ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ ಸ್ವಾಗತ ಕಾರ್ಯಕ್ರಮ
Published Date: 09-Oct-2025 Link-Copied
ಸತ್ತೂರು, ಧಾರವಾಡ: ಎಸ್.ಡಿ.ಎಂ. ದಂತ ಮಹಾವಿದ್ಯಾಲಯದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ದಿನಾಂಕ 8ನೇ ಅಕ್ಟೊಬರ್ 2025ರಂದು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲತಿಗಳಾದ ಡಾ. ನಿರಂಜನ್ ಕುಮಾರ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ನಿರಂಜನ್ ಕುಮಾರ್ ಅವರು ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ ಪ್ರವೇಶ ಪಡೆದ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮಾತನಾಡುತ್ತಾ: ಕಾಲೇಜಿನ ಶಿಸ್ತು ನಿಯಮಗಳನ್ನು ಪಾಲಿಸುತ್ತಾ, ವಿದ್ಯಾರ್ಜನೆಯ ಕಡಿ ಗಮನ ಕೊಡಬೇಕು. ವೃತ್ತಿ ಶಿಕ್ಷಣದಲ್ಲಿ ಕಠಿಣ ಪರಿಶ್ರಮವು ಆರಂಭದಿಂದಲೇ ಪ್ರಾರಂಭಿಸಿ ಪ್ರಗತಿ ಹೊಂದಬೇಕು. ಶಿಸ್ತು ಬದ್ಧ ವಿದ್ಯಾರ್ಥಿ ಜೀವನವು ಉತ್ತಮ ದಂತ ವೈದ್ಯರನ್ನಾಗಿಸುತ್ತದೆ. ಸಮಯ ಪ್ರಜ್ಞೆ, ಚುರುಕುತನದಂತಹ ಒಳ್ಳೆಯ ಅಭ್ಯಾಸಗಳಿಂದ ವಿದ್ಯಾರ್ಥಿಗಳು ಉತ್ತಮ ವೃತ್ತಿಪರರಾಗಬಹುದು. ಪ್ರಸಿದ್ಧ ವ್ಯಕ್ತಿಗಳ ಸಾಮಿಪ್ಯ ಮತ್ತು ಅವರ ಆದರ್ಶಗಳನ್ನು ಪಾಲಿಸುವುದರಿಂದ ನಾವು ಬಲಿಷ್ಠರಾಗುತ್ತೆವೆ. ಆರೋಗ್ಯ ವೃತ್ತಿಪರರು ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂದರು. ಕಾರ್ಯನಿರ್ವಾಹಕ ನಿರ್ದೇಶಕಿಯರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಎಸ್.ಡಿ.ಎಂ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಲರಾಮ್ ನಾಯ್ಕ್, ಉಪ ಪ್ರಾಂಶುಪಾಲರಾದ ಡಾ. ಆನಂದ ತಾವರಗೇರೆ, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತಿತರ ಗಣ್ಯರ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ಡಾ. ಲೇಖಾ ಪಿಳೈ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಮೇಘನಾ ಮೇರಿ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಡಾ. ರವಿ ಶಿರಹಟ್ಟಿ ವಂದನಾರ್ಪಣೆ ಸಲ್ಲಿಸಿದರು.