Article Image

ಚರ್ಮರೋಗ: ಉಚಿತ ತಪಾಸಣಾ ಶಿಬಿರ

Article Image

ಚರ್ಮರೋಗ: ಉಚಿತ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರವನ್ನು ಇದೇ ಬರುವ ಮೇ.26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ 1 ಗಂಟೆವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ: 8073349216 / 7760397878

ಬೆಳ್ತಂಗಡಿ: ಸುದರ್ಶನ ಕ್ರಿಯಾ ಯೋಗ ಶಿಬಿರ

Article Image

ಬೆಳ್ತಂಗಡಿ: ಸುದರ್ಶನ ಕ್ರಿಯಾ ಯೋಗ ಶಿಬಿರ

ಗುರುದೇವ್ ಶ್ರೀ ರವಿಶಂಕರ್ ಅವರ ಆನಂದೋತ್ಸವ ಸುದರ್ಶನ ಕ್ರಿಯಾ ಯೋಗ ಶಿಬಿರ ಉಜಿರೆಯ ಅರಿಪ್ಪಾಡಿ ಮಠ ಸಭಾಂಗಣದಲ್ಲಿ ಮೇ 15 ರಿಂದ 20ರ ವರೆಗೆ ಪ್ರತೀ ಸಂಜೆ 5.30 ರಿಂದ 8ರ ವರೆಗೆ ನಡೆಯಲಿದೆ. ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ, ಸುದರ್ಶನ ಕ್ರಿಯಾ ಮತ್ತು ಜೀವನಕ್ಕೆ ಸಂಬಂಧಿಸಿದ ಜ್ಞಾನ ಒದಗಿಸಲಾಗುವುದು. ವಿಶ್ವದ ಮಿಲಿಯಾಂತರ ಜನರ ಜೀವನವನ್ನು ಪರಿವರ್ತಿಸಿದ ಸರಳವಾದ ಉಸಿರಾಟ ಪ್ರಕ್ರಿಯೆ ಸುದರ್ಶನ ಕ್ರಿಯೆ ಕಲಿಯುವ ಸುವರ್ಣಾವಕಾಶವಿದ್ದು ಒತ್ತಡ ರಹಿತ, ಶಾಂತವಾದ ಮನಸ್ಸು ಸಂತೋಷ ಉತ್ಸಾಹ ಮತ್ತು ಕ್ರಿಯಾಶೀಲತೆ, ಮಾನಸಿಕ ಖಿನ್ನತೆ, ಚಿಂತೆ ಮತ್ತು ಆತಂಕಗಳಿಂದ ಮುಕ್ತಿ, ಆರೋಗ್ಯಕರವಾದ ದೇಹ ಮತ್ತು ಉತ್ತಮ ನಿದ್ದೆಗೆ ಸುದರ್ಶನ ಕ್ರಿಯಾ ಯೋಗ ಉಪಯುಕ್ತವಾಗಿದ್ದು ಆಸಕ್ತರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದಿನಿಂದ ದ .ಕ. ಜಿಲ್ಲೆಯಾದ್ಯಂತ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ

Article Image

ಇಂದಿನಿಂದ ದ .ಕ. ಜಿಲ್ಲೆಯಾದ್ಯಂತ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ

ಮಂಗಳೂರು: ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ದ.ಕ. ಜಿಲ್ಲೆಯಾದ್ಯಂತ ಎ. 1ರಿಂದ 30ರ ವರೆಗೆ ನಡೆಯಲಿದೆ. ಪ್ರತಿ ಬಾರಿಯಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕೆಎಂಎಫ್‌ನ ಲಸಿಕೆದಾರರು ಪ್ರತೀ ಮನೆ ಮನೆಗೆ ತೆರಳಿ ರೈತರ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಕಾಲು ಬಾಯಿ ಜ್ವರ ರೋಗವು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದನ್ನು ತಡೆಗಟ್ಟಲು ಲಸಿಕೆ ನೀಡುವುದೊಂದೇ ಪರಿಣಾಮಕಾರಿಯಾದ ವಿಧಾನವಾಗಿದೆ. ಈ ಹಿಂದೆ ರೈತರು ತಮ್ಮ ಜಾನುವಾರುಗಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪ್ರತಿ ಸುತ್ತಿನಲ್ಲಿ ಲಸಿಕೆ ಹಾಕುವುದು ಅವಶ್ಯವಾಗಿದೆ ಎಂದು ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ಎನ್. ತಿಳಿಸಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 2,50,569 ದನ, ಹಾಗೂ 1,832 ಎಮ್ಮೆ ಒಟ್ಟು 2,52,401 ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಲು ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸನ್ನದ್ಧವಾಗಿದ್ದು, ರೈತರು ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ನಿಗದಿತ ದಿನದಂದು ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ, ಲಸಿಕೆ ಹಾಕಲು ಬರುವ ಸಿಬ್ಬಂದಿಯೊಡನೆ ಸಹಕರಿಸಬೇಕು ಎಂದು ಹೇಳಿದ್ದಾರೆ.

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

Article Image

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

ಉಜಿರೆಯ ಪೆರ್ಲ ರಸ್ತೆಯಲ್ಲಿರುವ ಪ್ರಾಣನೆಸ್ಟ್, ಪ್ರಾಣಿಕ್ ಹೀಲಿಂಗ್ ಮತ್ತು ಅರ್ಹಾಟಿಕ್ ಯೋಗ ಕೇಂದ್ರದಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರವನ್ನು ದಿನಾಂಕ ಫೆಬ್ರವರಿ 3 ಮತ್ತು 4 (ಶನಿವಾರ ಮತ್ತು ಭಾನುವಾರ)ರಂದು ಹಮ್ಮಿಕೊಳ್ಳಲಾಗಿದೆ. ಪ್ರಾಣಿಕ್ ಹೀಲಿಂಗ್ ಒಂದು ಪುರಾತನವಾದ ಕಲೆ ಮತ್ತು ವಿಜ್ಞಾನವಾಗಿದ್ದು, ಇದರಲ್ಲಿ ಸ್ಪಶಿ೯ಸದೆ, ಔಷಧಗಳನ್ನು ಕೊಡದೇ, ಕೇವಲ ಪ್ರಾಣ ಶಕ್ತಿಯಿಂದ ಖಾಯಿಲೆಗಳನ್ನು  ಗುಣಪಡಿಸುವ ಪೂರಕ‌ ಚಿಕಿತ್ಸಾ ವಿಧಾನವಾಗಿದೆ. 16 ವರ್ಷ ಮೇಲ್ಪಟ್ಟ ಎಲ್ಲಾ ಆಸಕ್ತರು ಇದನ್ನು ಕಲಿಯಬಹುದಾಗಿದೆ. ಶುಲ್ಕ, ಹೆಸರು ನೋಂದಾಯಿಸಲು ಮತ್ತು ‌ಇತರ ಮಾಹಿತಿಗೆ 8105023414 ಇವರನ್ನು ಸಂಪರ್ಕಿಸಬಹುದು.

ನೀವೇ ವೈದ್ಯರಾಗಿ, ಆಲೋಪತಿಯನ್ನು ದೂರವಿಡಿ.....

Article Image

ನೀವೇ ವೈದ್ಯರಾಗಿ, ಆಲೋಪತಿಯನ್ನು ದೂರವಿಡಿ.....

ಮಲ್ಲಿಗೆ ಎಲೆಗಳನ್ನು ಕಿತ್ತು ಬಾಯಲ್ಲಿ ಹಿಡಿದುಕೊಂಡರೆ ಹಲ್ಲು ನೋವಿಗೆ ತಕ್ಷಣ ಪರಿಹಾರ ಸಿಗುತ್ತದೆ. ಮಲ್ಲಿಗೆ ಎಲೆಗಳನ್ನು ಜಜ್ಜಿ ಹುಣ್ಣುಗಳ ಮೇಲೆ ಹಚ್ಚಬೇಕು. ಹಲ್ಲು ನೋಯುತ್ತಿದ್ದರೆ ಮಲ್ಲಿಗೆ ಎಲೆಯನ್ನು ಕಚ್ಚಿ ತಿನ್ನಿ. ಮಲ್ಲಿಗೆ ಎಲೆಗಳು ಗಾಯಗಳನ್ನು ವಾಸಿಮಾಡುವ ಉತ್ತಮವಾದ ಹುಣ್ಣು ನಿವಾರಕ. ಜಾಸ್ಮಿನ್ ಎಣ್ಣೆಯನ್ನು ಅನ್ವಯಿಸಿ. ಜಾಸ್ಮಿನ್ ಕುಷ್ಠರೋಗ ಮತ್ತು ಕಂಡುಘ್ನ ಎಂದು ಹೇಳಿದ್ದಾರೆ. ದೇಹದಲ್ಲಿ ತುರಿಕೆ ಅಥವಾ ಚರ್ಮ ರೋಗವಿದ್ದರೆ ಮಲ್ಲಿಗೆ ಎಲೆಯನ್ನು ಜಜ್ಜಿ ಲೇಪಿಸಿ. ತುರಿಕೆ ಕಡಿಮೆ ಮಾಡುತ್ತದೆ. ಅನೇಕ ಚರ್ಮ ರೋಗಗಳು, ಅಂದರೆ. ಎಸ್ಜಿಮಾ, ಫಂಗಲ್ ಸೋಂಕು ಇತ್ಯಾದಿ. ಇದರ ನಡುವೆ ಮಲ್ಲಿಗೆ ಎಲೆಯ ಎಣ್ಣೆ ಅಥವಾ ಎಲೆ ಬೇರಿನ ಪೇಸ್ಟ್ ಪ್ರಯೋಜನಕಾರಿ. ತಲೆನೋವು ಇದ್ದರೆ ಮಲ್ಲಿಗೆಯ ಬೇರನ್ನು ಕಿತ್ತು ಹಚ್ಚುತ್ತಾರೆ. ಮಲ್ಲಿಗೆ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ತಲೆತಿರುಗುವಿಕೆ ಅಥವಾ ಮಾನಸಿಕ ಖಿನ್ನತೆಯಿಂದ ಪರಿಹಾರ ದೊರೆಯುತ್ತದೆ. ನೀರಿನಲ್ಲಿ ಶೀತ ಅಥವಾ ನಿರಂತರ ಕೆಲಸದಿಂದ ಅಂಗೈಯು ಬಿರುಕು ಬಿಟ್ಟರೆ, ಮಲ್ಲಿಗೆ ಎಲೆಗಳನ್ನು ವಿಂಗಡಿಸಿ ಮತ್ತು ಬಿರುಕುಗಳನ್ನು ಮುಚ್ಚಿ ಹಚ್ಚಿದರೆ ಗಾಯಗಳು ಬೇಗ ವಾಸಿಯಾಗುತ್ತವೆ. ಮಲ್ಲಿಗೆ ಎಲೆಯ ಸಿದ್ಧ ಎಣ್ಣೆಯಿಂದ ನಿಧಾನವಾಗಿ ಮಸಾಜ್ ಮಾಡಬೇಕು, ಇದರಿಂದ ದೇಹದ ಭಾಗವು ಮೃದು ಮತ್ತು ನೈಸರ್ಗಿಕವಾಗಿರುತ್ತದೆ. * ಕಿವಿ ನೋವು ಮತ್ತು ಕಿವಿಯಿಂದ ಸ್ರಾವದಂತಹ ದೂರುಗಳಿಗೆ ಎಲೆಗಳ ಸಿದ್ಧ ಎಣ್ಣೆ

First Previous

Showing 2 of 2 pages

Next Last