ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನಲ್ಲಿ ಮಹೋತ್ಸವ ಸಮ್ಮೇಳನ


Logo

Published Date: 23-Aug-2025 Link-Copied

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗವು ಆಗಸ್ಟ್ 22 ರಿಂದ 24, 2025 ರವರೆಗೆ ಡಿ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಕರ್ನಾಟಕ ಅಂಗರಚನಾಶಾಸ್ತ್ರಜ್ಞರ ಘಟಕದ ಬೆಳ್ಳಿ ಮಹೋತ್ಸವ ಸಮ್ಮೇಳನವನ್ನು “ಅನುವಾದ ಅಂಗರಚನಾಶಾಸ್ತ್ರ: ಸಂಪ್ರದಾಯ ಮತ್ತು ತಂತ್ರಜ್ಞಾನದ ಸಿನ್ಸಿಟಿಯಮ್” ಎಂಬ ಧ್ಯೇಯೆಯೊಂದಿಗೆ ಆಯೋಜಿಸಲಾಗಿತ್ತು. ಕರ್ನಾಟಕದಾದ್ಯಂತ 300ಕ್ಕೂ ಹೆಚ್ಚು ಅಂಗರಚನಾಶಾಸ್ತ್ರಜ್ಞರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ಸುಮಾರು 200ಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಸಮ್ಮೇಳನದಲ್ಲಿ ಮಂಡಿಸಲಾಯಿತು. ಕರ್ನಾಟಕ ಅಂಗರಚನಾಶಾಸ್ತ್ರಜ್ಞರ ಘಟಕದ (ಏಅಂ) ಸ್ಥಾಪಕ ಅಧ್ಯಕ್ಷರಾದ ಡಾ. ಎಸ್ ಕಾಂತ ಮತ್ತು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮುಖ್ಯ ಅತಿಥಿಗಳಾಗಿ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಅಂಗರಚನಾಶಾಸ್ತ್ರಜ್ಞರ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಖಜಾಂಚಿಗಳಾದ ಡಾ. ಅಶ್ವಿನಿ ಸಿಎ, ಉಪಾಧ್ಯಕ್ಷರುಗಳಾದ ಡಾ. ಎನ್ ಎಂ ಸುರೇಶ್ ಮತ್ತು ಡಾ. ವಿದ್ಯಾ ಸಿಎಸ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ಪಿ. ಎಸ್. ಭೂಸರಡ್ಡಿ ಅವರು ಗೌರವ ಅತಿಥಿಗಳಾಗಿದ್ದರು. ಗಣ್ಯರು ದೀಪ ಬೆಳಗಿಸುವ ಮೂಲಕ ಸಮ್ಮೇಳನವನ್ನು ಉದ್ಘಾಟಿಸಿದರು. ಡಾ. ಕಾಂತ ಅವರು ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಅನ್ಯಾಟಮಿಸ್ಟ್ಸ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿಗಳಾದ ಡಾ. ಜಥಾನಿ, ಖ್ಯಾತ ಸ್ವರೂಪ ಶಸ್ತ್ರಚಿಕಿತ್ಸಕರಾದ ಡಾ. ಎಸ್. ಎ. ಸುಬ್ರಮಣಿ ಮತ್ತು ಇತರರ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಕಾಂತ ಎಸ್. ಮತ್ತು ಡಾ. ನಿರಂಜನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಂಘಟನಾ ಕಾರ್ಯದರ್ಶಿಗಳಾದ ಡಾ. ವೀಣಾ ಕುಲಕರ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ರೋಶನಿ ಸದಾಶಿವ ಮತ್ತು ಡಾ. ವಿನಯ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಜಂಟಿ ಸಂಘಟನಾ ಕಾರ್ಯದರ್ಶಿಗಳಾದ ಡಾ. ಸುರೇಶ್ ಮನಗುತ್ತಿ ವಂದನಾರ್ಪಣೆ ಸಲ್ಲಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img