ಅಡಕೆ ಕೊಳೆರೋಗ ನಿರ್ವಹಣೆಗೆ ರೈತರಿಗೆ ಸಹಾಯಧನ
Published Date: 22-Jul-2025 Link-Copied
ಮಂಗಳೂರು: ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹಲವೆಡೆ ಅಡಕೆ ಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟ ಗಾರಿಕೆ ಇಲಾಖೆಯ ಗಮನಕ್ಕೆ ಬಂದಿದೆ. ಅಡಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶ, ಕೀಟ, ರೋಗ ನಿರ್ವಹಣೆ ಸಂಬಂಧ ಗೊಬ್ಬರ, ಸೂಕ್ಷ್ಮ ಪೋಷ ಕಾಂಶ, ಕೀಟನಾಶಕ, ಶಿಲೀಂಧ್ರನಾಶಕಗಳನ್ನು ಖರೀದಿ ಸುವ ರೈತರಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ಸಹಾಯಧನ ಸೌಲಭ್ಯ ಲಭ್ಯವಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ದ.ಕ. ತೋಟಗಾರಿಕೆ ಉಪ ನಿರ್ದೇಶಕ ಮಂಜುನಾಥ ಡಿ. ತಿಳಿಸಿದ್ದಾರೆ.