Article Image

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

Article Image

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

ಮಂಗಳೂರು: ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆ ನಷ್ಟವಾಗಿದ್ದರೆ ಪರಿಹಾರ ತುಂಬಿ ಕೊಡಲು 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರಕಾರ ಜಾರಿಗೊಳಿಸಿದ್ದು, ಇದರಲ್ಲಿ ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಣಿಗೊಳಿಸಲು ಆಗಸ್ಟ್ 25ರವರೆಗೆ ಅವಧಿ ವಿಸ್ತರಿಸಲಾಗಿದೆ. ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರತಿನಿಧಿ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಮಂಜುನಾಥ ಡಿ. ಅವರ ಮೊಬೈಲ್ ಸಂಖ್ಯೆ 9448999226 ಹಾಗೂ ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ ಅವರ ಸಂಪರ್ಕ ಸಂಖ್ಯೆ 9131962255 ಆಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

ಉಜಿರೆ: ಆಟಿ ಕಳೆಂಜ ಶಿವನ ಪ್ರತಿರೂಪ ಎಂಬ ನಂಬಿಕೆ ತುಳುನಾಡಿನಲ್ಲಿದೆ. ಆಟಿಕಳೆಂಜನ ವಿಶೇಷ ವೇಶಭೂಷಣ ತುಂಬಾ ಸರಳ ಮತ್ತು ಅರ್ಥಪೂರ್ಣವಾಗಿದ್ದು ಆಟಿ ಕಳೆಂಜ ಮನೆಮನೆಗೆ ಬಂದರೆ ದುಷ್ಟಶಕ್ತಿಗಳು ಹಾಗೂ ರೋಗರುಜಿನನಗಳು ದೂರವಾಗುತ್ತವೆ ಎಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಕನ್ನಡ ಮುಖ್ಯಸ್ಥ ಪ್ರೊ. ಯೋಗೀಶ್ ಕೈರೋಡಿ ಹೇಳಿದರು. ಅವರು ಶನಿವಾರ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಇತಿಹಾಸ ವಿಭಾಗ ಮತ್ತು ತುಳು ಸಂಘದ ಆಶ್ರಯದಲ್ಲಿ ಆಯೋಜಿಸಿದ ತುಳುವೆರೆ ಆಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಪೂರ್ವಜರಿಗೆ ಓದಲು, ಬರೆಯಲು ಬಾರದಿರುವುದರಿಂದ ಅವರನ್ನು ಅಜ್ಞಾನಿಗಳು ಎಂದು ಭಾವಿಸಬಾರದು. ಅನಿವಾರ್ಯತೆಯಿಂದ ಅವರು ಆಹಾರ ಪದಾರ್ಥಗಳನ್ನು ಅವರು ಸಂಶೋಧಿಸಿದರು. ಆದರೆ ಈಗ ಜನರು ಅಕ್ಷರಸ್ಥರಾದರು ತೀವ್ರ ಪೈಪೋಟಿ, ಧನದಾಹ, ಸುಖ-ಭೋಗಗಳ ಲಾಲಾಸೆ, ಹೋಲಿಕೆ, ಅಸೂಯೆ, ದ್ವೇಷಭಾವನೆಯಿಂದ ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸ ಮಾಯವಾಗಿದೆ ಯಾರಲ್ಲಿಯೂ ಆತ್ಮೀಯ ಸಂಬಂಧವಿಲ್ಲ ಎಂದು ಅವರು ಹೇಳಿದರು. “ಮರಿ ತುಚ್ಚಿಂಡ ಮರ್ದುಂಡು, ಅರಿ ತುಚ್ಚಿಂಡ ಮರ್ದಿಜ್ಜಿ” ಎಂಬ ಮಾತಿದೆ. ಆದರೆ ಆಹಾರವಿಲ್ಲದೆ ಬದುಕಲು ಸಾಧ್ಯವಿಲ್ಲ. ಹಿಂದೆ ಆಹಾರವೇ ಔಷಧಿಯಾಗಿದ್ದರೆ ಇಂದು ಹೆಚ್ಚಿನವರಿಗೆ ಔಷದಿಯೇ ಆಹಾರವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ ಆಧುನಿಕ ಜನತೆಗೆ ಆಟಿ ಅಡಂಬರವಾಗಿದೆ. ಮಾಲ್, ಹೋಟೆಲ್‌ಗಳಲ್ಲಿ ಹಬ್ಬಗಳನ್ನು ಆಚರಿಸುವಂತಾಗಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮ ತುಳುನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆ ಹಾಗೂ ಆಹಾರ ಔಷಧಿಗಳ ಬಗ್ಗೆ ಅರಿವು ಜಾಗೃತಿ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕೊಯೂರಿನ ಅಮ್ಮಿ ನಲಿಕೆ ಮತ್ತು ಬಳಗದವರ ಆಟಿಕಳೆಂಜ ವೇಷ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಪ್ರಾಚೀನ ವಸ್ತುಗಳ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಸನ್ಮತಿಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಅಭಿಜ್ಞಾ ಉಪಾಧ್ಯಾಯ ಧನ್ಯವಾದವಿತ್ತರು. ವಿದ್ಯಾರ್ಥಿನಿಯರಾದ ಕುಮಾರಿ ಶ್ರದ್ದಾ ಮತ್ತು ಕುಮಾರಿ ಸೃಷ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

Article Image

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

ಉಜಿರೆಯ ಶ್ರೀ ಧ. ಮಂ. ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯಸೌರಭ ಹಾಗೂ ಇಕೋ-ಕ್ಲಬ್ ವತಿಯಿಂದ ಉಜಿರೆಯ ರತ್ನಮಾನಸದಲ್ಲಿ ಆ.2ರಂದು ನೇಜಿ ನೆಡುವ ಕಾರ್ಯಕ್ರಮ ನಡೆಯಿತು. ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಮಾಹಿತಿಗಳನ್ನು ನೀಡಿದರು. ದ್ವಿತೀಯ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 40 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಕುಂತಲಾ ಬಿ., ಅಭಿಲಾಷ್ ಕೆ.ಎಸ್., ಮಂಜುಶ್ರೀ ಹಾಗೂ ಭವ್ಯ ಡಿ. ನಾಯಕ್ ಪಾಲ್ಗೊಂಡರು. ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಶುಭ ಹಾರೈಸಿದರು.

ಜು. 31: ಜಮೀನಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ

Article Image

ಜು. 31: ಜಮೀನಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ

ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರೈತರು ತಮ್ಮ ಜಮೀನಿಗಳ ಎಲ್ಲಾ ಸರ್ವೆ ನಂಬರಿನ ಎಲ್ಲಾ ಪಹಣಿ (RTC), ಆಧಾರ್ ಕಾರ್ಡ್ ಪ್ರತಿ ಮತ್ತು ಆಧಾರ್‌ಗೆ ಲಿಂಕ್ ಇರುವ ಮೊಬೈಲ್ ಪೋನ್‌ನೊಂದಿಗೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿ (VA) ಅಥವಾ ನಾಡಕಚೇರಿಗೆ ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೂಡುಬಿದಿರೆ: 'ಸಮೃದ್ಧಿ' ಹಲಸು ಹಣ್ಣುಗಳ ಮಹಾಮೇಳ

Article Image

ಮೂಡುಬಿದಿರೆ: 'ಸಮೃದ್ಧಿ' ಹಲಸು ಹಣ್ಣುಗಳ ಮಹಾಮೇಳ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ, ಆಹಾರೋತ್ಸವ ಮಹಾಮೇಳ ಸಮಿತಿ, ಮೂಡುಬಿದಿರೆ, ಕೃಷಿ ಇಂಜಿನಿಯರಿಂಗ್ ವಿಭಾಗ, ಆಳ್ವಾಸ್ ತಾಂತ್ರಿಕ ಕಾಲೇಜು, ಮಿಜಾರು ಸಂಯುಕ್ತ ಆಶ್ರಯದಲ್ಲಿ ಕೃಷಿ ಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ 'ಸಮೃದ್ಧಿ' ಹಲಸು-ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳವು ಮೂಡುಬಿದಿರೆ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಜೂನ್ 14, 15 ಮತ್ತು 16ರಂದು ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ವೈವಿಧ್ಯಮಯ ತಳಿಗಳ ಹಲಸಿನ ಹಣ್ಣಿನ ಬೃಹತ್ ಸಂಗ್ರಹ. ಸವಿರುಚಿ ತಳಿಗಳ ಮಾವು, ಪಪ್ಪಾಯ, ಅನಾನಸು, ಪೇರಳೆ, ನೇರಳೆ-ಪ್ರಾದೇಶಿಕ ಹಣ್ಣುಗಳ ವಿಶೇಷ ಸಂಗ್ರಹ. ರಂಬುಟನ್, ಮ್ಯಾಂಗೋಸ್ಟಿನ್, ಡ್ರಾಗನ್, ಬಟರ್ ಫ್ರೂಟ್-ವಿದೇಶಿ ಹಣ್ಣುಗಳ ಮಹಾಮೇಳ. ಕಲ್ಲಂಗಡಿ, ಕಬ್ಬು, ತಾಜಾ ಹಣ್ಣುಗಳ ಸವಿರಸಗಳ ತಾಣ. ಹಣ್ಣು-ತರಕಾರಿಗಳಿಂದಲೇ ತಯಾರಾದ ಸಿದ್ಧ (Readymade) ತಿನಿಸುಗಳ ಬೃಹತ್ ಸಂಗ್ರಹ. ಜೈನ, ಬ್ರಾಹ್ಮಣ, ಗೌಡ ಸಾರಸ್ವತ ಸಮುದಾಯಗಳ ವಿಶೇಷ ಪ್ರಾದೇಶಿಕ ಶುದ್ಧ ಸಸ್ಯಾಹಾರಿ ತಿಂಡಿ-ತಿನಿಸುಗಳ ಆಗರ. ಆಲಂಕಾರಿಕ ವಸ್ತುಗಳು, ಮಣ್ಣಿನ ಮಡಕೆಗಳು, ಗೃಹೋಪಯೋಗಿ ವಸ್ತುಗಳ ಬೃಹತ್ ಮೇಳ. ಆಯುರ್ವೇದ, ಪ್ರಕೃತಿ ಚಿಕಿತ್ಸೆ, ಆಹಾರ ಮತ್ತು ಪೋಷಕಾಂಶಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಾಗಾರ. ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ. ವೈವಿಧ್ಯಮಯ ಫಲ-ಪುಷ್ಪಗಿಡಗಳ ನರ್ಸರಿ ಸಮಾವೇಶ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸಬಲೀಕರಣ-ಸ್ವಾವಲಂಬನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಫಲಾನುಭವಿಗಳ 'ಸಿರಿ' ಸ್ವದೇಶಿ ಉತ್ಪನ್ನಗಳ ಬೃಹತ್ ಸಂಗ್ರಹ. ಖಾದಿ-ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಸ್ವದೇಶಿ ಮೇಳ, ಮಳೆಗಾಲದ ಕರಾವಳಿಗರ ವಿಶೇಷ ತಿನಿಸಿನ ಸೊಪ್ಪು ತರಕಾರಿಗಳ ಮಾರಾಟ ವ್ಯವಸ್ಥೆ. ನವವಿಧ ಸಿರಿಧಾನ್ಯಗಳ ಬೃಹತ್ ಸಂಗ್ರಹ. 300ಕ್ಕೂ ಮಿಕ್ಕಿದ ವೈವಿಧ್ಯಮಯ ಮಳಿಗೆಗಳ ಮಹಾಮೇಳ. ಈ ಮೇಲಿನವುಗಳು ವಿಶೇಷ ಆಕರ್ಷಣೆ ಆಗಿದ್ದು, ಪ್ರವೇಶ ಉಚಿತವಾಗಿರುತ್ತದೆ.

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

Article Image

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

ಮಂಗಳೂರು: 2024ರ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿದ್ದು, ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಗೆ ಕೃಷಿ ಇಲಾಖೆಯಿಂದ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಡ್ರೋನ್ಸ್ ಫಾರ್ ಅಗ್ರಿಕಲ್ಚರ್: ತರಬೇತಿ ಕಾರ್ಯಾಗಾರ

Article Image

ಡ್ರೋನ್ಸ್ ಫಾರ್ ಅಗ್ರಿಕಲ್ಚರ್: ತರಬೇತಿ ಕಾರ್ಯಾಗಾರ

ಉಡುಪಿ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣೆ ಸಂಸ್ಥೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಹಯೋಗದಲ್ಲಿ ‘ಅಪ್ಲಿಕೇಶನ್ಸ್ ಆಫ್ ಯುಎವಿ ಆ್ಯಂಡ್ ಡ್ರೋನ್ಸ್ ಫಾರ್ ಅಗ್ರಿಕಲ್ಚರ್' ಮೇ 14 ರಿಂದ 16ರ ವರೆಗೆ ಆನ್‌ಲೈನ್ ಮೂಲಕ ತರಬೇತಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಪ್ರತಿಷ್ಠಿತ ಸಂಸ್ಥೆಗಳ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸಗಳನ್ನು ನೀಡಲಿದ್ದಾರೆ. ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಯುವ ವಿಜ್ಞಾನಿಗಳು ಮೇ 10ರ ಒಳಗಾಗಿ https://forms.gle/LwxDoR5sktBVHktf9 ನೋಂದಾಯಿಸಿಕೊಂಡು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಮಾಹಿತಿಗೆ 9743084194 ಪ್ರಕಟಣೆ ತಿಳಿಸಿದೆ.

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

Article Image

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

ಕೋಕೋ ಬೆಳೆ ಧಾರಣೆ ಏರುಗತಿಯಲ್ಲಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಹಸಿ ಕೋಕೋ ಕೆ.ಜಿ.ಗೆ 100 ರೂ. ಧಾರಣೆಯನ್ನು ತಲುಪಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ಕೃಷಿಕರ ಸಂಖ್ಯೆ ಹೆಚ್ಚಾಗಿದ್ದು, ಅಡಿಕೆ, ತೆಂಗು ಜತೆ ಕೋಕೋ ಬೆಳೆಯನ್ನು ಬೆಳೆಯುತ್ತಿದ್ದಾರೆ. ಆದರೆ ಇದಕ್ಕೂ ರೋಗ ಬಾಧೆ, ಬೆಲೆ ಇಳಿಕೆ ಸಮಸ್ಯೆ ಇದ್ದು ಕೃಷಿಕರಿಗೆ ನಿರೀಕ್ಷಿತ ಆದಾಯ ಕೈಗೆ ಸಿಗುತ್ತಿರಲಿಲ್ಲ. ಕೆ.ಜಿ.ಗೆ 100 ರೂ.: ಕೋಕೋಗೆ ಉತ್ತಮ ಬೇಡಿಕೆ ಇದ್ದರೂ ಬೆಳೆಗಾರರಿಗೆ ಉತ್ತಮ ಧಾರಣೆ ಸಿಗದ ಕಾರಣ ಕೋಕೋ ಬೆಳೆಯ ಬಗ್ಗೆ ನಿರಾಸಕ್ತಿ ವಹಿಸಿದ್ದರು. ಆದರೆ ಈಗ ಹಸಿ ಕೋಕೋ ಕೆ.ಜಿ.ಗೆ 80ರಿಂದ 100 ರೂ.ಗಳಂತೆ ಕ್ಯಾಂಪ್ಕೋ ಸಂಸ್ಥೆ ಖರೀದಿಸುತ್ತಿದೆ. ಮುಂದಿನ ದಿನಗಳಲ್ಲಿ ಹಸಿ ಕೋಕೋ ಕೆ.ಜಿ.ಗೆ 100ರಿಂದ 120 ರೂ. ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಒಣ ಕೋಕೋ ಕೆ.ಜಿ.ಗೆ 370ರಿಂದ 400ರಂತೆ ಖರೀದಿಸಲಾಗುತ್ತಿದೆ. ಆದರೆ ಈ ಬೇಸಗೆಯಲ್ಲಿ ಮಾತ್ರವೇ ಸಿಗಲಿದೆ ಎನ್ನಲಾಗುತ್ತಿದೆ. ಮಳೆಗಾಲದಲ್ಲಿ ಹೆಚ್ಚಾಗಿ ನೀರಿನ ಅಂಶವನ್ನು ಹೊಂದಿರುವುದರಿಂದ ಕೋಕೋ ಹೆಚ್ಚಿನ ಧಾರಣೆ ನೀಡಲು ಸಾಧ್ಯವಾಗುತ್ತಿಲ್ಲ. ಬೇಸಗೆಯಲ್ಲಿ ಉತ್ಪನ್ನಗಳಿಗೆ ಗುಣಮಟ್ಟದ ಕೋಕೋ ಸಿಗುವುದರಿಂದ ಬೆಲೆ ಏರಿಕೆ ಆಗುತ್ತದೆ. ಬೆಲೆ ಏರಿಕೆಗೆ ಕಾರಣ-ವಿವಿಧ ಉತ್ಪನ್ನಗಳಿಗಾಗಿ ಕಂಪೆನಿಗಳು ವಿದೇಶದ ಆಶ್ರಯಿಸಿಕೊಂಡಿದ್ದವು. ಕೋಕೋಗಳನ್ನೇ ಐವರಿಕೋಸ್ಟ್ ಎಂಬಲ್ಲಿ ಕೋಕೋ ಬೆಳೆ ಉತ್ಪಾದನೆ ಕುಸಿತಗೊಂಡು ಅಲ್ಲಿಂದ ಭಾರತಕ್ಕೆ ಕೋಕೋ ಪೂರೈಕೆ ಆಗುತ್ತಿಲ್ಲ ಎನ್ನಲಾಗಿದೆ. ಇದರಿಂದ ದೇಶಿ ಕೋಕೋಗೆ ಬೇಡಿಕೆ ಹೆಚ್ಚಾಗಿದೆ. ಇತರೆ ಕೋಕೋ ಖರೀದಿ ಮಾಡುವ ವ್ಯಾಪಾರಸ್ಥರು ಹಾಗೂ ಕ್ಯಾಂಪ್ಕೋ ಸಂಸ್ಥೆ ಇದರಿಂದ ಬೆಲೆ ಏರಿಕೆ ಮಾಡಿದೆ ಎಂದು ಪ್ರಕಟಣೆಯಿಂದ ತಿಳಿದುಬಂದಿದೆ.

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

Article Image

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

ಎಲೆಚುಕ್ಕೆ ರೋಗವನ್ನು ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಕಾಣಬಹುದು. ಕೆಳಭಾಗದ ಒಂದೆರಡು ಎಲೆಗಳಲ್ಲಿ ಚುಕ್ಕೆಗಳಿರುತ್ತವೆ. ಇತ್ತೀಚೆಗೆ ಈ ರೋಗವು ಹಲವೆಡೆ ಗಂಭೀರ ಸ್ವರೂಪವನ್ನು ಪಡೆದಿದೆ. ತಕ್ಷಣ ನಿರ್ವಹಣಾ ಕ್ರಮಗಳನ್ನು ಅನುಸರಿಸಿಕೊಳ್ಳಬೇಕಾದದ್ದು ಅನಿವಾರ್ಯ. ಮೊತ್ತಮೊದಲು ಎಲೆಚುಕ್ಕೆ ರೋಗದ ತೀವ್ರತೆಯನ್ನು ಗಮನಿಸಿದ್ದು ಭಾರತದ ಈಶಾನ್ಯ ರಾಜ್ಯ ತ್ರಿಪುರದ ಜಂಪುಯಿ ಹಿಲ್ಸ್ ಪ್ರದೇಶದಲ್ಲಿ, ಕರ್ನಾಟಕದ ಮೂಡಿಗೆರೆ ತಾಲೂಕಿನ ಕಳಸದ ಮರಸಣಿಗೆ ಪ್ರದೇಶದಲ್ಲಿ ಕೆಲವೇ ತೋಟಗಳಿಗೆ ಸೀಮಿತವಾಗಿದ್ದ ರೋಗಲಕ್ಷಣ, ಮರು ವರ್ಷದಲ್ಲಿ ಹಲವು ತೋಟಗಳಿಗೆ ಹಬ್ಬಿತ್ತು. ಗಾಳಿ ಮುಖೇನ ಈ ಹರಡುವ ಕಾರಣ, ಪ್ರಾಥಮಿಕ ಹಂತದಲ್ಲೇ ನಿರ್ವಹಣೆ ಮಾಡದಿದ್ದರೆ ಈ ರೋಗವನ್ನು ನಿಯಂತ್ರಿಸುವುದು ಕಷ್ಟ, ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಎಲೆಚುಕ್ಕೆ ರೋಗದ ಲಕ್ಷಣಗಳು ಇತ್ತೀಚೆಗೆ ಕಾಣಿಸಿಕೊಂಡಿವೆ. ಕೇರಳ ಮತ್ತು ತಮಿಳುನಾಡಿಗೂ ರೋಗ ಪಸರಿದೆ. ರೋಗಾಣು: ಕೊಲೆಟೋಟೈಕಮ್ ಸ್ವಿಸಿಸ್ ಮತ್ತು ಫಿಲೋಸ್ಟಿಕ್ಷಾ ಅರೆಕೆ ಎನ್ನುವ ಶಿಲೀಂಧ್ರಗಳು ಸಾಮಾನ್ಯವಾಗಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗವನ್ನು ಉಂಟುಮಾಡುತ್ತವೆ. ಆದರೆ, ಇತ್ತೀಚೆಗೆ ಗಂಭೀರ ಸ್ವರೂಪದಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗಕ್ಕೆ ಕೊಲೆಟೋಟೈಕಮ್ ಕಹಾವೆ ಸಬ್ಸ್ಟಿಸಿಸ್ ಸಿಗ್ಗಾರೊ ಎನ್ನುವ ಶಿಲೀಂಧ್ರವು ಪ್ರಮುಖ ಕಾರಣವೆಂದು ತಿಳಿದುಬಂದಿದೆ. ಎಲೆಚುಕ್ಕೆ ರೋಗದಿಂದ ಪತ್ರಹರಿತ್ತು ಕಡಿಮೆಯಾಗಿ ಉತ್ಪಾದನೆ ಕುಂಠಿತವಾಗುತ್ತದೆ. ಇದು ಮರದ ಬೆಳವಣಿಗೆ ಮತ್ತು ಇಳುವರಿಯ ಮೇಲೆ ದೀರ್ಘ ಕಾಲದ ದುಷ್ಪರಿಣಾಮ ಬೀರಬಹುದು. ರೋಗ ಲಕ್ಷಣಗಳು: ಅಡಿಕೆ ಮರದ ಎಲೆಯಲ್ಲಿ “ಹಳದಿ ಬಣ್ಣದಿಂದ ಆವೃತವಾಗಿರುವ ಕಂದು ಬಣ್ಣದ ಸಣ್ಣ ಚುಕ್ಕೆಗಳಿದ್ದರೆ, ಅದು ಎಲೆಚುಕ್ಕೆ ರೋಗವೆಂದರ್ಥ. ಕೆಲವೊಮ್ಮೆ, ಕಪ್ಪು ಬಣ್ಣದ ಅಂಚು ಇರುವ ಬೂದು ಬಣ್ಣದ ಸಣ್ಣ ಚುಕ್ಕೆಗಳನ್ನೂ ಕಾಣಬಹುದು. ಈ ರೀತಿಯ ಸಣ್ಣ ಚುಕ್ಕೆಗಳು ದೊಡ್ಡದಾಗಿ, ಈ ಒಂದಕ್ಕೊಂದು ಸೇರಿ ಇಡೀ ಸೋಗೆಗೆ ಹಬ್ಬಿ ಅದನ್ನು ಒಣಗಿಸುತ್ತವೆ. ಮೊದಲು ಕೆಳಭಾಗದ ಒಂದೆರಡು ಎಲೆಗಳಲ್ಲಿ ರೋಗಲಕ್ಷಣ ಕಾಣಿಸಿಕೊಂಡರೆ, ರೋಗ ತೀವ್ರತೆ ಹೆಚ್ಚಾದಾಗ ನಾಲ್ಕೈದು ಎಲೆಗಳಿಗದು ಹಬ್ಬುತ್ತದೆ. ಅಡಿಕೆ ಕಾಯಿ ಮತ್ತು ಹಾಳೆಯ ಮೇಲೂ ಚುಕ್ಕೆಗಳನ್ನು ಕಾಣಬಹುದು. ರೋಗಬಾಧಿತ ಕಾಯಿಗಳು ಬಲಿಯುವ ಮೊದಲೇ ಹಳದಿಯಾಗಿ ಬೀಳುತ್ತವೆ. ಕೆಲವೊಮ್ಮೆ ಕಾಯಿಯ ಮೇಲೆ ಚುಕ್ಕೆ ಮೂಡಿದ ಜಾಗವು ಸೀಳಿ ಅವು ಉದುರುವುದಿದೆ. ನಿರ್ವಹಣೆ ಹೇಗೆ: ಅಧಿಕ ರೋಗಬಾಧಿತ ಎಲೆಗಳನ್ನು ತುಂಡರಿಸಿ ತೆಗೆದು ನಾಶ ಮಾಡುವುದು ಸೋಂಕು ಕಡಿಮೆಗೊಳಿಸಲು ಪ್ರಯೋಜನಕಾರಿ. ಈ ಕೆಲಸ ಪ್ರಾಯೋಗಿಕವಾಗಿ ಕಷ್ಟ, ಆದರೆ, ತೀವ್ರ ಬಾಧೆಯಿರುವಲ್ಲಿ ಅನಿವಾರ್ಯ. ರೋಗಬಾಧಿತ ತೋಟಗಳಲ್ಲಿ ಅಡಿಕೆ ಗೊನೆಗಳಿಗೆ ಬೋರ್ಡೋ ಮಿಶ್ರಣ ಸಿಂಪಡಣೆ ಮಾಡುವಾಗ, ಎಲೆಗಳಿಗೂ ಮಾಡುವುದೊಳಿತು. ಹೆಚ್ಚು ರೋಗಬಾಧೆಯಿರುವ ತೋಟಗಳಲ್ಲಿ ಆಗಸ್ಟ್ - ಸೆಪ್ಟೆಂಬರ್ ಸಮಯದಲ್ಲಿ ಮಳೆ ಇಲ್ಲದಾಗ (Propiconazole 25EC) (Hexaconazole 5EC/5SC) ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಎಲೆಗಳಿಗೆ ಸಿಂಪಡಿಸಬೇಕು. ಮೂರರಿಂದ ನಾಲ್ಕು ವಾರಗಳ ನಂತರ, ಪ್ರೊಪಿನಬ್ 70WP ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಎರಡು ಗ್ರಾಂ ಪ್ರಮಾಣದಲ್ಲಿ ಸಿಂಪಡಿಸಬೇಕು. ಶಿಲೀಂದ್ರ ನಾಶಕ ದ್ರಾವಣ ತಯಾರಿಸುವಾಗ ಪ್ರತೀ ಲೀಟರ್ ದ್ರಾವಣಕ್ಕೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಅಂಟನ್ನು ಸೇರಿಸಬೇಕು. ತೀವ್ರ ರೋಗಬಾಧೆ ಇರುವಲ್ಲಿ, ಜನವರಿ ತಿಂಗಳ ನಂತರ ಸಿಂಗಾರ ಒಣಗುವ ರೋಗಕ್ಕೆ ಪ್ರೋಪಿಕೊನರೋಲ್ ಶಿಲೀಂಧ್ರನಾಶಕ ಸಿಂಪಡಿಸುವಾಗ ಎಲೆಚುಕ್ಕೆ ರೋಗವಿರುವ ಮರದ ಎಲೆಗಳಿಗೂ ಸಿಂಪಡಿಸಬಹುದು. ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬರ ನೀಡುವುದು ಮತ್ತು ಹುಳಿ ಮಣ್ಣಿಗೆ ಸುಣ್ಣ ಹಾಕುವುದು ಒಳಿತು. ಸಾಮಾನ್ಯವಾಗಿ, ಅಡಿಕೆ ಮರಕ್ಕೆ 12 ಕಿಲೋ ಗ್ರಾಂ ಹಟ್ಟಿಗೊಬ್ಬರ ಮತ್ತು ಹಸಿರೆಲೆ, ಯೂರಿಯ(220 ಗ್ರಾಂ), ರಾಕ್ ಫಾಸ್ಪೆಟ್ (200 ಗ್ರಾಂ) ಮತ್ತು ಪೊಟಾಷ್ (240 - 350 ಗ್ರಾಂ) ನೀಡಬೇಕು. ರಸಗೊಬ್ಬರಗಳನ್ನು ಕನಿಷ್ಠ ಎರಡು ಕಂತುಗಳಲ್ಲಿ ನೀಡಬೇಕು. ಜೊತೆಗೆ, ಲಘುಪೋಷಕಾಂಶಗಳಾದ ಸತುವಿನ ಸಲ್ವೇಟ್ (5 ಗ್ರಾಂ) ಮತ್ತು ಬೊರಾಕ್ಸ್ (5 ಗ್ರಾಂ) ಕೂಡ ನೀಡಬಹುದು. ಗಾಳಿಯಲ್ಲಿ ರೋಗಾಣು ಬಹಳ ಬೇಗನೆ ಹರಡುತ್ತದೆ. ಹಾಗಾಗಿ, ರೋಗ ಪೀಡಿತ ಅಡಿಕೆ ಸಸಿಗಳನ್ನು ರೋಗವಿಲ್ಲದ ಪ್ರದೇಶಕ್ಕೆ ಸಾಗಿಸದಿರುವುದು ಮತ್ತು ಸಮುದಾಯ ಮಟ್ಟದ ರೋಗ ನಿಯಂತ್ರಣ ಕ್ರಮಗಳು ಬಲು ಮುಖ್ಯವಾಗುತ್ತವೆ.

First Previous

Showing 1 of 1 pages

Next Last