Mon, Apr 28, 2025
ರತ್ನಮಾನಸ: ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ "ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಚಿಸುವ ಬಡ, ಹಿಂದುಳಿದ ಹಾಗೂ ಕೃಷಿಕ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ನಮ್ಮ ಆಯ್ಕೆ ಪರೀಕ್ಷೆಗೆ ಹಾಜರಾಗಿ ಮೂರು ದಿನ ರತ್ನಮಾನಸದಲ್ಲಿ ಉಳಿದು ಇಲ್ಲಿನ ಪರಿಸರ ಹಾಗೂ ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹೈಸ್ಕೂಲು ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕ್ರಮವನ್ನು ಅಳವಡಿಸಿಕೊಳ್ಳುವ ಅಂಗವಾಗಿ ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುವುದು. ಇಲ್ಲಿನ ಜೀವನ ಶಿಕ್ಷಣ ಕ್ರಮದ ಮಾಹಿತಿಯನ್ನು ಪಡೆದ ಬಆಕ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಯ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ದಿನಾಂಕ 05/04/2025 ರಿಂದ ಅರ್ಜಿಗಳನ್ನು ನೀಡಲಾಗುವುದು. ದಿನಾಂಕ 25/04/25ರಂದು ಅರ್ಜಿ ನೀಡಲು ಕೊನೆಯ ದಿನಾಂಕವಾಗಿರುತ್ತದೆ. ವಿ.ಸೂ: ಆಂಗ್ಲಮಾಧ್ಯಮ, 9ನೇ ಮತ್ತು 10ನೇ ತರಗತಿಗೆ ದಾಖಲಾತಿಗೆ ಅವಕಾಶವಿರುವುದಿಲ್ಲ ಹಾಗೂ ಹುಡುಗಿಯರಿಗೆ ದಾಖಲಾತಿ ಇರುವುದಿಲ್ಲ. ಅರ್ಜಿಯನ್ನು ರತ್ನಮಾನಸ ವಸತಿ ನಿಲಯದಲ್ಲಿಯೇ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 9480351201, 9449244425,