ಮಹಾಮಸ್ತಕಾಭಿಷೇಕದ ಇಂದಿನ ಕಾರ್ಯಕ್ರಮಗಳು


Logo

Published Date: 24-Feb-2024 Link-Copied

ಫೆ. 24ರಂದು ಬೆಳಗ್ಗೆ ನಿತ್ಯವಿಧಿ ಸಹಿತ ಶ್ರೀ ಪೀಠ ಯಂತ್ರರಾಧನಾ ವಿಧಾನ, ಧ್ವಜಪೂಜೆ ಶ್ರೀಬಲಿ ವಿಧಾನ, ಮಧ್ಯಾಹ್ನ ಭಕ್ತಾಮರ ಯಂತ್ರಾರಾಧನವಿಧಾನ, ಅಗ್ರೋದಕ ಮೆರವಣಿಗೆ ಬಳಿಕ 108 ಕಲಶಗಳಿಂದ ಮಹಾಮಸ್ತಕಾಭಿಷೇಕ ಮಹಾಪೂಜೆ ಹಾಗೂ ಮಂಗಳಾರತಿ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಪರಾಹ್ನ ಗಂಟೆ 3ಕ್ಕೆ ಯುಗಳ ಮುನಿಗಳ ಆಶೀರ್ವಚನದೊಂದಿಗೆ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ಎಂಎಲ್ ಸಿ ಮಂಜುನಾಥ ಭಂಡಾರಿ, ಹೃದ್ರೋಗತಜ್ಞ ಡಾ| ಪದ್ಮನಾಭ ಕಾಮತ್, ಎಚ್ ಪಿಸಿಎಲ್ ನ ಡಿಜಿಎಂ ನವೀನ್ ಕುಮಾರ್ ಎಂ.ಜಿ., ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಜಿನೇಂದ್ರ ಕಣಗಾವಿ, ಹೈಕೋರ್ಟ್ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಭಾಗವಹಿಸುವರು. ಜಿನ ಸಿದ್ಧಾಂತದ ಶ್ರೇಷ್ಠತೆ-ಅನೇಕಾಂತವಾದದ ಕುರಿತು ಪತ್ರಕರ್ತ ಅಜಿತ್ ಹನುಮಕ್ಕನವರ್ ಉಪನ್ಯಾಸ ನೀಡಲಿರುವರು. ಸಾಂಸ್ಕೃತಿಕ ಕಾರ್ಯಕ್ರಮ: ಮುಖ್ಯ ವೇದಿಕೆಯಲ್ಲಿ ರಾತ್ರಿ 7.30ಕ್ಕೆ ಪ್ರಖ್ಯಾತ ಗಾಯಕರಾದ ಅಜಯ್ ವಾರಿಯರ್, ಶಶಿಕಲಾ ಸುನಿಲ್, ಅನನ್ಯ ಪ್ರಸಾದ್ ಹಾಗೂ ಸಂದೇಶ್ ನೀರುಮಾರ್ಗ, ಬಳಗ ಬೆಂಗಳೂರು ಇವರಿಂದ ‘ಸಂಗೀತಯಾನ’ ವಸ್ತುಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7ರಿಂದ 8ರವರೆಗೆ ಈಶ ಕಲಾ ಪ್ರತಿಷ್ಠಾನ ಉಜಿರೆ ಇವರಿಂದ ‘ಭರತನಾಟ್ಯ’, ರಾತ್ರಿ 8ರಿಂದ 11ರವೆರೆಗೆ ವಿದ್ಯಾಶ್ರೀ ರಾಧಾಕೃಷ್ಣ ಮಂಗಳೂರು ಇವರ ನೇತೃತ್ವದ ಯಜ್ಞ ತಂಡದವರಿಂದ ‘ನೃತ್ಯ ಸಂಗಮ’ ಈ ಎಲ್ಲಾ ಕಾರ್ಯಕ್ರಮಗಳು ನಡೆಯಲಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img