ಯಪ್ರಸಾದ್, ಕೆ. ಮಹಾವೀರ ಅಜ್ರಿ, ಶ್ರೀಧರ ಉಳಿಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.