ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಿಗೆ ಸನ್ಮಾನ
ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ಅವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು, ಸಹಕಾರಿ ಸಂಘದ ವತಿಯಿಂದ ಶನಿವಾರ ಸನ್ಮಾನಿಸಲಾಯಿತು. ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್ ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ತಾಲೂಕು ಪಂಚಾಯಿತಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಸಿ. ಆರ್. ನರೇಂದ್ರ ಕುಮಾರ್ ಮಂಗಳೂರು, ಉದ್ಯಮಿ ನಾಣ್ಯಪ್ಪ ಪೂಜಾರಿ, ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ಚಂದ್ರಕಾಂತ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಕಾನೂನು ಸಲಹೆಗಾಲ ಶಶಿಕಿರಣ್ ಜೈನ್, ಪಶು ಸಂಗೋಪನಾ ಇಲಾಖೆಯ ಮುಖ್ಯ ಆಡಳಿತ ಪಶು ವೈದ್ಯಾಧಿಕಾರಿ ಡಾ.ರವಿ ಕುಮಾರ್ ಉಪಸ್ಥಿತರಿದ್ದರು. ನಿತ್ಯ ನಿಧಿ ಠೇವಣಿ ಸಂಗ್ರಾಹಕರು ಹಾಗೂ ಸಂಘ ಸಂಸ್ಥೆಗಳಿಂದ ಅಭಿನಂದನೆ ನಡೆಯಿತು. ನಿರ್ದೇಶಕರಾದ ಜಯರಾಜ್ ಜೈನ್, ಅಬ್ದುಲ್ ರಝಾಕ್, ಆರತಿ, ವಾರಿಜಾ ಕೆ., ಪ್ರಶಾಂತ್ ಕುಮಾರ್, ಪರಮೇಶ್ ಟಿ., ರತ್ನಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿ ರಾಜ್, ಶಾಖಾ ಪ್ರಬಂಧಕ ಅತಿಶಯ್ ಜೈನ್, ವಿಶಾಲಾ, ನ್ಯಾಯವಾದಿ ಶಿವಯ್ಯ, ಸಾಲ ವಸೂಲಾತಿಗಾರ ನಿರ್ಮಲ್ ಕುಮಾರ್ ಜೈನ್, ಸಲಹೆಗಾರ ವಸಂತ ಸುವರ್ಣ ಭಾಗವಹಿಸಿದ್ದರು. ಚಂದ್ರಶೇಖರ ಸ್ವಾಗತಿಸಿದರು. ನಿರ್ದೇಶಕಿ ಹೇಮಲತಾ ವಂದಿಸಿದರು. ಶಿಕ್ಷಣ ಇಲಾಖೆಯ ಸಿಆರ್ಪಿ ರಾಜೇಶ್ ನಿರೂಪಿಸಿದರು.
