ಪ್ರತಿಯೊಂದು ಮನೆಯಲ್ಲಿಯೂ ಗ್ರಂಥಾಲಯವಿರಬೇಕು: ಹೇಮಾವತಿ ವೀ. ಹೆಗ್ಗಡೆ


Logo

Published Date: 28-Jan-2024 Link-Copied

ಉಜಿರೆ, ಜ. 27: ಹಿರಿಯರು ಓದುವ, ಬರೆಯುವ ಹವ್ಯಾಸ ಬೆಳೆಸಿಕೊಂಡರೆ, ಮಕ್ಕಳೂ ಅವರನ್ನು ಅನುಕರಿಸುತ್ತಾರೆ. ಇದಕ್ಕಾಗಿ ಪ್ರತಿಯೊಂದು ಮನೆಯಲ್ಲಿಯೂ ದೇವರಕೋಣೆ ಇದ್ದಂತೆ ಒಂದು ಪುಟ್ಟ ಗ್ರಂಥಾಲಯವಿರಬೇಕು. ಪುಸ್ತಕಗಳು ಕಲಿತವರಿಗೆ ಕಾಮಧೇನು, ಕಲಿಯದವರಿಗೆ ಕಲ್ಪವೃಕ್ಷವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖ್ಯಾತ ಸಾಹಿತಿ ಕಬ್ಬಿನಾಲೆ ವಸಂತ ಭಾರಧ್ವಾಜ ಶುಭಾಶಂಸನೆ ಮಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಶಾಂತಿವನ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಿದ ಜ್ಞಾನದಾಸೋಹ ಭವ್ಯ ಭಾರತದ ಬಗ್ಗೆ ಹೊಸ ಬೆಳಕನ್ನು ಮೂಡಿಸಿದೆ. ಇಂದಿನ ಮಕ್ಕಳೆ ಮುಂದಿನ ಪ್ರಜೆಗಳಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರಾಮರಾಜ್ಯದ ಕನಸು ನನಸಾಗಲೆಂದು ಅವರು ಹಾರೈಸಿದರು. ನಂತರ ಅವರು ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img