ಓಡೀಲು: ಇಂದಿನಿಂದ ಬ್ರಹ್ಮಕಲಶೋತ್ಸವ


Logo

Published Date: 08-Apr-2024 Link-Copied

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಕಕಲಶೋತ್ಸವ ಮತ್ತು ಜಾತ್ರೋತ್ಸವದ ಕಾರ್ಯಕ್ರಮಗಳು ವೇದಮೂರ್ತಿ ಉದಯ ಪಾಂಗಣ್ಣಾಯರ ನೇತೃತ್ವದಲ್ಲಿ ಏ.8ರಿಂದ ಆರಂಭವಾಗಲಿವೆ. ಧಾರ್ಮಿಕ ಕಾರ್ಯಕ್ರಮಗಳು: ಸಂಜೆ 4 ಗಂಟೆಗೆ ಮಹಾದ್ವಾರ ಉದ್ಘಾಟನೆ, ಹೊರೆ ಕಾಣಿಕೆಯ ಶೋಭಾಯಾತ್ರೆ, ಉಗ್ರಾಣ ಮುಹೂರ್ತ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7.30ಕ್ಕೆ ಜರುಗುವ ಸಭಾ ಕಾರ್ಯಕ್ರಮವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಉದ್ಘಾಟಿಸಲಿದ್ದಾರೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ ಆಶೀರ್ವಚನ ನೀಡುವರು. ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಅಧ್ಯಕ್ಷತೆ ವಹಿಸಲಿದ್ದು, ಇತರ ಗಣ್ಯರು ಭಾಗವಹಿಸುವರು. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿವೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img