Thu, May 15, 2025

Thu, May 15, 2025


ಮೂಡುಬಿದಿರೆ : ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳ ಆಹ್ವಾನ


Logo

Published Date: 02-Feb-2024

ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಪ್ರತಿ ವರ್ಷ ನೀಡಲಾಗುವ ಮೂರು ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳನ್ನು ಆಹ್ವಾನಿಸಿದೆ. ಯಾವುದೇ ಪ್ರಕಾರದ 2019-2023ರ ನಡುವೆ ಪ್ರಕಟವಾದ ಕೃತಿಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಿಕೊಡಬಹುದಾಗಿದೆ. ಪುರಸ್ಕಾರವು ಪ್ರಶಸ್ತಿ ಫಲಕ ಮತ್ತು ರೂ. 10 ಸಾವಿರ ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ಆಸಕ್ತರು ಪುರಸ್ಕಾರಕ್ಕೆ ಆಯ್ಕೆ ಮಾಡಲು ಗ್ರಂಥಗಳ ಮೂರು ಪ್ರತಿಗಳನ್ನು ಮಾರ್ಚ್ ಮೊದಲ ವಾರದೊಳಗೆ ‘ಶಿವರಾಮ ಕಾರಂತ ಪ್ರತಿಷ್ಠಾನ’, ಕನ್ನಡ ಭವನ, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ 574227. ಈ ವಿಳಾಸಕ್ಕೆ ಕಳುಹಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img