ಸತ್ತೂರು, ಧಾರವಾಡ: ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಮಾತೃ ಸ್ಪರ್ಶ ವಿಭಾಗದ ಉದ್ಘಾಟಣೆ
Published Date: 20-Nov-2025 Link-Copied
ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗ ಹಾಗೂ ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಸ್ತ್ರೀರೋಗ ಮತ್ತು ಪ್ರಸೂತಿ ನರ್ಸಿಂಗ್ ವಿಭಾಗವು ಜಂಟಿಯಾಗಿ ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗದಲ್ಲಿ ಅತ್ಯಂತ ಅಗತ್ಯವಿರುವ ‘ಮಾತೃ ಸ್ಪರ್ಶ’ ವಿಭಾಗವನ್ನು ಪ್ರಾರಂಭಿಸಲಾಯಿತು. ಈ ವಿಭಾಗವು ಎಲ್ಲಾ ಗರ್ಭಿಣಿಯರಿಗೆ ಮತ್ತು ಹೆರಿಗೆಯ ನಂತರದ ತಾಯಂದಿರಿಗೆ ಸ್ತನ್ಯಪಾನ ತಂತ್ರಗಳು ಮತ್ತು ಮಕ್ಕಳಿಗೆ ಹಾಲುಣಿಸುವ ವಿಧಾನಗಳ ಕುರಿತು ಶಿಕ್ಷಣ ಮತ್ತು ಸಲಹೆ ನೀಡುತ್ತದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಮುಖ್ಯ ಅತಿಥಿಗಳಾಗಿದ್ದು ಮಾತೃ ಸ್ಪರ್ಶ ವಿಭಾಗವನ್ನು ಉದ್ಘಾಟಿಸಿ, ಮಾತನಾಡುತ್ತಾ ಎಲ್ಲಾ ಪ್ರಸವಪೂರ್ವ ಮತ್ತು ಪ್ರಸವೋತ್ತರ ತಾಯಂದಿರೂ ಮಾತೃ ಸ್ಪರ್ಶ ಸೇವೆಗಳನ್ನು ಬಳಸಿಕೊಳ್ಳಬೇಕು. ಸ್ತನ್ಯಪಾನ ಅಥವಾ ಹಾಲುಣಿಸುವಲ್ಲಿ ಯಾವುದೇ ಅಡಚಣೆ ಎದುರಿಸುವ ತಾಯಂದಿರು ವೈದ್ಯರು ಮತ್ತು ಮಾತೃ ಸ್ಪರ್ಶ ತಂಡವನ್ನು ಸಂಪರ್ಕಿಸಬಹುದು. ರೋಗಿಗಳ ಸುಧಾರಣೆಗೆ ಅಗತ್ಯವಿರುವ ಎಲ್ಲಾ ಉತ್ತಮ ಸೌಲಭ್ಯಗಳನ್ನು ಎಸ್.ಡಿ.ಎಂ. ವಿಶ್ವವಿದ್ಯಾಲಯವು ಒದಗಿಸುತ್ತದೆ. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ದಂತ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಲರಾಮ್ ನಾಯ್ಕ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗ್ಡೆ, ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಸುನಿಲ್, ಹಣಕಾಸು ಅಧಿಕಾರಿ ವಿ.ಜಿ. ಪ್ರಭು, ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ದೇಶಪಾಂಡೆ ಮತ್ತು ಉಪ ಪ್ರಾಂಶುಪಾಲರಾದ ಡಾ. ರಂಗಪ್ಪ ಆಶಿ, ಹಿರಿಯ ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗದ ಪ್ರಾಧ್ಯಾಪಕರಾದ ಡಾ. ವಿದ್ಯಾ ಕಾಮತ್ ಮತ್ತು ಡಾ. ಸುನಿತಾ, ಹಾಗೂ ನರ್ಸಿಂಗ್ ಅಧೀಕ್ಷಕಿಯವರಾದ ಮಂಜುಳಾ ಕೆ.ಬಿ ಉಪಸ್ಥಿತರಿದ್ದರು. ಸ್ತ್ರೀ ರೋಗ ಮತ್ತು ಪ್ರಸೂತಿ ನರ್ಸಿಂಗ್ ವಿಭಾಗದ ಮುಖ್ಯಸ್ಥರಾದ ಮಣಿ ಬಿಜ್ಲೀ ಅವರು ಮಾತೃ ಸ್ಪರ್ಶದ ಹೊಸ ವಿಭಾಗದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಪ್ರಿಯಾಂಕಾ ಅತಿಥಿಗಳನ್ನು ಸ್ವಾಗತಿಸಿದರು. ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿದರು. ಗೀತಾ ಪಾಟೀಲ್ ವಂದನಾರ್ಪಣೆ ಸಲ್ಲಿಸಿದರು.