ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ


Logo

Published Date: 10-Sep-2025 Link-Copied

ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು. ಈ ಶಿಬಿರದಲ್ಲಿ ಖ್ಯಾತ ಸಂಧಿವಾತ ತಜ್ಞರಾದ ಡಾ| ಅಶ್ವಿನಿ ಕಾಮತ್ ಭಾಗವಹಿಸಿ ರೋಗಿಗಳ ತಪಾಸಣೆ ನಡೆಸಿದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಶಿಬಿರದಲ್ಲಿ ಉಚಿತ ಸಮಾಲೋಚನೆಯ ಜತೆಗೆ ರಕ್ತ ಪರೀಕ್ಷೆಗೆ 20% ಹಾಗೂ ಔಷಧಗಳಿಗೆ 10% ರಿಯಾಯಿತಿಯನ್ನು ನೀಡಲಾಯಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img