ಇಂದಿನಿಂದ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವರ್ಷಾವಧಿ ಜಾತ್ರೆ


Logo

Published Date: 14-Mar-2024 Link-Copied

ಬೆಳ್ತಂಗಡಿ: ಪಡ್ಯಾರಬೆಟ್ಟ ಪೆರಿಂಜೆಯ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು ಇಂದಿನಿಂದ ಪ್ರಾರಂಭಗೊಂಡು 19ರವರೆಗೆ ನಡೆಯಲಿದೆ. ಇಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ಪಡ್ಯೋಡಿ ಗುತ್ತಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಲಿದೆ. ಮಾ.15ರಂದು ಭೂತಬಲಿ ಉತ್ಸವ, ಮಾ.16ರಂದು ಅಂಬೋಡಿ, ಬಲಿ, ಹೂವಿನ ಪೂಜೆ, ರಥಾರೋಹಣ ನಡೆಯಲಿದೆ. ಮಾ.17ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ 12ರಿಂದ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, 1.30 ರಿಂದ ಮಹಾ ಅನ್ನಸಂತರ್ಪಣೆ, ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ಜರುಗಲಿದೆ. ಮಾ.18ರಂದು ಧ್ವಜಾವರೋಹಣ, ಸಂಪ್ರೋಕ್ಷಣೆ,ಪಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗಲಿದೆ. ಮಾ.19ರಂದು ರಾತ್ರಿ 7.30ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ಪ್ರತಿ ಸಂಕ್ರಮಣ ಮತ್ತು ಜಾತ್ರಾ ಸಮಯದ 5 ದಿನಗಳಲ್ಲಿ ಅನ್ನಸಂತರ್ಪಣೆ ಸೇವೆ ನೆರವೇರಲಿದೆ. ಸಾಂಸ್ಕೃತಿಕ ಕಾರ್ಯಕ್ರಮ: ಮಾ.16ರಂದು ಸಂಜೆ 6 ರಿಂದ 7.30ರವರೆಗೆ ತುಳಸಿ ಪೆಜತ್ತಾಯ ಮತ್ತು ಶಿಷ್ಯವೃಂದದವರಿಂದ 'ಭಕ್ತಿ-ಸಂಗೀತ' ಕಾರ್ಯಕ್ರಮ ನಡೆಯಲಿದೆ. ಮಾ.19ರಂದು ರಾತ್ರಿ 8ರಿಂದ ಕರಾವಳಿ ಕರ್ನಾಟಕದ ಪ್ರಖ್ಯಾತ ಕಲಾವಿದರಿಂದ 'ನಾದ ನಿನಾದ' ಸಂಗೀತ ರಸಸಂಜೆ ಕಾರ್ಯಕ್ರಮ ಜರುಗಲಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img