Article Image

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ 'ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ಪ್ರಶಸ್ತಿ

Article Image

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ 'ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ಪ್ರಶಸ್ತಿ

ಉಜಿರೆ,ದಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ʼಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ' ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿ ನೀಡಿದ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಯೂ, ಹಲವು ದಶಕಗಳಿಂದ ಶಿಕ್ಷಣ ಮತ್ತು ತತ್ಸಂಬಂಧಿ ಕ್ಷೇತ್ರಗಳ ಬೆಳವಣಿಗೆಗೆ ಪವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಿರುವ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಶುಭಾಶಯ ತಿಳಿಸಿದರು. ಪ್ರಶಸ್ತಿಗೆ ಪಾತ್ರವಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಪ್ರಾಚಾರ್ಯರು, ಪೋಷಕರು ಹಾಗು ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿರುತ್ತಾರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಾಗುತ್ತಿರುವ ವಿಜ್ಞಾನ, ಆಯುರ್ವೇದ , ಕಾನೂನು, ತಂತ್ರಜ್ಞಾನ, ಪದವಿ, ಸ್ನಾತಕೋತ್ತರ, ಮೆಡಿಕಲ್ ಸೇರಿದಂತೆ ಸಂಸ್ಥೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ಶಿಸ್ತು, ಸಂಸ್ಕಾರ, ಮೌಲ್ಯ ಹಾಗು ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುತ್ತಿದೆ. ಈಗಾಗಲೇ ನೂರಾರು ಜನ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವಾರು ಸಂಘ ಸಂಸ್ಥೆಗಳು ಶ್ಲಾಘಿಸಿ ಗೌರವಿಸಿದೆ. ಇದೀಗ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ''ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ' ಪ್ರಶಸ್ತಿ ನೀಡಿ ಗೌರವಿಸಿರುವುದು ಸಂಸ್ಥೆಯ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಹೆಚ್ಚಿಸಿದೆ. ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕೃತಜ್ಞತೆಯನ್ನು ತಿಳಿಸುತ್ತೇನೆ - ಡಾ. ಸತೀಶ್ಚಂದ್ರ ಎಸ್ ಕಾರ್ಯದರ್ಶಿಗಳು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ

ಆಳ್ವಾಸ್‌ನಿಂದ ಕರಾವಳಿ ಕರ್ನಾಟಕದ ಮೊದಲ ಕೃಷಿ ವಿಜ್ಞಾನ ಮತ್ತು ಆಹಾರ ತಂತ್ರಜ್ಞಾನ ಪದವಿ ಕೋರ್ಸ ಆರಂಭ

Article Image

ಆಳ್ವಾಸ್‌ನಿಂದ ಕರಾವಳಿ ಕರ್ನಾಟಕದ ಮೊದಲ ಕೃಷಿ ವಿಜ್ಞಾನ ಮತ್ತು ಆಹಾರ ತಂತ್ರಜ್ಞಾನ ಪದವಿ ಕೋರ್ಸ ಆರಂಭ

ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನೂತನವಾಗಿ ಆರಂಭವಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜು, ಈ ಶೈಕ್ಷಣಿಕ ವರ್ಷದಿಂದಲೇ ಬಹು ಬೇಡಿಕೆಯ ನಾಲ್ಕು ವರ್ಷದ ಅವಧಿಯ ಬಿಎಸ್ಸಿ (ಆನರ್ಸ್) ಅಗ್ರಿಕಲ್ಚರ್ ಮತ್ತು ಬಿ.ಟೆಕ್ ಫುಡ್ ಟೆಕ್ನಾಲಜಿ ಕೋರ್ಸಗಳನ್ನು ಪ್ರಾರಂಭಿಸುತ್ತಿದೆ. ಈ ಕಾಲೇಜು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದಡಿಯಲ್ಲಿ ಕಾರ‍್ಯನಿರ್ವಹಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣವನ್ನು ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ ಹಾಗೂ ಕೈಗಾರಿಕಾ ತರಬೇತಿಯ ಸೌಲಭ್ಯಗಳನ್ನು ಒದಗಿಸಲಿದೆ. ಆಳ್ವಾಸ್ ಸಂಸ್ಥೆ ಈಗಾಗಲೇ ಮಂಗಳೂರು ವಿವಿ, ರಾಜೀವ್‌ಗಾಂಧಿ ವಿವಿ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿವಿಯ ಪಠ್ಯಕ್ರಮಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಇದೀಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕೃಷಿ ಮತ್ತು ಆಹಾರ ತಂತ್ರಜ್ಞಾನ ವಿಭಾಗಗಳ ಸೇರ್ಪಡೆ ಸಂಸ್ಥೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಮತ್ತೊಂದು ಮೈಲುಗಲ್ಲಾಗಲಿದೆ. ಕೃಷಿ ವಿಜ್ಞಾನ ಮತ್ತು ಆಹಾರ ತಂತ್ರಜ್ಞಾನ ಪದವಿ ಕೋರ್ಸನ್ನು ಪ್ರಾರಂಬಿಸಲು ಸಂಪೂರ್ಣ ಸಹಕಾರ ಹಾಗೂ ಮಾರ್ಗದರ್ಶನ ನೀಡಿದ ಕರ್ನಾಟಕ ರಾಜ್ಯದ ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ ಆರ್ ಸಿ ಜಗದೀಶ, ಕುಲಸಚಿವರಾದ ಡಾ ಕೆ.ಸಿ ಶಶಿಧರರವರ ಸಹಕಾರವನ್ನು ಸ್ಮರಿಸಲಾಗಿದೆ. 2025 ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಯನ್ನು (9448458334, 8050585606) ಸಂಪರ್ಕಿಸಲು ಕೋರಲಾಗಿದೆ. ಕಾಲೇಜು ಕೋಡ್ ( ಫಾರ್ಮ ಸೈನ್ಸ್) 038 ಆಗಿರಲಿದೆ. ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ಪ್ರಾಚಾರ್ಯ ಡಾ ಪೀಟರ್ ಫೆರ್ನಾಂಡೀಸ್, ಆಳ್ವಾಸ್ ಪದವಿ( ಸ್ವಾಯತ್ತ) ಕಾಲೇಜಿನ ಪ್ರಾಚಾರ್ಯ ಡಾ ಕುರಿಯನ್ ಇದ್ದರು.

ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Article Image

ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ದ.ಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಜೈನ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 28 ಚಿನ್ನ, 20 ಬೆಳ್ಳಿ ಮತ್ತು 14 ಕಂಚಿನ ಪದಕಗಳೊಂದಿಗೆ 52 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 100 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 104 ಅಂಕ ಒಟ್ಟು 214 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 16 ಅಂಕಗಳೊಂದಿಗೆ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಜೈನ್ ಪದವಿಪೂರ್ವ ಕಾಲೇಜು 19 ಅಂಕ ಪಡೆದು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ಸಮರ್ಥ ಪಡೆದುಕೊಂಡರೆ, ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ನಾಗಿಣಿ ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದರು.

ಸತ್ತೂರು, ಧಾರವಾಡ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Article Image

ಸತ್ತೂರು, ಧಾರವಾಡ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಎಸ್.ಡಿ.ಎಂ ವೈದ್ಯಕೀಯ ಮಹಾವಿದ್ಯಾಲಯದ, ಮನೋರೋಗ ಚಿಕಿತ್ಸಾ ವಿಭಾಗವು ಎಸ್.ಡಿ.ಎಂ. ನರ್ಸಿಂಗ್ ಕಾಲೇಜು ಅವರ ಸಹಭಾಗಿತ್ವದಲ್ಲಿ “ವಿಪತ್ತು ಮತ್ತು ತುರ್ತು ಸಂದರ್ಭಗಳಲ್ಲಿ ಮಾನಸಿಕ ಆರೋಗ್ಯ, ಸೇವೆಗಳಿಗೆ ಆದ್ಯತೆ” ಎಂಬ ಧ್ಯೇಯೆಯೊಂದಿಗೆ ಅಕ್ಟೋಬರ್ 10, 2025ರಂದು “ವಿಶ್ವ ಮಾನಸಿಕ ಆರೋಗ್ಯ” ದಿನವನ್ನು ಆಚರಿಸಲಾಯಿತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಧ್ಯೇಯೆ ವಾಕ್ಯವನ್ನು ಅನಾವರಣಗೊಳಿಸಿದರು. ಡಾ. ಸಚಿನ್ ಬಿ. ಎಸ್. ಮತ್ತು ಡಾ. ಮನೋಜ ಶೆಟ್ಟರ ಅವರು ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಾ: ಆರೋಗ್ಯ ವೃತ್ತಿಪರರು ತಮ್ಮ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿರಿಸಿಕೊಳ್ಳಬೇಕು. ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅತ್ಯಂತ ಕಾಳಜಿಯಿಂದ ಚಿಕಿತ್ಸೆ ನೀಡಬೇಕು ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದಷ್ಟೇ ಮುಖ್ಯವಾಗಿದೆ. ಸದಾ ಉತ್ತಮ ಆರೋಗ್ಯವನ್ನು ಹೊಂದಲು ಮನಸ್ಸಿಗೆ ಆಘಾತಗಳಾಗದಂತೆ ಜಾಗೃತಿವಹಿಸಬೇಕು. ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ, ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ದೇಶಪಾಂಡೆ, ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಿತ್ತಪತ್ರ ಪ್ರದರ್ಶನ ಮತ್ತು ರಸಪ್ರಶ್ನೆ ಸ್ಪರ್ಧೆಗಳ ವಿಜೆತರಿಗೆ ಬಹುಮಾನಗಳನ್ನು ವಿತರಿಸಿದರು. ಡಾ. ಸ್ಪೂರ್ತಿ ಹಾಗೂ ಡಾ. ಮೋಕ್ಷ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ನಾಗೇಶ ಅಜ್ಜವಾಡಿ ಮಠ ವಂದಣಾರ್ಪಣೆ ಸಲ್ಲಿಸಿದರು.

ಮಂಗಳೂರು ವಿ.ವಿ ಅಂತರ ಕಾಲೇಜು ಯೋಗಾಸನ ಸ್ಪರ್ಧೆ

Article Image

ಮಂಗಳೂರು ವಿ.ವಿ ಅಂತರ ಕಾಲೇಜು ಯೋಗಾಸನ ಸ್ಪರ್ಧೆ

ಮೂಡುಬಿದಿರೆ: ಬಲ್ಮಟದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್‌ನ 13 ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ

Article Image

ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್‌ನ 13 ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ

ವಿದ್ಯಾಗಿರಿ: ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ತೇರ್ಗಡೆಯಾಗಿ, ರಾಷ್ಟ್ರಮಟ್ಟದಲ್ಲಿ ಮಹತ್ತರ ಸಾಧನೆ ಮೆರೆದಿದ್ದಾರೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ ಹರ್ಷ ಎಂ, ಚಿನ್ಮಯ್ ಎಸ್, ಸಂಕೇತ್ ಭಟ್, ಸುಮಿತ್ ವಿ ಕೆ, ಹರ್ಷ ರೆಡ್ಡಿ, ಮೋಹಿತ್ ಕುಮಾರ್, ಪ್ರಣವ್ ವಿ ಪಂಡಿತ್, ಅಕ್ಷಯ್ ಭಾರದ್ವಾಜ್, ಅನುಷ್ ಅರುಣ್, ಪಿಯೂಷ್ ಹೆಚ್, ವಿಸ್ಮಯ ನಾರಾಯಣ್, ಮೆಲ್ರೊಯ್ ಕ್ಯಾಸ್ಟೆಲಿನೊ, ಇಶಾನ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯು ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ರಾಷ್ಟೀಯ ರಕ್ಷಣಾ ಅಕಾಡೆಮಿ- ಎನ್‌ಡಿಎ) ಮತ್ತು ಇಂಡಿಯನ್ ನೇವಲ್ ಅಕಾಡೆಮಿ (ಭಾರತೀಯ ನೌಕಾ ಅಕಾಡೆಮಿ- ಐಎನ್‌ಎ) ಪ್ರವೇಶಕ್ಕಾಗಿ ವರ್ಷಕ್ಕೆ ಎರಡು ಬಾರಿ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಯು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಹಕಾರಿಯಾಗಿದೆ. ಆಳ್ವಾಸ್ ಪದವಿ ಪೂರ್ವ ಕಾಲೇಜು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆ ಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ನಿರಂತರ ವಾಗಿ ವಿಶೇಷ ತರಬೇತಿ, ಅಣುಕು ಪರೀಕ್ಷೆ, ಮಾರ್ಗದರ್ಶನ ಕಾರ್ಯಗಾರಗಳನ್ನು ನಡೆಸುತ್ತಾ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಸನ್ನದ್ಧರನ್ನಾಗಿಸುತ್ತಿದೆ.

ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರ

Article Image

ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರ

ಮೂಡುಬಿದಿರೆ: ಅರಣ್ಯಗಳತ್ತಾ ನಮ್ಮ ನಿಲುವು ಸದಾ ವಿವೇಚನೆಯಿಂದ ಕೂಡಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ನುಡಿದರು. ಅವರು ಆಳ್ವಾಸ್ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ, ಹಳೆವಿದ್ಯಾರ್ಥಿಗಳ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರಕೃತಿಯನ್ನು ಅವಲೋಕಿಸುವುದು ಬಹಳ ಮುಖ್ಯ. ಪ್ರಕೃತಿಯ ಪ್ರತಿಯೊಂದು ಅಂಶವೂ ನಮಗೆ ಬದುಕಿಗೆ ಪಾಠವನ್ನು ಕಲಿಸುತ್ತದೆ. ಪ್ರಕೃತಿ, ಕೇವಲ ಸಂಪನ್ಮೂಲವಲ್ಲ, ಅದು ಸುಖ-ಶಾಂತಿಯ ಅಮೂಲ್ಯ ಸಂಪತ್ತು. ಅದನ್ನು ಕಾಪಾಡುವುದು ನಮ್ಮ ನೈತಿಕ ಕರ್ತವ್ಯ ಮಾತ್ರವಲ್ಲ, ಭವಿಷ್ಯದ ಪೀಳಿಗೆಗಾಗಿ ಜೀವಸಂಪತ್ತನ್ನು ಉಳಿಸುವ ಅಗತ್ಯವೂ ನಮ್ಮದಾಗಿದೆ. ನಾವು ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಬದುಕಿದರೆ ಮಾತ್ರ ಸುಖ ಮತ್ತು ಶಾಂತಿಯಿಂದ ಬದುಕಲು ಸಾಧ್ಯ. ನಾವು ವಾಸಿಸುತ್ತಿರುವ ಪ್ರದೇಶ ಜೀವ ವೈವಿಧ್ಯತೆಯ ಹಾಟ್ ಸ್ಪಾಟ್. ಜಗತ್ತಿನಲ್ಲಿ ಕೇವಲ 2 ರಿಂದ 3 ಶೇಕಡಾದಷ್ಟು ಪ್ರದೇಶವಷ್ಟೇ ಜೀವ ವೈವಿಧ್ಯ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಆದ್ದರಿಂದ ಜನರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು. ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ. ಕುರಿಯನ್ ಮಾತನಾಡಿ, ತಂತ್ರಜ್ಞಾನ ಬೆಳದಂತೆ ಮನುಷ್ಯ ತನ್ನ ಎಲ್ಲಾ ಬಳಸುವ ವಸ್ತುಗಳನ್ನು ಶಸ್ತ್ರವನ್ನಾಗಿಸಿ ಮಾರ್ಪಾಡಿಸಿದ್ದಾನೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಕೃತಿಯೊಂದಿಗೆ ಹೋರಾಡುವುದಕ್ಕಿಂತ ಅದರಲ್ಲಿ ಬೆರೆತು ಬದುಕುವುದು ಮಾನವನ ನಿಜವಾದ ಕರ್ತವ್ಯ ಎಂದರು. ಆಗುಂಬೆಯ ಕಾನನ ಸಂಸ್ಥೆಯ ನಿರ್ದೇಶಕ, ಜೋಯೆಲ್ ಕೊರಿಯಾ ಮಾತನಾಡಿ, ನಮ್ಮ ಭೂಮಿಯ ಭವಿಷ್ಯವು ನಾವು ಇಂದು ಕೈಗೊಳ್ಳುವ ಕ್ರಮಗಳ ಮೇಲೆ ಅವಲಂಬಿತವಾಗಿವೆ. ಪರಿಸರ ಸಂರಕ್ಷಣೆಯ ಚಳವಳಿಗಳಲ್ಲಿ ಯುವ ಪೀಳಿಗೆ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ವಿಶೇಷವಾಗಿ ಲಯನ್‌ಟೈಲ್ಡ್ ಮಕಾಕ್ (Lion-tailed Macaque) ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಮಾನವನ ಹಸ್ತಕ್ಷೇಪವು ಹೇಗೆ ಅವುಗಳ ಆಹಾರ ಪದ್ಧತಿ ಮತ್ತು ವಾಸಸ್ಥಾನವನ್ನು ಅಸಮತೋಲನಗೊಳಿಸುತ್ತಿವೆ ಎಂಬುದನ್ನು ವಿವರಿಸಿದರು. ಸಂತ ಅಲೋಷಿಯಸ್ ವಿವಿಯ ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ ಕಿರಣ್ ವಾಟಿ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಡಾ. ವಿನಯ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ‍್ಯಗಾರ ನಡೆಸಿಕೊಟ್ಟರು. ಆಳ್ವಾಸ್ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಪವಿತ್ರಾ ಇದ್ದರು. ಶ್ರಾವ್ಯ ಕಾರ‍್ಯಕ್ರಮ ನಿರೂಪಿಸಿ, ಮಾನಸ ವಂದಿಸಿದರು.

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Article Image

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ನಡೆದ ರಾಜ್ಯ ಮಟ್ಟದ ದಸರಾ ಸಿಎಂ ಕಪ್ 2025ರಲ್ಲಿ ಆಳ್ವಾಸ್ ತಂಡವು ಹಲವು ಪ್ರಶಸ್ತಿ ಮತ್ತು ಪದಕಗಳನ್ನು ಪಡೆದುಕೊಂಡಿದೆ. ತಂಡ ವಿಭಾಗದ ಕ್ರೀಡೆಗಳಾದ ಪುರುಷರ ಕಬಡ್ಡಿಯಲ್ಲಿ ಆಳ್ವಾಸ್ ತಂಡ, ಬೆಂಗಳೂರು ಸಿಟಿಯ ವಿರುದ್ಧ 13 ಅಂಕಗಳ ಅಂತರದಿಂದ ಜಯಶಾಲಿಯಾದರೆ, ಮಹಿಳೆಯರ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ಧ 30-08, 35-20 ನೇರ ಸೆಟ್‌ಗಳಿಂದ ಸೋಲಿಸಿ ಪ್ರಥಮ ಸ್ಥಾನವನ್ನು ಪಡೆಯಿತು. ಅಂತೆಯೇ ಮಹಿಳಾ ಕಬಡ್ಡಿ, ಪುರುಷರ ಖೋ-ಖೋ, ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಅಥ್ಲೇಟಿಕ್ಸ್ನಲ್ಲಿ ಆಳ್ವಾಸ್‌ನ ನಾಗ್ರೇಂದ್ರ ಡಿಸ್ಕಸ್ ಥ್ರೋನಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದರೆ, 800 ಮೀ ಓಟದಲ್ಲಿ ಆಳ್ವಾಸ್‌ನ ರೇಖಾ ಬಸಪ್ಪ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದ ಒಟ್ಟು ಕ್ರೀಡಾಕೂಟದಲ್ಲಿ 6 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕವನ್ನು, ವೇಯ್ಟ್ ಲಿಫ್ಟಿಂಗ್‌ನಲ್ಲ್ಲಿ ಒಟ್ಟು 8 ಚಿನ್ನ, 4 ಬೆಳ್ಳಿ, 4 ಕಂಚಿನ ಪದಕವನ್ನು, ಕುಸ್ತಿ ಪಂದ್ಯಾಟದಲ್ಲಿ ಒಟ್ಟು 5 ಕಂಚಿನ ಪದಕ, ಯೋಗಾಸನ ಸ್ಪರ್ಧೆಯಲ್ಲಿ 2 ಬೆಳ್ಳಿ ಪದಕಗಳನ್ನು ಪಡೆದುಕೊಂಡಿದೆ. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

ಆಳ್ವಾಸ್ ಪಿಯು ಕಾಲೇಜಿನಲ್ಲಿ ನಾಟಾ ಓರಿಯೆಂಟೇಷನ್

Article Image

ಆಳ್ವಾಸ್ ಪಿಯು ಕಾಲೇಜಿನಲ್ಲಿ ನಾಟಾ ಓರಿಯೆಂಟೇಷನ್

ಮೂಡಬಿದಿರೆ: ಆಳ್ವಾಸ್ ಪಿಯು ಕಾಲೇಜಿನಲ್ಲಿ ನಡೆದ ನಾಟಾ ಪರೀಕ್ಷೆಯ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ವಾಸ್ತುಶಿಲ್ಪ ಕ್ಷೇತ್ರದ ಭವಿಷ್ಯ ಹಾಗೂ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು. ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್‌ನ ನಿರ್ದೇಶಕ ವಿನೋದ್ ರ‍್ಹಾನ ಮಾತನಾಡಿ, ವಾಸ್ತುಶಿಲ್ಪದಲ್ಲಿ ತಾಂತ್ರಿಕ ಜ್ಞಾನ, ಸೃಜನಶೀಲತೆ ಹಾಗೂ ಕಲಾತ್ಮಕ ಚಿಂತನೆಯ ಸಮನ್ವಯ ಅಗತ್ಯ. ಪಿಯುಸಿ ನಂತರ ವಾಸ್ತುಶಿಲ್ಪ ಪದವಿಗೆ ಪ್ರವೇಶ ಪಡೆಯಲು ದೇಶದಾದ್ಯಂತ ನಡೆಯುವ ನಾಟಾ (NATA) ಹಾಗೂ ಜೆಇಇ ಬಿಆರ್ಕ್ (JEE B.Arch) ಪರೀಕ್ಷೆಗಳ ಮಹತ್ವವನ್ನು ವಿವರಿಸಿದರು. ನಾಟಾ ಪರೀಕ್ಷೆಯಲ್ಲಿ ಗಣಿತ, ರೇಖಾಚಿತ್ರ ದೃಶ್ಯಗ್ರಹಣ ಹಾಗೂ ತಾರ್ಕಿಕ ಚಿಂತನೆಗೆ ಸಂಬಂಧಿಸಿದ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಸಿದ್ಧತೆಗಾಗಿ ಸೂಕ್ತ ಮಾರ್ಗದರ್ಶನ ಒದಗಿಸಿದರು. ಬಿ.ಆರ್ಕ ಪದವಿಯ ಕುರಿತು ಮಾತನಾಡಿ, ಈ ಐದು ವರ್ಷದ ಕೋರ್ಸ್ನಲ್ಲಿ ವಾಸ್ತು ವಿನ್ಯಾಸ, ನಗರ ಯೋಜನೆ, ಪರಿಸರ ಸ್ನೇಹಿ ನಿರ್ಮಾಣ ಮುಂತಾದ ಹಲವು ವಿಷಯಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ. ಬಿ.ಆರ್ಕ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಾಸ್ತುಶಿಲ್ಪಿ, ಒಳಾಂಗಣ ವಿನ್ಯಾಸಕರ, ನಗರ ಯೋಜನೆ ಮುಂತಾದ ಅನೇಕ ವೃತ್ತಿ ಮಾರ್ಗಗಳು ತೆರೆದುಕೊಳ್ಳುತ್ತವೆ ಎಂದರು. ನಿಟ್ಟೆ ವಿವಿಯ ಆರ್ಕಿಟೆಕ್ಚರ್ ವಿಭಾಗದ ಸಹಾಯಕ ಪ್ರಾಧ್ಯಪಕ ನಿಕಿತಾ ಮಖಾಸನ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ. ಎಂ. ಸದಾಕತ್, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಾಗ ಕೇವಲ NEET, JEE, CET ಪರೀಕ್ಷೆಗಳಿಗಷ್ಟೇ ಸೀಮಿತರಾಗದೆ, ಲಭ್ಯವಿರುವ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ಹರಿಸಬೇಕು. ಇಂದಿನ ಪೀಳಿಗೆ ಅವಕಾಶಗಳ ಜಗತ್ತನ್ನು ಅನ್ವೇಷಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಕೇವಲ ಒಂದು ಅಥವಾ ಎರಡು ಕ್ಷೇತ್ರಗಳಿಗೆ ಸೀಮಿತಗೊಳಿಸದೆ, ಹೊಸ ಹೊಸ ಅವಕಾಶಗಳನ್ನು ಸವಾಲಾಗಿ ಸ್ವೀಕರಿಸಿದರೆ ಮಾತ್ರ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬಹುದು. ಸಮಾಜಕ್ಕೆ ಅಗತ್ಯವಿರುವ ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಪಡೆದರೆ, ತಮ್ಮ ವೃತ್ತಿಜೀವನದೊಂದಿಗೆ ರಾಷ್ಟ್ರ ನಿರ್ಮಾಣದಲ್ಲೂ ಸಹ ಪಾತ್ರವಹಿಸಬಹುದು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್., ಸಂಯೋಜಕರಾದ ಗೌತಮ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಸುಧಾರಾಣಿ ನಿರೂಪಿಸಿದರು.

ಗೌರವ ದಯೆ ಹಾಗೂ ಅರ್ಥಮಾಡಿಕೊಳ್ಳುವ ಮನೋಭಾವದಿಂದ ಶಾಂತಿ ಸಾಧ್ಯ : ಅಜೇಯ

Article Image

ಗೌರವ ದಯೆ ಹಾಗೂ ಅರ್ಥಮಾಡಿಕೊಳ್ಳುವ ಮನೋಭಾವದಿಂದ ಶಾಂತಿ ಸಾಧ್ಯ : ಅಜೇಯ

ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ಪೀಳಿಗೆ ಹಾಗೂ ಮುಂದಿನ ನಾಯಕರು, ವಿಜ್ಞಾನಿಗಳು ಮತ್ತು ಸಮಾಜ ಪರಿವರ್ತಕರು. ಆದರಿಂದ ಶಾಂತಿ ನಮ್ಮಿಂದಲೇ ಆರಂಭವಾಗಬೇಕು. ನಾವು ಪರಸ್ಪರ ಮಾತನಾಡುವ ರೀತಿ, ನಾವು ಭಿನ್ನಾಭಿಪ್ರಾಯಗಳನ್ನು ನಿಭಾಯಿಸುವ ವಿಧಾನ ಇವೆಲ್ಲವೂ ಶಾಂತಿಗೆ ವೇದಿಕೆ ನೀಡುತ್ತದೆ. ಎಂದು ಉಜಿರೆಯ ರೂಡ್ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ. ಧ. ಮಂ ಕಾಲೇಜಿನ ರಾಜಕೀಯ ಶಾಸ್ತ್ರ ವಿಭಾಗವು ಆಯೋಜಿಸಿದ ಅಂತರಾಷ್ಟ್ರೀಯ ಶಾಂತಿ ದಿನ ಕಾರ್ಯಕ್ರಮ ಸೆಪ್ಟಂಬರ್ 23ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಶಾಂತಿಯನ್ನು ಉತ್ತೇಜಿಸಲು ಏನು ಮಾಡಬಹುದೆಂದರೆ : ನಾವು ಮಾಡುವ ಚಿಕ್ಕ ಕೆಲಸಗಳು ಕೂಡ ಮುಂದೆ ದೊಡ್ಡ ಪರಿಣಾಮ ಬೀರುತ್ತದೆ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ನಕರಾತ್ಮಕತೆ ಹರಡುವುದನ್ನು ತಪ್ಪಿಸುವುದು ಮುಖ್ಯವಾಗಿದೆ ಹಾಗೂ ಶಾಂತಿ ಪೂರ್ಣ ಮಾತುಗಳು ಮತ್ತು ಕ್ರಿಯೆಗಳನ್ನು ನಮ್ಮ ವಯಕ್ತಿಕ ಜೀವನ ಹಾಗೂ ಕಾಲೇಜು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ಹಾಗೆಯೇ "ನಮ್ಮ ಯಶಸ್ಸು ಜೀವನದ ಶಾಂತಿ" ಎಂದು ತಿಳಿಸಿದರು. ವಿಭಾಗದ ಮುಖ್ಯಸ್ಥ ನಟರಾಜ್ ಎಚ್. ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇವತ್ತು ಯುವಕರು ಯಾಕೆ ತೊಂದರೆಗೊಳಾಗುತ್ತಾರೆ ಎಂದರೆ ಇಡೀ ಪ್ರಪಂಚದಲ್ಲಿ ನೋಡುವುದಾದರೆ ಯುವಕರು ತೊಂದರೆಗೆ ಸಿಲುಕಿದಾಗಲೇ ಅಲ್ಲಿ ಶಾಂತಿ ಕದಳುತ್ತಾ ಬರುತ್ತದೆ ಕಾರಣ ಯುದ್ಧಗಳು ಹಾಗೂ ಯುದ್ಧಗಳಿಂದ ಬಲಿಯದಂತಹ ವ್ಯಕ್ತಿಗಳು. ಹಾಗೆಯೇ ಬದುಕನ್ನು ಕಟ್ಟಿಕೊಂಡವನಿಗೆ ಶಾಂತಿಯನ್ನು ಹಾಳು ಮಾಡಿಕೊಳ್ಳುವಂತಹ ದಾರಿಗಳು ಸಿಗುವುದಿಲ್ಲ. ಇಂದು ಸಾಮಾಜಿಕ ಮಾಧ್ಯಮಗಳು ಯುವಕರನ್ನು ದಾರಿ ತಪ್ಪಿಸುವಂತೆ ಮಾಡುತ್ತಿದೆ. ಹಾಗೂ ಪ್ರತಿ ಹಂತದಲ್ಲಿಯೂ ಕೂಡ ಶಾಂತಿಯನ್ನು ಪ್ರಚೋದಿಸುತ್ತಾ ಪ್ರತಿಪಾದಿಸುತ್ತಾ ಬಂದಿರುವ ದೇಶ ನಮ್ಮದು. ಇವತ್ತು ನಾವು ಭಾರತವನ್ನು ತಿರುಗಿ ನೋಡುವ ಪರಿಸ್ಥಿತಿಗೆ ಬೆಳಿತಾ ಇದ್ದೇವೆ . ಹಾಗೂ ವಿಶ್ವಗುರುವಾಗಿ ಬದಲಾಗುತ್ತಿದೆ ನಮ್ಮ ದೇಶ. ನಮ್ಮೆಲ್ಲಾರ ಉದ್ದೇಶ ಶಾಂತಿ ಸ್ಥಾಪನೆಗೋಸ್ಕರವಾಗಿದೆ . ಹಾಗೂ ಈ ದೇಶಕ್ಕೆ, ಮಣ್ಣಿಗೆ ಹಾಗೂ ಮಕ್ಕಳಿಗೆ ಶಾಂತಿ ಸ್ಥಾಪನೆಯ ಭಾಷಣ ಅವಶ್ಯಕತೆ ಇಲ್ಲ ಯಾಕೆಂದರೆ ಅದು ನಮ್ಮ ರಕ್ತದಲ್ಲೇ ಇದೆ ಎಂದು ತಿಳಿಸಿದರು. ಹಾಗೆ ರಾಜಶಾಸ್ತ್ರ ವಿಭಾಗವು ವಿದ್ಯಾರ್ಥಿಗಳಿಗೆ ಸಂವಿಧಾನವನ್ನು ಕಲಿಸಿಕೊಡುತ್ತದೆ, ಶಾಂತಿ ದಿನ, ಹಾಗೂ ಕಾರ್ಗಿಲ್ ದಿನವನ್ನು ಕೂಡ ಆಚರಿಸುತ್ತಾ ಬಂದಿದೆ. ಇದರ ಉದ್ದೇಶ ವಿದ್ಯಾರ್ಥಿಗಳಿಗೆ ದೇಶದ ತ್ಯಾಗ ಹಾಗೂ ಬಲಿದಾನದ ಬಗ್ಗೆ ತೋರಿಸುವ ಉದ್ದೇಶವಾಗಿದೆ. ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶಾಂತಿ ದಿನದ ಪ್ರಮಾಣವಚನವನ್ನು ವಿದ್ಯಾರ್ಥಿಗಳು ಹಾಗೂ ವಿಭಾಗದ ಪ್ರಾಧ್ಯಾಪಕರು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಭಾಗ್ಯಶ್ರೀ ಉಪಸ್ಥಿತರಿದ್ದರು. ವಿಭಾಗದ ವಿದ್ಯಾರ್ಥಿಗಳಾದ ಮಾನವ ನಿರೂಪಿಸಿದರು, ಶ್ರೇಯಂಕ್ ಸ್ವಾಗತಿಸಿದರು, ಪದ್ಮಶ್ರೀ ಅತಿಥಿಯನ್ನು ಪರಿಚಯಿಸಿದರು, ಹಾಗೂ ವಿಭಾಗದ ಪ್ರಾಧ್ಯಾಪಕ ಡಾ. ಶಿವಕುಮಾರ್ ವಂದಿಸಿದರು.

ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನಶಿಪ್: ಆಳ್ವಾಸ್ ಚಾಂಪಿಯನ್ಸ್

Article Image

ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನಶಿಪ್: ಆಳ್ವಾಸ್ ಚಾಂಪಿಯನ್ಸ್

ಮೂಡುಬಿದಿರೆ: ಕರ್ನಾಟಕ ವಾಲಿಬಾಲ್ ಸಂಸ್ಥೆ ಆಯೊಜಿಸಿದ್ದ ಲೋಕೆಶ್ ಗೌಡ ಟ್ರೋಫಿ ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್ ಕ್ಲಬ್ ತಂಡ ಪುರುಷರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿತು. ಬೆಂಗಳೂರಿನ ಶ್ರೀಕಂಠಿರವ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ತಂಡ 3-1 ಅಂತರದಿಂದ ಕರ್ನಾಟಕ ರಾಜ್ಯ ಪೋಲಿಸ್ ತಂಡವನ್ನು ಮಣಿಸಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಆಳ್ವಾಸ್ ಆಟಗಾರರು ಪ್ರಶಸ್ತಿಗೆ ಮುತ್ತಿಕ್ಕಿದರು. ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ ಆಳ್ವಾಸ್ ತಂಡ, ಕ್ರೀಡಾ ಹಾಸ್ಟೆಲ್ ಬಿಜಿ ತಂಡವನ್ನು 3-1 ಅಂತರದಿಂದ ಪರಭವಗೊಳಿಸಿತ್ತು. ವಿಜೇತರಿಗೆ ಕರ್ನಾಟಕದ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಪ್ರಶಸ್ತಿ ವಿತರಿಸಿದರು. ವಿಜೇತ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

ವಾಲಿಬಾಲ್ ಪಂದ್ಯಾಟದಲ್ಲಿ ಎಸ್ ಎನ್ ವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Article Image

ವಾಲಿಬಾಲ್ ಪಂದ್ಯಾಟದಲ್ಲಿ ಎಸ್ ಎನ್ ವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಅದಮಾರು, ಕಾಪು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಎಸ್.ಎನ್.ವಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ಎನ್.ವಿ. ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡ ಪ್ರತಿನಿಧಿಸಿದ್ದ ಪ್ರಥಮ ಪಿಯುಸಿ ಧನುಷ್ ಹಾಗೂ ದ್ವಿತೀಯ ಪಿಯುಸಿ ಶ್ರೀಶಾಂತ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಶ್ವ ಓಝೋನ್ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಶ್ವ ಓಝೋನ್ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗ ಮತ್ತು ರೋವರ್ಸ್ ರೇಂಜರ್ಸ್ ಘಟಕದ ಸಹಭಾಗಿತ್ವದಲ್ಲಿ ಸೆ. 16 ರಂದು ವಿಶ್ವ ಓಝೋನ್ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಡಿ.ಎಂ ತಾಂತ್ರಿಕ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಪಿ.ಎ ಮುಖ್ಯ ಅತಿಥಿಯಾಗಿ ಮಾತನಾಡಿದರು. ಓಝೋನ್ ನ ಅನ್ವೇಷಣೆ, ವೈಜ್ಞಾನಿಕ ಹಿನ್ನಲೆ, ಓಝೋನ್ ಪದರದ ಸವೆತಕ್ಕೆ ಕಾರಣವಾಗುವ ಮಾನವನ ಚಟುವಟಿಕೆಗಳು ಮತ್ತು ಓಝೋನ್ ಪದರದ ಸವೆತ ತಡೆಗಟ್ಟುವಲ್ಲಿ ವಿಶ್ವವ್ಯಾಪಿ ಜಾರಿಯಾಗಿರುವ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಿದರು. ಕಾಲೇಜಿನ ಉಪಪ್ರಾಂಶುಪಾಲೆ ಮತ್ತು ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಕುಮಾರಿ ಕೆ.ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭೂಮಿಯ ರಕ್ಷಣೆಯಲ್ಲಿ ಓಝೋನ್ ಪದರದ ಮಹತ್ವವನ್ನು ಅರಿತು ಅದರ ಸವೆತಕ್ಕೆ ಕಾರಣವಾಗುತ್ತಿರುವ ಮಾನವ ಕ್ರಿಯೆಗಳನ್ನು ತಡೆಯುವಲ್ಲಿ ನಾವುಗಳು ಶ್ರಮಿಸಿಬೇಕಿದೆ. ವಿಜ್ಞಾನದ ವಿದ್ಯಾರ್ಥಿಗಳು ಪರಿಸರದ ಬಗ್ಗೆ ವಿಶೇಷ ಕಾಳಜಿಯನ್ನು ಮೈಗೂಡಿಸಿಕೊಂಡು ಪರಿಸರವನ್ನು ಉಳಿಸಿ, ಬೆಳೆಸುವಲ್ಲಿ ಕೈಜೋಡಿಸಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ರೋವರ್ಸ್ ರೇಂಜರ್ಸ್ ಘಟಕದ ಸಂಯೋಜಕ ಪ್ರಸಾದ್ ಕುಮಾರ್, ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ.ಡಿ ಮತ್ತು ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ, ರೇಂಜರ್ ನವ್ಯಶ್ರೀ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಮಧುಶ್ರೀ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಓಝೋನ್ ದಿನದ ಅಂಗವಾಗಿ ಸಮುದಾಯ ಜಾಗೃತಿ ಅಭಿಯಾನ ನಡೆಸಿದರು. ಮನೆ ಮನೆಗೆ ತೆರಳಿ ಓಝೋನ್ ಪದರದ ಮಹತ್ವ ತಿಳಿಸಿ, ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.

36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್‌ನ 29 ಕ್ರೀಡಾಪಟುಗಳು ಆಯ್ಕೆ

Article Image

36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್‌ನ 29 ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆಪ್ಟೆಂಬರ್ 23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ 29 ಮಂದಿ ಕ್ರೀಡಾಪಟುಗಳು ಭಾಗವಹಿಸಲು ಆಯ್ಕೆಯಾಗಿದ್ದಾರೆ. ಒಂದೇ ಸಂಸ್ಥೆಯಿಂದ 29 ಕ್ರೀಡಾಪಟುಗಳು ಸ್ಪರ್ಧೆಗೆ ಅವಕಾಶ ಪಡೆದಿರುವುದು ಉಲ್ಲೇಖಾರ್ಹ ಸಾಧನೆಯಾಗಿದೆ. ಇವರಲ್ಲಿ 10 ಮಂದಿ ಬಾಲಕಿಯರು ಹಾಗೂ 19 ಮಂದಿ ಬಾಲಕರು ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ಬಾಲಕಿಯರ ವಿಭಾಗ: ಐಶ್ವರ್ಯ (ಚಕ್ರ ಎಸೆತ, ಗುಂಡು ಎಸೆತ), ಗೀತಾ(400 ಮೀ., 4*400 ರಿಲೇ), ನಾಗಿನಿ (1000 ಮೀ.), ಚರಿಶ್ಮಾ (1000 ಮೀ.), ವೈಷ್ಣವಿ(ಉದ್ದ ಜಿಗಿತ), ಭಾಗೀರಥಿ (3 ಕಿ.ಮೀ ನಡಿಗೆ), ನಂದಾ (ಜಾವಲಿನ್ ಎಸೆತ), ಪ್ರೇಕ್ಷಿತಾ (ಜಾವಲಿನ್ ಎಸೆತ), ಮೇಘಾ(ತ್ರ‍್ರಯಥ್ಲಾನ್ ಸಿ), ಸುಜಾತ ವೈ(ತ್ರಯಥ್ಲಾನ್ ಸಿ). ಬಾಲಕರ ವಿಭಾಗ: ನೋಯಿಲ್ (ಉದ್ದ ಜಿಗಿತ), ಮಹಮ್ಮದ್ ತಬ್ಶೀರ್ (ತ್ರಿವಿಧ ಜಿಗಿತ), ಗುರು (ಹೆಪ್ಟಾಥ್ಲಾನ್), ಯಶವಂತ (800 ಮೀ., 4*400 ರಿಲೇ), ದಯಾನಂದ (400 ಮೀ., 4*400 ರಿಲೇ), ದರ್ಶನ (5 ಕಿ.ಮೀ ನಡಿಗೆ), ರಾಮು (400 ಮೀ., 4*400 ರಿಲೇ), ಸರ್ವಜಿತ್ (4*100 ರಿಲೇ), ಅಬ್ದುಲ್ ರಜಾಕ್ (ಹ್ಯಾಮರ್ ಎಸೆತ), ಕೇಶವ ನಾಯ್ಕ (ಜಾವಲಿನ್ ಎಸೆತ), ಮನಿಷ್ (ಉದ್ದ ಜಿಗಿತ), ಡೈನ್ದೇವ್ (800 ಮೀ. ಹರ್ಡಲ್ಸ್), ಲೋಹಿತ್ ಗೌಡ (ಉದ್ದ ಜಿಗಿತ), ನವೀನ್ (ಉದ್ದ ಜಿಗಿತ), ಕೃಷ್ಣ ಪ್ರಕಾಶ (ಜಾವಲಿನ್ ಎಸೆತ), ಮೈಲಾರಿ (ಜಾವಲಿನ್ ಎಸೆತ), ಪ್ರಣವ್ (ತ್ರಯಥ್ಲಾನ್ ಎ), ಆದರ್ಶ್ (ತ್ರಯಥ್ಲಾನ್ ಬಿ), ಸುಭಾಶ್ (ತ್ರಯಥ್ಲಾನ್ ಸಿ).

ಸತ್ತೂರು ಧಾರವಾಡ: ವಿಶ್ವ ಭೌತಚಿಕಿತ್ಸಾ ಸಪ್ತಾಹ ಆಚರಣೆ

Article Image

ಸತ್ತೂರು ಧಾರವಾಡ: ವಿಶ್ವ ಭೌತಚಿಕಿತ್ಸಾ ಸಪ್ತಾಹ ಆಚರಣೆ

ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನಲ್ಲಿ ಸೆಪ್ಟೆಂಬರ್ 5ರಿಂದ 9ರವರೆಗೆ ಭೌತಚಿಕಿತ್ಸಾ ಸಪ್ತಾಹ ಮತ್ತು ವಿಶ್ವ ಭೌತ ಚಿಕಿತ್ಸಾ ದಿನಾಚರಣೆಯನ್ನು ಆಚರಿಸಲಾಯಿತು. ಭೌತಚಿಕಿತ್ಸಾ ಸಪ್ತಾಹದ ಅಂಗವಾಗಿ ಪೋಸ್ಟರ್ ಪ್ರದರ್ಶನ, ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು, ಉತ್ತಮ ಆರೋಗ್ಯಕ್ಕಾಗಿ ಕಾಲ್ನಡಿಗೆ ಜಾಥಾ, ಆರೋಗ್ಯ ತಪಾಸಣಾ ಶಿಬಿರ ಮುಂತಾದ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಮತ್ತು ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಗೌರವ ಅತಿಥಿಗಳಾಗಿದ್ದರು. ಮುಖ್ಯ ಅತಿಥಿಗಳಾದ ಡಾ. ನಿರಂಜನ್ ಕುಮಾರ ಅವರು ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ: ಆರೋಗ್ಯ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಒಂದು ತಂಡವಾಗಿ ಅನಿವಾರ್ಯತೆ ಇದೆ. ಜನರ ಜೀವಿತಾವಧಿ ಹೆಚ್ಚಿಸುವಲ್ಲಿ ಭೌತಿಕ ಚಿಕಿತ್ಸಕರ ಗುಣಮಟ್ಟದ ಸೇವೆ ಶ್ಲಾಘನಿಯ. ನಾವು ಯಾವುದೇ ವೃತ್ತಿಯಲ್ಲಿದ್ದರೂ, ಶ್ರಧ್ದೆಯಿಂದ ಕಾರ್ಯನಿರ್ವಹಿಸುತ್ತಾ ವೃತ್ತಿಯನ್ನು ಗೌರವಿಸಬೇಕು. ಪ್ರಪಂಚದಾದ್ಯಂತ ಆರೋಗ್ಯ ವೃತ್ತಿಪರರಿಗೆ ಬೇಡಿಕೆ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಕೇತ. ಭೌತಚಿಕಿತ್ಸಕರು ತಮ್ಮ ವೃತ್ತಿಯನ್ನು ಗಂಭೀರವಾಗಿ ಪರಿಗಣಿಸಿ ಅದರಲ್ಲಿ ಶ್ರೇಷ್ಠತೆಯನ್ನು ಸಾಧಿಸಬೇಕು. ಈ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ ಕಾಲೇಜ ಆಫ್ ಹೆಲ್ತ್ ಪ್ರೋಫೆಶನಲ್ಸ್ನ ಡೀನ್ ಮತ್ತು ಹಿರಿಯ ಭೌತಚಿಕಿತ್ಸಕರಾದ ಡಾ. ಜಿ. ಅರುಣ ಮಯ್ಯಾ ಹಾಗೂ ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶರ್ಮಿಳಾ ದುಧಾನಿ ಅವರನ್ನು ಭೌತಚಿಕಿತ್ಸೆಯ ಕ್ಷೇತ್ರಕ್ಕೆ ನೀಡಿದ ಅಪಾರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಪ್ರಸಿದ್ಧ ಕೈಗಾರಿಕೋಧ್ಯಮಿಯಾದ ಮಹೀಂದ್ರ ಸಿಂಘಿ ಮತ್ತು ಮಹಾವೀರ ಜೈನ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು. ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು ಮತ್ತು ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಸಂಗೀತಾ ಅಪ್ಪಣ್ಣನವರ್ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಸುಧೀರ್ ಭಟ್ಟಭೋಲನ್ ಮತ್ತು ಡಾ. ಸಲೀಮಾ ಬಿಜಾಪುರಿ ಸನ್ಮಾನಿತರನ್ನು ಪರಿಚಯಿಸಿದರು. ಡಾ. ತುಳಸಿ ಕುಲಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಎಲೀಶ ಜಿಡಿ ವಂದರ್ನಾಪಣೆ ಸಲ್ಲಿಸಿದರು.

ಸತ್ತೂರು, ಧಾರವಾಡ: ನಾಯಕತ್ವ ತರಬೇತಿ ಶಿಬಿರ

Article Image

ಸತ್ತೂರು, ಧಾರವಾಡ: ನಾಯಕತ್ವ ತರಬೇತಿ ಶಿಬಿರ

ಎಸ್.ಡಿ.ಎಂ. ವಿಶ್ವವಿದ್ಯಾಲಯವು ತನ್ನ ಅಂಗ ಸಂಸ್ಥೆಗಳ ಆಯ್ದ ವಿದ್ಯಾರ್ಥಿಗಳಿಗಾಗಿ ಸೆಪ್ಟೆಂಬರ್ 1 ಮತ್ತು 2, 2025ರಂದು ಎರಡು ದಿನಗಳ ನಾಯಕತ್ವ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಮುಂಬೈನ, ಎಂ. ಆರ್. ಪೈ ಫೌಂಡೇಶನ್‌ನ ಸಹಯೋಗದೊಂದಿಗೆ ಈ ನಾಯಕತ್ವ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ. ಇಬ್ಬರು ತಜ್ಞ ನಾಯಕತ್ವ ತರಬೇತುದಾರರಾದ ಸಚಿನ್ ಕಾಮತ್ ಮತ್ತು ಸುಧೀರ್ ಪೈ ಅವರು ನಮ್ಮ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮುಂಬೈನ ಎಂ. ಆರ್. ಪೈ ಫೌಂಡೇಶನ್‌ನಿಂದ ಬಂದಿದ್ದರು. ಸುಮಾರು 100ಕ್ಕೂ ಹೆಚ್ಚು ವಿದ್ಯಾ ಗೀತಾ ಪೈ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ವಾತಿ ಕಪಾಡಿಯಾ ಅವರು ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಗುರಿ ನಿಗದಿ ಮತ್ತು ಸಾಧನೆ-ಯಶಸ್ಸಿಗೆ ಮಾರ್ಗಸೂಚಿ, ಸಂವಹನ ಕೌಶಲ್ಯಗಳನ್ನು ತೀಕ್ಷ್ಣಗೊಳಿಸುವುದು, ಅಭ್ಯಾಸಗಳನ್ನು ಕರಗತ ಮಾಡಿಕೊಳ್ಳುವುದು-ವೈಯಕ್ತಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು, ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು ಮತ್ತು ಸಮಸ್ಯೆ ಪರಿಹರಿಸುವುದು, ಅಗತ್ಯ ತಂಡದ ಕೆಲಸ ಕೌಶಲ್ಯಗಳನ್ನು ಹೆಚ್ಚಿಸುವುದು, ತನ್ನಲ್ಲಿ ನಂಬಿಕೆ ಇಡುವುದು, ಅರ್ಥಪೂರ್ಣ ಸಂಪರ್ಕಗಳನ್ನು ನಿರ್ಮಿಸುವುದು ಎಂಬ ವಿಷಯಗಳು ಮೇಲೆ ಎರಡು ದಿನಗಳ ತರಬೇತಿಯನ್ನು ನೀಡಲಾಯಿತು. ಗೀತಾ ಪೈ ಅವರು ವಿದ್ಯಾಥಿಗಳನ್ನುದ್ದೇಶಿಸಿ ಮಾತನಾಡುತ್ತಾ: ವಿದ್ಯಾರ್ಥಿಗಳು ವೃತ್ತಿಪರ ನೀತಿ ಶಾಸ್ತ್ರವನ್ನು ನಿಕಟವಾಗಿ ಗಮನಿಸುತ್ತಾ ತಮ್ಮ ಜೀವನದಲ್ಲಿ ಅನುಸರಿಸಬೇಕು. ಆರೋಗ್ಯ ವೃತ್ತಿಪರರು ಅತೀ ಕಾಳಜಿಯಿಂದ ಉತ್ತಮ ಚಿಕಿತ್ಸೆ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಲಭ್ಯವಿರುವ ಅವಕಾಶಗಳನ್ನು ಸರಿಯಾಗಿ ಬಳಸಿ, ಉತ್ತಮ ನಾಯಕರಾಗಬೇಕು. ಎಸ್.ಡಿ.ಎಂ. ದಂತ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಲರಾಮ್ ನಾಯಕ್ ಅವರು ಮಾತನಾಡುತ್ತಾ, ನಾವು ಉತ್ತಮ ಅಭ್ಯಾಸಗಳನ್ನು ಅನುಸರಿಸಿ ದೀರ್ಘಕಾಲದವರೆಗೆ ಉಳಿಸಿಕೊಳ್ಳಬೇಕು. ಆರೋಗ್ಯ ಸೇವಾ ಸಿಬ್ಬಂದಿಗಳು ಸರಿಯಾದ ಸಂವಹನ ಮತ್ತು ಕೌಶಲ್ಯಗಳು ಅವಶ್ಯಕವಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯವು ನಾಯಕತ್ವ ಗುಣಗಳನ್ನು ಅಭಿವೃದ್ಧಿಪಡಿಸಲು ಅನೇಕ ಅವಕಾಶಗಳನ್ನು ಒದಗಿಸುತ್ತದೆ. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಗೀತಾ ಪೈ ಮತ್ತು ಸ್ವಾತಿ ಕಪಾಡಿಯಾ ಅವರನ್ನು ಸನ್ಮಾನಿಸಿದರು. ಸಹ ಉಪ ಕುಲಪತಿಗಳಾದ ಜೀವಂಧರ್ ಕುಮಾರ್, ಗೀತಾ ಎಂ.ಆರ್. ಪೈ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ಸಂಶೋಧನಾ ನಿರ್ದೇಶಕರಾದ ಡಾ. ಕೆ. ಸತ್ಯಮೂರ್ತಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಬಾಬಣ್ಣ ಶೆಟ್ಟಿಗಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

ಕಲಿಕೆ ಎನ್ನುವುದು ಮುಗಿಯದ ಅಧ್ಯಾಯ: ದಿನೇಶ್ ಶೆಟ್ಟಿ ಕಾವಳಕಟ್ಟೆ

Article Image

ಕಲಿಕೆ ಎನ್ನುವುದು ಮುಗಿಯದ ಅಧ್ಯಾಯ: ದಿನೇಶ್ ಶೆಟ್ಟಿ ಕಾವಳಕಟ್ಟೆ

ಪುರಾಣದಿಂದಲೂ ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆಯಾಗಿದೆ ಮತ್ತು ವ್ಯಕ್ತಿತ್ವ ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ.ಹಾಗಾಗಿ ಕಲಿಕೆ ಎನ್ನುವುದು ತಕ್ಷಣಕ್ಕೆ ಮುಗಿಯುವುದಲ್ಲ ಅದೊಂದು ಮುಗಿಯದ ಅಧ್ಯಾಯ ಎಂದು ಖ್ಯಾತ ಯಕ್ಷಗಾನ ಕಲಾವಿದ, ವಾಗ್ಮಿ ದಿನೇಶ್ ಶೆಟ್ಟಿ ಕಾವಳಕಟ್ಟೆ ಅಭಿಪ್ರಾಯಪಟ್ಟರು. ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಆ.22ರಂದು ಆಯೋಜಿಸಲಾಗಿದ್ದ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ ಕಾರ್ಯಕ್ರಮ ಮತ್ತು "ವಿಶ್ವಮಾನವ ಶ್ರೀ ರಾಮಚಂದ್ರ" ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಚರಿತ್ರೆಯ ಪುಟದಲ್ಲಿ ಒಂದು ಮಗುವಿನಿಂದ ಹಿಡಿದು ವೃದ್ಧರವರೆಗೂ ಪ್ರತಿಯೊಬ್ಬರ ಬಾಯಲ್ಲೂ ಹರಿದಾಡುವ ಏಕೈಕ ಹೆಸರು ರಾಮ. ರಾಮ ಕೇವಲ ಪುರಾಣ ಮಹಾಕಾವ್ಯದ ವ್ಯಕ್ತಿಯಾಗಿ ಬರಲಿಲ್ಲ ಶಕ್ತಿಯಾಗಿ ಬಂದಿದ್ದಾನೆ ಇದ್ದಕ್ಕೆ ಕಾರಣ ಅವನ ಕಲಿಕೆ. ಕಲಿಕೆ ಎನ್ನುವುದು ಜೀವನದ ಅಂತ್ಯದವರೆಗೂ ಮುಗಿಯದ ಅಧ್ಯಾಯ. ಇದ್ದಕ್ಕೆ ನಮ್ಮ ಮುಂದಿರುವ ನಿದರ್ಶನ ಶ್ರೀರಾಮ ಎಂದರು. ವಿಶ್ವಮಾನವ ಗುಣಗಳುಳ್ಳ ಶ್ರೀರಾಮನ ಆದರ್ಶಗಳನ್ನು ವಿದ್ಯಾರ್ಥಿಗಳು ವರ್ತಮಾನದಲ್ಲಿ ರೂಢಿಸಿಕೊಳ್ಳುವ ಅವಶ್ಯಕತೆ ಇದೆ.ಸಧ್ಯ ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ಹೆಸರು ಮಾಡುವ ಹುನ್ನಾರಗಳು ನಡೆಯುತ್ತಿರುವುದು ಶೋಚನೀಯ. ಪ್ರತಿಯೊಂದು ದೇವಾಲಯವು ಕೂಡ ನಮ್ಮ ಸಮೃದ್ಧ ಹಿಂದು ಸಂಸ್ಕೃತಿಯ ಆಸ್ತಿಗಳು ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನತೆಯ ಮೇಲೆ ಇದೆ ಎಂದರು. ಧರ್ಮಸ್ಥಳ ಕ್ಷೇತ್ರದ ರೀತಿ ಪ್ರತಿಯೊಂದು ದೇವಾಲಯಗಳು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡರೆ ಭಾರತ ರಾಮ ರಾಜ್ಯ ಆಗುವುದರಲ್ಲಿ ಅನುಮಾನವಿಲ್ಲ. ಹಿಂದೂ ದೇವಾಲಯಗಳು ಮೇಲೆ ಆಗುತ್ತಿರುವ ಧೋರಣೆಗಳನ್ನು ತಡೆಗಟ್ಟುವಲ್ಲಿ ಯುವಜನತೆ ಶ್ರಮಿಸಬೇಕು. ಎಂದವರು ಕಿವಿಮಾತು ಹೇಳಿದರು. ಕಲಾಕೇಂದ್ರದ ಮಾತೃ ಸ್ವರೂಪಿ, ಸೋನಿಯಾ ಯಶೋವರ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. "ಬೆಳಗಿದ ದೀಪ ನಿಮ್ಮ ಬಾಳಿಗೆ ಹಾಗೂ ಕಲಾ ಕೇಂದ್ರಕ್ಕೆ ಬೆಳಕಾಗಲಿ ಎಂದು ಹಾರೈಸಿ,ಕಲೆಯನ್ನು ಮೈಗೂಡಿಸಿಕೊಂಡರೆ ಕಾಲೇಜಿನಲ್ಲಿ ಓದಿದ ವಿಷಯಗಳು ಬೇಗ ಅರ್ಥ ಆಗುವುದರ ಜೊತೆಗೆ ಏಕಾಗ್ರತೆ ಹೆಚ್ಚಾಗುತ್ತದೆ. ನಿಮ್ಮ ಜೀವನದ ಹಾದಿಯಲ್ಲಿ ನಿಮ್ಮ ಬುದ್ದಿ ಯನ್ನು ಬೇರೆಯವರು ನಡೆಸಲು ಬಿಡಬೇಡಿ, ಸರಿ ತಪ್ಪುಗಳನ್ನು ಅರಿತು ವಿಶ್ಲೇಷಿಸಿ ಮುಂದುವರೆದರೆ ಯಶಸ್ಸು ನಿಮ್ಮದಾಗುತ್ತದೆ ಎಂದವರು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ನೂತನ ರಂಗಸ್ಥಳವನ್ನು ಉದ್ಘಾಟಿಸಿ ಮಾತನಾಡಿದರು. "ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಮೌಲ್ಯಯುತ ಶಿಕ್ಷಣ ಒದಗಿಸುವುದು, ನಮ್ಮ ಕಾಲೇಜಿನ ಅಧ್ಯಕ್ಷರ ಮೂಲ ಆಶಯವಾಗಿದೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ಬೇರೆ ಬೇರೆ ಚಟುವಟಿಕೆಗಳಿವೆ. ಅದರಲ್ಲಿ ಒದಗಿ ಬರುವ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು" ಎಂದರು. ಎಲ್ಲಾ ಸವಲತ್ತು ಹಾಗೂ ಅವಕಾಶಗಳನ್ನು ಉಪಯೋಸಿಕೊಂಡರೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ.ನಮ್ಮ ಆಸಕ್ತಿ ವಿಚಾರಗಳನ್ನು ನಾವು ಗುರುತಿಸಿಕೊಂಡು, ಶಿಕ್ಷಣದ ಜೊತೆಗೆ ನಮ್ಮ ಆಸಕ್ತಿ ವಿಷಯದಲ್ಲಿ ಮುಂದುವರೆದು ಪರಿಶ್ರಮ ಶ್ರದ್ಧೆಯ ಜೊತೆಗೆ ಆತ್ಮವಿಶ್ವಾಸವನ್ನು ಬೆಳಿಸಿಕೊಳ್ಳಬೇಕು. ಎಂದು ಸಲಹೆ ನೀಡಿದರು. ಪೂಜ್ಯ ಖಾವಂದರ ಕುರಿತ ಸಾಧನೆ ಹಾಗೂ ಅವರ ಚಿಂತನೆಗಳನ್ನು ಒಳಗೊಂಡಂತಹ ಕಾರ್ಯಕ್ರಮವನ್ನು "ಯಕ್ಷ ದರ್ಶನ" ಎಂಬ ಶೀರ್ಷಿಕೆ ಅಡಿಯಲ್ಲಿ ಹಾಗೂ ಯಕ್ಷಗಾನದ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಲಾಯಿತು. ಕಾಲೇಜಿನ ವತಿಯಿಂದ ಯಕ್ಷಗಾನ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸವನ್ನು ವೆಂಕಪ್ಪಯ್ಯ ಸಾಂಸ್ಕೃತಿಕ ಯಕ್ಷಗಾನ ಅಧ್ಯಯನ ಭವನ ಸಿರಿಬಾಗಿಲು ಇಲ್ಲಿಗೆ ಭೇಟಿ ನೀಡಿದ ಅನುಭವಗಳನ್ನು ವಿದ್ಯಾರ್ಥಿಗಳು ಅಮೋಘ ಶಂಕರ್ ಹಾಗೂ ಅನನ್ಯ ಹಂಚಿಕೊಂಡರು. ವಿದ್ಯಾರ್ಥಿಗಳಿಬ್ಬರು "ಬಾಲ ಗೋಪಾಲ" ಪ್ರಸ್ತುತಿಯನ್ನು ಆಡಿ ತೋರಿಸಿದರು. ಪ್ರಸ್ತುತ ತಿಂಗಳು ಅತೀ ಹೆಚ್ಚು ಯಕ್ಷಗಾನ ತರಗತಿಗೆ ಹಾಜರಾದ ವಿದ್ಯಾರ್ಥಿಗಳಾದ ಸ್ಮೃತಿ ಹಾಗೂ ಅನನ್ಯರನ್ನು ಗುರುತಿಸಲಾಯಿತು. ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಡಾ. ನಾಗಣ್ಣ, ಯಕ್ಷಗಾನ ತರಬೇತುದಾರ ಅರುಣ್ ಕುಮಾರ್ ಧರ್ಮಸ್ಥಳ, ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ, ಕಾಲೇಜಿನ ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಶ್ರೇಯಸ್ ಪಾಳ್ಯಂದೆ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸಚಿನ್ ಉಪಸ್ಥಿತರಿದ್ದರು. ಯಕ್ಷಗಾನದ ವಿದ್ಯಾರ್ಥಿಗಳು ಹಾಗೂ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯಕ್ಷಗಾನ ವಿದ್ಯಾರ್ಥಿಗಳು ಪ್ರಾರ್ಥಿಸಿ, ತೇಜಸ್ ಸ್ವಾಗತಿಸಿ, ಸಹನಾ ವಂದಿಸಿದರು.ಕಾರ್ಯಕ್ರಮವನ್ನು ಪವಿತ್ರ ನಿರೂಪಿಸಿದರು.

ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025

Article Image

ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025

ಮೂಡುಬಿದಿರೆ: ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವುದರಲ್ಲಿ ಮಹತ್ವದ ಕೊಡುಗೆಯನ್ನು ನೀಡಿರುತ್ತಾರೆ. ಫಲಿತಾಂಶ: 14 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಪ್ರಣವ್ ಎಸ್ - ಟ್ರಯಥ್ಲಾನ್-ಎ (ಪ್ರಥಮ), ಸುಭಾಷ್ - ಟ್ರಯಥ್ಲಾನ್-ಸಿ (ದ್ವಿತೀಯ), ಆದರ್ಶ್ - ಟ್ರಯಥ್ಲಾನ್- (ಪ್ರಥಮ), ಮೇಘಾ - ಟ್ರಯಥ್ಲಾನ್- ಸಿ (ಪ್ರಥಮ), ಸುಜಾತ - ಟ್ರಯಥ್ಲಾನ್-ಸಿ (ದ್ವಿತೀಯ) 16 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಕೃಷ್ಣ - ಜಾವೆಲಿನ್ ಎಸೆತ (ಪ್ರಥಮ), ಮೈಲಾರಿ - ಜಾವೆಲಿನ್ ಎಸೆತ (ದ್ವಿತೀಯ), ನವೀನ್ - ಉದ್ದ ಜಿಗಿತ (ಪ್ರಥಮ), ಲೋಹಿತ್ ಗೌಡ- ಉದ್ದ ಜಿಗಿತ (ದ್ವಿತೀಯ), ನ್ಯಾನ್‌ದೇವ್ - 80ಮೀ ಹರ್ಡಲ್ಸ್ (ಪ್ರಥಮ), ಪ್ರೇಕ್ಷಿತಾ - ಜಾವೆಲಿನ್ ಎಸೆತ (ಪ್ರಥಮ) 18 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಕವೀಶ್ - ಜಾವೆಲಿನ್ ಎಸೆತ (ದ್ವಿತೀಯ), ಆಕಾಶ್ - 110ಮೀ ಹರ್ಡಲ್ಸ್ (ತೃತೀಯ), ಉಲ್ಲಾಸ್ - 5ಕಿಮೀ ನಡಿಗೆ (ತೃತೀಯ), ಗುರು - ಹೆಪ್ಟತ್ಲಾನ್ (ಪ್ರಥಮ), ಉದ್ದ ಜಿಗಿತ (ದ್ವಿತೀಯ), ಮನೀಶ್ - ಉದ್ದ ಜಿಗಿತ (ತೃತೀಯ), ಭಾಗೀರಥಿ - 3ಕಿಮೀ ನಡಿಗೆ (ತೃತೀಯ), ನಾಗಿಣಿ - 1000ಮೀ (ಪ್ರಥಮ), ಚರೀಷ್ಮಾ - 1000ಮೀ (ದ್ವಿತೀಯ), ವೈಷ್ಣವಿ - ಉದ್ದ ಜಿಗಿತ (ಪ್ರಥಮ), 20 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ದಯಾನಂದ - 400ಮೀ (ದ್ವಿತೀಯ), ನೊಯಲ್ - ಉದ್ದ ಜಿಗಿತ (ಪ್ರಥಮ), ತಬಶೀರ್ - ತ್ರಿವಿಧ ಜಿಗಿತ (ಪ್ರಥಮ), ಉದ್ದ ಜಿಗಿತ (ತೃತೀಯ), ದರ್ಶನ್ - 10ಕಿಮೀ ನಡಿಗೆ (ಪ್ರಥಮ), ಸರ್ವಜಿತ್ - 100ಮೀ (ತೃತೀಯ), ಅಬ್ದುಲ್ ರಜಕ್ - ಹ್ಯಾಮರ್ ತ್ರೋ (ದ್ವಿತೀಯ), ಯಶವಂತ 800ಮೀ(ದ್ವಿತೀಯ), ರಾಮು-400ಮೀ (ತೃತೀಯ), ನಂದ - ಜಾವೆಲಿನ್ ಎಸೆತ (ದ್ವಿತೀಯ), ಶಬರಿ - 100ಮೀ ಹರ್ಡಲ್ಸ್ (ತೃತೀಯ), ಗೀತಾ - 400ಮೀ (ದ್ವಿತೀಯ), ಐಶ್ವರ್ಯ - ಚಕ್ರ ಎಸೆತ (ದ್ವಿತೀಯ), ಗುಂಡು ಎಸೆತ (ದ್ವಿತೀಯ) 23 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಸನತ್- ಡೆಕತ್ಲಾನ್ (ಪ್ರಥಮ), ಗಣೇಶ್ - ಗುಂಡು ಎಸೆತ (ಪ್ರಥಮ), ನಾಗೇಂದ್ರ - ಚಕ್ರ ಎಸೆತ (ಪ್ರಥಮ), ರೇಖಾ - 800ಮೀ (ಪ್ರಥಮ), 400ಮೀ (ದ್ವಿತೀಯ), ಪ್ರಣಮ್ಯ - 10000ಮೀ (ಪ್ರಥಮ) 5000ಮೀ (ಪ್ರಥಮ) ಸ್ಥಾನ ಪಡೆದಿರುತ್ತಾರೆ. ನೂತನ ಕೂಟ ದಾಖಲೆ : 18 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ನಾಗಿಣಿ 1000 ಮೀ, ಹಾಗೂ 16 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನ್ಯಾನ್‌ದೇವ್ 80ಮೀ ಹರ್ಡಲ್ಸ್ ಹಾಗೂ 23 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಚಕ್ರ ಎಸೆತದಲ್ಲಿ ನೂತನ ಕೂಟ ದಾಖಲೆಯನ್ನು ಮಾಡಿರುತ್ತಾರೆ. ವೈಯಕ್ತಿಕ ಪ್ರಶಸ್ತಿ : 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಆದರ್ಶ್ ಕ್ರೀಡಾಕೂಟದಲ್ಲಿ ಕೊಡ ಮಾಡುವ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾನೆ. ವಿಜೇತ ಕ್ರೀಡಾಪಟಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನಲ್ಲಿ ಮಹೋತ್ಸವ ಸಮ್ಮೇಳನ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನಲ್ಲಿ ಮಹೋತ್ಸವ ಸಮ್ಮೇಳನ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗವು ಆಗಸ್ಟ್ 22 ರಿಂದ 24, 2025 ರವರೆಗೆ ಡಿ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಕರ್ನಾಟಕ ಅಂಗರಚನಾಶಾಸ್ತ್ರಜ್ಞರ ಘಟಕದ ಬೆಳ್ಳಿ ಮಹೋತ್ಸವ ಸಮ್ಮೇಳನವನ್ನು “ಅನುವಾದ ಅಂಗರಚನಾಶಾಸ್ತ್ರ: ಸಂಪ್ರದಾಯ ಮತ್ತು ತಂತ್ರಜ್ಞಾನದ ಸಿನ್ಸಿಟಿಯಮ್” ಎಂಬ ಧ್ಯೇಯೆಯೊಂದಿಗೆ ಆಯೋಜಿಸಲಾಗಿತ್ತು. ಕರ್ನಾಟಕದಾದ್ಯಂತ 300ಕ್ಕೂ ಹೆಚ್ಚು ಅಂಗರಚನಾಶಾಸ್ತ್ರಜ್ಞರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ಸುಮಾರು 200ಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಸಮ್ಮೇಳನದಲ್ಲಿ ಮಂಡಿಸಲಾಯಿತು. ಕರ್ನಾಟಕ ಅಂಗರಚನಾಶಾಸ್ತ್ರಜ್ಞರ ಘಟಕದ (ಏಅಂ) ಸ್ಥಾಪಕ ಅಧ್ಯಕ್ಷರಾದ ಡಾ. ಎಸ್ ಕಾಂತ ಮತ್ತು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮುಖ್ಯ ಅತಿಥಿಗಳಾಗಿ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಅಂಗರಚನಾಶಾಸ್ತ್ರಜ್ಞರ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಖಜಾಂಚಿಗಳಾದ ಡಾ. ಅಶ್ವಿನಿ ಸಿಎ, ಉಪಾಧ್ಯಕ್ಷರುಗಳಾದ ಡಾ. ಎನ್ ಎಂ ಸುರೇಶ್ ಮತ್ತು ಡಾ. ವಿದ್ಯಾ ಸಿಎಸ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ಪಿ. ಎಸ್. ಭೂಸರಡ್ಡಿ ಅವರು ಗೌರವ ಅತಿಥಿಗಳಾಗಿದ್ದರು. ಗಣ್ಯರು ದೀಪ ಬೆಳಗಿಸುವ ಮೂಲಕ ಸಮ್ಮೇಳನವನ್ನು ಉದ್ಘಾಟಿಸಿದರು. ಡಾ. ಕಾಂತ ಅವರು ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಅನ್ಯಾಟಮಿಸ್ಟ್ಸ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿಗಳಾದ ಡಾ. ಜಥಾನಿ, ಖ್ಯಾತ ಸ್ವರೂಪ ಶಸ್ತ್ರಚಿಕಿತ್ಸಕರಾದ ಡಾ. ಎಸ್. ಎ. ಸುಬ್ರಮಣಿ ಮತ್ತು ಇತರರ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಕಾಂತ ಎಸ್. ಮತ್ತು ಡಾ. ನಿರಂಜನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಂಘಟನಾ ಕಾರ್ಯದರ್ಶಿಗಳಾದ ಡಾ. ವೀಣಾ ಕುಲಕರ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ರೋಶನಿ ಸದಾಶಿವ ಮತ್ತು ಡಾ. ವಿನಯ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಜಂಟಿ ಸಂಘಟನಾ ಕಾರ್ಯದರ್ಶಿಗಳಾದ ಡಾ. ಸುರೇಶ್ ಮನಗುತ್ತಿ ವಂದನಾರ್ಪಣೆ ಸಲ್ಲಿಸಿದರು.

ಮೂಡುಬಿದಿರೆ ಎಕ್ಸಲೆಂಟ್ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮ

Article Image

ಮೂಡುಬಿದಿರೆ ಎಕ್ಸಲೆಂಟ್ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮ

ಎಕ್ಸಲೆಂಟ್ ಮೂಡುಬಿದಿರೆಯ ರಾಷ್ಟ್ರೀಯ ಸೇವಾ ಯೋಜನೆ, ಕಾಲೇಜಿನ ಮಾದ್ಕ ವ್ಯಸನ ವಿರೋಧಿ ಸಮಿತಿ ಹಾಗೂ ಮೂಡುಬಿದಿರೆ ಆರಕ್ಷಕ ಠಾಣೆಯ ಸಹಯೋಗದೊಂದಿಗೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮ ಹಾಗೂ ಕಾನೂನು ಅರಿವು ನೀಡುವ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮ ಎಕ್ಸಲೆಂಟ್‌ಮೂಡುಬಿದಿರೆಯ ರಾಜಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಾನೂನಿನ ಅರಿವು ನೀಡಿದ ಮೂಡುಬಿದಿರೆ ಆರಕ್ಷಕ ಠಾಣೆಯ ಪಿಎಸ್‌ಐ ಪ್ರತಿಭಾ ಅವರು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಭಾರತದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಜಾರಿಗೆ ತರಲಾದ ಒಂದು ಕಾಯ್ದೆ. ಈ ಕಾಯ್ದೆಯು ಮಾದಕ ವಸ್ತುಗಳ ಉತ್ಪಾದನೆ, ತಯಾರಿಕೆ, ಸಂಗ್ರಹಣೆ, ಸಾಗಣೆ, ಮಾರಾಟ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುತ್ತದೆ. ಮದ್ಯ, ಶುಗರ್, ವೈದ್ಯರ ಅನುಮತಿ ಇಲ್ಲದ ರಾಸಾಯನಿಕ ಔಷಧಗಳು ಇತ್ಯಾದಿ ಸೇವನೆಯು ದೇಶದಾದ್ಯಂತ ಯುವಜನರಲ್ಲಿ ಬೆಳೆಯುವ ಭೀತಿಯಾಗಿದೆ. ಇದರಿಂದ ಯುವಶಕ್ತಿ ತನ್ನ ಬಲವನ್ನು ಕಳಕೊಂಡಿದೆ. ಹದಿಹರೆಯದವರು ಮಾತ್ರವಲ್ಲ ಕೆಲವು ಸಂದರ್ಭಗಳಲ್ಲಿ ಹದಿಹರೆಯದ ಪೂರ್ವದ ಮಕ್ಕಳು ಇದಕ್ಕೆ ಬಲಿಯಾಗುತ್ತಾರೆ. ದೇಶದಲ್ಲಿ ಬಹಳಷ್ಟು ಜನರು ಸಹವಾಸ ದೋಷದಿಂದ, ಅನ್ಯ ಕಾರಣಗಳಿಂದ ಮಾದಕ ದ್ರವ್ಯ ಉಪಯೋಗಿಸುತ್ತಾರೆ. ಇದು ದೇಹದ ಹಾಗೂ ಮನಸ್ಸಿನ ಮೇಲೆ ಪರಿಣಾಮ ಬೀರಿ ಆರೋಗ್ಯವನ್ನು ಹಾಳು ಮಾಡುತ್ತದೆ. ಒಮ್ಮೆ ಅಪರಾಧ ಲೋಕದಲ್ಲಿ ಗುರುತಿಸಿ ಆದರೆ ನಿಮ್ಮ ಬಂಗಾರದತಹ ಭವಿಷ್ಯ, ಮನೆಯವರ ಸಾಮಾಜಿಕ ಸ್ಥಾನಮಾನ ಹಾಳಾಗುತ್ತದೆ ಎಂದರು. ಬಳಿಕ ಸೈಬರ್ ಅಪರಾಧಗಳ ಬಗ್ಗೆ, ಸಾಮಾಜಿಕ ಮಾಧ್ಯಮಗಳಿಂದ ಆಗುವ ತೊಂದರೆಗಳು, ವಿದ್ಯಾರ್ಥಿಗಳು ವಹಿಸಬೇಕಾದ ಎಚ್ಚರಿಕೆಗಳ ಕುರಿತು ವಿವರಣಾತ್ಮಕ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ಮಾದಕ ದ್ರವ್ಯದ ಜಾಲವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪೋಲೀಸ್ ಇಲಾಖೆಯ ಪ್ರಯತ್ನ ಶ್ಲಾಘನೀಯ. ಪ್ರತಿಯೊಂದು ಮಗುವಿನ ಬೆಳವಣಿಗೆ ಆರೋಗ್ಯದಾಯಕವಾಗಿರಬೇಕು. ಎತ್ತರಕ್ಕೆ ಏರಬೇಕು ಎಂಬುವುದು ಪ್ರತೀ ಹೆತ್ತವರ ಕನಸು. ಆ ಕನಸನ್ನು ಇಂತಹ ಮಾದಕ ದ್ರವ್ಯಗಳು ಪುಡಿಮಾಡಕೂಡದು. ನಾವು ಒಳ್ಳೆಯ ಅಭ್ಯಾಸಗಳಿಗೆ ವ್ಯಸನಿಗಳೋಣ. ಮಾನವೀಯ ಸಂಬಂಧ, ಶ್ರೇಷ್ಠ ಅಭ್ಯಾಸಗಳು, ದೇಶದ ಕುರಿತಾಗಿ ಗೌರವ ಬೆಳೆಸಿಕೊಳ್ಳಿ. ಸತ್ಯದ ದಾರಿಯಲ್ಲಿ ಮುಂದುವರಿಯಿರಿ. ಒಳ್ಳೆಯದನ್ನು ಬೆಂಬಲಿಸುತ್ತಾ ಇಂತಹ ಒಳ್ಳೆಯ ಕಾರ್ಯಕ್ರಮ ನಡೆಸುವರೇ ಎಕ್ಸಲೆಂಟ್ ಸಂಸ್ಥೆಗೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷ ಪಡುತ್ತಾ, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆದು ಮಾದಕ ವ್ಯಸನ ಮುಕ್ತ ಶ್ರೇಷ್ಠ ಭಾರತ ನಿರ್ಮಾಣವಾಗಲಿ ಎಂದರು. ವಿದ್ಯಾರ್ಥಿ ನಿತಿನ್ ಮಾದಕ ವ್ಯಸನ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳಾದ ರಶ್ಮಿತಾ ಶೆಟ್ಟಿ ಹಾಗೂ ಸಂಜನ್ ಕೋಟೆ ಮಾದಕ ವ್ಯಸನದ ಕುರಿತು ಮಾತಾನಾಡಿದರು. ವಿದ್ಯಾರ್ಥಿಗಳಿಂದ ಮಾದಕ ವ್ಯಸನ ಮುಕ್ತ ಸಮಾಜ ಎಂಬ ಪ್ರಹಸನ ನಡೆಯಿತು. ವೇದಿಕೆಯಲ್ಲಿ ಕಾಲೇಜಿನ ಮಾದಕ ವ್ಯಸನ ವಿರೋಧಿ ಸಮಿತಿಯ ಮುಖ್ಯಸ್ಥರಾದ ಪ್ರದೀಪ್ ಕೆ ಪಿ ಉಪಸ್ಥಿತರಿದ್ದರು. ಕಾರ್ತಿಕ್ ಹೆಚ್. ನಿರೂಪಿಸಿ ಕಾರ್ತಿಕ್ ಅಗಡಿ ವಂದಿಸಿದರು.

ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ಗಮನಹರಿಸಿ: ಜಯಶ್ರೀ

Article Image

ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ಗಮನಹರಿಸಿ: ಜಯಶ್ರೀ

ಕಾಲೇಜು ಜೀವನದಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ವಿದ್ಯಾರ್ಥಿಗಳು ಗಮನಹರಿಸಿ ಸೂಕ್ತ ತಯಾರಿಯಲ್ಲಿ ತೊಡಗಬೇಕು ಎಂದು ಮನಃಶಾಸ್ತ್ರಜ್ಞೆ, ಬೆಂಗಳೂರಿನ ಭಾರತೀಯ ಮನಃಶಾಸ್ತ್ರ ಮತ್ತು ಸಂಶೋಧನಾ ಸಂಸ್ಥೆಯ ನಿಕಟಪೂರ್ವ ಪ್ರಾಧ್ಯಾಪಕಿ ಜಯಶ್ರೀ ಹೇಳಿದರು. ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ವಿಭಾಗದ ವತಿಯಿಂದ ಜು.30 ರಂದು ನಡೆದ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪುಸ್ತಕದ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳಿಂದ ಆಗಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಅದನ್ನು ಕಲಿಕೆಗೆ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿನಿಯೋಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪದ್ಮಶ್ರೀ ಸ್ವಾಗತಿಸಿ, ಯಶಸ್ವಿ ವಂದಿಸಿದರು.

ರೋಟಾಲಯ ಸಂಗೀತ ಸ್ಪರ್ಧೆ

Article Image

ರೋಟಾಲಯ ಸಂಗೀತ ಸ್ಪರ್ಧೆ

ಉಜಿರೆ: ಬೆಳ್ತಂಗಡಿ ರೋಟರಿಕ್ಲಬ್ ಮತ್ತು ಲಯನ್ಸ್‌ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಭಾನುವಾರ ಬೆಳ್ತಂಗಡಿಯಲ್ಲಿ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ರೋಟಾಲಯ ಸಂಗೀತ ಸ್ಪರ್ಧೆ ನಡೆಸಲಾಯಿತು. ರೋಟರಿ ಜಿಲ್ಲಾ ಉಪರಾಜ್ಯಪಾಲ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಮತ್ತು ಲಯನ್ಸ್ ಕ್ಲಬ್‌ನ ರಾಜು ಶೆಟ್ಟಿ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಫಲಿತಾಂಶ: ದೇಶಭಕ್ತಿಗೀತೆ: ಸಮೂಹ ಗಾಯನ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಸಿ), ಉಜಿರೆ (ಪ್ರಥಮ). ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ (ದ್ವಿತೀಯ) ಭಾವಗೀತೆ: ಪ್ರಾಪ್ತಿ ಶೆಟ್ಟಿ, ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ (ಪ್ರಥಮ). ಸ್ವಸ್ತಿಶ್ರೀ ಹೆಬ್ಬಾರ್ ಎಸ್.ಡಿ.ಎಂ., ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಸಿ), ಉಜಿರೆ (ದ್ವಿತೀಯ) ದೇಶಭಕ್ತಿ ಸಮೂಹ ಗಾಯನ: ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ, ಧರ್ಮಸ್ಥಳ (ಪ್ರಥಮ). ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ (ದ್ವಿತೀಯ) ಎ. ವಿಭಾಗ: ಭಾವಗೀತೆ ಸ್ಪರ್ಧೆ: ಸನ್ನಿಧಿ, ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಸಿ) ಉಜಿರೆ (ಪ್ರಥಮ). ಅಂಜಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ (ದ್ವಿತೀಯ) ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ್ ಪ್ರಭು, ಗೀತಾಪ್ರಭು, ಕಾರ್ಯದರ್ಶಿ ಡಾ. ಎಂ. ಎಂ. ದಯಾಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೊ ಕ್ಲಬ್ ಅಧ್ಯಕ್ಷರಾದ ಡಾ. ಭಾಷಿಣಿ, ಡಾ. ಶಶಿಕಾಂತ ಡೋಂಗ್ರೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಉಜಿರೆಯ ಬಿ. ಜನಾರ್ದನ ತೋಳ್ಪಾಡಿತ್ತಾಯ, ಸುಬ್ರಹಣ್ಯ, ಪ್ರಶಾಂತ ಬಾಳಿಗ ಬೆಳ್ತಂಗಡಿ ಮತ್ತು ಅಯ್ಯಪ್ಪ ಪ್ರಭು ಸಂಗೀತ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು.

ಗೃಹವಿಜ್ಞಾನ ವಿಭಾಗದ ಚಟುವಟಿಕೆ ಉದ್ಘಾಟನಾ ಸಮಾರಂಭ

Article Image

ಗೃಹವಿಜ್ಞಾನ ವಿಭಾಗದ ಚಟುವಟಿಕೆ ಉದ್ಘಾಟನಾ ಸಮಾರಂಭ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಗೃಹವಿಜ್ಞಾನ ವಿಭಾಗದ ಪ್ರಸಕ್ತ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ‘ಗೃಹವಾಹಿನಿ’ ಜು.25ರಂದು ನಡೆಯಿತು. ವಿಭಾಗದ ನಿಕಟಪೂರ್ವ ಮುಖ್ಯಸ್ಥೆ ಪ್ರೊ. ಆಲ್ಫೋನ್ಸಮ್ಮ ಅವರು ಉದ್ಘಾಟಿಸಿ ಮಾತನಾಡಿ, ಸ್ವಾವಲಂಬಿ ಜೀವನ ಹಾಗೂ ಅದಕ್ಕೆ ಬೇಕಾದ ಎಲ್ಲಾ ಪೂರಕ ಶಿಕ್ಷಣ ಗೃಹವಿಜ್ಞಾನ ಒದಗಿಸುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುವುದು, ಅಡುಗೆ ಮಾಡುವುದು ಸಹಿತ ನಿತ್ಯ ಜೀವನಕ್ಕೆ ಬೇಕಾದ ಎಲ್ಲಾ ಕೌಶಲಗಳನ್ನು ಸೂಕ್ತ ರೀತಿಯಲ್ಲಿ ತಿಳಿದುಕೊಳ್ಳಲು ಅವಕಾಶ ದೊರೆಯುತ್ತದೆ ಎಂದರು. ವಿಭಾಗದ ಭಿತ್ತಿಪತ್ರಿಕೆ ಗೃಹವಾಣಿಯ ನೂತನ ಸಂಚಿಕೆ ಬಿಡುಗಡೆಗೊಳಿಸಲಾಯಿತು. ವಿಭಾಗದ ಮುಖ್ಯಸ್ಥೆ ಶೋಭಾ, ಸಹಾಯಕ ಪ್ರಾಧ್ಯಾಪಕಿ ಐಶ್ವರ್ಯ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಂಜಲಿ ಎಚ್ ಆರ್, ಐಶ್ವರ್ಯ ಹೆಚ್ ಆರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದರ್ಶಿನಿ ಮತ್ತು ತಂಡದವರು ಪ್ರಾರ್ಥಿಸಿದರು. ಅಂಜಲಿ ಸ್ವಾಗತಿಸಿ, ಸೌಜನ್ಯ ವಂದಿಸಿ, ಸನುಷ ಪಿಂಟೋ ನಿರೂಪಿಸಿದರು.

ಒಡಿಯೂರು-ನಾಟಕ ಸ್ಪರ್ಧೆಯಲ್ಲಿ ಆಳ್ವಾಸ್‌ನ ಎರಡು ನಾಟಕಗಳಿಗೆ ಪ್ರಶಸ್ತಿ

Article Image

ಒಡಿಯೂರು-ನಾಟಕ ಸ್ಪರ್ಧೆಯಲ್ಲಿ ಆಳ್ವಾಸ್‌ನ ಎರಡು ನಾಟಕಗಳಿಗೆ ಪ್ರಶಸ್ತಿ

ಮೂಡುಬಿದಿರೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಮತ್ತು ಒಡಿಯೂರು ಗ್ರಾಮೋತ್ಸವದ ಅಂಗವಾಗಿ, ಶ್ರೀಕ್ಷೇತ್ರದ ರಾಜಾಂಗಣದಲ್ಲಿ ನಡೆದ ನಾಟಕ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎರಡು ನಾಟಕಗಳು ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿಯನ್ನು ಪಡೆದವು. ಡಾ| ಜೀವನ್ ರಾಂ ಸುಳ್ಯ ರಚಿಸಿ, ನಿರ್ದೇಶಿಸಿದ "ದೇವವೃದ್ಧರು" ನಾಟಕವು ಅತ್ಯುತ್ತಮ ನಾಟಕ ಪ್ರಶಸ್ತಿಯೊಂದಿಗೆ ರೂ.50,000 ನಗದು ಬಹುಮಾನ ಹಾಗೂ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದೇ ನಾಟಕಕ್ಕೆ ಅತ್ಯುತ್ತಮ ಸಂಗೀತ ಸಂಯೋಜಕ ಪ್ರಶಸ್ತಿಯನ್ನು ಆಳ್ವಾಸ್ ಪಿ.ಯು. ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪಡೆದುಕೊಂಡರು. ಆಳ್ವಾಸ್‌ನ ಇನ್ನೊಂದು ತಂಡ ಪ್ರದರ್ಶಿಸಿದ, ಪ್ರಶಾಂತ್ ಶೆಟ್ಟಿ ಕೋಟ ನಿರ್ದೇಶಿಸಿದ್ದ ‘ಮಗು ಮತ್ತು ಮರ’ ನಾಟಕವು ದ್ವಿತೀಯ ಪ್ರಶಸ್ತಿಯೊಂದಿಗೆ ರೂ 30,000 ನಗದನ್ನು ಪಡೆಯಿತು. ಈ ನಾಟಕದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮನೋಜ್ ತೀರ್ಥಹಳ್ಳಿ ಹಾಗೂ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತೇಜಸ್ವಿನಿ ತರೀಕೆರೆ ಪಡೆದುಕೊಂಡರು. ಪ್ರಶಸ್ತಿಯನ್ನು ಶ್ರೀ ಒಡಿಯೂರು ಗುರುದೇವಾನಂದ ಸ್ವಾಮಿಗಳು ನೀಡಿದರು. ಸ್ಪರ್ಧೆಯಲ್ಲಿ ಉಡುಪಿ, ದ.ಕ ಜಿಲ್ಲೆಯ ಒಟ್ಟು 12 ತಂಡಗಳು ಭಾಗವಹಿಸಿದ್ದವು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರು ಅಭಿನಂದಿಸಿದ್ದಾರೆ.

ಎಕ್ಸಲೆಂಟ್ ಮೂಡುಬಿದಿರೆ: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Article Image

ಎಕ್ಸಲೆಂಟ್ ಮೂಡುಬಿದಿರೆ: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪರಿವರ್ತನಾಶೀಲವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ ಇಂದಿನ ಸಮಾಜಕ್ಕೆ ಅವಕಾಶಗಳು ಮುಕ್ತವಾಗಿದೆ. ಚೇತನವನ್ನು ಕೇಂದ್ರವಾಗಿರಿಸಿಕೊಂಡು, ವೃತ್ತಿ ನಿರಂತರ ಮಾರ್ಗದರ್ಶನದೊಂದಿಗೆ ಶ್ರದ್ಧೆ, ಅಭ್ಯಾಸದೊಂದಿಗೆ ಮುಂದುವರಿದಲ್ಲಿ ವೃತ್ತಿಯಲ್ಲಿ ಯಶಸ್ಸು ಶತಸಿದ್ಧ. ಎರಡು ದಶಕಗಳ ಹಿಂದೆ ಇದ್ದಷ್ಟು ಕಷ್ಟ ಈಗಿಲ್ಲ ಈಗ ಸರಿಯಾದ ವೃತ್ತಿಯಲ್ಲಿ ಮುಂದೆ ಸಾಗುವುದಕ್ಕೆ ಬೇಕಾದಷ್ಟು ಅವಕಾಶಗಳಿವೆ. ಮಾರ್ಗದರ್ಷನ ನೀಡುವ ತಜ್ಞರಿದ್ದಾರೆ. ವಾಣಿಜ್ಯ ವಿಭಾಗದ ಭವಿಷ್ಯ ಉಜ್ವಲವಾಗಿದೆ ಎಂದು ಹಿರಿಯ ಚಾರ್ಟೆಡ್ ಅಕೌಂಟೆಂಟ್, ಆರ್.ಎಸ್. ಭಟ್ ಮತ್ತು ಕೊ.ನ ಸಿಎ ರಘುಪತಿ ಎಸ್. ಭಟ್ ಹೇಳಿದರು. ಅವರು ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು. ಪಿಪಿಕೆ ಎಸೋಷಿಯೇಟ್ಸ್ ಮುಖ್ಯಸ್ಥರಾದ ಸಿಎ ಪ್ರಶಾಂತ್ ಪೈ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ಆದ ನಂತರ ಇರುವ ಬಹು ಆಯ್ಕೆಗಳ ವಿವರಣೆ ನೀಡುತ್ತಾ ಏಕಾಗ್ರತೆ ಹಾಗೂ ಬದ್ಧತೆಯಿಂದ ಸಿಎ ಉತ್ತೀರ್ಣರಾಗಬಹುದು ತನ್ಮೂಲಕ ಆರ್ಥಿಕವಾಗಿ ಬಲಿಷ್ಠರಾಗಬಹುದು ಎಂದರು. ಸಮಾರಂಭದ ಅಧ್ಯಕ್ಷರಾದ ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಭಾರತದ ಆರ್ಥಿಕ ನೀತಿಯಲ್ಲಿ ವಾಣಿಜ್ಯ ವಿಭಾಗದ ಪಾತ್ರ ಬಹಳ ದೊಡ್ಡದು. ಈಗಲೂ ಭಾರತದಲ್ಲಿ ಸಿಎ ಉತ್ತೀರ್ಣರಾದವರಿಗೆ ಬಹಳಷ್ಟು ಅವಕಾಶಗಳಿವೆ. ಭವಿಷ್ಯದಲ್ಲಿ ಎತ್ತರಕ್ಕೇರುವ, ಆರ್ಥಿಕವಾಗಿ ಸದೃಢವಾಗುವ ಉಳಿದವರಿಗೆ ನೆರವಾಗುವ ಹಳ್ಳಿಯಿಂದ ರಾಷ್ಟ್ರ ರಾಜಧಾನಿಯ ತನಕ ಅನಿವಾರ್ಯವಾಗಿರುವ ಸಿಎ ವೃತ್ತಿ ಆಯ್ಕೆ ಮಾಡಿ ಕಠಿಣ ಪರಿಶ್ರಮದಿಂದ ಮುಂದುವರಿದರೆ ನಿಮ್ಮೆಲ್ಲರ ಭವಿಷ್ಯ ಭದ್ರವಾಗುವುದು ಅಲ್ಲದೆ ಉಳಿದ ವೃತ್ತಿಗಳ ಸರಿಯಾದ ಆಯ್ಕೆ ನಿಮ್ಮ ಮುಂದಿನ ನಡೆಗಳನ್ನು ಬಲಿಷ್ಠಗೊಳಿಸುವುದು ಎಂದರು. ಬಳಿಕ ಭಾರತೀಯ ಸನದಿ ಲೆಕ್ಕಿಗರ ಸಂಘದ ವತಿಯಿಂದ ಸಿಎ ಆಕಾಶ್‌ದೀಪ್ ಹಾಗೂ ಸಿಎ ವೃಂದಾ ಕೊನ್ನರ್ ಅವರಿಂದ ವಾಣಿಜ್ಯ ವಿಭಾಗ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಯಿತು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಖಿತಾ ಸ್ವಾಗತಿಸಿ ಅದಿತಿ ಕಾರ್ಯಕ್ರಮ ನಿರೂಪಿಸಿದರು.

15ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2873 ಮಂದಿಗೆ ಉದ್ಯೋಗ, 288 ಕಂಪನಿಗಳು ಭಾಗಿ

Article Image

15ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2873 ಮಂದಿಗೆ ಉದ್ಯೋಗ, 288 ಕಂಪನಿಗಳು ಭಾಗಿ

ಮೂಡುಬಿದಿರೆ: 15ನೇ ಆವೃತ್ತಿಯ "ಆಳ್ವಾಸ್ ಪ್ರಗತಿ" ಬೃಹತ್ ಉದ್ಯೋಗ ಮೇಳ ಆಗಸ್ಟ್ 2 ರಂದು ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಸಮಾಪನಗೊಂಡಿತು. ಎರಡು ದಿನಗಳ ಕಾಲ ನಡೆದ ಉದ್ಯೋಗ ಮೇಳದಲ್ಲಿ, 2873 ಉದ್ಯೋಗಾಕಾಂಕ್ಷಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಯಿತು. ಭಾಗವಹಿಸಿದ ಒಟ್ಟು 288 ಕಂಪನಿಗಳ ಪೈಕಿ 260 ಕಂಪೆನಿಗಳು, 3734 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಒಟ್ಟು 14,245 ಅಭ್ಯರ್ಥಿಗಳು 2 ದಿನದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಿದರು. ದುಬೈ ಮೂಲದ ಫಾರ್ಚುನ್ ಸಂಸ್ಥೆಯು 5 ಅಭ್ಯರ್ಥಿಗಳನ್ನು 5 ರಿಂದ 8 ಲಕ್ಷ ವಾರ್ಷಿಕ ವೇತನದ ಹುದ್ದೆಗೆ ಆಯ್ಕೆ ಮಾಡಿದ್ದು, 25 ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಗೊಂಡಿದ್ದಾರೆ. ನಾರಾಯಣ ಹೃದಯಾಲಯವು 43 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಮತ್ತು ಅಂತಿಮ ಸುತ್ತಿನ ಸಂದರ್ಶನಕ್ಕೆ 28 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಝೀ ಎಂಟರ್‌ಟೈನ್‌ಮೆಂಟ್ ಕಂಪೆನಿಯು ಅಂತಿಮ ಸುತ್ತಿಗೆ 11 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಸೌದಿ ಅರೇಬಿಯಾ ಮೂಲದ ಎಕ್ಪರ್ಟೈಸ್ ಕಂಪೆನಿಯು 37 ಜನರನ್ನು ನೇಮಿಸಿಕೊಂಡಿದೆ. ಮುಂಬೈ ಮೂಲದ ಆಲ್‌ಕಾರ್ಗೋ ಲಾಜಿಸ್ಟಿಕ್ಸ್ 3 ರಿಂದ 5 ಲಕ್ಷ ವರೆಗಿನ ವಾರ್ಷಿಕ ವೇತನವಿರುವ ಹುದ್ದೆಗಳಿಗೆ 9 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ತೇಜಸ್ವಿನಿ ಗ್ರೂಪ್ಸ್ ವಾರ್ಷಿಕ 6 ಲಕ್ಷ ಪ್ಯಾಕೇಜ್‌ಗೆ 11 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇನ್‌ಫೋಸಿಸ್ ಬಿಪಿಎಂ ಕಂಪೆನಿಯು 79 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಕೋಡ್‌ಯಂಗ್ ಸಂಸ್ಥೆಯು 20 ಅಭ್ಯರ್ಥಿಗಳನ್ನು 4.36 ದಿಂದ 8.36 ಲಕ್ಷದ ವಾರ್ಷಿಕ ವೇತನಕ್ಕೆ ಆಯ್ಕೆ ಮಾಡಿಕೊಂಡಿದೆ.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಜೆಕ್ಟ್‌ಗೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ

Article Image

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಜೆಕ್ಟ್‌ಗೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಂದನ್ ಬಿ.ಎಂ, ಉಸ್ಮಾ, ಪ್ರೇಕ್ಷಾ ಹಾಗೂ ಸಾವನ್ ಶೆಟ್ಟಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಶಿವಮೊಗ್ಗದ ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಆಯೋಜಿಸಿದ್ದ 48ನೇ ಸರಣಿಯ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಅವರು ತಯಾರಿಸಿದ ಪ್ರಾಜೆಕ್ಟ್‌ಗೆ ‘ವರ್ಷದ ಅತ್ಯುತ್ತಮ ಪ್ರಾಜೆಕ್ಟ್’ ಪ್ರಶಸ್ತಿ ಲಭಿಸಿತು. ಒಟ್ಟು ಈ ವಿಭಾಗದಲ್ಲಿ 496 ಪ್ರಾಜೆಕ್ಟ್‌ಗಳು ಸ್ಪರ್ಧೆಗೆ ಆಗಮಿಸಿದ್ದವು. ಮೆಕ್ಕುಜೋಳದ ಒಣಗಿದ ಸಿಪ್ಪೆಯಿಂದ ಕಪ್ ತಯಾರಿಕಾ ಯಂತ್ರದ ಅಭಿವೃದ್ಧಿಗಾಗಿ ಈ ಪ್ರಶಸ್ತಿ ಪಡೆದುಕೊಂಡರು. ಪರಿಸರ ಸ್ನೇಹಿ ಆವಿಷ್ಕಾರ ಮತ್ತು ದಕ್ಷತೆಯ ಹಿನ್ನೆಲೆಯಲ್ಲಿ ಈ ಪ್ರಾಜೆಕ್ಟ್ ಮೌಲ್ಯಮಾಪನಾ ಸಮಿತಿಯ ಸದಸ್ಯರ ಮೆಚ್ಚುಗೆಗೆ ಪಾತ್ರವಾಯಿತು. ಈ ಪ್ರಾಜೆ‌ಕ್ಟ್‌ಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಕೆ. ವಿ. ಸುರೇಶ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಶ್ಲಾಘಿಸಿದ್ದಾರೆ. ರೈತರಿಗೆ ಉಪಯೋಗವಾಗುವ ಯಂತ್ರ: 10 ರಿಂದ 12 ಡಿಗ್ರಿ ಬಿಸಿ ನೀರನ್ನು 4 ಗಂಟೆ, ತಣ್ಣೀರನ್ನು 5 ರಿಂದ 6 ಘಂಟೆ ಶೇಖರಿಸಬಹುದಾಗಿದೆ. ಒಂದು ಕಪ್‌ಗೆ 59ಪೈಸೆ ಖರ್ಚಾಗಲಿದ್ದು, ಒಂದು ರೂಪಾಯಿಗೆ ಮಾರಾಟ ಮಾಡಿದರೂ 41 ಪೈಸೆಯನ್ನು ಉಳಿಸಬಹುದಾಗಿದೆ. ಈ ಯಂತ್ರ ಒಂದು ಗಂಟೆಗೆ 114 ಕಪ್‌ಗಳನ್ನು ಉತ್ಪಾದನೆ ಮಾಡಬಲ್ಲದು.

ಉಜಿರೆ ಎಸ್.ಡಿ.ಎಂ. ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಉಜಿರೆಯ ರತ್ನಮಾನಸದಲ್ಲಿ ಜು.20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರತ್ನಮಾನಸದ ಮೇಲ್ವಿಚಾರಕರಾದ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಜಗದೀಶ ಮುಂಡಾಜೆ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಪ್ರಥಮ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 25 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಶಕುಂತಲಾ. ಬಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು.

ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

Article Image

ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ ಅಡಿಪಾಯವನ್ನು ಹಾಕುತ್ತದೆ ಎಂಬುದನ್ನು ಉಲ್ಲೇಖಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಆದರೆ ಜೆ.ಇ.ಇ., ಎನ್.ಎ.ಟಿ.ಎ., ಎನ್.ಡಿ.ಎ., ಬಿ. ನಂತಹ ರಾಷ್ಟ್ರಮಟ್ಟದ ಪರೀಕ್ಷೆಗಳಿಗೆ ಬಂದಾಗ ವಿದ್ಯಾರ್ಥಿಗಳು ಹಿಂದುಳಿಯುತ್ತಾರೆ. ಪಿ.ಯು.ಸಿ. ಮಟ್ಟದಲ್ಲಿ ಫಲಿತಾಂಶಗಳನ್ನು ಹೆಚ್ಚಿಸಲು ಗಣಿತದ ಅಡಿಪಾಯವನ್ನು ಬಲಪಡಿಸಲು ಉಪನ್ಯಾಸಕರು ಕಾರ್ಯ ಪ್ರವೃತರಾಗಬೇಕೆಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ, ಶಿಕ್ಷಕರು ಕೇವಲ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು, ಇಲ್ಲವಾದರೆ ಭವಿಷ್ಯದಲ್ಲಿ ಕೃತಕ ಬುದ್ಧಿಮತ್ತೆ (AI) ಶಿಕ್ಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತದೆ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಿದ್ಯಾರ್ಥಿಗಳು ಗಣಿತದಲ್ಲಿ ಏಕೆ ಹಿಂದುಳಿಯುತ್ತಾರೆ ಎಂಬುದಕ್ಕೆ ಉದಾಹರಣೆಗಳನ್ನು ನೀಡಿದರು. ಗಣಿತ ಮತ್ತು ಭೌತಶಾಸ್ತ್ರವು ಹೇಗೆ ಪರಸ್ಪರ ಸಂಬಂಧ ಹೊಂದಿದೆ ಎಂಬುದನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಾಘವೇಂದ್ರ ಹಾಗೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಡಾ. ಪ್ರಶಾಂತ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ 'ದಿ ಬುಕ್ ಮ್ಯಾಥ್ ಮೇಡ್ ಈಸಿ' ಪುಸ್ತಕದ 8ನೇ ಆವೃತ್ತಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಗಣಿತ ಶಿಕ್ಷಕಿ ಸೀತಾ ಹಾಗೂ ಪುಸ್ತಕದ ಸಂಪಾದಕೀಯ ಮಂಡಳಿ ಸದಸ್ಯರನ್ನು ಸನ್ಮಾನಿಸಲಾಯಿತು. ಮುಂಬರುವ ಶೈಕ್ಷಣಿಕ ವರ್ಷದ ಸಂಘದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಲಾರೆನ್ಸ್ ಸಿಕ್ವೆರಿಯಾ, ಉಪಾಧ್ಯಕ್ಷ ಆದರ್ಶ್ ಚೊಕ್ಕಾಡಿ, ಕಾರ್ಯದರ್ಶಿ ಅನುಪಮಾ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ವರುಣ್ ಪ್ರಭು, ವೆಲಿಟ, ಲೋಹಿತ್ ಸಾಲ್ಯಾನ್ ಹಾಗೂ ಸುಕನ್ಯ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ರವೀಂದ್ರನಾಥ್ ಬರ್ವೆ ವಂದಿಸಿದರು.

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ : ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್

Article Image

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ : ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೂರಜ್ ಶೈಕ್ಷಣಿಕ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರೊಟೇರಿಯನ್ ಪಿ.ಎಚ್.ಎಫ್ ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್ ಇವರು ಆಗಮಿಸಿದ್ದರು. ಗೌರವ ಅತಿಥಿಗಳಾದ ಅಡ್ವೋಕೇಟ್ ಪದ್ಮಪ್ರಸಾದ್ ಜೈನ್, ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಶಾಲಾ ಪ್ರಾಂಶುಪಾಲರಾದ ಪ್ರಸಾದ್ ಇವರು ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿವಿಧ ಜವಾಬ್ದಾರಿಯುತ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭಕೋರಿ ನಾಯಕತ್ವದ ಗುಣವನ್ನು ಎಳವೆಯಲ್ಲಿಯೇ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ರವರು ತಿಳಿಸಿದರು. ಈ ಶುಭ ಸಂದರ್ಭದಲ್ಲಿ ಅತಿಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಯಕತ್ವದ ಗುಣ ದೊಡ್ಡ ಗುಣ. ಶಿಕ್ಷಣದೊಂದಿಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ. ಎಲ್ಲಿ ಸಂಸ್ಕಾರವಿರುತ್ತದೆಯೋ ಅಲ್ಲಿ ಶಿಕ್ಷಣವಿರುತ್ತದೆ ಶಾಲಾ ಸುಧಾರಣೆ ಮಕ್ಕಳ ಕೈಯಲ್ಲಿದೆ ಎಂದು ಮುಖ್ಯ ಅತಿಥಿಗಳಾದ ಡಾ. ಮಂಜುನಾಥ್ ಶ್ರೀಪಾದ್ ರೇವಣ್‌ಕರ್ ರವರು ತಿಳಿಸಿದರು. ಗೌರವ ಅತಿಥಿಗಳಾದ ಪದ್ಮಪ್ರಸಾದ್ ಜೈನರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗ್ರಹಿಕಾ ಸಾಮರ್ಥ್ಯ ಬಹಳ ಅವಶ್ಯಕತೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬಹಳ ಮುಖ್ಯ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದು ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ರವರು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಮಾಣವಚನವನ್ನು ಸ್ವೀಕರಿಸಿ ಉದ್ಘಾಟನಾ ಸಮಾರಂಭವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಹರ್ಷಿತ ನೆರವೇರಿಸಿದರು. ಶಾಲಾ ನಾಯಕಿ ನಿರೀಕ್ಷಾ ಸ್ವಾಗತಿಸಿ, ಶಾಲಾ ನಾಯಕ ಶ್ರೀಕಾರ್ ಪಾಟೀಲ್ ವಂದಿಸಿದರು.

First Previous

Showing 1 of 6 pages

Next Last