Article Image

ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

Article Image

ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ, ಜು.12: ವಿಜ್ಞಾನ, ಕಲೆ, ಆಧ್ಯಾತ್ಮಿಕತೆ ಹೀಗೆ ಎಲ್ಲವನ್ನೂ ಒಳಗೊಂಡಿರುವ ಸಾಂಪ್ರದಾಯಿಕ ಭಾರತೀಯ ಜ್ಞಾನವ್ಯವಸ್ಥೆಯು ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಯಾಗಬೇಕಿದೆ ಎಂದು ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ (ಎನ್.ಸಿ.ಇ.ಆರ್.ಟಿ.)ಯ ಸಹಾಯಕ ಪ್ರಾಧ್ಯಾಪಕ, ಯುವ ವಿಜ್ಞಾನಿ ಡಾ. ಅರ್ಪಣ್ ಕುಮಾರ್ ನಾಯಕ್ ಅಭಿಪ್ರಾಯಪಟ್ಟರು. ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗವು ಜು.12 ರಂದು ಆಯೋಜಿಸಿದ್ದ ‘ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಭಾರತೀಯ ಸಾಂಪ್ರದಾಯಿಕ ಜ್ಞಾನವ್ಯವಸ್ಥೆಯು ಬ್ರಿಟಿಷರ ಆಡಳಿತ ಪರಿಣಾಮವಾಗಿ ಎಲ್ಲಿಯೂ ನಿಖರವಾಗಿ ದಾಖಲಾಗಿಲ್ಲ. ಇಂದಿನ ಪಠ್ಯಪುಸ್ತಕಗಳು ಕೂಡ ಅವುಗಳ ಕುರಿತಾಗಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಸಾವಿರಾರು ವರ್ಷಗಳು ಕಳೆದರೂ ದೃಢವಾಗಿ ನಿಂತಿರುವ ಪುರಾತನ ಕಟ್ಟಡಗಳ ನಿರ್ಮಾಣ ಮಾಡಲು ಬಳಸಿರುವ ಸಾಂಪ್ರದಾಯಿಕ ಜ್ಞಾನವ್ಯವಸ್ಥೆಯು ಇಂದಿನ ಯುವಜನತೆಗೆ ಪ್ರೇರಣೆಯಾಗಬೇಕಿದೆ ಎಂದು ಅವರು ಹೇಳಿದರು. “ಆಧುನಿಕ ವಿಜ್ಞಾನಕ್ಕೂ ಸವಾಲೆಸೆಯುವ ಶಿಲ್ಪಕಲೆಗಳ ರಚನೆ ಪುರಾತನ ಕಾಲದಲ್ಲಿ ನಡೆದಿದೆ. ತಂತ್ರಜ್ಞಾನದ ಸಹಾಯವಿಲ್ಲದೆ ಕೇವಲ ಇತರರಿಂದ ಕೇಳಿ, ನಿರಂತರ ಅಭ್ಯಾಸ ಮತ್ತು ಪ್ರಯೋಗಗಳಿಂದಲೇ ನಿರ್ಮಾಣಗೊಂಡ ಅವುಗಳ ಹಿಂದೆ ಒಂದು ವೈಜ್ಞಾನಿಕ ದೃಷ್ಟಿಕೋನವಿದೆ. ಅದನ್ನು ಗುರುತಿಸುವಲ್ಲಿ ನಾವುಗಳು ಎಡವುತ್ತಿದ್ದೇವೆ. ಯಾವುದೇ ಕಲಿಕೆಯಿಲ್ಲದೆಯೇ ನಮ್ಮ ಪೂರ್ವಜರು ಗಣಿತಶಾಸ್ತ್ರ, ಭೌತಶಾಸ್ತ್ರ ಹಾಗೂ ಖಗೋಳ ಶಾಸ್ತ್ರಗಳನ್ನು ಪುರಾತನ ಕಟ್ಟಡಗಳ ನಿರ್ಮಾಣದಲ್ಲಿ ಬಳಸಿಕೊಂಡಿರುವ ರೀತಿ ನಿಜಕ್ಕೂ ಮೆಚ್ಚುವಂತದ್ದು. ಅವರು ವಿಜ್ಞಾನವನ್ನು ಬಳಸಿಕೊಂಡಿರುವ ರೀತಿ ಮತ್ತು ಅವರ ಕೆಲಸಗಳಲ್ಲಿದ್ದ ಪರಿಪೂರ್ಣತೆಯನ್ನು ನಾವು ಅಳವಡಿಸಿಕೊಳ್ಳಬೇಕಿದೆ” ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ಉಪ ಪ್ರಾಂಶುಪಾಲೆ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದ ಕುಮಾರಿ ಕೆ.ಪಿ. ಹಾಗೂ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಜ್ಯೋತಿಕಾ ಕಾರ್ಯಕ್ರಮ ನಿರೂಪಿಸಿ, ಹೇಮಾವತಿ ವಂದಿಸಿದರು.

ಎಕ್ಸಲೆಂಟ್ ಮೂಡುಬಿದಿರೆ: ವಾಣಿಜ್ಯ ಸಂಘದ ಉದ್ಘಾಟನೆ

Article Image

ಎಕ್ಸಲೆಂಟ್ ಮೂಡುಬಿದಿರೆ: ವಾಣಿಜ್ಯ ಸಂಘದ ಉದ್ಘಾಟನೆ

ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ಯಾಲಾಕ್ಸಿ ಸ್ಪೋರ್ಟ್ಸ್‌ ವರ್ಲ್ಡ್‌ನ ಎಂಡಿ, ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ನಾನು ತರಗತಿಯಲ್ಲಿ ಕಲಿತ ಪಾಠ ನನ್ನ ಜೀವನದಲ್ಲಿ ಉಪಯೋಗ ಆಗಲಿಲ್ಲ. ಆದರೆ ನಾನು ಭಾಗವಹಿಸಿದ ಪಠ್ಯೇತರ ಚಟುವಟಿಗಳು ನನ್ನ ವ್ಯಕ್ತಿತ್ವವನ್ನು ರೂಪಿಸಿತು. ಇದು ನನ್ನ ಉದ್ಯಮವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು. ವಾಣಿಜ್ಯ ವಿಭಾಗದ ಚಟುವಟಿಕೆಗಳನ್ನು ಕ0ಡಾಗ ಖಂಡಿತವಾಗಿ ನಿಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಪಡೆಯಲು ಇದು ಸಹಕಾರಿಯಾಗುತ್ತದೆ ಎಂದರು. ಜಗತ್ತಿನ ಶೇಕಡಾ ತೊಂಭತ್ತೊಂದರಷ್ಟು ಜನರು ಉದ್ಯೋಗಿ ಅಥವಾ ಸ್ವಉದ್ಯೋಗಿಗಳಾಗಿರುತ್ತಾರೆ. ಉದ್ಯಮವನ್ನು ನಡೆಸಬೇಕಾದರೆ ರಿಸ್ಕ್ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಯಶಸ್ಸು ಕೇವಲ ರಿಸ್ಕ್ ತೆಗೆದುಕೊಳ್ಳುವವರ ಪಾಲಾಗಿದೆ ಎಂದರು. ಜೀವನದಲ್ಲಿ ಪ್ರಗತಿಯನ್ನು ಕಾಣಬೇಕಾದರೆ ತನ್ನ ತಪ್ಪನ್ನು ತಿದ್ದಿಕೊಂಡು ಮುನ್ನಡೆಯುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಉದ್ಯೋಗದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಕಾಲದೊಂದಿಗೆ ಬದಲಾಗಲು ಬಯಸದ ಅನೇಕ ಉದ್ದಿಮೆಗಳು ಇಂದು ವಿಫಲವಾಗಿವೆ. ತನ್ನ ಯಶಸ್ಸು ಅಥವಾ ಸೋಲಿಗೆ ತನ್ನ ಮನೋಭಾವವೇ ಕಾರಣ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ವಾಣಿಜ್ಯ ವಿಭಾಗ ಸಂಸ್ಥೆಯ ಅನೇಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊ0ಡಿದೆ. ಈ ಶೈಕ್ಷಣಿಕ ವರ್ಷದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯನ್ನು ರೂಪಿಸಿಕೊ0ಡಿದೆ. ಪ್ರತಿಯೊಂದು ಕಾರ್ಯಕ್ರಮವೂ ವಿದ್ಯಾರ್ಥಿಗಳ ಕೌಶಲವನ್ನು ಅಭಿವೃದ್ಧಿಪಡಿಸುವಲ್ಲಿ ಸಹಕಾರಿಯಾಗಿದೆ. ಈ ಎಲ್ಲಾ ಪಠ್ಯೇತರ ಚಟುವಟಿಕೆಗಳ ಹೊರತಾಗಿಯೂ ಶೈಕ್ಷಣಿಕವಾಗಿಯೂ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಯಲ್ಲಿ ಅನೇಕ ಸ್ಥಾನಗಳನ್ನು ಪಡೆದುಕೊಳ್ಳುತ್ತಾ ಇದೆ. ಇಂಥಹ ಚಟುವಟಿಕೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಿದೆ ಎನ್ನುವುದಕ್ಕೆ ಈ ಫಲಿತಾಂಶಗಳೇ ಸಾಕ್ಷಿ ಎಂದು ಪ್ರಸಕ್ತ ಶೈಕ್ಷಣಿಕ ವರ್ಷದ ವಾಣಿಜ್ಯ ವಿಭಾಗದ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಅತಿಥಿಯಾಗಿ ಉಪಸ್ಥಿತರಿದ್ದ ಜೋರಮ್ಮಾ ಹೋಂ ಪ್ರೊಡಕ್ಟ್ಸ್‌ನ ಸ್ಥಾಪಕ ಹಾಗೂ ಪೂರ್ವ ವಿದ್ಯಾರ್ಥಿ ಶೇಖ್ ಸಾಹಿಲ್ ಮಾತನಾಡುತ್ತಾ ತಾನು ಉದ್ಯಮವನ್ನು ಆರಂಭಿಸಬೇಕಾದರೆ ಇಲ್ಲಿನ ವಾಣಿಜ್ಯ ವಿಭಾಗದ ಚಟುವಟಿಕೆಗಳೇ ಕಾರಣ. ಒಂದು ಉತ್ಪನ್ನದ ಬಗ್ಗೆ ಪ್ರದರ್ಶಿಸುವ ಸ್ಪರ್ಧೆ ಮತ್ತು ಇನ್ನಿತರ ಚಟುವಟಿಕೆಗಳು ನನ್ನಲ್ಲಿ ಆತ್ಮ ವಿಶ್ವಾಸವನ್ನು ಬೆಳೆಸಿತು ಮತ್ತು ಉದ್ಯಮವನ್ನು ಆರಂಭಿಸುವ ಯೋಚನೆಯನ್ನು ನೀಡಿತು. ಇಲ್ಲಿ ನಡೆಯುವ ಚಟುವಟಿಕೆಗಳ ಸ0ಪೂರ್ಣ ಲಾಭವನ್ನು ನೀವು ಪಡೆದುಕೊಂಡರೆ ಖ0ಡಿತ ನೀವು ಕೂಡ ಯಶಸ್ವಿ ಉದ್ಯಮಿಗಳಾಗಿ ರೂಪುಗೊಳ್ಳುವಿದರಲ್ಲಿ ಸಂದೇಹವಿಲ್ಲ. ಉದ್ಯಮದಲ್ಲಿ ಏರಿಳಿತಗಳು ಸರ್ವೇ ಸಾಮಾನ್ಯ. ಆದರೆ ಅವನ್ನು ಮೆಟ್ಟಿ ನಿಂತು ತಾಳ್ಮೆಯಿಂದ ನಿಮ್ಮ ಕರ್ತವ್ಯವನ್ನು ನೀವು ಮಾಡಿದರೆ ಯಶಸ್ಸು ಖಂಡಿತ ನಿಮಗೊಲಿಯುತ್ತದೆ ಎಂದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡುತ್ತಾ ವಾಣಿಜ್ಯ ವಿಭಾಗವು ಸ0ಸ್ಥೆಯ ಹೃದಯಬಡಿತವಾಗಿದೆ. ವರ್ಷದಿಂದ ವರ್ಷಕ್ಕೆ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬ0ದಿದೆ. ನಮ್ಮ ವಿದ್ಯಾರ್ಥಿಗಳು ಇಲ್ಲಿ ನಡೆಯುತ್ತಿರುವ ಚಟುವಟಿಗಳ ಲಾಭವನ್ನು ಪಡೆದುಕೊ0ಡು ಬೆಳೆದ ರೀತಿ ತು0ಬಾ ಸಂತಸ ತಂದಿದೆ. ಸ0ಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅನೇಕ ಅವಕಾಶಗಳಿವೆ. ಅದರ ಸದುಪಯೋಗವನ್ನು ಪಡೆದು ಜೀವನದಲ್ಲಿ ಸಾರ್ಥಕತೆಯನ್ನು ಪಡೆಯುವಂತಾಗಲಿ ಎಂದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಸುವಿತ್ ಭಂಡಾರಿ ಸ್ವಾಗತಿಸಿದರು. ವಾಣಿಜ್ಯ ಸಂಘದ ಅಧ್ಯಕ್ಷೆ ಶ್ರಾವಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿ ಸದಾನಂದ ನಾವಡರನ್ನು ನಿಶ್ಚಯ ಪರಿಚಯಿಸಿದರು. ಅತಿಥಿ ಶೇಖ್ ಸಾಹಿಲ್ ರನ್ನು ಸುಹಾನ ಸಚಿನ್ ಪರಿಚಯಿಸಿದರು. ಶಮಂತ್ ಕೆ ಎಂ ವಂದಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ: ಜನಸಂಖ್ಯೆಯಲ್ಲಿ ಭಾರತವು ಚೀನಾ ದೇಶವನ್ನು ಮೀರಿಸಿರುವುದು ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಕಳವಳ ವ್ಯಕ್ತಪಡಿಸಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.11ರಂದು ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ, ತಾ.ಪಂ. ಬೆಳ್ತಂಗಡಿ, ಗ್ರಾ.ಪಂ. ಉಜಿರೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಎಸ್.ಡಿ.ಎಂ. ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. “ಚೀನಾ ನಮ್ಮ ದೇಶಕ್ಕಿಂತ ಎರಡೂವರೆ ಪಟ್ಟು ದೊಡ್ಡ ದೇಶ. ಆದರೆ ಅದನ್ನು ಹಿಂದೆ ಹಾಕಿ ನಾವು ಮುಂದೆ ಬಂದಿದ್ದೇವೆ. ವಿಶ್ವ ಜನಸಂಖ್ಯೆ 820 ಕೋಟಿಯಲ್ಲಿ ಭಾರತದ ಜನಸಂಖ್ಯೆ 146 ಕೋಟಿ ಆಗಿದೆ. ಇದು ಹೆಮ್ಮೆ ಪಡುವ, ಸಂಭ್ರಮಿಸುವ ಸಂಗತಿಯಲ್ಲ. ಹೆಚ್ಚುತ್ತಿರುವ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವುದು ಅನಿವಾರ್ಯ” ಎಂದು ಅವರು ಹೇಳಿದರು. ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಪನ್ಮೂಲ ಕೂಡ ಹೆಚ್ಚು ಬೇಕಾಗುತ್ತದೆ. ಭೂಮಿಯಿಂದ ಪರಿಸರದಿಂದ ಸಂಪನ್ಮೂಲಗಳನ್ನು ಪಡೆಯುವ ಮಾನವ ಅರಣ್ಯನಾಶ ಮತ್ತು ಗಣಿಗಾರಿಕೆಯಲ್ಲಿ ತೊಡಗಿದ್ದಾನೆ. ಗಣಿಗಾರಿಕೆ ಆದಂತಹ ಜಾಗದಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ. ಇದರಿಂದ ಆಹಾರ ಉತ್ಪತ್ತಿಯೂ ಕಡಿಮೆಯಾಗುತ್ತದೆ‌ ಎಂದರು. ಪ್ರಾಣಿಗಳ ವಾಸಸ್ಥಳವನ್ನು ನಾವು ಅತಿಕ್ರಮಿಸಿರುವುದರಿಂದ ಅವುಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಹವಾಮಾನ ವೈಪರೀತ್ಯ ಹೆಚ್ಚುತ್ತಿದೆ. ಪ್ರವಾಹದಿಂದ ಸಂಪನ್ಮೂಲಗಳು ನಾಶವಾಗುತ್ತಿವೆ. ಮನುಷ್ಯನ ಆಸೆಗಳಿಗೆ ಕೊನೆಯಿಲ್ಲದಂತಾಗಿದೆ. ಯುದ್ಧಗಳಲ್ಲಿ ಬಾಂಬ್ ಬಳಕೆಯಿಂದ ಭೂಮಿ ತನ್ನ ಫಲವಂತಿಕೆ ಕಳೆದುಕೊಳ್ಳುತ್ತಿದೆ ಎಂದರು. ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., “ಜನಸಂಖ್ಯೆ ಹೆಚ್ಚಳ ಸಮಸ್ಯೆಯೇ ಅಲ್ಲ ಆದರೆ, ಜನರಿಗೆ ಬೇಕಾದ ವ್ಯವಸ್ಥೆ ಆಗದೆ ಇರುವುದೇ ಸಮಸ್ಯೆ. ಹಾಗಾಗಿ ಈ ಕುರಿತು ಅರಿವು ಮೂಡಿಸುವುದು ಅಗತ್ಯ” ಎಂದು ಅಭಿಪ್ರಾಯಪಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಮಾತನಾಡಿ, ಮರಣ ಸಂಖ್ಯೆ ಕಡಿಮೆ ಆಗಿರುವುದರ ಜೊತೆಗೆ ಜನನ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನಸಂಖ್ಯೆ ಹೆಚ್ಚಳ ಕಂಡಿದ್ದು, ಜನಸಂಖ್ಯೆ ಸ್ಫೋಟಕ್ಕೆ ಕಾರಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಾತ್ ಆರ್.ಬಿ., ಪ್ರಕೃತಿಗೆ ವಿರುದ್ಧವಾಗಿ ಮನುಷ್ಯನ ವಿವಿಧ ಚಟುವಟಿಕೆಗಳಿಗೆ ಪ್ರತಿಯಾಗಿ ಇಂದು ಪ್ರಕೃತಿಯು ಮನುಷ್ಯನ ವಿರುದ್ಧ ಕ್ರಮ ಕೈಗೊಂಡಿದೆ ಎಂದು ವಿಶ್ಲೇಷಿಸಿದರು. ತಾಯಿ-ಮಗುವಿನ ಆರೋಗ್ಯಕ್ಕೆ ಬಹುವಾಗಿ ಪ್ರಾಮುಖ್ಯ ನೀಡಬೇಕು. ಕುಟುಂಬ ಯೋಜನೆ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಶಾ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಪ್ರಹಸನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹೆಚ್ಚು ಫಲಾನುಭವಿಗಳನ್ನು ಆರೋಗ್ಯ ಕೇಂದ್ರಗಳಿಗೆ ಕರೆತರುವಲ್ಲಿ ಯಶಸ್ವಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯಕರ್ತರನ್ನು ಗೌರವಿಸಲಾಯಿತು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬೆಳ್ತಂಗಡಿ ತಾ.ಸಾ. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್, ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮೇಲ್ವಿಚಾರಕಿ ಲೀಲಾವತಿ, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನಿತಾ, ತಾಲೂಕು ಆರೋಗ್ಯ ವಿಭಾಗದ ಸಿಬ್ಬಂದಿ ಅಮ್ಮಿ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಜೇಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ವಂದಿಸಿದರು.

ಉಜಿರೆ ಎಸ್‌.ಡಿ.ಎಂ. ಎಜುಕೇಶನಲ್ ಟ್ರಸ್ಟ್ ನಿಂದ ಪ್ರಸಕ್ತ ವರ್ಷದ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ

Article Image

ಉಜಿರೆ ಎಸ್‌.ಡಿ.ಎಂ. ಎಜುಕೇಶನಲ್ ಟ್ರಸ್ಟ್ ನಿಂದ ಪ್ರಸಕ್ತ ವರ್ಷದ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ

ಉಜಿರೆ, ಜು.10: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಟ್ರಸ್ಟ್ 2025ನೇ ಶೈಕ್ಷಣಿಕ ವರ್ಷದಲ್ಲಿ ಮೀಸಲಿಟ್ಟಿರುವ ಒಟ್ಟು 2.50 ಕೋಟಿ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ ಪ್ರಕ್ರಿಯೆಗೆ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಇಂದು (ಜು.10) ಸಾಂಕೇತಿಕ ಚಾಲನೆ ನೀಡಿದರು. ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ 2 ಸಾವಿರ ವಿದ್ಯಾರ್ಥಿಗಳನ್ನು ಒಳಗೊಳ್ಳುವ ವಿದ್ಯಾರ್ಥಿವೇತನ ಯೋಜನೆಯ ಮೊದಲ ಕಂತಿನ ಚೆಕ್ ವಿತರಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿರುವ ಅರ್ಹ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸಿ ಮನೆಯನ್ನು ಬೆಳಗಬೇಕು. ಹಣ ಸಂಪಾದನೆಗೆ ಇರುವ ಶ್ರಮವನ್ನು ಅರಿಯಬೇಕು. ಸಮಾಜದಲ್ಲಿ ಪ್ರಕಾಶಿಸುವ ವ್ಯಕ್ತಿತ್ವಗಳಾಗಿ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು. ಎಸ್.ಡಿ.ಎಂ. ಸಂಸ್ಥೆಗಳ 1,450 ವಿದ್ಯಾರ್ಥಿಗಳ ಜೊತೆಗೆ ಇತರ ಸಂಸ್ಥೆಗಳ ವಿದ್ಯಾರ್ಥಿಗಳನ್ನೂ ಈ ವಿದ್ಯಾರ್ಥಿವೇತನ ಯೋಜನೆ ಒಳಗೊಂಡಿದೆ ಎಂದ ಅವರು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಸ್.ಡಿ.ಎಂ. ಕಾಲೇಜು, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಇತ್ಯಾದಿ ಸಂಸ್ಥೆಗಳ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಬದ್ಧತೆ ಹಾಗೂ ಕಾಳಜಿ ಕುರಿತು ವಿವರಿಸಿದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, “ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳವು ಶ್ರೇಷ್ಠ, ಮೌಲ್ಯಯುತ ಶಿಕ್ಷಣ ಒದಗಿಸುತ್ತಿದೆ. 1985ರಿಂದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ ಮೂಲಕ ನಮ್ಮ ಸಂಸ್ಥೆಗಳ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡುತ್ತಿದ್ದು, ಆ ಮೂಲಕ ವಿದ್ಯಾದಾನದ ಕ್ರಾಂತಿ ನಡೆಯುತ್ತಿದೆ” ಎಂದರು. ಎಸ್ ಡಿ ಎಂ ಎಜುಕೇಶನಲ್ ಸೊಸೈಟಿಯ ಇನ್ನೋರ್ವ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ, ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯಾ ಬಿ.ಪಿ. ಉಪಸ್ಥಿತರಿದ್ದರು. ಎಸ್ ಡಿ ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಂದಿಸಿದರು. ಡಾ. ನೆಫೀಸತ್ ಪಿ. ನಿರೂಪಿಸಿದರು. ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸಿಗೆ ಅನುಗುಣವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ 10 ತಿಂಗಳ ಕಾಲ 1,000 ಮತ್ತು 1,250 ರೂ.ಗಳನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುತ್ತದೆ.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ

Article Image

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ

ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ದಿನಾಂಕ 08-ಜುಲೈ 2025 ರ ಮಂಗಳವಾರದಂದು ಜರಗಿದ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ‘ವೇದಿಕೆಯ ಮೇಲಿರುವವರು ಮಾತ್ರ ನಾಯಕರಲ್ಲ ಮುಂಭಾಗದಲ್ಲಿರುವವರು ನಾಯಕರಾಗುವ ಯೋಗ್ಯತೆಯನ್ನು ಹೊಂದಿರುತ್ತಾರೆ. ಗುರುಕುಲ ಶಿಕ್ಷಣ ವ್ಯವಸ್ತೆ ಇರುವ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ’ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿಯಾಗಿ ಆಗಮಿಸಿದ ನ್ಯಾಯವಾದಿ ಜಿನೇಂದ್ರ ಕುಮಾರ್ ಅವರು ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು. ಇಲ್ಲಿ ಗೆದ್ದವನು ನಾಯಕನಲ್ಲ ಬಿದ್ದವನನ್ನು ಮೇಲೆತ್ತುವವ ನಿಜವಾದ ನಾಯಕ’ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ವಿದ್ಯಾರ್ಥಿ ಸಂಸತ್ತು ಕಲಿಕೆಯನ್ನು ಪಾಯೋಗಿಕವಾಗಿ ಅನುಭವಿಸುವ ಒಂದು ಉತ್ತಮ ವೇದಿಕೆಯಾಗಿದ್ದು, ಅದು ನಾಯಕತ್ವ ಮತ್ತು ಜವಬ್ದಾರಿಯ ಮೌಲ್ಯವನ್ನು ಬೆಳೆಸುತ್ತದೆ. ವ್ಯಕ್ತಿಯ ವರ್ತನೆ, ನಡತೆಗಳೇ ವ್ಯಕ್ತಿತ್ವದ ಮಾನದಂಡವಾಗಿದೆ. ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ತಿಳಿಸಿದರು. ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ಅವರು ಮಾತನಾಡುತ್ತಾ ಸಿಕ್ಕ ಜವಬ್ದಾರಿಗಳನ್ನು ಶ್ರದ್ಧೆಯಿಂದ ನಿರ್ವಹಿಸುತ್ತ ಸಮಾಜದ ಶ್ರೇಯಸ್ಸಿಗೆ ಕಾರಣರಾಗಬೇಕು. ಇಂದು ನಿಮಗೆ ಸಿಕ್ಕ ಸ್ಥಾನ ಭಾರತೀಯ ಸಂಸತ್ತನ್ನೇರಲು ಪ್ರಥಮ ಮೆಟ್ಟಿಲಾಗಲಿ. ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

ಜೈನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Article Image

ಜೈನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಜೈನ ಪದವಿಪೂರ್ವ ಕಾಲೇಜು ಮೂಡುಬಿದಿರೆ ಇದರ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು.ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಗೌರವಾನ್ವಿತ ಸಂಚಾಲಕರಾದ ಶ್ರೀಯುತ ಕೆ. ಹೇಮರಾಜ್ ವಹಿಸಿದ್ದರು. ಉದ್ಘಾಟಕರಾಗಿ ಆಗಮಿಸಿದ ಡಾII ಮಾಧವ ಎಮ್. ಕೆ. ಮುಖ್ಯಸ್ಥರು ಕನ್ನಡ ವಿಭಾಗ ಹಾಗೂ ಸಂಯೋಜಕರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳೂರು ಇವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಜೀವನದಲ್ಲಿಒಳ್ಳೆಯ ಸಂಸ್ಕಾರ, ಒಂದು ಗುರಿಯನ್ನು ಇಟ್ಟುಕೊಂಡು, ಕಠಿಣ ಪರಿಶ್ರಮ ಪಡುತ್ತಾ ಇಷ್ಡಪಟ್ಟು ಓದಿದರೆ ಯಶಸ್ಸು ಖಂಡಿತ ಸಾಧ್ಯ. ಎಷ್ಟೇ ಶ್ರೀಮಂತರಿರಲಿ ಎಷ್ಟೇ ಬಡವರಿರಲಿ ಎಲ್ಲರಿಗೂ ಇರುವ ದಿನದ ಸಮಯ ಒಂದೇ. ವಿದ್ಯಾರ್ಥಿಗಳು ಅದನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡು ಶ್ರಮ ಪಡಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾII ಪ್ರಭಾತ್ ಬಲ್ನಾಡು ಇವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚರಣ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಪರಿಚಯಿಸಿದರು. ದಿಗಂಬರ ಜೈನ ವಿದ್ಯಾವರ್ಧಕ ಸಂಘದ ವತಿಯಿಂದ 2024-25 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಘದ ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷರೂ ಆಗಿರುವ ಕೆ. ಹೇಮರಾಜ್ ಇವರು ಅಭಿನಂದಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಮಾತುಗಳನ್ನು ಆಡಿದರು. ವಿದ್ಯಾರ್ಥಿ ಸಂಘದ ಮಾರ್ಗದರ್ಶಕ ಉಪನ್ಯಾಸಕರಾದ ಶ್ರೀರಾಮಚಂದ್ರ ಭಟ್ ಇವರು ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ಟಿ.ಜಿ ಸರ್ವರನ್ನೂ ಸ್ವಾಗತಿಸಿದರು, ಕಾರ್ಯದರ್ಶಿ ಸಿಲ್ವಿಯಾ ಡಿ.ಸೋಜ ವಂದಿಸಿದರು. ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ಕಾರ್ಯದರ್ಶಿ ಶ್ರವಣ್ ಶೆಟ್ಟಿ ಹಾಗೂ ಜೊತೆ ಕಾರ್ಯದರ್ಶಿ ಸಾನಿಕಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿ 17 ನೇ ಸ್ಥಾನ: ರಾಷ್ಟ್ರಮಟ್ಟದ ಸಾಧನೆ

Article Image

ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿ 17 ನೇ ಸ್ಥಾನ: ರಾಷ್ಟ್ರಮಟ್ಟದ ಸಾಧನೆ

ಮೂಡುಬಿದಿರೆ: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಷ್ಠಿತ ಐಸರ್ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಿಶಿರ್ ಶೆಟ್ಟಿ ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್ ನ ವಿದ್ಯಾರ್ಥಿ 17 ನೇ ಸ್ಥಾನವನ್ನು ಪಡೆದಿದ್ದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾನೆ. ಶಿಶಿರ್ ಈ ವರ್ಷ ನಡೆದ ಕಾಮೆಡ್ ಕೆ ನಲ್ಲಿ ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನ, ಜೆಇಇ ಅಡ್ವಾನ್ಸ್ಡ್‌ನಲ್ಲಿ ರಾಷ್ಟ್ರ ಮಟ್ಟದಲ್ಲಿ 664ನೇ ಸ್ಥಾನ, ಸಿಇಟಿ ಇ0ಜಿನಿಯರಿಂಗ್ ವಿಭಾಗದಲ್ಲಿ 4 ನೇ ಸ್ಥಾನ ಮತ್ತು ದ್ವಿತೀಯ ಪದವಿಪೂರ್ವ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7 ನೇ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುತ್ತಾನೆ. ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಯುವರಾಜ ಜೈನ್, ಪ್ರಾಂಶುಪಾಲರಾದ ಪ್ರದೀಪ ಕುಮಾರ್ ಶೆಟ್ಟಿ, ಮತ್ತು ಉಪನ್ಯಾಸಕ ವರ್ಗದವರು ಅಭಿನ0ದನೆ ಸಲ್ಲಿಸಿದ್ದಾರೆ.

ಎಕ್ಸಲೆಂಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Article Image

ಎಕ್ಸಲೆಂಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ನೂತನ್ ಕೃಷ್ಣ 599 (99.9328752), ಖುಷಿ ವಿನಯ್ ರಾಚೋಟಿ 588 (99.8864355), ರೋಹಿತ್ ಕಾಮತ್ 582 (99.8504968), ಸೋಹನ್ ಯಡಾಲ್ 572 (99.7700194), ಲಿಖಿತ್ ಸಿ ಪಿ 570 , ಶ್ರೇಯಸ್ ಹೆಚ್ ಎಸ್ 547, ಧ್ರುವ ಎಸ್ ಪಿ 536 , ಹೆಚ್ ಎ0 ದೇವಸೇನ್ 533, ಚಿನ್ಮಯಿ ಕೆ ಎಲ್ 529, ಚೇತನ್ ಕೆ ಎಸ್ 523, ನಮೃತಾ ಕೆ 518, ಪ್ರೀತಮ್ ಗೌಡ 516, ಮನೋಜ್ ಕೆ 514, ಪವನ್ ಗೌಡ 512, ಪ್ರತ್ಯೂಶ್ ಬಿ ಪಿ 508, ಸಮೃದ್ಧಿ ಎ ಎ0 507, ಲೇಖನ್ ಕುಮಾರ್ ಎ0 ಎಸ್ 506 ಯಶಸ್ ನಾಯ್ದು 502 , ಸ0ಪ್ರೀತ್ ಸಿ 500 ಅಂಕಗಳನ್ನು ಗಳಿಸಿರುತ್ತಾರೆ ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ0ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಡ್‌ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

Article Image

ಕಾಮೆಡ್‌ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

ಖಾಸಗಿ ಎಂಜಿನಿಯರಿಂಗ್ ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ (1 st Rank) ರ‍್ಯಾಂಕ್ ಗಳಿಸಿದ್ದಾರೆ. ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ ಸ್ಥಾನ. ಜೆ.ಇ.ಇ ಮೈನ್ಸ್ ನಲ್ಲಿ 99.971 ಪರ್ಸಂಟೈಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 4ನೇರ‍್ಯಾಂಕ್, ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ದ್ವಿತೀಯ ಪಿಯುಸಿಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ‍್ಯಾಂಕ್ (593 ಅಂಕಗಳು) ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳು, ಉತ್ಕ್ರಷ್ಠ ಸಾಧನೆ ತೋರಿಸಿದ್ದು ಬೋರ್ಡ್ ಪರೀಕ್ಷೆಯಲ್ಲಿ ಒಟ್ಟು 15 ರ‍್ಯಾಂಕ್‌ಗಳು, ಜೆಇಇ ಅಡ್ವಾನ್ಸ್ ನಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ‍್ಯಾಂಕ್‌ನ ಒಳಗೆ 6 ವಿದ್ಯಾರ್ಥಿಗಳು, ಸಿಇಟಿಯಲ್ಲಿ ನಾನಾ ವಿಭಾಗಗಳಲ್ಲಿ 100 ರೊಳಗೆ 13 ರ‍್ಯಾಂಕ್, 500 ರೊಳಗೆ 38 ರ‍್ಯಾಂಕ್, 1000 ರೊಳಗೆ 64 ರ‍್ಯಾಂಕ್ ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಎನ್‌ಡಿಎ, ನಾಟ ಲಿಖಿತ ಪರೀಕ್ಷೆಗಳಲ್ಲಿ ಸಂಸ್ಥೆಯ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಷ್ಟ್ರೀಯ ಮೆರಿಟೈಮ್ ಯೂನಿವರ್ಸಿಟಿ ಮುಕ್ತ ಸ್ಪರ್ಧೆಯಲ್ಲಿ 124ನೇ ಸ್ಥಾನ ಪಡೆಯುದರೊಂದಿಗೆ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆ ಗುಣಮಟ್ಟದ ಶಿಕ್ಷಣದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ದಾಖಲೆ ಫಲಿತಾಂಶವನ್ನು ಸಾಧಿಸಿದೆ. ಅತ್ಯುತ್ತಮ ದಾಖಲೆಗಳೊಂದಿಗೆರಾಷ್ಟ್ರಮಟ್ಟದಲ್ಲಿ 1ನೇ ರ‍್ಯಾಂಕ್ ಪಡೆದಿರುವ ಶಿಶಿರ್ ಹೆಚ್ ಶೆಟ್ಟಿ ಇವರನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆ ಬಗ್ಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹರ್ಷವ್ಯಕ್ತಪಡಿಸಿದ್ದಾರೆ. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಮನೋಜ್ ಕುಮಾರ್, ಸ್ಪರ್ಧಾತ್ಮಕ ಪರೀಕ್ಷೆಗಳ ವಿಭಾಗದ ಮುಖ್ಯಸ್ಥರಾದ ರಾಮಮೂರ್ತಿ, ಡಾ, ದಯಾನಂದ, ವಿದ್ಯಾರ್ಥಿಯ ತಂದೆ ಹರೀಶ್ ಶೆಟ್ಟಿ ಇವರು ಉಪಸ್ಥಿತರಿದ್ದರು. ಉಪನ್ಯಾಸ ವಿಕ್ರಮ ನಾಯಕ್ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

Article Image

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

ಮೂಡುಬಿದಿರೆ: ಇತ್ತೀಚೆಗೆ ನಡೆದ ರಾ‌ಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆ0ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅ0ಕಗಳನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ರಾ‌ಷ್ಟ್ರಮಟ್ಟದಲ್ಲಿ 664 ನೇ ಸ್ಥಾನ (OPEN), ಕಾರ್ತಿಕ್ ಎಸ್ 12072 ನೇ ಸ್ಥಾನ (OPEN) , ಶ್ರೇಯಾಂಕ್ ಮನೋಹರ್ ಪೈ 4601ನೇ ಸ್ಥಾನ (C), ಶೌರ್ಯ್ ಬಿ ತಲ್‌ವಾರ್ 610ನೇ ಸ್ಥಾನ (C) , ಸ್ಮಿರಾ ತಲ್‌ವಾರ್ 27 ನೇ ಸ್ಥಾನ (C), ಪೂರ್ಣಚಂದ್ರ ಎಸ್ 2367 ನೇ ಸ್ಥಾನ (C), ಪಡೆದು ಉತ್ತಮ ಸ್ಥಾನ ಗಳಿಸುವುದರ ಮೂಲಕ ಸ0ಸ್ಥೆಗೆ ಕೀರ್ತಿ ತ0ದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಸ್ಪರ್ಧಾತ್ಮಕ ಪರೀಕ್ಷಾ ನಿರ್ದೇಶಕರಾದ ಡಾ. ಪ್ರಶಾಂತ್ ಹೆಗ್ಡೆ , ಜೆಇಇ ಸ0ಯೋಜಕರಾದ ವಿ ಅರುಣ್, ಹಾಗೂ ಉಪನ್ಯಾಸಕ ವೃ0ದದವರು ವಿದ್ಯಾರ್ಥಿಗಳನ್ನು ಅಭಿನ0ದಿಸಿದ್ದಾರೆ.

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Article Image

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ರವರು ಹಾಗೂ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ದೀಪವನ್ನು ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನರವರು ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸುತ್ತಾ, ವಿದ್ಯಾರ್ಥಿಗಳು ಗುರುಹಿರಿಯರನ್ನು ಗೌರವಭಾವದಿಂದ ಕಾಣುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನವನ್ನು ಸಂತೋಷದಿಂದ ಮುಂದುವರಿಸಿ, ಕ್ರಿಯಾಶೀಲರಾಗಿ ಬೆಳೆಯಬೇಕು ಎಂದು ಶುಭ ಹಾರೈಸಿದರು. ಈ ಸುಸಂದರ್ಭದಲ್ಲಿ ಶೈಕ್ಷಣಿಕ ನಿರ್ದೇಶಕರಾದ ಪುಷ್ಪರಾಜ್ ಬಿ, ಟ್ರಸ್ಟಿನ ಸದಸ್ಯರಾದ ನಟರಾಜ, ಶಾಲಾ ಪ್ರಾಂಶುಪಾಲರಾದ ಪ್ರಸಾದ್, ಸಿಬಿಎಸ್ಇ ಸಂಯೋಜಕರಾದ ವಿಮಲಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಸ್ವಾತಿ ನೆರವೇರಿಸಿ, ಹರ್ಷಿತಾರವರು ಸ್ವಾಗತಿಸಿ, ಪದ್ಮಾವತಿಯವರು ವಂದಿಸಿದರು.

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Article Image

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ0ಜಿನಿಯರಿ0ಗ್ ವಿಭಾಗದಲ್ಲಿ 4 ನೇ ರ‍್ಯಾಂಕ್, ನೂತನ್ ಕೃಷ್ಣ ಬಿ.ಬಿ.ಎನ್.ವೈ.ಎಸ್. ನಲ್ಲಿ 4 ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ 5 ನೇ ರ‍್ಯಾಂಕ್, ಬಿ ಎಸ್ಸಿ ನರ್ಸಿ0ಗ್ ಮತ್ತು ವೆಟರಿನರಿ ಸಾಯನ್ಸ್ ನಲ್ಲಿ 6 ನೇ ರ‍್ಯಾಂಕ್ ನ್ನು ಗಳಿಸಿರುತ್ತಾನೆ. ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ 13 ರ‍್ಯಾಂಕ್, ಐದುನೂರರ ಒಳಗೆ 38 ರ‍್ಯಾಂಕ್, ಸಾವಿರದ ಒಳಗೆ 64 ರ‍್ಯಾಂಕ್ ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಮತ್ತು ಉಪನ್ಯಾಸಕ ವೃ0ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

Article Image

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

ಉಜಿರೆ, ಮೇ 21: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ವಾರ್ಷಿಕ ಸಂಚಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮೊದಲ ಬಹುಮಾನಿತ ಆದ್ಯತೆಯೊಂದಿಗೆ ‘ಅತ್ಯುತ್ತಮ ಕಾಲೇಜು ಮ್ಯಾಗಝಿನ್’ ಎಂಬ ಮನ್ನಣೆಗೆ ಪಾತ್ರವಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅವರಿಗೆ ‘ಮನೀಷಾ’ ಸಂಚಿಕೆಯ ಅನನ್ಯ ಪ್ರಯೋಗಶೀಲತೆಗಾಗಿ ಪ್ರಥಮ ಬಹುಮಾನಿತ ಮನ್ನಣೆಯ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಆಡಳಿತಾಂಗ ಕುಲಸಚಿವರಾದ ಕೆ.ರಾಜು ಮೊಗವೀರ, ಪರೀಕ್ಷಾಂಗ ಕುಲಸಚಿವರಾದ ಡಾ.ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಡಾ.ಸಂಗಪ್ಪ ವೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕಿ ಡಾ.ಪರಿಣಿತಾ ಅವರ ಅಧ್ಯಕ್ಷತೆಯ ಕಾಲೇಜು ಮ್ಯಾಗಝೀನ್ ತಜ್ಞರ ಆಯ್ಕೆ ಸಮಿತಿಯು ವಿ.ವಿ. ವ್ಯಾಪ್ತಿಯ ಸಂಯೋಜಿತ ಕಾಲೇಜುಗಳ ವಾರ್ಷಿಕ ಸಂಚಿಕೆಗಳನ್ನು ಪರಿಶೀಲಿಸಿ ‘ಮನೀಷಾ’ ಸಂಚಿಕೆಯನ್ನು ಮೊದಲ ಬಹುಮಾನಕ್ಕೆ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಡಾ.ಪರಿಣಿತಾ ಅವರು ‘ಮನೀಷಾ’ ಸೇರಿದಂತೆ ಸ್ಪರ್ಧೆಗೆ ಪರಿಗಣಿತವಾದ ವಿವಿಧ ಕಾಲೇಜುಗಳು ಹೊರತಂದ ಸಂಚಿಕೆಗಳ ವಿಶೇಷತೆಯನ್ನು ಪರಿಚಯಿಸಿದರು. ಸ್ಪರ್ಧೆಗೆ ಬಂದ ಕಾಲೇಜು ಸಂಚಿಕೆಗಳ ವಿದ್ಯಾರ್ಥಿ ಬರಹಗಳು ಪ್ರಚಲಿತ ಘಟನೆಗಳನ್ನು ಕೇಂದ್ರೀಕರಿಸಿಕೊಂಡಿದ್ದವು. ಬಹಳ ಮುಖ್ಯವಾಗಿ ಸ್ಥಳೀಯ ಸಂಸ್ಕೃತಿಯನ್ನು ಅನಾವರಣಗೊಳಿಸುವ ಬರಹಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಅಲ್ಲದೇ, ಜ್ಞಾನ ಸಂವಹನದ ಉದ್ದೇಶದ ಬರಹಗಳಿಗಿಂತ ಬಹಳ ಮುಖ್ಯವಾಗಿ ಗಮನ ಸೆಳೆದದ್ದು ಆದರ್ಶ ಮೌಲ್ಯಗಳು ಮತ್ತು ಸಂಸ್ಕಾರಯುತ ಚಿಂತನೆಯನ್ನು ಕಾಣಿಸುವ ಲೇಖನಗಳು. ಅಲ್ಲದೇ, ಈ ಸಲದ ಬಹಳಷ್ಟು ಸಂಚಿಕೆಗಳಲ್ಲಿ ಜನರಿಗೆ ಸಾಮಾಜಿಕವಾಗಿ ನೆರವಾಗಿ ಜನಜನಿತರಾದ ಸ್ಥಳೀಯ ವ್ಯಕ್ತಿತ್ವಗಳ ಹಿರಿಮೆಯನ್ನು ಧ್ವನಿಸುವ ಬರಹಗಳು ಇದ್ದವು. ಅಲ್ಲದೇ ಉಚಿತ ಬಸ್ ಪ್ರಯಾಣದ ಕುರಿತ ನಿಲುವುಗಳನ್ನು ವಿದ್ಯಾರ್ಥಿ ಬರಹಗಾರರು ಈ ಸಂಚಿಕೆಗಳ ಮೂಲಕ ಅಭಿವ್ಯಕ್ತಿಸಿದ್ದಾರೆ ಎಂದು ಡಾ.ಪರಿಣಿತಾ ತಿಳಿಸಿದರು. ಪ್ರಚಲಿತ ಘಟನೆಗಳು, ಮೌಲಿಕ ಪುಸ್ತಕಗಳ ಪರಿಚಯಾತ್ಮಕ ನಿಲುವುಗಳು, ತಾರುಣ್ಯದ ಹೊಸಿಲಲ್ಲಿರುವ ಯುವ ಮನಸುಗಳ ತವಕ-ತಲ್ಲಣಗಳು, ಹೊಸ ಕಾಲವನ್ನು ವ್ಯಾಖ್ಯಾನಿಸುವ ಕಾವ್ಯಾತ್ಮಕ ಧ್ವನಿ, ಸ್ವಾನುಭವಗಳ ವಿನೂತನ ಅಭಿವ್ಯಕ್ತಿಯ ಆಶಯಗಳನ್ನು ಈ ಬಹುಮಾನಿತ ಸಂಚಿಕೆ ಒಳಗೊಂಡಿದೆ. ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯನ್ನು ಧ್ವನಿಸುವ ಭಾಷಿಕ ಸೊಗಡಿನ ಬರಹಗಳು ಮಾತ್ರವಲ್ಲದೇ ವಿವಿಧ ಭಾಷೆಗಳಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳು ಬರೆದ ಬರಹಗಳು ‘ಮನೀಷಾ’ ಸಂಚಿಕೆಯಲ್ಲಿವೆ. ಇವುಗಳ ಮೌಲಿಕತೆಯನ್ನು ಪರಿಗಣಿಸಿ ಒಟ್ಟು 350 ಅಂಕಗಳಲ್ಲಿ 266 ಅಂಕಗಳನ್ನು ತಜ್ಞರ ಸಮಿತಿ ನೀಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಮನೀಷಾ’ ಸಂಚಿಕೆಯ ಎಸ್.ಡಿ.ಎಂ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಬಿ.ಗಣೇಶ್‌ನಾಯಕ್, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಸೌಮ್ಯ ಬಿ.ಪಿ, ‘ಮನೀಷಾ’ ಸಂಪಾದಕೀಯ ಮಂಡಳಿಯ ಸಂಯೋಜಕರಾದ ಡಾ.ರಾಜಶೇಖರ ಹಳೆಮನೆ, ಸದಸ್ಯ ವಿರಾಟ್ ಪದ್ಮನಾಭ ಅವರು ಭಾಗವಹಿಸಿದ್ದರು.

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

Article Image

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

ಮೂಡುಬಿದಿರೆ : ಮೂಡುಬಿದಿರೆಯ ಕಲ್ಲಬೆಟ್ಟುಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಯ ಅಂತಿಮ ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ರುಚಿರಾ ಕುಂದರ್ ಶೇ. 91% ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಶೇ. 90% ಅಂಕ ಗಳಿಸಿದ ಆಂಥಿಯಾ ಶೈನ, ಮಿರಂಡಾ ದ್ವಿತೀಯ ಸ್ಥಾನ ಹಾಗೂ ಶಿಖಾ ಶೆಟ್ಟಿ ಶೇ 86.6 % ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸಂಸ್ಥೆಯ ಅಧ್ಯಕ್ಷರು ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್

Article Image

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ನಾನ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಡಾ. ಗನ್ಯಾಶ್ರೀ ಮೊದಲ ಶ್ರೇಯಾಂಕಕ್ಕಾಗಿ ಹಾಗೂ ಆಯುಷ್ ವಿಭಾಗದಲ್ಲಿಯೂ ಮೊದಲನೇ ಸ್ಥಾನ ಪಡೆದು 4 ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 27ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಥಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸಂಸ್ಥಾಪಕ ಮತ್ತು ಅಧ್ಯಕ್ಷರು, ವಿಪ್ರೋ ಲಿಮಿಟೆಡ್ ಮತ್ತು ವಿಪ್ರೋ ಎಂಟರ್‌ಪ್ರೈಸಸ್ ಲಿಮಿಟೆಡ್ ಹಾಗೂ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು, ವಿಶ್ವವಿದ್ಯಾಲಯದ ಸಹ-ಕುಲಪತಿಗಳು ಹಾಗೂ ಕುಲಸಚಿವರು ಉಪಸ್ಥಿತರಿದ್ದರು.

ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿಗಾಗಿ ಒಂದು ಶೋಧ ಪುಸ್ತಕ ಬಿಡುಗಡೆ

Article Image

ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿಗಾಗಿ ಒಂದು ಶೋಧ ಪುಸ್ತಕ ಬಿಡುಗಡೆ

ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಜಿ.ವಿ. ಜೋಶಿ ಮತ್ತು ನವದೆಹಲಿಯ ಜೆ.ಎನ್.ಯು. ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ರಮೇಶ್ ಸಾಲಿಯಾನ್ ಅವರು ಬರೆದ ‘ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿಗಾಗಿ ಒಂದು ಶೋಧ' (A Search for Inclusive Growth in Arthashastra) ಪುಸ್ತಕದ ಬಿಡುಗಡೆಯು ಎಪ್ರಿಲ್ 26 ರಂದು ಪುಣೆಯಲ್ಲಿ ನಡೆಯಿತು. ಐತಿಹಾಸಿಕ ಮಹತ್ವವುಳ್ಳ ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸಮಾಜ ವಿಜ್ಞಾನ ಪರಿಷತ್ತು ಏರ್ಪಡಿಸಿದ್ದ ಏಳನೇ ವಾರ್ಷಿಕ ಸಮ್ಮೇಳನದಲ್ಲಿ ಮಹಾರಾಷ್ಟ್ರ ಸರ್ಕಾರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವರಾದ ಚಂದ್ರಕಾಂತ್ ಪಾಟೀಲ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಡಾ. ಜಿ.ವಿ. ಜೋಶಿ ತಮ್ಮ ಭಾಷಣದಲ್ಲಿ ಕೌಟಿಲ್ಯನ ಒಳಗೊಳ್ಳುವಿಕೆಯ ಅಭಿವೃದ್ಧಿಯ ಪ್ರಕ್ರಿಯೆ ದುರ್ಬಲ ವರ್ಗದವರಿಗೆ ನೆರವಾಗಬೇಕೆಂದು ಸ್ಪಷ್ಟಪಡಿಸಿದ್ದಾರೆಂದು ಬೃಹತ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದರು. ಇಂಥ ಅಪರೂಪದ ಕೃತಿ ರಚಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ ಜೋಶಿ ಅವರನ್ನು ರಾಷ್ಟ್ರೀಯ ಸಮಾಜ ವಿಜ್ಞಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪ್ರೊ. ಶೀಲಾ ರೈ ಶ್ಲಾಘಿಸಿದರು.

ಮೂಡುಬಿದಿರೆ: ಎಕ್ಸಲೆಂಟ್ ಜೆಇಇ ಮೈನ್-2 ಫಲಿತಾಂಶ ರಾಷ್ಟ್ರಮಟ್ಟದ ರ‍್ಯಾಂಕ್‌ಗಳ ಸಾಧನೆ

Article Image

ಮೂಡುಬಿದಿರೆ: ಎಕ್ಸಲೆಂಟ್ ಜೆಇಇ ಮೈನ್-2 ಫಲಿತಾಂಶ ರಾಷ್ಟ್ರಮಟ್ಟದ ರ‍್ಯಾಂಕ್‌ಗಳ ಸಾಧನೆ

ಎನ್‌ಟಿಎ ನಡೆಸುವ ರಾಷ್ಟ್ರಮಟ್ಟದ ಇಂಜಿನಿಯರ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-2 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಭಾರತೀಯ ತಂತ್ರಜ್ಞಾನ ಸಂಸ್ಥೆ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆಯಲು ನಡೆಸುವ ಈ ಪರೀಕ್ಷೆಯ ಈ ಬಾರಿಯ ಫಲಿತಾಂಶದಲ್ಲಿ ಸಂಸ್ಥೆಯ ಶಿಶಿರ್ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 528 ನೇ ರ‍್ಯಾಂಕ್ ಪಡೆದಿದ್ದಾರೆ. ಅಲ್ಲದೆ ಸಂಸ್ಥೆಯ ಶ್ರೇಯಾಂಕ್ ಮನೋಹರ್ ಪೈ ರಾಷ್ಟ್ರಮಟ್ಟದಲ್ಲಿ 2800 ನೇ ರ‍್ಯಾಂಕ್, ಕಾರ್ತಿಕ್ ಎಸ್ 3620ನೇ (ews) ರ‍್ಯಾಂಕ್ ಸ್ಮಿರಾ ತಲ್ವಾರ್ 480 ನೇ ರ‍್ಯಾಂಕ್ (c), ಶ್ರೇಯಸ್ ಹೆಚ್.ಎಸ್ 1648(c)ನೇ ರ‍್ಯಾಂಕ್, ಶೌರ್ಯ ಬಿ ತಲ್ವಾರ್ 1962ನೇ ರ‍್ಯಾಂಕ್(c), ಪೂರ್ಣಚಂದ್ರ 3051ನೇರ‍್ಯಾಂಕ್(c) ಪಡೆಯುದರೊಂದಿಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದ 97 ವಿದ್ಯಾರ್ಥಿಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ಎನ್‌ಟಿಎ ನಡೆಸುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೇದಿರುತ್ತಾರೆ. ಅದರಲ್ಲಿ 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಹೆಚ್ಚು, 5 ವಿದ್ಯಾರ್ಥಿಗಳು 98 ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು 12 ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಹೆಚ್ಚು, 63 ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಷ್ಟ್ರಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿದರು

Article Image

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿದರು

ಸ್ಥಳೀಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಪಿ.ಯು.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಭಾನುವಾರ ಧರ್ಮಸ್ಥಳಕ್ಕೆ ಹೋಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿ ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು: ವಿಜ್ಞಾನ ವಿಭಾಗ: • ಕುಮಾರಿ ತುಷಾರ ಬಿ.ಎಸ್., (5ನೇ ರ‍್ಯಾಂಕ್) ಪಡೆದ ಅಂಕಗಳು: 595 • ಕುಮಾರಿ ನೀತಿ ಕೆ.ಪಿ. (9ನೇ ರ‍್ಯಾಂಕ್) ಪಡೆದ ಅಂಕಗಳು: 591 ವಾಣಿಜ್ಯ ವಿಭಾಗ: • ಆರ್ಯದಿನೇಶ್ (7ನೇ ರ‍್ಯಾಂಕ್) ಪಡೆದ ಅಂಕಗಳು: 593 ಕಲಾ ವಿಭಾಗ: • ಶ್ರೇಯಾ, ಎಚ್.ಎ. (9ನೆ ರ‍್ಯಾಂಕ್) ಪಡೆದ ಅಂಕಗಳು: 589 ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಿಂದ ಒಟ್ಟು 1099 ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾಗಿದ್ದು, 1069 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97.27 ಫಲಿತಾಂಶ ಬಂದಿರುತ್ತದೆ. ಉತ್ತಮ ಫಲಿತಾಂಶಕ್ಕಾಗಿ ಹೆಗ್ಗಡೆಯವರು ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರಾಂಶುಪಾಲ ಬಿ. ಪ್ರಮೋದ್ ಕುಮಾರ್, ಉಪನ್ಯಾಸಕರು, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ 13 ಸ್ಥಾನಗಳನ್ನು ಮಡಿಲಿಗೆಳೆದುಕೊ0ಡ ಎಕ್ಸಲೆಂಟ್

Article Image

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ 13 ಸ್ಥಾನಗಳನ್ನು ಮಡಿಲಿಗೆಳೆದುಕೊ0ಡ ಎಕ್ಸಲೆಂಟ್

ಮೂಡುಬಿದಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 1 ರಿ0ದ ಮಾರ್ಚ್ 20 ರ ವರಗೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯ ಮಟ್ಟದಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕನೇ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ಸ್ಥಾನದೊ0ದಿಗೆ 13 ಸ್ಥಾನಗಳನ್ನು ಬಾಚಿಕೊಳ್ಳುವ ಮೂಲಕ ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿ ಮತ್ತೊಮ್ಮೆ ಗುಣಮಟ್ಟದ ಶಿಕ್ಷಣವನ್ನು ಸಾಬೀತುಪಡಿಸಿದೆ. ಸಂಸ್ಥೆಯಲ್ಲಿ ಪರೀಕ್ಷೆ ಬರೆದ 953 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದರ‍್ಯಾಂಕ್ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನಗಳನ್ನು ಪಡೆದಿದ್ದಾರೆ. ಜೈನ ಕಾಶಿಯಾದ ಮೂಡುಬಿದಿರೆ ಶಿಕ್ಷಣ ಕಾಶಿಯಾಗಿ ರೂಪುಗೊ0ಡಿದ್ದು, ಎಕ್ಸಲೆಂಟ್ ವಿದ್ಯಾ ಸ0ಸ್ಥೆ ಕಳೆದ ಹದಿಮೂರು ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ಸಲ್ಲಿಸುತ್ತಿದ್ದು, ಶಿಸ್ತು ಸಂಸ್ಕಾರ ಬದ್ಧ ಜೀವನದ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಗುಣಮಟ್ಟದ ವಿದ್ಯಾರ್ಥಿಗಳನ್ನು ಸಿದ್ಧಪಡಿಸುತ್ತಿದೆ. ದ್ವಿತೀಯ ಪದವಿಪೂರ್ವ ಶಿಕ್ಷಣದಲ್ಲಿ ನಿರಂತರವಾಗಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುತ್ತಾ ಬಂದಿರುತ್ತದೆ. ವಿಜ್ಞಾನ ವಿಭಾಗದಲ್ಲಿ ಪ್ರಮುಖ್ ತುಳುಪುಳೆ (596) 4ನೇ ಸ್ಥಾನ, ರೋಹಿತ್ ಕಾಮತ್ (593) 7ನೇ ಸ್ಥಾನ, ಶಿಶಿರ್ ಎಚ್ ಶೆಟ್ಟಿ(593) 7ನೇ ಸ್ಥಾನ, ಥಿಯಾನ್ ಮಹೇಶ್ ಸೋನ್ಸ್(593) 7ನೇ ಸ್ಥಾನ, ವರುಣ್ ವಿ (593) 7ನೇ ಸ್ಥಾನ, ಸುಜನಾ (591) 9ನೇ ಸ್ಥಾನ, ಮೂಡುಬಿದಿರೆಯ ಪಾಂಡುರ0ಗ ಪೈ ಮತ್ತು ಸವಿತಾ ಪೈ ಅವರ ಪುತ್ರಿ ಕೆ ಸುಮಾ ಪೈ (591) 9ನೇ ಸ್ಥಾನ, ಸಕಲೇಶಪುರದ ವಿಶ್ವಾ ಜೆ ಎಸ್ ಮತ್ತು ಬವಿತಾ ಡಿ ಎಸ್ ಅವರ ಪುತ್ರ ಧನಾ0ಶ್ ವಿ(590) 10ನೇ ಸ್ಥಾನ, ದಿವ್ಯೇಶ್ ಶರ್ಮಾ (590) 10ನೇ ಸ್ಥಾನ, ಎಡುಲಾ ಓ0ಸಾಯಿ(590) 10ನೇ ಸ್ಥಾನ ಪಡೆದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಅನೂಪ್ ಶಾನ್ ಗೋಮ್ಸ್ (596) ರಾಜ್ಯಕ್ಕೆ 4ನೇ ಸ್ಥಾನ, ಅದಿತಿ ಕೆ (594) 6ನೇ ಸ್ಥಾನ, ಆದಿತ್ಯ ಶೆಟ್ಟಿ (590) 10ನೇ ಸ್ಥಾನವನ್ನು ಪಡೆದಿದ್ದು ಸ0ಸ್ಥೆಗೆ ಕೀರ್ತಿಯನ್ನು ತ0ದಿದ್ದಾರೆ. ಪರೀಕ್ಷೆಗೆ ಹಾಜರಾದ 953 ವಿದ್ಯಾರ್ಥಿಗಳಲ್ಲಿ 595 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಶೆಕಡಾ ನೂರು ಫಲಿತಾ0ಶ ದಾಖಲಾಗಿದ್ದು ಸ0ಸ್ಥೆಯ 241 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100ಕ್ಕೆ 100 ಅ0ಕಗಳನ್ನು ಪಡೆದಿರುತ್ತಾರೆ. ಸ0ಸ್ಥೆಯ ಒಟ್ಟು ಫಲಿತಾ0ಶ 99.895 ಎ0ದು ಸ0ಸ್ಥೆಯ ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶಕ್ಕೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ನಿರ್ದೇಶಕರು, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಜೈನ ಪದವಿಪೂರ್ವ ಕಾಲೇಜಿಗೆ 96 ಡಿಸ್ಟಿಂಕ್ಷನ್

Article Image

ಜೈನ ಪದವಿಪೂರ್ವ ಕಾಲೇಜಿಗೆ 96 ಡಿಸ್ಟಿಂಕ್ಷನ್

ಮೂಡುಬಿದಿರೆಯ ಸ್ಥಳೀಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಜೈನ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಫಲಿತಾಂಶ ಲಭ್ಯವಾಗಿದ್ದು ಪರೀಕ್ಷೆ ಬರೆದ 355 ವಿದ್ಯಾರ್ಥಿಗಳಲ್ಲಿ 335 ವಿದ್ಯಾರ್ಥಿಗಳು ಉತ್ತೀರ್ಣರಾಗಿ 94.5% ಪಲಿತಾಂಶ ಲಭ್ಯವಾಗಿರುತ್ತದೆ. ವಾಣಿಜ್ಯ ವಿಭಾಗದ ಸುಧೀಕ್ಷಾ 587 (97.83% )ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 13ನೇ ಸ್ಥಾನವನ್ನು ಪಡೆದಿರುತ್ತಾಳೆ. ವಿಜ್ಞಾನ ವಿಭಾಗದಲ್ಲಿ ವಿಜೇತ್ ಜೈನ್ 586(97.66%) ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ 14ನೆಯ ಸ್ಥಾನವನ್ನು ಪಡೆದಿರುತ್ತಾನೆ. ಕಲಾ ವಿಭಾಗದ ಕೀರ್ತನ 531 ಅಂಕ ಗಳಿಸಿರುತ್ತಾಳೆ. ಯಶಸ್ಸು ಪಡೆದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ದಿಗಂಬರ ಜೈನ ವಿದ್ಯಾವರ್ಧಕ ಸಂಘ ಅಭಿನಂದನೆಗಳನ್ನು ಸಲ್ಲಿಸಿದೆ.

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ ಹಿರಿಯಂಗಡಿ ಕಾರ್ಕಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Article Image

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ ಹಿರಿಯಂಗಡಿ ಕಾರ್ಕಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ನಿಲಯದ ಒಟ್ಟು 13 ವಿದ್ಯಾರ್ಥಿಗಳ ಪೈಕಿ 5 ವಿದ್ಯಾರ್ಥಿಗಳು ಅತ್ತ್ಯುನ್ನತ ಶ್ರೇಣಿಯಲ್ಲಿ ಹಾಗೂ 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿ ಪಾರ್ಶ್ವನಾಥ್ ಜೈನ್ 573/600 ಅಂಕಗಳೊಂದಿಗೆ (Statistics 100) ಆಶ್ರಮಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಅದೇ ರೀತಿ ಚವೀಶ್ (572), ರಜತ್ (563), ಸೂರಜ್ ಜೆ ಜೈನ್ (557) ( Stats -100) ಮತ್ತು ಯತಿನ್ (513) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ

Article Image

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರದ್ದೂ ಆಗಿರುತ್ತದೆ ಎಂದು ತಿಳಿಸಿದರು. ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಶೈಕ್ಷಣಿಕ ನಿರ್ದೇಶಕರು ಹಾಗೂ ಶೈಕ್ಷಣಿಕ ಮನಶಾಸ್ತ್ರಜ್ಞರು ಆಗಿರುವ ಬಿ. ಪುಷ್ಪರಾಜ ರವರು ಮಾತನಾಡಿ, ಎಳೆಯ ಮಕ್ಕಳ ಕಲಿಕೆಗೆ ಅನುಕೂಲಕರವಾದ ಚಟುವಟಿಕೆ ಆಧಾರಿತ ಶಿಕ್ಷಣ ನೀಡುವುದರಿಂದ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿ ಬೆಳೆಯಲು ಸಾಧ್ಯವಾಗುವುದು.ಅಲ್ಲದೆ ಎಳೆಯ ಮಕ್ಕಳಿಗೆ ಮಾತನಾಡುವ ಕೌಶಲ್ಯವನ್ನು ಬೆಳೆಸುವ ಹಲವು ಚಟುವಟಿಕೆಗಳನ್ನು ನೀಡುವುದರಿಂದ ಅವರ ಜ್ಞಾನವನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುತ್ತದೆ ಎನ್ನುವುದನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ಮಾತನಾಡಿ, ಮಕ್ಕಳಲ್ಲಿ ಶಿಸ್ತು, ಸಂಯಮ, ಗೌರವಭಕ್ತಿಯ ಮನೋಭಾವವನ್ನು ಬೆಳೆಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವೂ ಆಗಿದೆ ಎಂದು ಹೇಳುವ ಮೂಲಕ ಎಳೆಯ ವಯಸ್ಸಿನ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕಾದರೆ ಮಗು ಬೆಳೆದಿರುವ ಸುತ್ತಮುತ್ತಲಿನ ಪರಿಸರ ಉತ್ತಮವಾಗಿರಬೇಕು ಅನ್ನುವುದನ್ನು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರು ಆಗಿರುವ ಬಿ. ಪುಷ್ಪರಾಜ್, ಆಡಳಿತ ನಿರ್ದೇಶಕರಾದ ಬಿ. ಪಿ.ಸಂಪತ್ ಕುಮಾರ್, ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಸುರೇಶ್, ಶೈಕ್ಷಣಿಕ ಸಂಯೋಜಕರಾದ ಪ್ರಸಾದ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುಕೆಜಿ ಪುಟಾಣಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಯುಕೆಜಿ ವಿದ್ಯಾರ್ಥಿನಿಯರಾದ ಶ್ರುತಿಕ ಕಾಮತ್ ಹಾಗೂ ಅಮೂಲ್ಯ ನೆರವೇರಿಸಿದರು. ಅತುಲಿತ್ ಗ್ಯಾನ್ ಸ್ವಾಗತಿಸಿ, ಆರಲ್ ಲೋಬೊ ವಂದಿಸಿದರು. ಯುಕೆಜಿಯ ರಕ್ಷಿತ್ ಕಾಮತ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಎಕ್ಸಲೆಂಟ್: ಸ್ಕೌಟ್ಸ್ ಗೈಡ್ಸ್ ನಾಲ್ಕು ದಿನದ ಬೇಸಿಗೆ ಶಿಬಿರ ಜ್ಞಾನ ರಶ್ಮಿ ಉದ್ಘಾಟನೆ

Article Image

ಎಕ್ಸಲೆಂಟ್: ಸ್ಕೌಟ್ಸ್ ಗೈಡ್ಸ್ ನಾಲ್ಕು ದಿನದ ಬೇಸಿಗೆ ಶಿಬಿರ ಜ್ಞಾನ ರಶ್ಮಿ ಉದ್ಘಾಟನೆ

ಮೂಡುಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ನಾಲ್ಕು ದಿನದ ಬೇಸಿಗೆ ಶಿಬಿರ ಜ್ಞಾನ ರಶ್ಮಿ. ಇದರ ಉದ್ಘಾಟನೆಯನ್ನು ಖ್ಯಾತ ರಂಗಕರ್ಮಿ ರಾಷ್ಟ್ರಪ್ರಶಸ್ತಿ ವಿಜೇತ ಡಾಕ್ಟರ್ ಜೀವನ್ ರಾಮ್ ಸುಳ್ಯ ಉದ್ಘಾಟಿಸಿ, ಸಮಾಜದಲ್ಲಿ ಸಾಧಕ ನೆನೆಸಿಕೊಳ್ಳಲು ಹಲವು ದಿನಗಳ ನಿದ್ದೆ ಹಸಿವು ಸಮಯ ಇತ್ಯಾದಿಗಳ ಪರಿವೇ ಇಲ್ಲದೆ ಪರಿಶ್ರಮ ಪಟ್ಟರೆ ಯಶಸ್ಸು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಗಳಿದ್ದು ಹೊರತೆಗೆಯಲು ಈ ತರದ ಶಿಬಿರಗಳು ಅನುಕೂಲಕರವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬದುಕಬೇಕು ಅಂದರೆ ಜ್ಞಾನ ದೊಂದಿಗೆ ಈಜಬೇಕು. ತಾಂತ್ರಿಕ ಯುಗದಲ್ಲಿ ಜ್ಞಾನಕ್ಕೆ ಬೆಲೆ ಬರುವುದು ಸಕಲ ವಿದ್ಯೆಯಿಂದ. ಮಕ್ಕಳು ಸಾಧ್ಯವಾದಷ್ಟು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಪ್ರತಿಭೆಯನ್ನು ಹೊರೆಸು ಚೆಲ್ಲಬೇಕು. ಆಗ ಸಮಾಜದ ಆಸ್ತಿಯಾಗುತ್ತಾರೆ ಮತ್ತು ಅತ್ಯುತ್ತಮ ಗೌರವ ಸಿಗುತ್ತದೆ ಎಂದರು. ವೇದಿಕೆಯ ಮೇಲೆ ಎಕ್ಸಲೆಂಟ್ ಸಿಬಿಎಸ್‌ಸಿ ಸಂಸ್ಥೆಯ ಪ್ರಾಂಶುಪಾಲರಾದ ಸುರೇಶ, ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು ಉಪಸ್ಥಿತರಿದ್ದರು. ಕಲಾ ಶಿಕ್ಷಕ ಭಾಸ್ಕರ್ ನೆಲ್ಯಾಡಿಯವರು ಅತಿಥಿ ಪರಿಚಯಿಸಿ, ಸುಧೀಕ್ಷಾ ಸ್ವಾಗತಿಸಿ, ಮಾನಿತಾ ವಂದಿಸಿ, ಕಾರ್ಯಕ್ರಮವನ್ನು ಲಕ್ಷ್ಮೀ ನಿರೂಪಿಸಿದರು.

ಪ್ರಥ್ವಿ ಪರ್ವ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ

Article Image

ಪ್ರಥ್ವಿ ಪರ್ವ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ

ವಿದ್ಯಾಗಿರಿ: ಸಮಾಜದಿಂದ ಎಲ್ಲವನ್ನು ಪಡೆದು, ಸಮಾಜಕ್ಕೆ ಹಿಂತಿರುಗಿಸುವ ಬದ್ಧತೆಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಇದು ದೇಶದ ಸಮತೋಲಿತ ಬೆಳವಣಿಗೆಗೆ ಸಹಕಾರಿ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮಾನವಿಕ ವಿಭಾಗ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎರಡು ದಿನಗಳ ‘ಪ್ರಥ್ವಿ ಪರ್ವ’ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಕ್ಕೆ ಕೊಡುಗೆ ಕೇವಲ ಆರ್ಥಿಕ ನೆರವಿನ ಮೂಲಕ ಮಾತ್ರ ಆಗಬೇಕೆಂದಿಲ್ಲ. ಪರಿಸರದ ರಕ್ಷಣೆ ಹಾಗೂ ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ನಮ್ಮ ಭವಿಷ್ಯ ಪೀಳಿಗೆಗೆ ಉಚಿತವಾಗಿ ನೀಡಬಹುದಾದ ಅಮೂಲ್ಯ ಕೊಡುಗೆಯಾಗಿದೆ. ನಾವಿಂದು ಪ್ರಕೃತಿಯಿಂದ ಎಲ್ಲವನ್ನು ಪಡೆದು, ಅದೇ ಪ್ರಕೃತಿಯನ್ನು ನಾಶ ಮಾಡಲು ಹೊರಟಿದ್ದೇವೆ. ಪರಿಸರದ ಸಂರಕ್ಷಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡದಿದ್ದರೆ ಭವಿಷ್ಯದಲ್ಲಿ ಹಲವು ಸಂಕಟಗಳನ್ನು ಎದುರಿಸಬೇಕಾಗುತ್ತದೆ. "ನಾವು ಪ್ರಕೃತಿಯನ್ನು ಸಂರಕ್ಷಿಸಿದರೆ, ಅದು ನಮ್ಮನ್ನು ಸಂರಕ್ಷಿಸುತ್ತದೆ" ಎಂಬ ಸತ್ಯವನ್ನು ಅರಿಯಬೇಕಿದೆ. ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಬೇಕು. ನಾವು ಬಳಸುವ ಪ್ರತಿಯೊಂದು ವಸ್ತುವಿನಲ್ಲಿ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಜೈವಿಕವಾಗಿ ವಿಘಟನೆಯಾಗುವ ವಸ್ತುಗಳನ್ನ ಹೆಚ್ಚೆಚ್ಚು ಬಳಸಬೇಕು. ಬಳಸಿದ ವಸ್ತುಗಳನ್ನು ಮರುಬಳಕೆ ಮಾಡಬೇಕು. ಅನಗತ್ಯ ತಿರುಗಾಟ, ಅನಗತ್ಯ ವಿದ್ಯುತ್ ಬಳಕೆ ಇವೆಲ್ಲವೂ ಪರಿಸರ ರಕ್ಷಣೆಯ ಭಾಗ ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಕೇವಲ ಪರಿಸರ ಸಂರಕ್ಷಣೆಯ ಧ್ಯೇಯದೊಂದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಸಾಲದು, ಪರಿಸರ ಸಂರಕ್ಷಣೆ ಕೆಲಸಗಳು ವಿದ್ಯಾರ್ಥಿ ಸಮುದಾಯದಿಂದ ಮೂಡಿಬರಬೇಕು ಎಂದರು ಕಲಾ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿದ್ದು, ಅವುಗಳ ಸದ್ಭಳಕೆಯಾದರೆ ದಕ್ಷಿಣ ಭಾರತದಲ್ಲೂ ಕಲಾ ವಿಭಾಗದ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬಹುದು ಎಂದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ ಇಂದಿನ ಯುಗದಲ್ಲಿ "ಬಳಸಿ-ಬಿಸಾಡುವ’’ ಮನೋಭಾವ ವ್ಯಾಪಕವಾಗಿ ಹೆಚ್ಚುತ್ತಿದೆ. ಈ ಪ್ರವೃತ್ತಿ ಪರಿಸರದ ಮಟ್ಟದಲ್ಲಿ ದೊಡ್ಡ ಸಮಸ್ಯೆಯನ್ನು ಉಂಟುಮಾಡುತ್ತಿದೆ. ಸಂಪನ್ಮೂಲಗಳನ್ನು ಮಿತವಾದ ಬಳಕೆ ಅತ್ಯಗತ್ಯ. ಪ್ಲಾಸ್ಟಿಕ್ ಉತ್ಪಾದನೆ ಕಡಿಮೆಯಾದಾಗ ಬಳಕೆಯೂ ಕಡಿಮೆಯಾಗುತ್ತದೆ. ಭೂಮಿಯೂ ನಮ್ಮ ಅಗತ್ಯಗಳನ್ನು ಈಡೇರಿಸಬಹುದೇ ಹೊರತು ನಮ್ಮ ಅತಿಯಾಸೆಯನ್ನಲ್ಲ. ಪ್ರತಿಯೊಬ್ಬರಲ್ಲೂ ಪರಿಸರ ಸಂರಕ್ಷಣೆಯ ಚಿಂತನೆ ಮೂಡಬೇಕಿದೆ ಎಂದರು. ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕಿ ದಿಶಾ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಶ್ರೀವಲ್ಲಿ ಹಾಗೂ ಸುದರ್ಶಿನಿ ನಿರೂಪಿಸಿದರು. ತೇಜಸ್ವಿನಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಧಿಕಾರಿ ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್. ಉಪನ್ಯಾಸಕಿ ರಕ್ಷಿತಾ ತೋಡಾರ್, ವಿದ್ಯಾರ್ಥಿ ಸಂಯೋಜಕ ಚೇತನ್ ಇದ್ದರು.

ಉಜಿರೆ ಎಸ್.ಡಿ.ಎಂ. ಕಾಲೇಜು ವಾರ್ಷಿಕೋತ್ಸವ

Article Image

ಉಜಿರೆ ಎಸ್.ಡಿ.ಎಂ. ಕಾಲೇಜು ವಾರ್ಷಿಕೋತ್ಸವ

ಉಜಿರೆ, ಮಾರ್ಚ್ 21: ಹೊಸ ಕಾಲದ ಸಂಕೀರ್ಣ ಬಿಕ್ಕಟ್ಟುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವಿಕ ಶೈಕ್ಷಣಿಕ ವಲಯಗಳ ಸಂಯೋಜಿತ ಕಾರ್ಯತಂತ್ರಗಳನ್ನು ಅನ್ವಯಿಸಬೇಕಾದ ಅಗತ್ಯವಿದೆ ಎಂದು ಸುರತ್ಕಲ್‌ನ ಎನ್‌ಐಟಿಕೆಯ ನಿರ್ದೇಶಕರಾದ ಪ್ರೊ. ಬಿ.ರವಿ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು. ವಿಜ್ಞಾನ ಮತ್ತುತಂತ್ರಜ್ಞಾನ ವಲಯಗಳಿಂದಲಷ್ಟೇ ವಿಶ್ವ, ದೇಶ ಮತ್ತು ಪ್ರದೇಶ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬುದು ತಪ್ಪುಕಲ್ಪನೆ. ಮಾನವಿಕ ಶೈಕ್ಷಣಿಕ ವಲಯಗಳವರನ್ನೂ ಒಳಗೊಂಡು ವರ್ತಮಾನದ ಸಂಕೀರ್ಣ ಸಮಸ್ಯೆಗಳನ್ನು ನಿವಾರಿಸುವ ಪ್ರಯತ್ನಗಳಾಗಬೇಕು. ಈ ಬಗೆಯ ಒಳಗೊಳ್ಳುವಿಕೆಯ ಸಂಯೋಜಿತ ಹೊಣೆಗಾರಿಕೆಯ ನಿರ್ವಹಣೆಯಿಂದ ಅನಿಶ್ಚಿತತೆ ಮತ್ತು ಸಂಕೀರ್ಣ ಬಿಕ್ಕಟ್ಟುಗಳಿಂದ ಉಂಟಾಗುವ ಸವಾಲುಗಳನ್ನು ಸಮರ್ಥವಾಗಿಎದುರಿಸಬಹುದುಎಂದರು. ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನ ವಲಯಗಳ ನಡುವೆ ಕೊಡುಕೊಳ್ಳುವಿಕೆ ನಡೆಯಬೇಕು. ಒಂದುಕ್ಷೇತ್ರ ಮತ್ತೊಂದು ಕ್ಷೇತ್ರಕ್ಕೆ ಪೂರಕವಾಗುವ ಜ್ಞಾನದ ಮಾದರಿಗಳನ್ನು ಹಂಚಿಕೊಳ್ಳಬೇಕು.ಈ ವಲಯಗಳ ಜ್ಞಾನಶಿಸ್ತುಗಳ ವಿಶೇಷ ಪರಿಣತಿಯನ್ನು ಆಧರಿಸಿದ ಚರ್ಚೆ, ಸಂವಾದಗಳ ಮೂಲಕ ಜ್ಞಾನವನ್ನು ಸದ್ಯದ ಅಗತ್ಯಗಳಿಗೆ ತಕ್ಕಂತೆ ಅನ್ವಯಿಸುವ ಮಾರ್ಗಗಳು ಹೊಳೆಯುತ್ತವೆ. ಈ ಮೂಲಕ ಭಾರತಕ್ಕೆ ಬೇಕಾದ ಅಭ್ಯುದಯದ ಹಾದಿ ಸುಗಮಗೊಳ್ಳುತ್ತದೆ ಎಂದು ನುಡಿದರು. ಬದ್ಧತೆ, ಸಾಮರ್ಥ್ಯ, ಸೃಜನಶೀಲತೆಯೊಂದಿಗೆ ಗುರುತಿಸಿಕೊಂಡಾಗ ವಿದ್ಯಾರ್ಥಿಗಳು ಕಲಿಕೆಯ ಹಂತದಿಂದಲೇ ವೃತ್ತಿಪರ ವಲಯ ನಿರೀಕ್ಷಿಸುವ ಸಾಮರ್ಥ್ಯವನ್ನು ರೂಢಿಸಿಕೊಳ್ಳಬಹುದು. ಕಲಿಕೆಯ ವಿಷಯಗಳನ್ನಷ್ಟೇ ಅಲ್ಲದೇ ಉಳಿದ ಜ್ಞಾನಶಿಸ್ತುಗಳಿಗೆ ಸಂಬಂಧಿಸಿದ ಅಂಶಗಳನ್ನು ತಿಳಿದುಕೊಳ್ಳುವ ಕುತೂಹಲದೊಂದಿಗೆಇದ್ದರೆ ವಿಶೇಷ ವೃತ್ತಿಪರ ಕೌಶಲ್ಯಗಳನ್ನು ಗಳಿಸಿಕೊಳ್ಳುವುದಕ್ಕೆ¸ ಸಾಧ್ಯವಾಗುತ್ತದೆ.ಕೃತಕ ಬುದ್ಧಿಮತ್ತೆಯಂತಹ ವಿಸ್ತೃತ ತಂತ್ರಜ್ಞಾನದ ಮೇಲೆ ಅವಲಂಬನೆಯಾಗದೇ ವ್ಯಕ್ತಿಗತವಾದ ಜ್ಞಾನಾಧಾರಿತ ಸಾಮರ್ಥ್ಯವನ್ನು ಹೆಚ್ಚು ನೆಚ್ಚಿಕೊಳ್ಳಬೇಕು.ಆಗ ಮಾತ್ರ ಹೊಸ ತಂತ್ರಜ್ಞಾನವನ್ನುಎಚ್ಚರದೊಂದಿಗೆ ಬಳಸಿಕೊಂಡು ನಿರೀಕ್ಷಿತಯಶಸ್ಸು ಗಳಿಸಬಹುದು ಎಂದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು. ಎಸ್. ಡಿ. ಎಂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ, ವಿಶ್ವಮಟ್ಟದಲ್ಲಿ ಹೆಗ್ಗುರುತು ಮೂಡಿಸಿದ್ದಾರೆ. ತಿಳಿದುಕೊಂಡ ಜ್ಞಾನದ ಅಂಶಗಳನ್ನು ಪುನರ್ ಮನನ ಮಾಡಿಕೊಂಡು ಕಲಿಕೆಯಲ್ಲಿ ಮುನ್ನಡೆ ಸಾಧಿಸಬೇಕು. ಹೊಸ ಕಾಲದ ಅಗತ್ಯಗಳಿಗೆ ತಕ್ಕಂತೆ ಸಾಮರ್ಥ್ಯ ರೂಪಿಸಿಕೊಂಡು ಸಾಧನೆಯ ಹೊಸ ಹೆಜ್ಜೆಗಳನ್ನು ಕ್ರಮಿಸಬೇಕು ಎಂದು ಹೇಳಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರಕುಮಾರ್, ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಕಾಲೇಜಿನ ಅಕ್ಯಾಡೆಮಿಕ್ ಸಂಯೋಕರಾದ ಎಸ್.ಎನ್.ಕಾಕತ್ಕರ್, ನಿವೃತ್ತ ಪ್ರಾಶುಂಪಾಲ ಡಾ.ಬಿ.ಎ. ಕುಮಾರ ಹೆಗ್ಡೆ, ನಿವೃತ್ತ ಉಪ ಪ್ರಾಂಶುಪಾಲರಾದ ಡಾ. ಶಲೀಫ್ ಬಿ.ಪಿ, ನಿವೃತ್ತ ಪ್ರಾಧ್ಯಾಪಕರಾದ ಡಾ.ರಾಮಚಂದ್ರ ಪುರೋಹಿತ, ಶಾಂತಿಪ್ರಕಾಶ್, ಬೋಧಕೇತರ ಸಿಬ್ಬಂದಿ ಸದಾನಂದ್ ಬಿ. ಮುಂಡಾಜೆ, ತುಕಾರಾಂ ಸಾಲಿಯಾನ, ಪದವಿ ಹಾಗೂ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರವಣ, ಪ್ರಕೃತಿ, ಮೇಘನಾ, ಮಾರುತಿ ಭಗವಾನ್, ಅಮೀರ್, ಸುದೇಶ್‌ಗೌಡ, ಉಪಸ್ಥಿತರಿದ್ದರು. ನಿವೃತ್ತ ಬೋಧಕರು, ಬೋಧಕೇತರ ಸಿಬ್ಬಂದಿ, ರ‍್ಯಾಂಕ್ ವೀಜೇತರು, ಪಿ.ಹೆಚ್.ಡಿ ಪದವೀಧರ ಅಧ್ಯಾಪಕರು, ವಿಶೇಷ ಸಾಧಕ ಅಧ್ಯಾಪಕರು, ವಿಶೇಷ ಸಾಧಕ ವಿದ್ಯಾರ್ಥಿಗಳು, ಕ್ರೀಡಾ ವಿಭಾಗದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ "ಚಿಗುರು" ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಸ್ವಾಗತಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ನಂದಾಕುಮಾರಿ ವರದಿ ವಾಚನ ಮಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಕುಲಸಚಿವರಾದ ಶ್ರೀಧರ ಎನ್. ಭಟ್ಟ ವಂದಿಸಿದರು. ಡಾ. ನೆಫಿಸತ್ ನಿರೂಪಿಸಿದರು.

ಮೂಡುಬಿದಿರೆ: ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್

Article Image

ಮೂಡುಬಿದಿರೆ: ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್

‘ಶಿಕ್ಷಣ ವ್ಯವಸ್ಥೆಯ ಆರಂಭದಲ್ಲೆ, ಒಬ್ಬ ವ್ಯಕ್ತಿಯಾಗಿ ತನ್ನ ಜೀವನದ ಉದ್ದೇಶವೇನೆಂಬುದನ್ನು ಅರಿಯಬೇಕು’ ಎಂದು ಕೋಟೇಶ್ವರದ ರಾಜಾರಾಮ್ ಪೋಲಿಮರ್ಸ್ ಸಂಸ್ಥೆಯ ಸ್ಥಾಪಕ ಸುರೇಶ್ ಕಾಮತ್ ಹೇಳಿದರು. ಆಳ್ವಾಸ್(ಸ್ವಾಯತ್ತ) ಕಾಲೇಜಿನ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಹಮ್ಮಿಕೊಂಡ ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೀವನದಲ್ಲಿ ಗುರಿಯನ್ನು ಆರಂಭದಲ್ಲೆ ಅರಿಯುವುದು ಉತ್ತಮ. ಪ್ರತಿ ಕೆಲಸದಿಂದ ಬರುವ ಅನುಭವದಿಂದ ಬದುಕನ್ನು ಶ್ರೇಷ್ಠತೆಯೆಡೆಗೆ ಒಯ್ಯುವ ಕೆಲಸವಾಗಬೇಕಿದೆ ಎಂದರು. ಮುಖ್ಯಅತಿಥಿ ನೆಲೆಯಲ್ಲಿ ಮಾತನಾಡಿದ ಯುವ ಪ್ರತಿನಿಧಿ ಮಿಥುನ್ ರೈ, ವೃತ್ತಿಪರ ಜೀವನವನ್ನು ಅತ್ಯುತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಮ್ಯಾನಜ್ಮೆಂಟ್ ಪದವಿ ಸೂಕ್ತ ಆಯ್ಕೆ ಎಲ್ಲವನ್ನು ಪರಿಶ್ರಮದಿಂದ ಕಲಿಯಬೇಕು. ಸವಾಲುಗಳನ್ನು ಎದುರಿಸಿ ಮುನ್ನಡೆಯುವವ ನಿಜವಾದ ನಾಯಕನೆನಿಸಿಕೊಳ್ಳಬಲ್ಲ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ ಅದನ್ನು ತಾವೇ ಗುರುತಿಸಿಕೊಳ್ಳಬೇಕು ಹಾಗೂ ಉಪನ್ಯಾಸಕರು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದರು. ದಶಕಗಳ ಹಿಂದೆ ತಾನು ಪದವಿ ವಿದ್ಯಾರ್ಥಿಯಾಗಿದ್ದಾಗ ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನ ಯಶಸ್ಸನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಏಷ್ಯಾ ಖಂಡದ ಹಲವು ದೇಶಗಳ ಪ್ರತಿನಿಧಿಗಳು ಪಾಲ್ಗೊಂಡು, ಸರ್ವರಿಂದಲೂ ಪ್ರಶಂಸೆಗೆ ಪಾತ್ರವಾದ ಸನ್ನಿವೇಶ ತನ್ನ ಮುಂದಿನ ಬದುಕಿಗೆ ನಾಯಕತ್ವ ವಹಿಸಲು ಸಹಕರಿಯಾದದ್ದನ್ನು ಸ್ಮರಿಸಿದರು. ತನ್ನ ಸಹಪಾಠಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವರ ಕಾಲೇಜು ದಿನಗಳಲ್ಲಿನ ನಾಯಕತ್ವ ಗುಣವನ್ನು ಕೊಂಡಾಡಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಅರಳುವಂತೆ ಮಾಡಲು ಆಳ್ವಾಸ್ ನೀಡುತ್ತಿರುವ ಪ್ರೋತ್ಸಾಹವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇನ್ನೊರ್ವ ಮುಖ್ಯ ಅತಿಥಿ ಹಾಗೂ ಯುವ ಪ್ರತಿನಿಧಿ ನಂದನ್ ಮಲ್ಯ ಮಾತನಾಡಿ, ದೊಡ್ಡ ಕನಸುಗಳನ್ನು ಕಟ್ಟಿಕೊಳ್ಳುವ ಸ್ವಾತಂತ್ರ‍್ಯ ಪ್ರತಿಯೊಬ್ಬರಿಗೂ ಇದೆ. ಕನಸುಗಳನ್ನು ಕಟ್ಟಿಕೊಂಡಲ್ಲಿ ಮಾತ್ರ ಯಶಸ್ಸನ್ನು ಕಾಣುತ್ತೇವೆ. ಸೋಲು ಯಶಸ್ಸಿನ ಭಾಗ, ಹೊರತು ಪ್ರತಿಸ್ಪರ್ಧಿಯಲ್ಲ. ಅವಕಾಶಗಳ ಬಳಸುವಿಕೆಯಲ್ಲಿ ಫಲಿತಾಂಶವನ್ನು ಕಾಣಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಅನುಭವಗಳಿಂದ ಶ್ರೇಷ್ಠ ಪಾಠವನ್ನು ಕಲಿಯಬೇಕು. ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯವಲ್ಲ. ಅದರಿಂದ ಲಭಿಸುವ ಅನುಭವ ಮುಖ್ಯ ಎಂದರು. ಎಂತುಝಿಯಾ ಕೋರ್ಪೊ ಕನೆಕ್ಟ್ ಫಸ್ಟ್ನ ಪೋಸ್ಟರ್ ಬಿಡುಗಡೆ ನಡೆಯಿತು. ಕಾರ್ಯಕ್ರಮದಲ್ಲಿ ಪದವಿ ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ಸುರೇಖಾ ರಾವ್, ಸಂಯೋಜಕಿ ಅಕ್ಷತಾ ಪ್ರಭು, ಸಂಯೋಜಕ ಸುಹಾಸ್ ಶೆಟ್ಟಿ, ವಿದ್ಯಾರ್ಥಿ ಸಂಯೋಜಕ ಪ್ರಾಣೇಶ್ ಶೆಟ್ಟಿ ಮತ್ತು ವಿಧಿತ್ ಜೈನ್ ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಸಾಥ್ವಿಕ್ ಸ್ವಾಗತಿಸಿ, ಸಾಗರ್ ವಂದಿಸಿ, ವಿದ್ಯಾರ್ಥಿನಿ ವೃಂದ ನಿರೂಪಿಸಿದರು.

ವಿದ್ಯಾಗಿರಿ: ವಿಶ್ವ ಕಾವ್ಯ ದಿನ

Article Image

ವಿದ್ಯಾಗಿರಿ: ವಿಶ್ವ ಕಾವ್ಯ ದಿನ

ಆಳ್ವಾಸ್ ಸ್ವಾಯತ್ತ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರದಂದು ಇಂಗ್ಲಿಷ್ ವಿಭಾಗದ ಗ್ಲಿಸನ್ ಸಂಘದ ವತಿಯಿಂದ ವಿಶ್ವ ಕಾವ್ಯ ದಿನವನ್ನು ಆಚರಿಸಲಾಯಿತು. ಕಾರ‍್ಯಕ್ರಮದ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದ ಉಡುಪಿಯ ಶ್ರೀ ಅದಮಾರು ಮಠದ ಶಿಕ್ಷಣ ಸಮೂಹಗಳ ಉಪ ಆಡಳಿತಾಧಿಕಾರಿ ಪುಂಡರಿಕಾಕ್ಷ ಕೊಡಂಚ, ಕಾವ್ಯವು ನಮ್ಮ ಸಂಸ್ಕೃತಿಯ ಮಹತ್ವಪೂರ್ಣ ಅಂಗ. ಆ ಮೂಲಕ ನಮ್ಮ ಭಾವನೆ ಹಾಗೂ ಅನುಭವಗಳನ್ನು ವ್ಯಕ್ತಪಡಿಸಲು ಸಹಕಾರಿಯಾಗಿದೆ. ಕಾವ್ಯ ದಿನವನ್ನು ಆಚರಿಸುವುದರ ಮೂಲಕ ಮಹಾನ್ ಕವಿಗಳ ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಹೊಸ ಬರಹಗಾರರಿಗೆ ಪ್ರೇರಣೆಯಾಗಲು ಸಹಾಯ ಮಾಡುತ್ತದೆ ಎಂದರು. ತಾರ್ಕಿಕವಾಗಿ ಯೋಚಿಸಿ ಮತ್ತು ಸಾಮಾನ್ಯ ಜ್ಞಾನವನ್ನು ಬಳಸಿದರೆ ಯಾರೂ ಬದುಕಿನಲ್ಲಿ ಪ್ರಮಾದವನ್ನೆಸಗಲಾರರು. ತಾರ್ಕಿಕ ಯೋಚನೆಯುಳ್ಳ ವ್ಯಕ್ತಿಗೆ ಅವಕಾಶಗಳು ವಿಫುಲವಾಗಿರುತ್ತವೆ ಎಂದು ಸಲಹೆ ನೀಡಿದರು. ಸುಂದರವಾದ ಭೂಮಿಯನ್ನು ಉಳಿಸಬೇಕು. ಅದು ನಮ್ಮ ಆಸೆಗಳನ್ನು ಪೂರೈಸ ಬಲ್ಲದೇ ಹೊರತು, ನಮ್ಮ ದುರಾಸೆಯನ್ನಲ್ಲ ಎಂದರು. ನಂತರ ಗ್ಲಿಸನ್ ಸಂಘದ ವತಿಯಿಂದ ಆಯೋಜಿಸಲಾದ ಕಾವ್ಯ ವಾಚನ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಬಿಎಸ್ಸಿಯ ಮೇಘಾ ಡಿವಿ ಪ್ರಥಮ ಸ್ಥಾನ ಪಡೆದರೆ, ಎಫ್‌ಎನ್ಡಿಯ ಪ್ರೇರಣಾ ಜೈನ್ ದ್ವಿತೀಯ, ಬಿಎಯ ಸಮೀಕ್ಷಾ ರಾವ್ ತೃತೀಯ ಸ್ಥಾನ ಪಡೆದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚಾರ‍್ಯ ಡಾ. ಕುರಿಯನ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗದ ಮುಖ್ಯಸ್ಥೆ ಸಂಧ್ಯಾ ಕೆ.ಎಸ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಮಚೇಂದ್ರ ಬೆಲ್ಕಿ, ಗ್ಲಿಸನ್ವೇ ದಿಕೆಯ ಸಂಯೋಜಕರಾದ ಹರ್ಷಿಣಿ ಪಿಂಟೋ ಹಾಗೂ ಸುಮಂತ್ ಇದ್ದರು. ಶ್ರಾವ್ಯ ಶೆಟ್ಟಿ ಸ್ವಾಗತಿಸಿ, ದಿಶಾ ಕೋಟ್ಯಾನ್ ವಂದಿಸಿ, ಸಮೀಕ್ಷಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನಲ್ಲಿ ಅಂತರ್ ಕಾಲೇಜು ಖೋ-ಖೋ ಟೂರ್ನಮೆಂಟ್

Article Image

ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನಲ್ಲಿ ಅಂತರ್ ಕಾಲೇಜು ಖೋ-ಖೋ ಟೂರ್ನಮೆಂಟ್

ವಿದ್ಯಾಗಿರಿ: ದೇಸಿ ಕ್ರೀಡೆ ಖೋ-ಖೋ ಎಲ್ಲಾ ಕ್ರೀಡೆಗಳಿಗೆ ಅಡಿಪಾಯವಿದ್ದಂತೆ. ಈ ಆಟವನ್ನು ಪ್ರೋತ್ಸಾಹಿಸುವ ಮೂಲಕ, ಯುವ ಜನತೆಯಲ್ಲಿ ಶಾರೀರಿಕ ಹಾಗೂ ಮಾನಸಿಕ ಸಿದ್ಧತೆಯನ್ನು ಹೆಚ್ಚಿಸಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಡಿʼಸೋಜಾ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾ ಮನೋಭಾವ ನಮ್ಮನ್ನು ಈ ಕ್ಷೇತ್ರದಲ್ಲಿ ಹೆಚ್ಚಿನದ್ದನ್ನು ಸಾಧಿಸಲು ಸಹಕಾರಿಯಾಗುತ್ತದೆ. ಅಂತರ್ ಕಾಲೇಜು ಪಂದ್ಯಾಟವು ಎಲ್ಲಾ ಕ್ರೀಡಾಳುಗಳನ್ನು ಒಟ್ಟು ಗೂಡಿಸುವ ಉದ್ದೇಶ ಹೊಂದಿರುತ್ತದೆ. ಪ್ರತಿಯೊಬ್ಬರೂ ಅವರವರ ಕ್ರೀಡಾ ಶಕ್ತಿಯ ಅನುಸಾರ ಪ್ರದರ್ಶನ ನೀಡಬೇಕು ಎಂದರು. ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹಿಂದೆಲ್ಲ ದೇಸಿ ಕ್ರೀಡೆಯಾದ ಖೋ-ಖೋ ಆಟವು ಗ್ರಾಮೀಣ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾಗಿತ್ತು. ಆದರೆ, ಇಂದು ಕ್ರೀಡೆಯಲ್ಲಿನ ಬೆಳವಣಿಗೆಯು ದೇಸಿ ಕ್ರೀಡೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗಳಿಸುವತ್ತ ಕೊಂಡೊಯ್ಯುತ್ತಿರುವುದು ಬಹಳ ಹೆಮ್ಮೆ ಮತ್ತು ಸಂತಸದ ಸಂಗತಿ ಎಂದರು. ಕ್ರೀಡಾ ಕ್ಷೇತ್ರಕ್ಕೆ ಮಂಗಳೂರು ವಿಶ್ವವಿದ್ಯಾಲಯ ನೀಡುತ್ತಿರುವ ಪ್ರೋತ್ಸಾಹ, ಸಹಕಾರ ಸದಾ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರೀಡಾಪಟುಗಳಿಗೆ, ಕ್ರೀಡಾ ಪೋಷಕರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ದೊರಕುವಂತಾಗಲಿ ಎಂದು ಆಶಿಸಿದರು. ಖೋ-ಖೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಸಂಸ್ಥೆಯ ಪ್ರತಿಭಾನ್ವಿತ ಕ್ರೀಡಾಪಟುಗಳಾದ ಮರಿಯಪ್ಪ, ದಿವ್ಯ ಕೆ ಆರ್ ಮತ್ತು ನಿಖಿಲ್ ಬಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ, ಪ್ರಸನ್ನ ಕುಮಾರ್ ಬಿ ಕೆ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ ಮಧು ಜಿ ಆರ್ ಇದ್ದರು. ಅಂತರ್ ಕಾಲೇಜು ಖೋ-ಖೋ ಟೂರ್ನಮೆಂಟ್‌ನಲ್ಲಿ ಪುರುಷರ ವಿಭಾಗದಿಂದ 18 ತಂಡ ಮತ್ತು ಮಹಿಳೆಯರ ವಿಭಾಗದಿಂದ 18 ತಂಡಗಳು ಭಾಗವಹಿಸಿದ್ದವು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ನಿರೂಪಿಸಿ, ದೈಹಿಕ ಶಿಕ್ಷಣ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ ಉದಯಕುಮಾರ್ ವಂದಿಸಿದರು.

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ ವೆಂಚುರ- 2025

Article Image

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ ವೆಂಚುರ- 2025

ಉಜಿರೆ, ಮಾ. 15: ಪ್ರತಿಯೊಂದು ವಿಚಾರವನ್ನು ನೇರವಾಗಿ ಒಪ್ಪದೇ ಅದನ್ನು ಪ್ರಶ್ನಿಸುವ ಅಭ್ಯಾಸ ಬೆಳೆಸಿಕೊಂಡಾಗ ಕ್ರಿಯಾಶೀಲತೆ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ಅಮೆಜಾನ್ ಡೆವಲಪ್ ಮೆಂಟ್ ಸೆಂಟರ್ನ ರಿಸ್ಕ್ ಇನ್ವೆಸ್ಟಿಗೇಷನ್ ಮ್ಯಾನೇಜರ್ ದೀಪಕ್ ರಾಜ್ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ವಾಣಿಜ್ಯ ಮತ್ತು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗಗಳ ಆಶ್ರಯದಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ (ಸಿ.ಸಿ.ಎ.) ಇಂದು (ಮಾ. 15) ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ 'ವೆಂಚುರ- 2025' ಉದ್ಘಾಟಿಸಿ ಅವರು ಮಾತನಾಡಿದರು. "ಪ್ರತಿಯೊಂದು ವಿಚಾರದಲ್ಲೂ ಏನು ಮತ್ತು ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ನಮ್ಮಲ್ಲಿರಬೇಕು. ಆ ಸ್ಪಷ್ಟತೆ ಇದ್ದರೆ ಮಾತ್ರ ಯಶಸ್ಸು ನಮ್ಮದಾಗುತ್ತದೆ. ಪ್ರಪಂಚವು ಅನ್ವೇಷಕರನ್ನು (Inventors) ಸದಾ ನೆನಪಿನಲ್ಲಿ ನೆನಪಿಟ್ಟುಕೊಳ್ಳುತ್ತದೆ. ಹಾಗಾಗಿ ಕುತೂಹಲ ಇರುವ ಮನಸ್ಸುಗಳು ಮಾತ್ರ ಇನ್ವೆಂಟರ್ ಆಗಲು ಸಾಧ್ಯ. ಪ್ರತೀ ದಿನ 5 ನಿಮಿಷ ನಮ್ಮನ್ನು ಅವಲೋಕನ ಮಾಡಲು ಸಮಯ ನೀಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ನಮ್ಮನ್ನು ನಾವು ಅರಿತುಕೊಳ್ಳಬೇಕು" ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ)ದ ಸಂಯೋಜಕ ಗಜಾನನ ಆರ್. ಭಟ್ ಮಾತನಾಡಿ, "ವಾಣಿಜ್ಯ ಮತ್ತು ಉದ್ಯಮ ಎನ್ನುವುದು ಎಲ್ಲಾ ಅಪಾಯಗಳ ವಿರುದ್ಧ ಹೋರಾಡುವುದನ್ನು ಕಲಿಸುವ ಪ್ರಪಂಚವಾಗಿದೆ. ಉದ್ಯಮಿಗಳು ಈ ದೇಶವನ್ನು ನಿರ್ಮಾಣ ಮಾಡುವವರು. ಹಣ ಎನ್ನುವುದು ನಮಗೆ ಹೂಡಿಕೆ, ಗಳಿಸುವಿಕೆಯನ್ನು ಕಲಿಸುತ್ತದೆ" ಎಂದರು. ಇದೇ ಸಂದರ್ಭದಲ್ಲಿ, ಕಾಲೇಜಿನ ವಾಣಿಜ್ಯ ನಿಕಾಯದ ಡೀನ್, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗ ಮುಖ್ಯಸ್ಥೆ ಶಕುಂತಲಾ ಅವರಿಗೆ ನಿವೃತ್ತ ಪ್ರಾಂಶುಪಾಲ ಡಾ. ಉದಯಚಂದ್ರ ಪಿ.ಎನ್. ಅವರು ಸಂಶೋಧನೆಗೆ ನೆರವಾಗಲು ಪ್ರೋತ್ಸಾಹಧನ ನೀಡಿದರು. ಫೆಸ್ಟ್ ಅಂಗವಾಗಿ ಆಯೋಜಿಸಿದ್ದ ಅಂತರ್ ತರಗತಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಿ.ಎಸ್.ಇ.ಇ.ಟಿ. ಮತ್ತು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ., ಕಾರ್ಯಕ್ರಮ ಸಂಯೋಜಕರಾದ ವಿನುತಾ ಡಿ.ಎಂ. ಮತ್ತು ಗುರುರಾಜ್ ಜಿ., ಸಿ.ಸಿ.ಎ. ಸಿಇಒ ದೀಕ್ಷಿತಾ, ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ವಿವಿಧ ಕಾಲೇಜುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶಕುಂತಲಾ ಸ್ವಾಗತಿಸಿದರು. ಕ್ಷಿತಿ ಮತ್ತು ತಂಡ ಪ್ರಾರ್ಥಿಸಿದರು. ಸಿ.ಸಿ.ಎ. ಕಾರ್ಯದರ್ಶಿ ಸಹನಾ ಡೋಂಗ್ರೆ ವಂದಿಸಿದರು. ಸುಶ್ಮಿತಾ ಬಿ., ಜಯಸೂರ್ಯ ನಾಯಕ್, ಕ್ಷಿತಿ ಕೆ. ರೈ, ಐಶ್ರೀ ಕೆ., ಶರ್ಮಿಳಾ ಎಂ.ಆರ್., ಭೂಮಿಕಾ ಕೆ.ಎಲ್. ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟ

Article Image

ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟ

ಮೂಡುಬಿದಿರೆ: ಕುಂದಾಪುರದ ಭಂಡಾರಕರ‍್ಸ್ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಹಿಳಾ ಮತ್ತು ಪುರುಷರ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಮಹಿಳಾ ತಂಡವು ಒಟ್ಟು 6 ಚಿನ್ನ, 2 ಬೆಳ್ಳಿ ಪದಕ ಪಡೆದು ಒಟ್ಟು 58 ಅಂಕ ಪಡೆದು ಈ ಸಾಧನೆ ಮೆರೆದಿದೆ. ಪುರುಷರ ವಿಭಾಗವು 4 ಚಿನ್ನ, 4 ಬೆಳ್ಳಿ, 1 ಕಂಚಿನ ಪದಕ ಗಳಿಸಿ ಒಟ್ಟು 55 ಅಂಕಗಳೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. 55ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕಾಲೇಜಿನ ಪ್ರಶಾಂತ್ ‘’ಬೆಸ್ಟ್ ಲಿಫ್ಟರ್’ ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು. ಪುರುಷರ ವಿಭಾಗದಲ್ಲಿ ಪ್ರಶಾಂತ್, ಸಂತೋಷ್, ಪ್ರತ್ಯೂಶ್, ಜೋಸುವ ರಾಜ್‌ಕುಮಾರ್ ಚಿನ್ನದ ಪದಕ ಪಡೆದರೆ, ನಾಗರಾಜ್, ನಾಗೇಂದ್ರ ಅಣ್ಣಪ್ಪ, ದರ್ಶನ್, ಶಶಾಂಕ್ ಬೆಳ್ಳಿ ಪದಕ ಪಡೆದರು. ಮಹಿಳಾ ವಿಭಾಗದಲ್ಲಿ ಶ್ರಾವ್ಯ, ಸೀಮಾ, ಅನುಷಾ, ತನುಷಾ, ವಿತಶ್ರೀ, ದಿವ್ಯಾ ಚಿನ್ನದ ಗಳಿಸಿದರೆ, ಮಲ್ಲಮ್ಮ, ನಾಗಶ್ರೀ ಬೆಳ್ಳಿ ಪದಕ ಮಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

First Previous

Showing 2 of 6 pages

Next Last