ಉಜಿರೆ: ರೋಟರಿ ಕ್ಲಬ್ ನಿಂದ ಗಿಡ ನೆಡುವ ಕಾರ್ಯಕ್ರಮ ಮತ್ತು ಯಶೋವನದಲ್ಲಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನ ಆಚರಣೆ
Published Date: 30-Jul-2024 Link-Copied
ಉಜಿರೆಯ ಯಶೋವನ ಆರ್ಬೋರೇಟಮ್ ನ ಕುವೆಂಪು ವನ ಮತ್ತು ಪಂಪವನದಲ್ಲಿ ಬೆಳ್ತಂಗಡಿಯ ರೋಟರಿ ಕ್ಲಬ್ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಮಾತನಾಡಿ, ಪ್ರಕೃತಿ ಈ ನೆಲದ ಸಂಪತ್ತು,ಇದನ್ನು ಸಂರಕ್ಷಿಸುವ ಜೊತೆಗೆ ಪ್ರಕೃತಿಯನ್ನು ಸುಸ್ಥಿರ ಅಭಿವೃದ್ಧಿಯೆಡೆಗೆ ಸಾಗಿಸುವಲ್ಲಿ ನಮ್ಮೆಲ್ಲರ ಮಹತ್ವದ ಜವಾಬ್ದಾರಿ ಇದೆ. ಈ ಕಾರಣಕ್ಕೆ ನಾವು ವರ್ಷಕ್ಕೆ ಒಮ್ಮಯಾದರು ಗಿಡ ನೆಟ್ಟು ಪೋಷಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಶ್ರೀಗಂಧ, ಮಾವು, ಹಲಸು ಇತ್ಯಾದಿ ಗಿಡಗಳನ್ನು ನೆಡಲಾಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಸೇರಿದಂತೆ, ರೋಟರಿ ಕ್ಲಬ್ ನ ಸದಸ್ಯರುಗಳಾದ ಸೋನಿಯಾ ವರ್ಮಾ, ವಿದ್ಯಾ ಕುಮಾರ್, ಶ್ರೀಧರ್ ಕೆ.ವಿ, ವೈಕುಂಠ ಪ್ರಭು, ಶ್ರೀಕಾಂತ್ ಕಾಮತ್, ಗೋಪಾಲಕೃಷ್ಣ ಗುಲ್ಲೋಡಿ, ಪ್ರಶಾಂತ್ ಜೈನ್, ಸ್ಮೀತಾ ಜೈನ್, ಸಾತ್ವೀಕ್ ಜೈನ್, ನಿಯತಿ ಜೈನ್ ಮತ್ತು ಆದರ್ಶ್ ಕಾರಂತ್ ಉಪಸ್ಥಿತರಿದ್ದರು.