ಮಕ್ಕಳ ಶಸ್ತ್ರಚಿಕಿತ್ಸಕರ ಕರ್ನಾಟಕ ರಾಜ್ಯ ಮಟ್ಟದ ಸಮ್ಮೇಳನ
Published Date: 30-Jul-2025 Link-Copied
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯು ಭಾರತೀಯ ಮಕ್ಕಳ ಶಸ್ತ್ರಚಿಕಿತ್ಸೆ ಸಂಘ, ಕರ್ನಾಟಕ ರಾಜ್ಯ ಅಧ್ಯಾಯದ ಆಶ್ರಯದಲ್ಲಿ ಮಕ್ಕಳ ಶಸ್ತ್ರಚಿಕಿತ್ಸಕರ ಕರ್ನಾಟಕ ರಾಜ್ಯ ಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಈ ಶೈಕ್ಷಣಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಮಕ್ಕಳ ಶಸ್ತ್ರಚಿಕಿತ್ಸಕರು ಭಾಗವಹಿಸಲಿದ್ದಾರೆ. ಸಮ್ಮೇಳನವು ಆಗಸ್ಟ್ 8 ರಿಂದ 10, 2025 ರವರೆಗೆ ನಡೆಯಲಿದೆ. ಆಗಸ್ಟ್ 8 ರಂದು, ಮಕ್ಕಳಲ್ಲಿ ಮೂತ್ರಪಿಂಡದ ಕಲ್ಲುಗಳಿಗೆ (Kidney Stone) ಸಂಬಂಧಿಸಿದ ಕಾರ್ಯಾಗಾರವನ್ನು ನಡೆಸಲಾಗುವುದು. ಆಗಸ್ಟ್ 9 ಮತ್ತು 10, 2025 ರಂದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೈದ್ಯರಿಂದ ಅನೇಕ ಭಾಷಣಗಳು ನಡೆಯಲಿವೆ. ಈ ಸಮ್ಮೇಳನವು ಮಕ್ಕಳ ಶಸ್ತ್ರಚಿಕಿತ್ಸಕರಿಗೆ ತನ್ನ ರೋಗಿಗಳಿಗೆ ಚಿಕಿತ್ಸೆ ನೀಡಲು, ಹೆಚ್ಚು ಮಾಹಿತಿ ಪಡೆಯಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮದ ಅಧ್ಯಕ್ಷರು, ಡಾ| ಅನಿಲ್ ಹಲಗೇರಿ ಬಿ, ಡಾ| ವಿಜಯ್ ಪೂಜಾರ್ ಸಿ ಮತ್ತು ಡಾ| ರಾಜಶಂಕರ್ ಸಂಕಲ್. ಕಾರ್ಯದರ್ಶಿಗಳಾಗಿರುವ, ಡಾ| ಅಕ್ಷಯ್ ಕಲವಂತ್ ಬಿ, ಡಾ| ರವೀಂದ್ರ ಜಿ ಖಾಸ್ನಿಸ್ ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.