ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ


Logo

Published Date: 03-Oct-2025 Link-Copied

ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ತಮ್ಮ ತಾಯಿ ಸ್ಮರಣಾರ್ಥ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ 25ನೇ ವರ್ಷದ 'ಅಮ್ಮ ಪ್ರಶಸ್ತಿ'ಗಾಗಿ 2024 ಮತ್ತು 2025ನೇ ಸಾಲಿನಲ್ಲಿ ಪ್ರಕಟವಾದ ಕೃತಿ ಆಹ್ವಾನಿಸಲಾಗಿದೆ. 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ ಈಗ 25ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ 'ಅಮ್ಮ ಪ್ರಶಸ್ತಿ'ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿ ಕೃತಿಗಳ ಆಹ್ವಾನ ಕಳುಹಿಸಬಹುದು. ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಯ ರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು 'ಅ.30 ಕೊನೆಯ ದಿನಾಂಕವಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃತಿಗಳನ್ನು ರತ್ನಕಲಾ ಮಹಿಪಾಲರೆಡ್ಡಿ ಮುನ್ಸೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂ‌ ಪ್ರತಿಷ್ಠಾನ 'ಅಮ್ಮ ನಿಲಯ', ರಾಮಚಂದ್ರ ಲೇಔಟ್, ಪಿಡಬ್ಲ್ಯುಡಿ ಕಚೇರಿ ಹತ್ತಿರ, ಸೇಡಂ-585 222. ಕಲಬುರಗಿ ಜಿಲ್ಲೆ ಈ ವಿಳಾಸಕ್ಕೆ ಕಳಿಸಬೇಕು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img