ಸತ್ತೂರು, ಧಾರವಾಡ: ಒಂದು ದಿನದ ಕಾರ್ಯಾಗಾರ
Published Date: 20-May-2025 Link-Copied
ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರ ಕ್ರೀಯಾ ಶಾಸ್ತ್ರ ವಿಭಾಗದಿಂದ ಹದಿಹರೆಯದಲ್ಲಿ ಉದ್ಬವಿಸುವ ಪ್ರಶ್ನೆಗಳು” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಮೇ ೧೭ ರಂದು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ: ನಾವು ಡೋಪಮೈನ್ ಮತ್ತು ಸಿರೊಟೋನಿನ್ ನಡುವೆ ಸಮತೋಲನವನ್ನು ಹೊಂದಬೇಕು. ಮೆದುಳಿನ ಕಾರ್ಯವನ್ನು ಅರ್ಥಮಾಡಿಕೊಳ್ಳುವುದರಿಂದ ಉತ್ತಮ ಜೀವನವನ್ನು ನಡೆಸಲು ಸಹಾಯವಾಗುತ್ತದೆ. ಮೆದುಳಿನ ಬೆಳವಣಿಗೆಗೆ ಜ್ಞಾನವು ಅತ್ಯಾವಶ್ಯಕ ಇಂತಹ ಕಾರ್ಯಗಾರವು ಹದಿಹರೆಯದವರ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ದಿಪಡಿಸಲು ಸಹಾಯವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಹಣಕಾಸು ಸಚಿವರಾದ ವಿ ಜಿ ಪ್ರಭು, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ. ದೇಶಾಯಿ ಹಾಗೂ ೨೦೦ಕ್ಕೂ ಹೆಚ್ಚು ಪ್ರಾಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಶ್ವಿನಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಚಿನ್ಮಯ ಮತ್ತು ಅಮುಲ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಾಗಾರದ ಸಂಘಟನಾ ಅಧ್ಯಕ್ಷರು ಮತ್ತು ಶರೀರ ಕ್ರೀಯಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಲಕ್ಷ್ಮೀ ಅವರು ವಂದನಾರ್ಪಣೆ ಸಲ್ಲಿಸಿದರು.