ಎಸ್.ಡಿ.ಎಂ ಝೇಂಕಾರ-ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪರ್ವ


Logo

Published Date: 15-Mar-2024 Link-Copied

ಉಜಿರೆ: ವಿದ್ಯಾರ್ಥಿಗಳು ಸೃಜನಾತ್ಮಕ ಚಿಂತನೆಯೊಂದಿಗೆ ಆದರ್ಶ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿ.ವಿ.ಯ ಉಪಕುಲಪತಿ ಪ್ರೊ. ಅಶೋಕ್ ಎಸ್. ಆಲೂರ್ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಕೇಂದ್ರದಲ್ಲಿ ಎರಡು ದಿನ ನಡೆಯುವ ಎಸ್.ಡಿ.ಎಂ. ಝೇಂಕಾರ-ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪರ್ವದ ಉದ್ಘಾಟನಾ ಸಮಾರಂಭದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು. ವಿದ್ಯಾರ್ಥಿಗಳು ಬದುಕಿಗೊಂದು ನಿರ್ಧಿಷ್ಠ ಗುರಿಯನ್ನು ಇಟ್ಟುಕೊಂಡು ಉತ್ತಮ ಕೌಶಲಗಳನ್ನು ಬೆಳೆಸಿಕೊಂಡು, ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು, ಸವಾಲುಗಳನ್ನು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ವಿದ್ಯಾರ್ಥಿಗಳು ಉತ್ತಮ ಚಾರಿತ್ರ್ಯ, ಕೌಶಲ, ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಯೊಂದಿಗೆ ಸಂವಹನ ಕೌಶಲವನ್ನೂ ಬೆಳೆಸಿಕೊಳ್ಳಬೇಕು, ದಕ್ಷ ಕಾರ್ಯಕ್ಷಮತೆಯನ್ನೂ ಬೆಳೆಸಿಕೊಂಡು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ಸಮಾಜಸೇವೆ ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳು ಶ್ರಮ ಸಂಸ್ಕ್ರತಿಯೊಂದಿಗೆ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ದೃಢಸಂಕಲ್ಪದೊಂದಿಗೆ ಉನ್ನತ ಗುರಿ ಸಾಧನೆ ಮಾಡಬೇಕು ಎಂದು ಹೇಳಿದರು. ಸ್ನಾತಕೋತ್ತರ ಕೇಂದ್ರದ ಡೀನ್ ಪಿ. ವಿಶ್ವನಾಥ್ ಸ್ವಾಗತಿಸಿದರು. ಪ್ರೊ. ಸುವೀರ್ ಜೈನ್ ಧನ್ಯವಾದವಿತ್ತರು. ಪ್ರೊ. ನೆಫಿಸೆತ್ ಮತ್ತು ಪ್ರೊ. ಸ್ವಾತಿ ಕಾರ್ಯಕ್ರಮ ನಿರ್ವಹಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img