ಅಧಿಕ ರಕ್ತದೊತ್ತಡದ ಜಾಗೃತಿ ಮತ್ತು ಸಲಹಾ ಶಿಬಿರ


Logo

Published Date: 17-May-2024 Link-Copied

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರದ ಎಸ್.ಡಿ.ಎಂ. ಪಾಲಿಕ್ಲಿನಿಕ್‌ನಲ್ಲಿ ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜು ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಮೆಡಿಸಿನ್ ವಿಭಾಗದವರ ಮತ್ತು ಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ “ಜಾಗತಿಕ ಅಧಿಕ ರಕ್ತದೊತ್ತಡದ ದಿನ”ದಂದು ಉಚಿತ ರಕ್ತದೊತ್ತಡ ತಪಾಸಣೆ ಮತ್ತು ತಡೆಗಟ್ಟಲು ಮಾಡಬೇಕಾದ ವ್ಯಾಯಾಮದ ಮಹತ್ವದ ಬಗ್ಗೆ ಶಿಬಿರವನ್ನು ಮೇ 17ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಎಸ್.ಡಿ.ಎಂ. ಮೆಡಿಕಲ್ ಕಾಲೇಜಿನ, ವೈದ್ಯಕೀಯ ಚಿಕಿತ್ಸಾ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಬಸವರಾಜ ಹಳಕಟ್ಟಿ ಅವರು ಉದ್ಘಾಟಿಸಿ ಮಾತನಾಡುತ್ತಾ 40 ವರ್ಷ ಮೇಲ್ಪಟ್ಟ ಜನರು ಆಗಾಗ ಅಧಿಕ ರಕ್ತದೊತ್ತಡ ತಪಾಸಣೆ ಮಾಡಿಸಿಕೊಳ್ಳಬೇಕು. ರಕ್ತದೊತ್ತಡದಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಅಧಿಕ ರಕ್ತದೊತ್ತಡ ಹೊಂದಿರುವವರು ವೈದ್ಯರನ್ನು ಸಂಪರ್ಕಿಸಬೇಕು. ಉತ್ತಮ ಜೀವನಶೈಲಿಯಿಂದ ರೋಗಗಳನ್ನು ತಡೆಯಬಹುದು. ಕೆಲವೊಮ್ಮೆ ಅಧಿಕ ರಕ್ತದೊತ್ತಡವು ಅನುವಂಶೀಯವಾಗಿದ್ದು, ಯಾವುದೇ ರೋಗ ಲಕ್ಷಣಗಳು ಕಾಣದಿರಬಹುದು ಎಂದರು. ಕಾರ್ಡಿಯೋರೆಸ್ಪಿರೇಟರಿ ವಿಭಾಗದ ಮುಖ್ಯಸ್ಥರಾದ ಡಾ. ಸಂಗಿತಾ ಅಪ್ಪಣ್ಣವರ ಮತ್ತು ಡಾ. ಶರಣ ಅವರು ಅಧಿಕ ರಕ್ತದೊತ್ತಡದ ಜಾಗೃತಿಯ ಕುರಿತು ವಿವರಿಸಿದರು. ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಅವರು ಉಪಸ್ಥಿತರಿದ್ದರು. ಡಾ. ತುಳಸಿ ಕುಲಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img