ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆ


Logo

Published Date: 14-Aug-2024 Link-Copied

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ 9ನೇ ಭಾರಿಗೆ ಆಯ್ಕೆಯಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ. 188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84ಕೊಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಛೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13ರಂದು ಲೋಕರ್ಪಣೆಗೊಂಡಿದ್ದು, ಇದರ ಎರಡನೇ ಮಹಡಿಯಲ್ಲಿ ಆಡಳಿತ ಕಛೇರಿಯನ್ನು ಹೊಂದಿರುತ್ತದೆ. 2023-24 ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ ಎಂದು ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img