Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 30 ಲಕ್ಷ ಮೌಲ್ಯದ 2 ಬಿಪಿಎಲ್ ಲೋವೆನ್‌ಸ್ಪೆöನ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಡಿ. ಹರ್ಷೇಂದ್ರ ಕುಮಾರ್ ಅವರು ಹೊಸ ತಂತ್ರಜ್ಞಾನದ 2 ಐಸಿಯು ವೆಂಟಿಲೇಟರ್‌ಗಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರತಿಯೊಂದು ಸಂಸ್ಥೆಗಳು ಕೂಡ ಸೇವೆಯ ಉದ್ದೇಶದಿಂದ ನಡೆಸಲ್ಪಡುತ್ತದೆ. ಖರ್ಚು ಬಗ್ಗೆ ಚಿಂತಿಸದೆ ಜನತೆಗೆ ಉತ್ತಮ ಸೇವೆ ನೀಡುವ ಗುರಿಯೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದೇ ಉದ್ದೇಶದಿಂದ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಸಲಕರಣೆಗಳನ್ನು ಒದಗಿಸಲಾಗಿದೆ. ಇದರಿಂದಾಗಿ ಸುಧಾರಿತ ವೈದ್ಯಕೀಯ ಸೇವೆ ನೀಡಲು ಸಹಕಾರಿಯಾಗಿದೆ. ಹಾಗಾಗಿ ದಿನೇ-ದಿನ ಈ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚೆಗೆ ಈ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳು ಕೂಡ ಈ ಆಸ್ಪತ್ರೆಯ ಮೇಲೆ ಗ್ರಾಮೀಣ ಜನತೆಯಲ್ಲಿ ಭರವಸೆ ಹೆಚ್ಚಿಸಿದೆ. ಈ ಆಸ್ಪತ್ರೆ ಅನೇಕ ಮಂದಿಗೆ ಉದ್ಯೋಗದ ಅವಕಾಶ ನೀಡಿ ಅನೇಕ ಕುಟುಂಬಗಳು ನೆಮ್ಮದಿಗೆ ಕಾರಣವಾಗಿದೆ. ಇತರ ಅನೇಕರಿಗೆ ಪರೋಕ್ಷ ರೀತಿಯಲ್ಲಿ ವಿವಿಧ ಅವಕಾಶ ಒದಗಿಸುವ ಮೂಲಕ ಪ್ರಯೋಜನಕಾರಿಯಾಗಿದೆ ಎಂದರು. 9 ಹಾಸಿಗೆಗಳ ಸುಸಜ್ಜಿತ ಐಸಿಯು ಹೊಂದಿರುವ ಈ ಆಸ್ಪತ್ರೆಯು ಈಗಾಗಲೇ 6 ವೆಂಟಿಲೇಟರ್‌ಗಳನ್ನು ಹೊಂದಿದ್ದು, ಈಗ ಒಟ್ಟು 8 ವೆಂಟಿಲೇಟರ್‌ಗಳಿವೆ. ಹೃದಯಾಘಾತ, ಸ್ಟ್ರೋಕ್, ಉಸಿರಾಟದ ಸಮಸ್ಯೆ ಮುಂತಾದ ತುರ್ತು ಸಂದರ್ಭದಲ್ಲಿ ಈ ಅತ್ಯಾಧುನಿಕ ವೆಂಟಿಲೇಟರ್‌ಗಳು ಬಹಳ ಉಪಯುಕ್ತವಾಗಲಿದೆ. ಇದು ಉತ್ತಮ ಗುಣಮಟ್ಟದ ಉಸಿರಾಟವನ್ನು ಒದಗಿಸುತ್ತದೆ. ಇದರಲ್ಲಿ ಅಳವಡಿಸಿರುವ ಪ್ಯಾರಾಮೀಟರ್ ಹಾಗೂ ರೋಗಿಯಿಂದ ಸಂಪರ್ಕ ಕಳೆದುಕೊಂಡಾಗ ಎಚ್ಚರಿಸುವ ಸೈರನ್ ಹೊಂದಿದ್ದು, ರೋಗಿಗೆ ಉಸಿರಾಟದಲ್ಲಿ ವ್ಯತ್ಯವಾಗದಂತೆ ನಿಗಾವಹಿಸುತ್ತದೆ. ಹೊಸ ತಂತ್ರಜ್ಞಾನ ಹೊಂದಿರುವ ಈ ವೆಂಟಿಲೇಟರ್ ವಯಸ್ಕರು, ಮಕ್ಕಳು ಮತ್ತು ನವಜಾತ ಶಿಶುಗಳಿಗೆ ಹೊಂದಾಣಿಕೆಯಾಗಬಲ್ಲದು. ಈ ವೆಂಟಿಲೇಟರ್ ಪರ‍್ಟೇಬಲ್ ಆಗಿದೆ. ಅಗತ್ಯ ಬಿದ್ದಾಗ ಆಂಬ್ಯುಲೆನ್ಸ್ಗಳಲ್ಲಿಯೂ ಅಳವಡಿಸಲು ಸಾಧ್ಯವಿದೆ. ಮಂಗಳೂರು ಬಳಿಕ ಈ ಅತ್ಯಾಧುನಿಕ ವೆಂಟಿಲೇಟರ್ ಹೊಂದಿರುವ ಏಕೈಕ ಆಸ್ಪತ್ರೆ ಇದಾಗಿದೆ ಎಂದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಇಲ್ಲಿನ ವೈದ್ಯರು, ದಾದಿಯರು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಕಾವ್ಯ ರಚನಾ ಕಮ್ಮಟ

Article Image

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಕಾವ್ಯ ರಚನಾ ಕಮ್ಮಟ

ಉಜಿರೆ, ಸೆ.12: ಸಾಹಿತ್ಯವೆನ್ನುವುದು ಸಮುದ್ರ ಇದ್ದಂತೆ. ಕನ್ನಡ ಸಾಹಿತ್ಯಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಇಡೀ ಜಗತ್ತಿನ ಸಾಹಿತ್ಯ ತಿಳಿಯಲು ಒಂದು ಜನ್ಮ ಸಾಕಾಗುವುದಿಲ್ಲ. ಯಾವ ಭಾವಕ್ಕೆ ಎಷ್ಟು ಒತ್ತು ನೀಡುತ್ತೇವೆ ಎಂಬುದು ಸಾಹಿತ್ಯದಲ್ಲಿ ಮುಖ್ಯವಾಗುತ್ತದೆ ಎಂದು ಯುವ ಕವಿ, ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಮಧು ಬಿರಾದಾರ ಹೇಳಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಕನ್ನಡ ಸಂಘದ ವತಿಯಿಂದ ಇಂದು (ಸೆ. 12) ಆಯೋಜಿಸಿದ್ದ ‘ಕಾವ್ಯ ಕಟ್ಟುವ ಬಗೆ’ ಕಾವ್ಯ ರಚನಾ ಕಮ್ಮಟದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಪಂಪ, ರನ್ನ, ಕುವೆಂಪು ಬರೆದಿರುವುದು ಮಹಾಭಾರತವೇ. ಆದರೆ ಅವರ ಕಾಲಘಟ್ಟ, ರಾಜಕೀಯ, ಸಾಮಾಜಿಕ, ಆರ್ಥಿಕ ಸ್ಥಿತಿ ಬೇರೆಯಾಗಿದೆ. ಆದ್ದರಿಂದ ಅವರ ಕೃತಿ ವಿಶಿಷ್ಟತೆ ಹೊಂದಿದೆ. ಪ್ರವಾಹದ ಎದುರು ನಿಲ್ಲುವ ಕವಿಗಳು ಮಾತ್ರ ನೆನಪಿನಲ್ಲಿ ಇರುತ್ತಾರೆ. ಅನುಭವವಿದ್ದರೆ ಕವನ ತುಂಬಾ ಸುಲಭವಾಗುತ್ತದೆ ಎಂದು ಅವರು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, “ಕವಿತೆ ಬರೆಯುವುದು ಬಲು ಸುಲಭ. ಇದಕ್ಕೆ ಸೂಕ್ಷ್ಮಗ್ರಹಿಕೆ, ಸಹೃದಯತೆ ಜತೆಗೆ ವಿದ್ಯಮಾನಗಳ ಕುರಿತು ಕುತೂಹಲವಿರಬೇಕು. ಇದರ ಮೇಲೆ ನಮ್ಮ ಅಂತರಂಗದಲ್ಲಿ ಮೂಡುವ ಭಾವನೆಗಳಿಗೆ ಅಕ್ಷರ ನೀಡಿದರೆ ಅದು ಕವನವಾಗುತ್ತದೆ” ಎಂದರು. “ಪ್ರಾಸ, ಭಾವ ಪೂರ್ಣವಾಗಿದ್ದರೆ ಅದುವೇ ಕಾವ್ಯ. ಭಾವನಾತ್ಮಕವಾಗಿ ನಮ್ಮನ್ನು ಹಿಂದಕ್ಕೆ ಕರೆದೊಯ್ಯುವ ಶಕ್ತಿ ಕಾವ್ಯಕ್ಕಿದೆ. ನಾವು ಹಿಂದೆ ಕೇಳಿದ ಪದ್ಯಗಳನ್ನು ಮತ್ತೆ ಕೇಳಿದಾಗ ನಮ್ಮ ಹಿಂದಿನ ದಿನಗಳು ನೆನಪಾಗುತ್ತವೆ” ಎಂದರು. ಕನ್ನಡ ಅಧ್ಯಾಪಕರಾದ ಡಾ. ದಿವಾಕರ ಕೊಕ್ಕಡ, ಡಾ ಎಂ.ಪಿ. ಶ್ರೀನಾಥ್, ಡಾ. ರಾಜಶೇಖರ್, ಭವ್ಯಶ್ರೀ, ತೇಜಸ್ವಿ ಕಾರ್ಯಕ್ರಮ ಸಂಯೋಜಕ ಡಾ. ನಾಗಣ್ಣ ಡಿ.ಎ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ. ಎನ್. ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಉಲ್ಲೇಖ ವಂದಿಸಿ, ಹಿಮಾಲಿ ಎಂ. ಪಿ. ಕಾರ್ಯಕ್ರಮ ನಿರೂಪಿಸಿದರು.

ಎಸ್.ಡಿ.ಎಂ. ಪಿ.ಜಿ ಸೆಂಟರ್ ಓರಿಯೆಂಟೇಶನ್ ಕಾರ್ಯಕ್ರಮ

Article Image

ಎಸ್.ಡಿ.ಎಂ. ಪಿ.ಜಿ ಸೆಂಟರ್ ಓರಿಯೆಂಟೇಶನ್ ಕಾರ್ಯಕ್ರಮ

ಉಜಿರೆ: ಕೌಶಲ್ಯಗಳನ್ನು ನವೀಕರಿಸಿಕೊಂಡು ಜ್ಞಾನಾಧಾರಿತ ಸಂಶೋಧನಾ ಪ್ರಜ್ಞೆ ಮತ್ತು ಅನ್ವಯಿಕ ಸಾಮರ್ಥ್ಯದೊಂದಿಗೆ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರುಗೊಂಡಾಗ ಮಾತ್ರ ಅಚ್ಚಳಿಯದ ಪ್ರಭಾವ ಮೂಡಿಸಿ ಯಶಸ್ಸುಗಳಿಸಲು ಸಾಧ್ಯ ಎಂದು ಬೆಂಗಳೂರಿನ ಸಿಗ್ಮಾ ಅಲ್ಡಿಜ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ. ರವೀಂದ್ರ ವಿಕ್ರಮ್ ಸಿಂಗ್ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಉದ್ದೇಶದಿಂದ ಇಂದ್ರಪ್ರಸ್ಥ ಸಭಾಂಗಣದಲ್ಲಿ ಗುರುವಾರ ಆಯೋಜಿತವಾದ ಕಾರ್ಯಕ್ರಮದಲ್ಲಿ ನೂತನ ಶೈಕ್ಷಣಿಕ ವರ್ಷಕ್ಕೆ ಚಾಲನೆ ಸಿಕ್ಕಿತು. ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಹತ್ತು ವರ್ಷಗಳ ಹಿಂದಿನ ಕೌಶಲ್ಯಗಳು ಇದೀಗ ಅನ್ವಯಗೊಳ್ಳುವುದಿಲ್ಲ. ಕೋವಿಡ್ ನಂತರದ ಜಗತ್ತು ತಾಂತ್ರಿಕವಾಗಿ ಬದಲಾಗಿದೆ. ಹಳೆಯ ಕೌಶಲ್ಯಗಳ ನವೀಕರಣ ಇಂದಿನ ಅಗತ್ಯ. ತಂತ್ರಜ್ಞಾನವನ್ನು ನಿರಾಕರಿಸುವಂತಿಲ್ಲ. ಅದನ್ನು ಟೀಕಿಸಿ ದೂರ ನಿಲ್ಲುವಂತಿಲ್ಲ. ಬದುಕಿನ ಪ್ರತಿಯೊಂದು ಕ್ಷೇತ್ರಗಳಲ್ಲಿ ತಂತ್ರಜ್ಞಾನ ಹಾಸುಹೊಕ್ಕಾಗಿದೆ. ಅದರ ಮೇಲೆ ಅತಿಯಾದ ಅವಲಂಬನೆಯಾಗದೇ ಸ್ವಯಂ ಸಾಮರ್ಥ್ಯದ ಅಧಾರದಲ್ಲಿ ಮುನ್ನೆಡೆಯುವ ವಿವೇಕದೊಂದಿಗೆ ಇದ್ದಾಗ ಸಾರ್ವಕಾಲಿಕ ಗೆಲುವು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಆ ಕ್ಷಣದ ಅನಿವಾರ್ಯತೆ ಮತ್ತು ಅಗತ್ಯಗಳನ್ನು ದೃಷ್ಟಿಯಲ್ಲಿರಿಸಿಕೊಂಡು ವ್ಯಕ್ತಿಗತ ಮತ್ತು ವೃತ್ತಿಪರ ಬೆಳವಣಿಗೆಯನ್ನು ಕಂಡುಕೊಳ್ಳಬೇಕು. ತಂತ್ರಜ್ಞಾನದ ವೇಗವನ್ನು ಕಂಡುಕೊಂಡು ಅದಕ್ಕನುಗುಣವಾಗಿ ವೃತ್ತಿಪರತೆಯ ಶ್ರೇಷ್ಠತೆಯ ಮಜಲುಗಳನ್ನು ದಾಟಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಹಂತದ ಕಲಿಕೆಯ ಹಾದಿಯನ್ನು ಯಶಸ್ವಿಯಾಗಿ ನಿರ್ವಹಿಸುವುದರ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಜ್ಞಾನ, ಸ್ಪರ್ಧಾತ್ಮಕತೆ, ತಾರ್ಕಿಕ ಚಿಂತನೆ, ಕೌಶಲ್ಯ ಮತ್ತು ವಿವೇಚನಾತ್ಮಕ ಎಚ್ಚರದ ಹೊಳಹುಗಳೊಂದಿಗೆ ವಿದ್ಯಾರ್ಥಿಗಳು ಸಾಧನೆಯ ಹಾದಿಯನ್ನು ಕ್ರಮಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ ವಿದ್ಯಾರ್ಥಿಗಳು ಸ್ನಾತಕೋತ್ತರ ಹಂತದಲ್ಲಿ ವಿಸ್ತೃತ ಜ್ಞಾನಾರ್ಜನೆಯ ತುಡಿತ ಮತ್ತು ಪ್ರಾಯೋಗಿಕ ಅನ್ವಯಿಕತೆಯ ಪ್ರಜ್ಞೆಯೊಂದಿಗೆ ಕಲಿಕೆಯನ್ನು ಅರ್ಥಪೂರ್ಣಗೊಳಿಸಿಕೊಳ್ಳಬೇಕು ಎಂದು ನುಡಿದರು. ಎಸ್.ಡಿ.ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಎಸ್.ಎನ್. ಕಾಕತ್ಕರ್ ಸ್ವಾಗತಿಸಿದರು. ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹಪ್ರಾದ್ಯಾಪಕರಾದ ಡಾ. ನೆಫಿಸತ್ ಪಿ. ಹಾಗೂ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾದ್ಯಾಪಕರಾದ ಸ್ವಾತಿ ಬಿ. ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ ವಂದಿಸಿದರು. ಇದೇ ಸಂದರ್ಭದಲ್ಲಿ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡುವ ಕಾರ್ಯಕ್ರಮದ ಸಮಗ್ರ ವಿವರಗಳನ್ನೊಳಗೊಂಡ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಬ್ಬಿರುವ ರಕ್ತನಾಳದ ಸಮಸ್ಯೆ ಇರುವ 41 ವರ್ಷ ಹಾಗೂ 40 ವರ್ಷ ಪ್ರಾಯದ ಇಬ್ಬರಿಗೆ ಮೊದಲ ಬಾರಿಗೆ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಚೈತ್ರಾ ಆರ್. ಶಸ್ತ್ರಚಿಕಿತ್ಸೆಯನ್ನು ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ರೋಗಿಗಳು ಕೂಡ ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದಾರೆ. ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆ ಎನ್ನುವುದು ಶಸ್ತ್ರಚಿಕಿತ್ಸೆ ಇಲ್ಲದೆ ಉಬ್ಬಿರುವ ರಕ್ತನಾಳಗಳಿಗೆ ನೀಡುವ ಚಿಕಿತ್ಸೆಯ ಹೊಸ ವಿಧಾನವಾಗಿದೆ. ಉಬ್ಬಿರುವ ರಕ್ತನಾಳಗಳನ್ನು ತೊಡೆದು ಹಾಕಲು ಇದು ಸುರಕ್ಷಿತ ಮತ್ತು ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಈ ಚಿಕಿತ್ಸೆಯ ನಂತರ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ದೊರೆಯುತ್ತಿದೆ. ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಸಿರಿಧಾನ್ಯ ಮತ್ತು ಮಾನಸಿಕ ಆರೋಗ್ಯ': ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

Article Image

'ಸಿರಿಧಾನ್ಯ ಮತ್ತು ಮಾನಸಿಕ ಆರೋಗ್ಯ': ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಉಜಿರೆ: ಜೀವನವು ಮಾನಸಿಕ ವ್ಯವಸ್ಥೆಯನ್ನು ಅವಲಂಬಿಸಿದೆ ಹಾಗೂ ಆರೋಗ್ಯವೇ ಎಲ್ಲದಕ್ಕೂ ಮೂಲ ಆಧಾರ ಎಂದು ಮೈಸೂರಿನ ಆಹಾರ ಮತ್ತು ಪೌಷ್ಟಿಕಾಂಶ ತಜ್ಞ ಡಾ. ಖಾದರ್ ವಲ್ಲಿ ಹೇಳಿದರು. ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಇಂದು (ಸೆ. 9) ಮನಃಶಾಸ್ತ್ರ ವಿಭಾಗದ (ಪದವಿ, ಸ್ನಾತಕೋತ್ತರ ಪದವಿ) ವತಿಯಿಂದ ಆಯೋಜಿಸಲಾಗಿದ್ದ 'ಸಿರಿಧಾನ್ಯ ಮತ್ತು ಮಾನಸಿಕ ಆರೋಗ್ಯ' ಕುರಿತ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. “ಇಂದಿನ ಆಧುನಿಕ ಯುಗದಲ್ಲಿ ಜನರು ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ದೇಹದಲ್ಲಿ ಹಾರ್ಮೋನ್ ಗಳ ಅಸಮತೋಲನ ಉಂಟಾಗುತ್ತಿದೆ. ಆಹಾರವನ್ನು ಸರಿಯಾದ ಸಮಯಕ್ಕೆ ಸೇವಿಸುತ್ತಿಲ್ಲ. ಪೌಷ್ಟಿಕ ಆಹಾರ ಸೇವಿಸುವ ಬದಲು ಅಪೌಷ್ಟಿಕ ಆಹಾರಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ. ಇದರಿಂದಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಅನೇಕ ಜನರು ಥೈರಾಯಿಡ್ ಮಧುಮೇಹ ರಕ್ತದೊತ್ತಡದಂತಹ ಬಳಲುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಜನರು ಸಿರಿಧಾನ್ಯಗಳನ್ನು ತಮ್ಮ ನಿತ್ಯ ದಿನನಿತ್ಯ ಆಹಾರ ಪದ್ಧತಿಯಲ್ಲಿ ಉಪಯೋಗಿಸಬಹುದು" ಎಂದರು. ಅನೇಕ ಸಿರಿಧಾನ್ಯಗಳ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಅತಿಥಿ, ಶಿವಮೊಗ್ಗದ ಕನ್ಸಲ್ಟೆಂಟ್ ಸೈಕಿಯಾಟ್ರಿಸ್ಟ್ ಡಾ. ಪ್ರೀತಿ ವಿ. ಶಾನಭಾಗ್ ಮಾತನಾಡಿ, "ಹಿಂದಿನ ಕಾಲದಲ್ಲಿ ಆರೋಗ್ಯದ ಏರುಪೇರಿಗೆ ಔಷಧಿಗಳಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಔಷಧಿಗಳ ಜೊತೆಗೆ ಕಾಯಿಲೆಗಳು ಹೆಚ್ಚಾಗಿವೆ. ಈಗಿನ ಕಾಲದಲ್ಲಿ ತ್ವರಿತ ಪರಿಣಾಮವನ್ನು ಬಯಸುತ್ತೇವೆ. ಒಂದು ಕೆಲಸ ಆಗುವ ಮುನ್ನವೇ ಇನ್ನೊಂದು ಕೆಲಸದ ಏಳಿಗೆಗೆ ಹೆಜ್ಜೆ ಹಾಕಲು ತಯಾರಾಗಿರುತ್ತೇವೆ. ಅಧ್ಯಯನದ ಪ್ರಕಾರ ಇತ್ತೀಚಿನ ಜನಾಂಗದಲ್ಲಿ ತಾಳ್ಮೆ ಕಡಿಮೆಯಾಗಿ ಎಲ್ಲವನ್ನು ಶೀಘ್ರವಾಗಿ ಮುಗಿಸಬೇಕೆಂಬ ಒತ್ತಡ ಹೆಚ್ಚಾಗಿದೆ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, ಮಾನವ ದೇಹವೇ ಒಂದು ರಾಸಾಯನಿಕ ವ್ಯವಸ್ಥೆ. ಹಾಗೆ ಈ ಎಲ್ಲ ರಾಸಾಯನಿಕಗಳು ನಾವು ಹೇಗೆ ಯೋಚಿಸುತ್ತೇವೆ, ಹೇಗೆ ವರ್ತಿಸುತ್ತೇವೆ, ಹೇಗೆ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸುತ್ತವೆ ಎಂದು ಹೇಳಿದರು. ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ., ಕಲಾ ನಿಕಾಯದ ಡೀನ್ ಡಾ. ಶ್ರೀಧರ ಎನ್. ಭಟ್, ವಿಜ್ಞಾನ ನಿಕಾಯದ ಡೀನ್ ಡಾ. ಸವಿತಾ ಕುಮಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು. ರಾಜ್ಯದ ವಿವಿಧೆಡೆಯ 15 ಕಾಲೇಜುಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು. ಅನನ್ಯ ಬಳಗದವರು ಪ್ರಾರ್ಥಿಸಿದರು. ಮನಃಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ವಂದನ ಜೈನ್ ಸ್ವಾಗತಿಸಿ, ಎಂ.ಎಸ್. ಸಿಂದು ವಂದಿಸಿದರು. ಸೀಮಾ ಜಂಗೀರ್ ಮತ್ತು ಜಾನವಿ ಎಮ್. ನಿರೂಪಿಸಿದರು.

ಯುವನಿಧಿ: ಅರ್ಜಿ ಆಹ್ವಾನ

Article Image

ಯುವನಿಧಿ: ಅರ್ಜಿ ಆಹ್ವಾನ

ಯುವನಿಧಿ ಯೋಜನೆಗೆ 2023 ಹಾಗೂ 2024ನೇ ಸಾಲಿನಲ್ಲಿ ಯಾವುದೇ ವೃತ್ತಿ ಪರ ಕೋರ್ಸ್, ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳವರೆಗೆ (180 ದಿನ) ಉದ್ಯೋಗ ಸಿಗದ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗರಾಗಿರಬೇಕು. ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೊಮಾ/ಸ್ನಾತಕೋತ್ತರ ಪದವಿವರೆಗೆ ಅಧ್ಯಯನ ಮಾಡಿದವರು. ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ ಗರಿಷ್ಠ 2 ವರ್ಷ ಅವಧಿಯವರೆಗೆ ಮಾತ್ರ ಈ ಭತ್ತೆ ಸಿಗಲಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟು 4,023 ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು, ಈ ಪೈಕಿ 3,328 ಫಲಾನುಭವಿಗಳಿಗೆ ಜುಲೈ-2024ರ ಅಂತ್ಯಕ್ಕೆ ಒಟ್ಟು 2,02,69,500 ರೂ. ಡಿ.ಬಿ.ಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಅರ್ಜಿ ಸಲ್ಲಿಸುವ ವಿಧಾನ https://sevasindhugs. karnataka.gov.in ಮೂಲಕ ಲಾಗಿನ್ ಆಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು ಮೂಲಕವೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಮೊಬೈಲ್‌ ಸಂಖ್ಯೆಗೆ ಜೋಡಣೆ ಆದ ಆಧಾ‌ರ್ ಸಂಖ್ಯೆಯ ಬ್ಯಾಂಕ್‌ ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಸ್ವಯಂ-ದೃಢೀಕರಣ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ತಿಂಗಳು 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು https://sevasindhugs.karnataka.gov.in ಸ್ವಯಂ ಘೋಷಣೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಎಸ್ . ಡಿ . ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ,ಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ

Article Image

ಎಸ್ . ಡಿ . ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ,ಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ,ಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಎಲ್ಲಾ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಉಚಿತ ECG, BP, GRBS (Sugar Test) ಹಾಗೂ ವೈದ್ಯರ ಸಮಾಲೋಚನೆಯು ನಾಳೆ (ಆ.6) ಬೆಳಿಗ್ಗೆ 9.30ರಿಂದ ಸಂಜೆ 5.00ರ ತನಕ ನಡೆಯಲಿದೆ . ಸೂಚನೆ : ಕೆ.ಕೆವೈಸಿ ಹಾಗೂ ಸುರಕ್ಷಾ ವಿಮಾ ಹೊಂದಿರುವವರು ವಿಮಾ ಕಾರ್ಡ್‌ನ ಪ್ರತಿಯನ್ನು ತರತಕ್ಕದ್ದು. ಎಲ್ಲಾ ಶಿಕ್ಷಕರು ತಮ್ಮ ಶಾಲಾ ಅಥವಾ ಕಾಲೇಜಿನ ಗುರುತಿನ ಚೀಟಿಯನ್ನು ತರತಕ್ಕದ್ದು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ, ವೆಬ್‌ಸೈಟ್: sdmhospitalujire.com ಹೆಸರು ನೋಂದಾಯಿಸಲು ಸಂಪರ್ಕಿಸಿ: 8073349216, 7760397878

ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ: ಶೈಕ್ಷಣಿಕ ಪ್ರವೇಶಾತಿಗೆ ಆಹ್ವಾನ

Article Image

ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ: ಶೈಕ್ಷಣಿಕ ಪ್ರವೇಶಾತಿಗೆ ಆಹ್ವಾನ

ವಿದ್ಯಾಗಿರಿ: ಆಳ್ವಾಸ್ ಪದವಿ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರವರ್ತಿತ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2024-2025ರ ಜುಲೈ ಆವೃತ್ತಿಯ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಈ ಕೇಂದ್ರದ ಮೂಲಕ ವಿದ್ಯಾರ್ಥಿಗಳು ಸ್ನಾತಕ (ಯುಜಿ)ದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸಿ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ , ಬಿ.ಎಸ್ಸಿ (ಸಂಯೋಜನೆಗಳು), ಬಿ.ಎಸ್‌ಸಿ ಹೋಮ್ – ಇನ್ಫಾರ್ಮೇಷನ್ ಟೆಕ್ನಾಲಜಿ, ಬಿ.ಸಿ.ಎ ಬ್ಯಾಚುರಲ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿಗಳನ್ನು ಪಡೆಯಬಹುದಾಗಿದೆ. ಸ್ನಾತಕೋತ್ತರ (ಪಿಜಿ)ದಲ್ಲಿ ಎಂ.ಎ- ಶಿಕ್ಷಣ, ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಇತಿಹಾಸ, ರಾಜ್ಯಶಾಶಾಸ್ತ್ರ , ಸಾರ್ವಜನಿಕ ಆಡಳಿತ, ಉರ್ದು, ಸಂಸ್ಕೃತ, ಸಮಾಜಶಾಶಾಸ್ತ್ರ , ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ-ಆನ್‌ಲೈನ್ ಪ್ರವೇಶ ಪರೀಕ್ಷೆ ಮೂಲಕ (ಫೈನಾನ್ಸ್, ಮಾರ್ಕೆಟಿಂಗ್, ಎಚ್.ಆರ್. ಆಪರೇಷನ್. ಟೂರಿಸಂ ಕಾಪ್ರೊರೇಟ್ ಲಾ, ಇನ್‌ಫರ್ಮನೇಷನ್ ಟೆಕ್ನಾಲಜಿ, ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ.), ಎಂ.ಕಾಂ ಡ್ಯುಯೆಲ್ ಸ್ಪೆಷಲೈಜೇಷನ್ ( ಅಕೌಂಟಿಂಗ್ ಮತ್ತು ಫೈನಾನ್ಸ್/ಎಚ್‌ಆರ್ ಎಂ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್ ಮತ್ತು ಎಚ್‌ಆರ್‌ಎಂ /ಫೈನಾನ್ಸ್), ಎಂ.ಸಿ.ಎ, ಎಂ.ಲಿಬ್.ಐ.ಎಸ್‌ಸಿ, ಎಂ.ಎಸ್‌ಸಿ (ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಬಯೋಕೆಮಿಸ್ಟ್ರಿ, ಬಯೋಟೆಕ್ನಾಲಜಿ, ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯಟಿಷಿಯನ್, ಪರಿಸರ ವಿಜ್ಞಾನ, ಭೂಗೋಳಶಾಸ್ತ್ರ, ಮೈಕ್ರೋಬಯಾಲಜಿ ಮನಃಶಾಸ್ತ್ರ, ಸಸ್ಯಶಾಸ್ತ್ರ ಪ್ರಾಣಿಶಾಸ್ತ್ರ, ಫುಡ್ ಮತ್ತು ನ್ಯೂಟ್ರಿಷನ್ ಸೈನ್ಸ್ ಮಾಹಿತಿ ತಂತ್ರಜ್ಞಾನ ಡಾಟಸೈನ್, ಕಂಪ್ಯೂಟರ್‌ಸೈನ್ಸ್). ಪಿಜಿ ಸರ್ಟಿಫಿಕೇಟ್ ಕಾರ್ಯಕ್ರಮಗಳು- ಇಂಗ್ಲಿಷ್, ಕಮ್ಯುನಿಕೇಶನ್, ಇಂಗ್ಲಿಷ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಕುವೆಂಪು ಸಾಹಿತ್ಯ, ಹಣಕಾಸು ನಿರ್ವಹಣೆ ಮಾನವ ಸಂಪನ್ಮೂಲ ನಿರ್ವಹಣೆ, ಬಿಸಿನೆಸ್ ಲಾ, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್, ಅಂಬೇಡ್ಕರ್ ಅಧ್ಯಯನಗಳನ್ನು ಅಭ್ಯಸಿಸಬಹುದಾಗಿದೆ. ಡಿಪ್ಲೋಮ ಶಿಕ್ಷಣ ಕಾರ್ಯಕ್ರಮಗಳಾದ ಕನ್ನಡ, ಪತ್ರಿಕೋದ್ಯಮ, ನ್ಯೂಟ್ರಿಷನ್ ಮತ್ತು ಹೆಲ್ತ್ ಎಜುಕೇಷನ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಷನ್, ಅರ್ಲಿ ಚೈಲ್ಡ್ ಹುಡ್‌ಕೇರ್ ಎಜುಕೇಷನ್ ಹಾಗೂ ಸರ್ಟಿಫಿಕೇಟ್ ಶಿಕ್ಷಣ ಕಾರ್ಯಕ್ರಮಗಳಾದ(ಆರು ತಿಂಗಳು)- ಪಂಚಾಯತ್ ರಾಜ್, ನ್ಯೂಟ್ರಿಷನ್ ಮತ್ತು ಫುಡ್, ಮಾಹಿತಿ ಸಂವಹನ ತಂತ್ರಜ್ಞಾನದ (ಐಸಿಟಿ) ಕೋರ್ಸ್ ಗಳನ್ನು ಮಾಡಬಹುದಾಗಿದೆ. ಈ ಮೇಲಿನ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 917090715010, 9591546202 ಸಂಪರ್ಕಿಸಬಹುದು. ಇಲ್ಲವೇ, ಇ-ಮೇಲ್:administration@alvas.org ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದು. ಆಳ್ವಾಸ್‌ನಲ್ಲಿ ಪರೀಕ್ಷಾ ಕೇಂದ್ರವನ್ನೂ ಹೊಂದಿರುವ ಕಾರಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಲಭ್ಯವಾಗಿದೆ. ಔದ್ಯೋಗಿಕ ನೆಲೆಯಲ್ಲಿ ಸ್ನಾತಕೋತ್ತರ, ಪದವಿ, ಒಂದು ವರ್ಷದ ಡಿಪ್ಲೊಮಾ ಹಾಗೂ ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಗಳನ್ನು ವಿವಿಧ ವಿಷಯಗಳಲ್ಲಿ ಮಾಡಲು ಅವಕಾಶವಿದ್ದು, ಉದ್ಯೋಗ ಮಾಡಿಕೊಂಡು ಕೋರ್ಸ್ ಮಾಡಲು ಸುವರ್ಣಾವಕಾಶ ದೊರೆತಿದೆ.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ತರಬೇತಿಯ ಸಮಾರೋಪ ಸಮಾರಂಭ

Article Image

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ: ಪ್ರತಿಯೊಬ್ಬರು ವೃತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ ಯಶಸ್ಸು ಕಾಣಬಹುದು ಜೊತೆಗೆ ದುರಭ್ಯಾಸಗಳಿಂದ ಸಹ ದೂರ ಇರುಬೇಕು. ಹಾಗೂ ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿದೆ ಅದನ್ನು ಅಳವಡಿಸಿಕೊಂಡು ನಮ್ಮ ವೃತ್ತಿ ಬಗ್ಗೆ ಹೆಮ್ಮೆ ಇರಬೇಕು. ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರುಡ್‌ ಸೆಟ್‌ ಸಂಸ್ಥೆಯಲ್ಲಿ ಅತ್ಯುತ್ತಮವಾದ ಸೌಲಭ್ಯಗಳೊಂದಿಗೆ ಉಚಿತ ತರಬೇತಿ ನೀಡಿ ಸವಿತಾ ಸಮಾಜದ ಹುಡುಗರಿಗೆ ಅನುಕೂಲ ಮಾಡಿದ್ದಾರೆ ಅವರಿಗೆ ಕೃತಜ್ಞತೆಯನ್ನು ನೀವೇ ಸ್ವ ಉದ್ಯೋಗಿಗಳಾಗಿ ಯಶಸ್ಸು ಕಾಣುವುದರಾ ಮೂಲಕ ಸಲ್ಲಿಸಬೇಕೆಂದು ರಾಯಚೂರು ಮಾಜಿ ರಾಜಸಭಾ ಸದಸ್ಯರಾದ ದಿವಗಂತ ಅಶೋಕ್‌ ಗಸ್ತಿಯವರ ಧರ್ಮಪತ್ನಿ ಸುಮಾ ಅಶೋಕ್‌ ಗಸ್ತಿ ಅಭಿಪ್ರಾಯಪಟ್ಟರು. ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಅತಿಥಿಯಾಗಿದ್ದ ಶ್ರೀ ರಾಘವೇಂದ್ರ ಇಟಗಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸವಿತಾ ಇವರು ಮಾತನಾಡಿ ವೃತಿಯನ್ನು ಹೊಸತನ ಇಟ್ಟುಕೊಂಡು ಮುಂದುವರೆಯಿರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ, ರವಿ ಕುಮಾರ್‌ ಕಡೂರು, ಉಪಸ್ಥಿತರಿದ್ದರು ವೀರೇಶ ಬಳ್ಳಾರಿ ಪ್ರಾರ್ಥನೆ ಮಾಡಿದರು. ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ವಂದಿಸಿದರು. ಸುಮಾರು 32 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಪ್ರಭಾಕರ್‌ , ವರಪ್ರಸಾದ್‌ ತರಬೇತಿಯ ಅನುಭವ ಹಂಚಿಕೊಂಡರು.

ಮೂಡುಬಿದಿರೆ: ‘ಸಿಎ’ ಕೌನ್ಸೆಲಿಂಗ್ ಪ್ರೋಗ್ರಾಮ್

Article Image

ಮೂಡುಬಿದಿರೆ: ‘ಸಿಎ’ ಕೌನ್ಸೆಲಿಂಗ್ ಪ್ರೋಗ್ರಾಮ್

ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಐ.ಸಿ.ಎ.ಐ ಮಂಗಳೂರು ಚಾಪ್ಟರ್ ವತಿಯಿಂದ ಆಳ್ವಾಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಎ ವೃತ್ತಿಯ ಕುರಿತು ಮಾಹಿತಿ ಕಾರ‍್ಯಕ್ರಮ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ- ಇತ್ತೀಚಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಇಲ್ಲವೇ ತಾಂತ್ರಿಕ ಪದವಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ, ಆದರೆ ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೂರಾರು ದಾರಿಗಳಿವೆ. ಅದನ್ನು ಅವರು ಅರಿತುಕೊಳ್ಳಬೇಕು ಎಂದರು. ಸಿಎಯನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ಆರಂಭಿಕ ಹಂತದಲ್ಲೇ ಮಾಡಿಕೊಳ್ಳಬೇಕು. ಇದಕ್ಕೆ ಬೇಕಾದ ಎಲ್ಲಾ ಅವಕಾಶಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪದವಿ ಪೂರ್ವ ಹಂತದಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸಿಎ ಕಾರ್ತಿಕೇಯ ಶೆಣೈ ಮಾತನಾಡಿ ಸಿಎ ಆರಂಭಿಕ ಹಂತದಿಂದ ಹಿಡಿದು ಕೊನೆಯ ತನಕ ಎಲ್ಲಾ ಪರೀಕ್ಷೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಸಿಎ ಗೌತಮ್ ನಾಯಕ್ ಮಾತನಾಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರ ಉದ್ದೇಶಗಳ ಬಗ್ಗೆ ವಿವರಿಸಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸಿಎ ಡೇನಿಯಲ್ ಪಿರೇರಾ ಹಾಗೂ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ ಎಂ.ಡಿ ಇದ್ದರು. ವಾಣಿಜ್ಯ ಸಂಘದ ಸಂಯೋಜಕಿ ರಶ್ಮಿನ್ ತನ್ವೀರ್ ಕಾರ್ಯಕ್ರಮ ನಿರೂಪಿಸಿದರು.

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’

Article Image

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’

“ಸಂಸ್ಕೃತವು ಸಾರ್ವಕಾಲಿಕ ಶ್ರೇಷ್ಠ ಭಾಷೆ ಹಾಗೂ ಜ್ಞಾನ ಪರಂಪರೆಯ ಭಾಷೆ. ನಾವು ಭಾಷೆಯನ್ನು ಕಲಿಯುವುದು, ಭಾಷೆಯ ಬಗ್ಗೆ ಕಲಿಯುವುದು ಹಾಗೂ ಭಾಷೆಯ ಮೂಲಕ ಕಲಿಯುವುದು ಇದು ಪ್ರತ್ಯೇಕ ಆಯಾಮಗಳುಳ್ಳ ವಿಷಯವಾಗಿದೆ. ಇದನ್ನು ಅರಿತರೆ ಭಾಷೆಯ ಬಗ್ಗೆ ವಿಶಾಲ ವ್ಯಾಪ್ತಿಯಲ್ಲಿ ಅರಿಯಬಹುದು” ಎಂದು ಬೆಳಾಲಿನ ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಆ. 30ರಂದು ಆಯೋಜಿಸಿದ್ದ ‘ಸಂಸ್ಕೃತೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು. "ಭಾಷೆಯ ಮೂಲಕ ಹಲವು ವಿಚಾರಗಳನ್ನು ನಾವು ತಿಳಿದುಕೊಳ್ಳುತ್ತೇವೆ. ಅಷ್ಟೇ ಅಲ್ಲದೆ ಇತ್ತೀಚಿಗೆ ವಿದೇಶಿಗರು ಕೂಡ ಸಂಸ್ಕೃತ ಭಾಷೆಯನ್ನು ಕಲಿಯುತ್ತಿದ್ದಾರೆ. ಸಂಸ್ಕೃತ ಎಲ್ಲಾ ಭಾಷೆಗಳಿಗೆ ಪ್ರೇರಣೆ ಹಾಗೂ ಪೋಷಣೆಯನ್ನು ನೀಡಿದೆ. ಶಿಕ್ಷಣದಲ್ಲಿ ಜ್ಞಾನ ಮತ್ತು ವೃತ್ತಿಯ ನಡುವೆ ಭಾಷೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಅವರು ಹೇಳಿದರು. “ಸಂಸ್ಕೃತ ಭಾಷೆಯ ಮೂಲಕ ನಮ್ಮ ಪ್ರಾಚೀನ ಪರಂಪರೆ ಹಾಗೂ ಸೊಗಡನ್ನು ಪಸರಿಸಬೇಕಾಗಿರುವುದು ವಿದ್ಯಾರ್ಥಿಗಳ ಜವಾಬ್ದಾರಿ" ಎಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ. ಗಣೇಶ್ ನಾಯಕ್ ಮಾತನಾಡಿ, “ಭಾಷೆಗಳು ನಮ್ಮಲ್ಲಿರುವ ಆಲೋಚನೆಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲು ಸಹಕಾರಿಯಾಗುತ್ತವೆ. ಸಂಸ್ಕೃತ ಭಾಷೆಯು ವ್ಯಾವಹಾರಿಕ ಹಾಗೂ ನೈತಿಕ ಬದುಕಿಗೆ ಸಹಕಾರಿಯಾಗುತ್ತದೆ. ಸಂಸ್ಕೃತ ಭಾಷೆಯ ಮೂಲಕ ತಾಂತ್ರಿಕ ದೃಷ್ಟಿಕೋನ, ಶಬ್ದ ಭಂಡಾರ, ಭಾರತೀಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ನೆಲೆಯ ಬಗ್ಗೆ ತಿಳಿದುಕೊಳ್ಳಬಹುದು” ಎಂದರು. ವಿಭಾಗದ 'ಸುಬೋಧಿನೀ' ಭಿತ್ತಿಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸಂಸ್ಕೃತ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅತಿಥಿಯನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಸವಿತಾ ಕುಮಾರಿ ಹಾಗೂ ಸಂಸ್ಕೃತ ವಿಭಾಗದ ಸಹ ಪ್ರಾಧ್ಯಾಪಕ ಶ್ರೇಯಸ್ ಪಾಳಂದೆ ಉಪಸ್ಥಿತರಿದ್ದರು. ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ. ಶ್ರೀಧರ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸುಮುಖ್ ಪ್ರಾರ್ಥಿಸಿ, ವಂಶಿ ಆರ್ ಭಟ್ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಸಿಂಚನ ಪಾಳಂದೆ ಹಾಗೂ ಸಿಂಚನ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ‘ಸಂಸ್ಕೃತ ಪ್ರತಿಭಾ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಂ. ನೆನಪಿನಂಗಳ'ದ ಹದಿನೈದನೇ ಕಂತಿನ ಕಾರ್ಯಕ್ರಮ: ಹದಿನೈದು ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

Article Image

ಎಸ್.ಡಿ.ಎಂ. ನೆನಪಿನಂಗಳ'ದ ಹದಿನೈದನೇ ಕಂತಿನ ಕಾರ್ಯಕ್ರಮ: ಹದಿನೈದು ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಇಂದು (ಆ.31) ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) 'ಎಸ್.ಡಿ.ಎಂ. ನೆನಪಿನಂಗಳ'ದ ಹದಿನೈದನೇ ಕಂತಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ, ಕಾಲೇಜಿನ ಹದಿನೈದು ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ. ಸಹಾಯಧನ ವಿತರಿಸಲಾಯಿತು. ಹಿರಿಯ ವಿದ್ಯಾರ್ಥಿಗಳಾದ ಕೇಂದ್ರ ಸರಕಾರದ ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಸೆಂಟ್ರಲ್ ಬ್ಯುರೋ ಆಫ್ ಕಮ್ಯೂನಿಕೇಶನ್ ನ ಮಂಗಳೂರು ಕ್ಷೇತ್ರ ಪ್ರಚಾರ ಅಧಿಕಾರಿ ಜಿ. ತುಕಾರಾಮ್ ನಿಡ್ಲೆ (ಜಿತು ನಿಡ್ಲೆ), ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕ, ಉಜಿರೆ ಶ್ರೀ ಧ.ಮಂ. ಕಾಲೇಜಿನ ವಿಶ್ರಾಂತ ಕುಲಸಚಿವ ಡಾ. ಬಿ.ಪಿ. ಸಂಪತ್ ಕುಮಾರ ಹಾಗೂ ಮಂಗಳೂರಿನ ನ್ಯಾಶನಲ್ ಟ್ಯುಟೋರಿಯರ್ ಕಾಲೇಜಿನ ಪ್ರಾಂಶುಪಾಲ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯು.ಹೆಚ್. ಖಾಲಿದ್ ಮುಖ್ಯ ಅತಿಥಿಗಳಾಗಿದ್ದರು. ಜಿ. ತುಕಾರಾಮ್ ನಿಡ್ಲೆ ಮಾತನಾಡಿ, “ನೆನಪು ಮಾಡಿಕೊಳ್ಳುವುದಕ್ಕಿಂತ, ನೆನಪಿನ ಜೊತೆ ಬದುಕುವವರು ನಾವು. ಎಸ್.ಡಿ.ಎಂ. ಕಾಲೇಜಿನ ನೆನಪು ನನಗೆ ಮತ್ತೆ ಮತ್ತೆ ಆಗುತ್ತಿರುತ್ತದೆ” ಎಂದರು. “ಆ ಕಾಲದಲ್ಲಿ ಇಲ್ಲಿನಷ್ಟು ಸುಸಜ್ಜಿತ ಗ್ರಂಥಾಲಯ ಬೇರೆ ಎಲ್ಲೂ ಇರಲಿಲ್ಲ. ಸಾಹಿತಿ ಕೆ.ಟಿ. ಗಟ್ಟಿ ಅವರ ಪ್ರೇರಣೆಯಿಂದ ನಾನು ಇಂಗ್ಲಿಷ್ ಪುಸ್ತಕ ಓದಲು ಆರಂಭಿಸಿದೆ. ನಾವು ‘ಲಹರಿ’ ಎಂಬ ಕೈ ಬರಹದ ಪತ್ರಿಕೆ ಪ್ರಾರಂಭಿಸಿದ್ದೆವು. ಕಾಲೇಜು ನನಗೆ ರಂಗಭೂಮಿ ಕ್ಷೇತ್ರದಲ್ಲಿ, ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕವಾಗಿ ಬೆಳೆಯಲು ಹೇರಳ ಅವಕಾಶ ಕೊಟ್ಟಿದೆ” ಎಂದರು. ಡಾ. ಬಿ.ಪಿ. ಸಂಪತ್ ಕುಮಾರ ಮಾತನಾಡಿ, “ಬೀಜವು ಭೂಮಿಗೆ ಬಿದ್ದು ಬೃಹತ್ ವೃಕ್ಷವಾಗುವ ರೀತಿಯಲ್ಲಿಯೇ ವಿದ್ಯೆ ಕೂಡ. ಅನ್ನದಾನಕ್ಕಿಂತ ಶ್ರೇಷ್ಠದಾನ, ವಿದ್ಯಾದಾನ. ಓದಬೇಕು, ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಹಂಬಲ ಮೂಡಿದ್ದೇ ಈ ಕಾಲೇಜಿಗೆ ಬಂದ ಬಳಿಕ. ಈ ಕಾಲೇಜು, ಸಿದ್ಧವನ ಗುರುಕುಲ ವಿದ್ಯೆಯನ್ನು ನೀಡಿ ನಮ್ಮ ಜೀವನ ರೂಪಿಸಿದೆ” ಎಂದರು. “ನಿಮ್ಮ ಜೀವನದ ಯಶಸ್ಸು ಯಾವುದೆಂದರೆ ಅದು ನಿಮಗೆ ಸಿಗುವ ಅವಕಾಶವನ್ನು ಬಳಸಿಕೊಳ್ಳುವುದು. ನೀವು ಉತ್ತಮ ಕೆಲಸ ಮಾಡಿ. ಇದರಿಂದ ನಿಮಗೂ ನಿಮ್ಮ ಮುಂದಿನವರಿಗೂ ಶ್ರೇಯಸ್ಸು ಸಿಗುತ್ತದೆ” ಎಂದು ಕಿವಿಮಾತು ಹೇಳಿದರು. ಯು.ಹೆಚ್. ಖಾಲಿದ್ ಮಾತನಾಡಿ, “ನನ್ನೆಲ್ಲಾ ಸಾಧನೆಗೆ ಕಾರಣ ಎಸ್.ಡಿ.ಎಂ. ಕಾಲೇಜು. ನನ್ನ ಬದುಕನ್ನು ಬೆಳಗಿಸಿ ನನ್ನ ಮುಂದಿನ ಬದುಕಿಗೆ ದಾರಿ ಮಾಡಿಕೊಟ್ಟಿದೆ” ಎಂದರು. “ಇಂದಿನ ಮಕ್ಕಳು ನಾಳೆಯ ಪ್ರಜೆಗಳು ಎಂಬ ಮಾತಿದೆ. ಹಾಗೆಯೇ ನಮ್ಮ ಶಕ್ತಿ, ಆಸಕ್ತಿ, ಕಾಳಜಿ, ಪ್ರಯತ್ನವನ್ನು ನಾವೇ ಮೆಚ್ಚಿಕೊಳ್ಳಬೇಕು. ವಿದ್ಯಾವಂತರಾಗಿ ನೀವು ಏನು ಬೇಕಾದರೂ ಮಾಡಿ. ಆದರೆ ಸುಳ್ಳುಗಾರರು, ಪುಂಡರು, ವಂಚಕರು, ಕುಡುಕರು, ಕಟುಕರು ಆಗಬೇಡಿ” ಎಂದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, “ಏನೇ ಆಗುವ ಮೊದಲು ನೀವು ಉತ್ತಮ ಮನುಷ್ಯರಾಗಿ, ನಿಮ್ಮ ಜೀವನದಲ್ಲಿ ಶಿಸ್ತು, ಗುರಿ ಇರಲಿ” ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಈಗಿನ ಮಕ್ಕಳ ಓದಿಗೆ ಸಹಾಯವಾಗಲಿ ಎಂದು ಸಹಾಯಧನ ನೀಡುತ್ತಿದ್ದಾರೆ. ಮಧ್ಯಾಹ್ನದ ಬಿಸಿ ಊಟಕ್ಕೆ ನೆರವು ನೀಡುತ್ತಿದ್ದಾರೆ. ಅವರು ನೀಡಿದ ಹಣದ ಮೌಲ್ಯವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು. ಅತಿಥಿಗಳನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು, ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಸಂಘದ ಕಾರ್ಯಕ್ರಮ ಸಂಯೋಜಕ ಡಾ. ಎಂ. ಪಿ. ಶ್ರೀನಾಥ್ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಅಭಿಲಾಷ್ ವಂದಿಸಿ, ಡಾ. ದಿವಾಕರ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

‘’ಒನ್ ಟೀಮ್, ಒನ್ ಡ್ರೀಮ್’’- ಸಾಮೂಹಿಕ ಯಶಸ್ಸಿನ ಹಾದಿ

Article Image

‘’ಒನ್ ಟೀಮ್, ಒನ್ ಡ್ರೀಮ್’’- ಸಾಮೂಹಿಕ ಯಶಸ್ಸಿನ ಹಾದಿ

ಮೂಡುಬಿದಿರೆ: ಎಲ್ಲರೂ ಒಂದೇ ಮನಸ್ಸಿನಿಂದ ಒಂದು ನಿಗದಿತ ಗುರಿಯೆಡೆಗೆ ಹೆಜ್ಜೆ ಹಾಕಿದಾಗ ಯಶಸ್ಸು ನಮ್ಮದಾಗುತ್ತದೆ ಎಂದು ಮಾಜಿ ವಿಧಾನ ಪರಿಷತ ಸದಸ್ಯ ಗಣೇಶ್ ಕಾರ್ಣಿಕ್ ತಿಳಿಸಿದರು. ಅವರು ಸೋಮವಾರ, ಆಳ್ವಾಸ್‌ನ ಶಿವರಾಮ್ ಕಾರಂತ ವೇದಿಕೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ- ದಿ ಮ್ಯಾಟ್ರಿಕ್ಸ್ ಗ್ರೂಪ್ ಆಯೋಜಿಸಿದ್ದ- ‘’ಒನ್ ಟೀಮ್, ಒನ್ ಡ್ರೀಮ್’’- ಸಾಮೂಹಿಕ ಯಶಸ್ಸಿನ ಹಾದಿ ವಿಷಯದ ಕುರಿತು ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಸಾಮಾರ್ಥ್ಯ ಹಾಗೂ ದೌರ್ಬಲ್ಯಗಳನ್ನು ಅರಿತು, ತಮ್ಮಲ್ಲಿರುವ ನ್ಯೂನತೆಗಳನ್ನು ಮಣಿಸಲು ಆರಂಬಿಸಿದಾಗ ಸಾಧಿಸಲು ಹೊರಟ ಕೆಲಸದಲ್ಲಿ ಜಯ ಲಭಿಸಲು ಸಾಧ್ಯ. ಇದರ ಜೊತೆಗೆ ಪ್ರತಿಯೊಬ್ಬರು ತಂಡದಲ್ಲಿ ಕೆಲಸಮಾಡುವ ಅಗತ್ಯತೆಯನ್ನು ಅರಿಯಬೇಕು. ಇಲ್ಲಿ ವೈಯಕ್ತಿಕ ಹಿತಾಸಕ್ತಿಗಳಿಗೆ ಪ್ರಾಶಸ್ತö್ಯವಿರುವುದಿಲ್ಲ. ತಂಡದ ಶ್ರೇಯಸ್ಸೇ ಪ್ರತಿಯೊಬ್ಬರ ಗುರಿಯಾಗಿರುತ್ತದೆ. ಈ ಹಂತದಲ್ಲಿ ನಾವು ಪಡೆಯುತ್ತಿರುವ ಶಿಕ್ಷಣ ಈ ಪ್ರಕ್ರಿಯೆಗೆ ಎಷ್ಟು ಪರಿಣಾಮಕಾರಿಯಾಗಿ ಸ್ಪಂದಿಸುತ್ತಿದೆ ಎಂಬುದು ಮುಖ್ಯ. ಶಿಕ್ಷಣ ನಮ್ಮನ್ನು ಜವಾಬ್ದಾರಿಯುತ ಹಾಗೂ ಉತ್ತರದಾಯಿತ್ವದ ವಿದ್ಯಾರ್ಥಿಗಳನ್ನಾಗಿಬೇಕು. ಈ ಹಂತದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಿಕೊಂಡು ಬೆಳವಣಿಗೆ ಹೊಂದುವತ್ತಾ ಶ್ರಮಿಸಬೇಕು ಎಂದರು. ಮ್ಯಾಟ್ಟಿಕ್ಸ್ ಟೀಮ್‌ನ ಸಂಯೋಜಕ ಆದಿತ್ಯ ಟೀಮ್ ಬೆಳೆದುಬಂದ ಹಾದಿ ಹಾಗೂ ತೊಡಿಗಿಕೊಂಡಿರುವ ಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಕುಲಸಚಿವರು ಮೌಲ್ಯಮಾಪನ ಡಾ. ನಾರಾಯಣ ಶೆಟ್ಟಿ ಇದ್ದರು. ಸನ್ವಿತ್ ಕಾರ‍್ಯಕ್ರಮ ನಿರ್ವಹಿಸಿ, ಆದರ್ಶ ಸ್ವಾಗತಿಸಿ, ವೆಂಕಟೇಶ್ ಮಲ್ಯ ಹಾಗೂ ತಂಡ ಪ್ರಾರ್ಥಿಸಿ, ಕಾರ್ತಿಕ್ ಅತಿಥಿಯನ್ನು ಪರಿಚಯಿಸಿ, ಆದಿ ಎಸ್ ರೈ ವಂದಿಸಿದರು.

ರೋಟರಿಯಿಂದ ರಕ್ಷಾಬಂಧನ ಸಂಭ್ರಮಾಚರಣೆ

Article Image

ರೋಟರಿಯಿಂದ ರಕ್ಷಾಬಂಧನ ಸಂಭ್ರಮಾಚರಣೆ

ಉಜಿರೆ : ಸಂಕುಚಿತವಾಗುತ್ತಿರುವ ಮಾನವ ಸಂಬಂಧಗಳಿಗೆ ಹಬ್ಬ- ಆಚರಣೆಗಳ ಮಹತ್ವವನ್ನು ಅರಿತುಕೊಳ್ಳಬೇಕು. ರಕ್ಷಾಬಂಧನದಂತ ಆಚರಣೆಯಿಂದ ಸಮಾಜದಲ್ಲಿ ಒಬ್ಬರನೊಬ್ಬರು ಸದಾ ಗೌರವಿಸುವ ಮತ್ತು ಪ್ರೀತಿಸುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳೋಣ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ದಿವ್ಯ ಕುಮಾರಿ ಅಭಿಪ್ರಾಯಪಟ್ಟರು. ಇವರು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾ ಭವನ ಕಾಶಿಬೆಟ್ಟು, ರೊ.ಕೆ ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ನಡೆದ ರಕ್ಷಾ ಬಂಧನ ಸಂಭ್ರಮಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪುರಾಣ ಹಾಗೂ ಇತಿಹಾಸಗಳಲ್ಲೂ ರಕ್ಷಾ ಬಂಧನಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಹಬ್ಬ ಹರಿದಿನಗಳು ತಾಂತ್ರಿಕಗೊಳ್ಳುತ್ತಿರುವ ವರ್ತಮಾನದಲ್ಲಿ ಹಬ್ಬಗಳ ವೈಜ್ಞಾನಿಕ ಮತ್ತು ಧಾರ್ಮಿಕ ಹಿನ್ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ರೋಟರಿಯ ಸೇವಾ ಮನೋಭಾವದ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಮಾತನಾಡಿ, ರಕ್ಷಾ ಬಂಧನ ರಕ್ಷೆ ಮತ್ತು ಪ್ರೀತಿಯ ಸಂಕೇತ. ಕೈ ಕಟ್ಟುವ ಒಂದಗಲದ ದಾರಕ್ಕೆ ತನ್ನದೇ ಆದ ಶಕ್ತಿ ಇದೆ ಎಂದರು. ದೀಪ ಬೆಳಗುವ ಮೂಲಕ ಗೌರವಿಸಿ ರಕ್ಷಾಬಂಧನವನ್ನು ಕಟ್ಟಿ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ರೊಟೆರಿಯನ್ ಸೋನಿಯಾ ವರ್ಮಾ ಸೇರಿದಂತೆ ಇತರೆ ಸದಸ್ಯರು ಉಪಸ್ಥಿತರಿದ್ದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ‘ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’

Article Image

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ‘ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’

ಉಜಿರೆ, ಆ.24: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ಹೇಳಿದರು. ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಆ. 24ರಂದು ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, ಅನ್ನಋಣ ಇತ್ಯಾದಿ ಋಣಗಳಿರುತ್ತವೆ. ಅದು ದೊಡ್ಡ ಭಾರವಾಗಿದ್ದು, ಸಮಾಜಕ್ಕೆ ಮರಳಿ ಕೊಡುಗೆ ನೀಡುವ ಮೂಲಕ ಋಣದ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದು. ನೈತಿಕ ಬೆಂಬಲ ನೀಡುವುದು, ಧನಸಹಾಯ ನೀಡುವುದು, ಸಂಘ ಸಂಸ್ಥೆಗಳ ಮೂಲಕ ನೆರವು ನೀಡುವುದು ಇತ್ಯಾದಿ ಕ್ರಮಗಳ ಮೂಲಕ ಋಣಭಾರ ಇಳಿಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು. “ಹಿರಿಯ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉದ್ಯೋಗ ಪಡೆಯುವಲ್ಲಿ ನೆರವು ನೀಡುತ್ತಿದ್ದು, ಆ ಮೂಲಕ ವಿದ್ಯಾಸಂಸ್ಥೆಯ ಋಣಭಾರ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದರು. ಧನಾತ್ಮಕ ಚಿಂತನೆಯೊಂದಿಗೆ, ಇಚ್ಚಾಶಕ್ತಿ ಹೊಂದಿ ಜೀವನದಲ್ಲಿ ಅಭಿವೃದ್ಧಿ ಕಾಣಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, “ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಧರ್ಮಸ್ಥಳದ ಅಂದಿನ ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಅವರಿಂದ ಪ್ರಾರಂಭವಾದ ಉಜಿರೆ ಎಸ್.ಡಿ.ಎಂ. ಕಾಲೇಜು 58 ವರ್ಷಗಳಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಜೀವನೋಪಾಯಕ್ಕೆ ಮಾತ್ರವಲ್ಲದೆ, ಉತ್ತಮ ಬದುಕಿಗೆ ಹೇತುವಾಗಿದೆ. ವೀರೇಂದ್ರ ಹೆಗ್ಗಡೆ ಅವರ ಪೋಷಣೆಯಲ್ಲಿ ಸಂಸ್ಥೆ ಇನ್ನಷ್ಟು ಬೆಳೆದಿದೆ. ಸಂಸ್ಥೆಯಿಂದ ಔದ್ಯೋಗಿಕ, ವೈಯಕ್ತಿಕ ಕೊಡುಗೆ ಪಡೆದಿರುವ ನಾವು ಪ್ರಸ್ತುತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ರೀತಿಯಲ್ಲಿ ಕೊಡುಗೆ ನೀಡುವುದು ನಮ್ಮ ಜವಾಬ್ದಾರಿ. ಹಿರಿಯ ವಿದ್ಯಾರ್ಥಿಗಳಿಂದ ಸಂಸ್ಥೆಗೆ ಶ್ರೇಷ್ಠತೆ ಬರುತ್ತದೆ. ಅವರಿಂದ ಸಂಸ್ಥೆಗೆ ಬ್ರ್ಯಾಂಡ್ ವ್ಯಾಲ್ಯೂ ಲಭಿಸಿದೆ. ಸಂಸ್ಥೆಯ ಷಷ್ಟ್ಯಬ್ದಿ ಕೂಡ ಉತ್ತಮ ರೀತಿಯಲ್ಲಿ ಆಚರಿಸುವಂತಾಗಲಿ” ಎಂದರು. ಇನ್ನೋರ್ವ ಅತಿಥಿ, ಎಸ್.ಡಿ.ಎಂ. ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, "ಎಸ್.ಡಿ.ಎಂ. ವಿದ್ಯಾ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟ ಗ್ರಾಮೀಣ ಭಾಗದ ವಿದ್ಯಾಸಂಸ್ಥೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ನಮ್ಮ ಕಾಲೇಜು ಶ್ರೇಷ್ಠ ಸಾಧನೆಗಳನ್ನು ಮಾಡಿದೆ. ಇಂದಿನ ಕಾರ್ಯಕ್ರಮ ಮತ್ತೊಮ್ಮೆ ಹಿರಿಯ ವಿದ್ಯಾರ್ಥಿಗಳ ಮಿಲನಕ್ಕೆ ಕಾರಣವಾಗಿದೆ. ಹಿರಿಯ ವಿದ್ಯಾರ್ಥಿಗಳು ಅತ್ಯಂತ ಸಂವೇದನಾಶೀಲರಾಗಿ ಇಂದಿನ ವಿದ್ಯಾರ್ಥಿಗಳಿಗೆ ಅನೇಕ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಮುಂದೆಯೂ ಕೂಡ ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನ ಹೀಗೇ ಇರಲಿ" ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, "ಇಂದು ವಿವಿಧ ಹುದ್ದೆಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಎಸ್.ಡಿ.ಎಂ. ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ರತ್ನವರ್ಮ ಹೆಗ್ಗಡೆ ಅವರ ಕನಸು ಸಾಕಾರಗೊಂಡಿದೆ. ಕಾಲೇಜಿನ ಬೆಳವಣಿಗಾಗಿ ಹಿರಿಯ ವಿದ್ಯಾರ್ಥಿ ಸಂಘ ಸದಾ ನಿಲ್ಲುತ್ತದೆ. ಪ್ರತಿ ತಿಂಗಳ ನೆನಪಿನಂಗಳ ಕಾರ್ಯಕ್ರಮದ ಆಯೋಜನೆ ಹಾಗೂ ವಿವಿಧ ಚಟುವಟಿಕೆಗಳ ಆಯೋಜನೆ ಮಾಡುವುದರ ಮೂಲಕ ನಮ್ಮ ಮಾತೃ ಸಂಸ್ಥೆ ಎಸ್.ಡಿ.ಎಂ. ಕಾಲೇಜಿನ ಋಣವನ್ನು ಭರಿಸಲು ಸಾಧ್ಯವಾಗಿದೆ. ಸಂಘಟನೆಗೆ ಅಂದಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ಭದ್ರ ತಳಪಾಯ ಹಾಕಿದ್ದಾರೆ. ಮಾರ್ಗದರ್ಶನ ನೀಡಿದ್ದಾರೆ" ಎಂದರು. ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಸಂಘದ ವತಿಯಿಂದ 5 ಲಕ್ಷ ರೂ. ಚೆಕ್ ಹಸ್ತಾಂತರಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಾದ ಸುಶಾಂತ್ ಶೆಟ್ಟಿ ಮತ್ತು ಸಿರಿ ಶರ್ಮ ಅವರನ್ನು ಸನ್ಮಾನಿಸಲಾಯಿತು. ಪ್ರಾಸ್ತಾವಿಕ ನುಡಿಗಳನ್ನಾಡಿದ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಿ.ಕೆ. ಧನಂಜಯ ರಾವ್, "ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ. ವಿದ್ಯಾಸಂಸ್ಥೆ ವರದಾನವಾಗಿದೆ. ಇಂತಹ ವಿದ್ಯಾಸಂಸ್ಥೆಯ ಜೊತೆ ಒಡನಾಟವನ್ನು ಹಾಗೆಯೇ ಉಳಿಸಿಕೊಳ್ಳಬೇಕು, ಆಗಾಗ ಕಾಲೇಜಿಗೆ ಭೇಟಿ ನೀಡಿ ನಮ್ಮ ಸಂಬಂಧವನ್ನು ನೆನಪಿಸಿಕೊಳ್ಳಬೇಕು ಎನ್ನುವುದೇ ಸಂಘದ ಉದ್ದೇಶ” ಎಂದರು. ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘವು ಪ್ರಸ್ತುತ ಅತ್ಯಂತ ರಚನಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದೆ. ಕಾಲೇಜಿನಲ್ಲಿ ಪ್ರತಿ ತಿಂಗಳು ನಿರಂತರ ಎಸ್.ಡಿ.ಎಂ. ನೆನಪಿನಂಗಳ (ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈವರೆಗೆ 14 ಕಾರ್ಯಕ್ರಮ ನಡೆದಿದ್ದು ಒಟ್ಟು 14 ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇವರು ತಲಾ 5 ಸಾವಿರದಂತೆ ಒಟ್ಟು 75 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ಅರ್ಹ 15 ಮಂದಿ ವಿದ್ಯಾರ್ಥಿಗಳಿಗೆ ವಿತರಿಸಿ ಉದಾರತೆ ತೋರಿದ್ದಾರೆ ಎಂದರು. ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಹಾಗೂ ಸ್ಥಳೀಯ ಎಸ್.ಡಿ.ಎಂ. ಸಂಸ್ಥೆಗಳ ಸಿಬ್ಬಂದಿ ಉಪಸ್ಥಿತರಿದ್ದರು. ವೈದೇಹಿ ಮತ್ತು ಬಳಗದವರು ಪ್ರಾರ್ಥಿಸಿದರು. ಸಂಘದ ಕಾರ್ಯಕ್ರಮ ಸಂಯೋಜಕ ಡಾ. ಎಂ.ಪಿ. ಶ್ರೀನಾಥ್ ವಂದಿಸಿದರು. ಡಾ. ದಿವಾಕರ ಕೆ. ಮತ್ತು ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿಯ ಕಲಾಮಯಂ ತಂಡದವರಿಂದ ವಿಶೇಷ ರಸಮಂಜರಿ ಕಾರ್ಯಕ್ರಮ ನಡೆಯಿತು.

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳಲ್ಲಿ ನಡೆದ “ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ” ತರಬೇತಿಯ ಸಮಾರೋಪ ಸಮಾರಂಭ

Article Image

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳಲ್ಲಿ ನಡೆದ “ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ” ತರಬೇತಿಯ ಸಮಾರೋಪ ಸಮಾರಂಭ

ಉಜಿರೆ: ಛಾಯಾಗ್ರಹಣ (ಫೋಟೊಗ್ರಫಿ) ವಿಶಿಷ್ಟ ಕಲೆಯಾಗಿದ್ದು, ಸಮಯ, ಸಂದರ್ಭ ಮತ್ತು ಭಾವನೆಗಳನ್ನು ಗಮನಿಸಿ ಫೋಟೊ ತೆಗೆಯುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಬೆಳಕು, ಮುಖದ ಭಾವನೆಗಳು, ಹಾಗೂ ಮಾನಸಿಕ ಸ್ಥಿತಿಯನ್ನು ಗಮನಿಸಿ ಫೋಟೊ ತೆಗೆದರೆ ಮಾತ್ರ ಅದು ಆಕರ್ಷಕವಾಗಿ ಮೂಡಿ ಬರಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಉಜಿರೆಯಲ್ಲಿ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳಲ್ಲಿ ನಡೆದ “ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ” ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು. ಇಂದು ವಿವಿಧ ರೀತಿಯ ಪ್ರಿಂಟಿಂಗ್ ಪೇಪರ್‌ಗಳು ಬಂದಿವೆ. ಅದರ ಬಗ್ಯೆಯೂ ಮಾಹಿತಿ ಕಲೆ ಹಾಕಿ, ಆಲ್ಬಂ ಮಾಡುವಾಗಲೂ ಹತ್ತು ಸಾರಿ ಮತ್ತೆ ಮತ್ತೆ ನೋಡುವಂತೆ ಅದನ್ನು ತಯಾರಿಸಬೇಕು. ಜೀವನದಲ್ಲಿ ಉತ್ತಮ ಶಿಸ್ತನ್ನು ಕೂಡಾ ಅಳವಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತುಸಂಗ್ರಹಾಲಯದಲ್ಲಿ 700 ಕ್ಯಾಮರಾಗಳು ಇವೆ. ಕ್ಯಾಮರಾಗಳ ಮೌಲ್ಯವರ್ಧನೆ ಹಾಗೂ ಮಾದರಿಗಳನ್ನು ಗಮನಿಸಿ ಬುದ್ಧಿವಂತಿಕೆಯಿಂದ ಪ್ರಗತಿ ಸಾಧಿಸಬೇಕು ಎಂದು ಹೆಗ್ಗಡೆಯವರು ತಿಳಿಸಿದರು. “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ರುಡ್‌ಸೆಟ್ ಬೆಳೆದು ಬಂದ ವಿಧಾನದ ಅವಲೋಕನ ಮಾಡಿದರು. ಜಯರಾಮ ಮತ್ತು ಸಿದ್ದಾರ್ಥ ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಮತ್ತು ಅತಿಥಿ ಉಪನ್ಯಾಸಕ ಸೂರ್ಯಪ್ರಕಾಶ್ ಉಪಸ್ಥಿತರಿದ್ದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Article Image

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ ಪರಿಪಕ್ವತೆಯೊಂದಿಗೆ ನಿವೃತ್ತರು ಸಮಾಜಸೇವೆಯಲ್ಲಿ ಪ್ರವೃತ್ತರಾಗಬೇಕು ಎಂದು ಉಜಿರೆಯ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು. ಅವರು ಮಂಗಳವಾರ ಉಜಿರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ಉದ್ಘಾಟಿಸಿ, ಮನವಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿಯೊಬ್ಬರ ಜೀವನದಲ್ಲಿಯೂ ನಿವೃತ್ತಿ ಒಂದು ಅನಿವಾರ್ಯ ಹಂತವಾಗಿದ್ದು ನಿವೃತ್ತರು ತಾಳ್ಮೆ , ಪ್ರೀತಿ-ವಿಶ್ವಾಸ ಹಾಗೂ ಮಾನಸಿಕ ಪರಿಪಕ್ವತೆಯೊಂದಿಗೆ ಆರೋಗ್ಯಪೂರ್ಣ ಜೀವನ ನಡೆಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ ಟಿ. ಕೃಷ್ಣಮೂರ್ತಿ ಮತ್ತು ಪ್ರೊ. ಎ. ಜಯಕುಮಾರ್ ಶೆಟ್ಟಿ ಹಾಗೂ ವೇಣೂರಿನ ಶೀಲಾ ಎಸ್. ಹೆಗ್ಡೆ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲಶೆಟ್ಟಿ ಮಾತನಾಡಿ, ನಿವೃತ್ತರು ವೃದ್ಧರಲ್ಲ, ಪ್ರಬುದ್ದರು. ಕಿರಿಯರಿಗೆ ಸಕಾಲಿಕ ಮಾಹಿತಿ, ಮಾರ್ಗದರ್ಶನ ನೀಡಬೇಕು. ಪ್ರತಿಯೊಬ್ಬ ಸದಸ್ಯರೂ ಸಂಘಟನೆ ಬಗ್ಗೆ ಅಭಿಮಾನ ಮತ್ತು ಆಸಕ್ತಿಯಿಂದ ಸೇವೆ ಮಾಡಬೇಕು ಎಂದು ಹೇಳಿದರು. ಎಲ್ಲಾ ವಿಭಾಗಸಂಘಟಕರು ಮತ್ತು ಹೊಸ ಸದಸ್ಯರನ್ನು ಗೌರವಿಸಲಾಯಿತು. ಸನ್ಮತ್ ಕುಮಾರ್ ನಾರಾವಿ ಪ್ರಾಸ್ತ್ತಾವಿಕವಾಗಿ ಮಾತನಾಡಿದರು. ಬಿ ಸೋಮಶೇಖರ್ ಶೆಟ್ಟಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು. ವಸಂತ ರಾವ್ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

Article Image

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

ಮಂಗಳೂರು: ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆ ನಷ್ಟವಾಗಿದ್ದರೆ ಪರಿಹಾರ ತುಂಬಿ ಕೊಡಲು 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರಕಾರ ಜಾರಿಗೊಳಿಸಿದ್ದು, ಇದರಲ್ಲಿ ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಣಿಗೊಳಿಸಲು ಆಗಸ್ಟ್ 25ರವರೆಗೆ ಅವಧಿ ವಿಸ್ತರಿಸಲಾಗಿದೆ. ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರತಿನಿಧಿ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಮಂಜುನಾಥ ಡಿ. ಅವರ ಮೊಬೈಲ್ ಸಂಖ್ಯೆ 9448999226 ಹಾಗೂ ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ ಅವರ ಸಂಪರ್ಕ ಸಂಖ್ಯೆ 9131962255 ಆಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Article Image

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.5 ಕೊನೆಯ ದಿನವಾಗಿದೆ. ಈ ವರ್ಷದ ಡಿ. 8ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ವಿದ್ಯಾರ್ಥಿ ನಿಧಿಗೆ ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯನ್ನು ಸರಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ಬಡ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಪರೀಕ್ಷೆಯ ಆನ್‌ಲೈನ್ ಅರ್ಜಿ ಕೆಎಸ್‌ಇಎಬಿಯ ವೆಬ್‌ಸೈಟ್ https://kseeb.karnataka. gov.inನಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ 080-23341615 ಸಂಪರ್ಕಿಸಬಹುದು.

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ

Article Image

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ

ಉತ್ಕರ್ಷ ಪ್ರತಿಷ್ಠಾನ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆದ ವಿಷಯದಡಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಅದಿತಿ.ಕೆ ಪ್ರಥಮ ಹಾಗೂ ತನಿಷಾ ಹೆಚ್ ಹೆಗ್ಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅಂಚೆ ಚೀಟಿ ಸಂಗ್ರಹ: ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

Article Image

ಅಂಚೆ ಚೀಟಿ ಸಂಗ್ರಹ: ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

ಅಂಚೆ ಇಲಾಖೆ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‌ಗಾಗಿ 6ರಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಅಧಿಕ ಅಂಕ ಗಳಿಸಿ, ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಸೆ. 3ರ ಮೊದಲು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ವೆಬ್‌ಸೈಟ್ ವಿಳಾಸ: www.karnatakapost.gov.in ಅಥವಾ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು.

ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Article Image

ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಿದ್ಯಾಗಿರಿ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ ಶಿಕ್ಷಣಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ದೊರೆತಿದ್ದು, ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಹಾಕಿದರೆ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ. ಹಾಗೂ ಕಲಾವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕಿ ರಶ್ಮೀನ್ ಸ್ವಾಗತಿಸಿದರು. ಉಪನ್ಯಾಸಕ ಪ್ರಭಾತ್ ಎಸ್. ಆರ್. ವಂದಿಸಿದರು. ಉಪನ್ಯಾಸಕ ರಾಜೇಶ್ ಡಿ'ಸೋಜ ಕಾರ್ಯಕ್ರಮ ನಿರೂಪಿಸಿದರು. ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ

Article Image

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ

ಉಜಿರೆ: ಅನ್ನದಾಸೋಹ, ಅರಿವುದಾಸೋಹ ಮತ್ತು ಅಕ್ಷರದಾಸೋಹ ಎಂಬ ತ್ರಿವಿಧ ದಾಸೋಹದೊಂದಿಗೆ ಮನಪರಿವರ್ತನೆ ಮೂಲಕ ಕ್ರಾಂತಿಕಾರಿ ಸಮಾಜಸುಧಾರಣೆಯೊಂದಿಗೆ ಲೋಕಕಲ್ಯಾಣ ಕಾರ್ಯಗಳನ್ನು ನಿರಂತರ ಮಾಡುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆಯವರು ಸಾಧುಸಂತರಿಗಿಂತಲೂ ಮಿಗಿಲಾಗಿ ಎಲ್ಲರಿಂದಲೂ ದೇವಮಾನವರಾಗಿ ಗೌರವಿಸಲ್ಪಡುತ್ತಾರೆ. ಅವರ ದರ್ಶನದಿಂದ ದೇವರ ದರ್ಶನ ಮಾಡಿದಷ್ಟೇ ಸಂತೋಷ, ಮಾನಸಿಕ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ತುಮಕೂರಿನ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮದ್ಯವ್ಯಸನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರ ಶತದಿನೋತ್ಸವದ ಸಂಭ್ರಮದ ನವಜೀವನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮದ್ಯಪಾನದಂತಹ ವ್ಯಸನಗಳಿಗೆ ಬಿದ್ದವರನ್ನು ಮತ್ತು ಬೀಳುತ್ತಿರುವವರನ್ನು ಎತ್ತಿ ಹಿಡಿಯುವುದೇ ನಿಜವಾದ ಧರ್ಮವಾಗಿದೆ. “ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು” ಎನ್ನುವಂತೆ ಮನೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಕಾರ್ಯವಾಗಬೇಕು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಾತಾ-ಪಿತರಂತೆ ಬಹಳ ಪ್ರೀತಿ-ವಿಶ್ವಾಸದಿಂದ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಮಾಡುತ್ತಿರುವ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾಸಬಲೀಕರಣ, ಕೆರೆಗಳ ಪುನಶ್ಚೇತನ, ಶುದ್ಧ ಕುಡಿಯುವ ನೀರಿನಘಟಕ, ಮನಪರಿವರ್ತನೆ ಮೂಲಕ ಮದ್ಯವರ್ಜನ ಶಿಬಿರಗಳು, ಸ್ವ-ಉದ್ಯೋಗ ತರಬೇತಿ ಇತ್ಯಾದಿ ಸೇವಾ ಕಾರ್ಯಕ್ರಮ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿವೆ ಎಂದರು. ತುಮಕೂರಿನಲ್ಲಿ ತಮ್ಮ ಮಠದ ಭಕ್ತರಾದ ಚಂದ್ರಶೇಖರ ಎಂಬವರು ಮದ್ಯವ್ಯಸನಿಯಾಗಿದ್ದು ಮದ್ಯವರ್ಜನ ಶಿಬಿರಕ್ಕೆ ಸೇರಿ ವ್ಯಸನಮುಕ್ತರಾಗಿ ಈಗ ಎಂಜಿನಿಯರ್‌ರಾಗಿ ಸ್ವಂತ ಉದ್ಯಮದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿರುವುದನ್ನು ಸ್ವಾಮೀಜಿ ಉಲ್ಲೇಖಿಸಿ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದರು. ಸಮಾರಂಭವನ್ನು ಉದ್ಘಾಟಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರು ಮನ, ವಚನ, ಕಾಯದಿಂದ ದೃಢ ಸಂಕಲ್ಪ ಮಾಡಿ ಮುಂದೆ ಸಾರ್ಥಕ ಜೀವನ ನಡೆಸಬೇಕು. ಅಂತರಂಗದಲ್ಲಿಯೂ ಬಹಿರಂಗದಲ್ಲಿಯೂ ಪರಿಶುದ್ಧರಾಗಿ ದೇವರ ದರ್ಶನ ಮಾಡಿ ಅನುಗ್ರಹ ಪಡೆದು ಮುಂದೆ ಸುಖ-ಶಾಂತಿ, ನೆಮ್ಮದಿಯ ಕೌಟುಂಬಿಕ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ವ್ಯಸನಮುಕ್ತರ ಭಾಗ್ಯದ ಬಾಗಿಲು ತೆರೆದಿದೆ ಎಂದು ಅವರಿಗೆ ಉಜ್ವಲ ಭವಿಷ್ಯವನ್ನು ಹೆಗ್ಗಡೆಯವರು ಹಾರೈಸಿದರು. ಮಾಜಿ ವಿಧಾನಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಶುಭಾಶಂಸನೆ ಮಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕನಸು ಕಂಡ ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಹಾಗೂ ವ್ಯಸನಮುಕ್ತ ಭಾರತವನ್ನು ಹೆಗ್ಗಡೆಯವರು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶೇ. ನೂರರಷ್ಟು ನನಸಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ಶ ತದಿನೋತ್ಸವವನ್ನು ಆಚರಿಸಿದ ವ್ಯಸನಮುಕ್ತರು ಜೀವನಪರ್ಯಂತ ಆತ್ಮಸಾಕ್ಷಿಗೆ ಅನುಗುಣವಾಗಿ ಉತ್ತಮ ಜೀವನ ನಡೆಸಬೇಕು. ತಮಗೆ ಯಾವುದೇ ಸಮಸ್ಯೆ ಬಂದರೂ ಯೋಜನಾಧಿಕಾರಿ ಅಥವಾ ಶಿಬಿರಾಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯ ಡಾ. ಅಭಿಷೇಕ್ ಚತುರ್ವೇದಿ ಮತ್ತು ದೇರಳೆಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಡಾ. ಮೇಖಲಾ ದಿವಾಕರ್ ಅವರು ಮದ್ಯವರ್ಜನ ಶಿಬಿರಗಳ ಬಗ್ಗೆ ರಚಿಸಿದ ಸಂಶೋಧನಾ ಪ್ರಬಂಧಗಳನ್ನು ಡಿ. ವೀರೇಂದ್ರ ಹೆಗಡೆಯವರಿಗೆ ಅರ್ಪಿಸಿದರು. ಮಂಗಳೂರಿನ ಡಾ. ಶ್ರೀನಿವಾಸ ಭಟ್, ಎಸ್. ಡಿ. ಸಂಪತ್ ಸಾಮ್ರಾಜ್ಯ, ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ಅಧಿಕಾರಿ ದುಗ್ಗೇಗೌಡ, ಜಿಲ್ಲಾಧ್ಯಕ್ಷ ಪದ್ಮನಾಭ ಭಟ್, ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಕಾಸಿಂ ಮಲ್ಲಿಗೆಮನೆ ಮೊದಲಾದವರು ಉಪಸ್ಥಿತರಿದ್ದರು. ಪ್ರಾಸ್ತಾವಿಕ ಮಾತುಗಳೊಂದಿಗೆ ವಿವೇಕ್ ವಿ. ಪಾÊಸ್, ಸ್ವಾಗತಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗೇಶ್ ಮತ್ತು ಭಾಸ್ಕರ್, ಎನ್. ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

ಉಜಿರೆ: ಆಟಿ ಕಳೆಂಜ ಶಿವನ ಪ್ರತಿರೂಪ ಎಂಬ ನಂಬಿಕೆ ತುಳುನಾಡಿನಲ್ಲಿದೆ. ಆಟಿಕಳೆಂಜನ ವಿಶೇಷ ವೇಶಭೂಷಣ ತುಂಬಾ ಸರಳ ಮತ್ತು ಅರ್ಥಪೂರ್ಣವಾಗಿದ್ದು ಆಟಿ ಕಳೆಂಜ ಮನೆಮನೆಗೆ ಬಂದರೆ ದುಷ್ಟಶಕ್ತಿಗಳು ಹಾಗೂ ರೋಗರುಜಿನನಗಳು ದೂರವಾಗುತ್ತವೆ ಎಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಕನ್ನಡ ಮುಖ್ಯಸ್ಥ ಪ್ರೊ. ಯೋಗೀಶ್ ಕೈರೋಡಿ ಹೇಳಿದರು. ಅವರು ಶನಿವಾರ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಇತಿಹಾಸ ವಿಭಾಗ ಮತ್ತು ತುಳು ಸಂಘದ ಆಶ್ರಯದಲ್ಲಿ ಆಯೋಜಿಸಿದ ತುಳುವೆರೆ ಆಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಪೂರ್ವಜರಿಗೆ ಓದಲು, ಬರೆಯಲು ಬಾರದಿರುವುದರಿಂದ ಅವರನ್ನು ಅಜ್ಞಾನಿಗಳು ಎಂದು ಭಾವಿಸಬಾರದು. ಅನಿವಾರ್ಯತೆಯಿಂದ ಅವರು ಆಹಾರ ಪದಾರ್ಥಗಳನ್ನು ಅವರು ಸಂಶೋಧಿಸಿದರು. ಆದರೆ ಈಗ ಜನರು ಅಕ್ಷರಸ್ಥರಾದರು ತೀವ್ರ ಪೈಪೋಟಿ, ಧನದಾಹ, ಸುಖ-ಭೋಗಗಳ ಲಾಲಾಸೆ, ಹೋಲಿಕೆ, ಅಸೂಯೆ, ದ್ವೇಷಭಾವನೆಯಿಂದ ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸ ಮಾಯವಾಗಿದೆ ಯಾರಲ್ಲಿಯೂ ಆತ್ಮೀಯ ಸಂಬಂಧವಿಲ್ಲ ಎಂದು ಅವರು ಹೇಳಿದರು. “ಮರಿ ತುಚ್ಚಿಂಡ ಮರ್ದುಂಡು, ಅರಿ ತುಚ್ಚಿಂಡ ಮರ್ದಿಜ್ಜಿ” ಎಂಬ ಮಾತಿದೆ. ಆದರೆ ಆಹಾರವಿಲ್ಲದೆ ಬದುಕಲು ಸಾಧ್ಯವಿಲ್ಲ. ಹಿಂದೆ ಆಹಾರವೇ ಔಷಧಿಯಾಗಿದ್ದರೆ ಇಂದು ಹೆಚ್ಚಿನವರಿಗೆ ಔಷದಿಯೇ ಆಹಾರವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ ಆಧುನಿಕ ಜನತೆಗೆ ಆಟಿ ಅಡಂಬರವಾಗಿದೆ. ಮಾಲ್, ಹೋಟೆಲ್‌ಗಳಲ್ಲಿ ಹಬ್ಬಗಳನ್ನು ಆಚರಿಸುವಂತಾಗಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮ ತುಳುನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆ ಹಾಗೂ ಆಹಾರ ಔಷಧಿಗಳ ಬಗ್ಗೆ ಅರಿವು ಜಾಗೃತಿ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕೊಯೂರಿನ ಅಮ್ಮಿ ನಲಿಕೆ ಮತ್ತು ಬಳಗದವರ ಆಟಿಕಳೆಂಜ ವೇಷ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಪ್ರಾಚೀನ ವಸ್ತುಗಳ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಸನ್ಮತಿಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಅಭಿಜ್ಞಾ ಉಪಾಧ್ಯಾಯ ಧನ್ಯವಾದವಿತ್ತರು. ವಿದ್ಯಾರ್ಥಿನಿಯರಾದ ಕುಮಾರಿ ಶ್ರದ್ದಾ ಮತ್ತು ಕುಮಾರಿ ಸೃಷ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಡೆಂಗ್ಯೂ ಜ್ವರ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Article Image

ಡೆಂಗ್ಯೂ ಜ್ವರ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಉದ್ಯಾನವನ ವಿಭಾಗದ ಸಿಬ್ಬಂದಿಗಳಿಗೆ “ಡೆಂಗ್ಯೂ ಜ್ವರ ತಡೆಗಟ್ಟುವಿಕೆ” ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕೀಟಶಾಸ್ತ್ರಜ್ಞರಾದ ಮಂಜುನಾಥ್ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಈ ಕಾರ್ಯಕ್ರಮವು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಗುರುತಿಸಿ ಮತ್ತು ಅವುಗಳ ನಿಯಂತ್ರಣ ಮಾಡುವ ಪ್ರಾಮುಖ್ಯತೆಯನ್ನು ತಿಳಿಸಿದರು. ಸೊಳ್ಳೆ ಕಡಿತದಿಂದ ರಕ್ಷಿಸಲು ವೈಯಕ್ತಿಕ ರಕ್ಷಣಾ ಕ್ರಮಗಳ ಬಳಕೆಗೆ ಒತ್ತು ನೀಡಿತು, ಲಾರ್ವಿವೋರಸ್ ಮೀನುಗಳ (ಗಪ್ಪಿ ಮೀನು) ಜೊತೆಗೆ ಸೊಳ್ಳೆಗಳ ಲಾರ್ವಾ ಮತ್ತು ಪ್ಯೂಪಲ್ ಹಂತಗಳ ನೇರ ಪ್ರದರ್ಶನವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕ ಡಾ. ಉಮೇಶ್ ಆರ್. ದೀಕ್ಷಿತ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಕೇಶ್ ಕೆ. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್ ಸ್ವಯಂ ಸೇವಕರು ಕರಪತ್ರಗಳು ಮತ್ತು ಸ್ಕ್ಯಾಂಡಿಗಳನ್ನು ಬಳಸಿಕೊಂಡು ಸಿಬ್ಬಂದಿಗೆ ಶಿಕ್ಷಣ ನೀಡಿದರು.

ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ; ಎನ್ನೆಸ್ಸೆಸ್ ಸರಣಿ ಕಾರ್ಯಕ್ರಮಗಳ ಸಮಾರೋಪ

Article Image

ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ; ಎನ್ನೆಸ್ಸೆಸ್ ಸರಣಿ ಕಾರ್ಯಕ್ರಮಗಳ ಸಮಾರೋಪ

ಉಜಿರೆ, ಆ.7: ಕಾರ್ಗಿಲ್ ವಿಜಯ ದಿನಾಚರಣೆಯು ದೀಪಾವಳಿ ಹಬ್ಬದಂತೆ ಸಮಸ್ತ ದೇಶವಾಸಿಗಳಿಂದ ಆಚರಿಸಲ್ಪಡುತ್ತಿರುವುದು ಸಂತಸದ ಸಂಗತಿ ಎಂದು ಕಾರ್ಗಿಲ್ ಯುದ್ಧ ಸೇನಾನಿ ಕ್ಯಾಪ್ಟನ್ ನವೀನ್ ನಾಗಪ್ಪ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಇಂದು (ಆ.7) ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ ಹಾಗೂ ಕಾರ್ಗಿಲ್ ವಿಜಯ ದಿವಸ್ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಆರಂಭದಲ್ಲಿ ಕಾರ್ಗಿಲ್ ವಿಜಯ ದಿನಾಚರಣೆಯು ಸೈನ್ಯದಿಂದ ಮಾತ್ರ ಆಚರಿಸಲ್ಪಡುತ್ತಿತ್ತು. ಕ್ರಮೇಣ ನಾಗರಿಕರು ಆಚರಿಸಲು ಆರಂಭಿಸಿದರು. ಪ್ರಸ್ತುತ ದೇಶಾದ್ಯಂತ ವ್ಯಾಪಕವಾಗಿ ಆಚರಿಸಲ್ಪಡುತ್ತಿದೆ ಎಂದು ಅವರು ಹೇಳಿದರು. “ದೇಶದ ಪ್ರಾಂತೀಯ ಸಮಗ್ರತೆಗಾಗಿ ನಾವು ಹೋರಾಟ ಮಾಡಿದೆವು. ಕಿರಿಯ ವಯಸ್ಸಿನ ಸೈನಿಕರು ಪ್ರಾಣತ್ಯಾಗ ಮಾಡಿದರು. ಇಲ್ಲಿಯವರೆಗೆ ನಾವು ದೇಶವನ್ನು ಮುಂದೆ ತೆಗೆದುಕೊಂಡು ಬಂದಿದ್ದೇವೆ, ಇನ್ನು ಮುಂದೆ ದೇಶವನ್ನು ಮುನ್ನಡೆಸಬೇಕಾದವರು ನೀವು. ಈಗ ನಿಮ್ಮ ಸರದಿ” ಎಂದರು. “ದೇಶವು ಸುರಕ್ಷಿತ ಕೈಗಳಲ್ಲಿದೆ” ಎಂದು ಅವರು ಸಮಾಧಾನ ವ್ಯಕ್ತಪಡಿಸಿದರು. “ಈ ಮಣ್ಣಿನಲ್ಲಿ ಹುಟ್ಟಲು ನಾನು ಅದೃಷ್ಟ ಮಾಡಿದ್ದೇನೆ. ಹಲವು ಜನರಿಗೆ ಹಲವು ಪ್ರಯತ್ನಗಳ ಬಳಿಕವೂ ಸೈನ್ಯ ಸೇರಲು ಸಾಧ್ಯವಾಗುವುದಿಲ್ಲ. ಆದರೆ ನಾನು ಪ್ರಥಮ ಪ್ರಯತ್ನದಲ್ಲಿಯೇ ಯಶಸ್ವಿಯಾದೆ. ಯುದ್ಧದಲ್ಲಿ ಪಾಲ್ಗೊಳ್ಳುವ ಅವಕಾಶವೂ ಸಿಕ್ಕಿತು. ಭಾರತಾಂಬೆಗೆ ಅಳಿಲುಸೇವೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿತು. ದೇಶಕ್ಕೆ ಈಗ ಸೇವೆ ಮಾಡದಿದ್ದಲ್ಲಿ ಇನ್ನು ಯಾವಾಗ? ನಾವಲ್ಲದೆ ಇನ್ನಾರು?” ಎಂದು ಅವರು ಹೇಳಿದರು. ಅತಿಥಿ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿದರು. ದೇಶಕ್ಕೆ ಸೈನ್ಯ ಮತ್ತು ಸೈನಿಕರು ಎಷ್ಟು ಅನಿವಾರ್ಯ ಎಂಬುವುದು ಎಲ್ಲರಿಗೂ ಗೊತ್ತು. ನಾವು ರಾತ್ರಿ ನೆಮ್ಮಯಿಂದ ಮಲಗಿ ನಿದ್ದೆ ಹೋಗುತ್ತೇವೆ ಎಂದರೆ ಅದಕ್ಕೆ ಕಾರಣ ನಮ್ಮ ಹೆಮ್ಮೆಯ ಯೋಧರು. ದೇಶವನ್ನು ಕಾಪಾಡುವವರು ಯೋಧರು. ಆದ್ದರಿಂದ ಸೈನ್ಯದ ವ್ಯವಸ್ಥೆ ದೇಶಕ್ಕೆ ಅತೀ ಅಗತ್ಯ ಎಂದರು. ಮಾತೃಋಣ, ಪಿತೃಋಣ, ಗುರುಋಣಕ್ಕಿಂತಲೂ ಸೈನ್ಯ ಋಣ ಮಿಗಿಲು. ನಮ್ಮ ನಮ್ಮ ಕರ್ತವ್ಯದಲ್ಲಿ ಸೈನಿಕರ ಬದ್ಧತೆ, ಸೇವಾ ಮನೋಭಾವ ಅಳವಡಿಸಿಕೊಳ್ಳುವ ಮೂಲಕ ಆ ಋಣ ತೀರಿಸಬಹುದು. ಆ ನಿಟ್ಟಿನಲ್ಲಿ ಈ ಕಾರ್ಯಕ್ರಮ ಪೂರಕ ಎಂದು ಅವರು ಅಭಿಪ್ರಾಯಪಟ್ಟರು. ದೈಹಿಕ, ಮಾನಸಿಕ, ಭಾವನಾತ್ಮಕ ದೃಢತೆ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ದೇಶದ ಸೈನಿಕರು ದೇಶದ ರಕ್ಷಣೆ ಮಾಡುವಾಗ ದೇಶವಾಸಿಗಳಾದ ನಾವು ದೇಶದೊಳಗಡೆ ಏನು ಮಾಡುತ್ತಿದ್ದೇವೆ ಎಂಬುದನ್ನು ಅವಲೋಕನ ಮಾಡಬೇಕಿದೆ. ಸೈನಿಕರ ಶ್ರಮವನ್ನು ಯುವಜನರು ಅರಿತುಕೊಳ್ಳಬೇಕು. ನಮ್ಮ ಕಾಲೇಜಿನ ಎನ್ನೆಸ್ಸೆಸ್ ಘಟಕ ತನ್ನ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸದಾಯಕ ಎಂದರು. ಭಾರತ ಎಂದಿಗೂ ಯಾವ ದೇಶದ ಮೇಲೆಯೂ ಕೂಡ ಯುದ್ಧ ಸಾರಿಲ್ಲ. ಆದರೆ ತನ್ನ ಮೇಲೆ ದಾಳಿ ಮಾಡಿದವರನ್ನು ಎಂದಿಗೂ ಸದೆ ಬಡಿಯದೆ ಬಿಟ್ಟಿಲ್ಲ ಎಂಬುದಕ್ಕೆ ಕಾರ್ಗಿಲ್ ಯುದ್ಧವೇ ಸಾಕ್ಷಿ ಎಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್ ಎಸ್ ಎಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್., "24ನೇ ಕಾರ್ಗಿಲ್ ವಿಜಯ ದಿನಾಚರಣೆ ಸಂದರ್ಭದಲ್ಲಿ ನಾವು ಸರಣಿ ಕಾರ್ಯಕ್ರಮಗಳನ್ನು ನಡೆಸುವ ಸಂಕಲ್ಪ ಮಾಡಿದ್ದೆವು. ಶಾಲಾ ಕಾಲೇಜುಗಳಲ್ಲಿ ದೇಶಭಕ್ತಿ ಕುರಿತ ಸರಣಿ ಕಾರ್ಯಕ್ರಮ ನಡೆಸಿ, ಇಂದು ಸಮಾರೋಪ ಸಮಾರಂಭ ಆಯೋಜಿಸಿದ್ದೇವೆ" ಎಂದರು. ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ನಡೆಸಿದ ಭಾಷಣ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಟ್ಟಿಯನ್ನು ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರೊ. ದೀಪ ಆರ್.ಪಿ. ವಾಚಿಸಿದರು. ಗಣ್ಯರು ಬಹುಮಾನ ವಿತರಿಸಿದರು. ಎನ್ನೆಸ್ಸೆಸ್’ನ ಭಿತ್ತಿ ಪತ್ರಿಕೆ ‘ಯುವ ಚೇತನ’ದ ನೂತನ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಭಾರತಾಂಬೆ ಭಾವಚಿತ್ರ ಹಾಗೂ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಅತಿಥಿಯನ್ನು ಸನ್ಮಾನಿಸಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಶಯನ್ ಕುಮಾರ್ ರಚಿಸಿದ ಪೆನ್ಸಿಲ್ ಸ್ಕೆಚ್ ಅನ್ನು ಅತಿಥಿಗೆ ನೀಡಿದರು. ಸ್ವಯಂಸೇವಕಿಯರಾದ ಶ್ವೇತಾ ಕೆ ಜಿ ನಿರೂಪಿಸಿ, ಸಿಂಚನ ಕಲ್ಲೂರಾಯ ವಂದಿಸಿದರು. ಬಳಿಕ, ಕ್ಯಾಪ್ಟನ್ ಅವರೊಂದಿಗೆ ಎನ್ನೆಸ್ಸೆಸ್ ಅಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸಂವಾದ ನಡೆಸಿದರು. ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ನಡೆಯಿತು.

ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Article Image

ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: "ನಮ್ಮ ಭಾರತದ ಜನಸಂಖ್ಯೆ 145 ಕೋಟಿಗೂ ಅಧಿಕವಾಗಿದ್ದು ಚೀನಾವನ್ನು ಹಿಂದಿಕ್ಕಿದೆ. ಚಾರ್ಲ್ಸ್ ಡಾರ್ವಿನ್ ಹೇಳಿದಂತೆ ಅತಿಯಾದ ಜನಸಂಖ್ಯೆಯಿಂದಾಗಿ ಉಳಿಯುವಿಕೆ ಕಷ್ಟವಾದಾಗ, ಅವರಲ್ಲಿ ಯಾರು ಬಲಿಷ್ಠನು ಹಾಗೂ ಕೌಶಲವನ್ನು ಹೊಂದಿರುತ್ತಾನೋ ಆತ ಮಾತ್ರ ಈ ಸಮಾಜದಲ್ಲಿ ಉಳಿಯಲು ಸಾಧ್ಯ" ಎಂದು ಉಜಿರೆ ಶ್ರೀ ಧ.ಮಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಹೇಳಿದರು. ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಸಹಯೋಗದಲ್ಲಿ ಆ.8ರಂದು ಆಯೋಜಿಸಲಾಗಿದ್ದ ವಾಣಿಜ್ಯ ಕ್ಯಾಂಪಸ್ ಅಸೋಸಿಯೇಷನ್’ನ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಮನುಷ್ಯನ ಜೀವನ ಎಂದರೆ ಏಳು- ಬೀಳು ಸಹಜ. ಆದರೆ ಬಿದ್ದಾಗ ಹೇಗೆ ಎದ್ದು ನಿಂತು ಧೈರ್ಯದಿಂದ ಕಷ್ಟವನ್ನು ಎದುರಿಸುತ್ತಾನೆ ಎಂಬುದು ಬಹುಮುಖ್ಯವಾಗಿರುತ್ತದೆ. ನಿಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ನಮ್ಮ ಕಾಲೇಜು ಬಹುಮುಖ್ಯ ಪಾತ್ರವನ್ನು ವಹಿಸಲಿದ್ದು, ಮುಂದಿನ ಭವಿಷ್ಯದ‌ ಒಳಿತಿಗಾಗಿ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಿ" ಎಂದು ಅವರು ಕರೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರೀಕ್ಷಾ ಅಕಾಡೆಮಿಯ ಚೀಫ್ ಮಾರ್ಕೆಟಿಂಗ್ ಆಫೀಸರ್ ಮತ್ತು ಸಾಫ್ಟ್‌ಸ್ಕಿಲ್ಸ್ ಟ್ರೈನರ್ ಎಂ.ಆರ್. ಚಂದನ್ ರಾವ್, "ನಿಮ್ಮ ಜೀವನದಲ್ಲಿ ವಾಣಿಜ್ಯ ಎಷ್ಟು ಮುಖ್ಯ ಮತ್ತು ಅದನ್ನು ಹೇಗೆ ಬಳಸಬಹುದು ಎಂಬುದನ್ನು ಅರಿಯಿರಿ. ಶ್ರದ್ಧೆ ಮತ್ತು ಕೌಶಲಗಳನ್ನು ಬಳಸಿಕೊಂಡು ನಿಮ್ಮ ವ್ಯವಹಾರ ಜ್ಞಾನವನ್ನು ವಿಸ್ತರಿಸಿ. ಆಗ ಯಶಸ್ಸು ಸದಾ ನಿಮ್ಮೊಟ್ಟಿಗಿರುತ್ತದೆ" ಎಂದು ಕಿವಿಮಾತು ಹೇಳಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ, 2022-23ನೇ ಸಾಲಿನ ರಾಜ್ಯಮಟ್ಟದ ಉತ್ತಮ ರಾಷ್ಟ್ರೀಯ ಸೇವಾಯೋಜನಾ ಘಟಕದ ಆಫೀಸರ್ ಪ್ರಶಸ್ತಿ ಪಡೆದ ಡಾ. ಲಕ್ಷ್ಮಿನಾರಾಯಣ ಕೆ.ಎಸ್. ಹಾಗೂ ಇತ್ತೀಚೆಗೆ ಪಿಎಚ್.ಡಿ. ಪದವಿ ಪಡೆದ ಭಾನುಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. 2023 -24ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವ್ಯವಹಾರ ಆಡಳಿತ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿ ನಿಹಾಲ್ ಸಿಂಗ್ ಪಿ. ಅವರು ಪ್ರಸ್ತುತ ವ್ಯಾಪಾರ ಬೆಳವಣಿಗೆ ಮತ್ತು ನಿರ್ವಹಣೆಯ ವಿಕಸನದ ಅಗತ್ಯತೆಗಳ ಕುರಿತು ಬರೆದಿರುವ ‘ಟ್ರೆಂಡ್ ಮ್ಯಾಟ್ರಿಕ್ಸ್ – ಮಂತ್ಲಿ ಡೈಜೆಸ್ಟ್ ಆಫ್ ಬ್ಯುಸಿನೆಸ್ ಟ್ರೆಂಡ್ಸ್’ ಪುಸ್ತಕವನ್ನು ಪ್ರಾಂಶುಪಾಲರು ಬಿಡುಗಡೆಗೊಳಿಸಿದರು. ವಾಣಿಜ್ಯ ಕ್ಯಾಂಪಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳಿಗೆ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಪ್ರಮಾಣವಚನ ಬೋಧಿಸಿದರು. ಅಸೋಸಿಯೇಶನ್ ಕಾರ್ಯದರ್ಶಿ ಸಹನಾ ಡೋಂಗ್ರೆ 2023-24ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ವಾಣಿಜ್ಯ ವಿಭಾಗದ ಭಿತ್ತಿಪತ್ರಿಕೆ ‘ವಾಣಿಕ’ ಅನಾವರಣಗೊಳಿಸಲಾಯಿತು. ಕಾಲೇಜಿನ ಆಡಳಿತಾಂಗ ಕುಲಸಚಿವೆ ಡಾ. ಶಲೀಫ್ ಕುಮಾರಿ, ವಾಣಿಜ್ಯ ನಿಕಾಯದ ಡೀನ್ ಹಾಗೂ ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥೆ ಶಕುಂತಲಾ, ವಾಣಿಜ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ. ಪ್ರಿಯಾ ಕುಮಾರಿ, ವಾಣಿಜ್ಯ ಕ್ಯಾಂಪಸ್ ಅಸೋಸಿಯೇಶನ್ ಸಂಯೋಜಕರಾದ ಗುರುರಾಜ್ ಮತ್ತು ವಿನುತ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಷ್ಮಿತಾ ಮತ್ತು ತಂಡದವರು ಪ್ರಾರ್ಥಿಸಿದರು. ವಾಣಿಜ್ಯ ಕ್ಯಾಂಪಸ್ ಅಸೋಸಿಯೇಶನ್ ಸಿ.ಇ.ಒ. ದೀಕ್ಷಿತ ಸ್ವಾಗತಿಸಿ, ಸಿ.ಎಫ್.ಒ. ಶ್ರೀಗಣೇಶ್ ವಂದಿಸಿದರು. ಧಾರಿಣಿ ಮತ್ತು ಧರಿತ್ರಿ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

Article Image

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

ಉಜಿರೆಯ ಶ್ರೀ ಧ. ಮಂ. ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯಸೌರಭ ಹಾಗೂ ಇಕೋ-ಕ್ಲಬ್ ವತಿಯಿಂದ ಉಜಿರೆಯ ರತ್ನಮಾನಸದಲ್ಲಿ ಆ.2ರಂದು ನೇಜಿ ನೆಡುವ ಕಾರ್ಯಕ್ರಮ ನಡೆಯಿತು. ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಮಾಹಿತಿಗಳನ್ನು ನೀಡಿದರು. ದ್ವಿತೀಯ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 40 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಕುಂತಲಾ ಬಿ., ಅಭಿಲಾಷ್ ಕೆ.ಎಸ್., ಮಂಜುಶ್ರೀ ಹಾಗೂ ಭವ್ಯ ಡಿ. ನಾಯಕ್ ಪಾಲ್ಗೊಂಡರು. ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಶುಭ ಹಾರೈಸಿದರು.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆಬಲ್ ಟೆನ್ನಿಸ್ ಪಂದ್ಯಾಟ

Article Image

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆಬಲ್ ಟೆನ್ನಿಸ್ ಪಂದ್ಯಾಟ

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ-ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ತಾಲೂಕು, ದ.ಕ ಮತ್ತು ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ- ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ 2024-25ನೇ ಸಾಲಿನ ಮೂಡಬಿದಿರೆ ತಾಲೂಕು ಮಟ್ಟದ- ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ಸಿಸ್ ಪಂದ್ಯಾಟ ಆಗಸ್ಟ್ 3ರ ಶನಿವಾರದಂದು ನಡೆಯಿತು. ಪಂದ್ಯಾಟಗಳನ್ನು ಉದ್ಘಾಟಿಸಿ ಮಾತನಾಡಿದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್- “ಮಕ್ಕಳೇ, ವಿದ್ಯಾರ್ಥಿ ಜೀವನ ಬಹು ಅಮೂಲ್ಯವಾದದ್ದು, ಇಲ್ಲಿ ನಿಮಗೆ ದೊರೆಯುವ ಎಲ್ಲಾ ರೀತಿಯ ಅವಕಾಶಗಳನ್ನು ಬಳಸಿಕೊಳ್ಳಿ, ಗುರಿಯಿಟ್ಟು ಛಲಬಿಡದೇ, ನಿರಂತರವಾಗಿ ಯಶಸ್ಸಿಗಾಗಿ ಶ್ರಮಿಸಿ, ಗೆದ್ದಾಗ ಅತೀಯಾಗಿ ಹಿಗ್ಗದೇ, ಸೋತಾಗ ಕುಗ್ಗದೇ, ಸೋಲನ್ನು ಗೆಲುವಿನ ಮೆಟ್ಟಿಲುಗಳನ್ನಾಗಿ ಬಳಸಿಕೊಂಡು ನಿಮ್ಮ ಗುರಿಯತ್ತ ಮುನ್ನಡೆಯಿರಿ. ಬೇರೆಯವರು ಗೆದ್ದಾಗ ಅಸೂಯೆ ಪಡದೇ, ಅವರಿಂದ ಪಾಠ ಕಲಿಯಿರಿ- ನನ್ನಿಂದಾಗದು ಎಂಬ ಕೆಟ್ಟ ಯೋಚನೆಯನ್ನು ಮನಸ್ಸಿನಿಂದ ತೆಗೆದುಹಾಕಿ. ಮುಂದಿನ ದಿನಗಳಲ್ಲಿ ಒಲಂಪಿಕ್ಸ್ ನಂತಹ ಶ್ರೇಷ್ಠ ಮಟ್ಟದ ಕ್ರೀಡಾಕೂಟಗಳಲ್ಲಿ ಭಾರತಮಾತೆಯನ್ನು ಪ್ರತಿನಿಧಿಸಿ-ಪದಕ ಗೆಲ್ಲುವ ಸಾಧಕರು ನೀವಾಗಿ. ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಅರ್ಹ ವಿದ್ಯಾರ್ಥಿಗಳಿಗೆ ಒದಗಿಸಿಕೊಡಲು ಎಕ್ಸಲೆಂಟ್ ವಿದ್ಯಾಸಂಸ್ಥೆ ಸದಾ ಸಿದ್ಧವಿದೆ” ಎನ್ನುತ್ತಾ ಎಲ್ಲ ಮಕ್ಕಳಿಗೂ ಶುಭಹಾರೈಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಮೂಡುಬಿದಿರೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ನಿತ್ಯಾನಂದ ಶೆಟ್ಟಿಯವರು, ಈ ಆಟಗಳ ರೂಪುರೇಷೆಗಳನ್ನು ವಿವರಿಸಿ, ಅತ್ಯಂತ ಅಚ್ಚುಕಟ್ಟಾದ ಒಳಾಂಗಣ ಕ್ರೀಡಾಂಗಣದಲ್ಲಿ ಸುಂದರ ರೀತಿಯಲ್ಲಿ ಇಂದಿನ ಆಟಗಳಿಗೆ ಮಾಡಿದ ವ್ಯವಸ್ಥೆಗಳಿಗಾಗಿ ಇಲಾಖೆಯ ವತಿಯಿಂದ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಅಭಿನಂದನೆಗಳನ್ನು ಸಲ್ಲಿಸಿದರು. ಮಕ್ಕಳು ಇದರ ಪ್ರಯೋಜನಗಳನ್ನು ಪಡೆದುಕೊಂಡು ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ, ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಕ್ರೀಡೆಯಲ್ಲಿ ಪ್ರತಿನಿಧಿಸುವಂತಹ ಮಕ್ಕಳಾಗಿ ಬೆಳೆಯಿರಿ ಎಂಬ ಶುಭಹಾರೈಕೆಯನ್ನಿತ್ತರು. ಈ ಸಂದರ್ಭದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ‍್ಯದರ್ಶಿಗಳಾದ- ರಶ್ಮಿತಾ ಜೈನ್, ಮೂಡಬಿದಿರೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ನವೀನ್ ಪುತ್ರನ್, ಹಾಗೂ ಎಕ್ಸಲೆಂಟ್ ಕ್ರೀಡಾ ತರಬೇತುದಾರರಾದ- ಯಸ್.ಯಸ್ ಪಾಟೀಲ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕಿನ ಬೇರೆ ಬೇರೆ ಶಾಲೆಗಳಿಂದ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಪಂದ್ಯಾಟಗಳಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಹದಿನೇಳು ವರ್ಷದೊಳಗಿನ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಹದಿನಾಲ್ಕು ವರ್ಷದೊಳಗಿನ ಬಾಲಕರ ಶಟಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಟೇಬಲ್ ಟೆನ್ನೀಸ್ ಹದಿನೇಳು ವರ್ಷದೊಳಗಿನ ಬಾಲಕರ ಟೇಬಲ್ ಟೆನ್ನೀಸ್ ತಂಡಗಳು ಜಯಗಳಿಸಿ ಜಿಲ್ಲಾ ಹಂತಕ್ಕೆ ಪ್ರವೇಶ ಪಡೆದವು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಶಿವಪ್ರಸಾದ್ ಭಟ್ ಅತಿಥಿಗಳನ್ನು ಸ್ವಾಗತಿಸಿದರು, ಸಂಸ್ಥೆಯ ವಿಜ್ಞಾನ ಶಿಕ್ಷಕ ಪ್ರಜ್ವಲ್ ಶೆಟ್ಟಿಯವರು ಕಾರ‍್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು.

ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

Article Image

ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕಾರ್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ ವಿಶಿಷ್ಟ ಧ್ವನಿಗಳನ್ನು ಅಭಿವೃದ್ಧಿ ಪಡಿಸಲು ಸಹಾಯ ಮಾಡುತ್ತವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಕ್ಷಕರಾದವರು ಕಲೆಗಾರರು, ನಾಟಕಗಾರರು ಆಗಿರಬೇಕು. ಯಾವುದೇ ವಿಷಯವನ್ನು ಕಲೆ ಮತ್ತು ನಾಟಕದ ಮೂಲಕ ಕಲಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ವಿಷಯವನ್ನು ಮನ ಮುಟ್ಟವಂತೆ ತಿಳಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ. ಶಂಕರಮೂರ್ತಿ ಹೆಚ್. ಕೆ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಜಾನೆಟ್ ಸ್ವಾಗತಿಸಿ, ಅಪೂರ್ವ ವಂದಿಸಿ, ಕಾವ್ಯ ಕೆ ಕಾರ್ಯಕ್ರಮ ನಿರೂಪಿಸಿದರು.

First Previous

Showing 1 of 6 pages

Next Last