Article Image 1 Article Image 2

ಪುತ್ತಿಗೆ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಹಸಿರುವಾಣಿ ಹೊರೆಕಾಣಿಕೆ

Article Image

ಪುತ್ತಿಗೆ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಹಸಿರುವಾಣಿ ಹೊರೆಕಾಣಿಕೆ

ಉಜಿರೆ: ಮೂಡಬಿದ್ರೆ ಬಳಿ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭ ಶುಕ್ರವಾರ ಧರ್ಮಸ್ಥಳದಿಂದ ಹೊರೆಕಾಣಿಕೆ ಸಾಗಾಣಿಕೆಗೆ ಡಿ. ನಿಶ್ಚಲ್ ಚಾಲನೆ ನೀಡಿ ಶುಭ ಹಾರೈಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಪಾರ್ಶ್ವನಾಥ ಜೈನ್, ಸುಬ್ರಹ್ಮಣ್ಯಪ್ರಸಾದ್, ಕೆ. ಮಹಾವೀರ ಅಜ್ರಿ, ಶ್ರೀಧರ ಉಳಿಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ 'ಕಲರವ ' ಅಂತರ್ ಕಾಲೇಜು ಹಾಗೂ ಅಂತ‌ರ್ ತರಗತಿ ಉತ್ಸವ

Article Image

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ 'ಕಲರವ ' ಅಂತರ್ ಕಾಲೇಜು ಹಾಗೂ ಅಂತ‌ರ್ ತರಗತಿ ಉತ್ಸವ

ವಿದ್ಯಾರ್ಥಿಗಳು ಜ್ಞಾನ, ಉತ್ತಮ ಮನೋಧೋರಣೆ ಮತ್ತು ಕೌಶಲ ಗಳಿಸಿಕೊಂಡು ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು, ಸಾಧನೆಗೈಯಬೇಕು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಉಜಿರೆ ಎಸ್ ಡಿ ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಯುವರಾಜ್ ಜೈನ್‌ ಹೇಳಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಇಂದು (ಫೆ. 24) ಮಾನವಿಕ ವಿಭಾಗವು ಆಯೋಜಿಸಿದ್ದ 'ಕಲರವ ' ಅಂತರ್ ಕಾಲೇಜು ಹಾಗೂ ಅಂತ‌ರ್ ತರಗತಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ಉತ್ತಮ ಬುದ್ಧಿಮತ್ತೆಯ ಹೊರತಾಗಿಯೂ ಜ್ಞಾನ, ಕೌಶಲದ ಅಗತ್ಯವಿದೆ. ಉತ್ತಮ ಮನೋಧೋರಣೆಯೂ ಇದ್ದಲ್ಲಿ ವಿಶೇಷ ಸಾಧನೆಗಳನ್ನು ಮಾಡಬಹುದು. ವಿಜ್ಞಾನ, ಕಲೆ, ವಾಣಿಜ್ಯ ಇತ್ಯಾದಿ ಭೇದ ಮಾಡದೆ, ಯಾವ ಕ್ಷೇತ್ರದಲ್ಲಿ ಮುನ್ನಡೆಯಲು ಸಾಧ್ಯವಿದೆಯೋ ಆ ಕ್ಷೇತ್ರದಲ್ಲಿ ಸ್ವಯಂ ಅಭಿವೃದ್ಧಿಯೊಂದಿಗೆ ಸಾಗಬೇಕು ಎಂದು ಅವರು ಹೇಳಿದರು. “ಬದುಕಿನ ಹಾದಿಯಲ್ಲಿ ಮುಳ್ಳುಗಳು ಸಹಜ ಅದನ್ನು ಹೂವಿನ ಹಾಸಿಗೆಯನ್ನಾಗಿ ಬದಲಾಯಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ಟೀಕೆಗಳನ್ನು ಪರಿಶೀಲಿಸಿ. ಟೀಕೆಗಳು ನಿಮಗೆ ಅನ್ವಯವಾಗುತ್ತಿದ್ದರೆ ನಿಮ್ಮಲ್ಲಿ ಬದಲಾವಣೆ ತಂದುಕೊಳ್ಳಿ; ಇಲ್ಲವಾದರೆ ಸುಮ್ಮನಿದ್ದುಬಿಡಿ. ಸಣ್ಣ ಸಣ್ಣ ಬದಲಾವಣೆಗಳಿಂದ ದೊಡ್ಡ ಬದಲಾವಣೆ ಸಾಧ್ಯವಾಗುತ್ತದೆ. ಕಲೆ, ಸಂಗೀತ, ಸಾಹಿತ್ಯ ಕ್ಷೇತ್ರಗಳಲ್ಲೂ ತೊಡಗಿಕೊಳ್ಳಿ. ಕಲಿಯುವ ವಯಸ್ಸಿನಲ್ಲಿ ಕಲಿಯಿರಿ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. "ಎಸ್.ಡಿ.ಎಂ. ಸಂಸ್ಥೆಯು ಬದುಕಿಗೆ ಬೇಕಾದ ಎಲ್ಲಾ ರೀತಿಯ ಗುಣಗಳನ್ನು ಕಲಿಸಿಕೊಡುತ್ತದೆ ಹಾಗೂ ಪ್ರತಿಭೆಗೆ ತಕ್ಕ ಪ್ರೋತ್ಸಾಹವನ್ನು ನೀಡುತ್ತದೆ. ಇಂದಿನ ನನ್ನೆಲ್ಲಾ ಸಾಧನೆ ಹಾಗೂ ಏಳಿಗೆಗೆ ಸಂಸ್ಥೆ ಕಲಿಸಿಕೊಟ್ಟ ಪಾಠಗಳೇ ಕಾರಣ” ಎಂದರು. ಮುಖ್ಯ ಅತಿಥಿ, ಉದ್ಯಮಿ ಮಹೇಂದ್ರ ವರ್ಮ ಜೈನ್ ಮಾತನಾಡಿದರು. ತಮ್ಮ ಉದ್ಯಮಶೀಲತೆಗೆ ರುಡ್ಸೆಟ್ ಸಂಸ್ಥೆಯ ತರಬೇತಿ ಒದಗಿಸಿದ ನೆರವನ್ನು ಸ್ಮರಿಸಿಕೊಂಡರು. “ಯಶಸ್ಸು ಲಭಿಸಿದಾಗ ಅತಿಯಾಗಿ ಹಿಗ್ಗದೆ, ಕೆಲಸದಲ್ಲಿ ಗುಣಮಟ್ಟ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಉದ್ಯಮಿಗಳಿಗೆ ಪರಿಸ್ಥಿತಿ ಸದಾ ಒಂದೇ ಆಗಿರುವುದಿಲ್ಲ. ಜೀವನ ನಿರ್ವಹಣೆಗೆ ಪರ್ಯಾಯ ದಾರಿಗಳನ್ನು ಸಜ್ಜಾಗಿರಿಸಿಕೊಂಡಿರಬೇಕು. ದೇಶಕ್ಕೆ ಉತ್ತಮ ಪ್ರಜೆಗಳಾಗಿ, ಪ್ರಾಮಾಣಿಕ ತೆರಿಗೆದಾರರಾಗಿ, ರಾಷ್ಟ್ರೀಯತೆಗೆ ಬದ್ಧರಾಗಿ ಬದುಕಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, "ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಹಿತ ಬದುಕಿನ ಎಲ್ಲ ಸ್ತರಗಳಲ್ಲಿ ಸುದೃಢರಾಗಿ, ತಮ್ಮಲ್ಲಿರುವ ಕೌಶಲ, ಸಾಮರ್ಥ್ಯವನ್ನು ಗುರುತಿಸಿ ಸಮರ್ಥ ರೀತಿಯಾಗಿ ಉಪಯೋಗಿಸಿಕೊಂಡು ಬದುಕಬೇಕು" ಎಂದರು. ಇದೇ ಸಂದರ್ಭದಲ್ಲಿ, 2024 ರಲ್ಲಿ ನಡೆದ ಇಂಡೋ - ನೇಪಾಳ್ ಅಂತರರಾಷ್ಟ್ರೀಯ ಥ್ರೋ ಬಾಲ್ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದ ತೃತೀಯ ಬಿ.ಎ. ವಿದ್ಯಾರ್ಥಿನಿ ಉಷಾ ಕೆ.ಜಿ. ಅವರನ್ನು ಗೌರವಿಸಲಾಯಿತು. ಪ್ರಾಂಶುಪಾಲರು ಹಾಗೂ ಅತಿಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಆಡಳಿತಾಂಗ ಕುಲಸಚಿವ ಡಾ. ಶ್ರೀಧರ ಭಟ್, ಕಲಾ ನಿಕಾಯದ ಡೀನ್ ಡಾ. ಭಾಸ್ಕರ ಹೆಗಡೆ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಮೀರ್ ಮತ್ತು ವೀಕ್ಷಾ ಉಪಸ್ಥಿತರಿದ್ದರು. ಸುದೀಕ್ಷಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾರ್ಯಕ್ರಮ ಸಂಘಟನಾ ಕಾರ್ಯದರ್ಶಿ ಡಾ. ಸನ್ಮತಿ ಕುಮಾರ್ ಸ್ವಾಗತಿಸಿದರು. ಮಾನಸ ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ 10 ಕಾಲೇಜುಗಳಿಂದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು.

ಫೆ.22: ವೇಣೂರು ಯುವಸೇವಾ ಸಂಗಮ ಟ್ರಸ್ಟ್ ವತಿಯಿಂದ ಸಾರ್ವಜನಿಕ ಅಂಬ್ಯುಲೆನ್ಸ್‌ ಲೋಕಾರ್ಪಣೆ

Article Image

ಫೆ.22: ವೇಣೂರು ಯುವಸೇವಾ ಸಂಗಮ ಟ್ರಸ್ಟ್ ವತಿಯಿಂದ ಸಾರ್ವಜನಿಕ ಅಂಬ್ಯುಲೆನ್ಸ್‌ ಲೋಕಾರ್ಪಣೆ

ಬೆಳ್ತಂಗಡಿ: ವೇಣೂರು ಯುವಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಸಾರ್ವಜನಿಕ ಅಂಬುಲೆನ್ಸ್‌ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಆಸೋಸಿಯೇಶನ್, ತಾಲೂಕು ಯುವಜನ ಒಕ್ಕೂಟದ ಸಹಭಾಗಿತ್ವದಲ್ಲಿ 65 ಕೆ.ಜಿ. ವಿಭಾಗದ ಪ್ರೊ ಮಾದರಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಚಾಂಪಿಯನ್ ಶಿಪ್ ಪಂದ್ಯಾಟ ಫೆ. 22 ರಂದು ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 3ಕ್ಕೆ ಕಬಡ್ಡಿ ಪಂದ್ಯಾಟ ಉದ್ಘಾಟನೆ, ಸಂಜೆ 6ರಿಂದ ಮಂಗಳೂರು ಸುದೇಶ್ ಕುಮಾರ್ ಜೈನ್‌ ಮಕ್ಕಿ ಮನೆ ಕಲಾ ವೃಂದದಿಂದ ಸಾಂಸ್ಕೃತಿಕ ವೈಭವ, ರಾತ್ರಿ 8 ಕ್ಕೆ ಸಭಾ ಕಾರ್ಯಕ್ರಮ ಹಾಗೂ ಅಂಬುಲೆನ್ಸ್ ಲೋಕಾರ್ಪಣೆ ನಡೆಯಲಿದ ಎಂದು ಸಮಿತಿ ಅಧ್ಯಕ್ಷ ಕೆ. ವಿಜಯ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೇಣೂರು ಐಟಿಐಯಲ್ಲಿ 108 ಯುನಿಟ್ ರಕ್ತದಾನ

Article Image

ವೇಣೂರು ಐಟಿಐಯಲ್ಲಿ 108 ಯುನಿಟ್ ರಕ್ತದಾನ

ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಂಜುಶ್ರೀ ರೋವರ್ಸ್ ಘಟಕ, ಹಳೆವಿದ್ಯಾರ್ಥಿ ಸಂಘ, ಪದ್ಮಾಂಬ ಸಮೂಹ ಸಂಸ್ಥೆಗಳು, ವೇಣೂರು, ಹಾಲು ಉತ್ಪಾದಕರ ಸಹಕಾರಿ ಸಂಘ, ಕುಕ್ಕೇಡಿ. ಕುಕ್ಕೇಡಿ ಗ್ರಾಮ ಪಂಚಾಯತ್, ಲಯನ್ಸ್ ಕ್ಲಬ್ ವೇಣೂರು, ಲಯನ್ಸ್‌ ಕ್ಲಬ್ ಮಂಗಳೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು, ಪಲ್ಗುಣಿ ಸೇವಾ ಸಂಘ[ರಿ] ವೇಣೂರು, ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್, ದ.ಕ. ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯ, ಮಂಜುಶ್ರೀ ಭಜನಾ ಮಂಡಳಿ, ಕುಂಡದಬೆಟ್ಟು, ಜನಸೇವಾ ಟ್ರಸ್ಟ್ (ರಿ) ಪಡ್ಡಂದಡ್ಕ, ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ಹಾಗೂ ಶ್ರೀ ದೇವಿ ಮಹಮ್ಮಾಯಿ ಮಾರಿಗುಡಿ ಮಂಗಳತೇರು ಸೇವಾ ಟ್ರಸ್ಟ್ (ರಿ.) ಇವರ ಸಹಭಾಗಿತ್ವದಲ್ಲಿ ರಕ್ತದಾನದ ಬೃಹತ್ ಶಿಬಿರ ವೇಣೂರು ಐಟಿಐಯಲ್ಲಿ ನಡೆಯಿತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು ಇದರ ಅಧ್ಯಕ್ಷರಾದ ಲ:ಸುಂದರ ಹೆಗ್ಡೆ, ಬಿ.ಇ. ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಕ್ತದಾನ ಅತ್ಯಂತ ಶ್ರೇಷ್ಠ ದಾನ ಇದರಿಂದ ಹಲವಾರು ಜೀವ ಉಳಿಸಿದಂತಹ ಪುಣ್ಯ ಪ್ರಾಪ್ತಿಯಾಗುತ್ತದೆ, ಇಂತಹ ಕಾರ್ಯಕ್ರಮಗಳಿಂದ ಯುವಜನತೆ ದಾನದ ಗುಣವನ್ನು ಮೈಗೂಡಿಸಿಕೊಳ್ಳಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ 266 ರಕ್ತದಾನ ಶಿಬಿರವನ್ನು ಸಂಯೋಜಿಸಿರುವ ಲ| ಎನ್. ಜೆ. ನಾಗೇಶ್ ಎಂ.ಜೆ.ಎಫ್., ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಲ| ಜಯರಾಜ್ ಪ್ರಕಾಶ್, ಖ್ಯಾತ ಪಾಕಶಾಸ್ತçಜ್ಞರಾದ ಶ್ರೀ ನಾಗಕುಮಾರ್ ಜೈನ್, ಜೀವವಿಮಾ ಪ್ರತಿನಿಧಿ ಜಗನ್ನಾಥ ದೇವಾಡಿಗ ಇವರುಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಮಾರಂಭದ ಅದ್ಯಕ್ಷತೆಯನ್ನು ವಹಿಸಿದ್ದ ಐಟಿಐ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಮಾತನಾಡಿ ವಿದ್ಯಾರ್ಥಿ ದಿಸೆಯಿಂದಲೇ ದಾನದ ಮಹತ್ವವನ್ನು ಅರಿತು ರಕ್ತದಾನದಂತಹ ಶ್ರೇಷ್ಠ ಸಮಾಜ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು. ಮಂಗಳೂರಿನ ಕೆ.ಎಂ.ಸಿ.ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ: ಪ್ರೇಮಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಿತಾ ಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದ್ಮಾಂಬ ಸಮೂಹ ಸಂಸ್ಥೆಗಳ ಮಾಲಕರು ಜಿನರಾಜ್ ಜೈನ್, ಪಲ್ಗುಣಿ ಸೇವಾ ಸಂಘದŒ ಅಧ್ಯಕ್ಷರಾದ ವಿ. ಎಸ್. ಜಯರಾಜ್, ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನಿರ್ಮಲ್‌ಕುಮಾರ್ ಬೊಳ್ಜಾಲ್ ಗುತ್ತು, ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿಲ್ವಿಯಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ವೇಣೂರು ಇಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ಶ್ರೀ ದೇವಿ ಮಹಮ್ಮಾಯಿ ಮಾರಿಗುಡಿ ಮಂಗಳತೇರು ಸೇವಾ ಟ್ರಸ್ಟ್(ರಿ.) ಇದರ ಅಧ್ಯಕ್ಷರಾದ ಸತೀಶ್ ಗೌಡ, ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ಇದರ ಗೌರವಾಧ್ಯಕ್ಷರಾದ ಎಂ. ಸುಂದರ ಎಂ. ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 108 ಯುನಿಟ್ ರಕ್ತ ಸಂಗ್ರಹಿಸಲಾಯಿತು. ವಿದ್ಯಾರ್ಥಿ ವಿವೇಕ್ ಪ್ರಾರ್ಥಿಸಿದ ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪದ್ಮಪ್ರಸಾದ್ ಬಸ್ತಿ ಸ್ವಾಗತಿಸಿ, ಜಾಕೊಬ್ ಟಿ. ವಿ. ವಂದಿಸಿದ ಈ ಕಾರ್ಯಕ್ರಮವನ್ನು ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಸತೀಶ್ ನಿರ್ವಹಿಸಿದರು.

ವೇಣೂರು: 2ನೇ ವರ್ಷದ ಪ್ರತಿಷ್ಠಾ ದಿನಾಚರಣೆಯ

Article Image

ವೇಣೂರು: 2ನೇ ವರ್ಷದ ಪ್ರತಿಷ್ಠಾ ದಿನಾಚರಣೆಯ

ಬೆಳ್ತಂಗಡಿ ತಾಲೂಕು, ವೇಣೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23(ನಾಳೆ)ರಂದು 2ನೇ ವರ್ಷದ ಪ್ರತಿಷ್ಠಾ ದಿನಾಚರಣೆಯ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮಗಳು ಪೂರ್ವಾಹ್ನ ಗಂಟೆ 8.30ಕ್ಕೆ ದೇವತಾ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ಪರಿವಾರ ದೇವರಿಗೆ ನವಕಲಶ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.

ವೇಣೂರು: ಮಹಾಶಿವರಾತ್ರಿ ಮಹೋತ್ಸವ ಶತರುದ್ರಾಭಿಷೇಕ, ಅಹೋರಾತ್ರಿ ಭಜನೋತ್ಸವ

Article Image

ವೇಣೂರು: ಮಹಾಶಿವರಾತ್ರಿ ಮಹೋತ್ಸವ ಶತರುದ್ರಾಭಿಷೇಕ, ಅಹೋರಾತ್ರಿ ಭಜನೋತ್ಸವ

ಬೆಳ್ತಂಗಡಿ ತಾಲೂಕು, ವೇಣೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಲಿಂಗೇಶ್ವರ ಕೃಪಾಪೋಷಿತ ಭಜನಾ ಮಂಡಳಿ, ವೇಣೂರು ಇವರ ಸಹಕಾರದೊಂದಿಗೆ ಫೆಬ್ರವರಿ 26ರಂದು ಮಹಾಶಿವರಾತ್ರಿ ಮಹೋತ್ಸವ ಶತರುದ್ರಾಭಿಷೇಕ, ಅಹೋರಾತ್ರಿ ಭಜನೋತ್ಸವವು, ಊರ-ಪರವೂರ ಭಜನಾ ಮಂಡಳಿಗಳಿಂದ ಜರಗಲಿರುವುದು. ರಾತ್ರಿ ಗಂಟೆ 7.00ರಿಂದ ಸಾಮೂಹಿಕ 'ಶಿವಪಂಚಾಕ್ಷರಿ ಪಠಣ' ವಿಶೇಷವಾಗಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Article Image

ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

"ಸೋತು ಗೆಲ್ಲುವ ಸಾಧ್ಯತೆಗಳಿಂದ ಅದಮ್ಯ ಆತ್ಮವಿಶ್ವಾಸ" ಸೋತು ಗೆಲ್ಲುವ ಸಾಧ್ಯತೆಗಳು ಅದಮ್ಯ ಆತ್ಮವಿಶ್ವಾಸವನ್ನು ಮೂಡಿಸಿ ಬದುಕನ್ನು ಸುಂದರಗೊಳಿಸುತ್ತವೆ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು, ಓಲಿಂಪಿಯನ್ ಎಂ.ಆರ್‌ ಪೂವಮ್ಮ ಹೇಳಿದರು. ಉಜಿರೆ ಎಸ್‌ಡಿಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ದ್ವಜಾರೋಹಣ ನಡೆಸಿ, ಕ್ರೀಡಾಜ್ಯೋತಿ ಸ್ವೀಕರಿಸುವ ಮೂಲಕ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವುಗಳು ಸಾಮಾನ್ಯ. ಹಿನ್ನಡೆಯನ್ನು ಸವಾಲಾಗಿ ತೆಗೆದುಕೊಂಡು ಸತತ ಪ್ರಯತ್ನಗಳ ಮೂಲಕ ಗೆಲುವಿನ ಹಾದಿಯಲ್ಲಿ ಸಾಗಬಹುದು ಎಂದು ಅವರು ಹೇಳಿದರು. ರತ್ನವರ್ಮ ಕ್ರೀಡಾಂಗಣವು ತಮ್ಮ ವೃತ್ತಿ ಜೀವನದಲ್ಲಿ ಮಹತ್ವದ ಸ್ಥಾನ ಹೊಂದಿದೆ ಎಂದರು. ಇಲ್ಲಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಕ್ರೀಡಾಜೀವನದ ಆರಂಭದಲ್ಲಿ ಸರಿಯಾದ ಮಾರ್ಗದರ್ಶನ ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಗುರುಗಳಾದ ವಸಂತ್‌ ಹೆಗಡೆ ಅವರು ಮುಖ್ಯಪಾತ್ರ ವಹಿಸಿದ್ದಾರೆ ಎಂದು ಕೃತಜ್ಞತಾಪೂರ್ವಕವಾಗಿ ಪೂವಮ್ಮ ನೆನಪಿಸಿಕೊಂಡರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ ಮಾತನಾಡಿ, ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಸದೃಡತೆಯನ್ನು ಕಾಯ್ದುಕೊಳ್ಳುವ ಮೂಲಕ ಬದುಕಿನ ಯಾವುದೇ ಸವಾಲುಗಳನ್ನು ಸುಲಭವಾಗಿ ಎದುರಿಸಬಹುದು ಎಂದು ಹೇಳಿದರು. ವಿದ್ಯಾರ್ಥಿಗಳು ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಸದೃಡತೆಯನ್ನು ಸಾಧಿಸಬಹುದು ಎಂದರು. ಕಾರ್ಯಕ್ರಮದಲ್ಲಿ ಪೂವಮ್ಮ ಅವರನ್ನು ಸನ್ಮಾನಿಸಲಾಯಿತು. ಪ್ರೋ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದಿರುವ ಗಗನ್‌ ಗೌಡ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಮೇಶ್‌ ಎಚ್‌ ಉಪಸ್ಥಿತರಿದ್ದರು. ಕ್ರೀಡಾ ಕೂಟದ ಅಂಗವಾಗಿ ವಿದ್ಯಾರ್ಥಿಗಳಿಗೆ ಪಥ ಸಂಚಲನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಂತಿಮ ಬಿ.ಕಾಂ ʼಸಿʼ ವಿದ್ಯಾರ್ಥಿಗಳು ಪ್ರಥಮ ಬಹುಮಾನ, ಪ್ರಥಮ ಬಿಸಿಎ ʼಬಿʼ ವಿದ್ಯಾರ್ಥಿಗಳು ದ್ವಿತೀಯ ಮತ್ತು ಬಿ.ವೋಕ್‌ನ ರೀಟೈಲ್‌ ಆಂಡ್‌ ಮ್ಯಾನೇಜ್ಮೇಂಟ್‌ ತೃತೀಯ ಬಹುಮಾನ ಪಡೆದುಕೊಂಡರು. ಡಾ.ಸುವೀರ್‌ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಉಜಿರೆ: ನೀರು ಉಳಿಸಿ ಅಭಿಯಾನ

Article Image

ಉಜಿರೆ: ನೀರು ಉಳಿಸಿ ಅಭಿಯಾನ

ಉಜಿರೆ: ಕರ್ನಾಟಕ ರಾಜ್ಯದಲ್ಲಿ 12 ಬರಪೀಡಿತ ಜಿಲ್ಲೆಗಳು ಹಾಗೂ ಎರಡು ನಗರ ಪ್ರದೇಶದ ವ್ಯಾಪ್ತಿಯಲ್ಲಿ 14,80,519 ಯುವ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳುವ ಮೂಲಕ 3,86,432 ಘನ ಮೀಟರ್ ನೀರನ್ನು ಈಗಾಗಲೆ ಸಂರಕ್ಷಿಸಲಾಗಿದೆ ಯುನಿಸೆಫ್‌ನ ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ ಜಂಟಿ ಆಶ್ರಯದಲ್ಲಿ ಆಯೋಜಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದ್ದಿ, ಸರ್ವರ ಸಹಕಾರವನ್ನು ಕೋರಿದರು. ಯುನಿಸೆಫ್‌ನ ಡಾ. ಪ್ರಭಾತ್ ಮಟ್ಟಾಡಿ ಶುಭ ಹಾರೈಸಿದರು. ಎಸ್.ಡಿ.ಎಂ. ಕಾಲೇಜಿನ ಇನ್ನೂರು ವಿದ್ಯಾರ್ಥಿಗಳು ನೀರು ಉಳಿಸಿ ಜಾಥಾದಲ್ಲಿ ಭಾಗವಹಿಸಿದರು. ಮಡಂತ್ಯಾರು ಸೇಕ್ರೆಡ್‌ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಜಲಸಂರಕ್ಷಣೆ ತಜ್ಞರಾದ ಡಾ. ಜೋಸೆಫ್, ಎನ್. ಎಂ. ನೀರುಸಂರಕ್ಷಣೆ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ. ಮಹೇಶ್‌ಕುಮಾರ್ ಶೆಟ್ಟಿ ಮತ್ತು ಪ್ರೊ. ದೀಪಾ, ಆರ್.ಪಿ., ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಷಾಕಿರಣ್ ಕಾರಂತ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಎಸ್.ಎಸ್. ಉಪಸ್ಥಿತರಿದ್ದರು.

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Article Image

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ. ಹೆಗ್ಗಡೆಯವರ ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ ನಾಣ್ಯಗಳ ಪ್ರದರ್ಶನವನ್ನು ಆಯೋಜಿಸಿದ್ದು ಶಾಲಾ ಮಕ್ಕಳಿಗೆ, ಆಸಕ್ತರಿಗೆ ನಾಣ್ಯಗಳ ಮೂಲಕ ಇತಿಹಾಸವನ್ನು ತಿಳಿದುಕೊಳ್ಳಲು ಇರುವ ಅವಕಾಶವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣರವರು ಹೇಳಿದರು. ಅವರು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಫೆ. 17ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ಪ್ರಾಚೀನ ಕಾಲದ ನಾಣ್ಯ ಹಾಗೂ ಅಂಚೆ ಚೀಟಿಗಳ ವಿಶೇಷ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ನಾಣ್ಯಗಳ ಸಂಗ್ರಹಕಾರರಾದ ಮೂಡಿಗೆರೆಯ ಎಂ. ಎಲ್. ಅಶೋಕ್ ಮಾತನಾಡಿ ನನ್ನ ಪ್ರಾಚೀನ ವಸ್ತುಗಳ ಸಂಗ್ರಹಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಮಂಜೂಷಾ ವಸ್ತು ಸಂಗ್ರಹಾಲಯವೇ ಪ್ರೇರಣೆ. ಅವಕಾಶ ಮಾಡಿಕೊಟ್ಟ ಪೂಜ್ಯರಿಗೆ ಹಾಗೂ ಮಂಜೂಷಾದ ಸಿಬಂದಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಾಚೀನ ಭಾರತದಿಂದ ಆರಂಭಗೊಂಡು ಮೊನ್ನೆ ಮೊನ್ನೆಯಷ್ಟೇ ಬಿಡುಗಡೆಗೊಂಡ ನಾಣ್ಯಗಳವರೆಗೆ ಸಂಗ್ರಹಿಸಲಾದ 1000ಕ್ಕೂ ಹೆಚ್ಚಿನ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ವಿವಿಧ ರಾಜ-ಮಹಾರಾಜರ ಕಾಲ, ಸ್ವಾತಂತ್ರ್ಯ ಪೂರ್ವ, ಸ್ವತಂತ್ರ ಭಾರತದ ಕಾಲದಿಂದ ಹಿಡಿದು ವಿಶೇಷ ಸಂದರ್ಭಗಳಲ್ಲಿ ಸರಕಾರವು ಬಿಡುಗಡೆಗೊಳಿಸಿದ ನಾಣ್ಯಗಳು, ಅಂಚೆ ಚೀಟಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಚಿನ್ನ, ಬೆಳ್ಳಿ, ತಾಮ್ರ ಹೀಗೆ ಹಲವು ರೀತಿಯ ನಾಣ್ಯಗಳನ್ನು ನೋಡಬಹುದು ಎಂದು ಹೇಳಿದರು. ಧರ್ಮಸ್ಥಳದಲ್ಲಿರುವ ಮಂಜೂಷಾ ಮ್ಯೂಸಿಯಂನಲ್ಲಿ ವೀರೇಂದ್ರ ಹೆಗ್ಗಡೆಯವರ ಸಂಗ್ರಹಗಳ ಪ್ರದರ್ಶನದ ಜೊತೆಗೆ ವಿವಿಧ ಚಟುವಟಿಕೆ, ಕಾರ್ಯಾಗಾರಗಳ ಮೂಲಕ ಶಾಲಾ ಮಕ್ಕಳಿಗೆ, ಆಸಕ್ತರಿಗೆ ಪುರಾತನ ವಸ್ತುಗಳ ಮಾಹಿತಿ ಒದಗಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಸ್ತು ಸಂಗ್ರಹಾಲಯವು ಜ್ಞಾನ ಹೆಚ್ಚಿಸುವುದರ ಜೊತೆಗೆ ಪ್ರಾಚೀನ ವಸ್ತುಗಳ ಬಗ್ಗೆ ಅರಿವು ಮೂಡಿಸಿ, ಇನ್ನಷ್ಟು ಆಸಕ್ತಿ, ಕುತೂಹಲ ಹೆಚ್ಚಲು ಪ್ರೇರಣೆಯಾಗಿವೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಹೇಳಿದರು. ಈ ಸಂದರ್ಭದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯದ ಉಪ ನಿರ್ದೇಶಕ ರಿತೇಶ್ ಶರ್ಮಾ ಎಸ್‌ಡಿಎಂ ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನದ ಡಾ. ಪವನ್ ಕುಮಾರ್ ಹಾಗೂ ಇತರ ಸಿ‌ಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಛೇರಿ ಉದ್ಘಾಟನೆ

Article Image

ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಛೇರಿ ಉದ್ಘಾಟನೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2025ರ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಭಾನುವಾರ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಲ ಕ್ಷ್ಮೀನಾರಾಯಾಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮಾಸ್ಟರ್, ಸಂತೋಷ್ ಗೌಡ, ಶಿವರಾಮ್, ಪವಿತ್ರ, ಭವಾನಿ, ಮಂಜುಳಾ ಉಪಸ್ಥಿತರಿದ್ದರು. ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

ಎಕ್ಸಲೆಂಟ್ ಮೂಡುಬಿದಿರೆ: ಜೆ ಇ ಇ ಮೈನ್ 99.97143 ಸಾಧನೆ

Article Image

ಎಕ್ಸಲೆಂಟ್ ಮೂಡುಬಿದಿರೆ: ಜೆ ಇ ಇ ಮೈನ್ 99.97143 ಸಾಧನೆ

ಎನ್ ಟಿ ಎ ನಡೆಸುವ ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-1 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಮೊದಲ ಆವೃತ್ತಿಯ ಪರೀಕ್ಷೆಯನ್ನು ಜನವರಿ-ಫೆಬ್ರವರಿಯಲ್ಲಿ ನಡೆಸಲಾಗಿದ್ದರೆ, ಎರಡನೇ ಆವೃತ್ತಿ ಏಪ್ರಿಲ್ನಲ್ಲಿ ನಡೆಯಲಿದೆ. ಜೆಇಇ- ಮೇನ್ಸ್ ಪತ್ರಿಕೆ 1 ಮತ್ತು ಪತ್ರಿಕೆ 2ರ ಫಲಿತಾಂಶಗಳ ಆಧಾರದ ಮೇಲೆ, ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ಜೆಇಇ-ಅಡ್ವಾಸ್ಡ್ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ಮಾ ಡಲಾಗುತ್ತದೆ, ಇದು 23 ಪ್ರಮುಖ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (ಐಐಟಿ) ಪ್ರವೇಶ ಪಡೆಯಲು ದಾರಿ ಮಾಡಿಕೊಡುತ್ತದೆ. ಎಕ್ಸಲೆಂಟ್ ಮೂಡುಬಿದಿರೆ ದೇಶದ ಅತ್ಯುತ್ತಮ ಶಿಕ್ಷಕವರ್ಗವನ್ನು ಹೊಂದಿದ್ದು, ಶ್ರೇಷ್ಠ ಮಟ್ಟದ ತರಬೇತಿ ನೀಡುತ್ತಿದ್ದೆ, ಇಲ್ಲಿಯವರೆಗೆ ಹಲವಾರು ವಿದ್ಯಾರ್ಥಿಗಳು ದೇಶದ ವಿವಿಧ ಐಐಟಿಗಳಿಗೆ ಪ್ರವೇಶವನ್ನು ಪಡೆದಿರುವುದು ಇಲ್ಲಿಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಶಿಶಿರ್ ಎಚ್ ಶೆಟ್ಟಿ (99.97143 ಪರ್ಸೆಂಟೈಲ್), ಶ್ರೇಯಾಂಕ್ ಮನೋಹರ ಪೈ (99.8251 ಪರ್ಸೆಂಟೈಲ್), ಕಾರ್ತಿಕ್ ಎಸ್ (99.02732 ಪರ್ಸೆಂಟೈಲ್) ಉತ್ತಮ ಅಂಕ ಗಳಿಸುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು 99ಪರ್ಸೆಂಟೈಲ್‌ಗಿಂತ ಹೆಚ್ಚು, 6 ವಿದ್ಯಾರ್ಥಿಗಳು 98 ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು 36 ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ. ವಿಷಯವಾರು 7 ವಿದ್ಯಾರ್ಥಿಗಳು ಭೌತಶಾ‌ಸ್ತ್ರದಲ್ಲಿ, 6 ವಿದ್ಯಾರ್ಥಿಗಳು ರಸಾಯನ ಶಾ‌ಸ್ತ್ರದಲ್ಲಿ, 4 ವಿದ್ಯಾರ್ಥಿಗಳು ಗಣಿತಶಾ‌ಸ್ತ್ರದಲ್ಲಿ 99 ಪರ್ಸೈಂಟೈಲ್‌ಗಿಂತ ಅಧಿಕ ಅಂಕವನ್ನು ಪಡೆದಿರುತ್ತಾರೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಎಸ್.ಡಿ.ಎಮ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Article Image

ಎಸ್.ಡಿ.ಎಮ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇವುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಹಯೋಗದಲ್ಲಿ ದಿನಾಂಕ 26-01-2025 ರಂದು ಬೆಳಿಗ್ಗೆ 9.30 ರಿಂದ ಸ. ಹಿ. ಪ್ರಾಥಮಿಕ ಶಾಲೆ ಹಳೆಪೇಟೆ ಇಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಈ ಆರೋಗ್ಯ ತಪಾಸಣಾ ಶಿಬಿರವು ಎಲ್ಲಾ ವಯೋಮಾನದವರಿಗೆ ಉಚಿತವಾಗಿದೆ. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶತಮಾನೋತ್ಸವ ಆಚರಣೆ ಅಂಗವಾಗಿ ವರ್ಷವಿಡಿ ವೈವಿಧ್ಯಮಯ ಕಾರ್ಯಕ್ರಮಗಳು

Article Image

ಶತಮಾನೋತ್ಸವ ಆಚರಣೆ ಅಂಗವಾಗಿ ವರ್ಷವಿಡಿ ವೈವಿಧ್ಯಮಯ ಕಾರ್ಯಕ್ರಮಗಳು

ಉಜಿರೆ: ಕಳೆದ ನೂರು ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜ್ಞಾನದಾಸೋಹದ ಮೂಲಕ ಸಾವಿರಾರು ಮಂದಿ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಿ ಸಮಾಜಕ್ಕೆ ಅರ್ಪಿಸಿದ ಉಜಿರೆಯ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ವರ್ಷವಿಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನ ನಾಗರಿಕರು ಸಮಾರಂಭಕ್ಕೆ ಸಕ್ರಿಯ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಶತಮಾನೋತ್ಸವ ಲಾಂಛನವನ್ನೂ ಅನಾವರಣಗೊಳಿಸಿದರು. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ತಮ್ಮ ಪ್ರಾಥಮಿಕ ಶಾಲಾದಿನಗಳ ಸಿಹಿ-ಕಹಿ ಅನುಭವಗಳನ್ನು ಸ್ಮರಿಸಿಕೊಂಡು, ಪ್ರಾಥಮಿಕ ಶಾಲಾ ಶಿಕ್ಷಕರು ನೀಡಿದ ಮಾರ್ಗದರ್ಶನ, ಕಲಿಸಿದ ಶಿಸ್ತು, ಸಂಸ್ಕಾರ ತಮ್ಮ ಬದುಕಿಗೆ ದಾರಿದೀಪವಾಗಿದೆ. ದೇವಪ್ಪ ಗೌಡ ಮೇಸ್ಟ್ರು ಕಲಿಸಿದ ನಾಟಕದ ಅಭಿನಯ, ಕಮಲಾ ಟೀಚರ್ ಹೇಳಿಕೊಟ್ಟ ಸಂಸ್ಕಾರ, ತರಗತಿಯಲ್ಲಿ ಮಕ್ಕಳ ತುಂಟಾಟಕ್ಕೆ ನೀಡಿದ ಬೆತ್ತದ ಪೆಟ್ಟು, ಹುಡುಗಿಯರ ಮಧ್ಯೆ ತಪ್ಪು ಮಾಡಿದ ಹುಡುಗರನ್ನು ಕುಳಿತುಕೊಳ್ಳಿಸಿದ ಪ್ರಕರಣವನ್ನು ಸ್ಮರಿಸಿಕೊಂಡರು. ಶಾಲಾ ವಠಾರದಲ್ಲಿ ತಿಂದ ಐಸ್‌ಕ್ಯಾಂಡಿ, ಅಕ್ರೋಟ್, ಹಣ್ಣು-ಹಂಪಲುಗಳ ಸವಿಯ ಸೊಗಡನ್ನು ಧನ್ಯತೆಯಿಂದ ನೆನಪಿಸಿಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಶುಭಹಾರೈಸಿ ಧರ್ಮಸ್ಥಳದಿಂದ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಕಾರ, ಪ್ರೋತ್ಸಾಹವನ್ನು ಕೃತಜ್ಞತೆಯಿಂದ ಸ್ಮರಿಸಿದರು. ಅಧ್ಯಕ್ಷತೆ ವಹಿಸಿದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್‌ಕೃಷ್ಣ ಪಡ್ವೆಟ್ನಾಯ ಮಾತನಾಡಿ, ವರ್ಷವಿಡಿ ತಿಂಗಳಿಗೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಿಸಿದರು. ಶತಮಾನೋತ್ಸವ ಸಮಿತಿಯ ಪ್ರಧಾನಕಾರ್ಯದರ್ಶಿ ಅಬೂಬಕ್ಕರ್ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣನಾಯ್ಕ ಧನ್ಯವಾದವಿತ್ತರು. ನಿವೃತ್ತ ಮುಖ್ಯೋಪಾಧ್ಯಾಯ ಬಿ. ಸೋಮಶೇಖರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಜ. 11, 12: ಮಂಗಳೂರಿನಲ್ಲಿ ಬೀಚ್ ಉತ್ಸವ

Article Image

ಜ. 11, 12: ಮಂಗಳೂರಿನಲ್ಲಿ ಬೀಚ್ ಉತ್ಸವ

ಮಂಗಳೂರು, ಜ.6: ಕರಾವಳಿ ಉತ್ಸವದ ಅಂಗವಾಗಿ ನಡೆಯುವ ಬಹುನಿರೀಕ್ಷಿತ ಬೀಚ್ ಉತ್ಸವವು ಜ. 11 ಮತ್ತು 12ರಂದು ಪಣಂಬೂರು ಸಮೀಪದ ತಣ್ಣೀರುಬಾವಿ ಬೀಚ್‌ನಲ್ಲಿ ನಡೆಯಲಿದೆ. ರೋಹನ್ ಕಾರ್ಪೊರೇಷನ್‌ ಸಹಯೋಗದೊಂದಿಗೆ ನಡೆಯುವ ಬೀಚ್ ಉತ್ಸವದಲ್ಲಿ ಎರಡು ದಿನಗಳ ಕಾಲ ಆಕರ್ಷಕ ಸಂಗೀತ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಜ. 11ರಂದು ಸಂಜೆ 6 ಗಂಟೆಗೆ ನೃತ್ಯೋತ್ಸವ, 7.30ಕ್ಕೆ ಕದ್ರಿ ಮಣಿಕಾಂತ್ ಲೈವ್ ನಡೆಯಲಿದೆ. ಜ. 12ರಂದು ಬೆಳಗ್ಗೆ 5.30ಕ್ಕೆ ಯೋಗ, 6.30ಕ್ಕೆ ಉದಯರಾಗ, 9ಕ್ಕೆ ಜಲ ಕ್ರೀಡೆ, 9:30ಕ್ಕೆ ಮರಳು ಶಿಲ್ಪ ಸ್ಪರ್ಧೆ, 5.30ಕ್ಕೆ ನೃತ್ಯೋತ್ಸವ, 6.30ಕ್ಕೆ ಸಮಾರೋಪ ಸಮಾರಂಭ, 7.30 ರಘು ದೀಕ್ಷಿತ್ ಪ್ರಾಜೆಕ್ಟ್ ಲೈವ್ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಧರ್ಮಸ್ಥಳದಲ್ಲಿ ಇಂದು ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ಉದ್ಘಾಟನೆ

Article Image

ಧರ್ಮಸ್ಥಳದಲ್ಲಿ ಇಂದು ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ಉದ್ಘಾಟನೆ

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ, ಸರ್ವಧರ್ಮ ಸಮನ್ವಯ ಕ್ಷೇತ್ರವೆಂದೇ ಚಿರಪರಿಚಿತವಾಗಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ನಿರ್ಮಾಣಗೊಂಡಿದ್ದು ಇಂದು ಮಂಗಳವಾರ ಅಪರಾಹ್ನ ಎರಡು ಗಂಟೆಗೆ ಮಾನ್ಯ ಜಗದೀಪ್ ಧನ್‌ಕರ್ ಉದ್ಘಾಟಿಸುವರು. ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಡಾ. ಸುದೇಶ್ ಧನ್‌ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾನ್ಯ ದಿನೇಶ್ ಗುಂಡೂರಾವ್, ಹೇಮಾವತಿ ವೀ. ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸನ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಸಕ್ತ ವರ್ಷದ ಜ್ಞಾನದೀಪ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಎಸ್.ಎಸ್. ತಿಳಿಸಿದ್ದಾರೆ. ವಿಶೇಷ ಸೌಲಭ್ಯಗಳು: 2,75,177 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ “ಶ್ರೀ ಸಾನ್ನಿಧ್ಯ” ಸರತಿಸಾಲಿನ ಸಂಕೀರ್ಣ ಎರಡು ಅಂತಸ್ತುಗಳನ್ನು ಹೊಂದಿದ್ದು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತಾದಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಹತ್ತು ಸಾವಿರ ಜನರಿಗೆ ಆರಾಮದಾಯಕ ಆಸನ ವ್ಯವಸ್ಥೆ, ವೃದ್ಧರು, ಅಂಗವಿಕಲರು ಮತ್ತು ಮಕ್ಕಳ ಆರೈಕೆ ಕೇಂದ್ರ, ವೈದ್ಯಕೀಯ ನೆರವು, ಶೌಚಾಲಯ, ಉಪಾಹಾರ ಸೌಲಭ್ಯ, ದೂರದರ್ಶನ ಸಹಿತ ಹವಾನಿಯಂತ್ರಿತ ಸೌಲಭ್ಯ ಕಲ್ಪಿಸಲಾಗಿದೆ. ದರ್ಶನದ ಸಮಯದಲ್ಲಿ ವಿವಿಧ ಸೇವೆಗಳ ಮಾಹಿತಿ ಪಡೆಯಲು ಡಿಜಿಟಲ್ ತಂತ್ರಜ್ಞಾನ ಅಳವಡಿಸಲಾಗಿದೆ. ಕಟ್ಟಡಕ್ಕೆ ಸಂಪೂರ್ಣ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿದ್ದು, ಮರುಬಳಕೆಯ ಸೋಲಾರ್ ಇಂಧನ ಅಳವಡಿಸಲಾಗಿದೆ. ಪ್ರತಿ ಭವನದಲ್ಲಿ 800 ಮಂದಿ ತಂಗಲು ಅವಕಾಶವಿರುವ 16 ವಿಶಾಲ ಭವನಗಳು “ಶ್ರೀ ಸಾನ್ನಿಧ್ಯ”ದಲ್ಲಿವೆ. ಅಲ್ಲಲ್ಲಿ ಸೂಚನಾ ಫಲಕಗಳು ಹಾಗೂ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ. ಸಂಕೀರ್ಣದ ಪ್ರವೇಶದ್ವಾರದ ಎದುರು ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಬಿಂಬಿಸುವ ಆಕರ್ಷಕ ಕಲಾಕೃತಿಗಳು ಕಣ್ಮನ ಸೆಳೆಯುತ್ತವೆ. ದೇವರ ದರ್ಶನಕ್ಕೆ ಪ್ರಸ್ತುತ ಇರುವ ಸರತಿಸಾಲಿನ ವ್ಯವಸ್ಥೆಯನ್ನೂ ಕೆಲವು ಸುಧಾರಣೆಗಳೊಂದಿಗೆ ಮುಂದುವರಿಸಲಾಗುವುದು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

ರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಅಪ್ರಕಟಿತ ನಾಟಕ ಕೃತಿ ಆಹ್ವಾನ

Article Image

ರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಅಪ್ರಕಟಿತ ನಾಟಕ ಕೃತಿ ಆಹ್ವಾನ

ಮಂಗಳೂರು: ತುಳುಕೂಟ ಕುಡ್ಲ ನಡೆಸುವ ರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಪ್ರÀಕಟಿತ ಸ್ವತಂತ್ರ ನಾಟಕ ಕೃತಿಗಳನ್ನು ಆಹ್ವಾನಿಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಕೊಡಮಾಡುವ ರತ್ನವರ್ಮ ಹೆಗ್ಗಡೆ ಪ್ರಶಸ್ತಿಯನ್ನು ಕುಡ್ಲದ ತುಳುಕೂಟದ ಮೂಲಕ ಕಳೆದ 45 ವರ್ಷಗಳಿಂದ ಪ್ರದಾನಿಸಲಾಗುತ್ತದೆ. ಎ 4 ಹಾಳೆಯಲ್ಲಿ 60-70 ಪುಟಗಳೊಳಗೆ ಕೃತಿ ಇರಬೇಕು. ಹಾಳೆಯ ಒಂದೇ ಬದಿಯಲ್ಲಿ ಇರಬೇಕು. ನಾಟಕ ಸ್ವತಂತ್ರ ಕೃತಿಯಾಗಿರಬೇಕು. 2025ರ ಮಕರ ಸಂಕ್ರಾಂತಿಯವರೆಗೆ ಪ್ರದರ್ಶನಗೊಳ್ಳಬಾರದು. ಪೌರಾಣಿಕ/ಚಾರಿತ್ರಿಕ/ಸಾಮಾಜಿಕ/ ಹೀಗೆ ಯಾವ ಪ್ರಕಾರವೂ ಆಗುತ್ತದೆ. ಭಾಷಾಂತರಗೊಂಡ /ಆಧಾರಿತ ಕೃತಿ ನಿರಾಕರಿಸಲಾಗುವುದು. ಲೇಖಕರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು. ಸ್ವತಂತ್ರ ಕೃತಿಯೆಂದು ಸ್ವಯಂಘೋಷಿತ ಪ್ರಮಾಣಪತ್ರ ಇರಬೇಕು. ಹತ್ತು ಬಾರಿ ಪ್ರಶಸ್ತಿಯನ್ನು ಪಡೆದವರು ಸ್ಪರ್ಧೆಗೆ ಅನರ್ಹರಾಗುತ್ತಾರೆ. ನಾಟಕ ಕೃತಿಗಳನ್ನು ಜ.15ರೊಳಗೆ ಕಳುಹಿಸಬೇಕು. ಬಿಸು ಪರ್ಬದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೃತಿಗಳನ್ನು ವರ್ಕಾಡಿ ರವಿ ಅಲೆವೂರಾಯ, ಸರಯೂ ಮನೆ, ಅಂಚೆ: ಅಶೋಕ ನಗರ, ಕೋಡಿಕಲ್, ಮಂಗಳೂರು-06 ವಿಳಾಸಕ್ಕೆ ಕಳುಹಿಸಬೇಕು ಎಂದು ತುಳುಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ ತಿಳಿಸಿದ್ದಾರೆ.

ಇಂದಿನಿಂದ ಪೃಥ್ವಿ ಜ್ಯುವೆಲ್ಸ್ ನ ಪ್ರದರ್ಶನ ಮತ್ತು ಮಾರಾಟ

Article Image

ಇಂದಿನಿಂದ ಪೃಥ್ವಿ ಜ್ಯುವೆಲ್ಸ್ ನ ಪ್ರದರ್ಶನ ಮತ್ತು ಮಾರಾಟ

ಪೃಥ್ವಿ ಜ್ಯುವೆಲ್ಸ್ ನ ಶಾಖೆಯಾದ ಮೂಡುಬಿದಿರೆಯಲ್ಲಿ ತೃತೀಯ ಬಾರಿಗೆ ಚಿನ್ನ ಬೆಳ್ಳಿ ಹಾಗೂ ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟವು ಸಮಾಜ ಮಂದಿರ ಸಭಾ ಇಲ್ಲಿ ಇಂದಿನಿಂದ (ಡಿ. 13) 16ರವರೆಗೆ ನಡೆಯಲಿದೆ. ವಿ.ಸೂ. ಉಚಿತ ಪ್ರವೇಶವಾಗಿರುತ್ತದೆ. ಹಳೆ ಚಿನ್ನದ ವಿನಿಮಯ ಮೇಲೆ 0% ಕಡಿತವಿರುತ್ತದೆ. ಕರಾವಳಿ, ಕೊಡಗು, ಮೈಸೂರು ಶೈಲಿಯ ಆಭರಣಗಳು ಹಾಗೂ ಅದ್ಭುತ ಶ್ರೇಣಿಯ ಸಾಂಪ್ರದಾಯಿಕ ಮತ್ತು ಸಮಕಾಲೀನ ವಿನ್ಯಾಸದ ಚಿನ್ನ, ಬೆಳ್ಳಿ, ವಜ್ರ ಮತ್ತು ಅಮೂಲ್ಯ ರತ್ನಾಭರಣಗಳು ಲಭ್ಯ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಧರ್ಮಸ್ಥಳ ಲಕ್ಷದೀಪೋತ್ಸವ: ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

Article Image

ಧರ್ಮಸ್ಥಳ ಲಕ್ಷದೀಪೋತ್ಸವ: ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

ಉಜಿರೆ: ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್‌ನಲ್ಲಿರುವ ಯೂನಿಸೆಫ್ ಕಾರ್ಯಾಲಯದ ಮುಖ್ಯಸ್ಥ ಡಾ. ಝೆಲಾಲೆಮ್ ಬಿರಹಾನು ಟಾಪ್ಸಿ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಪ್ರೌಢಶಾಲಾ ವಠಾರದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾ ಸಬಲೀಕರಣ, ಆರ್ಥಿಕ ಒಳಗೊಳ್ಳುವಿಕೆ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆ, “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಅಮೂಲ್ಯ ಸೇವೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಎಲ್ಲರ ಮನೆಗಳನ್ನು ಹಾಗೂ ಮನಗಳನ್ನು ಬೆಳಗಿಸುವ ಪವಿತ್ರ ಸಮಾರಂಭವಾಗಿದೆ. ಸರ್ವಧರ್ಮಿಯರೂ ಶ್ರದ್ಧಾ-ಭಕ್ತಿಯಿಂದ ದೇವರ ದರ್ಶನ ಪಡೆದು, ಸೇವೆ ಮಾಡಿ ಮಾನಸಿಕ ಶಾಂತಿ, ನೆಮ್ಮದಿ ಹೊಂದುತ್ತಾರೆ. ಲೌಕಿಕ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಾರೆ. ಪ್ರತಿವರ್ಷವೂ ಲಕ್ಷದೀಪೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರೂ ಇದ್ದಾರೆ. ಮನೋರಂಜನಾ ಕಾರ್ಯಕ್ರಮಗಳು, ಸರ್ವಧರ್ಮಸಮ್ಮೇಳನ ಮತ್ತು ಸಾಹಿತ್ಯಸಮ್ಮೇಳನ, ವಸ್ತುಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು, ಮಂಜೂಷಾ ವಸ್ತುಸಂಗ್ರಹಾಲಯ, ಕಾರ್‌ಮ್ಯೂಸಿಯಂ ಮೊದಲಾದವುಗಳನ್ನು ವೀಕ್ಷಿಸಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಾರೆ. ವಸ್ತುಪ್ರದರ್ಶನದಲ್ಲಿರುವ ಮಳಿಗೆಗಳು ಎಲ್ಲಾ ವರ್ಗದ ಪ್ರೇಕ್ಷಕರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನ ನೀಡುತ್ತವೆ. ಸರ್ಕಾರದ ಮಳಿಗೆಗಳು ವಿವಿಧ ಯೋಜನೆಗಳ ಮಾಹಿತಿಯನ್ನೂ ಕೊಡುತ್ತವೆ. ಮಾಹಿತಿಯ ಕಣಜ: ವಸ್ತುಪ್ರದರ್ಶನ: ಧರ್ಮಸ್ಥಳದಲ್ಲಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತುಪ್ರದರ್ಶನದಲ್ಲಿ 350ಕ್ಕೂ ಮಿಕ್ಕಿ ಮಳಿಗೆಗಳಿದ್ದು, ಅಪೂರ್ವ ಮಾಹಿತಿ, ಮಾರ್ಗದರ್ಶನದ ಕಣಜವಾಗಿದೆ. ಕೃಷಿ, ಹೈನುಗಾರಿಕೆ, ಬ್ಯಾಂಕಿಂಗ್, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಹಾಗೂ ಮಹಿಳಾ ಕಲ್ಯಾಣ ಇಲಾಖೆ, ಜೀವವಿಮೆ, ಗ್ರಾಮಾಭಿವೃಧ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಡಿಕೆ ಹಾಳೆತಟ್ಟೆ ತಯಾರಿ, ಮಡಿಕೆ ತಯಾರಿ, ಗ್ರಾಮೀಣ ಕರಕುಶಲ ಕಲೆಗಳು – ಇತ್ಯಾದಿ ವೈವಿಧ್ಯಮಯ ಮಳಿಗೆಗಳು ಪ್ರೇಕ್ಷಕರನ್ನು ಆಕರ್ಷಿಸುತ್ತಿವೆ. ನ. 30ರ ವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ವಸ್ತುಪ್ರದರ್ಶನ ವೀಕ್ಷಣೆಗೆ ಉಚಿತ ಅವಕಾಶವಿದೆ. ಪ್ರತಿದಿನ ಸಂಜೆ ಆರು ಗಂಟೆಯಿಂದ ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಕರ್ಣಾಟಕ ಬ್ಯಾಂಕಿನ ಮಹಾಪ್ರಬಂಧಕ ರಾಜಾ, ಬಿ.ಯಸ್., ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ಪಿ. ವಿಶ್ವನಾಥ್, ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ. ಮಹೇಶ್‌ಕುಮಾರ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್, “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಎನ್. ಜನಾರ್ದನ್ ಮತ್ತು ಎಸ್.ಡಿ.ಎಂ. ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಜನಾರ್ದನ್ ಉಪಸ್ಥಿತರಿದ್ದರು.

ನ. 26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Article Image

ನ. 26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

ಬೆಳ್ತಂಗಡಿ, ನ.21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ 30ರವರೆಗೆ ಜರಗಲಿದೆ. ನ. 26ರಂದು 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಮಾಜಿ ವಿ.ಪ.ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಅಧಿವೇಶನ ನಡೆಯಲಿದ್ದು ರಾಜ್ಯ ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು. ನ.28ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5.30ರಿಂದ 7 ಗಂಟೆ ವರೆಗೆ ನಾಗಸ್ವರ ವಾದನ, 7ರಿಂದ 8ರ ವರೆಗೆ ಸಾತ್ವಿಕ ಸಂಗೀತ, ಬಳಿಕ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ. ನ. 29ರಂದು ಸರ್ವಧರ್ಮ ಸಮ್ಮೇಳನ ಅಮೃತವರ್ಷಿಣಿ ಸಭಾಭವನದಲ್ಲಿ ನ.29ರಂದು ಸಂಜೆ 5 ಗಂಟೆಯಿಂದ ಸರ್ವಧರ್ಮ ಸಮ್ಮೇಳನದ 92ನೇ ಗೃಹ ಸಚಿವ ಡಾ| ಜಿ. ಪರಮೇಶ್ವರ ಉದ್ಘಾಟಿಸುವರು. ಬೆಂಗಳೂರು ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬಳಿಕ ಸಂಶೋಧಕ ಡಾ| ಜಿ. ಬಿ. ಹರೀಶ, ಡಾ। ಜೋಸೆಫ್ ಎನ್.ಎಂ., ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಹಾಗೂ 8.30ರಿಂದ ಭರತನಾಟ್ಯ ನೆರವೇರಲಿದೆ. ನ. 30ರಂದು ಸಾಹಿತ್ಯ ಸಮ್ಮೇಳನ ನ.30ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನೀ ಡಾ। ರಾ. ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ| ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ| ಪ್ರಮೀಳಾ ಮಾಧವ, ಡಾ| ಬಿ.ವಿ.ವಸಂತ ಕುಮಾರ್, ಪ್ರೋ| ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ರಾತ್ರಿ 8.30ರಿಂದ ಶ್ರೀ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮವಿದೆ. ಪ್ರತಿದಿನ ಸಂಜೆ 6.30ರಿಂದ ರಾತ್ರಿ 11ರವರೆಗೆ ವಸ್ತು ಪ್ರದರ್ಶನ ಮಂಟಪ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ-ಸಂಗೀತ ಹಬ್ಬನೆರವೇರಲಿದೆ. ಲಕ್ಷದೀಪೋತ್ಸವ ಉತ್ಸವಗಳು ಲಕ್ಷದೀಪೋತ್ಸವ ಪ್ರಯುಕ್ತ ಮಂಜುನಾಥ ಸ್ವಾಮಿಗೆ ನ.26ರಂದು ಹೊಸಕಟ್ಟೆ ಉತ್ಸವ, 27ರಂದು ಕೆರೆ ಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ ಉತ್ಸವ, 30ರಂದು ಗೌರಿಮಾರು ಕಟ್ಟೆ ಉತ್ಸವ (ಲಕ್ಷದೀಪೋತ್ಸವ). ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ ನ.26ರಿಂದ ಡಿ.1ರ ವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ನ.26ರಂದುಬೆಳಗ್ಗೆ 10.30ಕ್ಕೆಎಸ್ ಪಿಯತೀಶ್ ಎನ್.ಉದ್ಘಾಟಿಸಲಿರುವರು. ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿಕೈಗಾರಿಗಳಿಗೆ ಸಂಬಂಧಿಸಿದ 300ಕ್ಕೂ ಮಿಕ್ಕಿ ಮಳಿಗೆಗಳು ಇರಲಿವೆ. ಸಮವಸರಣ ಪೂಜೆ ಡಿ. 1ರಂದು ಸಂಜೆ 6.30ರಿಂದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ಈ ವೇಳೆ ಜಿನಗಾನೋತ್ಸವ ನಡೆಯಲಿದೆ. ಹೇಮಾವತಿ ವೀ. ಹೆಗ್ಗಡೆ, ಪ್ರೊ| ಎಸ್.ಪ್ರಭಾಕರ್, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ಸಹಿತ ಸಮಿತಿ ಸ್ವಾಗತ ಸಮಿತಿ ಪ್ರಮುಖರು ಉಪಸ್ಥಿತರಿರುವರು ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ

Article Image

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 26 ರಿಂದ 30ರ ವರೆಗೆ ನಡೆಯುತ್ತವೆ. ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. ಇಲ್ಲಿನ ವಿಶಿಷ್ಠವಾದ ನ್ಯಾಯದಾನ, ಆಣೆಮಾತು ತೀರ್ಮಾನದಿಂದ ಅನೇಕ ಕುಟುಂಬಗಳ ಸಾಂಸಾರಿಕ, ವ್ಯವಹಾರ ಸಮಸ್ಯೆಗಳು ಸುಲಲಿತವಾಗಿ, ಸೌಹಾರ್ದಯುತವಾಗಿ ಪರಿಹಾರವಾಗಿ ಎಲರೂ ಪ್ರೀತಿ-ವಿಶ್ವಾಸದಿಂದ ಸುಖ-ಶಾಂತಿಯ ಜೀವನ ನಡೆಸುತ್ತಿದ್ದಾರೆ. ಇಂದು ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ. ಮಂಗಳವಾರ ಅಪರಾಹ್ನ ಮೂರು ಗಂಟೆಗೆ ಇಪ್ಪತ್ತೆöÊದು ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 7 ಗಂಟೆಗೆ ಹೆಗ್ಗಡೆಯವರು ಅಮೃತವರ್ಷಿಣಿ ಸಭಾಭವನದಲ್ಲಿ ಭಕ್ತರಿಗೆ ಮಾರ್ಗದರ್ಶನ ನೀಡುವರು. ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ. ನ. 26 ರಿಂದ 30ರವರೆಗೆ ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವ, ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ. ಪ್ರತಿ ವರ್ಷದಂತೆ ಲಕ್ಷದೀಪೋತ್ಸವದ ದಿನ ಶನಿವಾರ ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಧರ್ಮಸ್ಥಳಕ್ಕೆ ಬರುತ್ತಾರೆ. ಕೆ.ಎಸ್.ಆರ್.ಟಿ.ಸಿ. ನಾಡಿನ ವಿವಿಧ ಊರುಗಳಿಂದ ವಿಶೆಷ ಬಸ್ ಸೌಲಭ್ಯ ಕಲ್ಪಿಸಿದೆ. ಹಲವು ಮಂದಿ ಭಕ್ತರು ಪಾದಯಾತ್ರೆಯಲ್ಲಿ ಬರುತ್ತಾರೆ.

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Article Image

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು. ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದ ಹೆಗ್ಗಡೆಯವರು ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಅಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಡಾ. ಹಂಪನಾ ನೇತೃತ್ವದಲ್ಲಿ 51ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದನ್ನು ಧನ್ಯತೆಯಿಂದ ಸ್ಮರಿಸಿದರು. ಕನ್ನಡ ಭುವನೇಶ್ವರಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದ ಹೆಗ್ಗಡೆಯವರು, ಕನ್ನಡ ಸಾಹಿತ್ಯ ಸಮ್ಮೇಳನವು ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಗೆ ಅಭಿಮಾನ, ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು. ಡಿ. ಹರ್ಷೇಂದ್ರ ಕುಮಾರ್, ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ (ರಿ) ಬಜಗೋಳಿ

Article Image

ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ (ರಿ) ಬಜಗೋಳಿ

ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ (ರಿ) ಬಜಗೋಳಿ ಇದರ ಆಶ್ರಯದಲ್ಲಿ ಅಹಿಂಸಾ ಗೋಶಾಲೆಯ ನಿರಾಶ್ರಿತ ಹಸುಗಳ ದತ್ತು ಸ್ವೀಕಾರ ಕಾರ್ಯಕ್ರಮ ಸಂಚಾರಿ ಪೆಟ್ ಆಂಬುಲೆನ್ಸ್ ಉದ್ಘಾಟನಾ ಸಮಾರಂಭ ಹಾಗೂ ಗೋ ಪೂಜೆ ಈ ಎಲ್ಲಾ ಕಾರ್ಯಕ್ರಮಗಳು ದಿನಾಂಕ 02-11-2024 ನೇ ಶನಿವಾರ ಸಾಯಂಕಾಲ ಗಂಟೆ 4.00ರಿಂದ 5.00ರ ತನಕ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ಸುಮ್ಮ ಬಂಡಶಾಲೆ ಬಜಗೋಳಿಯಲ್ಲಿ ನಡೆಯಲಿದೆ.

ಎಸ್.ಡಿ.ಎಂ ಘಟಿಕೋತ್ಸವ

Article Image

ಎಸ್.ಡಿ.ಎಂ ಘಟಿಕೋತ್ಸವ

ವಿಜ್ಞಾನ, ತಂತ್ರಜ್ಞಾನ, ಮಾನವಿಕ ಸೇರಿದಂತೆ ವಿವಿಧ ಜ್ಞಾನಶಿಸ್ತುಗಳಿಗೆ ಸಂಬಂಧಿಸಿದ ಆಳವಾದ ಜ್ಞಾನ ಆಧಾರಿತ ತಾರ್ಕಿಕ ಚಿಂತನೆಯ ಬಲದಲ್ಲಿ ದೇಶದ ರಚನಾತ್ಮಕ ಬೆಳವಣಿಗೆಯ ಸಂಪನ್ಮೂಲಗಳಾಗಿ ರೂಪುಗೊಳ್ಳುವುದರ ಕಡೆಗೆ ವಿದ್ಯಾರ್ಥಿ ಸಮೂಹ ಗಮನ ಕೇಂದ್ರೀಕರಿಸಬೇಕು ಎಂದು ಎಸ್.ಡಿ ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ,ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಹಡೆ ಅಭಿಪ್ರಾಯಪಟ್ಟರು. ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಎಸ್.ಡಿ.ಎಂ ಕಾಲೇಜು ಪದವಿ ಮತ್ತು ಸ್ನಾತಕೋತ್ತರ ಪದವೀಧರರು ಮತ್ತು ರ್ಯಾಂಕ್‌ ಮನ್ನಣೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲು ಶನಿವಾರ ಆಯೋಜಿತವಾಗಿದ್ದ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪದವೀಧರರಾದ ತಕ್ಷಣ ಕಲಲಿಕೆಯ ಯಾನ ನಿಲ್ಲುವುದಿಲ್ಲ. ಕಲಿಕೆಯ ಶ್ರದ್ಧೆ ಮತ್ತು ಜ್ಞಾನಾರ್ಜನೆಯ ಹೆಜ್ಜೆಗಳು ನಿರಂತರವಾಗಿರುತ್ತವೆ. ಇದನ್ನು ಅರ್ಥೈಸಿಕೊಂಡು ವಿವಿಧ ಕ್ಷೇತ್ರಗಳ ಕುರಿತು ವಿಸ್ತೃತ ಜ್ಞಾನ ಪಡೆದು ದೇಶಕ್ಕೆ ಬೇಕಾದ ರಚನಾತ್ಮಕ ಮೌಲಿಕ ಸಂಪನ್ಮೂಲಗಳಾಗಿ ಯುವಸಮೂಹ ರೂಪುಗೊಳ್ಳಬೇಕು. ಹಾಗಾದಾಗ ಮಾತ್ರ ದೇಶದ ಪ್ರಗತಿಯ ಹೆಜ್ಜೆಗಳಿಗೆ ವೇಗ ದಕ್ಕುತ್ತದೆ ಎಂದರು. ಹಿಂದಿನ ಶಿಕ್ಷಣ ವ್ಯವಸ್ಥೆಗೆ ಹೋಲಿಸಿದರೆ ಇದೀಗ ಕಲಿಕೆಯ ಸಾಧ್ಯತೆಗಳು ವಿಸ್ತೃತವಾಗಿವೆ. ತಂತ್ರಜ್ಞಾನ ಕಲಿಕೆಗೆ ಹೊಸ ಆಯಾಮವನ್ನು ಒದಗಿಸಿಕೊಟ್ಟಿದೆ. ಈ ಬಗೆಯ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವ್ಯಕ್ತಿಗತ ಬೆಳವಣಿಗೆಗೆ ಆದ್ಯತೆ ನೀಡಬೇಕು. ಆ ಮೂಲಕ ರಾಷ್ಟ್ರೀಯ ಪ್ರಗತಿಯ ನವಮನ್ವಂತರ ಸೃಷ್ಟಿಸಬೇಕು. ಆ ಮೂಲಕ ಪ್ರತಿಷ್ಠಿತ ಸಾಧನೆಯ ಮನ್ನಣೆ ಸಾಧ್ಯವಾಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಘಟಿಕೋತ್ಸವ ಭಾಷಣ ಪ್ರಸ್ತುತಪಡಿಸಿದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಉಪಾಧ್ಯಕ್ಷ ಪ್ರೊ.ಎಸ್.ಆರ್.ನಿರಂಜನ ಅವರು ಮುಂದಿನ ಮೂರು ದಶಕಗಳ ಅವಧಿಯಲ್ಲಿ ಕೌಶಲ್ಯಾಧಾರಿತ ಶೈಕ್ಷಣಿಕ, ಬೌದ್ಧಿಕ ಸಾಮರ್ಥ್ಯವೇ ನಿರ್ಣಾಯಕವಾಗಲಿದೆ ಎಂದರು. ಕೌಶಲ್ಯಾಧಾರಿತ ಶೈಕ್ಷಣಿಕ ಮತ್ತು ಬೌದ್ಧಿಕ ಸಾಮರ್ಥ್ಯದೊಂದಿಗೆ ವೃತ್ತಿಪರ ಅವಕಾಶಗಳನ್ನು ಪಡೆದು ಆ ಮೂಲಕ ಅಭಿವೃದ್ಧಿಯ ಹೆಜ್ಜೆಗಳಿಗೆ ಸಮಗ್ರತೆಯ ಸ್ಪರ್ಶ ನೀಡುವುದರ ಕಡೆಗೆ ಪದವೀಧರ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದರು. ತಂತ್ರಜ್ಞಾನವು ಅಭಿವೃದ್ಧಿಗೊಂಡ ತಕ್ಷಣವೇ ವಾಣಿಜ್ಯೀಕೃತಗೊಳ್ಳಬಾರದು. ಶಾಶ್ವತವಾದ ಸಾಮಾಜಿಕ ಸದುಪಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಹೆಚ್ಚು ಸಂಶೋಧನೆ ನಡೆಯಬೇಕು. ತದನಂತರದ ದಿನಗಳಲ್ಲಿ ವಾಣಿಜ್ಯಿಕ ಪ್ರಯೋಜನಕ್ಕೆ ತಂತ್ರಜ್ಞಾನವನ್ನು ಅನ್ವಯಿಸಬೇಕು. ಅದಕ್ಕಿಂತ ಮುಂಚೆ ಬೌದ್ಧಿಕ, ಶೈಕ್ಷಣಿಕ ಸಾಮರ್ಥ್ಯದ ಆಧಾರದ ಕೌಶಲ್ಯಯುತ ಸೂತ್ರಗಳನ್ನು ಅನ್ವಯಿಸಿ ಸಾಮಾಜಿಕ ಪ್ರಯೋಜನಕ್ಕೆ ಹೆಚ್ಚು ಒತ್ತು ನೀಡಬೇಕು. ಹಾಗಾದಾಗ ಮಾತ್ರ ವಿಜ್ಞಾನ, ತಂತ್ರಜ್ಞಾನವು ಸಮಾಜಪರವಾಗುವುದಕ್ಕೆ ಸಾಧ್ಯ ಎಂದರು. ಪದವೀಧರರು ಮತ್ತು ರ್ಯಾಂಕ್‌ ಮನ್ನಣೆ ಪಡೆದ ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಪಿ.ಎಲ್‌ ಧರ್ಮ ಅವರು ಪದವೀಧರರೆಲ್ಲರೂ ವಿದೇಶಕ್ಕೆ ಹೋಗುವ ಬದಲು ಭಾರತದಲ್ಲಿಯೇ ಉಳಿದುಕೊಂಡು ಸಾಧನೆಯ ಹೆಜ್ಜೆಗಳನ್ನು ಕ್ರಮಿಸಬೇಕು ಎಂದರು.. ಭಾರತದ ಬೆಳವಣಿಗಗೆ ಬೇಕಾದ ಸುಸ್ಥಿರ ಪರಿಕಲ್ಪನೆಯ ಅಭಿವೃದ್ಧಿಯ ಆಲೋಚನಾಕ್ರಮಗಳನ್ನು ಹೊಳೆಸಿಕೊಂಡು ಮುನ್ನಡೆಯುವ ದೃಢಸಂಕಲ್ಪದಿಂದ ಮಹತ್ವದ ಕೊಡುಗೆಗಳನ್ನು ಕೊಡಲು ಸಾಧ್ಯ ಎಂದು ಹೇಳಿದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರಕುಮಾರ್‌, ಡಾ.ಸತೀಶ್ವಂದ್ರ ಎಸ್‌, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್‌ ಡಾ.ವಿಶ್ವನಾಥ ಪಿ., ಉಪ ಪ್ರಾಂಶುಪಾಲರಾದ ಡಾ.ಕೆ.ಎನ್.ಶಶಿಶೇಖರ ಕಾಕತ್ಕರ್‌ ಉಪಸ್ಥಿತರಿದ್ದರು. ಡಾ. ನೆಫೀಸತ್‌ ಪಿ, ಸ್ವಾತಿ ಬಿ. ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಸ್ವಾಗತಿಸಿದರು. ಆಡಳಿತಾತ್ಮಕ ಕುಲಸಚಿವರಾದ ಡಾ.ಶಲೀಪ್‌ ವಂದಿಸಿದರು. ಕಾರ್ಯಕ್ರಮದಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ರ್ಯಾಂಕ್‌ಗಳಿಸಿದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಲಾಯಿತು

ಸಂಶೋಧನೆ ಶ್ರಮದ ಫಲ: ಡಾ ಭಟ್

Article Image

ಸಂಶೋಧನೆ ಶ್ರಮದ ಫಲ: ಡಾ ಭಟ್

ಮೂಡುಬಿದಿರೆ: ಸಂಶೋಧನೆ ಮಾನಸಿಕ ಸದೃಢತೆ, ಶ್ರಮ, ಅಧ್ಯಯನ, ತರ್ಕ, ತಾರ್ಕಿಕ ಚಿಂತನೆಗಳ ಒಟ್ಟು ಫಲ ಎಂದು ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಚರ‍್ಯ ಡಾ ಅಜಕ್ಕಳ ಗಿರೀಶ್ ಭಟ್ ನುಡಿದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಫೋರಮ್‌ವತಿಯಿಂದ ಗುರುವಾರ ಪಿಜಿ ಸೆಮಿನಾರ್ ಹಾಲ್ ನಲ್ಲಿ ನಡೆದ ಅತಿಥಿ ಉಪನ್ಯಾಸ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಶೋಧನ ಕ್ಷೇತ್ರಕ್ಕೆ ಬರುವ ಮೊದಲು ವಿದ್ಯಾರ್ಥಿಗಳು ಓದು, ಚರ್ಚೆ ಮತ್ತು ಬೌದ್ಧಿಕ ಚಿಂತನೆಯ ಮೂಲಕ ಮಾನಸಿಕವಾಗಿ ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಬೇಕು. ವಿಜ್ಞಾನ ಸಂಶೋಧನೆಯು ತಂತ್ರಜ್ಞಾನ ಮತ್ತು ನಾವೀನ್ಯತೆಗೆ ಕಾರಣವಾದರೆ, ಸಮಾಜ ವಿಜ್ಞಾನದ ಸಂಶೋಧನೆಗಳು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದರ ಜೊತೆಗೆ ನೀತಿ ನಿಯಮಗಳ ಮೇಲೆ ಪ್ರಭಾವ ಬೀರಿ ಆಡಳಿತ, ಪರಿಸರ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಬದಲಾವಣೆ ತರಬಲ್ಲದು ಎಂದರು. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ಉಕ್ತಿಯ ತಾತ್ಪರ್ಯ ಪ್ರಶ್ನೆ ಮಾಡಿ ಉತ್ತರ ತಿಳಿಯುವುದಾಗಿದೆಯೇ ಹೊರತು ಗುಲಾಮನಾಗಿರುವುದಲ್ಲ. ಯಶಸ್ಸಿಗೆ ಭಾಷೆ ಮುಖ್ಯ. ವಿಷಯದ ಬಗ್ಗೆ ಜ್ಞಾನವಿದ್ದರು, ಇನ್ನೊಬ್ಬರಿಗೆ ತಿಳಿಸಲು ಭಾಷೆ ಮುಖ್ಯ ಎಂದು ತಿಳಿಸಿದರು. ಕಾಲೇಜಿನ ಆಡಳಿತ ಅಧಿಕಾರಿ ಪ್ರೊ.ಬಾಲಕೃಷ್ಣ ಶೆಟ್ಟಿ ಮಾತನಾಡಿ ನಮ್ಮ ಜೀವನದ ಸಾರ್ಥಕತೆಯ ಕ್ಷಣ ಇನ್ನೊಬ್ಬರ ಮುಖದಲ್ಲಿ ನಗು ಮೂಡಿಸಿದಾಗ ಪಡೆಯಲು ಸಾಧ್ಯ ಎಂದರು. ಪ್ರಾಚರ‍್ಯ ಡಾ ಕುರಿಯನ್ ಮಾತನಾಡಿ, ಸಮಾಜ ಕರ‍್ಯ ವಿಭಾಗದ ಫೋರಮ್ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲರನ್ನಾಗಿಡಲು ಸಾಧ್ಯ ಎಂದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ.ಮಧುಮಾಲ ಕೆ, ಫೊರಮ್ ಸಂಯೋಜಕ ಕೃಷ್ಣಮೂರ್ತಿ ಬಿ, ಸಮಾಜ ಕಾರ್ಯ ಫೊರಮ್‌ನ ಅಧ್ಯಕ್ಷ ಶ್ರೇಯಸ್ ಹೆಗ್ಡೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸ್ವಾತಿ ನಿರೂಪಿಸಿ. ಅತುಲ್ ಸ್ವಾಗತಿಸಿ, ಮಂಜುಶ್ರೀ ವಂದಿಸಿದರು.

2024-25ನೇ ಸಾಲಿನ ನರ್ಸಿಂಗ್ ವಿದ್ಯಾರ್ಥಿಗಳ ಹೊಸ ಬ್ಯಾಚ್‌ನ ಸ್ವಾಗತ ಕಾರ್ಯಕ್ರಮ

Article Image

2024-25ನೇ ಸಾಲಿನ ನರ್ಸಿಂಗ್ ವಿದ್ಯಾರ್ಥಿಗಳ ಹೊಸ ಬ್ಯಾಚ್‌ನ ಸ್ವಾಗತ ಕಾರ್ಯಕ್ರಮ

ಸತ್ತೂರು, ಧಾರವಾಡ: ಎಸ್.ಡಿ.ಎಂ. ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ 2024-25 ನೇ ಸಾಲಿನ ನರ್ಸಿಂಗ್ ವಿದ್ಯಾರ್ಥಿಗಳ ಹೊಸ ಬ್ಯಾಚ್‌ನ ಸ್ವಾಗತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸುಮಾರು 125 ಬಿ.ಎಸ್ಸಿ., ಎಂ.ಎಸ್ಸಿ. ಮತ್ತು ಜನರಲ್ ನರ್ಸಿಂಗ್ ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ ಕುಮಾರ್, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ: ನರ್ಸಿಂಗ್ ವೃತ್ತಿಯು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಉದಾತ್ತ ವೃತ್ತಿಯಾಗಿದೆ. ನರ್ಸಿಂಗ್ ಸೇವೆಯು ಪವಿತ್ರ ಮತ್ತು ಮಹತ್ವದ್ದಾಗಿರುವದರಿಂದ ನರ್ಸಿಂಗ್ ಸೇವೆಗೆ ಸೇರುವುದು ಬುದ್ಧಿವಂತ ವಿದ್ಯಾರ್ಥಿಗಳ ನಿರ್ಧಾರವಾಗಿದೆ. ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸೌಲಭ್ಯದೊಂದಿಗೆ ಸಮಗ್ರ ಅನುಭವವನ್ನು ನೀಡುತ್ತದೆ. ಹೊಸ ಜ್ಞಾನವನ್ನು ಪಡೆದುಕೊಳ್ಳುವಾಗ, ವೃತ್ತಿಗೆ ನಮ್ಮ ಬದ್ಧತೆಯು ಅಷ್ಟೇ ಮೌಲ್ಯವನ್ನು ಸೇರಿಸುತ್ತದೆ ಆರೋಗ್ಯ ಸಮಸ್ಯೆಗಳಿಗೆ ಕಾಳಜಿ ಮತ್ತು ಸಹಾನುಭೂತಿಯಿಂದ ಪರಿಹಾರ ನೀಡಲು ರೋಗಿಗಳ ಕರೆಗೆ ತಕ್ಷಣ ಪ್ರತಿಕ್ರೀಯಿಸಬೇಕು. ಯಶಸ್ವಿ ಆರೋಗ್ಯ ವೃತ್ತಿಪರರಾಗಲು ವೃತ್ತಿಯಲ್ಲಿ ಕಠಿಣ ಪರಿಶ್ರಮ ಮತ್ತು ನ್ಯಾಯ ಒದಗಿಸಬೇಕು. ಈ ಸಮಾರಂಭದಲ್ಲಿ ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗ್ಡೆ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ದೇಶಪಾಂಡೆ, ನರ್ಸಿಂಗ್ ಅಧೀಕ್ಷಕಿಯವರಾದ ಮಂಜುಳಾ ಕೆ.ಬಿ. ಮೊದಲಾದವರು ಉಪಸ್ಥಿತರಿದ್ದರು. ಡಾ. ನಾಗೇಶ ಅಜ್ಜವಾಡಿಮಠ ಅತಿಥಿಗಳನ್ನು ಸ್ವಾಗತಿಸಿದರು. ಡಾ. ತಿಲಕ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಮೆಟಿಲ್ಡಾ ಬಿಜಾಪುರ ವಂದನಾರ್ಪಣೆ ಸಲ್ಲಿಸಿದರು.

ಸಿರಿ ವಸ್ತು ಪ್ರದರ್ಶನ

Article Image

ಸಿರಿ ವಸ್ತು ಪ್ರದರ್ಶನ

ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ದಿನಾಂಕ 18 ಅಕ್ಟೋಬರ್, 2024 ರಂದು ಶ್ರೀ ಧರ್ಮಸ್ಥಳ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ವತಿಯಿಂದ ಖಾದಿ ಮತ್ತು ಕಾಟನ್ ಬಟ್ಟೆಗಳ ರಿಯಾಯತಿ ದರದಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಎಸ್.ಡಿಎಂ. ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಾಲತಾ ನಿರಂಜನ್, ವೈದ್ಯಕೀಯ ಉಪ ಅಧೀಕ್ಷಕರಾದ ಡಾ. ಮಖ್ದೂಮ ಕಿಲ್ಲೆದ್ದಾರ ಅವರು ದೀಪ ಬೆಳಗಿಸುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಿರಂಜನಕುಮಾರರವರು ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮೀಣ ಬಡ ಮಹಿಳೆಯರಿಗೆ ಅನುಕೂಲವಾಗುವಂತೆ ಮತ್ತು ಮಹಿಳಾ ಸಬಲೀಕರಣಗೊಳಿಸಲು ‘ಸಿರಿ’ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದರು ಮತ್ತು ಸಾರ್ವಜನಿಕರು ಹೆಚ್ಚು ಖಾದಿ ಮತ್ತು ಕಾಟನ್ ಬಟ್ಟೆಗಳನ್ನು ಉಪಯೋಗಿಸುವುದರಿಂದ ಆರೋಗ್ಯಕ್ಕೂ ಒಳ್ಳೆಯದು ಮತ್ತು ಗ್ರಾಮೀಣ ಬಡ ಮಹಿಳೆಯರಿಗೆ ಉತ್ತೇಜನ ನೀಡಿದಂತೆ ಆಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಸ್ತು ಪ್ರದರ್ಶನದ ವ್ಯವಸ್ಥಾಪಕರಾದ ನಾಗಕುಮಾರ ಜೈನರವರು ಮತ್ತು ಮಾರಾಟ ಮಳಿಗೆ ಪ್ರತಿನಿಧಿಯಾದಂತಹ ಮಲ್ಲಿಕಾರ್ಜುನ ಹೊಸಮನಿ ಮತ್ತಿತರರು ಉಪಸ್ಥಿತರಿದ್ದರು. ಈ ಮಾರಾಟ ಮಳಿಗೆಯು 18/10/2024 ರಿಂದ 31/10/2024 ರವರೆಗೆ ರಿಯಾಯಿತಿ ದರದಲ್ಲಿ ಲಭ್ಯವಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೇಳಿಕೊಳ್ಳಲಾಗಿದೆ.

ಡಾ. ರವೀಂದ್ರ ವಿಕ್ರಮ್ ಸಿಂಗ್ ಎಸ್.ಡಿ.ಎಂ. ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿಗಳೊಂದಿಗೆ ಸಂವಾದ

Article Image

ಡಾ. ರವೀಂದ್ರ ವಿಕ್ರಮ್ ಸಿಂಗ್ ಎಸ್.ಡಿ.ಎಂ. ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿಗಳೊಂದಿಗೆ ಸಂವಾದ

ಉಜಿರೆ: ರಸಾಯನಶಾಸ್ತ್ರ ಕ್ಷೇತ್ರದಲ್ಲಿ ತೀವ್ರಗತಿಯಲ್ಲಿ ಸಾಗುತ್ತಿರುವ ಸಂಶೋಧನೆಗಳು ವಿಶ್ವ ಆರೋಗ್ಯರಂಗದಲ್ಲಿ ಪರಿಣಾಮಕಾರಿ ಬದಲಾವಣೆಗಳನ್ನು ತರಲಿವೆ ಎಂದು ಬೆಂಗಳೂರಿನ ಸಿಗ್ಮಾ ಆಲ್ಡ್ರೀಚ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ. ರವೀಂದ್ರ ವಿಕ್ರಮ್ ಸಿಂಗ್ ಹೇಳಿದರು. ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಗುರುವಾರ ಮಾತನಾಡಿದರು. ಕೋವಿಡ್ ನಂತರದ ದಿನಗಳಲ್ಲಿ ಔಷಧ ಕ್ಷೇತ್ರದಲ್ಲಿ ನಿರಂತರವಾಗಿ ಪ್ರಯೋಗಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಇಲ್ಲಿ ಲಭ್ಯವಿರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಉದ್ಯೋಗ ಮಾರುಕಟ್ಟೆಯಲ್ಲಿ ಸ್ಥಾನ ಭದ್ರ ಪಡಿಸಿಕೊಳ್ಳಬಹುದು. ಸಂಶೋಧನಾ ಕ್ಷೇತ್ರ, ವೈದ್ಯಕೀಯ, ಶಿಕ್ಷಣ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯವಿದೆ ಎಂದರು. ರಸಾಯನಶಾಸ್ತ್ರವು ಮನುಕುಲಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದು, ವಿಶ್ವವನ್ನು ಕಾಡಿರುವ ಹಲವು ರೋಗಗಳಿಗೆ ಔಷಧಿ ಕಂಡುಹಿಡಿಯುವಲ್ಲಿ ವಿಜ್ಞಾನಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸ್ನಾತಕೊತ್ತರ ಕೇಂದ್ರದ ಡೀನ್ ಹಾಗೂ ವಿಭಾಗದ ಮುಖ್ಯಸ್ಥ ಡಾ. ವಿಶ್ವನಾಥ .ಪಿ, ವಿಭಾಗದ ಕಾಂಕೆಮ್ ಕಾರ್ಯದರ್ಶಿ ಡಾ. ನವೀನ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿ ಡಾ. ಸುಜಯ್ ಎಂ.ಎo ಹಾಗೂ ವಿಭಾಗದ ಎಲ್ಲ ಪ್ರಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಳಿಯ ಚಿನ್ನೋತ್ಸವ

Article Image

ಮುಳಿಯ ಚಿನ್ನೋತ್ಸವ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್‌ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಂಡಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ. 5 ಕಾರು ಗೆಲ್ಲುವ ಸುವರ್ಣವಕಾಶ: ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಮುಕ್ತ ಚೆಸ್ ಪಂದ್ಯಾವಳಿ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಮುಕ್ತ ಚೆಸ್ ಪಂದ್ಯಾವಳಿ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು "SDM CUP 2024" ಶೀರ್ಷಿಕೆಯ "ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ"ಯನ್ನು ಅಕ್ಟೋಬರ್ 2, 2024 ರಂದು (ಬುಧವಾರ) ಎಸ್.ಡಿ.ಎಂ. ಡೆಂಟಲ್ ಕಾಲೇಜಿನ ಪರೀಕ್ಷಾ ಹಾಲ್ (ಎರಡನೇ ಮಹಡಿ)ನಲ್ಲಿ ಆಯೋಜಿಸಲಾಗುತ್ತಿದೆ. ಈ ಪಂದ್ಯಾವಳಿಯು ದೇಶದಾದ್ಯಂತ ಗ್ರ್ಯಾಂಡ್ ಮಾಸ್ಟರ್‌ಗಳು ಮತ್ತು ಇತರ ಪ್ರತಿಷ್ಠಿತ ಚೆಸ್ ಆಟಗಾರರಿಂದ ಭಾಗವಹಿಸುವಿಕೆಯ ಗುರಿಯನ್ನು ಹೊಂದಿದೆ. ಎಸ್.ಡಿ.ಎಂ. ಕಪ್, ಚೆಸ್‌ನ ಅತ್ಯುನ್ನತ ಗುಣಮಟ್ಟವನ್ನು ಪ್ರದರ್ಶಿಸುವ ಪ್ರತಿಷ್ಠಿತ ಮತ್ತು ಹೆಚ್ಚು ಸ್ಪರ್ಧಾತ್ಮಕ ಕಾರ್ಯಕ್ರಮವಾಗಿದೆ. ಈ ಚೆಸ್ ಪಂದ್ಯಾವಳಿಯನ್ನು ಪುರುಷರು ಮತ್ತು ಮಹಿಳೆಯರು, ಎಲ್ಲಾ ವಯೋಮಾನದವರನ್ನು ಒಳಗೊಂಡಂತೆ ಮುಕ್ತ ವಿಭಾಗದಲ್ಲಿ ಏರ್ಪಡಿಸಲಾಗಿದೆ. 96 ಟ್ರೋಫಿಗಳೊಂದಿಗೆ ಒಟ್ಟು ಎರಡು ಲಕ್ಷ ರೂಪಾಯಿಗಳ ಮೌಲ್ಯದ ನಗದು ಬಹುಮಾನಗಳು ಇರುತ್ತವೆ. 8, 10, 12, 14 ಮತ್ತು 16 ರಂತಹ ವಿವಿಧ ವಯೋಮಾನದ ಗುಂಪುಗಳಲ್ಲಿ ಬಹುಮಾನಗಳನ್ನು ನೀಡಲಾಗುವುದು. ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳಿಗೆ ಅನುಕ್ರಮವಾಗಿ ರೂ. 30,000, ರೂ. 25,000 ಮತ್ತು ರೂ. 20,000 ನಗದು ಬಹುಮಾನಗಳನ್ನು ನೀಡಲಾಗುತ್ತದೆ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಸಂರ್ಪಕಿಸಿ: ಅನುರಾಗ್, ಮೊಬೈಲ್ ಸಂಖ್ಯೆ. 91488 59412 / 96114 82250

ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Article Image

ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅ. 3: ಗುರುವಾರ: ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರೀಯಸಂಗೀತ). ಅ. 4: ಶುಕ್ರವಾರ: ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಶನಿವಾರ: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರೀಯಸಂಗೀತ). ಅ. 6: ಭಾನುವಾರ: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ಸೋಮವಾರ: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳವಾರ: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮೀ, ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಬುಧವಾರ: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10: ಗುರುವಾರ: ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರೀಯಸಂಗೀತ ಮತ್ತು ವಯಲಿನ್). ಅ. 11: ಶುಕ್ರವಾರ: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ).

First Previous

Showing 4 of 10 pages

Next Last