ಉಜಿರೆ: ರೋಟರಿ ಕ್ಲಬ್ ನಿಂದ ಗಿಡ ನೆಡುವ ಕಾರ್ಯಕ್ರಮ ಮತ್ತು ಯಶೋವನದಲ್ಲಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನ ಆಚರಣೆ


Logo

Published Date: 30-Jul-2024 Link-Copied

ಉಜಿರೆಯ ಯಶೋವನ ಆರ್ಬೋರೇಟಮ್ ನ ಕುವೆಂಪು ವನ ಮತ್ತು ಪಂಪವನದಲ್ಲಿ ಬೆಳ್ತಂಗಡಿಯ ರೋಟರಿ ಕ್ಲಬ್ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಮಾತನಾಡಿ, ಪ್ರಕೃತಿ ಈ ನೆಲದ ಸಂಪತ್ತು,ಇದನ್ನು ಸಂರಕ್ಷಿಸುವ ಜೊತೆಗೆ ಪ್ರಕೃತಿಯನ್ನು ಸುಸ್ಥಿರ ಅಭಿವೃದ್ಧಿಯೆಡೆಗೆ ಸಾಗಿಸುವಲ್ಲಿ ನಮ್ಮೆಲ್ಲರ ಮಹತ್ವದ ಜವಾಬ್ದಾರಿ ಇದೆ. ಈ ಕಾರಣಕ್ಕೆ ನಾವು ವರ್ಷಕ್ಕೆ ಒಮ್ಮಯಾದರು ಗಿಡ ನೆಟ್ಟು ಪೋಷಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಶ್ರೀಗಂಧ, ಮಾವು, ಹಲಸು ಇತ್ಯಾದಿ ಗಿಡಗಳನ್ನು ನೆಡಲಾಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಸೇರಿದಂತೆ, ರೋಟರಿ ಕ್ಲಬ್ ನ ಸದಸ್ಯರುಗಳಾದ ಸೋನಿಯಾ ವರ್ಮಾ, ವಿದ್ಯಾ ಕುಮಾರ್, ಶ್ರೀಧರ್ ಕೆ.ವಿ, ವೈಕುಂಠ ಪ್ರಭು, ಶ್ರೀಕಾಂತ್ ಕಾಮತ್, ಗೋಪಾಲಕೃಷ್ಣ ಗುಲ್ಲೋಡಿ, ಪ್ರಶಾಂತ್ ಜೈನ್, ಸ್ಮೀತಾ ಜೈನ್, ಸಾತ್ವೀಕ್ ಜೈನ್, ನಿಯತಿ ಜೈನ್ ಮತ್ತು ಆದರ್ಶ್ ಕಾರಂತ್ ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img