ವಿಶ್ವ ತುರ್ತು ಚಿಕಿತ್ಸಾ ದಿನಾಚರಣೆ


Logo

Published Date: 28-May-2024 Link-Copied

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದಿಂದ 27 ಮೇ 2024 ರಂದು “ವಿಶ್ವ ತುರ್ತು ಚಿಕಿತ್ಸಾ ದಿನ”ದ ಅಂಗವಾಗಿ “ಅಪಧಮನಿಯ ರಕ್ತದ ಅನಿಲ ವಿಶ್ಲೇಷಣೆಯ ಬಗ್ಗೆ ಪ್ರಾಥಮಿಕ ಜ್ಞಾನ” ಕುರಿತು ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಉತ್ತರ ಕರ್ನಾಟಕದ ವಿವಿಧ ವೈದ್ಯಕೀಯ ಕಾಲೇಜುಗಳಿಂದ ಸುಮಾರು 150ಕ್ಕೂ ಹೆಚ್ಚು ಅಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗವು ಕರ್ನಾಟಕದಲ್ಲಿ ಸ್ಥಾಪನೆಯಾದ 5 ನೇ ವಿಭಾಗ ಮತ್ತು 2 ನೇ ಅತಿ ದೊಡ್ಡ ವಿಭಾಗವಾಗಿದೆ. ಎಸ್.ಡಿ.ಎಂ ವೈದ್ಯಕೀಯ ಕಾಲೇಜು ಕಳೆದ ಐದು ವರ್ಷಗಳಿಂದ ತುರ್ತು ಚಿಕಿತ್ಸಾ ವಿಭಾಗದಲ್ಲಿ ಎಂ.ಡಿ. ಸ್ನಾತಕೋತ್ತರ ಪದವಿಯನ್ನು ನೀಡುತ್ತಿದೆ. ಡಾ. ನಿರಂಜನ್ ಕುಮಾರ, ಉಪಕುಲಪತಿಗಳು, ಈ ಕಾರ್ಯಾಗಾರವನ್ನು ಉದ್ಘಾಟಿಸಿದರು. ಡಾ. ರತ್ನಮಾಲಾ ಎಂ. ದೇಸಾಯಿ, ಎಸ್.ಡಿ.ಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರು, ಡಾ. ವಿಜಯ ಕುಲಕರ್ಣಿ, ಉಪ ಪ್ರಾಂಶುಪಾಲರು, ಡಾ. ಕಿರಣ ಹೆಗ್ಡೆ, ವೈದ್ಯಕೀಯ ಅಧೀಕ್ಷಕರು, ಡಾ. ಮಖ್ದೂಮ್ ಕಿಲ್ಲೇದಾರ ಉಪ ವೈದ್ಯಕೀಯ ಅಧೀಕ್ಷಕರು, ಮತ್ತಿತರರು ಈ ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು. ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಮಹಾದೇವ, ಜೆ ಜೆ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಮಂಜುನಾಥ. ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಉದಯ ಮತ್ತು ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಹಿರಿಯ ಪ್ರಾಧ್ಯಾಪಕರುಗಳು ಕಾರ್ಯಾಗಾರದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ರಜನಿಕಾಂತ, ಅಥಿತಿಗಳನ್ನು ಸ್ವಾಗತಸಿದರು, ಡಾ. ವಿಜಯಲಕ್ಷ್ಮಿ , ಪ್ರಾಧ್ಯಾಪಕರು ಮತ್ತು ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರು ಕಾರ್ಯಗಾರದ ಅವಲೋಕನ ನೀಡಿದರು. ಡಾ. ಸುಚಿತಾ ವಂದನಾರ್ಪಣೆ ಸಲ್ಲಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img