ಲಾಂಛನ ಬಿಡುಗಡೆ
Published Date: 26-Jun-2025 Link-Copied
ಉಜಿರೆ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಬುಧವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು. ಜುಲೈ 13 ರಂದು ಭಾನುವಾರ ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.