ಪರಿಶ್ರಮದಿಂದ ಸಾಧಕರಾಗಬಹುದು: ಶ್ವೇತಾ ಜೈನ್
Published Date: 29-Jun-2024 Link-Copied
ಮೂಡಬಿದಿರೆ: ಪರಿಶ್ರಮಪಟ್ಟರೆ ಸಾಮಾನ್ಯ ವ್ಯಕ್ತಿ ಕೂಡ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂದು ನೋಟರಿ ವಕೀಲೆ ಶ್ವೇತಾ ಜೈನ್ ಅಭಿಪ್ರಾಯಪಟ್ಟರು. ರೋಟರಿ ಸೆಂಟ್ರಲ್ ಸ್ಕೂಲಿನಲ್ಲಿ 2024-25 ಸಾಲಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಕ್ಲಬ್ಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಇನ್ನರ್ವೀಲ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ಮಾಜಿ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಕ್ಲಬ್ಗಳ ಪದಾಧಿಕಾರಿಗಳಿಗೆ ಶುಭಕೋರಿದರು. ಪ್ರಾಂಶುಪಾಲೆ ರೂಪಾ ಮಸ್ಕರೇನ್ಹಸ್, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರೀತಿ ಪ್ರಭಾ ಸ್ವಾಗತಿಸಿ, ವಿದ್ಯಾ ನಿರೂಪಿಸಿದರು.