ವಿದ್ಯಾಗಿರಿ: ವಿಶ್ವ ಕಾವ್ಯ ದಿನ


Logo

Published Date: 20-Mar-2025 Link-Copied

ಆಳ್ವಾಸ್ ಸ್ವಾಯತ್ತ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರದಂದು ಇಂಗ್ಲಿಷ್ ವಿಭಾಗದ ಗ್ಲಿಸನ್ ಸಂಘದ ವತಿಯಿಂದ ವಿಶ್ವ ಕಾವ್ಯ ದಿನವನ್ನು ಆಚರಿಸಲಾಯಿತು. ಕಾರ‍್ಯಕ್ರಮದ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದ ಉಡುಪಿಯ ಶ್ರೀ ಅದಮಾರು ಮಠದ ಶಿಕ್ಷಣ ಸಮೂಹಗಳ ಉಪ ಆಡಳಿತಾಧಿಕಾರಿ ಪುಂಡರಿಕಾಕ್ಷ ಕೊಡಂಚ, ಕಾವ್ಯವು ನಮ್ಮ ಸಂಸ್ಕೃತಿಯ ಮಹತ್ವಪೂರ್ಣ ಅಂಗ. ಆ ಮೂಲಕ ನಮ್ಮ ಭಾವನೆ ಹಾಗೂ ಅನುಭವಗಳನ್ನು ವ್ಯಕ್ತಪಡಿಸಲು ಸಹಕಾರಿಯಾಗಿದೆ. ಕಾವ್ಯ ದಿನವನ್ನು ಆಚರಿಸುವುದರ ಮೂಲಕ ಮಹಾನ್ ಕವಿಗಳ ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಹೊಸ ಬರಹಗಾರರಿಗೆ ಪ್ರೇರಣೆಯಾಗಲು ಸಹಾಯ ಮಾಡುತ್ತದೆ ಎಂದರು. ತಾರ್ಕಿಕವಾಗಿ ಯೋಚಿಸಿ ಮತ್ತು ಸಾಮಾನ್ಯ ಜ್ಞಾನವನ್ನು ಬಳಸಿದರೆ ಯಾರೂ ಬದುಕಿನಲ್ಲಿ ಪ್ರಮಾದವನ್ನೆಸಗಲಾರರು. ತಾರ್ಕಿಕ ಯೋಚನೆಯುಳ್ಳ ವ್ಯಕ್ತಿಗೆ ಅವಕಾಶಗಳು ವಿಫುಲವಾಗಿರುತ್ತವೆ ಎಂದು ಸಲಹೆ ನೀಡಿದರು. ಸುಂದರವಾದ ಭೂಮಿಯನ್ನು ಉಳಿಸಬೇಕು. ಅದು ನಮ್ಮ ಆಸೆಗಳನ್ನು ಪೂರೈಸ ಬಲ್ಲದೇ ಹೊರತು, ನಮ್ಮ ದುರಾಸೆಯನ್ನಲ್ಲ ಎಂದರು. ನಂತರ ಗ್ಲಿಸನ್ ಸಂಘದ ವತಿಯಿಂದ ಆಯೋಜಿಸಲಾದ ಕಾವ್ಯ ವಾಚನ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಬಿಎಸ್ಸಿಯ ಮೇಘಾ ಡಿವಿ ಪ್ರಥಮ ಸ್ಥಾನ ಪಡೆದರೆ, ಎಫ್‌ಎನ್ಡಿಯ ಪ್ರೇರಣಾ ಜೈನ್ ದ್ವಿತೀಯ, ಬಿಎಯ ಸಮೀಕ್ಷಾ ರಾವ್ ತೃತೀಯ ಸ್ಥಾನ ಪಡೆದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚಾರ‍್ಯ ಡಾ. ಕುರಿಯನ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗದ ಮುಖ್ಯಸ್ಥೆ ಸಂಧ್ಯಾ ಕೆ.ಎಸ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಮಚೇಂದ್ರ ಬೆಲ್ಕಿ, ಗ್ಲಿಸನ್ವೇ ದಿಕೆಯ ಸಂಯೋಜಕರಾದ ಹರ್ಷಿಣಿ ಪಿಂಟೋ ಹಾಗೂ ಸುಮಂತ್ ಇದ್ದರು. ಶ್ರಾವ್ಯ ಶೆಟ್ಟಿ ಸ್ವಾಗತಿಸಿ, ದಿಶಾ ಕೋಟ್ಯಾನ್ ವಂದಿಸಿ, ಸಮೀಕ್ಷಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img