Article Image

ಎಸ್.ಡಿ.ಎಂ. ಆರೋಗ್ಯ ಸಂವಾದಕ್ಕೆ ಸಾವಿರ ಸಂಚಿಕೆಯ ಸಂಭ್ರಮ

Article Image

ಎಸ್.ಡಿ.ಎಂ. ಆರೋಗ್ಯ ಸಂವಾದಕ್ಕೆ ಸಾವಿರ ಸಂಚಿಕೆಯ ಸಂಭ್ರಮ

ಪ್ರತೀ ಮಂಗಳವಾರ ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಸಂಜೆ 7.00ರಿಂದ 7.30ರ ಕೃಷಿರಂಗ ಕಾರ್ಯಕ್ರಮದಲ್ಲಿ ಮೂಡಿ ಬರುವ ಎಸ್.ಡಿ.ಎಂ. ಆಸ್ಪತ್ರೆ ಪ್ರಾಯೋಜಿತ ಕಾರ್ಯಕ್ರಮವೇ ಎಸ್.ಡಿ.ಎಂ. ಆರೋಗ್ಯ ಸಂವಾದ. 2006 ಎಪ್ರಿಲ್ ತಿಂಗಳಲ್ಲಿ ಆರಂಭವಾದ ಈ ಆರೋಗ್ಯ ಸಂವಾದ ಕಾರ್ಯಕ್ರಮವು ಕಳೆದ 20 ವರ್ಷಗಳಲ್ಲಿ ಒಂದೂ ಮಂಗಳವಾರ ತಪ್ಪದೆ ಜನರಿಗೆ ಆರೋಗ್ಯ ಸೇವಾ ಸಲಹೆಯನ್ನು ನೀಡುತ್ತಾ ಬಂದಿದೆ. 2003-04ರಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಗೊಂಡಾಗ ಆಕಾಶವಾಣಿ ಧಾರವಾಡ ಕೇಂದ್ರದವರ ಕೋರಿಕೆಯ ಮೇರೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಆರೋಗ್ಯ ಸಂವಾದ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಇಲ್ಲಿಯವರೆಗೆ ನಿರಂತರವಾಗಿ ನಡೆದು ಬಂದ ಈ ಆರೋಗ್ಯ ಸಂವಾದ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಆಸ್ಪತ್ರೆಯ ನೂರಾರು ವೈದ್ಯರುಗಳಿಂದ ಉತ್ತರ ಕರ್ನಾಟಕದ ಸಾವಿರಾರು ಮಂದಿ ತಮ್ಮ ಆರೋಗ್ಯ ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡಿದ್ದಾರೆ. ಇದೀಗ ನಿರಂತರ ವಿಂಶತಿ (20ನೇ) ವರ್ಷಕ್ಕೆ ಪಾದಾರ್ಪಣೆ ಮಾಡಿ, ಇದೇ ಜೂನ್ 17, 2025ಕ್ಕೆ 1000ನೇ ಸಂಚಿಕೆಯಾಗಿ ಮೂಡಿ ಬರುತ್ತಿರುವ ಕಾರ್ಯಕ್ರಮ ದೇಶದ ಆಕಾಶವಾಣಿ ಕೇಂದ್ರಗಳಲ್ಲೇ ಇನ್ನೊಂದಿಲ್ಲ ಎಂದರೆ ತಪ್ಪಾಗಲಾರದು. ಇದರ ಪ್ರಯುಕ್ತ ದಿನಾಂಕ 17 ಜೂನ್, 2025ರಂದು ಮದ್ಯಾಹ್ನ 12.00ರಿಂದ 1.00ಗಂಟೆಯವರೆ ವಿಶೇಷ ನೇರ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಯೆಂದು ಈ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನ

Article Image

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನ

ಮೂಡುಬಿದಿರೆ: ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ - ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ - ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ - ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ - ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ - ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ - ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾಷ್ ಕೊಡ್ಲಿಕರ್ - ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು. ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

ಎಸ್.ಡಿ.ಎಂ ವೃತ್ತಿಪರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Article Image

ಎಸ್.ಡಿ.ಎಂ ವೃತ್ತಿಪರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಉಜಿರೆ: ಯುವಕರ ಆಸಕ್ತಿಗೆ ಅನುಗುಣವಾದ ಉದ್ಯೋಗಾವಕಾಶಗಳ ಲಭ್ಯತೆ ಮತ್ತು ಸದ್ಭಳಕೆಯಿಂದ ಭಾರತವು ವಿವಿಧ ರಂಗಗಳಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನೊಡ್ಡಿ ಮುಂಚೂಣಿ ಸ್ಥಾನ ಗಳಿಸಬಹುದು ಎಂದು ಧರ್ಮಸ್ಥಳದ ಎಸ್‌ಕೆಡಿಆರ್‌ಡಿಪಿ ಬಿ.ಸಿ ಟ್ರಸ್ಟ್ ಸಿ.ಇ.ಒ ಅನಿಲ್ ಕುಮಾರ್ ಎಸ್.ಎಸ್‌. ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿತ ಮೂರು ದಿನಗಳ ವೃತ್ತಿಪರತರಬೇತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ಪೂರಕ ಕೌಶಲ್ಯವಿಲ್ಲದೆ ಉದ್ಯೋಗ ಕ್ಷೇತ್ರಕ್ಕೆ ಕಾಲಿಟ್ಟರೆ ವೃತ್ತಿಪರತೃಪ್ತಿ ಸಾಧ್ಯವಾಗುವುದಿಲ್ಲ. ಕೌಶಲ್ಯದ ಅಭಾವವು ವ್ಯಕ್ತಿಯ ವಿಕಾಸವನ್ನುತಡೆಯುವುದಷ್ಟೇ ಅಲ್ಲ, ದೇಶದ ಉತ್ಪಾದಕತೆ ಮತ್ತು ನಾವೀನ್ಯತೆಯ ಮೇಲೆಯೂ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲ ಕಾರ್ಪೊರೇಟ್ ಸಂಸ್ಥೆಗಳು ವಿದ್ಯಾರ್ಥಿಗಳನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿವೆ. ಕಡಿಮೆ ವೇತನ, ಉಚಿತ ಇಂಟರ್ನ್ಷಿಪ್ ಹೆಸರಲ್ಲಿ ಮೂಲಭೂತ ಅಗತ್ಯಗಳನ್ನು ಪೂರೈಸದೇ ಅಗತ್ಯ ಅವಧಿಗಿಂತ ಹೆಚ್ಚಾಗಿ ದುಡಿಸಿಕೊಳ್ಳಲಾಗುತ್ತಿದೆ. ಸ್ಪಷ್ಟ ವೃತ್ತಿಪರ ಮಾರ್ಗದರ್ಶನವಿಲ್ಲದ್ದರಿಂದ ಈ ರೀತಿಯ ಶೋಷಣೆಗಳಾಗುತ್ತವೆ. ಈ ಬಗೆಯ ಶೋಷಣೆಯು ಭವಿಷ್ಯದಲ್ಲಿ ಸಮರ್ಥ ಯುವಕರ ಹಿನ್ನಡೆಗೆ ಕಾರಣವಾಗುತ್ತದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರಿನ ಮ್ಯಾಜಿಕ್ ಬಸ್ ಫೌಂಡೇಶನ್ ಎಂಸಿಎಸ್‌ಆರ್ ಪ್ರಾಜೆಕ್ಟ್ ಮ್ಯಾನೇಜರ್ ಧವನ್‌ಗೌಡ ಮಾತನಾಡಿದರು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರಲ್ಲಿನ ವ್ಯಾವಹಾರಿಕ ಕೌಶಲ್ಯ ಹಾಗೂ ಸಾಫ್ಟ್ ಸ್ಕಿಲ್ಸ್ ಅಭಿವೃದ್ಧಿಗೆ ಒತ್ತು ನೀಡುವುದು ಬಹಳ ಅಗತ್ಯವಾಗಿದೆ. ಸಮಾಜಕಾರ್ಯ ವೃತ್ತಿಯು ನೇರವಾಗಿ ಜನರಜೊತೆ ಸಂಪರ್ಕ ಹೊಂದಿರುವ ಕ್ಷೇತ್ರ. ವಿದ್ಯಾರ್ಥಿಗಳು ಉತ್ತಮಗ್ರಹಿಸುವಿಕೆ, ಸಂವೇದನೆ, ಸ್ಪಷ್ಟ ಸಂವಹನ ಕೌಶಲ್ಯ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸಮಯ ನಿರ್ವಹಣೆ, ಸಮಸ್ಯೆ ಪರಿಹಾರ ಗುಣ ಮತ್ತು ನಾಯಕತ್ವದ ಗುಣಗಳನ್ನು ಹೊಂದಿರುವುದು ಬಹುಅಗತ್ಯವಾಗಿದೆ ಎಂದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕ ಜ್ಞಾನವಷ್ಟೇ ಮುಖ್ಯವಲ್ಲ. ಆತ್ಮವಿಶ್ವಾಸ ಹಾಗೂ ನಿರ್ಧಾರ ತೆಗೆದುಕೊಳ್ಳುವ ಧೈರ್ಯವು ವ್ಯಕ್ತಿತ್ವದ ಅವಿಭಾಜ್ಯ ಅಂಶಗಳು. ವೃತ್ತಿಪರ ಕೌಶಲ್ಯತರಬೇತಿ ಕಾರ್ಯಾಗಾರಗಳಿಂದ ಈ ಆತ್ಮವಿಶ್ವಾಸ, ಧೈರ್ಯ ಸಾಧ್ಯವಾಗುತ್ತದೆ ಎಂದರು. ವಿದ್ಯಾರ್ಥಿಗಳಲ್ಲಿ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಲು ತರಬೇತಿ ಕಾರ್ಯಾಗಾರಗಳು, ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಕ್ಷೇತ್ರಕಾರ್ಯದ ಅನುಭವಗಳು ಸಹಾಯಕವಾಗುತ್ತವೆ. ವೃತ್ತಿಜೀವನದ ಸಾಮರ್ಥ್ಯವನ್ನು ರೂಢಿಸುತ್ತವೆ. ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್‌ ಕೆ.ಆರ್. ಉಪಸ್ಥಿತರಿದ್ದರು. ಡಾ. ಅತುಲ್ ಎಸ್. ಸೆಮಿತ್ ಸ್ವಾಗತಿಸಿದರು. ಸ್ವಾತಿ ಬಿ. ಸ್ವಾಗತಿಸಿದರು, ಡಾ. ದಾನೇಶ್ವರಿ ವಂದಿಸಿದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

Article Image

ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು. ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿದ್ದು ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಈ ಮೊದಲು ಹಲವಾರು ಸ್ಪರ್ಧೆಗಳನ್ನು ಗೆದ್ದು ಬಹುಮಾನಗಳನ್ನು ಪಡೆದುಕೊಂಡಿರುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ವಿಜೇತ ತಂಡವನ್ನು ಅವರು ಅಭಿನಂದಿಸಿದ್ದಾರೆ.

ಸತ್ತೂರು, ಧಾರವಾಡ: ಕ್ರೀವಾ-2025 ಸಾಂಸ್ಕೃತಿಕ ಕಾರ್ಯಕ್ರಮ

Article Image

ಸತ್ತೂರು, ಧಾರವಾಡ: ಕ್ರೀವಾ-2025 ಸಾಂಸ್ಕೃತಿಕ ಕಾರ್ಯಕ್ರಮ

ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜು “ಕ್ರೀವಾ 2025” - “ಅಸ್ತಿತ್ವದ ಸಾರ” ಎಂಬ ಧ್ಯೇಯೆಯೊಂದಿಗೆ 28ರಿಂದ 31 ಮೇ, 2025ರ ವರೆಗೆ ನಾಲ್ಕು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀವಾ 2025 ಕಲೆ, ಸಂಸ್ಕೃತಿ ಮತ್ತು ಸಂಗೀತಗಳನ್ನೋಳಗೊಂಡ ವಾರ್ಷಿಕ ಸಾಂಸ್ಕೃತಿಕ ವೇದಿಕೆಯಾಗಿದೆ. ಯುವ ಗಾಯಕ ಮತ್ತು ಸಂಗೀತ ಸಂಯೋಜಕರಾದ ವಿಶ್ವನಾಥ ಹಾವೇರಿ ಅವರು ಮುಖ್ಯ ಅತಿಥಿಗಳಾಗಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಗೌರವ ಅತಿಥಿಗಳಾಗಿ ಕ್ರೀವಾ-2025 ಲಾಂಛನವನ್ನು ಅನಾವರಣಗೊಳಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು, ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಉಪಸ್ಥಿತರಿದ್ದರು. ಡಾ. ಸಂಗೀತಾ ಅಪ್ಪಣ್ಣವರ ಅತಿಥಿಗಳನ್ನು ಸ್ವಾಗತಿಸಿದರು. ನಿತೀಶ ಶೆಟ್ಟಿ ಕ್ರೀವಾದ ಅವಲೋಕನ ನೀಡಿದರು. ಚಾಂದನಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಲಲಿತಾ ಮತ್ತು ಹಾರ್ದಿಕ ಕಾರ್ಯಕ್ರಮವನ್ನು ನಿರೂಪಿಸಿದರು. ವೆದಾಂಗ ವಂದನಾರ್ಪಣೆ ಸಲ್ಲಿಸಿದರು.

ಸತ್ತೂರು, ಧಾರವಾಡ: ನಾನ್ ಇನ್ವ್ಸಿವ್ ವೆಂಟಿಲೇಷನ್ ಕುರಿತು ಒಂದು ದಿನದ ಕಾರ್ಯಾಗಾರ

Article Image

ಸತ್ತೂರು, ಧಾರವಾಡ: ನಾನ್ ಇನ್ವ್ಸಿವ್ ವೆಂಟಿಲೇಷನ್ ಕುರಿತು ಒಂದು ದಿನದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದಿಂದ 25 ಮೇ 2025 ರಂದು “ಆಮ್ಲಜನಕ ವಿತರಣಾ ಸಾಧನಗಳು” ಎಂಬ ವಿಷಯದೊಂದಿಗೆ “ನಾನ್ ಇನ್ವ್ಸಿವ್ ವೆಂಟಿಲೇಷನ್” ಕುರಿತು ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಉತ್ತರ ಕರ್ನಾಟಕದ ವಿವಿಧ ವೈದ್ಯಕೀಯ ಕಾಲೇಜುಗಳಿಂದ ಸುಮಾರು 170ಕ್ಕೂ ಹೆಚ್ಚು ಅಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಶ್ವಾಸಕೋಶ ವಿಭಾಗದ ಮುಖ್ಯಸ್ಥರಾದ ಡಾ. ಸಂಜಯ್, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅರವಳಿಕೆ ವಿಭಾಗದ ಮುಖ್ಯಸ್ಥರಾದ ಡಾ. ಮಾಧುರಿ ಕುರ್ದಿ, ಕೆ.ಎಲ್.ಇ ಬೆಳಗಾವಿಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ಕುಲಕರ್ಣಿ, ಹುಬ್ಬಳ್ಳಿಯ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ಹಿರೇಮಠ, ಬಿಜಾಪುರದ ಬಿ.ಎಲ್.ಡಿ.ಇ. ತುರ್ತು ಚಿಕಿತ್ಸಾ ವಿಭಾಗದ ಡಾ. ಉದಯಕುಮಾರ್ ಜೆ ಖಾಸಗೆ, ಕೆ.ಎಲ್.ಇ. ಬೆಳಗಾವಿಯ ಡಾ. ಗುರುಪ್ರಸಾದ್ ಆಂಟಿನ್ ಕಾರ್ಯಾಗಾರದ ಕುರಿತು ವಿಶೇಷ ತಜ್ಞ ಉಪನ್ಯಾಸ ನೀಡಿದರು. ಡಾ. ಸುಚಿತಾ ಹಾಗೂ ಡಾ. ನರೇಂದ್ರ ರೆಡ್ಡಿ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಲಕ್ಷ್ಮೀ ಕಾರ್ಯಗಾರದ ಪ್ರಾಸ್ತಾವಿಕ ಭಾಷಣವನ್ನು ನೀಡಿದರು. ಡಾ. ರಜನಿಕಾಂತ ವಂದನಾರ್ಪಣೆ ಸಲ್ಲಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

ಉಜಿರೆ, ಮೇ.21: ಭಯೋತ್ಪಾದನಾ ವಿರೋಧಿ ದಿನಾಚರಣೆಯ ಪ್ರಯುಕ್ತ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ಉಗ್ರಗಾಮಿ ಚಟುವಟಿಕೆಗಳ ವಿರುದ್ಧದ ಪ್ರಮಾಣ ವಚನವನ್ನು ಬೋಧಿಸಲಾಯಿತು. ಆಯಾ ತರಗತಿಗಳ ಬೋಧಕರು ಕಾಲೇಜಿನ ಆರಂಭಿಕ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿಗಳಿಂದ ಅಹಿಂಸೆ, ಸಹನೆಯೊಂದಿಗೆ ಗುರುತಿಸಿಕೊಳ್ಳುವ ಭಾರತದ ಅಸ್ಮಿತೆಗೆ ಅನುಗುಣವಾಗಿ ದೃಢವಿಶ್ವಾಸದ ಹೆಜ್ಜೆಗಳನ್ನಿರಿಸುವ ಸಂಕಲ್ಪದ ಧ್ವನಿ ಈ ಸಂದರ್ಭದಲ್ಲಿ ವ್ಯಕ್ತವಾಯಿತು. ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ಎದುರಿಸುವ ಪ್ರತಿಜ್ಞೆ ಮೊಳಗಿತು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸುವ ಆಕಾಂಕ್ಷೆ ವ್ಯಕ್ತವಾಯಿತು. ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡುವ ಪಣವನ್ನು ವಿದ್ಯಾರ್ಥಿಗಳು ತೊಟ್ಟರು. ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುವ ನಿರ್ಧಾರಕ್ಕೆ ಅನುಗುಣವಾಗಿ ಈ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪಹಲ್ಗಾಮ್ ಘಟನೆಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರತವು ಭಯೋತ್ಪಾದನಾ ಕೃತ್ಯಗಳನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂಬ ಸಂದೇಶ ರವಾನಿಸುವ ದೃಷ್ಟಿಯಿಂದ ಯುವಮನಸುಗಳಿಗೆ ಬೋಧಿತವಾದ ಈ ಪ್ರತಿಜ್ಞಾವಿಧಿ ಮಹತ್ವಪೂರ್ಣ ಎನ್ನಿಸಿತು.

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

Article Image

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಕಳೆಂಜ : ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಐಡಿಎ ಪುತ್ತೂರು ಘಟಕ, ಕೆವಿಜಿ ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ಸುಳ್ಯ, ಜೆಸಿಐ ಕೊಕ್ಕಡ ಕಪಿಲಾ ಮತ್ತು ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮಪಂಚಾಯತ್ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲೆತಡ್ಕದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್ ಮತ್ತು ರೋ. ಡಾ. ರಾಘವೇಂದ್ರ ಪಿದಮಲೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋ. ಸಂದೇಶ್ ಕುಮಾರ್ ರಾವ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಸುಸಜ್ಜಿತವಾದ ಆಸ್ಪತ್ರೆಯ ಸವಲತ್ತುಗಳ ಅಗತ್ಯವಿರುತ್ತದೆ. ರೋಟರಿಯಂತಹ ಸಂಘ ಸಂಸ್ಥೆಗಳು ಹಲವರ ಸಹಕಾರದಿಂದ ಆರೋಗ್ಯದ ಸವಲತ್ತುಗಳನ್ನು ಗ್ರಾಮೀಣ ಭಾಗಕ್ಕೆ ತಲುಪಿಸಿದಾಗ ಅತ್ಯಂತ ಉಪಯುಕ್ತವಾಗುತ್ತದೆ. ಜನರ ಆರೋಗ್ಯ ಜಾಗೃತಿಯ ದೃಷ್ಟಿಕೋನದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಸಾಮಾನ್ಯವಾಗಿ ಆಸ್ಪತ್ರೆ ಮತ್ತು ಡಾಕ್ಟರ್ ಗಳ ಬಳಿಗೆ ಅನಾರೋಗ್ಯಗೊಂಡವರು ತೆರಳುತ್ತಾರೆ ಆದರೆ ಶಿಬಿರದಂತ ಕಾರ್ಯಕ್ರಗಳಲ್ಲಿ ವೈದ್ಯರೇ ಗ್ರಾಮೀಣ ಪ್ರದೇಶದ ಜನರ ಬಳಿಗೆ ಬಂದಿರುವುದು ನಿಜಕ್ಕೂ ಫಲಕಾರಿ. ಇದನ್ನು ಚಿಕಿತ್ಸೆಯ ಅವಶ್ಯಕ ಇರುವವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರೋ. ಡಾ. ರಾಘವೇಂದ್ರ ಪಿದಮಲೆ ಅಭಿಪ್ರಾಯ ಪಟ್ಟರು. ಶಿಬಿರದಲ್ಲಿ ಕೆವಿಜಿ ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ನ ವೈದ್ಯರು ಸೇರಿದಂತೆ ನುರಿತ ತಜ್ಞರಿಂದ ಉಚಿತ ತಪಾಸಣೆ ಹಾಗು ಅಗತ್ಯವಿದ್ದವರಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ 60 ಕ್ಕೂ ಹೆಚ್ಚು ಜನರು ದಂತ ಭರ್ತಿ, ದಂತ ಶುಚಿಗೊಳಿಸುವಿಕೆ, ಹಲ್ಲು ಹೊರತೆಗೆಯುವಿಕೆ, ಕೃತಕ ಹಲ್ಲುಗಳ ಜೋಡಣೆಯಂತಹ ವಿವಿಧ ದಂತ ಚಿಕಿತ್ಸೆಗಳನ್ನು ಪಡೆದರು. ಈ ಸಂದರ್ಭದಲ್ಲಿ ಆನ್. ಡಾ. ದೀಪಾಲಿ ಡೊಂಗ್ರೆ, ರೋ. ಉದಯ ಶಂಕರ್ ಸೇರಿದಂತೆ ಗ್ರಾಮಸ್ಥರು, ಜೆಸಿಐ ಕೊಕ್ಕಡ ಕಪಿಲಾ ಸದಸ್ಯರು ಹಾಗೂ ಶಾಲೆಯ ಆಡಳಿತ ಮಂಡಳಿ ಭಾಗಿಯಾಗಿದ್ದರು. ಶಿಬಿರವನ್ನು ಜೆಸಿಐ ಕೊಕ್ಕಡ ಕಪಿಲಾ ಅಧ್ಯಕ್ಷೆ ಶೋಭಾ ಪಿ ನಿರೂಪಿಸಿ, ವಂದಿಸಿದರು. ಜನರ ಸೇವೆ ಮಾಡುವಂತಹ ಅವಕಾಶವನ್ನು ಮತ್ತು ಜವಾಬ್ದಾರಿಯನ್ನು ಬೆಳ್ತಂಗಡಿ ರೋಟರಿ ಸಂಸ್ಥೆ ನಮಗೆ ನೀಡಿದೆ. ಗ್ರಾಮೀಣ ಜನರ ಆರೋಗ್ಯ ಜಾಗೃತಿಯ ಉದ್ದೇಶದಿಂದ ಹಲವರ ಸಹಕಾರದೊಂದಿಗೆ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದ್ದು, ಇದರಿಂದ ಎಲ್ಲ ವರ್ಗದ ಜನರು ಉಪಯೋಗ ಪಡೆದುಕೊಂಡಿದ್ದಾರೆ. - ಸಂದೇಶ್ ಕುಮಾರ್ ರಾವ್ ಕಾರ್ಯದರ್ಶಿ ಬೆಳ್ತಂಗಡಿ ರೋಟರಿ ಕ್ಲಬ್

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

Article Image

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಮನುಷ್ಯರು ವ್ಯಸನಗಳ ದಾಸರಾಗಬಾರದು. ಚಟಗಳಿಂದಾಗಿ ಹಣ, ಆರೋಗ್ಯ, ಮರ್ಯಾದೆ, ಪ್ರೀತಿ-ವಿಶ್ವಾಸ ಎಲ್ಲವನ್ನೂ ಮದ್ಯವ್ಯಸನಿಗಳು ಕಳೆದುಕೊಳ್ಳುತ್ತಾರೆ. ವ್ಯಸನಮುಕ್ತರು ನರಕವನ್ನು ದಾಟಿ ಬಂದ ನಾಯಕರು ಎಂದು ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಆಯೋಜಿಸಿದ ೨೯೦೦ ಮಂದಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಸರ್ಕಾರ ಮದ್ಯ ಕುಡಿಸಬೇಕು ಎಂದು ಹೇಳಿದರೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮದ್ಯಪಾನ ಬಿಡಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಮದ್ಯದಂಗಡಿಗಳನ್ನು ಹೆಚ್ಚಿಸುವುದಲ್ಲದೆ ಮದ್ಯಪಾನ ನಿಯಂತ್ರಣ ಮಂಡಳಿಗೂ ಕೋಟಿಗಟ್ಟಲೆ ಹಣ ವೆಚ್ಚ ಮಾಡುತ್ತಿದೆ. ಆರೋಗ್ಯಪೂರ್ಣ ಸಭ್ಯ, ಸುಸಂಸ್ಕೃತ ಸಮಾಜ ರೂಪಿಸಲು ಹೆಗ್ಗಡೆಯವರು ಮಾಡುತ್ತಿರುವ ಸೇವೆ-ಸಾಧನೆಗಳ ಬಗ್ಗೆ ಶಾಲಾ-ಕಾಲೇಜುಗಳ ಪಠ್ಯದಲ್ಲಿ ಮಾಹಿತಿ ನೀಡಬೇಕು. ವಿಶ್ವವಿದ್ಯಾಲಯಗಳಲ್ಲಿ ಕೂಡಾ ಈ ಬಗ್ಗೆ ಸಂಶೋಧನಾತ್ಮಕ ಅಧ್ಯಯನ ನಡೆಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಮದ್ಯಪಾನ ನಿಷೇಧ ಮಾಡುವ ಸರ್ಕಾರ ಬಂದರೆ ಮಾತ್ರ ರಾಜ್ಯದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ವ್ಯಸನಗಳ ಚಟದಿಂದಾಗಿ ಇಂದು ಪುರುಷರ ಬಂಜೆತನವೂ ಹೆಚ್ಚಾಗುತ್ತಿರುವುದು ಖೇದಕರವಾಗಿದೆ ಎಂದು ಅವರು ತಿಳಿಸಿದರು. ವ್ಯಸನಮುಕ್ತರು ಮುಂದೆ ದೃಢಸಂಕಲ್ಪದೊಂದಿಗೆ ಸಾರ್ಥಕ ಜೀವನ ನಡೆಸಿ ಪರಿಸರದವರಿಗೂ ವ್ಯಸನಮುಕ್ತರಾಗುವ ಪ್ರೇರಣೆ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾಅಮಿತ್ ಸ್ವಸ್ಥ್ಯಾಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಮದ್ಯವ್ಯಸನಿಗಳು ಅನ್ಯಾಯ, ಅತ್ಯಾಚಾರ ಮಾಡುತ್ತಾ ಸಂಸ್ಕಾರಕ್ಕೂ ಸಮಾಜಕ್ಕೂ ಹೊರೆಯಾಗುತ್ತಾರೆ. ವ್ಯಸನಮುಕ್ತರಾಗಿ ಹೊಸ ಬದುಕನ್ನು ಆರಂಭಿಸಿದವರು. ಪಂಚೇಂದ್ರಿಯಗಳ ನಿಗ್ರಹದೊಂದಿಗೆ ಮಾನಸಿಕ ಮಾಲಿನ್ಯರಹಿತರಾಗಿ ಆದರ್ಶ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವ್ಯಸನಮುಕ್ತರು ಕುಟುಂಬದ ಸದಸ್ಯರೊಂದಿಗೆ ಪ್ರೀತಿ-ವಿಶ್ವಾಸದಿಂದ ಮುಕ್ತವಾಗಿ ಬೆರೆಯಬೇಕು. ಮತ್ತೆ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು. ವ್ಯಸನಮುಕ್ತರು ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಇಂದು ದೇವರ ದರ್ಶನ ಮಾಡಿರುವುದರಿಂದ ವಿಶೇಷ ಅನುಗ್ರಹಕ್ಕೆ ಪಾತ್ರರಾಗಿರುವಿರಿ ಎಂದು ಹೇಳಿ ಶುಭ ಹಾರೈಸಿದರು. ವ್ಯಸನಮುಕ್ತರ ಪರವಾಗಿ ರಾಮದುರ್ಗದ ಶಂಕರಪ್ಪ ಮತ್ತು ಉಡುಪಿಯ ಶಶಿಕಲರಾಜು ಅನಿಸಿಕೆ ವ್ಯಕ್ತಪಡಿಸಿದರು. ಮೂಡಬಿದಿರೆ ಡಾ. ವಿನಯ್ ಆಳ್ವ ಜಾಗೃತಿಅಣ್ಣ ಮತ್ತು ಜಾಗೃತಿಮಿತ್ರ ಪ್ರಶಸ್ತಿ ಪ್ರದಾನ ಮಾಡಿದರು. ಡಾ. ಪಿ. ವಿ. ಭಂಡಾರಿ, ಡಾ. ಶ್ರೀನಿವಾಸ ಭಟ್, ವಿ.ರಾಮಸ್ವಾಮಿ, ಪದ್ಮನಾಭ ಶೆಟ್ಟಿ ಮತ್ತು ಕಾಸಿಂ ಉಪಸ್ಥಿತರಿದ್ದರು. ಅನಿಲ್ ಕುಮಾರ್ ಆಶಯ ನುಡಿಗಳನ್ನು ಆಡಿ ಶುಭ ಹಾರೈಸಿದರು. ವಿವೇಕ್ ವಿ. ಪಾಯಸ್ ಸ್ವಾಗತಿಸಿದರು. ನಟರಾಜ್ ಬಾದಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗರಾಜ್ ಮತ್ತು ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸೆ: ಮೂರನೆ ಅಂತರರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭ

Article Image

ಯೋಗ ಮತ್ತು ಪ್ರಕೃತಿ ಚಿಕಿತ್ಸೆ: ಮೂರನೆ ಅಂತರರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭ

ಉಜಿರೆ: ದೇಹ ಮತ್ತು ಮನಸ್ಸಿಗೆ ಅವಿನಾಭಾವ ಸಂಬಂಧವಿದ್ದು, ಔಷಧಿರಹಿತ ಪ್ರಕೃತಿಚಿಕಿತ್ಸೆ ಮೂಲಕ ನಾವು ಆರೋಗ್ಯಭಾಗ್ಯವನ್ನು ಹೊಂದಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು ಎಂದು ಕೇಂದ್ರ ಸಚಿವ ಅರ್ಜುನ್‌ರಾಮ್ ಮೇಘವಾಲ್ ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ ಯೋಗ ಮತ್ತು ಪ್ರಕೃತಿಚಿಕಿತ್ಸೆ ಬಗ್ಗೆ ಮೂರನೆ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡಿದರು. ನಮ್ಮ ದೇಹ ಮತ್ತು ನಮ್ಮ ಸುತ್ತಲಿನ ಪ್ರಕೃತಿ, ಪರಿಸರ ಪಂಚಭೂತಗಳಿಂದ ರೂಪಿಸಲ್ಪಟ್ಟಿದೆ. ಎಲ್ಲದರಲ್ಲಿಯೂ ಅಧಿಕ ಪ್ರಮಾಣದಲ್ಲಿ ನೀರಿನ ಅವಶ್ಯಕತೆ ಇದೆ. ಆಹಾರ-ವಿಹಾರಕ್ಕೆ ದೇಹ ಸಹಕಾರಿಯಾದರೆ ಪ್ರೀತಿ-ವಿಶ್ವಾಸ, ಸೇವೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳ ಉದ್ದೀಪನಕ್ಕೆ ಮನಸ್ಸು ಪ್ರೇರಕವಾಗಿದೆ. ಪರಿಶುದ್ಧ ಮನದೊಂದಿಗೆ ನಾವು ಎಲ್ಲರೊಂದಿಗೆ ಪ್ರೀತಿ-ವಿಶ್ವಾಸದಿಂದ ಬೆರೆತಾಗ ಸುಖ-ಶಾಂತಿ, ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಧರ್ಮಸ್ಥಳದಲ್ಲಿ ನಿತ್ಯವೂ ನಡೆಯುತ್ತಿರುವ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನಪರಂಪರೆ ತ್ಯಾಗ, ಸೇವೆ ಹಾಗೂ ಲೋಕಕಲ್ಯಾಣ ಕಾರ್ಯಗಳನ್ನು ಅವರು ಶ್ಲಾಘಿಸಿ ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದರು. ಇಂತಹ ಕಲ್ಯಾಣಕಾರ್ಯಗಳಿಂದ ಭಾರತ “ವಿಶ್ವಗುರು” ಮಾನ್ಯತೆ ಹೊಂದಿದೆ. ತಾವು ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರನ್ನು ದೆಹಲಿಯಲ್ಲಿ ತಮ್ಮ ಮನೆಗೆ ಆಹ್ವಾನಿಸಿ ಗೌರವಿಸುವುದಾಗಿ ಸಚಿವರು ತಿಳಿಸಿದರು. ಸಚಿವರು ಪ್ರಶ್ನೋತ್ತರ ರೂಪದಲ್ಲಿ ಪ್ರತಿನಿಧಿಗಳಿಂದಲೆ ಮಾಹಿತಿ ಪಡೆದು ತಮ್ಮ ಭಾಷಣವನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ಯಶಸ್ವಿಯಾದರು. ಪ್ರತಿನಿಧಿಗಳ ಪರವಾಗಿ ಉತ್ತರ ಪ್ರದೇಶದ ಡಾ. ನೀರಜ್, ಆಂಧ್ರಪ್ರದೇಶದ ಡಾ. ಶಶಿಕಲಾ ಮತ್ತು ಪುತ್ತೂರಿನ ಡಾ. ಸುಲೇಖಾ ವರದರಾಜ್ ತಮ್ಮ ಅಭಿಪ್ರಾಯ, ಅನಿಸಿಕೆ ವ್ಯಕ್ತಪಡಿಸಿದರು. ಬೆಂಗಳೂರಿನ ಡಾ. ಸೀತಾರಾಮ ಜಿಂದಾಲ್ ಅವರ ವಿಶೇಷ ಸೇವೆ, ಸಾಧನೆಗಾಗಿ ಜೀವಮಾನ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪರವಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಡಾ. ಬಬಿನಾ ಪ್ರಶಸ್ತಿ ಸ್ವೀಕರಿಸಿದರು. ಪ್ರಕೃತಿ ಚಿಕಿತ್ಸಾ ಕ್ಷೇತ್ರದಲ್ಲಿ ವಿಶೇಷ ಸೇವೆ ಮಾಡಿದ ಡಾ. ನವೀನ್ ಕೆ.ವಿ. ಡಾ. ಕನಕಸೋನಿ, ಡಾ. ಗಾಯತ್ರಿ, ಡಾ. ನಿತೇಶ್, ಡಾ. ರಾಘವೇಂದ್ರ ರಾವ್, ಡಾ. ಬಬಿನಾ, ಡಾ. ಮಂಜುನಾಥ್ ಮತ್ತು ಡಾ. ಅಖಿಲಾ ಅವರನ್ನು ಸನ್ಮಾನಿಸಲಾಯಿತು. ಡಾ. ನವೀನ್ ಕೆ.ವಿ. ವರದಿ ಸಾದರಪಡಿಸಿದರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ ಪ್ರಕೃತಿಚಿಕಿತ್ಸಾ ಪದ್ಧತಿಯಿಂದ ಔಷಧಿ ರಹಿತವಾಗಿ ಹೆಚ್ಚಿನ ರೋಗಗಳನ್ನು ಶಮನಗೊಳಿಸಬಹುದು. ಆಧುನಿಕ ಜೀವನಶೈಲಿ, ಆಹಾರ-ವಿಹಾರ ಹಾಗೂ ಪ್ರಕೃತಿಯಿಂದ ನಾವು ವಿಮುಖರಾಗಿರುವುದೇ ಹೆಚ್ಚಿನ ರೋಗಗಳು ಬರಲು ಕಾರಣ ಎಂದು ಅವರು ಹೇಳಿದರು. ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಹರ್ಷೇಂದ್ರ ಕುಮಾರ್, ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ. ಸುಜಾತ ಧನ್ಯವಾದವಿತ್ತರು.

ವತ್ಸಲೆ ಕೃತಿ ಬಿಡುಗಡೆ

Article Image

ವತ್ಸಲೆ ಕೃತಿ ಬಿಡುಗಡೆ

ಉಜಿರೆ: “ವಾತ್ಸಲ್ಯ” ಮನೆ ನಿವಾಸಿಗಳ ಸಂತೃಪ್ತ ಮತ್ತು ನೆಮ್ಮದಿಯ ಜೀವನ ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿಯನ್ನು ನೀಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಬೀಡಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೂಜಾ ಪ್ರಶಾಂತ್ ಶೆಟ್ಟಿ ರಚಿಸಿದ “ವತ್ಸಲೆ” ಕೃತಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ತಾವು ಇತ್ತೀಚೆಗೆ ಮೈಸೂರಿನಲ್ಲಿ “ವಾತ್ಸಲ್ಯ” ಮನೆಗೆ ಭೇಟಿ ನೀಡಿ ಪುಟ್ಟ ಮನೆಯಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳಿದ್ದು ನಿವಾಸಿಗಳ ಸಂತೃಪ್ತ ಜೀವನ ಕಂಡು ತಮಗೆ ಅತೀವ ಸಂತೋಷ ಮತ್ತು ತೃಪ್ತಿ ಉಂಟಾಯಿತು ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಹಿಳಾ ಸಬಲೀಕರಣದ ರೂವಾರಿ ಹೇಮಾವತಿ ವೀ. ಹೆಗ್ಗಡೆಯವರ ಕನಸಿನ ಕೂಸು “ವಾತ್ಸಲ್ಯ” ಯೋಜನೆ. ಬದುಕಿನುದ್ದಕ್ಕೂ ಶ್ರಮ ಜೀವನ ಮಾಡಿ ಹೋರಾಡಿ ಬಳಲಿ ಬೆಂಡಾದ ಹಿರಿಯ ಜೀವಗಳಿಗೆ ಅಂತಿಮ ದಿನಗಳಲ್ಲಿ ಗೌರವದ, ನೆಮ್ಮದಿಯ ಸಂತೃಪ್ತ ಜೀವನ ಮಾಡಲು ಸೂರನ್ನು ಕಟ್ಟಿ ಕೊಡುವ ಕಾರ್ಯಕ್ರಮವೇ “ವಾತ್ಸಲ್ಯ”. ರಾಜ್ಯದೆಲ್ಲೆಡೆ ಈಗಾಗಲೆ 610 ಮನೆಗಳನ್ನು ಈ ಯೋಜನೆಯಡಿ ನಿರ್ಮಿಸಿದ್ದು ಬಡವರ ಪಾಲಿಗೆ ಆಶಾಜ್ಯೋತಿಯಾಗಿ, “ನಂದಾದೀಪ”ವಾಗಿ ಬೆಳಗುತ್ತಿವೆ. ಲೇಖಕಿ ಪೂಜಾಪ್ರಶಾಂತ್ ಶೆಟ್ಟಿ ಫಲಾನುಭವಿಗಳ ಅನುಭವ, ಅನಿಸಿಕೆಗಳನ್ನು ಹೃದಯಸ್ಪರ್ಶಿಯಾಗಿ ಕಥೆಗಳ ಮೂಲಕ ಸಾದರಪಡಿಸಿದ್ದಾರೆ. ಇವರಿಗೆ ಸಂದೀಪ್ ದೇವ್ ಸಹಕರಿಸಿರುತ್ತಾರೆ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ “ವಾತ್ಸಲ್ಯ” ಯೋಜನೆಯ ಅನುಷ್ಠಾನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ನಿಷ್ಠೆ, ಕಾಳಜಿ ಹಾಗೂ ಶ್ರಮವನ್ನು ಶ್ಲಾಘಿಸಿ ಅಭಿನಂದಿಸಿದರು. ಇದು ತಮಗೆ ಅತ್ಯಂತ ಆಪ್ತವಾದ ಕಾರ್ಯಕ್ರಮವಾಗಿದ್ದು “ವಾತ್ಸಲ್ಯ” ನಿವಾಸಿಗಳ ಪ್ರೀತಿ, ವಿಶ್ವಾಸ ಹಾಗೂ ಗೌರವ ತಿಳಿದು ನಮಗೆ ಸಂತೋಷವಾಗಿದೆ. ತಮ್ಮನ್ನೂ ಪ್ರೀತಿಸುವವರು “ಅಭಯ” ನೀಡುವವರೂ ಇದ್ದಾರೆ ಎಂಬ ವಿಶ್ವಾಸದಿಂದ ಅವರು ಇಂದು ಸಂತೃಪ್ತ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು. ಲೇಖಕಿ ಪೂಜಾ ಪ್ರಶಾಂತ್ ಶೆಟ್ಟಿ ಅವರನ್ನು ಹೇಮಾವತಿ ವೀ. ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು. ಡಿ. ಸುರೇಂದ್ರ ಕುಮಾರ್, ಅನಿತಾಸುರೇಂದ್ರ ಕುಮಾರ್, ಸೋನಿಯಾಯಶೋವರ್ಮ, ಅಮಿತ್, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್, ನಿಶ್ಚಲ್ ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಪ್ರಾದೇಶಿಕ ಹಣಕಾಸು ನಿರ್ದೇಶಕರು ಶಾಂತಾರಾಮ ಪೈ, ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ಧಾ ಶೆಟ್ಟಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ

Article Image

ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ಧಾ ಶೆಟ್ಟಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ

ಉಜಿರೆ : ಅತಿ ದೊಡ್ಡ ಪುಷ್ಪ ರಂಗೋಲಿ ರಚಿಸಿದಕ್ಕಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿನಂದಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಣಿಂಜೆ ನಿವಾಸಿ ಶೇಖರ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ ಶೆಟ್ಟಿ ಅವರು ಎಂಟು ಅಡಿ ಅಂದರೆ 246 ಸೆಂಟಿಮೀಟರ್ ವ್ಯಾಸದ ವೃತ್ತಾಕಾರದ ಹೂವಿನಿಂದ ರಚಿಸಿದ ರಂಗೋಲಿಗೆ ಪ್ರಶಸ್ತಿ ಲಭಿಸಿದೆ. ಇದನ್ನು 1 ಗಂಟೆ 39 ನಿಮಿಷಗಳಲ್ಲಿ ಗುಲಾಬಿ, ಮಲ್ಲಿಗೆ ಮೊದಲಾದ ವಿವಿಧ ಜಾತಿಯ ಬಣ್ಣ ಬಣ್ಣದ ಹೂಗಳ ದಳದಲ್ಲಿ ರಂಗೋಲಿಯನ್ನು ರಚಿಸಿ ದಾಖಲೆ ಮಾಡಿದ್ದಾರೆ. ಪ್ರಸ್ತುತ ಶ್ರದ್ಧಾ ಶೆಟ್ಟಿ ಅವರು ಎಸ್‌ಡಿಎಂ ಕಾಲೇಜಿನಲ್ಲಿ ತೃತೀಯ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದು ಪೋಷಕರು ಹಾಗೂ ಕಾಲೇಜಿನ ಅಧ್ಯಾಪಕರ ಪ್ರೇರಣೆಯೊಂದಿಗೆ ವಿದ್ಯಾರ್ಥಿನಿ ಈ ದಾಖಲೆಯನ್ನು ಬರೆದಿದ್ದಾರೆ. ಈ ಸಾಧನೆಯನ್ನು ಶ್ಲಾಘಿಸಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿನಿಯ ಪರಿಶ್ರಮದ ಪ್ರತಿಫಲಕ್ಕೆ ಅಭಿನಂದಿಸಿದರು.

ಕ್ರೀಡೆಯಲ್ಲಿ ಸಾಧನೆ ಮಾಡಬಹುದು: ಡಾ. ಮೋಹನ ಆಳ್ವ

Article Image

ಕ್ರೀಡೆಯಲ್ಲಿ ಸಾಧನೆ ಮಾಡಬಹುದು: ಡಾ. ಮೋಹನ ಆಳ್ವ

ವಿದ್ಯಾಗಿರಿ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಆದರೆ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡದೆ ಇರುವುದು ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುತ್ತಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಅತ್ಯಂತ ಕಡಿಮೆ ಯುವ ಸಂಪನ್ಮೂಲ ಇರುವ ದೇಶದ ಜೊತೆಗೂ ನಮಗೂ ಹೊರಡಲು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈಜುಕೊಳ ಆವರಣದಲ್ಲಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಖೇಲೋ ಇಂಡಿಯಾಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಈಜುಗಾರರಿಗೆ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗುವಂತ ವ್ಯವಸ್ಥೆ ಕಲ್ಪಿಸಬೇಕು ಎಂದರು. ದಕ್ಷಿಣ ಕನ್ನಡ ಈಜುಗಾರರ ಸಂಘದ ಅಧ್ಯಕ್ಷ ಯತೀಶ್ ಬೈಕಂಪಾಡಿ ಮಾತನಾಡಿ ಡಾ. ಮೋಹನ ಆಳ್ವರ ಗುರಿ ವಿದ್ಯಾರ್ಥಿಗಳ ಯಶಸ್ಸು. ಅದು ಆಳ್ವರಿಗೆ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸ್ಪೂರ್ತಿ ನೀಡುತ್ತಿದೆ. ವಿದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಈಜು ಪಠ್ಯದ ಒಂದು ಭಾಗವಾಗಿರುತ್ತದೆ. ಅದು ಸಾಧನೆಗೆ ಸಹಕರಿಯಾಗುತ್ತದೆ. ಪ್ರತಿಯೊಬ್ಬರೂ ಈಜು ಕಲಿಯಬೇಕು. ಆಗ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಈಜುಪಟುಗಳ ಸಂಖ್ಯೆ ಅಭಿವೃದ್ಧಿಯಾಗುತ್ತದೆ ಎಂದರು. ಭಾರತದ ಮಾಜಿ ಸ್ವಿಮ್ಮಿಂಗ್ ಕೋಚ್ ಪಾರ್ಥ ವಾರಣಾಸಿ ಮಾತನಾಡಿ ಭಾರತದಲ್ಲಿ 2030ರ ಹೊತ್ತಿಗೆ ಕ್ರೀಡೆ ಮುಖ್ಯವಾದ ವೃತ್ತಿಯಾಗಲಿದೆ. ಜನರು ಕ್ರೀಡೆಯಲ್ಲಿ ಹೆಚ್ಚಿನ ಗೌರವವನ್ನು ಪಡೆಯಲಿದ್ದಾರೆ. ಈಜು ಕ್ರೀಡೆಯಲ್ಲಿ ಪ್ರಮುಖ ಬದಲಾವಣೆಗಳಾಗಲಿದೆ ಎಂದರು. ಬಿಹಾರದ ಗಯಾದಲ್ಲಿ ಮೇ 5 ರಿಂದ 9 ರ ವರೆಗೆ ನಡೆಯಲಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್ ನಲ್ಲಿ ಕರ್ನಾಟಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಚಿಂತನ್ ಶೆಟ್ಟಿ, ಪ್ರತೀಕ್ಷಾ ಶೆಣೈ ಹಾಗೂ ಅಲೈಸ್ಟರ್ ಸ್ಯಾಮುಲ್ ರೆಗೋ ರವರಿಗೆ ದಕ್ಷಿಣ ಕನ್ನಡ ಈಜುಗಾರರ ಸಂಘದಿAದ ತಲಾ 15000 ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 5,000ಯನ್ನು ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಈಜುಗಾರರ ಸಂಘದ ಕಾರ್ಯದರ್ಶಿ ಮಹೇಶ್ ಕೋಡಿಕಲ್, ಮಂಗಳ ಈಜುಗಾರರ ಕ್ಲಬ್‌ನ ಅಧ್ಯಕ್ಷ ಶಿವಾನಂದ ಗಟ್ಟಿ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಈಜುಗಾರರ ಸಂಘದ ಸಹ ಕಾರ್ಯದರ್ಶಿ ಶರ್ಲಿ ರೇಗೋ ಕಾರ್ಯಕ್ರಮ ನಿರೂಪಿಸಿದರು.

ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ ನಾಳೆ

Article Image

ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ ನಾಳೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಇದೇ 20ರಂದು ಭಾನುವಾರ ಅಪರಾಹ್ನ ನಾಲ್ಕು ಗಂಟೆಗೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಶಾಸಕರುಗಳಾದ ಕೆ. ಹರೀಶ್ ಪೂಂಜ, ಮತ್ತು ಕೆ. ಪ್ರತಾಪಸಿಂಹ ನಾಯಕ್, ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಮೃತವರ್ಷಿಣಿ ಸಭಾಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ.

ಮುಳಿಯ ಹೊಸ ಲೋಗೋ ಅನಾವರಣ

Article Image

ಮುಳಿಯ ಹೊಸ ಲೋಗೋ ಅನಾವರಣ

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ. "ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ" ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ. ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ-ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ" ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ. "ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿಯಾದ " ದ ವೆಬ್ ಪೀಪಲ್ "ಮಾಡಿರುತ್ತದೆ ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲುರಾಯ ಮತ್ತು ಶರತ್ ಉಪಸ್ಥಿತರಿದ್ದರು...

ಉಜಿರೆ: ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Article Image

ಉಜಿರೆ: ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

ಸೇವಾ ನಿವೃತ್ತಿ ಪಡೆದ ಡಾ| ಬಾಲಕೃಷ್ಣ ಭಟ್ ಮತ್ತು ಡಾ| ಕಮಲಾ ಭಟ್ ಇವರ ಅತ್ಯುತ್ತಮ ಸೇವೆಯನ್ನು ಗೌರವಿಸಿ, ಬೀಳ್ಕೊಡುಗೆ ನೀಡುತ್ತಾ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿದರು. ಜನಸೇವೆಯ ಉದ್ದೇಶದೊಂದಿಗೆ ಡಾ.ಡಿ. ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಹರ್ಷೇಂದ್ರ ಕುಮಾರ್ ಹಾಗೂ ಹೆಗ್ಗಡೆ ಪರಿವಾರದವರ ಸಹಕಾರದಲ್ಲಿ ನಡೆಯುತ್ತಿರುವ ಈ ಆಸ್ಪತ್ರೆಯಲ್ಲಿ ಸಮಯದ ಬಗ್ಗೆ ಚಿಂತಿಸದೆ, ರೋಗಿಯ ಆರೈಕೆಯಲ್ಲಿಯೇ ತಮ್ಮ ಬದುಕಿನ ಅತೀ ಹೆಚ್ಚಿನ ಸಮಯವನ್ನು ಕಳೆದವರು ಇವರು. ತಮ್ಮ ಇಳಿವಯಸ್ಸಿನಲ್ಲಿಯೂ ರೋಗಿಗಳ ಹಿತವನ್ನೇ ಬಯಸಿದ ಇವರ ಸೇವೆ ಈ ಆಸ್ಪತ್ರೆಗೆ ಅತ್ಯುತ್ತಮ ಕೊಡುಗೆಯಾಗಿದೆ ಎಂದರು. ನಿವೃತ್ತರಾದ ಡಾ| ಬಾಲಕೃಷ್ಣ ಭಟ್ ಮಾತನಾಡಿ, ದೇವಮಾನವರಾದ ಹೆಗ್ಗಡೆಯವರ ಸಂಸ್ಥೆಯಲ್ಲಿ ವೈದ್ಯಕೀಯ ಸೇವೆ ಮಾಡುವ ಸದಾವಕಾಶ ನಮಗೆ ದೊರೆತಿದೆ. ಇದಕ್ಕಾಗಿ ಹೆಗ್ಗಡೆಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ವಯೋ ಸಹಜ ಸಮಸ್ಯೆಯಿಂದ ನಿವೃತ್ತಿ ಪಡೆಯುತ್ತಿದ್ದು, ವೈದ್ಯಕೀಯ ಸೇವಾ ಬದುಕಿನಲ್ಲಿ ಅತ್ಯಂತ ಉತ್ತಮ ರೀತಿಯಲ್ಲಿ ರೋಗಿಗಳ ಸೇವೆ ಮಾಡಿದ ಸಂತೃಪ್ತಿ ನಮಗಿದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ಸಮರ್ಥ ನಾಯಕತ್ವದಲ್ಲಿ ಜನಪ್ರಿಯಗೊಂಡಿರುವ ಈ ಆಸ್ಪತ್ರೆಯಲ್ಲಿ ಅತ್ಯುತ್ತಮ ವೈದ್ಯವೃಂದ, ನುರಿತ ದಾದಿಯರು, ಒಳ್ಳೆಯ ಸಿಬ್ಬಂದಿಗಳೊAದಿಗೆ ಸೇವೆ ಮಾಡಿದ್ದು, ಎಲ್ಲರೂ ನಮಗೆ ಸದಾ ಸ್ಮರಣೀಯರು ಎಂದರು. ಡಾ| ಚಿನ್ಮಯ್ ಇವರು ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಧೀರ್ಘಕಾಲದ ಅನುಭವ ಹೊಂದಿರುವ ಮತ್ತು ತಮ್ಮ ಇಳಿವಯಸ್ಸಿನಲ್ಲಿಯೂ ಲವಲವಿಕೆ ಮತ್ತು ಸದಾ ಕಳೆದ 13 ವರ್ಷಗಳಿಂದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ವಿ ಭಾಗದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಡಾ| ಬಾಲಕೃಷ್ಣ ಭಟ್, ಹಾಗೂ ಡಾ| ಕಮಲಾ ಭಟ್ ಇವರು ವಯೋಸಹಜ ಸಮಸ್ಯೆಗಳಿಂದಾಗಿ ಸೇವಾ ನಿವೃತ್ತಿ ಪಡೆದರು. ಚಟುವಟಿಕೆಯಲ್ಲಿರುವ ಇವರಿಬ್ಬರೂ ಕೂಡ ನಮ್ಮಂತಹ ವೈದ್ಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು. ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರು ಮಾತನಾಡಿ, ತಮ್ಮ ವೈದ್ಯಕೀಯ ವೃತ್ತಿ ಜೀವನದಲ್ಲಿ ಅಪಾರ ಅನುಭವ ಹೊಂದಿರುವ ಡಾ| ಬಾಲಕೃಷ್ಣ ಭಟ್, ಮೆಡಿಸಿನ್ ವಿಭಾಗದಲ್ಲಿದ್ದರೂ ಮೂಳೆಚಿಕಿತ್ಸೆ, ಮಕ್ಕಳ ಚಿಕಿತ್ಸೆಯಲ್ಲಿಯೂ ಪರಿಣತಿ ಪಡೆದಿದ್ದರು. ಡಾ| ಕಮಲಾ ಭಟ್ ತಮ್ಮ ವೃತ್ತಿ ಜೀವನದಲ್ಲಿ ಅತೀ ಹೆಚ್ಚು ರೋಗಿಗಳಿಗೆ ಅತ್ಯುತ್ತಮ ಸೇವೆ ನೀಡುವ ಮೂಲಕ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು. ಇನ್ಯೂರೆನ್ಸ್ ವಿಭಾಗದ ಜಗನ್ನಾಥ್ ನಿರೂಪಿಸಿದರು. ವೈದ್ಯರು, ದಾದಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

Article Image

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಆದೇಶದಂತೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ, ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಆಯೋಜಿಸಲಾಗಿದ್ದ, ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏ.2 ಬುಧವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 2.30ರವರೆಗೆ ನಡೆಯಿತು. ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಶಿಬಿರ ಉದ್ಘಾಟಿಸಿ ಮಾತನಾಡಿದರು. ದೇಹದ ರೋಗನಿರೋಧಕ ಅವ್ಯವಸ್ಥೆಯಿಂದ ಆರೋಗ್ಯಕರ ಅಂಗಾಂಶಗಳ ಮೇಲೆ ಪರಿಣಾಮ ಬೀಳುತ್ತದೆ. ಇದರಿಂದ ಆಟೋಇಮ್ಯೂನ್ ಕಾಯಿಲೆಗಳು ಸಂಭವಿಸುತ್ತವೆ. ರುಮಟಾಯ್ಡ್ ಸಂಧಿವಾತ, ಮಲ್ಟಿಪಲ್ ಸ್ಕೆರೋಸಿಸ್ ಇತ್ಯಾದಿ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಈ ಎಲ್ಲಾ ತೊಂದರೆಗಳಿಗೆ ಈ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್. ಪಿ ಇವರು ಮಾತನಾಡಿ, ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಚಿಕಿತ್ಸೆ ನೀಡುವ ನುರಿತ ತಜ್ಞ ವೈದ್ಯರಾಗಿದ್ದು, ಎಲ್ಲರೂ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಅಧ್ಯಕ್ಷತೆ ವಹಿಸಿದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡಿ, ಎಲ್ಲಾ ಖಾಯಿಲೆಗಳಿಗೆ ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಹೆಗ್ಗಡೆಯವರ ಬಯಕೆ. ಹೆಗ್ಗಡೆಯವರ ಆದೇಶದಂತೆ ಹಲವಾರು ಉಚಿತ ಶಿಬರಗಳನ್ನು ನಡೆಸಲಾಗುತ್ತಿದೆ. ಹಲವಾರು ಜನರ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುವುದರಿಂದ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಕಡಿಮೆಯಾಗುವುದಲ್ಲದೇ ಅತ್ಯಂತ ಶೀಘ್ರವಾಗಿ ಗುಣಮುಖರಾಗುತ್ತಾರೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಷಿಯನ್ ಡಾ| ಯಶಸ್ವಿನಿ, ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ರಜತ್ ಉಪಸ್ಥಿತರಿದ್ದರು. ಇನ್ಶೂರೆನ್ಸ್ ವಿಭಾಗದ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು. ಈ ಶಿಬಿರದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಿದ್ದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದರು.

ಮೂಡುಬಿದಿರೆ: ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

Article Image

ಮೂಡುಬಿದಿರೆ: ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ವಿದ್ಯಾಗಿರಿ: 'ರಂಗ ಚಟುವಟಿಕೆಯೇ ನನ್ನ ಬದುಕಿನ ಯಶಸ್ಸಿನ ಸೂತ್ರ' ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ.ಮೋಹನ ಆಳ್ವ ಹೇಳಿದರು. ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ 'ವಿಶ್ವರಂಗಭೂಮಿ ದಿನಾಚರಣೆ' ಅಂಗವಾಗಿ ಶುಕ್ರವಾರ ಹಮ್ಮಿಕೊಂಡ 'ರಂಗಗೀತೆ- ಉಪನ್ಯಾಸ- ಸನ್ಮಾನ- ನಾಟಕ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜ ಮತ್ತು ಬದುಕಿಗೆ ರಂಗಭೂಮಿ ಕೊಡುಗೆ ಅಪಾರ. ಪಠ್ಯಕ್ಕಿಂತ ರಂಗ ಚಟುವಟಿಕೆಗಳ ನೆನಪು ನನಗೆ ಇಂದಿಗೂ ಚಿರಸ್ಥಾಯಿಯಾಗಿದೆ' ಎಂದರು. ಭೋಜ ಶೆಟ್ಟ ನಮ್ಮ ಸಮಕಾಲೀನರು. ರಂಗದಲ್ಲಿ ಅವರ ಒಡನಾಟವೇ ಸುಂದರ ಎಂದು ಶ್ಲಾಘಿಸಿದರು. ಲಂಕೇಶ್ ಬರೆದ 'ಪೋಲಿಸರಿದ್ದಾರೆ ಎಚ್ಚರಿಕೆ' ನಾಟಕದ 'ರುದ್ರಮೂರ್ತಿ' ಪಾತ್ರ ಸೇರಿದಂತೆ ತಾವು ನಿರ್ವಹಿಸಿದ ‘ಗುಂಡ', ‘ತುಘಲಕ್', 'ಬಯ್ಯಮಲ್ಲಿಗೆ' ನಾಟಕದಲ್ಲಿ ತಾವು ನಿರ್ವಹಿಸಿದ ‘ವಿದೂಷಕ' ಪಾತ್ರ ಸೇರಿದಂತೆ ಎಲ್ಲ ಪಾತ್ರಗಳನ್ನು ತೃಪ್ತ ಭಾವದಿಂದ ಮೆಲುಕು ಹಾಕಿದರು. ವಿಠಲ್ ಮಾಸ್ಟರ್ ಮೂಲಕ ಭರತ ನಾಟ್ಯ ಕಲಿತು ದೇಶ- ವಿದೇಶಗಳಲ್ಲಿ ಪ್ರದರ್ಶನ ನೀಡಿರುವುದನ್ನು ನೆನಪಿಸಿಕೊಂಡರು. ‘ಮೂಕಾನಭಿಯ, ಮ್ಯಾಜಿಕ್ ಕಲಿತ - ಪ್ರಯೋಗಿಸಿದ ಅನುಭವ ನನ್ನನ್ನು ಗಟ್ಟಿಗೊಳಿಸಿದೆ' ಎಂದ ಅವರು, 'ಮಕ್ಕಳೇ ನೀವು ಎಲ್ಲಿಯೇ ಪ್ರದರ್ಶನ ನೀಡಿದರೂ, ನಾನು ಪ್ರೇಕ್ಷಕನಾಗಿದ್ದೇನೆ ಎಂಬುದನ್ನು ನೆನಪಿಸಿಕೊಳ್ಳಿ' ಎಂದು ಹಿತವಚನ ಹೇಳಿದರು. ‘ಬೆಸ್ತರ, ಬೇಡರ ನೃತ್ಯ ನಿರಂತರವಾಗಿ ಮಾಡಿದ್ದೇನೆ. ಅದೇ ರೀತಿ ಅವಿರತವಾಗಿ ತೊಡಗಿಸಿಕೊಂಡಾಗ ಬದುಕಿನ ಯಶಸ್ಸು ದೊರೆಯುತ್ತದೆ' ಎಂದರು. ‘ಬದುಕೇ ಒಂದು ನಾಟಕ, ವಿವಿಧ ಹಂತದಲ್ಲಿ ನಾವು ನಟನೆ ಮಾಡಬೇಕಾಗುತ್ತದೆ' ಎಂದು ಮಾರ್ಮಿಕವಾಗಿ ಹೇಳಿದರು. ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಹಿರಿಯ ರಂಗಕರ್ಮಿ ಡಾ| ನರಸಿಂಹಮೂರ್ತಿ ಆರ್. ಮಾತನಾಡಿ, ‘ಲಲಿತಕಲೆಗಳ ಸಂಗಮ ಕ್ಷೇತ್ರವೇ ‘ರಂಗಭೂಮಿ' ಎಂದು ವಿಶ್ಲೇಷಿಸಿದರು. ಪಂಚೇಂದ್ರಿಯ ಮೂಲಕ ನೆಮ್ಮದಿ ನೀಡುವ ಮನುಷ್ಯ ಕೃತ ಕ್ರಿಯೆಗಳೇ ಕಲೆ. ಪ್ರಾಚೀನ ಭಾರತದಲ್ಲಿ 64 ಕಲೆಗಳನ್ನು ಗುರುತಿಸಲಾಗಿದೆ. ನಾಟಕ ಎಂಬುದು ‘ಕಲಾ ರಸಾಯನ'. ಹಲವು ಕಲೆಗಳ ಮೇಳೈಸುವಿಕೆ ಎಂದು ವಿವರಿಸಿದರು.ವಿಭಿನ್ನ ರುಚಿ ಉಳ್ಳವರ ಭೋಜನವೇ ನಾಟಕ. ಎಲ್ಲರಿಗೂ ಏಕ ಕಾಲದಲ್ಲಿ ಕಲೆಗಳ ಖಾದ್ಯ ಲಭ್ಯ. ನಾಟಕ ಅರಿವು- ಮನುಷ್ಯತ್ವ ಮೂಡಿಸಬೇಕು ಎಂದರು. ‘ದೇಗುಲಗಳಿಗೆ ಹೋಗದಿದ್ದರೂ ರಂಗಭೂಮಿಯನ್ನು ಕಳೆದುಕೊಳ್ಳಬೇಡಿ' ಎಂದು ಬರ್ನಾಡ್ ಷಾ ಹೇಳಿದ್ದಾರೆ ಎಂದು ಅವರು ಉಲ್ಲೇಖಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜೀವನ್ ರಾಮ್ ಸುಳ್ಯ, ನಾಟಕವಿಲ್ಲದೇ ಜೀವನ ಇಲ್ಲ. ನಾವು ರಂಗದಲ್ಲಿ ನಾಟಕಕಾರರು, ಆದರೆ, ಎಲ್ಲರೂ ಜೀನದಲ್ಲಿ ನಾಟಕಕಾರರು. ಪಾತ್ರಗಳು ಮಾತ್ರ ವಿಭಿನ್ನ. ಎಲ್ಲ ವೃತ್ತಿಗಳು ‘ನಾಟಕ' ಬಯಸುತ್ತವೆ ಎಂದು ರಂಗಭೂಮಿ ದಿನದ ಕುರಿತು ಮಾಹಿತಿ ಹಂಚಿಕೊಂಡರು. ವಿಶ್ವರಂಗ ಸನ್ಮಾನ: ರಂಗಭೂಮಿಯ ಹಿರಿಯ ಮತ್ತು ಚಲನಚಿತ್ರ ಕಲಾವಿದ ಎಂ.ಭೋಜ ಶೆಟ್ಟಿ ತೋಟದಮನೆ ಅವರನ್ನು ಸನ್ಮಾನಿಸಲಾಯಿತು. ಜೀವನ್ ರಾಮ್ ಸುಳ್ಯ, ವಿದುಷಿ ಸುಮನಾ ಪ್ರಸಾದ್ ಮತ್ತು ಮಮತಾ ಕಲ್ಮಕಾರು ಅವರು, ‘ಸಾವಿರದ ಮಾಯೆ', ‘ಸಣ್ಣ ಹುಡುಗಿ ನಿನ್ನ', 'ಮದುವೆ ಎಂಬ ಮೂರಕ್ಷರ' ‘ಅಂತಿಂಥ ಮದುವೆಯಲ್ಲ, ಊಟ', ‘ಗೋರ್ ಮಾಟಿ' ರಂಗಗೀತೆಗಳನ್ನು ಹಾಡಿದರು. ಚಿನ್ಮಯ ಕಮಲಾಕರ ಭಟ್ ಹಾಗೂ ಮನುಜ ನೇಹಿಗೆ ಸುಳ್ಯ ಹಿನ್ನೆಲೆಯಲ್ಲಿ ಸಾಥ್ ನೀಡಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಮ್ ಸುಳ್ಯ ನಿರ್ದೇಶನದಲ್ಲಿ ಶಶಿರಾಜ್ ಕಾವೂರು ಬರೆದ ‘ಏಕಾದಶಾನನ' ನಾಟಕವನ್ನು ಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಮನುಜ ನೇಹಿಗೆ ಸುಳ್ಯ ಸಂಗೀತ ನೀಡಿದರು.

ಎಸ್.ಡಿ.ಎಂ ರಸಾಯನಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಅಂತರ್‌ಕಾಲೇಜು ಫೆಸ್ಟ್

Article Image

ಎಸ್.ಡಿ.ಎಂ ರಸಾಯನಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಅಂತರ್‌ಕಾಲೇಜು ಫೆಸ್ಟ್

ಉಜಿರೆ, ಮಾರ್ಚ್: 24: ವಿಜ್ಞಾನದ ಎಲ್ಲಾ ವಲಯಗಳಿಗೂ ಪೂರಕವಾಗುವ ಸಂಶೋಧನಾ ಫಲಿತಗಳೊಂದಿಗೆ ಸಂಶ್ಲೇಷಿತ ಸಾವಯವ ರಸಾಯನಶಾಸ್ತ್ರ ಗಮನ ಸೆಳೆಯುತ್ತಿದೆ ಎಂದು ಕೊಟ್ಟಾಯಂನ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯದ ಕೆಮಿಕಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಅನಿಲ್‌ಕುಮಾರ್ ಅಭಿಪ್ರಾಯಪಟ್ಟರು. ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ‘ಅಡ್ವಾನ್ಸಸ್ ಇನ್ ಸಿಂಥೆಟಿಕ್ ರ‍್ಗಾನಿಕ್ ಕೆಮಿಸ್ಟ್ರೀʼ ಕುರಿತು ಆಯೋಜಿಸಿದ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ರಾಷ್ಟ್ರಮಟ್ಟದ ‘ಕೆಮ್‌ಶೋಧನಾ’ ಅಂತರ್‌ಕಾಲೇಜು ಸ್ಪರ್ಧಾ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಸಾಯನಶಾಸ್ತ್ರವು ವಿಜ್ಞಾನದ ಶಕ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಔಷಧೀಯ ಸಂಶೋಧನೆಗೆ ನೆರವಾಗುವ ನಿಟ್ಟಿನಲ್ಲಿ ಸಾವಯವ ರಸಾಯನಶಾಸ್ತ್ರ ಮಹತ್ವದ ಕೊಡುಗೆಗಳನ್ನು ನೀಡುತ್ತಿದೆ. ಸಂಶೋಧನಾ ಫಲಿತಗಳ ಸಾಮಾಜಿಕ ಪ್ರಯೋಜನದ ಸಂದರ್ಭದಲ್ಲಿ ಗಮನಾರ್ಹ ಸುಧಾರಣೆಗಳಾಗುತ್ತಿವೆ ಎಂದು ಹೇಳಿದರು. ಸಾವಯವ ರಸಾಯನಶಾಸ್ತ್ರದ ಸಂಕೀರ್ಣ ವಿಭಾಗಗಳ ಕುರಿತು ವಿಸ್ತೃತ ಅಧ್ಯಯನಕ್ಕೆ ಇರುವ ಅವಕಾಶಗಳನ್ನು ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಬಳಸಿಕೊಳ್ಳಬೇಕು. ಸಂಶೋಧನೆಯ ತೊಡಗಿಸಿಕೊಳ್ಳುವಿಕೆಯೊಂದಿಗೆ ರಾಸಾಯನಿಕ ಜ್ಞಾನಶಿಸ್ತಿಗೆ ಮಹತ್ವದ ಕೊಡುಗೆಗಳನ್ನು ನೀಡುವತ್ತ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು. ಗೋವಾದ ಸೈಂಗೆಟಾ ಬಯೋಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರಧಾನ ಸಂಶೋಧನಾ ವಿಜ್ಞಾನಿ ಡಾ.ಮಂಜುನಾಥ ಚೆನ್ನಾಪುರ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭವಿಷ್ಯದ ದಿನಗಳನ್ನು ಸುಸ್ಥಿರ ಅಭಿವೃದ್ಧಿಯ ನೆಲೆಗಟ್ಟಿನಲ್ಲಿ ರೂಪಿಸಿಕೊಳ್ಳಲು ಹಸಿರು ರಸಾಯನಶಾಸ್ತ್ರದ ಪರಿಕಲ್ಪನೆಯನ್ನು ಅನ್ವಯಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದರು. ಹಸಿರು ಸಮೃದ್ಧಿಯೊಂದಿಗೆ ಮನುಷ್ಯ ಬದುಕು ಸುಸ್ಥಿರವಾಗುತ್ತದೆ. ಇದನ್ನು ದೃಷ್ಟಿಯಲ್ಲಿರಿಸಿಕೊಂಡು ಹಸಿರು ರಸಾಯನಶಾಸ್ತ್ರದ ಪರಿಕಲ್ಪನೆಯನ್ನು ಗಟ್ಟಿಗೊಳಿಸುವಂಥ ಸಂಶೋಧನಾ ಹೆಜ್ಜೆಗಳು ರೂಪುಗೊಳ್ಳಬೇಕು. ಹಾಗಾದಾಗ ಮಾತ್ರ ರಸಾಯನಶಾಸ್ತ್ರದ ಸಂಶೋಧನಾತ್ಮಕತೆಗೆ ಸುಸ್ಥಿರತೆಯ ಆಯಾಮ ದೊರಕುತ್ತದೆ ಎಂದು ನುಡಿದರು. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅವರು ಮಾತನಾಡಿದರು. ಹೊಸ ರೀತಿಯಲ್ಲಿ ಆಲೋಚಿಸುವ ಯುವ ಪೀಳಿಗೆ ಶಿಕ್ಷಣ ವಲಯದಲ್ಲಿ ಗಮನ ಸೆಳೆಯುತ್ತಿದೆ. ಶೈಕ್ಷಣಿಕ ಕಲಿಕೆಯ ಸ್ವರೂಪ ಬದಲಾಗುತ್ತಿದ್ದಂತೆ ಅದಕ್ಕೆ ತಕ್ಕಂತೆ ಸಾಮರ್ಥ್ಯ ರೂಪಿಸಿಕೊಳ್ಳುವ ಉತ್ಸಾಹವೂ ಕಂಡುಬರುತ್ತಿದೆ. ಇಂತಹ ಉತ್ಸಾಹಕ್ಕೆ ಪೂರಕವಾಗಿ ರಾಷ್ಟ್ರೀಯ ವಿಚಾರ ಸಂಕಿರಣಗಳಂತಹ ಕಾರ್ಯಕ್ರಮಗಳು ಹೊಸದೊಂದನ್ನು ಆವಿಷ್ಕರಿಸುವುದಕ್ಕೆ ಪ್ರೇರಣೆ ಒದಗಿಸುವ ವೇದಿಕೆಗಳಾಗಿ ಪ್ರಮುಖ ಪಾತ್ರವಹಿಸುತ್ತವೆ ಎಂದರು. ಸ್ಪರ್ಧಾತ್ಮಕ ಉತ್ಸವಗಳು ವಿದ್ಯಾರ್ಥಿಗಳ ಜ್ಞಾನಾಧಾರಿತ ಕೌಶಲ್ಯಗಳ ಪ್ರದರ್ಶನಕ್ಕೆ ಅವಕಾಶ ಒದಗಿಸಿಕೊಡುತ್ತವೆ. ಸೃಜನಶೀಲತೆಯೊಂದಿಗೆ ಮುನ್ನಡೆಯಲು ಸ್ಫೂರ್ತಿ ನೀಡುತ್ತವೆ ಎಂದು ಹೇಳಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ವಸಂತಕುಮಾರ್, ಡಾ.ರಾಜೇಶ್ ಹೆಗ್ಡೆ ಉಪಸ್ಥಿತರಿದ್ದರು. ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಡಾ.ನೆಫಿಸತ್ ವಂದಿಸಿದರು. ವಿದ್ಯಾರ್ಥಿನಿ ಸೋನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

ಜೈವಿಕ ತಂತ್ರಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ

Article Image

ಜೈವಿಕ ತಂತ್ರಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ

ವಿದ್ಯಾಗಿರಿ: ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನ ವಿಲೀನಗೊಂಡು ಸಂಶೋಧನಾ ಅಧ್ಯಯನ ನಡೆಸಲು ಪೂರಕ ವಾತವರಣ ನಿರ್ಮಾಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಣಿಪಾಲ ಕೆಎಂಸಿಯ ಔಷಧಶಾಸ್ತ್ರ ವಿಭಾಗದ ಸಂಶೋಧನಾ ಸಹಾಯಕಿ ಡಾ. ರಮ್ಯಾ ಕಟೀಲ್ ಹೇಳಿದರು. ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಜೈವಿಕ ವಿಜ್ಞಾನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇದರ ಸಹಯೋಗದೊಂದಿಗೆ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ "ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು" ಕುರಿತು ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ವಿಚಾರ ಸಂಕಿರಣವು ಸಂಶೋಧನಾರ್ಥಿಗಳಿಗೆ ಸೃಜನಾತ್ಮಕ ಜ್ಞಾನ, ವಿಚಾರ ವಿನಿಮಯ ಮತ್ತು ಅಧ್ಯಯನದಲ್ಲಿ ಪಾಲ್ಗೊಳ್ಳಲು ಸಹಕಾರಿ ಎಂದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇಲ್ಲಿನ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಸಂಶೋಧನಾ ಪ್ರಬಂಧಗಳನ್ನು ತಯಾರಿಸುವ ಸಂದರ್ಭಗಳಲ್ಲಿ ಹಲವಾರು ಬಾರಿ ನಿರಾಕರಣೆಯಾಗುವ ಸಂಭವ ಎದುರಾಗಬಹುದು. ಪರಿಶ್ರಮ ಮತ್ತು ಸ್ಥಿರತೆಯಿಂದ ಅಧ್ಯಯನವನ್ನು ಪೂರ್ಣಗೊಳಿಸಿ. ಪ್ರತಿ ಅಧ್ಯಯನದಲ್ಲಿಯೂ ಕುತೂಹಲ ಮತ್ತು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ. ಜೀವನದ ಪ್ರತಿ ಹಂತವನ್ನು ಸವಾಲಾಗಿ ಸ್ವೀಕರಿಸಿ, ಯಶಸ್ಸನ್ನು ಪಡೆಯಿರಿ ಎಂದರು. ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಸಂಶೋಧಕನಿಗೆ ಸಮಾಜದಲ್ಲಾಗುವ ಎಲ್ಲಾ ಪ್ರಚಲಿತ ಘಟನೆಗಳ ಅರಿವು ಬಹಳ ಅವಶ್ಯಕ ಎಂದು ತಿಳಿಸಿದರು. ಈ ರೀತಿಯ ವೈಜ್ಞಾನಿಕ ವಿಚಾರ ಸಂಕಿರಣ ವಿದ್ಯಾರ್ಥಿಗಳ ಜ್ಞಾನಮಟ್ಟವನ್ನು ಉತ್ತೇಜಿಸಲು ಪೂರಕ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಧಿಕೃತ ಸಂಶೋಧನಾ ಲೇಖನಗಳ ಪುಸ್ತಕದ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು. ನಂತರ ನಡೆದ ವಿವಿಧ ವಿಷಯವಾರು ಅಧಿವೇಶನಗಳಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಬೆಂಗಳೂರು ನ್ಯೂಟ್ರೇಸ್‌ನ ಎಲೆಕ್ಟ್ರೋ ಕೆಮಿಸ್ಟ್ರೀ ವಿಭಾಗದ ಪ್ರಧಾನ ಸಂಶೋಧಕಿ ಡಾ. ಹರ್ಷಿತಾ ಬಿ. ಎ. ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜಿನ ಜೀವ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ ಪ್ರಿಯಾಂಕಾ ಶ್ರೀಧರನ್‌ರಿಂದ ಉಪನ್ಯಾಸ ನಡೆಯಿತು. ಆಳ್ವಾಸ್ ಕಾಲೇಜು ಮತ್ತು ವಿವಿಧ ಕಾಲೇಜಿನ ಜೈವಿಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ 'ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು' ಕುರಿತ ಮೌಖಿಕ ಪ್ರಸ್ತುತಿ ಮತ್ತು ಪೋಸ್ಟರ್ ಪ್ರಸ್ತುತಿ ನೆರವೇರಿತು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗ ಮುಖ್ಯಸ್ಥ ಹಾಗೂ ಸಂಚಾಲಕ ಡಾ. ರಾಮ ಭಟ್ ಪಿ. ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಹನಾ ಪೂಜಾರಿ ನಿರೂಪಿಸಿ, ಅನಿಕೇತ ಸುಧೀರ್ ವಂದಿಸಿದರು.

ರೀಡರ್ಸ್ ಕ್ಲಬ್ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ

Article Image

ರೀಡರ್ಸ್ ಕ್ಲಬ್ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ರೀಡರ್ಸ್ ಕ್ಲಬ್ ವತಿಯಿಂದ "ಸಂಘರ್ಷ(ಕಾನ್ಫಿಕ್ಟ್) ಪತ್ರಕರ್ತನಾಗಿದ್ದಾಗ ಅಹಿತಕರ ಘಟನೆಗಳಿಂದ ಕಲಿತ ಪಾಠಗಳು" ವಿಷಯದ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಆಳ್ವಾಸ್ ಎಂಬಿಎ ಸೆಮಿನಾರ್‌ನಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸಂಘರ್ಷ ವರದಿಗಾರ, ಲೇಖಕ ಮತ್ತು ಸಿನಿಮಾ ನಿರ್ಮಾಪಕ ಅವಲೋಕ್ ಲ್ಯಾಂಗರ್ ಪತ್ರಿಕೋದ್ಯಮ ವೃತ್ತಿಯಲ್ಲಿ ಊಹೆ ಸಲ್ಲದು. ರವಾನಿಸುವ ಪ್ರತಿ ಸುದ್ದಿಯನ್ನು ಸೂಕ್ಶ್ಮತೆಯಿಂದ ಅವಲೋಕಿಸಿ. ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಹೊಸ ಆವಿಷ್ಕಾರ, ಪ್ರಯೋಗಗಳ ಕಡೆಗೆ ಹೆಚ್ಚು ಗಮನ ನೀಡುವುದರೊಂದಿಗೆ ಸತ್ಯವನ್ನು ಶೋಧಿಸುವ ಮಾರ್ಗದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿ ದಿನಗಳಲ್ಲೇ ಬೆಳೆಸಿಕೊಳ್ಳಿ. ಲಭಿಸಿದ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ , ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನವನ್ನು ಹೆಚ್ಚಿಸಲು ರೀಡರ್ಸ್ ಕ್ಲಬ್ ಕೈಗೊಳ್ಳುತ್ತಿರುವ ಕರ‍್ಯಗಳು ಶ್ಲಾಘನೀಯ. ಇಂದಿನ ಯುವಜನತೆಯಲ್ಲಿ ಆಲೋಚನಾ ಶಕ್ತಿಯ ಕೊರತೆ ಇದೆ. ಎಲ್ಲ ಮಾಹಿತಿಗಳನ್ನು ಯೋಚಿಸದೆ ಸ್ವೀಕರಿಸುವ ಮನೋಭಾವ ಹೊಂದಿರುವುದು ಬೇಸರದ ಸಂಗತಿ. ಇಂದಿನ ಯುವ ಸಮುದಾಯ, ತನ್ನ ಸುತ್ತಮುತ್ತಲಿನ ಎಲ್ಲ ಸುದ್ದಿ ಸಮಾಚಾರಗಳ ಕುರಿತು ಹೆಚ್ಚು ಜಾಗೃತರಾಗಿ ತಮ್ಮ ನಿರ್ದಿಷ್ಟ ನಿಲುವನ್ನು ಹೊಂದುವುದು ಉತ್ತಮ ಎಂದು ಸಲಹೆ ನೀಡಿದರು. ಸಂಘರ್ಷ ಪತ್ರಿಕೋದ್ಯಮದಲ್ಲಿನ ಸವಾಲುಗಳು ಮತ್ತು ಅಹಿತಕರ ಘಟನೆಗಳನ್ನು ಎದುರಿಸಿ, ಸತ್ಯವನ್ನು ಜನರೆದುರಿಗೆ ತೆರೆದಿಡಲು ಪಟ್ಟ ಶ್ರಮವನ್ನು ವಿಧ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಹಂಚಿಕೊAಡರು. ಕಾರ್ಯಕ್ರಮದಲ್ಲಿ ರೀಡರ್ಸ್ ಕ್ಲಬ್ ಸಂಯೋಜಕ ಶಶಿಕುಮಾರ್ ಮತ್ತು ರೀಡರ್ಸ್ ಕ್ಲಬ್ ಸದಸ್ಯರು, ವಿವಿಧ ವಿಭಾಗದ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಜೀವಿಟಾ ಪರ್ಲ್ ಕ್ರಾಸ್ತಾ ನಿರೂಪಿಸಿ, ಅಮಂಡಾ ವಂದಿಸಿದರು.

ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

Article Image

ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್‌ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 27-5 ಅಂಕಗಳ ಅಂತರದಿಂದ ಪುತ್ತೂರಿನ ವಿವೇಕಾನಂದ ಕಾಲೇಜು ವಿರುದ್ಧ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್‌ನ ತಂಡ ಏಕಪಕ್ಷೀಯವಾಗಿ 18-0 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜು ವಿರುದ್ಧ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ ''ಸಮಗ್ರ ಪ್ರಶಸ್ತಿ'' ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್‌ನಲ್ಲಿ "ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ"ಗೆ ಆಳ್ವಾಸ್ ಕಾಲೇಜಿನ ನಿಖಿಲ್ ಮತ್ತು"ಬೆಸ್ಟ್ ಡಿಫೆಂಡರ್ ಪ್ರಶಸ್ತಿ"ಗೆ ಪ್ರಮೋದ್ ಡಿ ಹಾಗೂ ವೈಯಕ್ತಿಕ ಮಹಿಳೆಯರ ಚಾಂಪಿಯನ್‌ಶಿಪ್‌ನಲ್ಲಿ "ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ"ಗೆ ಆಳ್ವಾಸ್ ಕಾಲೇಜಿನ ಪ್ರೇಕ್ಷಾ ಮತ್ತು ''ಬೆಸ್ಟ್ ಚೇಸರ್ '' ಪ್ರಶಸ್ತಿಗೆ ಕವನ ಭಾಜನರಾದರು. ಪುರುಷರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿಗೆ 4ನೇ ಸ್ಥಾನ, ಹಂಪನಕಟ್ಟೆ ವಿ. ವಿ ಕಾಲೇಜಿಗೆ ತೃತೀಯ ಸ್ಥಾನ, ಪುತ್ತೂರಿನ ವಿವೇಕಾನಂದ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 17ನೇ ಬಾರಿ''ಸಮಗ್ರ ಪ್ರಶಸ್ತಿ''ಲಭಿಸಿತು. ಮಹಿಳೆಯರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೃತೀಯ ಸ್ಥಾನ, ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 14ನೇ ಬಾರಿ ''ಸಮಗ್ರ ಪ್ರಶಸ್ತಿ'' ಲಭಿಸಿತು. ಸಮಾರೋಪ ಸಮಾರಂಭ: ದೇಸಿ ಕ್ರೀಡೆಯಾದ ಖೋ- ಖೋ ಆಟವು ಕ್ರೀಡಾಳುಗಳಲ್ಲಿ ಉತ್ತಮ ಕ್ರೀಡಾ ಮನೋಭಾವವನ್ನು ಹುಟ್ಟು ಹಾಕುವ ಶಕ್ತಿ ಹೊಂದಿದೆ ಎಂದು ಆಳ್ವಾಸ್ ಪ. ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ ಎಂ ಸದಾಕತ್ ನುಡಿದರು. ಕ್ರೀಡೆಯಲ್ಲಿ ಮಾನವೀಯತೆ ಸಾರುವ ಮನೋಭಾವ ಬೆಳೆಸಿಕೊಳ್ಳಿ ಎಂದು ತಿಳಿಸಿದರು. ಖೋ-ಖೋ ಆಟದಲ್ಲಿ ಸ್ಪರ್ಧಾರ್ಥಿಗಳು ಕ್ರೀಡಾ ಸ್ಪೂರ್ತಿ, ಚುರುಕುತನ ಮತ್ತು ಬದ್ಧತೆಯನ್ನು ಅಳವಡಿಸಿಕೊಂಡು ಗೆಲ್ಲುವುದರ ಕಡೆಗೆ ಶ್ರಮವಿರಲಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಡಾ. ಪ್ರಸನ್ನ ಕುಮಾರ್ ಬಿ ಕೆ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ ಮಧು ಜಿ ಆರ್, ಆಳ್ವಾಸ್ ಹಣಕಾಸು ಅಧಿಕಾರಿ ಶಾಂತಾರಾಮ್ ಕಾಮತ್, ಆಳ್ವಾಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ತಿಲಕ್ ಶೆಟ್ಟಿ, ವಿವಿಧ ಕಾಲೇಜಿನ ಕ್ರೀಡಾ ನಿರ್ದೇಶಕರು, ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ನಿರೂಪಿಸಿದರು.

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Article Image

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

ಉಜಿರೆ: ನಂದಿ ರಥ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು. ಚಲನಚಿತ್ರ ನಟ ಹಾಗೂ ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋ ವಿಜೇತರಾದ ಪ್ರಥಮ್, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು. ಕನ್ಯಾಡಿ ಮೂಲಕ ಉಜಿರೆಗೆ ರಥಯಾತ್ರೆ ಮುಂದುವರಿಯಿತು.

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

Article Image

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ - 2025, ಅಂತರಕಾಲೇಜು ತಂತ್ರಜ್ಞಾನ ಸಂಬAಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ ವಿ ಎಸ್ ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದAತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ. ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಫೆಸ್ಟ್ಗಳಿಗೆ ಯಾವ ರೀತಿಯ ಹೆಚ್ಚು ಮಹತ್ವ ನೀಡುತ್ತಾರೋ ಅದೇ ರೀತಿ ತಮ್ಮ ಜೀವನದ ಕೌಶಲ್ಯಗಳ ವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಸರ್ಟಿಫಿಕೇಟ್ ಪಡೆಯುವುದಕ್ಕಾಗಿ ಕಲಿಕೆಯನ್ನ ಸೀಮಿತಗೊಳಿಸದೆ ಕಲಿತ ಪಾಠವನ್ನು ಅಳವಡಿಸಿಕೊಳ್ಳುವ ಪ್ರಯತ್ನವಿರಬೇಕು ಆಗ ಮಾತ್ರ ಬದುಕಿನಲ್ಲಿ ಒಂದು ಉನ್ನತಿಯೆಡೆಗಿನ ಪಯಣ ಸಾಧ್ಯ. ಐಟಿ ಯುಗದಲ್ಲಿರುವ ನಾವುಗಳು ನೂತನ ತಂತ್ರಜ್ಞಾನಗಳ ಮಾಹಿತಿಯನ್ನು ತಿಳಿಯುವುದು ಹಾಗೂ ಅವುಗಳನ್ನು ಬಳಸಿಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯ ಎಂದರು. ಉದ್ಘಾಟನೆಯ ಬಳಿಕ ಐಟಿ ಕ್ವಿಜ್ , ಕಲ್ಚರಲ್ ಡಾನ್ಸ್, ಐಟಿ ಮ್ಯಾನೇಜರ್, ವೆಬ್ ಡಿಸೈನಿಂಗ್, ಕೊಡಿಂಗ್, ವೀಡಿಯೊಗ್ರಾಫಿ ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಎರಡು ದಿನಗಳ ಟೆಕ್ ಉತ್ಸವ್‌ದಲ್ಲಿ ವಿವಿಧ ಭಾಗಗಳಿಂದ 400 ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್, ವಿಭಾಗದ ಮುಖ್ಯಸ್ಥೆ ವನಿತಾ ಪ್ರಭು, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿದ್ಯಾರ್ಥಿ ಸಂಯೋಜಕಿ ಸಮೀಕ್ಷಾ ಎಸ್ ಹಾಗೂ ಶಿಶಿರ್ ಎಸ್ ಉಪಸ್ಥಿತರಿದ್ದರು. ಶ್ರೀಶ್ ಕೋಟೆಗಾರ ಕಾರ್ಯಕ್ರಮ ನಿರೂಪಿಸಿದರು.

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

Article Image

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

ಉಜಿರೆ, ಮಾ.12: ಹೆಣ್ಣುಮಕ್ಕಳಿಗೆ ಶಿಕ್ಷಣ ಎನ್ನುವುದು ಪಠ್ಯವಲ್ಲ, ಅದು ಅವರ ಸಶಕ್ತೀಕರಣದ ಸಾಧನ. ಪ್ರಸ್ತುತ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ. ಹೆಣ್ಣು ಶಕ್ತಿಯಾದಾಗ ಸಮಾಜ ಮತ್ತಷ್ಟು ಬೆಳೆಯಲು ಸಾಧ್ಯ ಎಂದು ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇಂದು (ಮಾ. 12) ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ, ಮಹಿಳಾ ಅಭಿವೃದ್ಧಿ ಕೋಶ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. “ಮಹಿಳೆ ಎಂದರೆ ಕೇವಲ ಗೃಹಿಣಿಯಲ್ಲ, ಅವಳು ಧೈರ್ಯ, ಸಾಹಸ, ಛಲದ ಪ್ರತೀಕ. ಎಲ್ಲಿ ಮಹಿಳೆಗೆ ಗೌರವ ಸಿಗುತ್ತದೆಯೋ ಅಲ್ಲಿ ಸಮೃದ್ಧಿ ಲಭಿಸುತ್ತದೆ. ಮಹಿಳೆಯರು ದೇಶದ ಆಸ್ತಿಯಾಗಬೇಕು. ನಮ್ಮ ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು ಸಂತಸದಾಯಕ" ಎಂದು ಅವರು ಹೇಳಿದರು. “ನಮ್ಮ ಹಲವು ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು, ಜ್ಞಾನ ವಿಕಾಸ, ಗೆಳತಿ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಮನೆಗಳಿಗೆ ಒಳಿತಾಗಿದೆ. ನಮ್ಮ ಯೋಜನೆಗಳಿಂದ ಸಬಲರಾದ ಅನೇಕ ಮಹಿಳೆಯರು ತಮ್ಮ ಸಾಧನೆಗಳನ್ನು ಹಂಚಿಕೊಂಡಾಗ ಅವರ ಕಣ್ಣಲ್ಲಿ ಹೆಮ್ಮೆ ಕಾಣುತ್ತದೆ" ಎಂದರು. ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, "ಮಹಿಳೆಯರ ಸಶಕ್ತೀಕರಣದ ವಿಚಾರ ಬಂದಾಗ ಕಲ್ಪನಾ ಚಾವ್ಲಾ, ಇಂದಿರಾ ಗಾಂಧಿ, ರಾಣಿ ಅಬ್ಬಕ್ಕ ಅವರಂತಹ ಹೆಮ್ಮೆಯ ನಾರಿಯರು ನೆನಪಿಗೆ ಬರುತ್ತಾರೆ. ಇವರು ಯಾವುದೇ ಕ್ಷೇತ್ರದಲ್ಲೂ ಮಹಿಳೆಯರು ಕಮ್ಮಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಅವರ ಹಾದಿಗಳು ಇಂದಿನ ಮಹಿಳೆಯರಿಗೆ ಆದರ್ಶ ಮತ್ತು ಸ್ಫೂರ್ತಿದಾಯಕ. ಯಾವ ದೇಶದಲ್ಲಿ ಹೆಣ್ಣನ್ನು ಪೂಜಿಸುತ್ತಾರೋ ಆ ದೇಶ ಸಶಕ್ತವಾಗುತ್ತದೆ"ಎಂದು ಹೇಳಿದರು. "ಮಹಿಳಾಭಿವೃದ್ಧಿಗಾಗಿ ಡಾ. ಹೇಮಾವತಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಶ್ರೀ ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿದ್ದಾರೆ" ಎಂದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, "ದೇಶದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇರಬಹುದು. ಆದರೆ ಉನ್ನತ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚು ಎನ್ನುವುದು ಹೆಮ್ಮೆಯ ವಿಚಾರ. ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ, ಮಹಿಳೆಯರು ಇನ್ನಷ್ಟು ಶಿಕ್ಷಣ ಪಡೆಯಬೇಕು ಮತ್ತು ದೇಶದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು. ಈ ಕಾರ್ಯ ಮುಂದುವರಿಯಲು ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಬೇಕಾಗುತ್ತದೆ" ಎಂದರು. ದೇಶದ ಮಹಿಳೆಯರ ಕೊಡುಗೆ ಮತ್ತು ಸಾಧನೆಗಳನ್ನು ನೆನೆಯಲು, ವಿದ್ಯಾರ್ಥಿನಿಯರಿಂದ ಕಿರು ರೂಪಕ ಪ್ರದರ್ಶಶಿಸಲಾಯಿತು. ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು ಎಂಬ ವಿಷಯದ ಕುರಿತು ಬೆಂಗಳೂರಿನ ಜನಮನ್ ಫಾರ್ಮಸುಟಿಕಲ್ಸ್ ಪ್ರೈ.ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮ ಸಂಚಾಲಕರಾದ ಮಾಲಿನಿ ಅಂಚನ್ ಸ್ವಾಗತಿಸಿ, ಅಕ್ಷತಾ ಜೈನ್ ವಂದಿಸಿದರು. ವಿದ್ಯಾರ್ಥಿನಿಯರಾದ ಪೂರ್ವಿ ಮತ್ತು ತಂಡ ಪ್ರಾರ್ಥಿಸಿದರು. ಮಾನಸ ಅಗ್ನಿಹೋತ್ರಿ, ಹರ್ಷಿನಿ ಹಾಗೂ ಧರಿತ್ರಿ ಭಿಡೆ ನಿರೂಪಿಸಿದರು. ವಾಣಿಜ್ಯ ಕ್ಷೇತ್ರದ ತಜ್ಞರು, ಉದ್ಯಮಿಗಳು, ಮತ್ತು ಅಂತರಸಂಸ್ಥಾ ಪ್ರತಿನಿಧಿಗಳು ಭಾಗವಹಿಸಿ, ಕ್ರಿಯಾಶೀಲತೆಯ ಮಹತ್ವ ಕುರಿತು ಚರ್ಚೆ ನಡೆಸಿದರು. ಚರ್ಚಾ ಕೂಟದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕಿ ಮತ್ತು ಅಧ್ಯಕ್ಷೆ ಡಾ. ಪ್ರೀತಿ ಕೀರ್ತಿ ಡಿಸೋಜ ವಹಿಸಿದ್ದರು. ಚರ್ಚೆಯಲ್ಲಿ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಟಿ. ಎನ್. ಕೇಶವ, ಸಂಧ್ಯಾ ಫ್ರೆಶ್‌ನ ಸಹಸಂಸ್ಥಾಪಕಿ ಮನೋರಮಾ ಭಟ್ಟ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಪೂರ್ವಾಧ್ಯಕ್ಷೆ ಅರ್ಚನಾ ರಾಜೇಶ್ ಪೈ ಭಾಗವಹಿಸಿದರು. ಮಹಿಳೆ ಮತ್ತು ಹೂಡಿಕೆ ಎಂಬ ವಿಷಯದ ಕುರಿತು ವಿಶೇಷ ಸಂವಾದಾತ್ಮಕ ಚಟುವಟಿಕೆ ನಡೆಯಿತು. ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ. ಜ್ಞಾನ ವಿಕಾಸ ಯೋಜನಾಧಿಕಾರಿ ಸಂಗೀತಾ ಮತ್ತು ಬೆಳ್ತಂಗಡಿ ತಾ.ಪಂ. ಕ್ಲಸ್ಟರ್ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ‘ಎಂಪವರ್ ಎಕ್ಸ್ಪೋ’ ವಿಶಿಷ್ಟ ಪ್ರದರ್ಶನ ಮತ್ತು ಮಾರಾಟ ಮಳಿಗೆ ಏರ್ಪಡಿಸಲಾಗಿತ್ತು, ಇದರಲ್ಲಿ ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿದರು. ಡಾ ಹೇಮಾವತಿ ವೀ ಹೆಗ್ಗಡೆ ಉದ್ಘಾಟಿಸಿದರು.

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

Article Image

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

ಉಜಿರೆ: ಯುವ ಪತ್ರಕರ್ತರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ನಿರ್ಭೀತ ನಡೆಯಿಂದ ವೃತ್ತಿಪರತೆಯಿಂದ ಕಾರ್ಯಪ್ರವೃತ್ತರಾದಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಶಿರಾದ ವರ್ಧಮಾನ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ, ಶಿಕ್ಷಣ ತಜ್ಞ ಸಂಜಯ್ ಎಸ್. ಗೌಡ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದೊಂದಿಗೆ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ (ಪದವಿ ಮತ್ತು ಸ್ನಾತಕೋತ್ತರ), ಬಿ.ವೋಕ್ ವಿಭಾಗ (ಡಿಜಿಟಲ್ ಮೀಡಿಯಾ ಆ್ಯಂಡ್ ಫಿಲ್ಮ್ ಮೇಕಿಂಗ್) ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ 'ಸಮೂಹ ಮಾಧ್ಯಮ ವೃತ್ತಿಪರತೆ ಮತ್ತು ಸದ್ಯದ ಸವಾಲುಗಳು' ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ವೇಗವಾಗಿ ಪ್ರಸಾರವಾಗುತ್ತಿವೆ. ಅವುಗಳಲ್ಲಿ ಸತ್ಯ ಮತ್ತು ವಸ್ತುನಿಷ್ಠತೆ ಕಾಯ್ದುಕೊಳ್ಳುವುದು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಂಶೋಧನಾತ್ಮಕವಾಗಿ ಕಾರ್ಯನಿರ್ವಹಿಸಿದರೆ ಸುದ್ದಿಗಳಲ್ಲಿ ನಿಖರತೆ ಕಾಯ್ದುಕೊಳ್ಳಬಹುದು. ಯುವಜನರ ವ್ಯವಸ್ಥಿತ ಭಾಗವಹಿಸುವಿಕೆಯಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಪದವೀಧರರಾಗಿ ಹೊರಹೋದ ನಂತರವೂ ಕಾಲೇಜಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಇದು ಪರಸ್ಪರರ ಅಭಿವೃದ್ಧಿಗೆ ಅವಶ್ಯ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಾಧ್ಯಮಗಳು ಪ್ರಜಾಪ್ರಭುತ್ವದ ಜೀವಾಳ. ಪತ್ರಕರ್ತರು ಸಮರ್ಪಕವಾಗಿ ಕೆಲಸ ಮಾಡಿದಾಗ ಪ್ರಜಾಪ್ರಭುತ್ವ ಸದೃಢವಾಗಿ ಉಳಿಯುತ್ತದೆ ಎಂದು ಹೇಳಿದರು. ಸರಿಯಾದ ಸಮಯದಲ್ಲಿ ಮಾಹಿತಿ ಮತ್ತು ತರಬೇತಿ ಪಡೆದುಕೊಳ್ಳುವುದರಿಂದ ಆವಶ್ಯಕ ಕೌಶಲ್ಯಗಳನ್ನು ವೃತ್ತಿಬದುಕಿನಲ್ಲಿ ಹೊಂದಬಹುದು. ವಿದ್ಯಾರ್ಥಿಗಳು ಅವಕಾಶಗಳು ಸಿಕ್ಕಿದಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಕಾರ್ಯಕ್ರಮದ ಪ್ರಧಾನ ಆಶಯವನ್ನು ಪ್ರಸ್ತುತಪಡಿಸಿ ಮಾತನಾಡಿದರು. ನಂಬಿಕೆ, ವಿಶ್ವಾಸ ಮತ್ತು ನಿರೀಕ್ಷೆಗಳನ್ನು ಸಮಾಜದಲ್ಲಿ ಮೂಡಿಸುವುದು ಮಾಧ್ಯಮಗಳ ಕೆಲಸವಾಗಿದೆ. ಮಾಧ್ಯಮಗಳು ಸಮಾಜದ ನಂಬಿಕೆ ಉಳಿಸಿಕೊಳ್ಳಬೇಕಾದರೆ ದಮನಿತರ ಧ್ವನಿಯಾಗಬೇಕು. ಆಗ ಅವುಗಳ ಅಸ್ತಿತ್ವವೂ ಉಳಿಯುತ್ತದೆ. ಸಾಮಾಜಿಕ ಮಾಧ್ಯಮಗಳ ಕಾರಣದಿಂದ ಮುಖ್ಯವಾಹಿನಿಯ ಮಾಧ್ಯಮಗಳಿಗೆ ಸವಾಲುಗಳು ಎದುರಾಗಿವೆ. ಇವುಗಳನ್ನು ಎದುರಿಸಬೇಕಾದರೆ ಮಾಧ್ಯಮದ ವಿದ್ಯಾರ್ಥಿಗಳು ಪತ್ರಿಕೋದ್ಯಮದ ಆಶಯ ಮತ್ತು ನೈತಿಕತೆಯನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸದ್ಯ ಪಾಸಿಟಿವ್ ಜರ್ನಲಿಸಂ ವಿಸ್ತರಿಸುವ ಅಗತ್ಯವಿದೆ. ಸುದ್ದಿ ಕೆರಳಿಸುವಂತಿರದೆ, ಶಮನ ನೀಡುವಂತಿರಬೇಕು ಎಂದರು. ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ವಿರಾಟ್ ಪದ್ಮನಾಭ ಅವರ 'ಬೆಟ್ಟದ ಹೂವು' ಪುಸ್ತಕ ಇತ್ತೀಚೆಗೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು. ಉದ್ಘಾಟನಾ ಸಮಾರಂಭದ ಕುರಿತು ಪದವಿ ಪತ್ರಿಕೋದ್ಯಮ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ತಕ್ಷಣಕ್ಕೆ ಸಂಯೋಜಿಸಿದ ‘ಚಿಗುರು’ ಭಿತ್ತಿಪತ್ರಿಕೆಯ ವಿಶೇಷ ಸಂಚಿಕೆ ಅನಾವರಣಗೊಳಿಸಲಾಯಿತು. ವಿಚಾರ ಸಂಕಿರಣದೊಂದಿಗೆ ಆಯೋಜಿಸಿರುವ ಮಾಧ್ಯಮ ಪರ್ವ ಫೆಸ್ಟ್ ಥೀಮ್ ಸಾಂಗ್ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಆಯೇಶಾ ಖಾನಂ, ಸಂಜಯ್ ಎಸ್. ಗೌಡ ಮತ್ತು ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ., ಉಜಿರೆಯ ಮಂಜುಶ್ರೀ ಪ್ರಿಂಟರ್ಸ್ ಪ್ರಬಂಧಕ ಶೇಖರ್ ಮತ್ತು ಉದ್ಯಮಿ ಶ್ರೀನಿವಾಸ ಗಲಗಲಿ ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಪ್ರಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನೈದಿಲೆ ಮತ್ತು ಸಿಂಚನ ನಿರೂಪಿಸಿದರು. ಸಹನಾ ವಂದಿಸಿದರು.

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

Article Image

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಮಾ. 12ರಂದು (ನಾಳೆ) ಬೆಳಗ್ಗೆ 10ಕ್ಕೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ. ಕಾಲೇಜಿನ ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ ಮತ್ತು ಮಹಿಳಾ ಅಭಿವೃದ್ಧಿ ಕೋಶದ ವತಿಯಿಂದ ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯುಎಸಿ) ಸಹಯೋಗದೊಂದಿಗೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೇಮಾವತಿ ವೀ. ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಜನಮನ್ (JANMAN) ಫಾರ್ಮಾಸುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ (Chief Executive Director) ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಜೆ 4ಕ್ಕೆ ಸೆಮಿನಾರ್ ಹಾಲ್ ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನ್ಯೂಸ್ ಫಸ್ಟ್ ಕನ್ನಡ ಸುದ್ದಿ ವಾಹಿನಿಯ ಆ್ಯಂಕರ್ ಹಾಗೂ ಅಸೋಸಿಯೇಟ್ ಎಡಿಟರ್ ವಿದ್ಯಾಶ್ರೀ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪರೀಕ್ಷಾಂಗ ಕುಲಸಚಿವೆ ನಂದ ಕುಮಾರಿ ಕೆ.ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಐಕ್ಯುಎಸಿ ಸಂಯೋಜಕ ಗಜಾನನ ಆರ್. ಭಟ್ ಉಪಸ್ಥಿತರಿರಲಿದ್ದಾರೆ.

ಸಾಧಕರ ಸನ್ಮಾನ

Article Image

ಸಾಧಕರ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಆಶ್ರಯದಲ್ಲಿ ಪ್ರೊ. ಗಣಪತಿ ಕುಳಮರ್ವ, ಬೆಳಾಲು ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಚೊಕ್ಕಾಡಿ ಮತ್ತು ದಾಸಪ್ಪ ಗೌಡ ಕೊಲ್ಲಿ ಇವರ ಸೇವೆ-ಸಾಧನೆಯನ್ನು ಮನ್ನಿಸಿ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆದ ಸಂಘದ ಮಾಸಿಕ ಸಭೆಯಲ್ಲಿ ಗೌರವಿಸಲಾಯಿತು. ಹಿರಿಯರನ್ನು ಗೌರವಿಸಿ ಸನ್ಮಾನಿಸಿದ ಪ್ರಜಾವಾಣಿ ಪತ್ರಿಕೆಯ ವರದಿಗಾರ ಆರ್.ಎನ್. ಪೂವಣಿ ಮಾತನಾಡಿ, ಮೂರು ಮಂದಿ ಹಿರಿಯ ಸಾಧಕರ ಸೇವೆ, ಸಾಧನೆ ಕಿರಿಯರಿಗೆ ಪ್ರೇರಕ ಶಕ್ತಿಯಾಗಿ ಸ್ಪೂರ್ತಿಯಾಗಿದೆ. ಅವರ ದಕ್ಷ ಸೇವೆಗೆ ಅಭಿನಂದಿಸಿ ಶುಭ ಹಾರೈಸಿದರು. ಸಂಘದ ಕಟ್ಟಡ ನಿರ್ಮಾಣಕ್ಕೆ ಒಂದು ಲಕ್ಷ ರೂ. ಗೂ ಅಧಿಕ ದೇಣಿಗೆ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಸೋಮಶೇಖರ ಶೆಟ್ಟಿ ಇವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅವರ ದಕ್ಷ ನೇತೃತ್ವದಲ್ಲಿ ಸರ್ವ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲೆಂದು ಪೂವಣಿ ಅವರು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಇತೀಚೆಗೆ ನಿಧನರಾದ ನಿವೃತ್ತ ಮುಖ್ಯೋಪಾಧ್ಯಾಯ ಕಾಶ್ಮೀರ್ ಮಿನೇಜಸ್ ಅವರ ಬಗ್ಗೆ ತೆರೆಸಾ ಲೋಬೊ ನುಡಿನಮನ ಸಲ್ಲಿಸಿ, ಬಳಿಕ ಮಿನೆಜಸ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯದರ್ಶಿ ವಿಶ್ವಾಸ ರಾವ್ ಗತ ಸಭೆಯ ವರದಿ ಸಾದರಪಡಿಸಿದರು. ವಸಂತ ಸುವರ್ಣ ಧನ್ಯವಾದವಿತ್ತರು.

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

Article Image

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮಾನಸದಲ್ಲಿ ನಲ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನಲ್ಲಿ 3ರಂದು ನಡೆದ ಡೈಮಾಂಡ್ ಫೆಸ್ಟ್ ಚಾಲನೆ ಸಮಾರಂಭದಲ್ಲಿ ಮಾತನಾಡಿದರು. ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ, ಚಿನ್ನಾಭಾರಣಗಳಲ್ಲಿ ಉತ್ತಮ ಗುಣ ಮಟ್ಟವನ್ನು ನೀಡುತ್ತಾ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವ್ಯವಹಾರಕ್ಕೆ ಸಾಮಾಜಿಕವಾಗಿ ತೊಡಗಿಸಿಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆ ಮುಳಿಯ ಎಂದು ಅಭಿಪ್ರಾಯಪಟ್ಟರು. ಮರ‍್ಕೇಟಿಂಗ್ ಕನ್ಸಲ್‌ಟೆಂಟ್ ವೇಣುಶರ್ಮ ಮಾತನಾಡಿ, ಚಿನ್ನಾಭರಣ ಸುರಕ್ಷಿತ ಹೂಡಿಕೆಯ ಉದ್ಯಮವಾಗಿದೆ. ವಿಶಿಷ್ಟ ಹಾಗೂ ವಿನೂತನ ವಜ್ರಾಭರಣಗಳ ಸಂಗ್ರಹಣೆ ಈ ಬಾರಿಯ ಡೈಮಾಂಡ್ ಫೆಸ್ಟ್ ನಲ್ಲಿದೆ. ಜೀವನದ ಮೊದಲ ವಜ್ರಾಭರಣ ಖರೀದಿಯನ್ನು ಮುಳಿಯೊಂದಿಗೆ ಪ್ರಾರಂಭಿಸಿ ಎಂದು ಹೇಳಿದರು. ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್‌ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕನ್ನಿಕಾ ನಿರೂಪಿಸಿದರು.

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Article Image

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಉಜಿರೆ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಭೌತಶಾಸ್ತ್ರ ಅಧ್ಯಯನ ವಿಭಾಗ ಮತ್ತು ಪದವಿ ಭೌತಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಮಾರ್ಚ್ 1, 2025 ರಂದು “ಕ್ವಾಂಟಮ್ ಟು ಕಾಸ್ಮೊಸ್” ಉಪನ್ಯಾಸ ಸರಣಿ ಆಯೋಜಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನ 2025 ಅನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಐಐಟಿ ದೆಹಲಿಯಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಡಾ. ವಿ. ರವಿಶಂಕರ್ "ಕ್ವಾಂಟಮ್ ಮಾಹಿತಿಗೆ ಆಹ್ವಾನ" ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಕ್ವಾಂಟಮ್ ಮಾಹಿತಿಯ ಪ್ರಾಮುಖ್ಯತೆ, ಪಾತ್ರ ಮತ್ತು ಮುಂದಿನ ದಿನಗಳಲ್ಲಿ ಅದರ ಪರಿಣಾಮಗಳನ್ನು ಕುರಿತಾಗಿ ಅವರು ಚರ್ಚಿಸಿದರು. ಮಣಿಪಾಲ ನೈಸರ್ಗಿಕ ವಿಜ್ಞಾನ ಕೇಂದ್ರ ಮಾಹೆ, ನಿರ್ದೇಶಕ ಡಾ.ಪಿ.ಶ್ರೀಕುಮಾರ್ "ಭಾರತದಲ್ಲಿ ಮುಂಬರುವ ಖಗೋಳಶಾಸ್ತ್ರದ ಪ್ರಮುಖ ಯೋಜನೆಗಳು" ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿ ಮಾತನಾಡಿದರು. ಅವರು ವೀಕ್ಷಣೆ-ಆಧಾರಿತ ಖಗೋಳಶಾಸ್ತ್ರದ ಮೂಲ ಪರಿಕಲ್ಪನೆಗಳು ಮತ್ತು ಈ ಕ್ಷೇತ್ರದಲ್ಲಿ ಸಂಶೋಧನೆಯ ಪ್ರಮುಖ ಆಯಾಮಗಳ ಬಗ್ಗೆ ವಿವರಿಸಿದರು. ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ವಿಶ್ವಸಂಸ್ಥೆಯು ಈ ವರ್ಷವನ್ನು "ಅಂತಾರಾಷ್ಟ್ರೀಯ ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನ ವರ್ಷ" ಎಂದು ಘೋಷಿಸಿದೆ ಮತ್ತು ಮುಂಬರುವ ವರ್ಷಗಳಲ್ಲಿ ಭೌತಶಾಸ್ತ್ರವು ಮಹತ್ವದ ಸ್ಥಾನ ಪಡೆಯಲಿದೆ ಎಂದು ಅವರು ಹೇಳಿದರು. ಎಸ್‌ಡಿಎಂ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಪೇಕ್ಷಾ ಜೈನ್‌ ಉಪಸ್ಥಿತರಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿಸಲಾಯಿತು.

First Previous

Showing 3 of 7 pages

Next Last