Article Image

ರತ್ನಮಾನಸದಲ್ಲಿ ಪ್ರವೇಶದ್ವಾರ ಉದ್ಘಾಟನೆ

Article Image

ರತ್ನಮಾನಸದಲ್ಲಿ ಪ್ರವೇಶದ್ವಾರ ಉದ್ಘಾಟನೆ

ಜೀವನಶಿಕ್ಷಣ ನೀಡುವ ಉಜಿರೆಯ ರತ್ನಮಾನಸ ವಿದ್ಯಾರ್ಥಿನಿಲಯದ ಪ್ರವೇಶದ್ವಾರವನ್ನು ಬುಧವಾರ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ರತ್ನಮಾನಸ ವಿದ್ಯಾರ್ಥಿ ನಿಲಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣದ ಜೊತೆಗೆ ಕೃಷಿ, ಹೈನುಗಾರಿಕೆ, ಅಡುಗೆ ಮಾಡುವುದು, ತರಕಾರಿ ಬೆಳೆಸುವುದು, ಲೆಕ್ಕಪತ್ರ ನಿರ್ವಹಣೆ, ಕ್ಷೌರ ಮಾಡುವುದು, ನಾಯಕತ್ವ, ಸಮಾಜ ಸೇವೆ ಇತ್ಯಾದಿ ವಿಷಯಗಳಲ್ಲಿ ಸೂಕ್ತ ಮಾಹಿತಿ, ಮಾರ್ಗದರ್ಶನ, ಪ್ರಾತ್ಯಕ್ಷಿಕೆ ಹಾಗೂ ತರಬೇತಿ ನೀಡಲಾಗುತ್ತದೆ. ತನ್ಮೂಲಕ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದರು. ಧರ್ಮಸ್ಥಳಕ್ಕೆ ಬಂದ ಗಣ್ಯರನ್ನು ಉಜಿರೆಯಲ್ಲಿರುವ ಸಿದ್ಧವನ ಗುರುಕುಲ ಮತ್ತು ರತ್ನಮಾನಸಕ್ಕೆ ವೀಕ್ಷಣೆಗೆ ಕಳುಹಿಸಿ ಎಲ್ಲರೂ ಬಾಲಕರ ಚಟುವಟಿಕೆಗಳನ್ನು ಕಂಡು ಶ್ಲಾಘಿಸಿದ್ದಾರೆ ಎಂದರು. ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಸಲ್ಪಡುವ ಎಲ್ಲಾ ಪ್ರೌಢಶಾಲೆಗಳು ಶೇ. ನೂರು ಫಲಿತಾಂಶ ಪಡೆದ ಬಗ್ಗೆ ಅವರು ವಿಶೇಷ ಅಭಿನಂದನೆ ಸಲ್ಲಿಸಿದರು. ಸುಪ್ರಿಯಾ ಹರ್ಷೇಂದ್ರ ಕುಮಾರ್ ಶುಭ ಹಾರೈಸಿದರು. ಅಖಿಲ ಭಾರತ ಮಟ್ಟದಲ್ಲಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ರತ್ನಮಾನಸದ ಹಿರಿಯ ವಿದ್ಯಾರ್ಥಿ ಶ್ಯಾಂ ಪ್ರಸಾದ್ ಅವರನ್ನು ಗೌರವಿಸಲಾಯಿತು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಐ.ಟಿ. ವಿಭಾಗದ ಸಿ.ಇ.ಒ. ಪೂರನ್‌ವರ್ಮ ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರೀತಂ ಸ್ವಾಗತಿಸಿದರು. ನಿಶಿತ್ ಧನ್ಯವಾದವಿತ್ತರು. ಹಿರಿಯ ವಿದ್ಯಾರ್ಥಿ ಶ್ಯಾಂ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

ಎಕ್ಸಲೆಂಟ್, ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ ಅಭೂತಪೂರ್ವ ಫಲಿತಾಂಶ

Article Image

ಎಕ್ಸಲೆಂಟ್, ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ ಅಭೂತಪೂರ್ವ ಫಲಿತಾಂಶ

ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2024ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ನಿಖಿಲ್ ಬಿ. ಗೌಡ 710 ಅಂಕ ಪಡೆದು ರಾಷ್ಟ್ರ ಮಟ್ಟದಲ್ಲಿ 383ನೇ ರ‍್ಯಾಂಕ್ ಪಡೆದು ಅತ್ಯುನ್ನತ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಸೂರಜ್ ಕೂಡಲಗಿಮಠ-687, ನಿಶಾಂತ್ ಪಿ.ಹೆಗಡೆ-685, ಶಿಶಿರ ಬಿ.ಇ.-685, ಭಾರ್ಗವಿ ಎಂ.ಜೆ.-680, ಸೃಜನ್ ಎಂ.ಆರ್.-680, ಶಶಿಭೂಷಣ-676, ಗೌರವ ಭಾರದ್ವಾಜ್-675, ರಿತೀಶ್ ಎಂ.-671, ರೋಹಿತ್ ಗೌಡ-671, ಹರ್ಶಿತ್ ಡಿ.-666, ಸುಹಾಸ್ ಎಂ.ಎಸ್.-665, ವಿಷ್ಣುಪ್ರಸಾದ್ ಎಸ್.ಆರ್.-656, ಸಮರ್ಥ ಸಮ್ಯಮ್ ರಾಮಕೃಷ್ಣ-655, ಶಶಾಂಕ್ ಎಂ.-655, ಚಿನ್ಮಯ್‌ರಾಜ್ ಎಂ.ಎಸ್.-650, ಶ್ರೀಶೈಲ-650, ಶ್ರಾವ್ಯಾ ಡೋಂಗ್ರೆ-648, ತನುಶ್ರೀ ಎಸ್.ಕಲ್ಕೋಟಿ-643, ಶ್ರೆಯಸ್ ಎಸ್.ಮಾಲಿ-642, ಭೀಮಶಂಕರ-638, ಪವನ್ ಜಿ. ಎಸ್.-637, ಕಾರ್ತಿಕ್ ಎಂ.-636, ಶಶಾಂಕ್ ಎಸ್.ಎಸ್.-636, ಸಂಗಮೇಶ್-636, ರೋಶನ್-633, ಸಾಕ್ಷಿತ್ ಎನ್.ಎಸ್.ಗೌಡ-633, ವರ್ಷಾ ಬಡಿಗೇರ್-632, ಮೋಹನ್ ಗೌಡ-630, ಕೆ.ಜಿ. ಪ್ರಣವ್ ಕಶ್ಯಪ್-627, ಚಿರಂತನ್ ಹೆಚ್.ಆರ್.-626, ಸಚೀಂದ್ರ ಆರ್.-625, ಅಂಕುಶ್ ಬಿ.ಎಂ.-625, ಆದಿತ್ಯ ಜೆ.ಬಿ.-623, ಸೃಷ್ಟಿ ಲಕ್ಷ್ಮಣ-623, ಮಂಜುನಾಥ ಎಸ್.-620, ಪಿ.ಆಕಾಶ್ ರೆಡ್ಡಿ-619, ಪ್ರಕೃತಿ ಸಿ.-615, ಆಶ್ರಯಾ ಪಿ.-614, ಶ್ರೀತೇಜ್ ಎಸ್.-614, ಗಿರಿ ತೇಜಸ್ವಿ ಟಿ.-610, ವಿನೋದ್ ರೆಡ್ಡಿ ಪಾಟೀಲ್-607, ಹಿತೇಶ್ ವೈಷ್ಣವ್-605, ಅನಿರುದ್ಧ ಎನ್.ಎಂ.-602, ಗಾಯತ್ರಿ ಮುಕುಂದ್ ಮೊಗೇರ್-602, ಮನೋಜ್ ಬಿ.ಎಲ್.-602, ಕವನಾ ಪಾಟೀಲ್ ಜಿ.ಬಿ.-601, ಸುಹಾಸ್ ಜಿ.-601, ಕರಿಬಸಪ್ಪ ಯಲಿಗಾರ್-600, ಶರಧಿ ಬಿ.ಎಸ್.-600 ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದು ಅರ್ಹತೆ ಗಳಿಸಿರುತ್ತಾರೆ. 17 ವಿದ್ಯಾರ್ಥಿಗಳು 650ಕ್ಕಿಂತ ಹೆಚ್ಚಿನ ಅಂಕ, 50 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚಿನ ಅಂಕವನ್ನು ಗಳಿಸಿರುತ್ತಾರೆ. 105 ವಿದ್ಯಾರ್ಥಿಗಳು 550ಕ್ಕಿಂತಲೂ ಹೆಚ್ಚಿನ ಅಂಕ, 152 ವಿದ್ಯಾರ್ಥಿಗಳು 500ಕ್ಕಿಂತ ಹೆಚ್ಚಿನ ಅಂಕ, 186 ವಿದ್ಯಾರ್ಥಿಗಳು 450ಕ್ಕಿಂತ ಹೆಚ್ಚಿನ ಅಂಕ, 211 ವಿದ್ಯಾರ್ಥಿಗಳು 400ಕ್ಕಿಂತ ಹೆಚ್ಚಿನ ಅಂಕಗಳಿಸುವ ಮೂಲಕ ಎಕ್ಸಲೆಂಟ್ ಸಂಸ್ಥೆಯ ಸ್ಪರ್ಧಾತ್ಮಕ ಮತ್ತು ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ನೀಟ್ ಸಂಯೋಜಕ ಡಾ ಪ್ರಶಾಂತ್ ಹೆಗಡೆ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಸಿಇಟಿ ಫಲಿತಾಂಶ: ಎಕ್ಸಲೆಂಟ್ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Article Image

ಸಿಇಟಿ ಫಲಿತಾಂಶ: ಎಕ್ಸಲೆಂಟ್ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ನಿಖಿಲ್ ಬಿ. ಗೌಡ ವೆಟರ್ನರಿ ಮತ್ತು ನರ್ಸಿಂಗ್‌ನಲ್ಲಿ ರಾಜ್ಯಕ್ಕೆ 8 ನೇ ರ‍್ಯಾಂಕ್, ಬಿಫಾರ್ಮಾ ಮತ್ತು ಡಿಫಾರ್ಮಾಗಳಲ್ಲಿ 10ನೇ ರ‍್ಯಾಂಕ್, ಬಿಎನ್‌ವೈಎಸ್‌ನಲ್ಲಿ 31ನೇ ರ‍್ಯಾಂಕ್, ಅಗ್ರಿಕಲ್ಚರಲ್‌ನಲ್ಲಿ 108ನೇ ರ‍್ಯಾಂಕ್ ಪಡೆದಿರುತ್ತಾನೆ. ಶ್ರೀ ಶೈಲ ಅಗ್ರಿಕಲ್ಚರಲ್ (ಪಿ) ಮತ್ತು ವೆಟರ್ನರಿ(ಪಿ) 2ನೇ ರ‍್ಯಾಂಕ್, ನಿಶಾಂತ್ ಪಿ. ಹೆಗಡೆ ವೆಟರ್ನರಿ 54ನೇ ರ‍್ಯಾಂಕ್, ನರ್ಸಿಂಗ್ 54, ಅಗ್ರಿಕಲ್ಚರಲ್ 59, ಬಿಎನ್‌ವೈಎಸ್ 61, ಬಿಫಾರ್ಮಾ ಮತ್ತು ಡಿಫಾರ್ಮಾ 89ನೇ ರ‍್ಯಾಂಕ್ ಪಡೆದಿರುತ್ತಾರೆ. ಅದೇ ರೀತಿ ಭಾರ್ಗವಿ ಎಂ. ಜೆ., ಸೃಜನ್ ಎಂ. ಆರ್, ಶಿಶಿರ ಬಿ. ಇ., ರೋಹನ್ ಎಸ್, ಶಶಾಂಕ್ ಎಂ., ಸುಹಾಸ್ ಎಂ. ಎಸ್, ಸಮರ್ಥ ಸಮ್ಯಮ್, ಸಂಜಯ್ ಬಿರಾದಾರ್ ಅತ್ಯುತ್ತಮ ಅಂಕಗಳೊಂದಿಗೆ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ 11 ರ‍್ಯಾಂಕ್, ಐದುನೂರರ ಒಳಗೆ 44 ರ‍್ಯಾಂಕ್, ಸಾವಿರದ ಒಳಗೆ 92 ರ‍್ಯಾಂಕ್‌ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಉಪಪ್ರಾಂಶುಪಾಲ, ಸಿಇಟಿ ಸಂಯೋಜಕ ಮತ್ತು ಭೌತಶಾಸ್ತ್ರ ಉಪನ್ಯಾಸಕ ಮನೋಜ್ ಕುಮಾರ್ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಎಕ್ಸಲೆಂಟ್: ಎನ್ ಸಿ ಸಿ ನೌಕದಳ ಎಕ್ಸಲೆಂಟ್ ವಿದ್ಯಾರ್ಥಿ ಬೆಸ್ಟ್ ಕೆಡೆಟ್

Article Image

ಎಕ್ಸಲೆಂಟ್: ಎನ್ ಸಿ ಸಿ ನೌಕದಳ ಎಕ್ಸಲೆಂಟ್ ವಿದ್ಯಾರ್ಥಿ ಬೆಸ್ಟ್ ಕೆಡೆಟ್

ಮಂಗಳೂರಿನ KARNATAKA NAVAL UNIT ಇದರ ಸಹಭಾಗಿತ್ವದಲ್ಲಿ ಉಡುಪಿಯ ಎಂ.ಐ.ಟಿ ಕ್ಯಾಂಪಸ್‌ನಲ್ಲಿ ನಡೆದ CATS NAVY CAMPನಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಯಶಸ್ ಜಿ. ಜೂನಿಯರ್ ವಿಭಾಗದ ಬೆಸ್ಟ್ ಕೆಡೆಟ್(JD) ಹಾಗೂ ಶ್ರಾವಣಿ ಎ. ಗುರುಸ್ವಾಮಿ(JW) ಸೆಕೆಂಡ್ ಬೆಸ್ಟ್ ಕೆಡೆಟ್‌ಗಳಾಗಿ ಹೊರಹೊಮ್ಮಿದ್ದಾರೆ. ಕ್ಯಾಂಪ್‌ನಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಸಂಗೀತ, ಕ್ರೀಡೆ, ಪರೇಡ್ ಇತ್ಯಾದಿ ಚಟುವಟಿಕೆಗಳಲ್ಲಿ ಬಹುಮಾನ ಗಳಿಸಿಕೊಂಡು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಕೇರ್‌ಟೇಕರ್ ಆಫೀಸರ್ ರೇಣುಕಾಚಾರ್ಯ ಅಭಿನಂದಿಸಿದ್ದಾರೆ.

ಶುಶ್ರೂಷಕಿಯರ ಸಪ್ತಾಹ ಆಚರಣೆ

Article Image

ಶುಶ್ರೂಷಕಿಯರ ಸಪ್ತಾಹ ಆಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಮತ್ತು ಎಸ್.ಡಿ.ಎಂ. ಆಸ್ಪತ್ರೆಯ ನರ್ಸಿಂಗ್ ಸೇವಾ ವಿಭಾಗದಿಂದ ಶುಶ್ರೂಷಕಿಯರ ಸಪ್ತಾಹ “ಉತ್ಕರ್ಷ 2024” ಅನ್ನು ಮೇ 13 ರಿಂದ 20ರ ವರೆಗೆ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶುಶ್ರೂಷಕಿಯರಿಗೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಂಗೋಲಿ ಸ್ಪರ್ಧೆ, ರಸಪ್ರಶ್ನೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಶುಶ್ರೂಷಕಿಯರ ಸಪ್ತಾಹವನ್ನು ಉದ್ಘಾಟಿಸಿದರು. ಶುಶ್ರೂಷಕಿಯರ ಸಪ್ತಾಹದ ಅಂಗವಾಗಿ ಮೇ 20 ರಂದು ಶುಶ್ರೂಷಕಿಯರ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಸಮಾರೋಪ ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಶ್ರೀಮತಿ ಪದ್ಮಲತಾ ನಿರಂಜನ್ ಅವರು ಆಗಮಿಸಿ ನರ್ಸಿಂಗ್‌ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮತ್ತು ನರ್ಸಿಂಗ್‌ನಲ್ಲಿ ಉತ್ತಮ ಸೇವೆ ನೀಡಿದ ಶುಶ್ರೂಷಕಿಯರಿಗೆ ಸ್ಮರಣಿಕೆ ಮತ್ತು ಚಿನ್ನದ ಪದಕಗಳನ್ನು ನೀಡಿ ಸನ್ಮಾನಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ: ಶುಶ್ರೂಷಕಿಯವರ ಸ್ಪರ್ಶವು ರೋಗಿಗಳನ್ನು ವೇಗವಾಗಿ ಮತ್ತು ಉತ್ತಮವಾಗಿ ಗುಣಪಡಿಸುತ್ತದೆ. ಶುಶ್ರೂಷಕಿಯವರು ಕಾಲಕ್ಕೆ ಅಣುಗುಣವಾಗಿ ತಮ್ಮ ಜ್ಞಾನವನ್ನು ನವೀಕರಿಸಬೇಕು. ಶುಶ್ರೂಷಕಿಯವರು ಸಣ್ಣ ಕೆಲಸಗಳನ್ನು ಉತ್ತಮವಾಗಿ ಮಾಡುವ ಮೂಲಕ ಶ್ರೇಷ್ಠರಾಗುತ್ತಾರೆ. ಶುಶ್ರೂಷಕಿಯರಿಗೆ ಪ್ರಪಂಚದಾದ್ಯಂತ ಸಾಕಷ್ಟು ಬೇಡಿಕೆಯಿದೆ, ಆದ್ದರಿಂದ ವೃತ್ತಿ ಪ್ರಗತಿ ಮತ್ತು ಉತ್ಕೃಷ್ಟತೆಯು ಮುಖ್ಯವಾಗಿದೆ. ವಿದೇಶಗಳಲ್ಲಿ ಸೇವೆ ಸಲ್ಲಿಸಲು ಶುಶ್ರೂಷಕಿಯರು ವಿವಿಧ ಭಾಷೆಗಳನ್ನು ಕಲಿಯಬೇಕು. ಹಿರಿಯ ಪ್ರಾಧ್ಯಾಪಕರಾದ ಡಾ. ಗಂಗಾಬಾಯಿ ಕುಲಕರ್ಣಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಾ. ಪ್ರಸನ್ನ ದೇಶಪಾಂಡೆ, ಅತಿಥಿಗಳನ್ನು ಸ್ವಾಗತಿಸಿದರು. ಡಾ. ನಾಗೇಶ ಅಜ್ಜವಾಡಿಮಠ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ನಾನ್ಸಿ ಮೇರಿ ಕಾರ್ಯಕ್ರಮವನ್ನು ನಿರೂಪಿಸಿದರು. ಮಂಜುಳಾ ಕೆ.ಬಿ. ವಂದನಾರ್ಪಣೆ ಸಲ್ಲಿಸಿದರು. ಸಭಾ ಕಾರ್ಯಕ್ರಮದ ನಂತರ ಶುಶ್ರೂಷಕಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬೆಂಗಳೂರು: ಜೂನ್ 14ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-2

Article Image

ಬೆಂಗಳೂರು: ಜೂನ್ 14ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-2

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಿದ್ದ ಪರೀಕ್ಷೆಯನ್ನು ಜೂನ್ 14ರಿಂದ 22ರವರೆಗೆ ನಡೆಸುವುದಾಗಿ ಘೋಷಿಸಲಾಗಿದೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಜೂನ್ 14ಕ್ಕೆ ಪರೀಕ್ಷೆ ಮುಗಿಯಬೇಕಿತ್ತು. ಆದರೆ, ಪರಿಹಾರ ಬೋಧನಾ ಅವಧಿ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪಡೆದು ಶಿಕ್ಷಕರು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ: ಜೂನ್ 14-ಕನ್ನಡ, ಜೂನ್ 15-ಹಿಂದಿ NSQF, ಜೂನ್ 18-ಗಣಿತ, ಜೂನ್ 20-ವಿಜ್ಞಾನ, ಜೂನ್ 21-ಇಂಗ್ಲಿಷ್, ಜೂನ್ 22 -ಸಮಾಜವಿಜ್ಞಾನ.

ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ

Article Image

ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ

ಮಂಗಳೂರು: ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ಡಿಪ್ಲೊಮಾ ಇನ್ ‘ಟೂಲ್ ಆ್ಯಂಡ್ ಡೈ ಮೇಕಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳು, ಡಿಪ್ಲೊಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಟರಿಂಗ್ ವಿಭಾಗದಲ್ಲಿ 30 ವಿದ್ಯಾರ್ಥಿಗಳು, ಹಾಗೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮಿಷಿನ್ ಲರ್ನಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಕೋರ್ಸುಗಳ ಅಧ್ಯಯನ ಮಾಡುವಾಗ ಒಂದು ವರ್ಷದ ಇಂಟರ್ನ್ಶಿಪ್ ತರಬೇತಿ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸಿಕ 15,000 ದಿಂದ 20,000 ರೂ. ವರೆಗೆ ಶಿಷ್ಯವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಬೈಕಂಪಾಡಿಯಲಿರುವ ಕೈಗಾರಿಕಾ ವಲಯದ, ಪ್ಲಾಟ್ ನಂಬರ್ 7ಇ ಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು ಸಂಪರ್ಕಿಸುವಂತೆ ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಲೇಜುಗಳ ಸಂಯೋಜನೆ: ಅರ್ಜಿ ಆಹ್ವಾನ

Article Image

ಕಾಲೇಜುಗಳ ಸಂಯೋಜನೆ: ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರು ವಿವಿ ಸಂಯೋಜನೆಗಳ ಪಟ್ಟಿರುವ ಎಲ್ಲ ಕಾಲೇಜು, ವಿದ್ಯಾಸಂಸ್ಥೆಗಳಿಂದ 2024-25ನೇ ಸಾಲಿಗೆ ಸಂಯೋಜಿತ ಕಾಲೇಜುಗಳಿಗೆ ಹೊಸ ವ್ಯಾಸಂಗ ಕ್ರಮ ಮತ್ತು ಹೊಸ ವಿಷಯಗಳು, ಮುಂದುವರಿಕೆ, ವಿಸ್ತರಣೆ ಸಂಯೋಜನೆ, ವಿದ್ಯಾರ್ಥಿ ಪ್ರಮಾಣ ಹೆಚ್ಚಳ, ಕಾಲೇಜಿನ ಹೆಸರು ಬದಲಾವಣೆ, ಮ್ಯಾನೇಜ್‌ಮೆಂಟ್ ಬದಲಾವಣೆ ಮತ್ತು ಆಸಕ್ತ ವಿದ್ಯಾಸಂಸ್ಥೆಗಳಿಂದ ಹೊಸ ಸಂಯೋಜನೆ ನೀಡುವ ಬಗ್ಗೆ ಪೋರ್ಟಲ್ www.uucms.karnataka.gov.in ಮೂಲಕ 2000 ರೂ. ಶುಲ್ಕ ಪಾವತಿಸಿ ಮೇ 25ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ www.mangloreuniversity.ac.in ವೆಬ್ ಸೈಟ್ ನೋಡುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್‌ಟಿಇ ಅರ್ಜಿ: ಅವಧಿ ವಿಸ್ತರಣೆ

Article Image

ಆರ್‌ಟಿಇ ಅರ್ಜಿ: ಅವಧಿ ವಿಸ್ತರಣೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 20ರ ವರೆಗೆ ವಿಸ್ತರಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೂ.19ರಂದು ಆನ್‌ಲೈನ್ ಮೂಲಕ 2ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಇಲ್ಲಿ ಆಯ್ಕೆಯಾದವರಿಗೆ ಜೂ.20ರಿಂದ 27ರ ವರೆಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ದಾಖಲಾದ ಮಕ್ಕಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಲು ಜೂ.20ರಿಂದ 28ರವರೆಗೆ ಅವಕಾಶ ಕಲ್ಪಿಸಿ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದೆ. ಜೂ.1ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಿದೆ. ಜೂ.5ರಂದು ಅನ್‌ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯ ಪಲಿತಾಂಶ ಪ್ರಕಟವಾಗಲಿದೆ. ಆಯ್ಕೆಯಾದ ಮಕ್ಕಳಿಗೆ ಜೂ.6ರಿಂದ 13ರವರೆಗೆ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ.

ಸಿಇಟಿ: ಕೇಂದ್ರ ಪಠ್ಯಕ್ರಮದ ಪಿಯು ಅಂಕ ದಾಖಲಿಸಲು ಮೇ 20ರವರೆಗೆ ಅವಕಾಶ

Article Image

ಸಿಇಟಿ: ಕೇಂದ್ರ ಪಠ್ಯಕ್ರಮದ ಪಿಯು ಅಂಕ ದಾಖಲಿಸಲು ಮೇ 20ರವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 12ನೇ ತರಗತಿಯನ್ನು ಸಿಬಿಎಸ್‌ಇ (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ), ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ ಮತ್ತಿತರ ಬೋರ್ಡುಗಳಲ್ಲಿ 2024ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಮೇ 14ರಿಂದ 20ರವರೆಗೆ ಆನ್‌ಲೈನ್ ಪೋರ್ಟಲ್ ಲಿಂಕ್ ಅನ್ನು ಸಕ್ರಿಯಗೊಳಿಸಲಿದೆ. ಅರ್ಹ ಅಭ್ಯರ್ಥಿಗಳು ಮೇ 20ರ ಒಳಗೆ ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು ನಿಗದಿತ ಲಿಂಕ್‌ನಲ್ಲಿ ದಾಖಲಿಸಿ, ಅಂಕಪಟ್ಟಿಯ ಪಿಡಿಎಫ್‌ ಪ್ರತಿಯನ್ನು ತಪ್ಪದೇ ಅಪ್ ಲೋಡ್ ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024ಕ್ಕಿಂತ ಹಿಂದಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರುವವರೂ ಅಂಕಗಳನ್ನು ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಅರ್ಹತಾ ಕಂಡಿಕೆ 'Ckause-Y' ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಅಂಕಗಳನ್ನು ಪೋರ್ಟಲ್ ನಲ್ಲಿ ದಾಖಲಿಸಬೇಕು. ಕರ್ನಾಟಕ ದ್ವಿತೀಯ ಪಿಯುಸಿ 2024ರ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ. ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024ರ 'ನಾಟಾ' ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ‌ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಲು ಕೋರಿದೆ.

ಸರಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಆಹ್ವಾನ

Article Image

ಸರಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಆಹ್ವಾನ

ಬಂಟ್ವಾಳ: ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಆಯುಕ್ತರ ಆದೇಶದ ಪ್ರಕಾರ 2024-25ನೇ ಸಾಲಿನಲ್ಲಿ ಮೆರಿಟ್ ಆಧಾರಿತ ಆನ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡುವ ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಎಸೆಸೆಲ್ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ ತಾಂತ್ರಿಕ ವೆಬ್‌ಸೈಟ್ https://dtetech.karnataka.gov.in/kartechnical ನಿಂದ ಮಾಹಿತಿ ಪುಸ್ತಕವನ್ನು ಡೌನ್ ಲೋಡ್ ಮಾಡಿಕೊಂಡು ಅದರ ಸೂಚನೆಗಳನ್ವಯ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಸಿಬಂದಿಯವರ ಸಹಾಯದೊಂದಿಗೆ ತಮ್ಮ ಇಚ್ಛೆಗನುಗುಣವಾಗಿ ಕೋರ್ಸ್/ಕಾಲೇಜು ಆಯ್ಕೆ ಮಾಡಿ ಆನ್‌ಲೈನ್ ಮೂಲಕ ಅರ್ಜಿ ದಾಖಲಿಸಲು ಮೇ 21 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

Article Image

ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

ರಾಜ್ಯದ ನಾನಾ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024-25ನೇ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿಗಳಿಗೆ ಬೆಂಗಳೂರು, ಧಾರವಾಡ ಕೃಷಿ ವಿವಿ, ರಾಯಚೂರು ಮತ್ತು ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿಯಲ್ಲಿ ವಿವಿಧ ಸ್ನಾತಕ ಪದವಿಗಳಿಗೆ ಮೇ 17ರಂದು ಸಂಜೆ 4 ಗಂಟೆಯೊಳಗೆ ಸೂಕ್ತ ದಾಖಲೆಗಳನ್ನು ಖುದ್ದು ಸಂಬಂಧಪಟ್ಟ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಲ್ಲೇ ಸಲ್ಲಿಸಬೇಕು ಎಂದು ಕೃಷಿ ವಿವಿ ಪ್ರಕಟಣೆ ತಿಳಿಸಿದೆ. ಮುಂದೂಡಿರುವ ಸ್ನಾತಕ ಪದವಿಯ ಪ್ರಾಯೋಗಿಕ ಪರೀಕ್ಷೆಗಳ ಕುರಿತು ಹಾಗೂ ದಾಖಲಾತಿ ಸಲ್ಲಿಕೆಯ ಕುರಿತ ಪೂರ್ಣ ಮಾಹಿತಿಯನ್ನು ಕರ್ನಾಟಕ ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಗಳ ಅಧಿಕೃತ ಅಂತರ್ಜಾಲದಿಂದ ಪಡೆಯಬಹುದು ಎಂದು ತಿಳಿಸಿದೆ.

ವೈದ್ಯಕೀಯ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾವಳಿ

Article Image

ವೈದ್ಯಕೀಯ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾವಳಿ

ಸತ್ತೂರು, ಧಾರವಾಡ: ವೈದ್ಯಕೀಯ ಕಾಲೇಜುಗಳ ಬಾಸ್ಕೆಟ್‌ಬಾಲ್ (ಪುರುಷ ಮತ್ತು ಮಹಿಳೆಯರ) ಪಂದ್ಯಾವಳಿಯನ್ನು ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೇ 9 ರಿಂದ 12 ರವರೆಗೆ “ಕ್ರಾಸ್‌ಓವರ್-2024” ಅನ್ನು ಆಯೋಜಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಕರ್ನಾಟಕದ ವೈದ್ಯಕೀಯ ಕಾಲೇಜುಗಳಿಂದ 11 ಪುರುಷರ ಮತ್ತು 6 ಮಹಿಳಾ ವೈದ್ಯಕೀಯ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದವು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಅವರು ಈ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪುರುಷ ಮತ್ತು ಮಹಿಳಾ ತಂಡಗಳು ಪ್ರಥಮ ಸ್ಥಾನ ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪುರುಷ ಮತ್ತು ಮಹಿಳಾ ತಂಡಗಳು ದ್ವಿತಿಯ ಸ್ಥಾನಗಳನ್ನು ಗಳಿಸಿವೆ. ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಮತ್ತು ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ ಅವರು ಪಂದ್ಯಾವಳಿಗಳ ವಿಜೇತರಿಗೆ ಮೇ 12 ರಂದು ಬಹುಮಾನಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಡಾ. ದೀಪಕ ಕಣಬೂರ, ಡಾ. ನೈದಿಲ ಶೆಟ್ಟಿ ಮತ್ತು ಡಾ. ಶರದ್ ಜವಳಿ ಉಪಸ್ಥಿತರಿದ್ದರು.

ಸಿಬಿಎಸ್ಇ: ಎಕ್ಸೆಲೆಂಟ್ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Article Image

ಸಿಬಿಎಸ್ಇ: ಎಕ್ಸೆಲೆಂಟ್ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ: ಎಕ್ಸೆಲೆಂಟ್ ಮೂಡುಬಿದಿರೆ ಆಡಳಿತದಲ್ಲಿ ನಡೆಯುತ್ತಿರುವ ಎಂ. ಕೆ. ಶೆಟ್ಟಿ ಸ್ಕೂಲ್ ಮೂಡುಬಿದಿರೆ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 27 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿರುತ್ತಾರೆ. ಸುವಿತ್ ಭಂಡಾರಿ ಶೇ.92 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಶೇ.90 ಅಂಕಗಳಿಸಿದ ಸುಯೋಗ್ ಎಸ್. ಅಂಚನ್ ಹಾಗೂ ಪೃಥ್ವಿ ಪ್ರಕಾಶ್ ಭಂಡಾರಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಆಡಳಿತ ನಿರ್ದೇಶಕರಾದ ಬಿ .ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕರಾದ ಬಿ. ಪುಷ್ಪರಾಜ್ ಹಾಗೂ ಪ್ರಾಂಶುಪಾಲರಾದ ಸುರೇಶ ಅಭಿನಂದನೆ ಸಲ್ಲಿಸಿದ್ದಾರೆ.

ಮಂಗಳೂರು: ಪಶುಪಾಲಕರಿಂದ ಅರ್ಜಿ ಆಹ್ವಾನ

Article Image

ಮಂಗಳೂರು: ಪಶುಪಾಲಕರಿಂದ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಶೇ.50 ಸಹಾಯಧನ ಮೂಲಕ 2024-25 ನೇ ಸಾಲಿಗೆ 2 ಎಚ್‌ಪಿ ಮೇವು ಕತ್ತರಿಸುವ ಯಂತ್ರಗಳ ಸರಬರಾಜು ಯೋಜನೆಗೆ ಪಶುಪಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶು ವೈದ್ಯಾಧಿಕಾರಿ ಅಥವಾ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ), ಹತ್ತಿರದ ಪಶು ಆಸ್ಪತ್ರೆ ಕಚೇರಿಯನ್ನು ಸಂಪರ್ಕಿಸಿ, ಅರ್ಜಿಯನ್ನು ಅವಶ್ಯಕ ದಾಖಲೆಯೊಂದಿಗೆ ಮೇ 18ರೊಳಗೆ ಸಲ್ಲಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಡಿಪ್ಲೊಮಾ ಪ್ರವೇಶ: ಅರ್ಜಿ ಆಹ್ವಾನ

Article Image

ಡಿಪ್ಲೊಮಾ ಪ್ರವೇಶ: ಅರ್ಜಿ ಆಹ್ವಾನ

ಮಂಗಳೂರು: ಬೊಂದೇಲ್‌ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಇಂಗ್ಲಿಷ್, ಕನ್ನಡ ) ಹಾಗೂ ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಸೈನ್ಸ್ ಕೋರ್ಸುಗಳ ದಾಖಲಾತಿಗೆ ಎಸ್‌ಎಸ್‌ಎಲ್‌ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಮೇ 14ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜನ್ನು ಸಂಪರ್ಕಿಸಬಹುದು ಎಂದು ಪ್ರಿನ್ಸಿಪಾಲ್‌ರವರು ತಿಳಿಸಿದ್ದಾರೆ.

ಮಂಗಳೂರು: ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

Article Image

ಮಂಗಳೂರು: ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟುವಿನ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 10ನೇ ತರಗತಿವರೆಗೆ ಕನ್ನಡ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಬೋಧಿಸಲು ಬಿಎಸ್ಸಿ-ಬಿಎಡ್ ಮತ್ತು ಬಿಎ-ಬಿಎಡ್ ಪದವೀಧರ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ ‘ನೀಟ್' ಪರೀಕ್ಷೆ

Article Image

ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ ‘ನೀಟ್' ಪರೀಕ್ಷೆ

ಮಂಗಳೂರು,ಉಡುಪಿ: ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ರವಿವಾರ (ಮೇ 5) ಕರಾವಳಿಯಾದ್ಯಂತ ಸಾಂಗವಾಗಿ ನಡೆದಿದೆ. ವಿದ್ಯಾರ್ಥಿಗಳ ಹಾಲ್‌ಟಿಕೆಟ್ ಹಾಗೂ ಐಡಿ ದಾಖಲೆಯನ್ನು ಪರೀಕ್ಷಾ ಕೇಂದ್ರದ ಗೇಟ್‌ನಲ್ಲಿಯೇ ಪರಿಶೀಲಿಸಿ ಒಳಗೆ ಬಿಡಲಾಯಿತು. ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಗಡಿಯಾರ, ಇಯರ್ ಫೋನ್, ಮೈ ಮೇಲೆ ಆಭರಣ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅವಕಾಶವಿರಲಿಲ್ಲ. ಪರೀಕ್ಷೆ ಬರೆಯಲು ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದರು. ಮಧ್ಯಾಹ್ನ ಅನಂತರ ಪರೀಕ್ಷೆ ಇದ್ದರೂ ಬಹುತೇಕ ವಿದ್ಯಾರ್ಥಿಗಳು ಬೆಳಗ್ಗೆಯೇ ಆಗಮಿಸಿದ್ದರು. ದ.ಕ. ಜಿಲ್ಲೆಯ 18 ಕೇಂದ್ರಗಳಲ್ಲಿ 9,670 ವಿದ್ಯಾರ್ಥಿಗಳು, ಪರೀಕ್ಷೆಗಾಗಿ ನೋಂದಣಿ ಮಾಡಿದ್ದರು. ಈ ಪೈಕಿ 9,235 ಮಂದಿ ಪರೀಕ್ಷೆ ಬರೆದಿದ್ದಾರೆ. ಉಡುಪಿ ಜಿಲ್ಲೆಯ 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ನೋಂದಣಿ ಮಾಡಿಕೊಂಡಿದ್ದ 3,241 ವಿದ್ಯಾರ್ಥಿಗಳಲ್ಲಿ 3,084 ಮಂದಿ ಹಾಜರಾಗಿದ್ದಾರೆ. ದ.ಕ., ಉಡುಪಿ ಜಿಲ್ಲೆಗಳ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ಗುಲ್ಬರ್ಗ, ಹಾಸನ ಸಹಿತ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಬೆಂಗಳೂರು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Article Image

ಬೆಂಗಳೂರು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ 76 ಮೋಟಾರು ವಾಹನ ನಿರೀಕ್ಷಕರ ನೇಮಕಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿದೆ. ಮೊದಲೇ ನಿಗದಿಯಾಗಿದ್ದಂತೆ ಏ.22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿರುವುದರಿಂದ ಕೊನೆಯ ದಿನಾಂಕವನ್ನು ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಡಾ.ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಾಹನ ಚಾಲನಾ ಪರವಾನಗಿ (ಡಿಎಲ್)ಗೆ ಸಂಬಂಧಿಸಿದ ಅರ್ಜಿಯಲ್ಲಿ ಡಿಎಲ್ ಸಂಖ್ಯೆ ನಮೂದಿಸಿದಾಗ ಅದರ ಸಂಪೂರ್ಣ ಮಾಹಿತಿ ಎಪಿಐ ತಂತ್ರಾಂಶದ ಮೂಲಕ ಅರ್ಜಿಯಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅದು ತಾಂತ್ರಿಕ ಕಾರಣದಿಂದ ವಿಳಂಬವಾಗುತ್ತಿರುವುದರಿಂದ ಅರ್ಜಿ ಸಲ್ಲಿಸುವ ಕಾಲಮಿತಿ ವಿಸ್ತರಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜೆಇಇ ಮೈನ್ಸ್ ಪರೀಕ್ಷೆ: ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

Article Image

ಜೆಇಇ ಮೈನ್ಸ್ ಪರೀಕ್ಷೆ: ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಇತ್ತೀಚೆಗೆ ನಡೆದ ರಾಷ್ಟçಮಟ್ಟದ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಉತ್ಕ್ರಷ್ಟ ಸಾಧನೆಗೈದಿದ್ದಾರೆ. ಎರಡು ಹಂತಗಳಲ್ಲಿ ನಡೆದ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಒಟ್ಟು 130 ವಿದ್ಯಾರ್ಥಿಗಳು ಹಾಜರಾಗಿದ್ದು 78 ವಿದ್ಯಾರ್ಥಿಗಳು ಉತ್ತಮ ಪರ್ಸೆಂಟೆಜ್ ಪಡೆದು ಜೆಇಇ ಅಡ್ವಾನ್ಸ್ ಗೆ ಅರ್ಹತೆ ಪಡೆದಿರುತ್ತಾರೆ. ನಿಶಾಂತ್ ಪಿ. ಹೆಗಡೆ (99.5545), ಸಂಜಯ್ ಬಿರಾದಾರ್ (99.4222), ಸಚಿನ್ ವಿ. ನಾಗರೆಡ್ಡಿ(99.3426), ಸೃಜನ್ ಎಂ. ಆರ್. (99.0462) 99 ಪರ್ಸೆಂಟೆಜ್‌ಗಿ0ತ ಅಧಿಕ ಅಂಕವನ್ನು ಗಳಿಸಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿ. ಚಿರಾಗ್ ಕಂಚಿರಾಯ ರಾಷ್ಟ್ರಮಟ್ಟದಲ್ಲಿ 1106ನೇ ರ‍್ಯಾಂಕ್(ಎಸ್.ಸಿ), ಸಂಜಯ್ ಬಿರಾದಾರ್ 1321 ನೇ ರ‍್ಯಾಂಕ್(ಇ.ಡಬ್ಲು.ಎಸ್), ಸಚಿನ್ ವಿ. ನಾಗರೆಡ್ಡಿ 1517 ನೇ ರ‍್ಯಾಂಕ್(ಇ.ಡಬ್ಲು.ಎಸ್), ಮತ್ತು ಸಾನ್ವಿ ಟಿ. ಎಸ್. 3022ನೇ ರ‍್ಯಾಂಕ್(ಎಸ್.ಟಿ), ಶ್ರೀಶೈಲ್ ಬಿ. ಪಾಟೀಲ್ 4590ನೇ ರ‍್ಯಾಂಕ್(ಇ.ಡಬ್ಲು.ಎಸ್), ರೋಹನ್ 4803 ನೇ ರ‍್ಯಾಂಕ್(ಇ.ಡಬ್ಲು.ಎಸ್), ಮತ್ತು ನಿಶಾಂತ್ ಪಿ. ಹೆಗಡೆ 7251 ನೇ ರ‍್ಯಾಂಕ್(ಸಿ.ಆರ್.ಎಲ್) ಪಡೆದಿರುತ್ತಾರೆ. ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ನಿಖಿಲ್ ಬಿ. ಗೌಡ ಮತ್ತು ಭಾರ್ಗವಿ ಭೌತಶಾಸ್ತ್ರ ವಿಷಯದಲ್ಲಿ 100 ಪರ್ಸೆಂಟೆಜ್‌ನ್ನು ಪಡೆದಿರುತ್ತಾರೆ. ಭೌತಶಾಸ್ತ್ರದಲ್ಲಿ 11 ವಿದ್ಯಾರ್ಥಿಗಳು, ರಸಾಯನಶಾಸ್ತ್ರದಲ್ಲಿ 6 ವಿದ್ಯಾರ್ಥಿಗಳು ಮತ್ತು ಗಣಿತಶಾಸ್ತ್ರದಲ್ಲಿ 4 ವಿದ್ಯಾರ್ಥಿಗಳು 99 ಪರ್ಸೆಂಟೆಜ್‌ಗಿ0ತ ಅಧಿಕ ಅಂಕವನ್ನು ಪಡೆದಿರುತ್ತಾರೆ.

ಪಿಯು ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Article Image

ಪಿಯು ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ-2 ಏ. 29ರಿಂದ ಆರಂಭಗೊಳ್ಳಲಿದ್ದು, ಮೇ 16ರವರೆಗೆ ನಡೆಯಲಿದೆ. ಪರೀಕ್ಷೆ ಬರೆಯಲು 1,49,300 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರೆಲ್ಲರೂ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವೆಬ್ ಸೈಟ್‌ನಿಂದ ಪಡೆಯಬಹುದಾಗಿದೆ. 32,848 ವಿದ್ಯಾರ್ಥಿಗಳು ಉನ್ನತೀಕರಣ (ಇಂಪ್ರೂವ್‌ಮೆಂಟ್) ಬಯಸಿ ಪರೀಕ್ಷೆ ತೆಗೆದುಕೊಂಡಿದ್ದು, 27,092 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. 89,221 ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳಾಗಿದ್ದು, 139 ವಿದ್ಯಾರ್ಥಿಗಳು ಶೇ.75 ರಷ್ಟು ಹಾಜರಾತಿ ಇಲ್ಲದೇ 17 ವರ್ಷ ತುಂಬಿದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಾದ್ಯಂತ 301 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳು https://kseab.karnataka.gov.in ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಪಡೆಯಬಹುದಾಗಿದೆ. 11 ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶಪತ್ರ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಮೂಡಬಿದಿರೆ: ಎಕ್ಸಲೆಂಟ್ ಗುಣಸಾಗರ್ ಜಿಲ್ಲೆಗೆ ಪ್ರಥಮ

Article Image

ಮೂಡಬಿದಿರೆ: ಎಕ್ಸಲೆಂಟ್ ಗುಣಸಾಗರ್ ಜಿಲ್ಲೆಗೆ ಪ್ರಥಮ

ಮೂಡಬಿದಿರೆ: ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗುಣಸಾಗರ್ ಡಿ. ದ್ವಿತೀಯ ಪದವಿಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕವನ್ನು ಗಳಿಸುವುದರ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ತಿಪಟೂರಿನ ಪತ್ರಕರ್ತರಾದ ದಯಾನಂದ ಟಿ. ಎಸ್. ಮತ್ತು ಸವಿತಾ ದಂಪತಿಗಳ ಪುತ್ರ. ಇವರು ಹತ್ತನೇ ತರಗತಿಯಲ್ಲಿ 91% ಅಂಕವನ್ನು ಪಡೆದಿದ್ದು ಪದವಿಪೂರ್ವ ಪರೀಕ್ಷೆಯಲ್ಲಿ 99.5% ಅಂಕವನ್ನು ಪಡೆಯುವುದರ ಮೂಲಕ ಸತತ ಪರಿಶ್ರಮದಿ0ದ ಅತ್ಯುನ್ನತ ಸಾಧನೆ ಸಾಧ್ಯ ಎಂದು ಸಾಬೀತು ಪಡಿಸಿದ್ದಾರೆ.

ಮ್ಯಾಪ್ಸ್ ಶಿಕ್ಷಣ ಸಂಸ್ಥೆ: ಸ್ಕಾಲರ್‌ಶಿಪ್‌ನೊಂದಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Article Image

ಮ್ಯಾಪ್ಸ್ ಶಿಕ್ಷಣ ಸಂಸ್ಥೆ: ಸ್ಕಾಲರ್‌ಶಿಪ್‌ನೊಂದಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಕಳೆದ 18 ವರ್ಷಗಳಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ - ಕದ್ರಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಮ್ಯಾಪ್ಸ್ ಕಾಲೇಜು ಪಿಯುಸಿ, ಬಿ.ಕಾಂ.ನೊಂದಿಗೆ ಸಿ.ಎ, ಎಸಿಸಿಎ, ಸಿಎಸ್, ಸಿಎಂಎ ವಿಷಯದಲ್ಲಿ ಪ್ರೊಫೆಶನಲ್ ಕೋಚಿಂಗ್ ನೀಡುತ್ತಿದೆ. ಈ ಕೋರ್ಸುಗಳಿಗೆ (ಸ್ಕಾಲರ್‌ಶಿಪ್ ಸೌಲಭ್ಯದೊಂದಿಗೆ) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾಪ್ಸ್ ಕಾಲೇಜಿನಲ್ಲಿ ವಿಶಿಷ್ಟ ರೀತಿಯ ಬಿಸಿಎ ಪದವಿ ಶಿಕ್ಷಣ ಒದಗಿಸಲಾಗುತ್ತಿದ್ದು, ವಿ.ವಿ. ನಿಗದಿ ಮಾಡಿದ ಪದವಿ ಶಿಕ್ಷಣದ ಜತೆಗೆ ಹೆಚ್ಚುವರಿಯಾಗಿ ಡಾಟಾ ಅನಾಲಿಟಿಕ್ಸ್, ವೆಬ್ ಡಿಸೈನಿಂಗ್, ಆ್ಯನಿಮೇಶನ್ ಆ್ಯಂಡ್ ಗ್ರಾಫಿಕ್ಸ್, ಸೈಬರ್ ಸೆಕ್ಯೂರಿಟಿ, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮುಂತಾದ ವಿಷಯಗಳಲ್ಲಿ ತರಬೇತಿ ಉದ್ಯೋಗಳಿಗೆ ಸಜ್ಜುಗೊಳಿಸಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಈ ಮೇಲಿನ ಕೋರ್ಸುಗಳಿಗೆ ಸ್ಕಾಲರ್‌ಶಿಪ್ ಸೌಲಭ್ಯ ಪಡೆದುಕೊಳ್ಳಲು ಕೂಡಲೇ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿಯನ್ನು ಸಂಪರ್ಕಿಸಬಹುದು. ವೆಬ್‌ಸೈಟ್: https://www.mapsmangalore.com/.

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ: ಪಿಯುಸಿಯವರಿಗೆ ಸಿಇಟಿ ಆನ್ ಲೈನ್ ಅಣಕು ಪರೀಕ್ಷೆ

Article Image

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ: ಪಿಯುಸಿಯವರಿಗೆ ಸಿಇಟಿ ಆನ್ ಲೈನ್ ಅಣಕು ಪರೀಕ್ಷೆ

ಮಂಗಳೂರು, ಎ. 8: ಪಿಯುಸಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಆನ್ ಲೈನ್ ಮೂಲಕ ಅಣಕು ಪರೀಕ್ಷೆಯನ್ನು ಬರೆಯುವ ವಿಶೇಷ ಅವಕಾಶವನ್ನು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ. ಭೌತಶಾಸ್ತ್ರ ಗಣಿತ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಪ್ರತ್ಯೇಕವಾಗಿ 60 ನಿಮಿಷಗಳ ಅವಧಿಯಲ್ಲಿ ಪರೀಕ್ಷೆ ನಡೆಯುತ್ತದೆ. ಎ. 10ರಂದು ಭೌತಶಾಸ್ತ್ರ, 11ರಂದು ಗಣಿತ, 12ರಂದು ರಸಾಯನಶಾಸ್ತ್ರ ಮತ್ತು 13ರಂದು ಜೀವಶಾಸ್ತ್ರ ವಿಷಯಗಳಲ್ಲಿ ಸಂಜೆ 7 ರಿಂದ 8 ಗಂಟೆಯವರೆಗೆ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ. ಸಿಇಟಿ ಬರೆಯುವ ಎಲ್ಲ ವಿದ್ಯಾರ್ಥಿಗಳು ಈ ಅಣಕು ಪರೀಕ್ಷೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯುವುದಲ್ಲದೇ ಪರೀಕ್ಷಾ ಪ್ರಶ್ನೆ ಪತ್ರಿಕೆಯ ವಿಶಿಷ್ಟತೆ ಹಾಗೂ ಕ್ಲಿಷ್ಟತೆಯ ಮಟ್ಟವನ್ನು ತಿಳಿದುಕೊಂಡು ತಮ್ಮ ತಮ್ಮ ಕಲಿಕಾ ವಿಧಾನವನ್ನು ವಿಶ್ಲೇಷಿಸಿ, ತಾವು ನಡೆಸುವ ಕಲಿಕೆಯಲ್ಲಿ ಯಾವ ಬದಲಾವಣೆಯನ್ನು ಮಾಡಿಕೊಂಡು ಅಭ್ಯಾಸ ಮಾಡಬಹುದೆಂದು ತಿಳಿದುಕೊಂಡು ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ಒಂದು ಉತ್ತಮ ಅವಕಾಶ ಇದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀನಿವಾಸ ಮಯ್ಯ ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆ ಬರೆಯಲು ಸಮಯಕ್ಕೆ ಸರಿಯಾಗಿ https://sitmng.ac.in/ SIT/About/Mock-Cet2024 ಅಥವಾ www.sitmng.ac.in ಗೆ ಭೇಟಿ ನೀಡಿ ಪರೀಕ್ಷೆ ಬರೆಯಬಹುದಾಗಿದೆ. ಹೆಚ್ಚಿನ ವಿವರ ಹಾಗೂ ಮಾಹಿತಿಗಳಿಗೆ ಡಾ| ಧೀರಜ್ ಹೆಬ್ರಿ ಅವರನ್ನು ಸಂಪರ್ಕಿಸಬಹುದು (dheeraj.h7 @sitmng.ac.in).

ಎಸ್.ಡಿ.ಎಂ. ಕ್ರೀಡಾ ವಿದ್ಯಾರ್ಥಿ ನಿಲಯಕ್ಕೆ ಆಯ್ಕೆ ಶಿಬಿರ

Article Image

ಎಸ್.ಡಿ.ಎಂ. ಕ್ರೀಡಾ ವಿದ್ಯಾರ್ಥಿ ನಿಲಯಕ್ಕೆ ಆಯ್ಕೆ ಶಿಬಿರ

ಉಜಿರೆ: 2024-25ನೇ ಶೈಕ್ಷಣಿಕ ವರ್ಷದ ಎಸ್.ಡಿ.ಎಂ. ಕ್ರೀಡಾ ವಿದ್ಯಾರ್ಥಿ ನಿಲಯಕ್ಕೆ ಆಯ್ಕೆ ಶಿಬಿರವು ಪದವಿ ವಿದ್ಯಾರ್ಥಿಗಳಿಗೆ ಏ.10 ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಏ.15ರಂದು ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಯ್ಕೆ ನಡೆಯುವ ಕ್ರೀಡೆಗಳು: ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಲಿಫ್ಟಿಂಗ್, ಹ್ಯಾಂಡ್ ಬಾಲ್, ಸಾಫ್ಟ್ ಬಾಲ್, ನೆಟ್ ಬಾಲ್, ಬ್ಯಾಡ್ಮಿಂಟನ್. ವಿ.ಸೂ.: ಸಂದರ್ಶನಕ್ಕೆ ಬರುವ ಕ್ರೀಡಾ ವಿದ್ಯಾರ್ಥಿಗಳು ಕ್ರೀಡಾ ಪ್ರಶಸ್ತಿ ಪತ್ರ, ಕ್ರೀಡಾ ಸಮವಸ್ತ್ರದೊಂದಿಗೆ ಹಾಜರಿರಬೇಕು ಹಾಗೂ ಆಯ್ಕೆಗೊಂಡ ಕ್ರೀಡಾಪಟುಗಳು ಒಂದು ವಾರದ ತರಬೇತಿಯಲ್ಲಿ ಭಾಗವಹಿಸತಕ್ಕದ್ದು. ಪದವಿ ವಿದ್ಯಾರ್ಥಿಗಳು (ಡಿಗ್ರಿ) ಎಸ್.ಎಸ್.ಎಲ್.ಸಿ. ಮೂಲ ಅಂಕಪಟ್ಟಿ ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 7676056892, 9481616461, 9742887411, 8970542738

ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ

Article Image

ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: 2023-24ನೇ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು 'ಬಿ' ವೃಂದದ 384 ಹುದ್ದೆಗಳ ನೇಮಕಕ್ಕೆ ಮೇ 5ರಂದು ನಿಗದಿಪಡಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಜು.7ಕ್ಕೆ ಮುಂದೂಡಿರುವ ಕರ್ನಾಟಕ ಲೋಕ ಸೇವಾ ಆಯೋಗ, ಅರ್ಜಿ ಸಲ್ಲಿಸುವ ಅವಧಿಯನ್ನು ಏ.15ರವರೆಗೆ ವಿಸ್ತರಿಸಿದೆ. ಈ ಮೊದಲು ಹೊರಡಿಸಿದ್ದ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಲು ಏ.3 ಕಡೇ ದಿನವಾಗಿತ್ತು. ಆದರೆ, ಚುನಾವಣೆ, ಇತರೆ ಪರೀಕ್ಷೆಗಳ ನಿಗದಿ ಮತ್ತಿತರ ಕಾರಣಗಳಿಂದಾಗಿ ಅಭ್ಯರ್ಥಿಗಳಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೊದಲು ಪೂರ್ವಭಾವಿ ಪರೀಕ್ಷೆಯನ್ನು ಮೇ 5ಕ್ಕೆ ನಿಗದಿಪಡಿಸಲಾಗಿತ್ತು. ಹೊಸ ಆದೇಶದ ಪ್ರಕಾರ, ಪೂರ್ವಭಾವಿ ಪರೀಕ್ಷೆಯನ್ನು ಎರಡು ತಿಂಗಳು ಮುಂದೂಡಿ ಜು.7ಕ್ಕೆ ನಿಗದಿ ಮಾಡಲಾಗಿದೆ ಎಂದು ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Article Image

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಏ.22 ಕೊನೆ ದಿನವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ ಉದ್ದೇಶಕ್ಕಾಗಿ ಅರ್ಜಿ ವಿಸ್ತರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಹೊಸದಿಲ್ಲಿ: ಪಿಎಚ್‌ಡಿ ಪ್ರವೇಶ ಸುಗಮ

Article Image

ಹೊಸದಿಲ್ಲಿ: ಪಿಎಚ್‌ಡಿ ಪ್ರವೇಶ ಸುಗಮ

ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪಿಎಚ್‌ಡಿ ಪ್ರವೇಶಕ್ಕೆ ಪ್ರತ್ಯೇಕ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಗೊಂದಲ ಹಾಗೂ ಇದರಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಯುಜಿಸಿ ಹೊಸ ಉಪಕ್ರಮಕ್ಕೆ ಮುಂದಾಗಿದೆ. ಪಿಎಚ್‌ಡಿ ಪ್ರವೇಶಕ್ಕೆ ಇನ್ನು ಮುಂದೆ 'ಎನ್‌ಇಟಿ' ಅಂಕಗಳನ್ನೇ ಪರಿಗಣಿಸಲಾಗುತ್ತದೆ. ಈ ಸಂಬಂಧ ಯುಜಿಸಿ ಗುರುವಾರ ಅಧಿಸೂಚನೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಅನ್ವಯವಾಗಲಿದೆ. “2020ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ'' ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ.

247 ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ

Article Image

247 ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್ ಕರ್ನಾಟಕ ವೃಂದದ 97, ಉಳಿಕೆ ಮೂಲ ವೃಂದದ 150 ಸೇರಿ ಒಟ್ಟು 247 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಏ.15ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅರ್ಜಿ ಸಲ್ಲಿಸಲು ಮೇ 15 ಕಡೆಯ ದಿನವಾಗಿದೆ. ಪಿಡಿಒ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿಯನ್ನು ನಿಗದಿಪಡಿಸಲಾಗಿದೆ. ಗ್ರೂಪ್ 'ಸಿ' ವೃಂದದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ವೇತನ ಶ್ರೇಣಿ 37,900 ರೂ.ಗಳಿಂದ 70,850 ರೂ. ನಿಗದಿಪಡಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 38 ವರ್ಷ ಹಾಗೂ ಪ.ಜಾ, ಪ.ಪಂ/ಪ್ರವರ್ಗ-1ಕ್ಕೆ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಹೆಚ್ಚಿನ ವಿವರಗಳನ್ನು ಲೋಕಸೇವಾ ಆಯೋಗದ ವೆಬ್‌ಸೈಟ್ ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಮಸ್ಯೆ ಎದುರಾದರಲ್ಲಿ ಸಹಾಯವಾಣಿ ಸಂಖ್ಯೆ 080-30574957, 30574901 ನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಗದ ಕಾರ್ಯದರ್ಶಿ ಡಾ. ಕೆ. ರಾಕೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್‌ಐ ಹುದ್ದೆ: ಅರ್ಜಿ ಆಹ್ವಾನ

Article Image

ಎಸ್‌ಐ ಹುದ್ದೆ: ಅರ್ಜಿ ಆಹ್ವಾನ

ಉಡುಪಿ/ಮಂಗಳೂರು, ಮಾ. 19: ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದಿಲ್ಲಿ ಪೊಲೀಸ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ www.ssckkr.kar.nic.in ಮತ್ತು https://ssc. gov.in ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾ. 29ರೊಳಗೆ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 080-25502520 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

First Previous

Showing 2 of 3 pages

Next Last