Article Image

ಉಜಿರೆ: ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Article Image

ಉಜಿರೆ: ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

ಸೇವಾ ನಿವೃತ್ತಿ ಪಡೆದ ಡಾ| ಬಾಲಕೃಷ್ಣ ಭಟ್ ಮತ್ತು ಡಾ| ಕಮಲಾ ಭಟ್ ಇವರ ಅತ್ಯುತ್ತಮ ಸೇವೆಯನ್ನು ಗೌರವಿಸಿ, ಬೀಳ್ಕೊಡುಗೆ ನೀಡುತ್ತಾ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿದರು. ಜನಸೇವೆಯ ಉದ್ದೇಶದೊಂದಿಗೆ ಡಾ.ಡಿ. ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಹರ್ಷೇಂದ್ರ ಕುಮಾರ್ ಹಾಗೂ ಹೆಗ್ಗಡೆ ಪರಿವಾರದವರ ಸಹಕಾರದಲ್ಲಿ ನಡೆಯುತ್ತಿರುವ ಈ ಆಸ್ಪತ್ರೆಯಲ್ಲಿ ಸಮಯದ ಬಗ್ಗೆ ಚಿಂತಿಸದೆ, ರೋಗಿಯ ಆರೈಕೆಯಲ್ಲಿಯೇ ತಮ್ಮ ಬದುಕಿನ ಅತೀ ಹೆಚ್ಚಿನ ಸಮಯವನ್ನು ಕಳೆದವರು ಇವರು. ತಮ್ಮ ಇಳಿವಯಸ್ಸಿನಲ್ಲಿಯೂ ರೋಗಿಗಳ ಹಿತವನ್ನೇ ಬಯಸಿದ ಇವರ ಸೇವೆ ಈ ಆಸ್ಪತ್ರೆಗೆ ಅತ್ಯುತ್ತಮ ಕೊಡುಗೆಯಾಗಿದೆ ಎಂದರು. ನಿವೃತ್ತರಾದ ಡಾ| ಬಾಲಕೃಷ್ಣ ಭಟ್ ಮಾತನಾಡಿ, ದೇವಮಾನವರಾದ ಹೆಗ್ಗಡೆಯವರ ಸಂಸ್ಥೆಯಲ್ಲಿ ವೈದ್ಯಕೀಯ ಸೇವೆ ಮಾಡುವ ಸದಾವಕಾಶ ನಮಗೆ ದೊರೆತಿದೆ. ಇದಕ್ಕಾಗಿ ಹೆಗ್ಗಡೆಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ವಯೋ ಸಹಜ ಸಮಸ್ಯೆಯಿಂದ ನಿವೃತ್ತಿ ಪಡೆಯುತ್ತಿದ್ದು, ವೈದ್ಯಕೀಯ ಸೇವಾ ಬದುಕಿನಲ್ಲಿ ಅತ್ಯಂತ ಉತ್ತಮ ರೀತಿಯಲ್ಲಿ ರೋಗಿಗಳ ಸೇವೆ ಮಾಡಿದ ಸಂತೃಪ್ತಿ ನಮಗಿದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ಸಮರ್ಥ ನಾಯಕತ್ವದಲ್ಲಿ ಜನಪ್ರಿಯಗೊಂಡಿರುವ ಈ ಆಸ್ಪತ್ರೆಯಲ್ಲಿ ಅತ್ಯುತ್ತಮ ವೈದ್ಯವೃಂದ, ನುರಿತ ದಾದಿಯರು, ಒಳ್ಳೆಯ ಸಿಬ್ಬಂದಿಗಳೊAದಿಗೆ ಸೇವೆ ಮಾಡಿದ್ದು, ಎಲ್ಲರೂ ನಮಗೆ ಸದಾ ಸ್ಮರಣೀಯರು ಎಂದರು. ಡಾ| ಚಿನ್ಮಯ್ ಇವರು ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಧೀರ್ಘಕಾಲದ ಅನುಭವ ಹೊಂದಿರುವ ಮತ್ತು ತಮ್ಮ ಇಳಿವಯಸ್ಸಿನಲ್ಲಿಯೂ ಲವಲವಿಕೆ ಮತ್ತು ಸದಾ ಕಳೆದ 13 ವರ್ಷಗಳಿಂದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ವಿ ಭಾಗದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಡಾ| ಬಾಲಕೃಷ್ಣ ಭಟ್, ಹಾಗೂ ಡಾ| ಕಮಲಾ ಭಟ್ ಇವರು ವಯೋಸಹಜ ಸಮಸ್ಯೆಗಳಿಂದಾಗಿ ಸೇವಾ ನಿವೃತ್ತಿ ಪಡೆದರು. ಚಟುವಟಿಕೆಯಲ್ಲಿರುವ ಇವರಿಬ್ಬರೂ ಕೂಡ ನಮ್ಮಂತಹ ವೈದ್ಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು. ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರು ಮಾತನಾಡಿ, ತಮ್ಮ ವೈದ್ಯಕೀಯ ವೃತ್ತಿ ಜೀವನದಲ್ಲಿ ಅಪಾರ ಅನುಭವ ಹೊಂದಿರುವ ಡಾ| ಬಾಲಕೃಷ್ಣ ಭಟ್, ಮೆಡಿಸಿನ್ ವಿಭಾಗದಲ್ಲಿದ್ದರೂ ಮೂಳೆಚಿಕಿತ್ಸೆ, ಮಕ್ಕಳ ಚಿಕಿತ್ಸೆಯಲ್ಲಿಯೂ ಪರಿಣತಿ ಪಡೆದಿದ್ದರು. ಡಾ| ಕಮಲಾ ಭಟ್ ತಮ್ಮ ವೃತ್ತಿ ಜೀವನದಲ್ಲಿ ಅತೀ ಹೆಚ್ಚು ರೋಗಿಗಳಿಗೆ ಅತ್ಯುತ್ತಮ ಸೇವೆ ನೀಡುವ ಮೂಲಕ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು. ಇನ್ಯೂರೆನ್ಸ್ ವಿಭಾಗದ ಜಗನ್ನಾಥ್ ನಿರೂಪಿಸಿದರು. ವೈದ್ಯರು, ದಾದಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

Article Image

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಆದೇಶದಂತೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ, ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಆಯೋಜಿಸಲಾಗಿದ್ದ, ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏ.2 ಬುಧವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 2.30ರವರೆಗೆ ನಡೆಯಿತು. ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಶಿಬಿರ ಉದ್ಘಾಟಿಸಿ ಮಾತನಾಡಿದರು. ದೇಹದ ರೋಗನಿರೋಧಕ ಅವ್ಯವಸ್ಥೆಯಿಂದ ಆರೋಗ್ಯಕರ ಅಂಗಾಂಶಗಳ ಮೇಲೆ ಪರಿಣಾಮ ಬೀಳುತ್ತದೆ. ಇದರಿಂದ ಆಟೋಇಮ್ಯೂನ್ ಕಾಯಿಲೆಗಳು ಸಂಭವಿಸುತ್ತವೆ. ರುಮಟಾಯ್ಡ್ ಸಂಧಿವಾತ, ಮಲ್ಟಿಪಲ್ ಸ್ಕೆರೋಸಿಸ್ ಇತ್ಯಾದಿ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಈ ಎಲ್ಲಾ ತೊಂದರೆಗಳಿಗೆ ಈ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್. ಪಿ ಇವರು ಮಾತನಾಡಿ, ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಚಿಕಿತ್ಸೆ ನೀಡುವ ನುರಿತ ತಜ್ಞ ವೈದ್ಯರಾಗಿದ್ದು, ಎಲ್ಲರೂ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಅಧ್ಯಕ್ಷತೆ ವಹಿಸಿದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡಿ, ಎಲ್ಲಾ ಖಾಯಿಲೆಗಳಿಗೆ ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಹೆಗ್ಗಡೆಯವರ ಬಯಕೆ. ಹೆಗ್ಗಡೆಯವರ ಆದೇಶದಂತೆ ಹಲವಾರು ಉಚಿತ ಶಿಬರಗಳನ್ನು ನಡೆಸಲಾಗುತ್ತಿದೆ. ಹಲವಾರು ಜನರ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುವುದರಿಂದ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಕಡಿಮೆಯಾಗುವುದಲ್ಲದೇ ಅತ್ಯಂತ ಶೀಘ್ರವಾಗಿ ಗುಣಮುಖರಾಗುತ್ತಾರೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಷಿಯನ್ ಡಾ| ಯಶಸ್ವಿನಿ, ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ರಜತ್ ಉಪಸ್ಥಿತರಿದ್ದರು. ಇನ್ಶೂರೆನ್ಸ್ ವಿಭಾಗದ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು. ಈ ಶಿಬಿರದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಿದ್ದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದರು.

ಮೂಡುಬಿದಿರೆ: ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

Article Image

ಮೂಡುಬಿದಿರೆ: ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ವಿದ್ಯಾಗಿರಿ: 'ರಂಗ ಚಟುವಟಿಕೆಯೇ ನನ್ನ ಬದುಕಿನ ಯಶಸ್ಸಿನ ಸೂತ್ರ' ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ.ಮೋಹನ ಆಳ್ವ ಹೇಳಿದರು. ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ 'ವಿಶ್ವರಂಗಭೂಮಿ ದಿನಾಚರಣೆ' ಅಂಗವಾಗಿ ಶುಕ್ರವಾರ ಹಮ್ಮಿಕೊಂಡ 'ರಂಗಗೀತೆ- ಉಪನ್ಯಾಸ- ಸನ್ಮಾನ- ನಾಟಕ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜ ಮತ್ತು ಬದುಕಿಗೆ ರಂಗಭೂಮಿ ಕೊಡುಗೆ ಅಪಾರ. ಪಠ್ಯಕ್ಕಿಂತ ರಂಗ ಚಟುವಟಿಕೆಗಳ ನೆನಪು ನನಗೆ ಇಂದಿಗೂ ಚಿರಸ್ಥಾಯಿಯಾಗಿದೆ' ಎಂದರು. ಭೋಜ ಶೆಟ್ಟ ನಮ್ಮ ಸಮಕಾಲೀನರು. ರಂಗದಲ್ಲಿ ಅವರ ಒಡನಾಟವೇ ಸುಂದರ ಎಂದು ಶ್ಲಾಘಿಸಿದರು. ಲಂಕೇಶ್ ಬರೆದ 'ಪೋಲಿಸರಿದ್ದಾರೆ ಎಚ್ಚರಿಕೆ' ನಾಟಕದ 'ರುದ್ರಮೂರ್ತಿ' ಪಾತ್ರ ಸೇರಿದಂತೆ ತಾವು ನಿರ್ವಹಿಸಿದ ‘ಗುಂಡ', ‘ತುಘಲಕ್', 'ಬಯ್ಯಮಲ್ಲಿಗೆ' ನಾಟಕದಲ್ಲಿ ತಾವು ನಿರ್ವಹಿಸಿದ ‘ವಿದೂಷಕ' ಪಾತ್ರ ಸೇರಿದಂತೆ ಎಲ್ಲ ಪಾತ್ರಗಳನ್ನು ತೃಪ್ತ ಭಾವದಿಂದ ಮೆಲುಕು ಹಾಕಿದರು. ವಿಠಲ್ ಮಾಸ್ಟರ್ ಮೂಲಕ ಭರತ ನಾಟ್ಯ ಕಲಿತು ದೇಶ- ವಿದೇಶಗಳಲ್ಲಿ ಪ್ರದರ್ಶನ ನೀಡಿರುವುದನ್ನು ನೆನಪಿಸಿಕೊಂಡರು. ‘ಮೂಕಾನಭಿಯ, ಮ್ಯಾಜಿಕ್ ಕಲಿತ - ಪ್ರಯೋಗಿಸಿದ ಅನುಭವ ನನ್ನನ್ನು ಗಟ್ಟಿಗೊಳಿಸಿದೆ' ಎಂದ ಅವರು, 'ಮಕ್ಕಳೇ ನೀವು ಎಲ್ಲಿಯೇ ಪ್ರದರ್ಶನ ನೀಡಿದರೂ, ನಾನು ಪ್ರೇಕ್ಷಕನಾಗಿದ್ದೇನೆ ಎಂಬುದನ್ನು ನೆನಪಿಸಿಕೊಳ್ಳಿ' ಎಂದು ಹಿತವಚನ ಹೇಳಿದರು. ‘ಬೆಸ್ತರ, ಬೇಡರ ನೃತ್ಯ ನಿರಂತರವಾಗಿ ಮಾಡಿದ್ದೇನೆ. ಅದೇ ರೀತಿ ಅವಿರತವಾಗಿ ತೊಡಗಿಸಿಕೊಂಡಾಗ ಬದುಕಿನ ಯಶಸ್ಸು ದೊರೆಯುತ್ತದೆ' ಎಂದರು. ‘ಬದುಕೇ ಒಂದು ನಾಟಕ, ವಿವಿಧ ಹಂತದಲ್ಲಿ ನಾವು ನಟನೆ ಮಾಡಬೇಕಾಗುತ್ತದೆ' ಎಂದು ಮಾರ್ಮಿಕವಾಗಿ ಹೇಳಿದರು. ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಹಿರಿಯ ರಂಗಕರ್ಮಿ ಡಾ| ನರಸಿಂಹಮೂರ್ತಿ ಆರ್. ಮಾತನಾಡಿ, ‘ಲಲಿತಕಲೆಗಳ ಸಂಗಮ ಕ್ಷೇತ್ರವೇ ‘ರಂಗಭೂಮಿ' ಎಂದು ವಿಶ್ಲೇಷಿಸಿದರು. ಪಂಚೇಂದ್ರಿಯ ಮೂಲಕ ನೆಮ್ಮದಿ ನೀಡುವ ಮನುಷ್ಯ ಕೃತ ಕ್ರಿಯೆಗಳೇ ಕಲೆ. ಪ್ರಾಚೀನ ಭಾರತದಲ್ಲಿ 64 ಕಲೆಗಳನ್ನು ಗುರುತಿಸಲಾಗಿದೆ. ನಾಟಕ ಎಂಬುದು ‘ಕಲಾ ರಸಾಯನ'. ಹಲವು ಕಲೆಗಳ ಮೇಳೈಸುವಿಕೆ ಎಂದು ವಿವರಿಸಿದರು.ವಿಭಿನ್ನ ರುಚಿ ಉಳ್ಳವರ ಭೋಜನವೇ ನಾಟಕ. ಎಲ್ಲರಿಗೂ ಏಕ ಕಾಲದಲ್ಲಿ ಕಲೆಗಳ ಖಾದ್ಯ ಲಭ್ಯ. ನಾಟಕ ಅರಿವು- ಮನುಷ್ಯತ್ವ ಮೂಡಿಸಬೇಕು ಎಂದರು. ‘ದೇಗುಲಗಳಿಗೆ ಹೋಗದಿದ್ದರೂ ರಂಗಭೂಮಿಯನ್ನು ಕಳೆದುಕೊಳ್ಳಬೇಡಿ' ಎಂದು ಬರ್ನಾಡ್ ಷಾ ಹೇಳಿದ್ದಾರೆ ಎಂದು ಅವರು ಉಲ್ಲೇಖಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜೀವನ್ ರಾಮ್ ಸುಳ್ಯ, ನಾಟಕವಿಲ್ಲದೇ ಜೀವನ ಇಲ್ಲ. ನಾವು ರಂಗದಲ್ಲಿ ನಾಟಕಕಾರರು, ಆದರೆ, ಎಲ್ಲರೂ ಜೀನದಲ್ಲಿ ನಾಟಕಕಾರರು. ಪಾತ್ರಗಳು ಮಾತ್ರ ವಿಭಿನ್ನ. ಎಲ್ಲ ವೃತ್ತಿಗಳು ‘ನಾಟಕ' ಬಯಸುತ್ತವೆ ಎಂದು ರಂಗಭೂಮಿ ದಿನದ ಕುರಿತು ಮಾಹಿತಿ ಹಂಚಿಕೊಂಡರು. ವಿಶ್ವರಂಗ ಸನ್ಮಾನ: ರಂಗಭೂಮಿಯ ಹಿರಿಯ ಮತ್ತು ಚಲನಚಿತ್ರ ಕಲಾವಿದ ಎಂ.ಭೋಜ ಶೆಟ್ಟಿ ತೋಟದಮನೆ ಅವರನ್ನು ಸನ್ಮಾನಿಸಲಾಯಿತು. ಜೀವನ್ ರಾಮ್ ಸುಳ್ಯ, ವಿದುಷಿ ಸುಮನಾ ಪ್ರಸಾದ್ ಮತ್ತು ಮಮತಾ ಕಲ್ಮಕಾರು ಅವರು, ‘ಸಾವಿರದ ಮಾಯೆ', ‘ಸಣ್ಣ ಹುಡುಗಿ ನಿನ್ನ', 'ಮದುವೆ ಎಂಬ ಮೂರಕ್ಷರ' ‘ಅಂತಿಂಥ ಮದುವೆಯಲ್ಲ, ಊಟ', ‘ಗೋರ್ ಮಾಟಿ' ರಂಗಗೀತೆಗಳನ್ನು ಹಾಡಿದರು. ಚಿನ್ಮಯ ಕಮಲಾಕರ ಭಟ್ ಹಾಗೂ ಮನುಜ ನೇಹಿಗೆ ಸುಳ್ಯ ಹಿನ್ನೆಲೆಯಲ್ಲಿ ಸಾಥ್ ನೀಡಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಮ್ ಸುಳ್ಯ ನಿರ್ದೇಶನದಲ್ಲಿ ಶಶಿರಾಜ್ ಕಾವೂರು ಬರೆದ ‘ಏಕಾದಶಾನನ' ನಾಟಕವನ್ನು ಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಮನುಜ ನೇಹಿಗೆ ಸುಳ್ಯ ಸಂಗೀತ ನೀಡಿದರು.

ಎಸ್.ಡಿ.ಎಂ ರಸಾಯನಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಅಂತರ್‌ಕಾಲೇಜು ಫೆಸ್ಟ್

Article Image

ಎಸ್.ಡಿ.ಎಂ ರಸಾಯನಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಅಂತರ್‌ಕಾಲೇಜು ಫೆಸ್ಟ್

ಉಜಿರೆ, ಮಾರ್ಚ್: 24: ವಿಜ್ಞಾನದ ಎಲ್ಲಾ ವಲಯಗಳಿಗೂ ಪೂರಕವಾಗುವ ಸಂಶೋಧನಾ ಫಲಿತಗಳೊಂದಿಗೆ ಸಂಶ್ಲೇಷಿತ ಸಾವಯವ ರಸಾಯನಶಾಸ್ತ್ರ ಗಮನ ಸೆಳೆಯುತ್ತಿದೆ ಎಂದು ಕೊಟ್ಟಾಯಂನ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯದ ಕೆಮಿಕಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಅನಿಲ್‌ಕುಮಾರ್ ಅಭಿಪ್ರಾಯಪಟ್ಟರು. ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ‘ಅಡ್ವಾನ್ಸಸ್ ಇನ್ ಸಿಂಥೆಟಿಕ್ ರ‍್ಗಾನಿಕ್ ಕೆಮಿಸ್ಟ್ರೀʼ ಕುರಿತು ಆಯೋಜಿಸಿದ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ರಾಷ್ಟ್ರಮಟ್ಟದ ‘ಕೆಮ್‌ಶೋಧನಾ’ ಅಂತರ್‌ಕಾಲೇಜು ಸ್ಪರ್ಧಾ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಸಾಯನಶಾಸ್ತ್ರವು ವಿಜ್ಞಾನದ ಶಕ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಔಷಧೀಯ ಸಂಶೋಧನೆಗೆ ನೆರವಾಗುವ ನಿಟ್ಟಿನಲ್ಲಿ ಸಾವಯವ ರಸಾಯನಶಾಸ್ತ್ರ ಮಹತ್ವದ ಕೊಡುಗೆಗಳನ್ನು ನೀಡುತ್ತಿದೆ. ಸಂಶೋಧನಾ ಫಲಿತಗಳ ಸಾಮಾಜಿಕ ಪ್ರಯೋಜನದ ಸಂದರ್ಭದಲ್ಲಿ ಗಮನಾರ್ಹ ಸುಧಾರಣೆಗಳಾಗುತ್ತಿವೆ ಎಂದು ಹೇಳಿದರು. ಸಾವಯವ ರಸಾಯನಶಾಸ್ತ್ರದ ಸಂಕೀರ್ಣ ವಿಭಾಗಗಳ ಕುರಿತು ವಿಸ್ತೃತ ಅಧ್ಯಯನಕ್ಕೆ ಇರುವ ಅವಕಾಶಗಳನ್ನು ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಬಳಸಿಕೊಳ್ಳಬೇಕು. ಸಂಶೋಧನೆಯ ತೊಡಗಿಸಿಕೊಳ್ಳುವಿಕೆಯೊಂದಿಗೆ ರಾಸಾಯನಿಕ ಜ್ಞಾನಶಿಸ್ತಿಗೆ ಮಹತ್ವದ ಕೊಡುಗೆಗಳನ್ನು ನೀಡುವತ್ತ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು. ಗೋವಾದ ಸೈಂಗೆಟಾ ಬಯೋಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರಧಾನ ಸಂಶೋಧನಾ ವಿಜ್ಞಾನಿ ಡಾ.ಮಂಜುನಾಥ ಚೆನ್ನಾಪುರ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭವಿಷ್ಯದ ದಿನಗಳನ್ನು ಸುಸ್ಥಿರ ಅಭಿವೃದ್ಧಿಯ ನೆಲೆಗಟ್ಟಿನಲ್ಲಿ ರೂಪಿಸಿಕೊಳ್ಳಲು ಹಸಿರು ರಸಾಯನಶಾಸ್ತ್ರದ ಪರಿಕಲ್ಪನೆಯನ್ನು ಅನ್ವಯಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದರು. ಹಸಿರು ಸಮೃದ್ಧಿಯೊಂದಿಗೆ ಮನುಷ್ಯ ಬದುಕು ಸುಸ್ಥಿರವಾಗುತ್ತದೆ. ಇದನ್ನು ದೃಷ್ಟಿಯಲ್ಲಿರಿಸಿಕೊಂಡು ಹಸಿರು ರಸಾಯನಶಾಸ್ತ್ರದ ಪರಿಕಲ್ಪನೆಯನ್ನು ಗಟ್ಟಿಗೊಳಿಸುವಂಥ ಸಂಶೋಧನಾ ಹೆಜ್ಜೆಗಳು ರೂಪುಗೊಳ್ಳಬೇಕು. ಹಾಗಾದಾಗ ಮಾತ್ರ ರಸಾಯನಶಾಸ್ತ್ರದ ಸಂಶೋಧನಾತ್ಮಕತೆಗೆ ಸುಸ್ಥಿರತೆಯ ಆಯಾಮ ದೊರಕುತ್ತದೆ ಎಂದು ನುಡಿದರು. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅವರು ಮಾತನಾಡಿದರು. ಹೊಸ ರೀತಿಯಲ್ಲಿ ಆಲೋಚಿಸುವ ಯುವ ಪೀಳಿಗೆ ಶಿಕ್ಷಣ ವಲಯದಲ್ಲಿ ಗಮನ ಸೆಳೆಯುತ್ತಿದೆ. ಶೈಕ್ಷಣಿಕ ಕಲಿಕೆಯ ಸ್ವರೂಪ ಬದಲಾಗುತ್ತಿದ್ದಂತೆ ಅದಕ್ಕೆ ತಕ್ಕಂತೆ ಸಾಮರ್ಥ್ಯ ರೂಪಿಸಿಕೊಳ್ಳುವ ಉತ್ಸಾಹವೂ ಕಂಡುಬರುತ್ತಿದೆ. ಇಂತಹ ಉತ್ಸಾಹಕ್ಕೆ ಪೂರಕವಾಗಿ ರಾಷ್ಟ್ರೀಯ ವಿಚಾರ ಸಂಕಿರಣಗಳಂತಹ ಕಾರ್ಯಕ್ರಮಗಳು ಹೊಸದೊಂದನ್ನು ಆವಿಷ್ಕರಿಸುವುದಕ್ಕೆ ಪ್ರೇರಣೆ ಒದಗಿಸುವ ವೇದಿಕೆಗಳಾಗಿ ಪ್ರಮುಖ ಪಾತ್ರವಹಿಸುತ್ತವೆ ಎಂದರು. ಸ್ಪರ್ಧಾತ್ಮಕ ಉತ್ಸವಗಳು ವಿದ್ಯಾರ್ಥಿಗಳ ಜ್ಞಾನಾಧಾರಿತ ಕೌಶಲ್ಯಗಳ ಪ್ರದರ್ಶನಕ್ಕೆ ಅವಕಾಶ ಒದಗಿಸಿಕೊಡುತ್ತವೆ. ಸೃಜನಶೀಲತೆಯೊಂದಿಗೆ ಮುನ್ನಡೆಯಲು ಸ್ಫೂರ್ತಿ ನೀಡುತ್ತವೆ ಎಂದು ಹೇಳಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ವಸಂತಕುಮಾರ್, ಡಾ.ರಾಜೇಶ್ ಹೆಗ್ಡೆ ಉಪಸ್ಥಿತರಿದ್ದರು. ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಡಾ.ನೆಫಿಸತ್ ವಂದಿಸಿದರು. ವಿದ್ಯಾರ್ಥಿನಿ ಸೋನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

ಜೈವಿಕ ತಂತ್ರಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ

Article Image

ಜೈವಿಕ ತಂತ್ರಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ

ವಿದ್ಯಾಗಿರಿ: ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನ ವಿಲೀನಗೊಂಡು ಸಂಶೋಧನಾ ಅಧ್ಯಯನ ನಡೆಸಲು ಪೂರಕ ವಾತವರಣ ನಿರ್ಮಾಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಣಿಪಾಲ ಕೆಎಂಸಿಯ ಔಷಧಶಾಸ್ತ್ರ ವಿಭಾಗದ ಸಂಶೋಧನಾ ಸಹಾಯಕಿ ಡಾ. ರಮ್ಯಾ ಕಟೀಲ್ ಹೇಳಿದರು. ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಜೈವಿಕ ವಿಜ್ಞಾನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇದರ ಸಹಯೋಗದೊಂದಿಗೆ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ "ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು" ಕುರಿತು ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ವಿಚಾರ ಸಂಕಿರಣವು ಸಂಶೋಧನಾರ್ಥಿಗಳಿಗೆ ಸೃಜನಾತ್ಮಕ ಜ್ಞಾನ, ವಿಚಾರ ವಿನಿಮಯ ಮತ್ತು ಅಧ್ಯಯನದಲ್ಲಿ ಪಾಲ್ಗೊಳ್ಳಲು ಸಹಕಾರಿ ಎಂದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇಲ್ಲಿನ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಸಂಶೋಧನಾ ಪ್ರಬಂಧಗಳನ್ನು ತಯಾರಿಸುವ ಸಂದರ್ಭಗಳಲ್ಲಿ ಹಲವಾರು ಬಾರಿ ನಿರಾಕರಣೆಯಾಗುವ ಸಂಭವ ಎದುರಾಗಬಹುದು. ಪರಿಶ್ರಮ ಮತ್ತು ಸ್ಥಿರತೆಯಿಂದ ಅಧ್ಯಯನವನ್ನು ಪೂರ್ಣಗೊಳಿಸಿ. ಪ್ರತಿ ಅಧ್ಯಯನದಲ್ಲಿಯೂ ಕುತೂಹಲ ಮತ್ತು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ. ಜೀವನದ ಪ್ರತಿ ಹಂತವನ್ನು ಸವಾಲಾಗಿ ಸ್ವೀಕರಿಸಿ, ಯಶಸ್ಸನ್ನು ಪಡೆಯಿರಿ ಎಂದರು. ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಸಂಶೋಧಕನಿಗೆ ಸಮಾಜದಲ್ಲಾಗುವ ಎಲ್ಲಾ ಪ್ರಚಲಿತ ಘಟನೆಗಳ ಅರಿವು ಬಹಳ ಅವಶ್ಯಕ ಎಂದು ತಿಳಿಸಿದರು. ಈ ರೀತಿಯ ವೈಜ್ಞಾನಿಕ ವಿಚಾರ ಸಂಕಿರಣ ವಿದ್ಯಾರ್ಥಿಗಳ ಜ್ಞಾನಮಟ್ಟವನ್ನು ಉತ್ತೇಜಿಸಲು ಪೂರಕ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಧಿಕೃತ ಸಂಶೋಧನಾ ಲೇಖನಗಳ ಪುಸ್ತಕದ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು. ನಂತರ ನಡೆದ ವಿವಿಧ ವಿಷಯವಾರು ಅಧಿವೇಶನಗಳಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಬೆಂಗಳೂರು ನ್ಯೂಟ್ರೇಸ್‌ನ ಎಲೆಕ್ಟ್ರೋ ಕೆಮಿಸ್ಟ್ರೀ ವಿಭಾಗದ ಪ್ರಧಾನ ಸಂಶೋಧಕಿ ಡಾ. ಹರ್ಷಿತಾ ಬಿ. ಎ. ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜಿನ ಜೀವ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ ಪ್ರಿಯಾಂಕಾ ಶ್ರೀಧರನ್‌ರಿಂದ ಉಪನ್ಯಾಸ ನಡೆಯಿತು. ಆಳ್ವಾಸ್ ಕಾಲೇಜು ಮತ್ತು ವಿವಿಧ ಕಾಲೇಜಿನ ಜೈವಿಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ 'ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು' ಕುರಿತ ಮೌಖಿಕ ಪ್ರಸ್ತುತಿ ಮತ್ತು ಪೋಸ್ಟರ್ ಪ್ರಸ್ತುತಿ ನೆರವೇರಿತು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗ ಮುಖ್ಯಸ್ಥ ಹಾಗೂ ಸಂಚಾಲಕ ಡಾ. ರಾಮ ಭಟ್ ಪಿ. ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಹನಾ ಪೂಜಾರಿ ನಿರೂಪಿಸಿ, ಅನಿಕೇತ ಸುಧೀರ್ ವಂದಿಸಿದರು.

ರೀಡರ್ಸ್ ಕ್ಲಬ್ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ

Article Image

ರೀಡರ್ಸ್ ಕ್ಲಬ್ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ರೀಡರ್ಸ್ ಕ್ಲಬ್ ವತಿಯಿಂದ "ಸಂಘರ್ಷ(ಕಾನ್ಫಿಕ್ಟ್) ಪತ್ರಕರ್ತನಾಗಿದ್ದಾಗ ಅಹಿತಕರ ಘಟನೆಗಳಿಂದ ಕಲಿತ ಪಾಠಗಳು" ವಿಷಯದ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಆಳ್ವಾಸ್ ಎಂಬಿಎ ಸೆಮಿನಾರ್‌ನಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸಂಘರ್ಷ ವರದಿಗಾರ, ಲೇಖಕ ಮತ್ತು ಸಿನಿಮಾ ನಿರ್ಮಾಪಕ ಅವಲೋಕ್ ಲ್ಯಾಂಗರ್ ಪತ್ರಿಕೋದ್ಯಮ ವೃತ್ತಿಯಲ್ಲಿ ಊಹೆ ಸಲ್ಲದು. ರವಾನಿಸುವ ಪ್ರತಿ ಸುದ್ದಿಯನ್ನು ಸೂಕ್ಶ್ಮತೆಯಿಂದ ಅವಲೋಕಿಸಿ. ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಹೊಸ ಆವಿಷ್ಕಾರ, ಪ್ರಯೋಗಗಳ ಕಡೆಗೆ ಹೆಚ್ಚು ಗಮನ ನೀಡುವುದರೊಂದಿಗೆ ಸತ್ಯವನ್ನು ಶೋಧಿಸುವ ಮಾರ್ಗದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿ ದಿನಗಳಲ್ಲೇ ಬೆಳೆಸಿಕೊಳ್ಳಿ. ಲಭಿಸಿದ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ , ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನವನ್ನು ಹೆಚ್ಚಿಸಲು ರೀಡರ್ಸ್ ಕ್ಲಬ್ ಕೈಗೊಳ್ಳುತ್ತಿರುವ ಕರ‍್ಯಗಳು ಶ್ಲಾಘನೀಯ. ಇಂದಿನ ಯುವಜನತೆಯಲ್ಲಿ ಆಲೋಚನಾ ಶಕ್ತಿಯ ಕೊರತೆ ಇದೆ. ಎಲ್ಲ ಮಾಹಿತಿಗಳನ್ನು ಯೋಚಿಸದೆ ಸ್ವೀಕರಿಸುವ ಮನೋಭಾವ ಹೊಂದಿರುವುದು ಬೇಸರದ ಸಂಗತಿ. ಇಂದಿನ ಯುವ ಸಮುದಾಯ, ತನ್ನ ಸುತ್ತಮುತ್ತಲಿನ ಎಲ್ಲ ಸುದ್ದಿ ಸಮಾಚಾರಗಳ ಕುರಿತು ಹೆಚ್ಚು ಜಾಗೃತರಾಗಿ ತಮ್ಮ ನಿರ್ದಿಷ್ಟ ನಿಲುವನ್ನು ಹೊಂದುವುದು ಉತ್ತಮ ಎಂದು ಸಲಹೆ ನೀಡಿದರು. ಸಂಘರ್ಷ ಪತ್ರಿಕೋದ್ಯಮದಲ್ಲಿನ ಸವಾಲುಗಳು ಮತ್ತು ಅಹಿತಕರ ಘಟನೆಗಳನ್ನು ಎದುರಿಸಿ, ಸತ್ಯವನ್ನು ಜನರೆದುರಿಗೆ ತೆರೆದಿಡಲು ಪಟ್ಟ ಶ್ರಮವನ್ನು ವಿಧ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಹಂಚಿಕೊAಡರು. ಕಾರ್ಯಕ್ರಮದಲ್ಲಿ ರೀಡರ್ಸ್ ಕ್ಲಬ್ ಸಂಯೋಜಕ ಶಶಿಕುಮಾರ್ ಮತ್ತು ರೀಡರ್ಸ್ ಕ್ಲಬ್ ಸದಸ್ಯರು, ವಿವಿಧ ವಿಭಾಗದ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಜೀವಿಟಾ ಪರ್ಲ್ ಕ್ರಾಸ್ತಾ ನಿರೂಪಿಸಿ, ಅಮಂಡಾ ವಂದಿಸಿದರು.

ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

Article Image

ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್‌ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 27-5 ಅಂಕಗಳ ಅಂತರದಿಂದ ಪುತ್ತೂರಿನ ವಿವೇಕಾನಂದ ಕಾಲೇಜು ವಿರುದ್ಧ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್‌ನ ತಂಡ ಏಕಪಕ್ಷೀಯವಾಗಿ 18-0 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜು ವಿರುದ್ಧ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ ''ಸಮಗ್ರ ಪ್ರಶಸ್ತಿ'' ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್‌ನಲ್ಲಿ "ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ"ಗೆ ಆಳ್ವಾಸ್ ಕಾಲೇಜಿನ ನಿಖಿಲ್ ಮತ್ತು"ಬೆಸ್ಟ್ ಡಿಫೆಂಡರ್ ಪ್ರಶಸ್ತಿ"ಗೆ ಪ್ರಮೋದ್ ಡಿ ಹಾಗೂ ವೈಯಕ್ತಿಕ ಮಹಿಳೆಯರ ಚಾಂಪಿಯನ್‌ಶಿಪ್‌ನಲ್ಲಿ "ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ"ಗೆ ಆಳ್ವಾಸ್ ಕಾಲೇಜಿನ ಪ್ರೇಕ್ಷಾ ಮತ್ತು ''ಬೆಸ್ಟ್ ಚೇಸರ್ '' ಪ್ರಶಸ್ತಿಗೆ ಕವನ ಭಾಜನರಾದರು. ಪುರುಷರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿಗೆ 4ನೇ ಸ್ಥಾನ, ಹಂಪನಕಟ್ಟೆ ವಿ. ವಿ ಕಾಲೇಜಿಗೆ ತೃತೀಯ ಸ್ಥಾನ, ಪುತ್ತೂರಿನ ವಿವೇಕಾನಂದ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 17ನೇ ಬಾರಿ''ಸಮಗ್ರ ಪ್ರಶಸ್ತಿ''ಲಭಿಸಿತು. ಮಹಿಳೆಯರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೃತೀಯ ಸ್ಥಾನ, ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 14ನೇ ಬಾರಿ ''ಸಮಗ್ರ ಪ್ರಶಸ್ತಿ'' ಲಭಿಸಿತು. ಸಮಾರೋಪ ಸಮಾರಂಭ: ದೇಸಿ ಕ್ರೀಡೆಯಾದ ಖೋ- ಖೋ ಆಟವು ಕ್ರೀಡಾಳುಗಳಲ್ಲಿ ಉತ್ತಮ ಕ್ರೀಡಾ ಮನೋಭಾವವನ್ನು ಹುಟ್ಟು ಹಾಕುವ ಶಕ್ತಿ ಹೊಂದಿದೆ ಎಂದು ಆಳ್ವಾಸ್ ಪ. ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ ಎಂ ಸದಾಕತ್ ನುಡಿದರು. ಕ್ರೀಡೆಯಲ್ಲಿ ಮಾನವೀಯತೆ ಸಾರುವ ಮನೋಭಾವ ಬೆಳೆಸಿಕೊಳ್ಳಿ ಎಂದು ತಿಳಿಸಿದರು. ಖೋ-ಖೋ ಆಟದಲ್ಲಿ ಸ್ಪರ್ಧಾರ್ಥಿಗಳು ಕ್ರೀಡಾ ಸ್ಪೂರ್ತಿ, ಚುರುಕುತನ ಮತ್ತು ಬದ್ಧತೆಯನ್ನು ಅಳವಡಿಸಿಕೊಂಡು ಗೆಲ್ಲುವುದರ ಕಡೆಗೆ ಶ್ರಮವಿರಲಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಡಾ. ಪ್ರಸನ್ನ ಕುಮಾರ್ ಬಿ ಕೆ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ ಮಧು ಜಿ ಆರ್, ಆಳ್ವಾಸ್ ಹಣಕಾಸು ಅಧಿಕಾರಿ ಶಾಂತಾರಾಮ್ ಕಾಮತ್, ಆಳ್ವಾಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ತಿಲಕ್ ಶೆಟ್ಟಿ, ವಿವಿಧ ಕಾಲೇಜಿನ ಕ್ರೀಡಾ ನಿರ್ದೇಶಕರು, ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ನಿರೂಪಿಸಿದರು.

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Article Image

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

ಉಜಿರೆ: ನಂದಿ ರಥ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು. ಚಲನಚಿತ್ರ ನಟ ಹಾಗೂ ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋ ವಿಜೇತರಾದ ಪ್ರಥಮ್, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು. ಕನ್ಯಾಡಿ ಮೂಲಕ ಉಜಿರೆಗೆ ರಥಯಾತ್ರೆ ಮುಂದುವರಿಯಿತು.

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

Article Image

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ - 2025, ಅಂತರಕಾಲೇಜು ತಂತ್ರಜ್ಞಾನ ಸಂಬAಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ ವಿ ಎಸ್ ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದAತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ. ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಫೆಸ್ಟ್ಗಳಿಗೆ ಯಾವ ರೀತಿಯ ಹೆಚ್ಚು ಮಹತ್ವ ನೀಡುತ್ತಾರೋ ಅದೇ ರೀತಿ ತಮ್ಮ ಜೀವನದ ಕೌಶಲ್ಯಗಳ ವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಸರ್ಟಿಫಿಕೇಟ್ ಪಡೆಯುವುದಕ್ಕಾಗಿ ಕಲಿಕೆಯನ್ನ ಸೀಮಿತಗೊಳಿಸದೆ ಕಲಿತ ಪಾಠವನ್ನು ಅಳವಡಿಸಿಕೊಳ್ಳುವ ಪ್ರಯತ್ನವಿರಬೇಕು ಆಗ ಮಾತ್ರ ಬದುಕಿನಲ್ಲಿ ಒಂದು ಉನ್ನತಿಯೆಡೆಗಿನ ಪಯಣ ಸಾಧ್ಯ. ಐಟಿ ಯುಗದಲ್ಲಿರುವ ನಾವುಗಳು ನೂತನ ತಂತ್ರಜ್ಞಾನಗಳ ಮಾಹಿತಿಯನ್ನು ತಿಳಿಯುವುದು ಹಾಗೂ ಅವುಗಳನ್ನು ಬಳಸಿಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯ ಎಂದರು. ಉದ್ಘಾಟನೆಯ ಬಳಿಕ ಐಟಿ ಕ್ವಿಜ್ , ಕಲ್ಚರಲ್ ಡಾನ್ಸ್, ಐಟಿ ಮ್ಯಾನೇಜರ್, ವೆಬ್ ಡಿಸೈನಿಂಗ್, ಕೊಡಿಂಗ್, ವೀಡಿಯೊಗ್ರಾಫಿ ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಎರಡು ದಿನಗಳ ಟೆಕ್ ಉತ್ಸವ್‌ದಲ್ಲಿ ವಿವಿಧ ಭಾಗಗಳಿಂದ 400 ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್, ವಿಭಾಗದ ಮುಖ್ಯಸ್ಥೆ ವನಿತಾ ಪ್ರಭು, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿದ್ಯಾರ್ಥಿ ಸಂಯೋಜಕಿ ಸಮೀಕ್ಷಾ ಎಸ್ ಹಾಗೂ ಶಿಶಿರ್ ಎಸ್ ಉಪಸ್ಥಿತರಿದ್ದರು. ಶ್ರೀಶ್ ಕೋಟೆಗಾರ ಕಾರ್ಯಕ್ರಮ ನಿರೂಪಿಸಿದರು.

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

Article Image

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

ಉಜಿರೆ, ಮಾ.12: ಹೆಣ್ಣುಮಕ್ಕಳಿಗೆ ಶಿಕ್ಷಣ ಎನ್ನುವುದು ಪಠ್ಯವಲ್ಲ, ಅದು ಅವರ ಸಶಕ್ತೀಕರಣದ ಸಾಧನ. ಪ್ರಸ್ತುತ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ. ಹೆಣ್ಣು ಶಕ್ತಿಯಾದಾಗ ಸಮಾಜ ಮತ್ತಷ್ಟು ಬೆಳೆಯಲು ಸಾಧ್ಯ ಎಂದು ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇಂದು (ಮಾ. 12) ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ, ಮಹಿಳಾ ಅಭಿವೃದ್ಧಿ ಕೋಶ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. “ಮಹಿಳೆ ಎಂದರೆ ಕೇವಲ ಗೃಹಿಣಿಯಲ್ಲ, ಅವಳು ಧೈರ್ಯ, ಸಾಹಸ, ಛಲದ ಪ್ರತೀಕ. ಎಲ್ಲಿ ಮಹಿಳೆಗೆ ಗೌರವ ಸಿಗುತ್ತದೆಯೋ ಅಲ್ಲಿ ಸಮೃದ್ಧಿ ಲಭಿಸುತ್ತದೆ. ಮಹಿಳೆಯರು ದೇಶದ ಆಸ್ತಿಯಾಗಬೇಕು. ನಮ್ಮ ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು ಸಂತಸದಾಯಕ" ಎಂದು ಅವರು ಹೇಳಿದರು. “ನಮ್ಮ ಹಲವು ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು, ಜ್ಞಾನ ವಿಕಾಸ, ಗೆಳತಿ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಮನೆಗಳಿಗೆ ಒಳಿತಾಗಿದೆ. ನಮ್ಮ ಯೋಜನೆಗಳಿಂದ ಸಬಲರಾದ ಅನೇಕ ಮಹಿಳೆಯರು ತಮ್ಮ ಸಾಧನೆಗಳನ್ನು ಹಂಚಿಕೊಂಡಾಗ ಅವರ ಕಣ್ಣಲ್ಲಿ ಹೆಮ್ಮೆ ಕಾಣುತ್ತದೆ" ಎಂದರು. ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, "ಮಹಿಳೆಯರ ಸಶಕ್ತೀಕರಣದ ವಿಚಾರ ಬಂದಾಗ ಕಲ್ಪನಾ ಚಾವ್ಲಾ, ಇಂದಿರಾ ಗಾಂಧಿ, ರಾಣಿ ಅಬ್ಬಕ್ಕ ಅವರಂತಹ ಹೆಮ್ಮೆಯ ನಾರಿಯರು ನೆನಪಿಗೆ ಬರುತ್ತಾರೆ. ಇವರು ಯಾವುದೇ ಕ್ಷೇತ್ರದಲ್ಲೂ ಮಹಿಳೆಯರು ಕಮ್ಮಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಅವರ ಹಾದಿಗಳು ಇಂದಿನ ಮಹಿಳೆಯರಿಗೆ ಆದರ್ಶ ಮತ್ತು ಸ್ಫೂರ್ತಿದಾಯಕ. ಯಾವ ದೇಶದಲ್ಲಿ ಹೆಣ್ಣನ್ನು ಪೂಜಿಸುತ್ತಾರೋ ಆ ದೇಶ ಸಶಕ್ತವಾಗುತ್ತದೆ"ಎಂದು ಹೇಳಿದರು. "ಮಹಿಳಾಭಿವೃದ್ಧಿಗಾಗಿ ಡಾ. ಹೇಮಾವತಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಶ್ರೀ ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿದ್ದಾರೆ" ಎಂದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, "ದೇಶದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇರಬಹುದು. ಆದರೆ ಉನ್ನತ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚು ಎನ್ನುವುದು ಹೆಮ್ಮೆಯ ವಿಚಾರ. ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ, ಮಹಿಳೆಯರು ಇನ್ನಷ್ಟು ಶಿಕ್ಷಣ ಪಡೆಯಬೇಕು ಮತ್ತು ದೇಶದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು. ಈ ಕಾರ್ಯ ಮುಂದುವರಿಯಲು ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಬೇಕಾಗುತ್ತದೆ" ಎಂದರು. ದೇಶದ ಮಹಿಳೆಯರ ಕೊಡುಗೆ ಮತ್ತು ಸಾಧನೆಗಳನ್ನು ನೆನೆಯಲು, ವಿದ್ಯಾರ್ಥಿನಿಯರಿಂದ ಕಿರು ರೂಪಕ ಪ್ರದರ್ಶಶಿಸಲಾಯಿತು. ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು ಎಂಬ ವಿಷಯದ ಕುರಿತು ಬೆಂಗಳೂರಿನ ಜನಮನ್ ಫಾರ್ಮಸುಟಿಕಲ್ಸ್ ಪ್ರೈ.ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮ ಸಂಚಾಲಕರಾದ ಮಾಲಿನಿ ಅಂಚನ್ ಸ್ವಾಗತಿಸಿ, ಅಕ್ಷತಾ ಜೈನ್ ವಂದಿಸಿದರು. ವಿದ್ಯಾರ್ಥಿನಿಯರಾದ ಪೂರ್ವಿ ಮತ್ತು ತಂಡ ಪ್ರಾರ್ಥಿಸಿದರು. ಮಾನಸ ಅಗ್ನಿಹೋತ್ರಿ, ಹರ್ಷಿನಿ ಹಾಗೂ ಧರಿತ್ರಿ ಭಿಡೆ ನಿರೂಪಿಸಿದರು. ವಾಣಿಜ್ಯ ಕ್ಷೇತ್ರದ ತಜ್ಞರು, ಉದ್ಯಮಿಗಳು, ಮತ್ತು ಅಂತರಸಂಸ್ಥಾ ಪ್ರತಿನಿಧಿಗಳು ಭಾಗವಹಿಸಿ, ಕ್ರಿಯಾಶೀಲತೆಯ ಮಹತ್ವ ಕುರಿತು ಚರ್ಚೆ ನಡೆಸಿದರು. ಚರ್ಚಾ ಕೂಟದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕಿ ಮತ್ತು ಅಧ್ಯಕ್ಷೆ ಡಾ. ಪ್ರೀತಿ ಕೀರ್ತಿ ಡಿಸೋಜ ವಹಿಸಿದ್ದರು. ಚರ್ಚೆಯಲ್ಲಿ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಟಿ. ಎನ್. ಕೇಶವ, ಸಂಧ್ಯಾ ಫ್ರೆಶ್‌ನ ಸಹಸಂಸ್ಥಾಪಕಿ ಮನೋರಮಾ ಭಟ್ಟ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಪೂರ್ವಾಧ್ಯಕ್ಷೆ ಅರ್ಚನಾ ರಾಜೇಶ್ ಪೈ ಭಾಗವಹಿಸಿದರು. ಮಹಿಳೆ ಮತ್ತು ಹೂಡಿಕೆ ಎಂಬ ವಿಷಯದ ಕುರಿತು ವಿಶೇಷ ಸಂವಾದಾತ್ಮಕ ಚಟುವಟಿಕೆ ನಡೆಯಿತು. ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ. ಜ್ಞಾನ ವಿಕಾಸ ಯೋಜನಾಧಿಕಾರಿ ಸಂಗೀತಾ ಮತ್ತು ಬೆಳ್ತಂಗಡಿ ತಾ.ಪಂ. ಕ್ಲಸ್ಟರ್ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ‘ಎಂಪವರ್ ಎಕ್ಸ್ಪೋ’ ವಿಶಿಷ್ಟ ಪ್ರದರ್ಶನ ಮತ್ತು ಮಾರಾಟ ಮಳಿಗೆ ಏರ್ಪಡಿಸಲಾಗಿತ್ತು, ಇದರಲ್ಲಿ ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿದರು. ಡಾ ಹೇಮಾವತಿ ವೀ ಹೆಗ್ಗಡೆ ಉದ್ಘಾಟಿಸಿದರು.

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

Article Image

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

ಉಜಿರೆ: ಯುವ ಪತ್ರಕರ್ತರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ನಿರ್ಭೀತ ನಡೆಯಿಂದ ವೃತ್ತಿಪರತೆಯಿಂದ ಕಾರ್ಯಪ್ರವೃತ್ತರಾದಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಶಿರಾದ ವರ್ಧಮಾನ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ, ಶಿಕ್ಷಣ ತಜ್ಞ ಸಂಜಯ್ ಎಸ್. ಗೌಡ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದೊಂದಿಗೆ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ (ಪದವಿ ಮತ್ತು ಸ್ನಾತಕೋತ್ತರ), ಬಿ.ವೋಕ್ ವಿಭಾಗ (ಡಿಜಿಟಲ್ ಮೀಡಿಯಾ ಆ್ಯಂಡ್ ಫಿಲ್ಮ್ ಮೇಕಿಂಗ್) ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ 'ಸಮೂಹ ಮಾಧ್ಯಮ ವೃತ್ತಿಪರತೆ ಮತ್ತು ಸದ್ಯದ ಸವಾಲುಗಳು' ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ವೇಗವಾಗಿ ಪ್ರಸಾರವಾಗುತ್ತಿವೆ. ಅವುಗಳಲ್ಲಿ ಸತ್ಯ ಮತ್ತು ವಸ್ತುನಿಷ್ಠತೆ ಕಾಯ್ದುಕೊಳ್ಳುವುದು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಂಶೋಧನಾತ್ಮಕವಾಗಿ ಕಾರ್ಯನಿರ್ವಹಿಸಿದರೆ ಸುದ್ದಿಗಳಲ್ಲಿ ನಿಖರತೆ ಕಾಯ್ದುಕೊಳ್ಳಬಹುದು. ಯುವಜನರ ವ್ಯವಸ್ಥಿತ ಭಾಗವಹಿಸುವಿಕೆಯಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಪದವೀಧರರಾಗಿ ಹೊರಹೋದ ನಂತರವೂ ಕಾಲೇಜಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಇದು ಪರಸ್ಪರರ ಅಭಿವೃದ್ಧಿಗೆ ಅವಶ್ಯ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಾಧ್ಯಮಗಳು ಪ್ರಜಾಪ್ರಭುತ್ವದ ಜೀವಾಳ. ಪತ್ರಕರ್ತರು ಸಮರ್ಪಕವಾಗಿ ಕೆಲಸ ಮಾಡಿದಾಗ ಪ್ರಜಾಪ್ರಭುತ್ವ ಸದೃಢವಾಗಿ ಉಳಿಯುತ್ತದೆ ಎಂದು ಹೇಳಿದರು. ಸರಿಯಾದ ಸಮಯದಲ್ಲಿ ಮಾಹಿತಿ ಮತ್ತು ತರಬೇತಿ ಪಡೆದುಕೊಳ್ಳುವುದರಿಂದ ಆವಶ್ಯಕ ಕೌಶಲ್ಯಗಳನ್ನು ವೃತ್ತಿಬದುಕಿನಲ್ಲಿ ಹೊಂದಬಹುದು. ವಿದ್ಯಾರ್ಥಿಗಳು ಅವಕಾಶಗಳು ಸಿಕ್ಕಿದಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಕಾರ್ಯಕ್ರಮದ ಪ್ರಧಾನ ಆಶಯವನ್ನು ಪ್ರಸ್ತುತಪಡಿಸಿ ಮಾತನಾಡಿದರು. ನಂಬಿಕೆ, ವಿಶ್ವಾಸ ಮತ್ತು ನಿರೀಕ್ಷೆಗಳನ್ನು ಸಮಾಜದಲ್ಲಿ ಮೂಡಿಸುವುದು ಮಾಧ್ಯಮಗಳ ಕೆಲಸವಾಗಿದೆ. ಮಾಧ್ಯಮಗಳು ಸಮಾಜದ ನಂಬಿಕೆ ಉಳಿಸಿಕೊಳ್ಳಬೇಕಾದರೆ ದಮನಿತರ ಧ್ವನಿಯಾಗಬೇಕು. ಆಗ ಅವುಗಳ ಅಸ್ತಿತ್ವವೂ ಉಳಿಯುತ್ತದೆ. ಸಾಮಾಜಿಕ ಮಾಧ್ಯಮಗಳ ಕಾರಣದಿಂದ ಮುಖ್ಯವಾಹಿನಿಯ ಮಾಧ್ಯಮಗಳಿಗೆ ಸವಾಲುಗಳು ಎದುರಾಗಿವೆ. ಇವುಗಳನ್ನು ಎದುರಿಸಬೇಕಾದರೆ ಮಾಧ್ಯಮದ ವಿದ್ಯಾರ್ಥಿಗಳು ಪತ್ರಿಕೋದ್ಯಮದ ಆಶಯ ಮತ್ತು ನೈತಿಕತೆಯನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸದ್ಯ ಪಾಸಿಟಿವ್ ಜರ್ನಲಿಸಂ ವಿಸ್ತರಿಸುವ ಅಗತ್ಯವಿದೆ. ಸುದ್ದಿ ಕೆರಳಿಸುವಂತಿರದೆ, ಶಮನ ನೀಡುವಂತಿರಬೇಕು ಎಂದರು. ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ವಿರಾಟ್ ಪದ್ಮನಾಭ ಅವರ 'ಬೆಟ್ಟದ ಹೂವು' ಪುಸ್ತಕ ಇತ್ತೀಚೆಗೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು. ಉದ್ಘಾಟನಾ ಸಮಾರಂಭದ ಕುರಿತು ಪದವಿ ಪತ್ರಿಕೋದ್ಯಮ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ತಕ್ಷಣಕ್ಕೆ ಸಂಯೋಜಿಸಿದ ‘ಚಿಗುರು’ ಭಿತ್ತಿಪತ್ರಿಕೆಯ ವಿಶೇಷ ಸಂಚಿಕೆ ಅನಾವರಣಗೊಳಿಸಲಾಯಿತು. ವಿಚಾರ ಸಂಕಿರಣದೊಂದಿಗೆ ಆಯೋಜಿಸಿರುವ ಮಾಧ್ಯಮ ಪರ್ವ ಫೆಸ್ಟ್ ಥೀಮ್ ಸಾಂಗ್ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಆಯೇಶಾ ಖಾನಂ, ಸಂಜಯ್ ಎಸ್. ಗೌಡ ಮತ್ತು ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ., ಉಜಿರೆಯ ಮಂಜುಶ್ರೀ ಪ್ರಿಂಟರ್ಸ್ ಪ್ರಬಂಧಕ ಶೇಖರ್ ಮತ್ತು ಉದ್ಯಮಿ ಶ್ರೀನಿವಾಸ ಗಲಗಲಿ ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಪ್ರಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನೈದಿಲೆ ಮತ್ತು ಸಿಂಚನ ನಿರೂಪಿಸಿದರು. ಸಹನಾ ವಂದಿಸಿದರು.

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

Article Image

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಮಾ. 12ರಂದು (ನಾಳೆ) ಬೆಳಗ್ಗೆ 10ಕ್ಕೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ. ಕಾಲೇಜಿನ ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ ಮತ್ತು ಮಹಿಳಾ ಅಭಿವೃದ್ಧಿ ಕೋಶದ ವತಿಯಿಂದ ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯುಎಸಿ) ಸಹಯೋಗದೊಂದಿಗೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೇಮಾವತಿ ವೀ. ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಜನಮನ್ (JANMAN) ಫಾರ್ಮಾಸುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ (Chief Executive Director) ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಜೆ 4ಕ್ಕೆ ಸೆಮಿನಾರ್ ಹಾಲ್ ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನ್ಯೂಸ್ ಫಸ್ಟ್ ಕನ್ನಡ ಸುದ್ದಿ ವಾಹಿನಿಯ ಆ್ಯಂಕರ್ ಹಾಗೂ ಅಸೋಸಿಯೇಟ್ ಎಡಿಟರ್ ವಿದ್ಯಾಶ್ರೀ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪರೀಕ್ಷಾಂಗ ಕುಲಸಚಿವೆ ನಂದ ಕುಮಾರಿ ಕೆ.ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಐಕ್ಯುಎಸಿ ಸಂಯೋಜಕ ಗಜಾನನ ಆರ್. ಭಟ್ ಉಪಸ್ಥಿತರಿರಲಿದ್ದಾರೆ.

ಸಾಧಕರ ಸನ್ಮಾನ

Article Image

ಸಾಧಕರ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಆಶ್ರಯದಲ್ಲಿ ಪ್ರೊ. ಗಣಪತಿ ಕುಳಮರ್ವ, ಬೆಳಾಲು ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಚೊಕ್ಕಾಡಿ ಮತ್ತು ದಾಸಪ್ಪ ಗೌಡ ಕೊಲ್ಲಿ ಇವರ ಸೇವೆ-ಸಾಧನೆಯನ್ನು ಮನ್ನಿಸಿ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆದ ಸಂಘದ ಮಾಸಿಕ ಸಭೆಯಲ್ಲಿ ಗೌರವಿಸಲಾಯಿತು. ಹಿರಿಯರನ್ನು ಗೌರವಿಸಿ ಸನ್ಮಾನಿಸಿದ ಪ್ರಜಾವಾಣಿ ಪತ್ರಿಕೆಯ ವರದಿಗಾರ ಆರ್.ಎನ್. ಪೂವಣಿ ಮಾತನಾಡಿ, ಮೂರು ಮಂದಿ ಹಿರಿಯ ಸಾಧಕರ ಸೇವೆ, ಸಾಧನೆ ಕಿರಿಯರಿಗೆ ಪ್ರೇರಕ ಶಕ್ತಿಯಾಗಿ ಸ್ಪೂರ್ತಿಯಾಗಿದೆ. ಅವರ ದಕ್ಷ ಸೇವೆಗೆ ಅಭಿನಂದಿಸಿ ಶುಭ ಹಾರೈಸಿದರು. ಸಂಘದ ಕಟ್ಟಡ ನಿರ್ಮಾಣಕ್ಕೆ ಒಂದು ಲಕ್ಷ ರೂ. ಗೂ ಅಧಿಕ ದೇಣಿಗೆ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಸೋಮಶೇಖರ ಶೆಟ್ಟಿ ಇವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅವರ ದಕ್ಷ ನೇತೃತ್ವದಲ್ಲಿ ಸರ್ವ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲೆಂದು ಪೂವಣಿ ಅವರು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಇತೀಚೆಗೆ ನಿಧನರಾದ ನಿವೃತ್ತ ಮುಖ್ಯೋಪಾಧ್ಯಾಯ ಕಾಶ್ಮೀರ್ ಮಿನೇಜಸ್ ಅವರ ಬಗ್ಗೆ ತೆರೆಸಾ ಲೋಬೊ ನುಡಿನಮನ ಸಲ್ಲಿಸಿ, ಬಳಿಕ ಮಿನೆಜಸ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯದರ್ಶಿ ವಿಶ್ವಾಸ ರಾವ್ ಗತ ಸಭೆಯ ವರದಿ ಸಾದರಪಡಿಸಿದರು. ವಸಂತ ಸುವರ್ಣ ಧನ್ಯವಾದವಿತ್ತರು.

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

Article Image

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮಾನಸದಲ್ಲಿ ನಲ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನಲ್ಲಿ 3ರಂದು ನಡೆದ ಡೈಮಾಂಡ್ ಫೆಸ್ಟ್ ಚಾಲನೆ ಸಮಾರಂಭದಲ್ಲಿ ಮಾತನಾಡಿದರು. ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ, ಚಿನ್ನಾಭಾರಣಗಳಲ್ಲಿ ಉತ್ತಮ ಗುಣ ಮಟ್ಟವನ್ನು ನೀಡುತ್ತಾ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವ್ಯವಹಾರಕ್ಕೆ ಸಾಮಾಜಿಕವಾಗಿ ತೊಡಗಿಸಿಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆ ಮುಳಿಯ ಎಂದು ಅಭಿಪ್ರಾಯಪಟ್ಟರು. ಮರ‍್ಕೇಟಿಂಗ್ ಕನ್ಸಲ್‌ಟೆಂಟ್ ವೇಣುಶರ್ಮ ಮಾತನಾಡಿ, ಚಿನ್ನಾಭರಣ ಸುರಕ್ಷಿತ ಹೂಡಿಕೆಯ ಉದ್ಯಮವಾಗಿದೆ. ವಿಶಿಷ್ಟ ಹಾಗೂ ವಿನೂತನ ವಜ್ರಾಭರಣಗಳ ಸಂಗ್ರಹಣೆ ಈ ಬಾರಿಯ ಡೈಮಾಂಡ್ ಫೆಸ್ಟ್ ನಲ್ಲಿದೆ. ಜೀವನದ ಮೊದಲ ವಜ್ರಾಭರಣ ಖರೀದಿಯನ್ನು ಮುಳಿಯೊಂದಿಗೆ ಪ್ರಾರಂಭಿಸಿ ಎಂದು ಹೇಳಿದರು. ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್‌ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕನ್ನಿಕಾ ನಿರೂಪಿಸಿದರು.

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Article Image

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಉಜಿರೆ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಭೌತಶಾಸ್ತ್ರ ಅಧ್ಯಯನ ವಿಭಾಗ ಮತ್ತು ಪದವಿ ಭೌತಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಮಾರ್ಚ್ 1, 2025 ರಂದು “ಕ್ವಾಂಟಮ್ ಟು ಕಾಸ್ಮೊಸ್” ಉಪನ್ಯಾಸ ಸರಣಿ ಆಯೋಜಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನ 2025 ಅನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಐಐಟಿ ದೆಹಲಿಯಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಡಾ. ವಿ. ರವಿಶಂಕರ್ "ಕ್ವಾಂಟಮ್ ಮಾಹಿತಿಗೆ ಆಹ್ವಾನ" ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಕ್ವಾಂಟಮ್ ಮಾಹಿತಿಯ ಪ್ರಾಮುಖ್ಯತೆ, ಪಾತ್ರ ಮತ್ತು ಮುಂದಿನ ದಿನಗಳಲ್ಲಿ ಅದರ ಪರಿಣಾಮಗಳನ್ನು ಕುರಿತಾಗಿ ಅವರು ಚರ್ಚಿಸಿದರು. ಮಣಿಪಾಲ ನೈಸರ್ಗಿಕ ವಿಜ್ಞಾನ ಕೇಂದ್ರ ಮಾಹೆ, ನಿರ್ದೇಶಕ ಡಾ.ಪಿ.ಶ್ರೀಕುಮಾರ್ "ಭಾರತದಲ್ಲಿ ಮುಂಬರುವ ಖಗೋಳಶಾಸ್ತ್ರದ ಪ್ರಮುಖ ಯೋಜನೆಗಳು" ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿ ಮಾತನಾಡಿದರು. ಅವರು ವೀಕ್ಷಣೆ-ಆಧಾರಿತ ಖಗೋಳಶಾಸ್ತ್ರದ ಮೂಲ ಪರಿಕಲ್ಪನೆಗಳು ಮತ್ತು ಈ ಕ್ಷೇತ್ರದಲ್ಲಿ ಸಂಶೋಧನೆಯ ಪ್ರಮುಖ ಆಯಾಮಗಳ ಬಗ್ಗೆ ವಿವರಿಸಿದರು. ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ವಿಶ್ವಸಂಸ್ಥೆಯು ಈ ವರ್ಷವನ್ನು "ಅಂತಾರಾಷ್ಟ್ರೀಯ ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನ ವರ್ಷ" ಎಂದು ಘೋಷಿಸಿದೆ ಮತ್ತು ಮುಂಬರುವ ವರ್ಷಗಳಲ್ಲಿ ಭೌತಶಾಸ್ತ್ರವು ಮಹತ್ವದ ಸ್ಥಾನ ಪಡೆಯಲಿದೆ ಎಂದು ಅವರು ಹೇಳಿದರು. ಎಸ್‌ಡಿಎಂ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಪೇಕ್ಷಾ ಜೈನ್‌ ಉಪಸ್ಥಿತರಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿಸಲಾಯಿತು.

ಶಿವರಾತ್ರಿ: ಧರ್ಮಸ್ಥಳದಲ್ಲಿ ರಥೋತ್ಸವ

Article Image

ಶಿವರಾತ್ರಿ: ಧರ್ಮಸ್ಥಳದಲ್ಲಿ ರಥೋತ್ಸವ

ಧರ್ಮಸ್ಥಳ: ಶಿವರಾತ್ರಿ ಆಚರಣೆ ಅಂಗವಾಗಿ ಗುರುವಾರ ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು. ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ .ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ

Article Image

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ

ಉಜಿರೆ: ಶಿವರಾತ್ರಿ ಅಂದರೆ ಪವಿತ್ರ ಹಾಗೂ ಮಂಗಳಕರ ರಾತ್ರಿ ಎಂದು ಅರ್ಥ. ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಜಪ-ತಪ, ಧ್ಯಾನದೊಂದಿಗೆ ವೃತ ನಿಯಮಗಳ ಪಾಲನೆ ಮಾಡಿದಾಗ ಜೀವನ ಪಾವನವಾಗುತ್ತದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಮಾತು ಬಿಡ ಮಂಜುನಾಥ ಎಂಬ ಮಾತು ಪ್ರಚಲಿತವಿದೆ. ನಮ್ಮ ಮಾತು ಮತ್ತು ಕೃತಿಗೆ ಅಂತರವಿರಬಾರದು. ನುಡಿದಂತೆ ನಡೆಯಬೇಕು. ಆಗ ಸತ್ಯ, ಧರ್ಮ, ನ್ಯಾಯ, ನೀತಿಯ ಪಾಲನೆಯೊಂದಿಗೆ ಎಲ್ಲವೂ ಸುಗಮವಾಗಿ ಜೀವನ ಪಾವನವಾಗುತ್ತದೆ. ಮನದಲ್ಲಿರುವ ಕೆಟ್ಟ ಯೋಚನೆ, ಭಾವನೆಗಳನ್ನು ತ್ಯಜಿಸಿ ಎಲ್ಲರೂ ಸುಖಿಗಳಾಗಿರಲಿ ಎಂಬ ಉದಾತ್ತ ಭಾವನೆಯೊಂದಿಗೆ ಲೋಕಕಲ್ಯಾಣವಾಗಲಿ ಎಂದು ಶುಭ ಚಿಂತನೆ ಮಾಡಬೇಕು. ಆಗ ಕಾಲಕ್ಕೆ ಸರಿಯಾಗಿ ಮಳೆ, ಬೆಳೆ ಆಗಿ ಎಲ್ಲೆಲ್ಲೂ ಸುಖ-ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಬಳಿಕ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಆಹೋ ರಾತ್ರಿ ನಡೆಯಿತು. ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ದೇವರಿಗೆ ಶತರುದ್ರಾಭಿಷೇಕ ಮತ್ತು ಸೀಯಾಳ ಅಭಿಷೇಕ ಸೇವೆ ಅರ್ಪಿಸಿ ಧನ್ಯತೆಯನ್ನು ಹೊಂದಿದರು. ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರಿಯಾ ಹರ್ಷೇಂದ್ರ ಕುಮಾರ್, ಬೆಂಗಳೂರಿನ ಹನುಮಂತಪ್ಪ ಗುರೂಜಿ ಮತ್ತು ಮರಿಯಪ್ಪ . ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು. ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು ಉಪಸ್ಥಿತರಿದ್ದರು.

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Article Image

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

ಪರಿಶುದ್ಧವಾದ ಭಕ್ತಿ ಮತ್ತು ದೃಢನಂಬಿಕೆಯಿಂದ ನಮ್ಮ ಎಲ್ಲಾ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳಿಗೆ ಶುಭಹಾರೈಸಿ, ಆಶೀರ್ವದಿಸಿದರು. ದೇವರಲ್ಲಿ ಭಕ್ತಿ ಮತ್ತು ನಂಬಿಕೆಯಲ್ಲಿ ಯಾವುದೇ ರೀತಿಯ ಭಯ, ಸಂಶಯ ಇರಬಾರದು. ನಾವು ಕೊಂಚ ತಪ್ಪಿದರೂ ದೇವರು ನಮ್ಮ ರಕ್ಷಣೆ ಮಾಡುತ್ತಾರೆ. ನಂಬಿಕೆಗಳು ಮತ್ತು ವಿಶ್ವಾಸದಿಂದ ನಮ್ಮ ದೋಷಗಳ ದಮನವಾಗುತ್ತದೆ. ಭಕ್ತಿಯಲ್ಲಿ ದೈಹಿಕ ಶಕ್ತಿಗಿಂತಲೂ ಮಾನಸಿಕ ಶಕ್ತಿ, ಸಂಕಲ್ಪ ಮಿಗಿಲಾದುದು. ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ ಸತ್ಯ ಮತ್ತು ನ್ಯಾಯಮಾರ್ಗದಲ್ಲಿ ನಡೆದರೆ ಅವರಿಗೆ ದೇವರ ಪೂರ್ಣ ಅನುಗ್ರಹವಿರುತ್ತದೆ. ತ್ಯಾಗ ಮಾಡುವುದರಿಂದ ನಾವು ಶಾಶ್ವತ ಸುಖ-ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿ, ಪಾದಯಾತ್ರಿಗಳಿಗೆ ಶುಭ ಹಾರೈಸಿದರು. ಪಾದಯಾತ್ರಿಗಳಿಗೆ ನಿರಂತರ ಪ್ರೇರಣೆ, ಮಾರ್ಗದರ್ಶನ ನೀಡುತ್ತಿರುವ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಬಳಗದವರನ್ನು ಹೆಗ್ಗಡೆಯವರು ಅಭಿನಂದಿಸಿದರು. ನಾಗಸಾಧು ಧನಂಜಯ ಗಿರಿ ಗುರೂಜಿ, ಧರ್ಮಸ್ಥಳ ಕ್ಷೇತ್ರದ ಬಗ್ಯೆ ಅಪಾರ ಭಕ್ತಿ, ಗೌರವ ವ್ಯಕ್ತಪಡಿಸಿ ಗರ್ಭಗುಡಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನವಾದರೆ, ನಾವು ಹೊರಗೆ ಬಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಮಾತನಾಡುವ ಮಂಜುನಾಥನ ದರ್ಶನ, ಆಶೀರ್ವಾದ ಪಡೆದು ಪುನೀತರಾಗುತ್ತೇವೆ. ಹೆಗ್ಗಡೆಯವರ ಮೂಲಕ ನಾವು ಶ್ರೀ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದರು. ಸ್ವಚ್ಛತೆಯನ್ನು ಕಾಪಾಡಿ: ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಬಂದವರು ನೇತ್ರಾವತಿ ನದಿಯಲ್ಲಿ ಮಿಂದು ಬಟ್ಟೆ, ಸಾಬೂನು, ತ್ಯಾಜ್ಯಗಳನ್ನು ನೀರಿಗೆ ಹಾಕಿ ಅಪವಿತ್ರ ಮಾಡಬಾರದು. ಇದರಿಂದ ಪಾಪಪ್ರಜ್ಞೆ ಹೆಚ್ಚಾಗುತ್ತದೆ ಎಂದು ಅವರು ಭಕ್ತರಿಗೆ ಎಚ್ಚರಿಕೆ ನೀಡಿದರು. ಶಿವಕ್ಷೇತ್ರ ಯಾವಗಲೂ ಶಾಂತವಾಗಿದ್ದು, ಪವಿತ್ರ ಧರ್ಮಸ್ಥಳವನ್ನು ಹಾಗೂ ನೇತ್ರಾವತಿ ನದಿಯನ್ನು ಸ್ವಚ್ಛವಾಗಿಡಲು ಸಹಕರಿಸಿ. ಧರ್ಮಸ್ಥಳದ ಅನ್ನದಾನ ವಿಶ್ವವಿಖ್ಯಾತವಾಗಿದೆ. ಭಕ್ತರು ಕೂಡಾ ಈ ಪವಿತ್ರ ಕಾಯಕಕ್ಕೆ ದಾನ ನೀಡಬಹುದು ಎಂದರು. ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ ಶುಭ ಹಾರೈಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದು ಸಹಕರಿಸಿದರು. ಮರಿಯಪ್ಪ ಸ್ವಾಗತಿಸಿದರು. ಶಶಿಕುಮಾರ ಧನ್ಯವಾದವಿತ್ತರು.

ಮುಳಿಯ ಜುವೆಲ್ಸ್ ನಲ್ಲಿ ನಡೆದಿದ್ದ ಡೈಮಾಂಡ್ ಫೆಸ್ಟ್ ಲಕ್ಕಿ ಕೂಪನ್ ಡ್ರಾ ವಿಜೇತರಿಗೆ ಕಾರ್‌ ಕೀ ಹಸ್ತಾಂತರ

Article Image

ಮುಳಿಯ ಜುವೆಲ್ಸ್ ನಲ್ಲಿ ನಡೆದಿದ್ದ ಡೈಮಾಂಡ್ ಫೆಸ್ಟ್ ಲಕ್ಕಿ ಕೂಪನ್ ಡ್ರಾ ವಿಜೇತರಿಗೆ ಕಾರ್‌ ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್‌ ಕುಮಾರ್‌, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸ್ಕೈ ಎಲೆಕ್ಟ್ರಿಕಲ್ಸ್‌ ಸರ್ವೀಸ್‌ ಮತ್ತು ಪ್ರೈಮ್‌ ಅಸೋಸಿಯೇಟ್ಸ್‌: ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

Article Image

ಸ್ಕೈ ಎಲೆಕ್ಟ್ರಿಕಲ್ಸ್‌ ಸರ್ವೀಸ್‌ ಮತ್ತು ಪ್ರೈಮ್‌ ಅಸೋಸಿಯೇಟ್ಸ್‌: ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

ಅಳದಂಗಡಿ: ಇಲ್ಲಿನ ಶ್ರೀ ಸೋಮನಾಥೇಶ್ವರೀ ದೇವಸ್ಥಾನ ಬಳಿಯಿರುವ ಪಾವನಿ ಕಾಂಪ್ಲೆಕ್ಸ್‌ನಲ್ಲಿ ಸ್ಕೈ ಎಲೆಕ್ಟ್ರಿಕಲ್ಸ್‌ ಸರ್ವೀಸ್‌ ಮತ್ತು ಪ್ರೈಮ್‌ ಅಸೋಸಿಯೇಟ್ಸ್‌ ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭವು ದಿನಾಂಕ 28-02-2025ನೇ ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಉದ್ಘಾಟನೆ ಹಾಗೂ ಶುಭಾಶೀರ್ವಾದ : ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ ಮುಖ್ಯ ಅತಿಥಿಗಳು : ಶಿವಪ್ರಸಾದ್ ಅಜಿಲರು, ಆಡಳ್ತೇದಾರರು ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ದೇವೇಂದ್ರ ಹೆಗ್ಡೆ ಕೊಕ್ರಾಡಿ, ಉದ್ಯಮಿಗಳು ಬೆಂಗಳೂರು, ಅಶ್ವಿನ್ ಪಿರೇರಾ ಮೂಡಬಿದ್ರೆ ಐಕ್ಯಾರ್ ಬಿಲ್ಡರ್, ರವಿ ಪ್ರಸಾದ್ ಶೆಟ್ಟಿ ಮೂಡಬಿದ್ರೆ ಜಿಲ್ಲಾ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಮಂಗಳೂರು, ಸಂದೀಪ್‌ ಕುಮಾರ್‌ ಅಳದಂಗಡಿ ಮೆಸ್ಕಾಂ ಇಂಜಿನೀಯರ್, ಸರಸ್ವತಿ ಗ್ರಾ.ಪಂ.ಅಧ್ಯಕ್ಷರು ಅಳದಂಗಡಿ, ಪೂರ್ಣಿಮ ಜೆ. ಅಳದಂಗಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯವರು, ಪ್ರವೀಣ್ ಭಟ್, ಮಾಲಕರು ಪಾವನಿ ಕಾಂಪ್ಲೆಕ್ಸ್ ಅಳದಂಗಡಿ. ಸನ್ಮಾನ : ನಿರಂಜನ್ ಜೈನ್, ಜೈನ ಸಮಾಜದ ಧಾರ್ಮಿಕ ಚಿಂತಕರು ಕಾರ್ಯಕ್ರಮ ನಿರೂಪಣೆ : ವಿಜಯ ಕುಮಾರ್ ಜೈನ್ ಆಮಂತ್ರಣ ವಿಶೇಷ ಕಾರ್ಯಕ್ರಮ ವಿದ್ಯುತ್‌ ಇಲಾಖೆಯಲ್ಲಿ ಲೈನ್ ಮ್ಯಾನ್ ವೃತ್ತಿಯಲ್ಲಿ ತೊಡಗಿಕೊಂಡು ಜೀವಪಣಕ್ಕಿಟ್ಟು ಕೆಲಸ ಮಾಡುವ ಎಲ್ಲಾ ಲೈನ್ ಮ್ಯಾನ್‌ಗಳಿಗೆ ಗೌರವ ಸಲ್ಲಿಕೆಯಾಗಲಿದೆ.

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Article Image

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

ಉಜಿರೆ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು. ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ. ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಪುತ್ತಿಗೆ, ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ

Article Image

ಶ್ರೀ ಕ್ಷೇತ್ರ ಪುತ್ತಿಗೆ, ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ

ಮೂಡುಬಿದಿರೆ: ಶ್ರೀ ಕ್ಷೇತ್ರ ಪುತ್ತಿಗೆ, ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಳೆ (ಫೆ.23) ಚೌಟರ ಸೀಮೆಯ ಪ್ರಧಾನ ಶ್ರೀ ಪಂಚಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ, ಆರಾಧಿಸಿಕೊಂಡು ಬರುತ್ತಿರುವ ಶ್ರೀ ನಾಗದೇವರು ಹಾಗೂ ಧರ್ಮದೈವಗಳ ಪುನಃ ಪ್ರತಿಷ್ಠೆಯು ಎಡಪದವು ತಂತ್ರಿವರೇಣ್ಯರುಗಳು ಮತ್ತು ಕುಂಗೂರು ಚಾವಡಿ ಮನೆ ಶಿವಪ್ರಸಾದ್ ಆಚಾರ್ ರವರ ನೇತೃತ್ವದಲ್ಲಿ ಹಾಗೂ ಅರ್ಚಕ - ಋತ್ವಿಜರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Article Image

ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪ ಮೂಡ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭವು ಫೆ.12 ರಂದು ನಡೆಯಿತು. ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಇವರು ಈ ಸ್ಟಾಂಪಿಂಗ್ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕರಾದ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕೀಯ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತದಾರರ ಅಧ್ಯಕ್ಷ ರಮೇಶ್ ಪೂಜಾರಿ, ವೆಂಕಟರಮಣ ಕೋ ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಾಡಿ, ಜಯಶಂಕರ ಕಾನ್ಸ್‌ಲೆ, ಅರುಣ್ ಕುಮಾರ್ ಎಮ್, ಆಶಿಶ್ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎಜಿಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕ ಆರುಣ್‌ ಕುಮಾರ್ ಸ್ವಾಗತಿಸಿದರು, ಶಾಖಾ ವ್ಯವಸ್ಥಾಪಕ ವಿಜಯ ಕೆ ವಂದಿಸಿದರು.

ಮುಳಿಯ ಜುವೆಲ್ಸ್ ನ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ

Article Image

ಮುಳಿಯ ಜುವೆಲ್ಸ್ ನ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ದತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್ ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15 ರಿಂದ ಫೆ.28ರವರೆಗೆ ನಡೆಯಲಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಠ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್ , ನವರತ್ನ ಕಿವಿಯೋಲೆಗಳು, ನವರತ್ನ ಬಳೆಗಳು ಲಭ್ಯವಿದೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Article Image

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೇಳನೆ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.21 ಮತ್ತು 22ರಂದು ಮಂಗಳೂರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳಸಭಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರವನ್ನು ಬುಧವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಯುವರಾಜ ಪೂವಣಿ, ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಮತ್ತು ಸಹಶಿಕ್ಷಕಿ ಸುಮಲತಾ ಉಪಸ್ಥಿತರಿದ್ದರು

ರೋಟರಿ ಕ್ಲಬ್ ಬೆಳ್ತಂಗಡಿ : ಭಾರತೀಯ ಸೇನಾದಿನ ಆಚರಣೆ

Article Image

ರೋಟರಿ ಕ್ಲಬ್ ಬೆಳ್ತಂಗಡಿ : ಭಾರತೀಯ ಸೇನಾದಿನ ಆಚರಣೆ

ಬೆಳ್ತಂಗಡಿ : ಗಡಿ ಭಾಗ ಮತ್ತು ಯುದ್ಧ ಭೂಮಿಯ ಪ್ರತಿಯೊಂದು ಕ್ಷಣವು ರೋಚಕ. ಗುಡ್ಡ ಭಾಗದ ಹವಮಾನದ ಪರಿಸ್ಥಿತಿಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದರ ಜೊತೆಗೆ ಪರಕೀಯರ ಸವಾಲುಗಳಿಗೂ ಸದಾ ಸಿದ್ದರಾಗಿರಬೇಕು. ಜೊತೆಯಲ್ಲಿ ಇದ್ದವರು ಕ್ಷಣಾರ್ಧದಲ್ಲಿ ಗುಂಡಿಗೆ ಬಲಿಯಾಗುವ ಸನ್ನಿವೇಶದ ವೇದನೆಗಳು ಹೇಳತೀರದು. ಪ್ರತಿ ಮನೆಯಲ್ಲಿನ ಒಂದು ಕ್ಷಣದ ಪ್ರಾರ್ಥನೆಯೇ ನಮ್ಮ ಆತ್ಮವಿಶ್ವಾಸ ಮತ್ತು ಆರೋಗ್ಯದ ಶಕ್ತಿ ಎಂದು ನಿವೃತ್ತ ಸೇನಾನಿ ವಿಕ್ಟರ್ ಕ್ರಸ್ತಾ ಅಭಿಪ್ರಾಯಪಟ್ಟರು. ಇವರು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾ ಭವನದಲ್ಲಿ ನಡೆದ 77ನೇ ಭಾರತೀಯ ಸೇನಾದಿನದ ಆಚರಣೆಯಲ್ಲಿ ಮಾತನಾಡಿದರು. 1980 ರ ದಶಕದ ಯುದ್ಧ ಭೂಮಿಗಳು ಮತ್ತು ಗಡಿ ಭಾಗಗಳು ಈಗ ಸುಧಾರಿಸಿವೆ. ಸರ್ಕಾರಗಳು ಸೈನ್ಯದ ಅಭಿವೃದ್ಧಿಗೆ ಮನ್ನಣೆ ನೀಡಿದೆ. ಯುವ ತಲೆಮಾರಿಗೆ ಭಾರತ ಎದುರಿಸಿದ ಯುದ್ಧ ಸನ್ನಿವೇಶಗಳ ಇತಿಹಾಸವನ್ನು ಪರಿಚಯಿಸಬೇಕು. ಸಾಧ್ಯವಾದರೆ ಮುಂದೊಂದು ದಿನ ಇಸ್ರೇಲ್ ಮಾದರಿಯ ಸೈನ್ಯ ವ್ಯವಸ್ಥೆಯನ್ನು ಭಾರತದಲ್ಲೂ ಅಳವಡಿಸುವ ಮೂಲಕ ಯುವ ಜನತೆಯನ್ನು ಸೈನ್ಯದೆಡೆಗೆ ಪ್ರೇರೇಪಿಸಬೇಕು ಎಂದರು. ಈ ಸಂದರ್ಭದಲ್ಲಿ ಅಲಹಬಾದ್, ರಾಜಸ್ಥಾನ್, ಅರುಣಾಚಲ, ಜಮ್ಮು ಇತ್ಯಾದಿ ಗಡಿಭಾಗಗಳಲ್ಲಿ ತಾವು ಅನುಭವಿಸಿದ ರೋಚಕ ಕ್ಷಣಗಳನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಮಾತನಾಡಿ, ಸೈನಿಕರು ಕೊರೆಯುವ ಚಳಿ, ಸುಡುವ ಬಿಸಿಲಿನ ನಡುವೆಯೂ ಪ್ರಾಣ ಪಣಕ್ಕಿಟ್ಟು ದೇಶ ಸೇವೆ ಸಲ್ಲಿಸುವ ಬದುಕು ನಮಗೆಲ್ಲರಿಗು ಪ್ರೇರಣೆಯಾಗಬೇಕು. ನಮ್ಮ ಪ್ರತಿದಿನದ ಪ್ರಾರ್ಥನೆಯಲ್ಲಿ ಹಗಲಿರುಳು ದೇಶ ಕಾಯುವ ವೀರ ಯೋಧರಿಗಾಗಿ ಒಂದು ನಿಮಿಷವಾದರೂ ಮೀಸಲಿಡಬೇಕು ಎಂದರು. ಇದೇ ಸಂದರ್ಭದಲ್ಲಿ 1981 ರಿಂದ 1998ರ ವರೆಗೆ ದೇಶದ ಹಲವು ಗಡಿಭಾಗಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ವಿಕ್ಟರ್ ಕ್ರಸ್ತಾ ರವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ.ಪೂರನ್ ವರ್ಮ, ಕಾರ್ಯದರ್ಶಿ ರೋ.ಸಂದೇಶ್ ಕುಮಾರ್ ರಾವ್,ರೋ.ಅನಂತ ಭಟ್, ರೋ. ವಿದ್ಯಾ ಕುಮಾರ್ ಕಾಂಚೋಡು, ರೋ.ಅರುಣ್, ರೋ‌.ಅರವಿಂದ ಕಾರಂತ್, ರೋ. ಪ್ರವೀಣ್ ಗೋರೆ ಮತ್ತು ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ರೋ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್ ನಿರೂಪಿಸಿ,ವಂದಿಸಿದರು. ಬಾಲ್ಯದಿಂದಲೂ ಭಾರತಮಾತೆಯ ಸೇವೆಸಲ್ಲಿಸಬೇಕೆಂಬ ಕನಸ್ಸು ಕಂಡು, ಭಾರತೀಯ ಸೈನ್ಯ ಸೇರಿ ನಿವೃತ್ತನಾದೆ. ಸೈನಿಕರೂ ತಮ್ಮ ಸರ್ವಸ್ವವನ್ನೆಲ್ಲ ತೊರೆದು ಗಡಿಭಾಗಗಳಲ್ಲಿ ಶ್ರಮಿಸುತ್ತಾರೆ.ಕೆಲವೊಮ್ಮೆ ಅನೀರಿಕ್ಷಿತರಾಗಿ ಗುಡ್ಡ ಕುಸಿತ , ಪರಕೀಯರ ದಾಳಿಗಳಿಗೆ ಬಲಿಯಾಗಿ ವೀರ ಯೋಧರಾಗುತ್ತಾರೆ. ಇಂತಹ ಸಂದರ್ಭಗಳಲ್ಲಿ ಸಮಾಜ ಅವರ ಕುಟುಂಬದ ಜವಾಬ್ದಾರಿಯನ್ನು ಹೊರಬೇಕು. ಸೈನ್ಯ ದಿನ, ಕಾರ್ಗಿಲ್ ವಿಜಯ ದಿನದಂತ ಸಂದರ್ಭಗಳಲ್ಲಿ ಯೋಧರನ್ನು ಸ್ಮರಿಸುವುದರ ಜೊತೆಗೆ, ಸರ್ಕಾರ ಮರಣ ಹೊಂದಿದ ಸೈನಿಕರ ಕುಟುಂಬಗಳು ಯಾವ ಸ್ಥಿತಿಯಲ್ಲಿವೆ ಎಂಬುದನ್ನು ಗಮನಿಸಬೇಕು. - ವಿಕ್ಟರ್ ಕ್ರಸ್ತಾ, ನಿವೃತ್ತ ಸೇನಾನಿ, ಭೂಸೇನೆ

ಕದ್ರಿ ವಾರ್ಷಿಕ ಜಾತ್ರ ಮಹೋತ್ಸವ-2025: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ

Article Image

ಕದ್ರಿ ವಾರ್ಷಿಕ ಜಾತ್ರ ಮಹೋತ್ಸವ-2025: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಕದ್ರಿ ಆಶ್ರಯದಲ್ಲಿ ಸೋಮವಾರ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದದ ಕಾರ್ಯಾಧ್ಯಕ್ಷರಾದ ಸುಧಾಕರ ರಾವ್ ಪೇಜಾವರ, ಭಾರತೀಯ ಜೈನ್ ಮಿಲನ್ ಮಂಗಳೂರಿನ ಅಧ್ಯಕ್ಷರಾದ ರತ್ನಾಕರ ಜೈನ್, ಕಲ್ಕೂರ ಪ್ರತಿಷ್ಠಾನ ದ ಅಧ್ಯಕ್ಷರಾದ ಪ್ರದೀಪ ಕುಮಾರ ಕಲ್ಕೂರ, ಮಲ್ಲಿಕಾ ಕಲಾವೃಂದ ದ ಕಾರ್ಯದರ್ಶಿ ವಸುದೇವ ರಾವ್ ಕುಡುಪು ಹಾಗೂ ರಿಮಾ ಜಗನ್ನಾಥ್ ಮಾರ್ನಮಿಕಟ್ಟೆ, ಪ್ರಾರ್ಥನಾ ರೋಹಿತ್ ಹೊಸಬೆಟ್ಟು, ಅಶಿಶ್ ಅಂಚನ್ ಮಂಗಳೂರು , ಸುದೇಶ್ ಜೈನ್ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು. ಶ್ರೇಯಾ ದಾಸ್ ನಿರೂಪಿಸಿದರು. ಶ್ರೇಯಾ ಭಟ್ ,ಅಪೇಕ್ಷಾ ಎ ಸಹಕರಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ

Article Image

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ

ಉಜಿರೆ: ಧರ್ಮಸ್ಥಳದ ಆಶ್ರಯದಲ್ಲಿ ನಡೆಯುತ್ತಿರುವ ಅನೇಕ ಪವಿತ್ರ ಸೇವಾಕಾರ್ಯಗಳಲ್ಲಿ ಮದ್ಯವ್ಯಸನಿಗಳನ್ನು ಮನಪರಿವರ್ತನೆ ಮೂಲಕ ವ್ಯಸನಮುಕ್ತರನ್ನಾಗಿ ಮಾಡಿ ಆರೋಗ್ಯಪೂರ್ಣ ಸಮಾಜ ರೂಪಿಸುವ ಕಾಯಕ ಅತ್ಯಂತ ಶ್ರೇಷ್ಠ, ಪವಿತ್ರ ಹಾಗೂ ಉತ್ತಮ ಸೇವೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಧರ್ಮಸ್ಥಳದ ಮೇಲಿನ ಭಕ್ತಿ, ಪ್ರೀತಿ, ವಿಶ್ವಾಸ ಮತ್ತು ಗೌರವದಿಂದ ಜನಜಾಗೃತಿವೇದಿಕೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತನು, ಮನ, ಧನದ ಮೂಲದ ತ್ರಿಕರಣಪೂರ್ವಕವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದರಿಂದ ಎಲ್ಲರಿಗೂ ಸಮಾಜದಲ್ಲಿ ವಿಶೇಷ ಗೌರವ, ಮಾನ್ಯತೆ ದೊರಕುತ್ತಿದೆ. ವೇದಿಕೆಯ ಕೀರ್ತಿಯೂ ಹೆಚ್ಚಾಗಿದೆ. ವ್ಯಸನಮುಕ್ತರು ಪವಿತ್ರಾತ್ಮರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿದಾಗ ಅವರಿಗೆ ವಿಶೇಷ ಅನುಗ್ರಹವಾಗುತ್ತದೆ. ಮುಂದೆ ಅವರು ನವಜೀವನ ಸಮಿತಿ ಸದಸ್ಯರಾಗಿ ದೃಢಸಂಕಲ್ಪದಿಂದ ಸುಖ- ಶಾಂತಿ ನೆಮ್ಮದಿಯ ಕೌಟುಂಬಿಕ ಜೀವನ ನಡೆಸುವುದು ತಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿ ನೀಡುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶವನ್ನು ಉದ್ಘಾಟಿಸಿದ ಹೇಮಾವತಿ ವೀ. ಹೆಗ್ಗಡೆಯವರು ದೇಶದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ಯುವಜನತೆ ತಮ್ಮ ಬುದ್ಧಿ ಮತ್ತು ವಿವೇಕವನ್ನು ಕಳೆದುಕೊಂಡು ಮದ್ಯ ವ್ಯಸನಕ್ಕೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು. ಇಡೀ ರಾಜ್ಯದಲ್ಲಿ ವಟವೃಕ್ಷದಂತೆ ಹಲವು ಶಾಖೆಗಳೊಂದಿಗೆ ಬೆಳೆದಿರುವ ಜನಜಾಗೃತಿ ವೇದಿಕೆಯ ನೇತೃತ್ವದಲ್ಲಿ ಕಾರ್ಯಕರ್ತರ ಜನಹಿತ ಹಾಗೂ ಜನಪರ ಸೇವೆಯಿಂದಾಗಿ ಅನೇಕ ಮಂದಿ ಇಂದು ವ್ಯಸನಮುಕ್ತರಾಗಿ ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಎಲ್ಲರ ಮನೆಗಳಲ್ಲಿ ಹಾಗೂ ಮನಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಮದಿರೆಯ ಕಬಂಧಬಾಹುಗಳಲ್ಲಿ ಬಂಧಿತರಾದವರು ಯಾವುದೇ ಸಂಶಯ, ಸಮಸ್ಯೆಗಳಿದ್ದರೂ ಜನಜಾಗೃತಿ ವೇದಿಕೆಯ ಕಾರ್ಯಕರ್ತರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ವಿಶೇಷ ಸೇವೆ, ಸಾಧನೆ ಮಾಡಿ ಪ್ರಶಸ್ತಿ, ಪುರಸ್ಕಾರ ಪಡೆದ ಕಾರ್ಯಕರ್ತರನ್ನು ಅಭಿನಂದಿಸಲಾಯಿತು.. ಸತೀಶ್ ಬಳೆಗಾರ ಬರೆದ “ ಕತ್ತಲ ಕುಡುಕರ ಬೆಳಕಿನ ಮಕ್ಕಳು” ಎಂಬ ಕೃತಿಯನ್ನು ಶ್ರದ್ಧಾಅಮಿತ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಧ್ಯಪಾನ ಆಧುನಿಕ ಜೀವನಶೈಲಿಯಾಗಿದೆ ಎಂಬ ಭ್ರಮೆಯ ಆತಂಕವಿದೆ. ಮದ್ಯವ್ಯಸನಿಗಳ ಮಕ್ಕಳ ಬಾಳಿನ ಗೋಳು ವರ್ಣಿಸಲಸದಳವಾಗಿದ್ದು, ಮಕ್ಕಳು ಪೋಷಕರ ಪ್ರೀತಿ, ಭದ್ರತೆ, ರಕ್ಷಣೆಯಿಂದ, ವಂಚಿತರಾಗುತ್ತಾರೆ. ಹಾಗಾಗಿ ಶಾಲಾ-ಕಾಲೇಜುಗಳಲ್ಲಿ “ಸ್ವಾಸ್ಥಸಂಕಲ್ಪ” ಕಾರ್ಯಕ್ರಮದ ಮೂಲಕ ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದರು. ಕೊಪ್ಪಳ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ನಟರಾಜ ಬಾದಾಮಿ ಅವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ನ ನೂತನ ರಾಜ್ಯ ಸಂಘಟನೆಯ ನೂತನ ರಾಜ್ಯ ಸಂಘಟನಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಸಂಘಟನಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರಾಜಣ್ಣ ಕೊರವಿ ಅವರನ್ನು ಗೌರವಿಸಲಾಯಿತು. ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್‌ಕುಮಾರ್ ಆಶಯ ನುಡಿಗಳೊಂದಿಗೆ ಯೋಜನೆಯ ಸೇವೆ, ಸಾಧನೆಯ ಪಕ್ಷಿನೋಟ ವಿವರಿಸಿದರು. ಜನಜಾಗೃತಿ ವೇದಿಕೆ ಟ್ರಸ್ಟ್ನ ಕಾರ್ಯದರ್ಶಿ ವಿವೇಕ್ ವಿ. ಪಾಯ್ಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರಾಮಸ್ವಾಮಿ ಧನ್ಯವಾದವಿತ್ತರು. ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಗಣೇಶ ಆಚಾರ್ಯ ಮತ್ತು ನಾಗರಾಜ ಕಾರ್ಯಕ್ರಮ ನಿರ್ವಹಿಸಿದರು.

ಇಂದಿನಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಳ ಬ್ರಹ್ಮಕಲಶೋತ್ಸವ

Article Image

ಇಂದಿನಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಳ ಬ್ರಹ್ಮಕಲಶೋತ್ಸವ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವ ಜ. 8ರಿಂದ 20ರವರೆಗೆ ಸೀಮೆಯ ತಂತ್ರಿಗಳಾದ ನಡ್ಡತಾಡಿ ಬ್ರಹ್ಮಶ್ರೀ ವೇ.ಮೂ. ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ನಡೆಯಲಿದೆ ಎಂದು ಆನುವಂಶಿಕ ಆಡಳಿತ ಮೋಕ್ತಸರ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ತಿಳಿಸಿದ್ದಾರೆ. ಅಜಿಲ ವಂಶಸ್ತರು 12 ಮಾಗಣೆಗೆ 32 ಗ್ರಾಮಗಳನ್ನು ಒಳಗೊಂಡು ಅಳದಂಗಡಿ ಶ್ರೀ ಸೋಮನಾಥೇಶ್ವರಿ, ವೇಣೂರು ಶ್ರೀ ಮಹಾಲಿಂಗೇಶ್ವರ, ಕೇಳ ಪಂಚಲಿಂಗೇಶ್ವರ, ಬರಾಯ ಗೋಪಾಲಕೃಷ್ಣ ದೇವಾಲಯಗಳನ್ನು ಸ್ಥಾಪನೆ ಮಾಡಿದ್ದು ಅಳದಂಗಡಿಯ ಈ ದೇವಾಲಯವು ಅಜಿಲ ಸೀಮೆಗೆ ಸಂಬಂಧಪಟ್ಟ ದೇವಾಲಯವಾಗಿದೆ. ಈ ದೇವಾಲಯದಲ್ಲಿ 2007ರಲ್ಲಿ ಸೀಮೆಯ ಭಕ್ತರ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಗೌರವಾಧ್ಯಕ್ಷತೆಯಲ್ಲಿ ಬ್ರಹ್ಮಕಲಶೋತ್ಸವವನ್ನು ನೆರವೇರಿಸಲಾಗಿತ್ತು. 12 ವರ್ಷಕ್ಕೆ ಬ್ರಹ್ಮಕಲಶೋತ್ಸವ ಮಾಡಬೇಕಾಗಿದ್ದು ಸೀಮೆಯಲ್ಲಿ ಹಲವು ದೇವಸ್ಥಾನಗಳಲ್ಲಿ ಬ್ರಹ್ಮಕಲಶೋತ್ಸವ ಇದ್ದುದರಿಂದ ಪ್ರಸಕ್ತ ದೇವಳದಲ್ಲಿ ನಡೆದ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ 18 ವರ್ಷಗಳ ಬಳಿಕ ಮತ್ತೆ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಅದರಂತೆ ಅನೇಕ ಜೀರ್ಣೋದ್ದಾರ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಚಿಂತಿಸಲಾಗಿದೆ. ದೇವಳದ ಪ್ರಾಂಗಣ, ಒಳಾಂಗಣದ ನವೀಕರಣ, ಸುತ್ತ ಪ್ರಾಂಗಣದಲ್ಲಿ ಇಂಟರ್‌ಲಾಕ್ ಅಳವಡಿಕೆ, ಪಾಕಶಾಲೆ ನಿರ್ಮಾಣ ಹಾಗೂ ಋತ್ವಿಜರ ಭೋಜನ ಶಾಲೆ, ರಜತ ಪಲ್ಲಕ್ಕಿ ಸಮರ್ಪಣೆ, ಬ್ರಹ್ಮಕಲಶೋತ್ಸವ ಸೇರಿದಂತೆ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಸೀಮೆಯ ಭಕ್ತರ ಸಹಕಾರದಿಂದ ಕಾರ್ಯಕ್ರಮ ನಡೆಯಲಿದೆ. ಬ್ರಹ್ಮಕಲಶೋತ್ಸವ ಮತ್ತು ಉಪಸಮಿತಿ ರಚಿಸಲಾಗಿದೆ. ಈ ಬಾರಿ ಬ್ರಹ್ಮಕಲಶೋತ್ಸವದಲ್ಲಿ ದೇವತಾ ಕಾರ್ಯಕ್ರಮ ಮತ್ತು ಅನ್ನಸಂತರ್ಪಣೆ ಕಾರ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಜ. 2ರಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಚಪ್ಪರ ಮುಹೂರ್ತ ನೆರವೇರಿಸಿದ್ದಾರೆ. ಜ. 8ರಂದು ಅಳದಂಗಡಿ ಬಸ್ ನಿಲ್ದಾಣದಿಂದ ಹೊರೆಕಾಣಿಕೆ ಮೆರವಣಿಗೆ ತಾಲೂಕಿನ ಕುಣಿತ ಭಜನಾ ತಂಡಗಳ ಭಜನೆಯೊಂದಿಗೆ ನಡೆಯಲಿದೆ. ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉಗ್ರಾಣ ಮುಹೂರ್ತ ನೆರವೇರಿಸಲಿದ್ದಾರೆ. ಜ. 10ರಂದು ನಡೆಯುವ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಜ. 12ರಂದು ಬ್ರಹ್ಮ ಕುಂಭಾಭಿಷೇಕ ಜರುಗಲಿದೆ. ಜ. 14ರಿಂದ 20ರವರೆಗೆ ವಾರ್ಷಿಕ ಜಾತ್ರೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಮುಳಿಯ ಜ್ಯುವೆಲ್ಸ್ ಸಂಸ್ಥೆಗೆ 'ಸೇವಾಶ್ರೀ ಪ್ರಶಸ್ತಿ ಪ್ರದಾನ

Article Image

ಮುಳಿಯ ಜ್ಯುವೆಲ್ಸ್ ಸಂಸ್ಥೆಗೆ 'ಸೇವಾಶ್ರೀ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮಾಜಸೇವೆ ಮಾಡುತ್ತಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆಗೆ ಸೇವಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಮತ್ತು ಸಿಬ್ಬಂದಿಗಳು ಪ್ರಶಸ್ತಿ ಸ್ವೀಕರಿಸಿದರು. ರಾಜ್ಯದ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆಗಳಲ್ಲೊಂದಾದ ಮುಳಿಯ ಜುವೆಲ್ಸ್ ಪರಿಶುದ್ಧತೆಗೆ ಹೆಸರುವಾಸಿ. ಚಿನ್ನಾಭರಣಗಳ ಉದ್ಯಮದೊಂದಿಗೆ ಸಮಾಜಸೇವೆ ನೀಡುತ್ತಿರುವ ಸಂಸ್ಥೆಯಾಗಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಕಲೆ ಹೀಗೆ ಹತ್ತು ಹಲವು ಸ್ತರಗಳಲ್ಲಿ ಸಂಸ್ಥೆಯು ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಜೆಸಿಐ ವಲಯಾಧ್ಯಕ್ಷ ಗಿರೀಶ್ ಎಸ್.ಪಿ, ಉದ್ಯಮಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಜೆಎಸಿ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಲಯ ಉಪಾಧ್ಯಕ್ಷ ಶಂಕರ್ ರಾವ್, ಪೂರ್ವಾಧ್ಯಕ್ಷರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಚಿದಾನಂದ ಇಡ್ಯ, ವಸಂತ ಶೆಟ್ಟಿ ಶ್ರದ್ದಾ, ರವೀಂದ್ರ ಶೆಟ್ಟಿ ಸುರಭಿ, ಸುಭಾಶ್ಚಂದ್ರ ಎಂಪಿ, ಅಶೋಕ್ ಕುಮಾರ್ ಬಿಪಿ, ಜೆಸಿ ಸಪ್ತಾಹ ಸಂಯೋಜಕಿ ಹೇಮಾವತಿ, ಲೇಡಿ ಜೆಸಿ ಸಂಯೋಜಕಿ ಶ್ರುತಿ ರಂಜಿತ್, ರಕ್ಷಿತ್ ಅಂಡಿಂಜೆ, ಶೈಲೇಶ್, ಪೂರ್ವಾಧ್ಯಕ್ಷರು, ಜೆಸಿ ಪದಾಧಿಕಾರಿಗಳು, ಉಪಸ್ಥಿತರಿದ್ದರು.

First Previous

Showing 4 of 8 pages

Next Last