ಸತ್ತೂರು, ಧಾರವಾಡ: ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಬಾಯಿಯ ನೈರ್ಮಲ್ಯ ದಿನಾಚರಣೆ
Published Date: 06-Aug-2025 Link-Copied
ಎಸ್.ಡಿ.ಎಂ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವಸಡು ಶಾಸ್ತ್ರ ವಿಭಾಗದಲ್ಲಿ ರಾಷ್ಟ್ರೀಯ ಬಾಯಿಯ ನೈರ್ಮಲ್ಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಡಾ. ಲೇಖಾ ಮತ್ತು ಡಾ. ಆನಂದ್ ತಾವರಗೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಡಾ. ಸ್ವಾತಿ ಸೆಟ್ಟಿ,ಡಾ ಲೀನಾ ಹಾಗೂ ಇತರ ಶಿಕ್ಷಕ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತಿಂಗಳಾದ್ಯಂತ ಹಮ್ಮಿಕೊಂಡಿದ್ದ ಹಲವರು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಯಿತು . ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಪ್ರಭಾವಶೀಲವಾದ ಬಾಯಿಯ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ನಾಟಕ ವಿಶೇಷ ಗಮನ ಸೆಳೆಯಿತು. ಆರೋಗ್ಯ ಕಾರ್ಯ ಚಟುವಟಿಕೆಯ ಭಾಗವಾಗಿ ರೋಗಿಗಳಿಗೆ ಓರಲ್ ಹೈಜಿನ್ ಕಿಟ್ ಗಳನ್ನು ವಿತರಣೆ ಮಾಡಲಾಯಿತು.