Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 30 ಲಕ್ಷ ಮೌಲ್ಯದ 2 ಬಿಪಿಎಲ್ ಲೋವೆನ್‌ಸ್ಪೆöನ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಡಿ. ಹರ್ಷೇಂದ್ರ ಕುಮಾರ್ ಅವರು ಹೊಸ ತಂತ್ರಜ್ಞಾನದ 2 ಐಸಿಯು ವೆಂಟಿಲೇಟರ್‌ಗಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರತಿಯೊಂದು ಸಂಸ್ಥೆಗಳು ಕೂಡ ಸೇವೆಯ ಉದ್ದೇಶದಿಂದ ನಡೆಸಲ್ಪಡುತ್ತದೆ. ಖರ್ಚು ಬಗ್ಗೆ ಚಿಂತಿಸದೆ ಜನತೆಗೆ ಉತ್ತಮ ಸೇವೆ ನೀಡುವ ಗುರಿಯೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದೇ ಉದ್ದೇಶದಿಂದ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಸಲಕರಣೆಗಳನ್ನು ಒದಗಿಸಲಾಗಿದೆ. ಇದರಿಂದಾಗಿ ಸುಧಾರಿತ ವೈದ್ಯಕೀಯ ಸೇವೆ ನೀಡಲು ಸಹಕಾರಿಯಾಗಿದೆ. ಹಾಗಾಗಿ ದಿನೇ-ದಿನ ಈ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚೆಗೆ ಈ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳು ಕೂಡ ಈ ಆಸ್ಪತ್ರೆಯ ಮೇಲೆ ಗ್ರಾಮೀಣ ಜನತೆಯಲ್ಲಿ ಭರವಸೆ ಹೆಚ್ಚಿಸಿದೆ. ಈ ಆಸ್ಪತ್ರೆ ಅನೇಕ ಮಂದಿಗೆ ಉದ್ಯೋಗದ ಅವಕಾಶ ನೀಡಿ ಅನೇಕ ಕುಟುಂಬಗಳು ನೆಮ್ಮದಿಗೆ ಕಾರಣವಾಗಿದೆ. ಇತರ ಅನೇಕರಿಗೆ ಪರೋಕ್ಷ ರೀತಿಯಲ್ಲಿ ವಿವಿಧ ಅವಕಾಶ ಒದಗಿಸುವ ಮೂಲಕ ಪ್ರಯೋಜನಕಾರಿಯಾಗಿದೆ ಎಂದರು. 9 ಹಾಸಿಗೆಗಳ ಸುಸಜ್ಜಿತ ಐಸಿಯು ಹೊಂದಿರುವ ಈ ಆಸ್ಪತ್ರೆಯು ಈಗಾಗಲೇ 6 ವೆಂಟಿಲೇಟರ್‌ಗಳನ್ನು ಹೊಂದಿದ್ದು, ಈಗ ಒಟ್ಟು 8 ವೆಂಟಿಲೇಟರ್‌ಗಳಿವೆ. ಹೃದಯಾಘಾತ, ಸ್ಟ್ರೋಕ್, ಉಸಿರಾಟದ ಸಮಸ್ಯೆ ಮುಂತಾದ ತುರ್ತು ಸಂದರ್ಭದಲ್ಲಿ ಈ ಅತ್ಯಾಧುನಿಕ ವೆಂಟಿಲೇಟರ್‌ಗಳು ಬಹಳ ಉಪಯುಕ್ತವಾಗಲಿದೆ. ಇದು ಉತ್ತಮ ಗುಣಮಟ್ಟದ ಉಸಿರಾಟವನ್ನು ಒದಗಿಸುತ್ತದೆ. ಇದರಲ್ಲಿ ಅಳವಡಿಸಿರುವ ಪ್ಯಾರಾಮೀಟರ್ ಹಾಗೂ ರೋಗಿಯಿಂದ ಸಂಪರ್ಕ ಕಳೆದುಕೊಂಡಾಗ ಎಚ್ಚರಿಸುವ ಸೈರನ್ ಹೊಂದಿದ್ದು, ರೋಗಿಗೆ ಉಸಿರಾಟದಲ್ಲಿ ವ್ಯತ್ಯವಾಗದಂತೆ ನಿಗಾವಹಿಸುತ್ತದೆ. ಹೊಸ ತಂತ್ರಜ್ಞಾನ ಹೊಂದಿರುವ ಈ ವೆಂಟಿಲೇಟರ್ ವಯಸ್ಕರು, ಮಕ್ಕಳು ಮತ್ತು ನವಜಾತ ಶಿಶುಗಳಿಗೆ ಹೊಂದಾಣಿಕೆಯಾಗಬಲ್ಲದು. ಈ ವೆಂಟಿಲೇಟರ್ ಪರ‍್ಟೇಬಲ್ ಆಗಿದೆ. ಅಗತ್ಯ ಬಿದ್ದಾಗ ಆಂಬ್ಯುಲೆನ್ಸ್ಗಳಲ್ಲಿಯೂ ಅಳವಡಿಸಲು ಸಾಧ್ಯವಿದೆ. ಮಂಗಳೂರು ಬಳಿಕ ಈ ಅತ್ಯಾಧುನಿಕ ವೆಂಟಿಲೇಟರ್ ಹೊಂದಿರುವ ಏಕೈಕ ಆಸ್ಪತ್ರೆ ಇದಾಗಿದೆ ಎಂದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಇಲ್ಲಿನ ವೈದ್ಯರು, ದಾದಿಯರು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಬ್ಬಿರುವ ರಕ್ತನಾಳದ ಸಮಸ್ಯೆ ಇರುವ 41 ವರ್ಷ ಹಾಗೂ 40 ವರ್ಷ ಪ್ರಾಯದ ಇಬ್ಬರಿಗೆ ಮೊದಲ ಬಾರಿಗೆ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಚೈತ್ರಾ ಆರ್. ಶಸ್ತ್ರಚಿಕಿತ್ಸೆಯನ್ನು ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ರೋಗಿಗಳು ಕೂಡ ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದಾರೆ. ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆ ಎನ್ನುವುದು ಶಸ್ತ್ರಚಿಕಿತ್ಸೆ ಇಲ್ಲದೆ ಉಬ್ಬಿರುವ ರಕ್ತನಾಳಗಳಿಗೆ ನೀಡುವ ಚಿಕಿತ್ಸೆಯ ಹೊಸ ವಿಧಾನವಾಗಿದೆ. ಉಬ್ಬಿರುವ ರಕ್ತನಾಳಗಳನ್ನು ತೊಡೆದು ಹಾಕಲು ಇದು ಸುರಕ್ಷಿತ ಮತ್ತು ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಈ ಚಿಕಿತ್ಸೆಯ ನಂತರ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ದೊರೆಯುತ್ತಿದೆ. ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಸಿರಿಧಾನ್ಯ ಮತ್ತು ಮಾನಸಿಕ ಆರೋಗ್ಯ': ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

Article Image

'ಸಿರಿಧಾನ್ಯ ಮತ್ತು ಮಾನಸಿಕ ಆರೋಗ್ಯ': ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಉಜಿರೆ: ಜೀವನವು ಮಾನಸಿಕ ವ್ಯವಸ್ಥೆಯನ್ನು ಅವಲಂಬಿಸಿದೆ ಹಾಗೂ ಆರೋಗ್ಯವೇ ಎಲ್ಲದಕ್ಕೂ ಮೂಲ ಆಧಾರ ಎಂದು ಮೈಸೂರಿನ ಆಹಾರ ಮತ್ತು ಪೌಷ್ಟಿಕಾಂಶ ತಜ್ಞ ಡಾ. ಖಾದರ್ ವಲ್ಲಿ ಹೇಳಿದರು. ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಇಂದು (ಸೆ. 9) ಮನಃಶಾಸ್ತ್ರ ವಿಭಾಗದ (ಪದವಿ, ಸ್ನಾತಕೋತ್ತರ ಪದವಿ) ವತಿಯಿಂದ ಆಯೋಜಿಸಲಾಗಿದ್ದ 'ಸಿರಿಧಾನ್ಯ ಮತ್ತು ಮಾನಸಿಕ ಆರೋಗ್ಯ' ಕುರಿತ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. “ಇಂದಿನ ಆಧುನಿಕ ಯುಗದಲ್ಲಿ ಜನರು ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ದೇಹದಲ್ಲಿ ಹಾರ್ಮೋನ್ ಗಳ ಅಸಮತೋಲನ ಉಂಟಾಗುತ್ತಿದೆ. ಆಹಾರವನ್ನು ಸರಿಯಾದ ಸಮಯಕ್ಕೆ ಸೇವಿಸುತ್ತಿಲ್ಲ. ಪೌಷ್ಟಿಕ ಆಹಾರ ಸೇವಿಸುವ ಬದಲು ಅಪೌಷ್ಟಿಕ ಆಹಾರಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ. ಇದರಿಂದಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಅನೇಕ ಜನರು ಥೈರಾಯಿಡ್ ಮಧುಮೇಹ ರಕ್ತದೊತ್ತಡದಂತಹ ಬಳಲುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಜನರು ಸಿರಿಧಾನ್ಯಗಳನ್ನು ತಮ್ಮ ನಿತ್ಯ ದಿನನಿತ್ಯ ಆಹಾರ ಪದ್ಧತಿಯಲ್ಲಿ ಉಪಯೋಗಿಸಬಹುದು" ಎಂದರು. ಅನೇಕ ಸಿರಿಧಾನ್ಯಗಳ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಅತಿಥಿ, ಶಿವಮೊಗ್ಗದ ಕನ್ಸಲ್ಟೆಂಟ್ ಸೈಕಿಯಾಟ್ರಿಸ್ಟ್ ಡಾ. ಪ್ರೀತಿ ವಿ. ಶಾನಭಾಗ್ ಮಾತನಾಡಿ, "ಹಿಂದಿನ ಕಾಲದಲ್ಲಿ ಆರೋಗ್ಯದ ಏರುಪೇರಿಗೆ ಔಷಧಿಗಳಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಔಷಧಿಗಳ ಜೊತೆಗೆ ಕಾಯಿಲೆಗಳು ಹೆಚ್ಚಾಗಿವೆ. ಈಗಿನ ಕಾಲದಲ್ಲಿ ತ್ವರಿತ ಪರಿಣಾಮವನ್ನು ಬಯಸುತ್ತೇವೆ. ಒಂದು ಕೆಲಸ ಆಗುವ ಮುನ್ನವೇ ಇನ್ನೊಂದು ಕೆಲಸದ ಏಳಿಗೆಗೆ ಹೆಜ್ಜೆ ಹಾಕಲು ತಯಾರಾಗಿರುತ್ತೇವೆ. ಅಧ್ಯಯನದ ಪ್ರಕಾರ ಇತ್ತೀಚಿನ ಜನಾಂಗದಲ್ಲಿ ತಾಳ್ಮೆ ಕಡಿಮೆಯಾಗಿ ಎಲ್ಲವನ್ನು ಶೀಘ್ರವಾಗಿ ಮುಗಿಸಬೇಕೆಂಬ ಒತ್ತಡ ಹೆಚ್ಚಾಗಿದೆ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, ಮಾನವ ದೇಹವೇ ಒಂದು ರಾಸಾಯನಿಕ ವ್ಯವಸ್ಥೆ. ಹಾಗೆ ಈ ಎಲ್ಲ ರಾಸಾಯನಿಕಗಳು ನಾವು ಹೇಗೆ ಯೋಚಿಸುತ್ತೇವೆ, ಹೇಗೆ ವರ್ತಿಸುತ್ತೇವೆ, ಹೇಗೆ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸುತ್ತವೆ ಎಂದು ಹೇಳಿದರು. ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ., ಕಲಾ ನಿಕಾಯದ ಡೀನ್ ಡಾ. ಶ್ರೀಧರ ಎನ್. ಭಟ್, ವಿಜ್ಞಾನ ನಿಕಾಯದ ಡೀನ್ ಡಾ. ಸವಿತಾ ಕುಮಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು. ರಾಜ್ಯದ ವಿವಿಧೆಡೆಯ 15 ಕಾಲೇಜುಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು. ಅನನ್ಯ ಬಳಗದವರು ಪ್ರಾರ್ಥಿಸಿದರು. ಮನಃಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ವಂದನ ಜೈನ್ ಸ್ವಾಗತಿಸಿ, ಎಂ.ಎಸ್. ಸಿಂದು ವಂದಿಸಿದರು. ಸೀಮಾ ಜಂಗೀರ್ ಮತ್ತು ಜಾನವಿ ಎಮ್. ನಿರೂಪಿಸಿದರು.

ಎಸ್ . ಡಿ . ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ,ಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ

Article Image

ಎಸ್ . ಡಿ . ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ,ಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ,ಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಎಲ್ಲಾ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಉಚಿತ ECG, BP, GRBS (Sugar Test) ಹಾಗೂ ವೈದ್ಯರ ಸಮಾಲೋಚನೆಯು ನಾಳೆ (ಆ.6) ಬೆಳಿಗ್ಗೆ 9.30ರಿಂದ ಸಂಜೆ 5.00ರ ತನಕ ನಡೆಯಲಿದೆ . ಸೂಚನೆ : ಕೆ.ಕೆವೈಸಿ ಹಾಗೂ ಸುರಕ್ಷಾ ವಿಮಾ ಹೊಂದಿರುವವರು ವಿಮಾ ಕಾರ್ಡ್‌ನ ಪ್ರತಿಯನ್ನು ತರತಕ್ಕದ್ದು. ಎಲ್ಲಾ ಶಿಕ್ಷಕರು ತಮ್ಮ ಶಾಲಾ ಅಥವಾ ಕಾಲೇಜಿನ ಗುರುತಿನ ಚೀಟಿಯನ್ನು ತರತಕ್ಕದ್ದು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ, ವೆಬ್‌ಸೈಟ್: sdmhospitalujire.com ಹೆಸರು ನೋಂದಾಯಿಸಲು ಸಂಪರ್ಕಿಸಿ: 8073349216, 7760397878

ಡೆಂಗ್ಯೂ ಜ್ವರ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Article Image

ಡೆಂಗ್ಯೂ ಜ್ವರ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಉದ್ಯಾನವನ ವಿಭಾಗದ ಸಿಬ್ಬಂದಿಗಳಿಗೆ “ಡೆಂಗ್ಯೂ ಜ್ವರ ತಡೆಗಟ್ಟುವಿಕೆ” ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕೀಟಶಾಸ್ತ್ರಜ್ಞರಾದ ಮಂಜುನಾಥ್ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಈ ಕಾರ್ಯಕ್ರಮವು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಗುರುತಿಸಿ ಮತ್ತು ಅವುಗಳ ನಿಯಂತ್ರಣ ಮಾಡುವ ಪ್ರಾಮುಖ್ಯತೆಯನ್ನು ತಿಳಿಸಿದರು. ಸೊಳ್ಳೆ ಕಡಿತದಿಂದ ರಕ್ಷಿಸಲು ವೈಯಕ್ತಿಕ ರಕ್ಷಣಾ ಕ್ರಮಗಳ ಬಳಕೆಗೆ ಒತ್ತು ನೀಡಿತು, ಲಾರ್ವಿವೋರಸ್ ಮೀನುಗಳ (ಗಪ್ಪಿ ಮೀನು) ಜೊತೆಗೆ ಸೊಳ್ಳೆಗಳ ಲಾರ್ವಾ ಮತ್ತು ಪ್ಯೂಪಲ್ ಹಂತಗಳ ನೇರ ಪ್ರದರ್ಶನವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕ ಡಾ. ಉಮೇಶ್ ಆರ್. ದೀಕ್ಷಿತ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಕೇಶ್ ಕೆ. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್ ಸ್ವಯಂ ಸೇವಕರು ಕರಪತ್ರಗಳು ಮತ್ತು ಸ್ಕ್ಯಾಂಡಿಗಳನ್ನು ಬಳಸಿಕೊಂಡು ಸಿಬ್ಬಂದಿಗೆ ಶಿಕ್ಷಣ ನೀಡಿದರು.

“ವೈದ್ಯಕೀಯ ಶಿಕ್ಷಣದಲ್ಲಿ ಅಧ್ಯಯನ” ಎಂಬ ವಿಷಯದ ಕಾರ್ಯಾಗಾರ

Article Image

“ವೈದ್ಯಕೀಯ ಶಿಕ್ಷಣದಲ್ಲಿ ಅಧ್ಯಯನ” ಎಂಬ ವಿಷಯದ ಕಾರ್ಯಾಗಾರ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಘಟಕವು ರಾಷ್ಟ್ರೀಯ ವೈದ್ಯಕೀಯ ಆಯೋಗದ ಪ್ರಾಂತೀಯ ನೋಡಲ್ ಕೇಂದ್ರ, ಜೆ.ಎನ್.ಎಂ.ಸಿ. ಬೆಳಗಾವಿಯ ಸಹಯೋಗದೊಂದಿಗೆ ಜುಲೈ 16 ರಿಂದ 18, 2024ರ ವರೆಗೆ “ವೈದ್ಯಕೀಯ ಶಿಕ್ಷಣದಲ್ಲಿ ಅಧ್ಯಯನ” ಎಂಬ ವಿಷಯದ ಮೇಲೆ 3 ದಿನಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಈ ಕಾರ್ಯಾಗಾರವು ಅಧ್ಯಾಪಕರಿಗೆ, ಹೊಸ ಬೋಧನೆಯ ಮತ್ತು ಕಲಿಕೆಯ ವಿಧಾನಗಳನ್ನು ಅಳವಡಿಸಿಕೊಳ್ಳಲು ಹೆಚ್ಚು ಸಹಕಾರಿಯಾಗಿದ್ದು, ಈ ಕಾರ್ಯಾಗಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಅನುಮೋದಿಸಲ್ಪಟ್ಟಿದೆ. ಅಧ್ಯಾಪಕರು ತಮ್ಮ ದೈನಂದಿನ ಜ್ಞಾನವನ್ನು ನವೀಕರಿಸಲು ಇದು ಉತ್ತಮ ವೇದಿಕೆಯಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರು ಮತ್ತು ವೈದ್ಯಕೀಯ ಶಿಕ್ಷಣ ಘಟಕದ ಅಧ್ಯಕ್ಷರಾದ ಡಾ. ರತ್ನಮಾಲಾ ಎಂ. ದೇಸಾಯಿ, ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಡಳಿತ ನಿರ್ದೇಶಕರಾದ ಶ್ರೀ ಸಾಕೇತ್ ಶೆಟ್ಟಿ, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಜೆ.ಎನ್.ಎಂ.ಸಿಯ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಜ್ಯೋತಿ ನಾಗಮೋತಿ, ಮತ್ತಿತರರು ಈ ಕಾರ್ಯಾಗಾರವನ್ನು ಉದ್ಘಾಟಿಸಿದರು. ಡಾ. ನಿರಂಜನ್ ಕುಮಾರ ಮತ್ತು ಡಾ. ಜ್ಯೋತಿ ನಾಗಮೋತಿ ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ: ಪರಿಣಾಮಕಾರಿ ಬೋಧನೆಯು ವಿದ್ಯಾರ್ಥಿಗಳನ್ನು ಪರಿವರ್ತಿಸಿ ಪ್ರಬುದ್ಧಗೊಳಿಸುತ್ತದೆ. ಡಿಜಿಟಲ್ ಜ್ಞಾನದ ಕಡೆ ವಿದ್ಯಾರ್ಥಿಗಳು ಬದಲಾಗುತ್ತಿರುವುದು ಕಳಕಳಿಯ ವಿಷಯ. ಬೋಧನೆಯನ್ನು ಆಸಕ್ತಿದಾಯಕ ಮತ್ತು ಸಂವಾದಾತ್ಮಕವಾಗಿ ಮಾಡುವ ಅನಿವಾರ್ಯತೆ ಇದೆ. ಹೊಸ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸುವುದೇ ಶಿಕ್ಷಣದ ಈಗಿನ ಪ್ರಾಶಸ್ತ್ಯವಾಗಿದೆ. ಕಠಿಣ ತರಬೇತಿಯಿಂದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಸರಳಗೋಳಿಸಬಹುದು. ದೃಢ ನಿರ್ಧಾರ ಮತ್ತು ದಿಟ್ಟತನದಿಂದ ಯಾವುದೇ ಭಯವಿಲ್ಲದೆ ವೈದ್ಯಕೀಯ ಶಿಕ್ಷಣವನ್ನು ಪಡೆಯಬೇಕು. ವೈದ್ಯಕೀಯ ಶಿಕ್ಷಣದಲ್ಲಿ ನವೀನ ಕೌಶಲ್ಯಗಳ ತರಬೇತಿ ಮತ್ತು ಹೊಸ ಜ್ಞಾನಗಳ ಅಗತ್ಯವಿದೆ. ಔಷಧಗುಣ ಶಾಸ್ತ್ರದ ಪ್ರಾಧ್ಯಾಪಕರು ಮತ್ತು ವೈದ್ಯಕೀಯ ಶಿಕ್ಷಣ ಘಟಕದ ಮುಖ್ಯಸ್ಥರಾದ ಡಾ. ರಾಧಿಕಾ ಶೇರ್ಖಾನೆ ಅವರು ಅತಿಥಿಗಳನ್ನು ಪರಿಚಯಿಸಿದರು. ಡಾ. ರತ್ನಮಾಲಾ ದೇಸಾಯಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಆದಿತ್ಯಾ ಅಗ್ನಿಹೋತ್ರಿ ಕಾರ್ಯಕ್ರವನ್ನು ನಿರೂಪಿಸಿದರು. ಡಾ. ರಾಕೇಶ ನಾಯಕ ವಂದನಾರ್ಪಣೆ ಸಲ್ಲಿಸಿದರು.

ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 'ಅಂಕುರ 2024' ಕಾರ್ಯಗಾರ

Article Image

ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 'ಅಂಕುರ 2024' ಕಾರ್ಯಗಾರ

ಮೂಡುಬಿದಿರೆ: 21ನೇ ಶತಮಾನದಲ್ಲಿ ಜನರಿಗೆ ಆಯುರ್ವೇದದ ಮಹತ್ವ ತಿಳಿಯುತ್ತಿರುವುದು ಸಂತಸದ ಬೆಳವಣಿಗೆ ಎಂದು ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರಿರೋಗ ತಜ್ಞೆ ಡಾ. ರೇವತಿ ಭಟ್ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪ್ರಸೂತಿ ತಂತ್ರ ಹಾಗೂ ಸ್ತ್ರಿರೋಗ ವಿಭಾಗದ ವತಿಯಿಂದ ಪ್ರಾಜ್ಞಾ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ‘ಎಂಡೊಮೆಟ್ರಿಯೊಸಿಸ್- ಒಂದು ಸಂಯೋಜಿತ ವಿಧಾನ’ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆಯುರ್ವೇದ ಕ್ಷೇತ್ರದಲ್ಲಿ ಹೆಚ್ಚು ಕಾರ್ಯಗಾರ ಹಾಗೂ ವಿಚಾರ ಸಂಕಿರಣಗಳು ನಡೆಯಬೇಕು. ಇದರಿಂದ ಪಡೆದ ಜ್ಞಾನವನ್ನು ನಾವು ಇತರರಿಗೆ ತಿಳಿಸುವ ಅವಶ್ಯಕತೆ ಇದೆ. ಪ್ರಸ್ತುತ ವರ್ತಮಾನದಲ್ಲಿ ಜನರು ಸಾಕ್ಷಿಗಳನ್ನು ಹೆಚ್ಚು ನಂಬುತ್ತಾರೆ. ಹಾಗಾಗಿ ಸಾಕ್ಷಿಗಳ ಜೊತೆ ಆಯುರ್ವೇದದ ಬಗೆಗೆ ಜನರಿಗೆ ಖಾತರಿ ಪಡಿಸಬೇಕು ಎಂದು ಹೇಳಿದರು. ನಮ್ಮ ಹಿಂದಿನ ತಲೆಮಾರಿನ ಜನರಿಗೆ ಪ್ರಕೃತಿಯಲ್ಲಿ ದೊರೆಯುವ ಔಷಧಿಗಳ ಬಗ್ಗೆ ಅಪಾರ ಜ್ಞಾನವಿದ್ದರೂ ಅವರು ಆ ಜ್ಞಾನವನ್ನು ಮುಂದಿನ ತಲೆಮಾರಿಗೆ ಪಸರಿಸಿಲ್ಲ. ಆದರೆ ಈ ತಪ್ಪನ್ನು ನಾವು ಮಾಡಿದರೆ ಇದರಿಂದ ನಮ್ಮ ಮುಂದಿನ ಪೀಳಿಗೆಗೆ ನಷ್ಟವಾಗಲಿದೆ. ಹಾಗಾಗಿ ಇಂತಹ ಕಾರ್ಯಗಾರದಲ್ಲಿ ಪಡೆದ ಜ್ಞಾನವನ್ನು ನಾವು ಸಂಗ್ರಹಿಸಿ, ಪಸರಿಸಬೇಕು ಎಂದರು. ಆಳ್ವಾಸ್ ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ಯಶಸ್ಸಿನ ಹಿಂದೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವರ ಶ್ರಮವಿದೆ. ಇದನ್ನು ಮುನ್ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು. ಕಾರ್ಯಗಾರದ ಮೊದಲ ಅವಧಿಯನ್ನು ಆಳ್ವಾಸ್ ವೈದ್ಯಕೀಯ ಕೇಂದ್ರದ ಸ್ತ್ರಿರೋಗ ತಜ್ಞೆ ಡಾ. ಹನಾ ಶೆಟ್ಟಿ ಹಾಗೂ ನಂತರದ ಅವಧಿಗಳನ್ನು ಕೇರಳದ ಸರಕಾರಿ ಆಯುರ್ವೇದ ವೈದ್ಯಕೀಯ ಕೇಂದ್ರದ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಮಿನಿ ಪಿ., ಸ್ನಾತಕೋತ್ತರ ಪ್ರಸೂತಿ ಹಾಗೂ ಸ್ತ್ರಿರೋಗ ವಿಭಾಗದ ಮುಖ್ಯಸ್ಥ ಡಾ. ಅಶೋಕನ್, ಜಾಮ್‌ನಗರ ವಿವಿಯ ಇನ್‌ಸ್ಟಿಟ್ಯೂಟ್ ಆಫ್ ಟೀಚಿಂಗ್ ಆ್ಯಂಡ್ ರಿಸರ್ಚ್ ಇನ್ ಆಯುರ್ವೇದದ ಸ್ನಾತಕೋತ್ತರ ಪ್ರಸೂತಿ ಹಾಗೂ ಸ್ತ್ರಿರೋಗ ವಿಭಾಗದ ಪ್ರಾಧ್ಯಾಪಕಿ ಡಾ. ಶಿಲ್ಪಾ ಬಿ. ಡೊಂಗಾ ನಡೆಸಿದರು. ದೇಶದ ವಿವಿಧ ಕಾಲೇಜುಗಳಿಂದ 80ಕ್ಕೂ ಅಧಿಕ ವಿದ್ಯಾರ್ಥಿಗಳು, ಪ್ರಾಧ್ಯಪಕರು ಭಾಗವಹಿಸಿದ್ದರು. ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಕವಿತಾ ಸ್ವಾಗತಿಸಿದರು. ವಿದ್ಯಾರ್ಥಿನಿ ಡಾ. ಕಾವ್ಯ ರಾವ್ ಹಾಗೂ ಡಾ. ಪ್ರವೀಣಾ ಕೆ. ನಿರೂಪಿಸಿದರು

ಸತ್ತೂರು, ಧಾರವಾಡ: ರಾಷ್ಟ್ರೀಯ ಸಾಮೂಹಿಕ ಆರೋಗ್ಯ ದಂತ ದಿನಾಚರಣೆ

Article Image

ಸತ್ತೂರು, ಧಾರವಾಡ: ರಾಷ್ಟ್ರೀಯ ಸಾಮೂಹಿಕ ಆರೋಗ್ಯ ದಂತ ದಿನಾಚರಣೆ

ಎಸ್.ಡಿಎಂ. ದಂತ ಮಹಾವಿದ್ಯಾಲಯದ, ಸಾಮೂಹಿಕ ದಂತ ಚಿಕಿತ್ಸಾ ವಿಭಾಗವು ಜೂನ್ 19ರಂದು ರಾಷ್ಟ್ರೀಯ ಸಾಮೂಹಿಕ ಆರೋಗ್ಯ ದಂತ ಚಿಕಿತ್ಸಾ ದಿನವನ್ನು ಆಚರಿಸಲಾಯಿತು. ಈ ವಿಭಾಗವು ಧಾರವಾಡದ ಸುತ್ತಮುತ್ತಲಿನ 17 ತಾಲೂಕುಗಳಲ್ಲಿ ಸಂಚಾರಿ ಚಿಕಿತ್ಸಾಲಯದ ಮೂಲಕ ಬಾಯಿಯ ಆರೋಗ್ಯದ ಕುರಿತು ದೂರದ ಹಳ್ಳಿಗಳಿಗೆ ಭೇಟಿ ನೀಡುತ್ತಾ ಬಂದಿದ್ದಾರೆ. ಇತ್ತೀಚಿಗೆ 75 ಶಿಬಿರಗಳಲ್ಲಿ, 12,000ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಶಶಿ ಪಾಟೀಲ್ ಮುಖ್ಯ ಅತಿಥಿಗಳಾಗಿದ್ದರು. ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಮತ್ತಿತರ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧಾರವಾಡ ಜಿಲ್ಲೆಯಾದ್ಯಂತ 150ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಮುಖ್ಯ ಅತಿಥಿಯವರಾದ ಡಾ. ಶಶಿ ಪಾಟೀಲ್ ಮಾತನಾಡುತ್ತಾ: ಎಸ್.ಡಿ.ಎಂ. ವೈದ್ಯಕೀಯ ಮತ್ತು ದಂತ ಮಹಾವಿದ್ಯಾಲಯವು ಯಾವಾಗಲೂ ಸಮುದಾಯದ ಆರೋಗ್ಯ ಸುಧಾರಣೆಗೆ ಅಪಾರ ಕೊಡುಗೆ ನೀಡುತ್ತಾ ಬಂದಿದೆ. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಬಾಯಿಯ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚುವಲ್ಲಿ ಎಸ್.ಡಿ.ಎಂ. ನ ಶಿಬಿರಗಳು ಮತ್ತು ಸಂಚಾರಿ ಆಸ್ಪತ್ರೆಯು ಸಹಕಾರಿಯಾಗಿದೆ. ಆರೋಗ್ಯದ ಮಹತ್ವದ ಬಗ್ಗೆ ಸಮುದಾಯಕ್ಕೆ ತಿಳಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದರು. ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಕಾರ್ಯಗಾರವನ್ನು ನಡೆಸುತ್ತಿರುವ ಸಾಮೂಹಿಕ ದಂತ ಚಿಕಿತ್ಸಾ ವಿಭಾಗಕ್ಕೆ ಉಪಕುಲಪತಿಗಳಾದ ಡಾ. ನಿರಂಜನ ಕುಮಾರ್ ಅಭಿನಂದಿಸುತ್ತಾ, ಸಮತೋಲನ ಆಹಾರದ ಮೇಲೆ ಅದರಲ್ಲೂ ಗರ್ಭಿಣಿ ಮಹಿಳೆಯರಿಗೆ ಆಶಾ ಕಾರ್ಯಕರ್ತೆಯರು ವಿಶೇಷವಾಗಿ ಅವರ ಆರೋಗ್ಯದ ಉನ್ನತಿಗಾಗಿ ಗಮನಹರಿಸುತ್ತಾರೆ. ಆಶಾ ಕಾರ್ಯಕರ್ತೆಯರು ಸಮುದಾಯದಲ್ಲಿ ತಂಬಾಕು ಸೇವನೆಯಿಂದ ಆಗುವ ಸಮಸ್ಯೆಗಳನ್ನು ಪತ್ತೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬಹುದು ಎಂದರು. ಸಾಮೂಹಿಕ ದಂತ ಚಿಕಿತ್ಸಾ ವಿಭಾಗವು ನಡೆಸಿದ ವಿವಿಧ ಆರೋಗ್ಯ ಶಿಬಿರಗಳ ವರದಿಯನ್ನು ಡಾ. ಶೋದನ್ ಮಂಡಿಸಿದರು. ಡಾ. ಹೇಮಾ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ವಿವರಿಸಿದರು. ಸಾಮೂಹಿಕ ದಂತ ಚಿಕಿತ್ಸಾ ವಿಭಾಗವು ಜಿಲ್ಲಾ ಆರೋಗ್ಯ ಕಛೇರಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ರೋಟರಿ ಕ್ಲಬ್ ಮತ್ತು SKDRDP ಸಹಯೋಗದಲ್ಲಿ ಶಿಬಿರಗಳನ್ನು ನಡೆಸಲಾಗುತ್ತಿದೆ. ಈ ದಿನದ ಅಂಗವಾಗಿ ಎಸ್.ಡಿ.ಎಂ. ದಂತ ಮಹಾವಿದ್ಯಾಲಯವು ಪ್ರತಿ ವರ್ಷ ವಿಶ್ವ ತಂಬಾಕು ರಹಿತ ದಿನದ ಹಲವಾರು ಶಾಲಾ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ವಿಭಾಗದ ಮುಖ್ಯಸ್ಥರಾದ ಡಾ. ರವಿ ಶಿರಹಟ್ಟಿ ಅತಿಥಿಯವರನ್ನು ಸ್ವಾಗತಿಸಿದರು. ಡಾ. ಅಕ್ಷತಾ ಅಗ್ನಿಹೋತ್ರಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಡಾ. ಪ್ರೀತಾ ಶೆಟ್ಟಿ ವಂದಿಸಿದರು. ಡಾ. ಜೆಬಾ ಶೇಖ್ ಕಾರ್ಯಕ್ರಮವನ್ನು ನಿರೂಪಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ: ಇ.ಎನ್.ಟಿ ಶಿಬಿರದಲ್ಲಿ 143 ಮಂದಿ ಭಾಗಿ

Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ: ಇ.ಎನ್.ಟಿ ಶಿಬಿರದಲ್ಲಿ 143 ಮಂದಿ ಭಾಗಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರ ನಡೆಯುತ್ತಿದ್ದು, ದಿನಾಂಕ ಜೂ. 16 ರಂದು ‘ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ’ ನಡೆಯಿತು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಇವರು ಶಿಬಿರ ಉದ್ಘಾಟಿಸಿ ಮಾತನಾಡಿ, ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ತಿಂಗಳಿಗೆ ಮೂರು ಅಥವಾ ನಾಲ್ಕು ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತದೆ. ಪೂಜ್ಯ ಹೆಗ್ಗಡೆಯವರ ನಿರ್ದೇಶನದಂತೆ ತಿಂಗಳಿಗೆ 2 ಶಿಬಿರಗಳನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸಲಾಗುತ್ತದೆ. ಕನಿಷ್ಟ ಒಬ್ಬ ಎಂ.ಬಿ.ಬಿ.ಎಸ್ ವೈದ್ಯರು ಕೂಡ ಇಲ್ಲದ ಹಳ್ಳಿಯಲ್ಲಿ ವೈದ್ಯಕೀಯ ಸೌಲಭ್ಯಗಳಿಂದ ವಂಚಿತರಾದ ಜನತೆಗೆ ಅವರು ಇರುವ ಜಾಗದಲ್ಲಿಯೇ ಸೂಪರ್ ಸ್ಪೆಷಾಲಿಟಿ ವೈದ್ಯರ ಸೇವೆ ದೊರಕಿಸಿ ಕೊಡುವುದು ನಮ್ಮ ಗುರಿಯಾಗಿದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ ಮಾತನಾಡುತ್ತಾ, ಈ ಆಸ್ಪತ್ರೆಯಲ್ಲಿ ಸೋಮವಾರದಿಂದ ಶನಿವಾರದವರೆಗೆ ಇ.ಎನ್.ಟಿ ಸಂಬಂಧಿಸಿದ ಎಲ್ಲಾ ಖಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಈಗಾಗಲೇ ಹಲವಾರು ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ಕೂಡ ಇಲ್ಲಿ ನಡೆಸಲಾಗಿದೆ ಎಂದರು. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10%, ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 143 ಮಂದಿ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡು ಸಂತೋಷ ವ್ಯಕ್ತಪಡಿಸಿದರು.

ಆಹಾರ ಸುರಕ್ಷತಾ ದಿನ- "ಸುರಕ್ಷಿತ ಆಹಾರ ನಮಗೇಕೆ ಮುಖ್ಯ"

Article Image

ಆಹಾರ ಸುರಕ್ಷತಾ ದಿನ- "ಸುರಕ್ಷಿತ ಆಹಾರ ನಮಗೇಕೆ ಮುಖ್ಯ"

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದಿಂದ ಆಹಾರ ಸುರಕ್ಷತಾ ದಿನವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದ ಆರಂಭದಲ್ಲಿ “ಸುರಕ್ಷಿತ ಆಹಾರ ನಮಗೇಕೆ ಮುಖ್ಯ ಎನ್ನುವುದನ್ನು ಪ್ರಸ್ತುತ ಪಡಿಸುವ ಕಿರುನಾಟಕ, ನಂತರದಲ್ಲಿ ನಮ್ಮ ಸುತ್ತಮುತ್ತಲು ಸುಲಭದಲ್ಲಿ ದೊರೆಯುವ ಅನೇಕ ಅಹಾರ ಪದಾರ್ಥಗಳಾದ ಮಾವಿನಕಾಯಿ, ಎಳನೀರು, ಒಂದೆಲಗ, ಪೇರಲೆಕಾಯಿ, ಬಾಳೆಹಣ್ಣು, ಈರುಳ್ಳಿ ಇತ್ಯಾದಿಗಳ ಉಪಯೋಗಗಳನ್ನು ಪ್ರಸ್ತುತಪಡಿಸುವ ಕಾರ್ಯಕ್ರಮ ವಿದ್ಯಾರ್ಥಿಗಳಿಂದ ಸಾಗಿಬಂತು. ಕಾರ್ಯಕ್ರಮವನ್ನು ಕೊಬ್ಬರಿ-ಬೆಲ್ಲವನ್ನು ಅತಿಥಿಗಳಿಂದ ಮಕ್ಕಳಿಗೆ ನೀಡಿ ಆರಂಭಿಸಲಾಯಿತು. ನಂತರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಸಿದ್ದ-ಸಂಪನ್ಮೂಲ ವ್ಯಕ್ತಿ ಆಳ್ವಾಸ್ ಆರ್ಯುವೇದ ವೈದ್ಯಕೀಯ ಕಾಲೇಜಿನ ಡಾ. ಸ್ಮಿತಾ ಭಟ್ ಯು. ಎಸ್‌ರವರು- ಆಹಾರ ಕೇವಲ ಒಂದು ಜಡವಸ್ತುವಲ್ಲ ಅದು ನಮ್ಮ ದೇಹವನ್ನು ಪ್ರವೇಶಿಸಿ ದೇಹಕ್ಕೆ ಶಕ್ತಿ ತುಂಬುವ ಅಪರೂಪದ ವಸ್ತು. ನಮ್ಮ ದೇಹ ಕಸದ ಬುಟ್ಟಿಯಲ್ಲ. ಹಾಗಾಗಿ ಆಹಾರವೆಂದುಕೊಂಡು ಸಿಕ್ಕಿದನ್ನೆಲ್ಲ ತಿನ್ನದೇ ಸಮತೂಕದ ಆಹಾರವನ್ನು ಸೇವಿಸುವಂತೆ ಕರೆಯಿತ್ತರು. ಆಹಾರದ ಘಟಕಗಳು ಅವುಗಳ ಮೂಲಗಳು ಮತ್ತು ಅವುಗಳ ಉಪಯುಕ್ತತೆ ತಿಳಿಸಿಕೊಟ್ಟು, ಅದರ ಜೊತೆಗೆ ಸಿಕ್ಕಿದನ್ನೆಲ್ಲ ತಿನ್ನುತ್ತಾ ಹೋದರೆ, ನಾವು ತಿಂದ ಆಹಾರವೇ ಮುಂದೆ ವಿಷವಾಗಿ ನಮಗೆ ಅಪಾಯ ತರುತ್ತದೆ. ಜಂಕ್‌ಫುಡ್ ಎಂಬ ಮಾರಿಯನ್ನು ದೂರವಿಟ್ಟು, ಅತಿಯಾದ ಸಕ್ಕರೆ, ಉಪ್ಪು, ರಾಸಾಯನಿಕ ಬಳಸಿದ ಆಹಾರ ಪದಾರ್ಥಗಳನ್ನು ತ್ಯಜಿಸಿ -ಉತ್ತಮ ಆರೋಗ್ಯವನ್ನು ನಮ್ಮದಾಗಿಸುವತ್ತ ಗಮನ ಕೊಡುವಂತೆ ಕರೆನೀಡಿದರು. ಯಾವುದೇ ಆಹಾರ ಪದಾರ್ಥಗಳನ್ನು ತೆಗೆದುಕೊಂಡಾಗ ಅದನ್ನು ತಯಾರಿಸಲು ಬಳಸುವ ಸಾಮಾಗ್ರಿಗಳ ಮಾಹಿತಿಯನ್ನು ತಪ್ಪದೇ ಓದಿಕೊಳ್ಳಿ. ಸದಾಕಾಲ ಸಮತೂಕದ ಆಹಾರವನ್ನು ಸೇವಿಸಿ ಎನ್ನುವ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಮಾತಾನಾಡಿದ ಮುಖ್ಯಶಿಕ್ಷರಾದ ಶಿವಪ್ರಸಾದ್ ಭಟ್ ಮಾತಾನಾಡಿ ಉತ್ತಮ ಆರೋಗ್ಯ ನಮ್ಮದಾಗಬೇಕಾದರೆ ಅದರ ಬಗ್ಗೆ ಮನಗೆ ಸ್ಪಷ್ಟ ಅರಿವಿರಬೇಕು- ಜಂಕ್‌ಫುಡ್ ಇವತ್ತಿನಿಂದಲೇ ದೂರಮಾಡಿ, ಆರೋಗ್ಯಕ್ಕಿಂತ ದೊಡ್ಡ ಭಾಗ್ಯವಿಲ್ಲ, ಅದನ್ನು ಕಾಪಾಡಿಕೊಳ್ಳಿ ಎಂಬ ಕರೆಯಿತ್ತರು. ಆಹಾರ ಸುರಕ್ಷತಾ ದಿನದ ಮಹತ್ವ ಸಾರುವ ವೀಡಿಯೊ ಸಂದೇಶವನ್ನು ಪ್ರಸ್ತುತ ಪಡಿಸಲಾಯಿತು. ಸಂಸ್ಥೆಯ ವಿಜ್ಞಾನ ವಿಭಾಗದ ಉಸ್ತುವಾರಿಯಲ್ಲಿ ವಿದ್ಯಾರ್ಥಿನಿ ಸೃಷ್ಟಿ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಸಚ್ಚಿನ್ ನಾಯಕ್ ವಂದನೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ಸತ್ತೂರು, ಧಾರವಾಡ: ವಿಶ್ವ ಪರಿಸರ ದಿನಾಚರಣೆ

Article Image

ಸತ್ತೂರು, ಧಾರವಾಡ: ವಿಶ್ವ ಪರಿಸರ ದಿನಾಚರಣೆ

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಜೂನ್ 05ರಂದು “ವಿಶ್ವ ಪರಿಸರ ದಿನ”ವನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗಿಡಗಳಿಗೆ ನೀರುಣಿಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ಜೈವಿಕ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿಗಳು ಪರಿಸರವು ಮಾನವಕುಲಕ್ಕೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿ, ಅದನ್ನು ಸಂರಕ್ಷಿಸುವಂತೆ ತಿಳಿಯ ಹೇಳಿದರು. ಪರಿಸರ ದಿನಾಚರಣೆಯಲ್ಲಿ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ವಿಶ್ವವಿದ್ಯಾಲಯದ ಅಧಿಕಾರಿಗಳು, ಅಂಗ ಸಂಸ್ಥೆಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಶ್ವ ಪರಿಸರ ದಿನದ ಅಂಗವಾಗಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಎನ್.ಎಸ್.ಎಸ್. ಘಟಕವು “ಭೂ ಮರುಸ್ಥಾಪನೆ, ಮರು ಭೂಮೀಕರಣ, ಬರ ಸ್ಥಿತಿಸ್ಥಾಪಕತ್ವ” ಎಂಬ ಧ್ಯೇಯದ ಕುರಿತು ತಜ್ಞ ಉಪನ್ಯಾಸವನ್ನು ಆಯೋಜಿಸಿದ್ದರು. ಧಾರವಾಡದ ಪ್ರಸಿದ್ಧ ವೈದ್ಯ ಮತ್ತು ಪರಿಸರವಾದಿ ಡಾ. ಚಿದಾನಂದ ರಾಮನಗೌಡರ ಮುಖ್ಯ ಅತಿಥಿಯಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ: ಪ್ರತಿಯೊಬ್ಬರು ಪ್ರಕೃತಿಯನ್ನು ಸಂರಕ್ಷಿಸಲು ತಮ್ಮ ಸುತ್ತಮುತ್ತ ಸಸಿಗಳನ್ನು ನೆಡಬೇಕು ಮತ್ತು ಆಗಾಗ ನೀರುಣಿಸುತ್ತಿರಬೇಕು. ಶುದ್ಧ ಗಾಳಿ ಮತ್ತು ನೀರನ್ನೊಳಗೊಂಡ ಪರಿಸರವು ಮಾನವನಿಗೆ ಮೊದಲ ಮತ್ತು ಪ್ರಥಮ ಪ್ರಾಶಸ್ತ್ಯದ ಔಷಧವಾಗಿದೆ. ಪರಿಸರ ದಿನವನ್ನು ಆಚರಿಸುವುದರಿಂದ ನಾವು ಯುವ ಪೀಳಿಗೆಗೆ ಪರಿಸರದ ಅರಿವು ಮತ್ತು ಜಾಗೃತಿಯನ್ನು ಮೂಡಿಸಿದಂತಾಗುತ್ತದೆ. ಪರಿಸರದ ಅಸಮತೋಲನವು ತಾಪಮಾನ ಮತ್ತು ಹವಾಮಾನದ ವೈಪರಿತ್ಯತೆಗೆ ಕಾರಣವಾಗಿ ಮಾನವರ ಮೇಲೆ ಅತೀವ ಪರಿಣಾಮಗಳುಂಟು ಮಾಡುತ್ತದೆ. ದೇವರ ಕೊಡುಗೆಯಾದ ಹಸಿರು ಎಲೆಗಳು ಉತ್ತಮ ಆಮ್ಲಜನಕವನ್ನು ಕೊಡುವುದರಿಂದ ಅದರ ಸಂರಕ್ಷಣೆಯು ಆವಶ್ಯಕ. ಜನರಿಂದ ಪರಿಸರವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಹೊರತಾಗಿ ಪರಿಸರವೇ ನಮ್ಮನ್ನು ನಿಯಂತ್ರಿಸುತ್ತದೆ ಎಂಬ ಅರಿವಿರಬೇಕು ಎಂದು ಹೇಳಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ ವಿಜಯ ಕುಲಕರ್ಣಿ ಅತಿಥಿಗಳನ್ನು ಪರಿಚಯಿಸಿದರು. ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ, ಉಪ ಪ್ರಾಂಶುಪಾಲರಾದ ಡಾ. ದೀಪಕ ಕಣಬೂರ, ಎನ್.ಎಸ್.ಎಸ್. ಘಟಕದ ಸಂಯೋಜಕರಾದ ಡಾ. ರಾಕೇಶ ನಾಯಕ, ವಿಶ್ವವಿದ್ಯಾಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯವರಾದ ಬಾಬಣ್ಣಾ ಶೆಟ್ಟಿಗಾರ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚರ್ಮರೋಗ: ಉಚಿತ ತಪಾಸಣಾ ಶಿಬಿರ

Article Image

ಚರ್ಮರೋಗ: ಉಚಿತ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರವನ್ನು ಇದೇ ಬರುವ ಮೇ.26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ 1 ಗಂಟೆವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ: 8073349216 / 7760397878

ಬೆಳ್ತಂಗಡಿ: ಸುದರ್ಶನ ಕ್ರಿಯಾ ಯೋಗ ಶಿಬಿರ

Article Image

ಬೆಳ್ತಂಗಡಿ: ಸುದರ್ಶನ ಕ್ರಿಯಾ ಯೋಗ ಶಿಬಿರ

ಗುರುದೇವ್ ಶ್ರೀ ರವಿಶಂಕರ್ ಅವರ ಆನಂದೋತ್ಸವ ಸುದರ್ಶನ ಕ್ರಿಯಾ ಯೋಗ ಶಿಬಿರ ಉಜಿರೆಯ ಅರಿಪ್ಪಾಡಿ ಮಠ ಸಭಾಂಗಣದಲ್ಲಿ ಮೇ 15 ರಿಂದ 20ರ ವರೆಗೆ ಪ್ರತೀ ಸಂಜೆ 5.30 ರಿಂದ 8ರ ವರೆಗೆ ನಡೆಯಲಿದೆ. ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ, ಸುದರ್ಶನ ಕ್ರಿಯಾ ಮತ್ತು ಜೀವನಕ್ಕೆ ಸಂಬಂಧಿಸಿದ ಜ್ಞಾನ ಒದಗಿಸಲಾಗುವುದು. ವಿಶ್ವದ ಮಿಲಿಯಾಂತರ ಜನರ ಜೀವನವನ್ನು ಪರಿವರ್ತಿಸಿದ ಸರಳವಾದ ಉಸಿರಾಟ ಪ್ರಕ್ರಿಯೆ ಸುದರ್ಶನ ಕ್ರಿಯೆ ಕಲಿಯುವ ಸುವರ್ಣಾವಕಾಶವಿದ್ದು ಒತ್ತಡ ರಹಿತ, ಶಾಂತವಾದ ಮನಸ್ಸು ಸಂತೋಷ ಉತ್ಸಾಹ ಮತ್ತು ಕ್ರಿಯಾಶೀಲತೆ, ಮಾನಸಿಕ ಖಿನ್ನತೆ, ಚಿಂತೆ ಮತ್ತು ಆತಂಕಗಳಿಂದ ಮುಕ್ತಿ, ಆರೋಗ್ಯಕರವಾದ ದೇಹ ಮತ್ತು ಉತ್ತಮ ನಿದ್ದೆಗೆ ಸುದರ್ಶನ ಕ್ರಿಯಾ ಯೋಗ ಉಪಯುಕ್ತವಾಗಿದ್ದು ಆಸಕ್ತರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದಿನಿಂದ ದ .ಕ. ಜಿಲ್ಲೆಯಾದ್ಯಂತ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ

Article Image

ಇಂದಿನಿಂದ ದ .ಕ. ಜಿಲ್ಲೆಯಾದ್ಯಂತ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ

ಮಂಗಳೂರು: ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ದ.ಕ. ಜಿಲ್ಲೆಯಾದ್ಯಂತ ಎ. 1ರಿಂದ 30ರ ವರೆಗೆ ನಡೆಯಲಿದೆ. ಪ್ರತಿ ಬಾರಿಯಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕೆಎಂಎಫ್‌ನ ಲಸಿಕೆದಾರರು ಪ್ರತೀ ಮನೆ ಮನೆಗೆ ತೆರಳಿ ರೈತರ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಕಾಲು ಬಾಯಿ ಜ್ವರ ರೋಗವು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದನ್ನು ತಡೆಗಟ್ಟಲು ಲಸಿಕೆ ನೀಡುವುದೊಂದೇ ಪರಿಣಾಮಕಾರಿಯಾದ ವಿಧಾನವಾಗಿದೆ. ಈ ಹಿಂದೆ ರೈತರು ತಮ್ಮ ಜಾನುವಾರುಗಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪ್ರತಿ ಸುತ್ತಿನಲ್ಲಿ ಲಸಿಕೆ ಹಾಕುವುದು ಅವಶ್ಯವಾಗಿದೆ ಎಂದು ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ಎನ್. ತಿಳಿಸಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 2,50,569 ದನ, ಹಾಗೂ 1,832 ಎಮ್ಮೆ ಒಟ್ಟು 2,52,401 ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಲು ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸನ್ನದ್ಧವಾಗಿದ್ದು, ರೈತರು ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ನಿಗದಿತ ದಿನದಂದು ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ, ಲಸಿಕೆ ಹಾಕಲು ಬರುವ ಸಿಬ್ಬಂದಿಯೊಡನೆ ಸಹಕರಿಸಬೇಕು ಎಂದು ಹೇಳಿದ್ದಾರೆ.

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

Article Image

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

ಉಜಿರೆಯ ಪೆರ್ಲ ರಸ್ತೆಯಲ್ಲಿರುವ ಪ್ರಾಣನೆಸ್ಟ್, ಪ್ರಾಣಿಕ್ ಹೀಲಿಂಗ್ ಮತ್ತು ಅರ್ಹಾಟಿಕ್ ಯೋಗ ಕೇಂದ್ರದಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರವನ್ನು ದಿನಾಂಕ ಫೆಬ್ರವರಿ 3 ಮತ್ತು 4 (ಶನಿವಾರ ಮತ್ತು ಭಾನುವಾರ)ರಂದು ಹಮ್ಮಿಕೊಳ್ಳಲಾಗಿದೆ. ಪ್ರಾಣಿಕ್ ಹೀಲಿಂಗ್ ಒಂದು ಪುರಾತನವಾದ ಕಲೆ ಮತ್ತು ವಿಜ್ಞಾನವಾಗಿದ್ದು, ಇದರಲ್ಲಿ ಸ್ಪಶಿ೯ಸದೆ, ಔಷಧಗಳನ್ನು ಕೊಡದೇ, ಕೇವಲ ಪ್ರಾಣ ಶಕ್ತಿಯಿಂದ ಖಾಯಿಲೆಗಳನ್ನು  ಗುಣಪಡಿಸುವ ಪೂರಕ‌ ಚಿಕಿತ್ಸಾ ವಿಧಾನವಾಗಿದೆ. 16 ವರ್ಷ ಮೇಲ್ಪಟ್ಟ ಎಲ್ಲಾ ಆಸಕ್ತರು ಇದನ್ನು ಕಲಿಯಬಹುದಾಗಿದೆ. ಶುಲ್ಕ, ಹೆಸರು ನೋಂದಾಯಿಸಲು ಮತ್ತು ‌ಇತರ ಮಾಹಿತಿಗೆ 8105023414 ಇವರನ್ನು ಸಂಪರ್ಕಿಸಬಹುದು.

ನೀವೇ ವೈದ್ಯರಾಗಿ, ಆಲೋಪತಿಯನ್ನು ದೂರವಿಡಿ.....

Article Image

ನೀವೇ ವೈದ್ಯರಾಗಿ, ಆಲೋಪತಿಯನ್ನು ದೂರವಿಡಿ.....

ಮಲ್ಲಿಗೆ ಎಲೆಗಳನ್ನು ಕಿತ್ತು ಬಾಯಲ್ಲಿ ಹಿಡಿದುಕೊಂಡರೆ ಹಲ್ಲು ನೋವಿಗೆ ತಕ್ಷಣ ಪರಿಹಾರ ಸಿಗುತ್ತದೆ. ಮಲ್ಲಿಗೆ ಎಲೆಗಳನ್ನು ಜಜ್ಜಿ ಹುಣ್ಣುಗಳ ಮೇಲೆ ಹಚ್ಚಬೇಕು. ಹಲ್ಲು ನೋಯುತ್ತಿದ್ದರೆ ಮಲ್ಲಿಗೆ ಎಲೆಯನ್ನು ಕಚ್ಚಿ ತಿನ್ನಿ. ಮಲ್ಲಿಗೆ ಎಲೆಗಳು ಗಾಯಗಳನ್ನು ವಾಸಿಮಾಡುವ ಉತ್ತಮವಾದ ಹುಣ್ಣು ನಿವಾರಕ. ಜಾಸ್ಮಿನ್ ಎಣ್ಣೆಯನ್ನು ಅನ್ವಯಿಸಿ. ಜಾಸ್ಮಿನ್ ಕುಷ್ಠರೋಗ ಮತ್ತು ಕಂಡುಘ್ನ ಎಂದು ಹೇಳಿದ್ದಾರೆ. ದೇಹದಲ್ಲಿ ತುರಿಕೆ ಅಥವಾ ಚರ್ಮ ರೋಗವಿದ್ದರೆ ಮಲ್ಲಿಗೆ ಎಲೆಯನ್ನು ಜಜ್ಜಿ ಲೇಪಿಸಿ. ತುರಿಕೆ ಕಡಿಮೆ ಮಾಡುತ್ತದೆ. ಅನೇಕ ಚರ್ಮ ರೋಗಗಳು, ಅಂದರೆ. ಎಸ್ಜಿಮಾ, ಫಂಗಲ್ ಸೋಂಕು ಇತ್ಯಾದಿ. ಇದರ ನಡುವೆ ಮಲ್ಲಿಗೆ ಎಲೆಯ ಎಣ್ಣೆ ಅಥವಾ ಎಲೆ ಬೇರಿನ ಪೇಸ್ಟ್ ಪ್ರಯೋಜನಕಾರಿ. ತಲೆನೋವು ಇದ್ದರೆ ಮಲ್ಲಿಗೆಯ ಬೇರನ್ನು ಕಿತ್ತು ಹಚ್ಚುತ್ತಾರೆ. ಮಲ್ಲಿಗೆ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ತಲೆತಿರುಗುವಿಕೆ ಅಥವಾ ಮಾನಸಿಕ ಖಿನ್ನತೆಯಿಂದ ಪರಿಹಾರ ದೊರೆಯುತ್ತದೆ. ನೀರಿನಲ್ಲಿ ಶೀತ ಅಥವಾ ನಿರಂತರ ಕೆಲಸದಿಂದ ಅಂಗೈಯು ಬಿರುಕು ಬಿಟ್ಟರೆ, ಮಲ್ಲಿಗೆ ಎಲೆಗಳನ್ನು ವಿಂಗಡಿಸಿ ಮತ್ತು ಬಿರುಕುಗಳನ್ನು ಮುಚ್ಚಿ ಹಚ್ಚಿದರೆ ಗಾಯಗಳು ಬೇಗ ವಾಸಿಯಾಗುತ್ತವೆ. ಮಲ್ಲಿಗೆ ಎಲೆಯ ಸಿದ್ಧ ಎಣ್ಣೆಯಿಂದ ನಿಧಾನವಾಗಿ ಮಸಾಜ್ ಮಾಡಬೇಕು, ಇದರಿಂದ ದೇಹದ ಭಾಗವು ಮೃದು ಮತ್ತು ನೈಸರ್ಗಿಕವಾಗಿರುತ್ತದೆ. * ಕಿವಿ ನೋವು ಮತ್ತು ಕಿವಿಯಿಂದ ಸ್ರಾವದಂತಹ ದೂರುಗಳಿಗೆ ಎಲೆಗಳ ಸಿದ್ಧ ಎಣ್ಣೆ

First Previous

Showing 1 of 1 pages

Next Last