ಶುಶ್ರೂಷಕಿಯರ ಸಪ್ತಾಹ ಆಚರಣೆ


Logo

Published Date: 21-May-2024 Link-Copied

ಸತ್ತೂರು, ಧಾರವಾಡ: ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಮತ್ತು ಎಸ್.ಡಿ.ಎಂ. ಆಸ್ಪತ್ರೆಯ ನರ್ಸಿಂಗ್ ಸೇವಾ ವಿಭಾಗದಿಂದ ಶುಶ್ರೂಷಕಿಯರ ಸಪ್ತಾಹ “ಉತ್ಕರ್ಷ 2024” ಅನ್ನು ಮೇ 13 ರಿಂದ 20ರ ವರೆಗೆ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶುಶ್ರೂಷಕಿಯರಿಗೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಂಗೋಲಿ ಸ್ಪರ್ಧೆ, ರಸಪ್ರಶ್ನೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಶುಶ್ರೂಷಕಿಯರ ಸಪ್ತಾಹವನ್ನು ಉದ್ಘಾಟಿಸಿದರು. ಶುಶ್ರೂಷಕಿಯರ ಸಪ್ತಾಹದ ಅಂಗವಾಗಿ ಮೇ 20 ರಂದು ಶುಶ್ರೂಷಕಿಯರ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಸಮಾರೋಪ ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಶ್ರೀಮತಿ ಪದ್ಮಲತಾ ನಿರಂಜನ್ ಅವರು ಆಗಮಿಸಿ ನರ್ಸಿಂಗ್‌ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮತ್ತು ನರ್ಸಿಂಗ್‌ನಲ್ಲಿ ಉತ್ತಮ ಸೇವೆ ನೀಡಿದ ಶುಶ್ರೂಷಕಿಯರಿಗೆ ಸ್ಮರಣಿಕೆ ಮತ್ತು ಚಿನ್ನದ ಪದಕಗಳನ್ನು ನೀಡಿ ಸನ್ಮಾನಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ: ಶುಶ್ರೂಷಕಿಯವರ ಸ್ಪರ್ಶವು ರೋಗಿಗಳನ್ನು ವೇಗವಾಗಿ ಮತ್ತು ಉತ್ತಮವಾಗಿ ಗುಣಪಡಿಸುತ್ತದೆ. ಶುಶ್ರೂಷಕಿಯವರು ಕಾಲಕ್ಕೆ ಅಣುಗುಣವಾಗಿ ತಮ್ಮ ಜ್ಞಾನವನ್ನು ನವೀಕರಿಸಬೇಕು. ಶುಶ್ರೂಷಕಿಯವರು ಸಣ್ಣ ಕೆಲಸಗಳನ್ನು ಉತ್ತಮವಾಗಿ ಮಾಡುವ ಮೂಲಕ ಶ್ರೇಷ್ಠರಾಗುತ್ತಾರೆ. ಶುಶ್ರೂಷಕಿಯರಿಗೆ ಪ್ರಪಂಚದಾದ್ಯಂತ ಸಾಕಷ್ಟು ಬೇಡಿಕೆಯಿದೆ, ಆದ್ದರಿಂದ ವೃತ್ತಿ ಪ್ರಗತಿ ಮತ್ತು ಉತ್ಕೃಷ್ಟತೆಯು ಮುಖ್ಯವಾಗಿದೆ. ವಿದೇಶಗಳಲ್ಲಿ ಸೇವೆ ಸಲ್ಲಿಸಲು ಶುಶ್ರೂಷಕಿಯರು ವಿವಿಧ ಭಾಷೆಗಳನ್ನು ಕಲಿಯಬೇಕು. ಹಿರಿಯ ಪ್ರಾಧ್ಯಾಪಕರಾದ ಡಾ. ಗಂಗಾಬಾಯಿ ಕುಲಕರ್ಣಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಾ. ಪ್ರಸನ್ನ ದೇಶಪಾಂಡೆ, ಅತಿಥಿಗಳನ್ನು ಸ್ವಾಗತಿಸಿದರು. ಡಾ. ನಾಗೇಶ ಅಜ್ಜವಾಡಿಮಠ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ನಾನ್ಸಿ ಮೇರಿ ಕಾರ್ಯಕ್ರಮವನ್ನು ನಿರೂಪಿಸಿದರು. ಮಂಜುಳಾ ಕೆ.ಬಿ. ವಂದನಾರ್ಪಣೆ ಸಲ್ಲಿಸಿದರು. ಸಭಾ ಕಾರ್ಯಕ್ರಮದ ನಂತರ ಶುಶ್ರೂಷಕಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img