ಶಾಂತಿವನ ಟ್ರಸ್ಟ್(ರಿ.) ಶ್ರೀ ಕ್ಷೇತ್ರ ಧರ್ಮಸ್ಥಳ-ಮೌಲ್ಯಾಧಾರಿತ ಪುಸ್ತಕಗಳ ಜಿಲ್ಲಾ ಮಟ್ಟದ ಸ್ಪರ್ಧೆ


Logo

Published Date: 29-Nov-2025 Link-Copied

ಪುಂಜಾಲಕಟ್ಟೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್‌ (ರಿ.) ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ "ಜ್ಞಾನ ರಥ" ಮತ್ತು "ಜ್ಞಾನ ಪಥ" ನೈತಿಕ ಮೌಲ್ಯಾಧಾರಿತ ಪುಸ್ತಕಗಳ ವಿವಿಧ ಸ್ಪರ್ಧೆಗಳು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಪುಂಜಾಲಕಟ್ಟೆಯಲ್ಲಿ ನಡೆಯಿತು. ಮಡಂತ್ಯಾರು ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ರೂಪಾ ನವೀನ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಎಳೆಯ ಪ್ರಾಯದಲ್ಲಿ ದೊರೆಯುವ ಉತ್ತಮ ಸಂಸ್ಕಾರ, ಆಚಾರ-ವಿಚಾರಗಳಿಂದ ಉತ್ತಮ ಸದೃಢ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು. ಬೆಳ್ತಂಗಡಿ ತಾಲೂಕುನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಾರಕೇಸರಿಯವರು ಆಗಮಿಸಿ ಎಲ್ಲಾ ಸ್ಪರ್ಧಿಗಳಿಗೆ ಶುಭಕೋರಿದರು. ವೇದಿಕೆಯಲ್ಲಿ ಕೆ.ಪಿ.ಎಸ್‌ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಡಾ| ಸರೋಜಿನಿ ಆಚಾರ್‌, ಉಪಪ್ರಾಂಶುಪಾಲರಾದ ನಿರಂಜನ್‌ ಜೈನ್‌, ನಿವೃತ್ತ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಸೋಮಶೇಖರ್‌ ಶೆಟ್ಟಿ, ಪುತ್ತೂರಿನ ಕಾಂಚನ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ರಮೇಶ್‌ ಮಯ್ಯರವರು ಉಪಸ್ಥಿತರಿದ್ದರು. ಯೋಜನೆಯ ನಿರ್ದೇಶಕರಾದ ಡಾ| ಶಶಿಕಾಂತ್‌ ಜೈನ್‌ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು, ಶಿಕ್ಷಕಿ ಜಯಂತಿರವರು ವಂದಿಸಿದರು. ಸಂಸ್ಥೆಯ ಶಿಕ್ಷಕರಾದ ಧರಣೇಂದ್ರ ಕೆ. ಜೈನ್‌ರವರು ಕಾರ್ಯಕ್ರಮ ನಿರೂಪಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img