ಸತ್ತೂರು, ಧಾರವಾಡ: ವಿಶ್ವ ಪರಿಸರ ದಿನಾಚರಣೆ


Logo

Published Date: 06-Jun-2024 Link-Copied

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಜೂನ್ 05ರಂದು “ವಿಶ್ವ ಪರಿಸರ ದಿನ”ವನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗಿಡಗಳಿಗೆ ನೀರುಣಿಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ಜೈವಿಕ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿಗಳು ಪರಿಸರವು ಮಾನವಕುಲಕ್ಕೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿ, ಅದನ್ನು ಸಂರಕ್ಷಿಸುವಂತೆ ತಿಳಿಯ ಹೇಳಿದರು. ಪರಿಸರ ದಿನಾಚರಣೆಯಲ್ಲಿ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ವಿಶ್ವವಿದ್ಯಾಲಯದ ಅಧಿಕಾರಿಗಳು, ಅಂಗ ಸಂಸ್ಥೆಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಶ್ವ ಪರಿಸರ ದಿನದ ಅಂಗವಾಗಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಎನ್.ಎಸ್.ಎಸ್. ಘಟಕವು “ಭೂ ಮರುಸ್ಥಾಪನೆ, ಮರು ಭೂಮೀಕರಣ, ಬರ ಸ್ಥಿತಿಸ್ಥಾಪಕತ್ವ” ಎಂಬ ಧ್ಯೇಯದ ಕುರಿತು ತಜ್ಞ ಉಪನ್ಯಾಸವನ್ನು ಆಯೋಜಿಸಿದ್ದರು. ಧಾರವಾಡದ ಪ್ರಸಿದ್ಧ ವೈದ್ಯ ಮತ್ತು ಪರಿಸರವಾದಿ ಡಾ. ಚಿದಾನಂದ ರಾಮನಗೌಡರ ಮುಖ್ಯ ಅತಿಥಿಯಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ: ಪ್ರತಿಯೊಬ್ಬರು ಪ್ರಕೃತಿಯನ್ನು ಸಂರಕ್ಷಿಸಲು ತಮ್ಮ ಸುತ್ತಮುತ್ತ ಸಸಿಗಳನ್ನು ನೆಡಬೇಕು ಮತ್ತು ಆಗಾಗ ನೀರುಣಿಸುತ್ತಿರಬೇಕು. ಶುದ್ಧ ಗಾಳಿ ಮತ್ತು ನೀರನ್ನೊಳಗೊಂಡ ಪರಿಸರವು ಮಾನವನಿಗೆ ಮೊದಲ ಮತ್ತು ಪ್ರಥಮ ಪ್ರಾಶಸ್ತ್ಯದ ಔಷಧವಾಗಿದೆ. ಪರಿಸರ ದಿನವನ್ನು ಆಚರಿಸುವುದರಿಂದ ನಾವು ಯುವ ಪೀಳಿಗೆಗೆ ಪರಿಸರದ ಅರಿವು ಮತ್ತು ಜಾಗೃತಿಯನ್ನು ಮೂಡಿಸಿದಂತಾಗುತ್ತದೆ. ಪರಿಸರದ ಅಸಮತೋಲನವು ತಾಪಮಾನ ಮತ್ತು ಹವಾಮಾನದ ವೈಪರಿತ್ಯತೆಗೆ ಕಾರಣವಾಗಿ ಮಾನವರ ಮೇಲೆ ಅತೀವ ಪರಿಣಾಮಗಳುಂಟು ಮಾಡುತ್ತದೆ. ದೇವರ ಕೊಡುಗೆಯಾದ ಹಸಿರು ಎಲೆಗಳು ಉತ್ತಮ ಆಮ್ಲಜನಕವನ್ನು ಕೊಡುವುದರಿಂದ ಅದರ ಸಂರಕ್ಷಣೆಯು ಆವಶ್ಯಕ. ಜನರಿಂದ ಪರಿಸರವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಹೊರತಾಗಿ ಪರಿಸರವೇ ನಮ್ಮನ್ನು ನಿಯಂತ್ರಿಸುತ್ತದೆ ಎಂಬ ಅರಿವಿರಬೇಕು ಎಂದು ಹೇಳಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ ವಿಜಯ ಕುಲಕರ್ಣಿ ಅತಿಥಿಗಳನ್ನು ಪರಿಚಯಿಸಿದರು. ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ, ಉಪ ಪ್ರಾಂಶುಪಾಲರಾದ ಡಾ. ದೀಪಕ ಕಣಬೂರ, ಎನ್.ಎಸ್.ಎಸ್. ಘಟಕದ ಸಂಯೋಜಕರಾದ ಡಾ. ರಾಕೇಶ ನಾಯಕ, ವಿಶ್ವವಿದ್ಯಾಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯವರಾದ ಬಾಬಣ್ಣಾ ಶೆಟ್ಟಿಗಾರ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img