ಸತ್ತೂರು, ಧಾರವಾಡ: ಅಂತರಾಷ್ಟ್ರಿಯ ಯೋಗ ದಿನಾಚರಣೆ


Logo

Published Date: 22-Jun-2024 Link-Copied

ಎಸ್.ಡಿ.ಎಂ. ವಿಶ್ವವಿದ್ಯಾಲಯವು ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಧ್ಯೇಯೆಯೊಂದಿಗೆ ದಿನಾಂಕ 21 ಜೂನ್ ರಂದು ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಮುಖ್ಯ ಅತಿಥಿಗಳಾಗಿದ್ದು, ಮತ್ತಿತರ ಗಣ್ಯರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಚಿಕಿತ್ಸಾ ಘಟಕದ ಮುಖ್ಯಸ್ಥರಾದ ಡಾ. ಮಲ್ಲಿಕಾರ್ಜುನ ಅರಳಿಹಳ್ಳಿ ಅವರು ಯೋಗದ ಮಹತ್ವ ತಿಳಿಸಿ ಅತಿಥಿ ಭಾಷಣ ಮಾಡುತ್ತಾ: ಯೋಗದಿಂದ ನಮ್ಮ ಆತ್ಮ ಸರ್ವೋಚ್ಛವಾಗುತ್ತದೆ. ಯೋಗದಿಂದ ಮನಸ್ಸಿಗೆ ಸುಖ ಮತ್ತು ಶಾಂತಿ ಸಿಗುತ್ತದೆ. ಯೋಗವು ಸಮಗ್ರ ದೇಹವನ್ನು ಸಮತೋಲನದಲ್ಲಿರಿಸುತ್ತದೆ. ಅಷ್ಟಾಂಗ ಯೋಗವು ಜೀವನದಲ್ಲಿ ಪರಿಪೂರ್ಣತೆಯನ್ನು ಗಳಿಸಲು ಸಹಾಯ ಮಾಡುತ್ತದೆ ಎಂದರು. ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಯೋಗ ಪರಿಣಿತರಾದ ಡಾ. ಸತೀಶ ಪಾಟೀಲ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯೋಗ ತಜ್ಞರ ತಂಡವು ವಿಶೇಷ ಆಸನಗಳನ್ನು ಪ್ರದರ್ಶಿಸಿದರು. ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು. ಡಾ. ನಿರಂಜನ್ ಕುಮಾರ ಅವರು ಯೋಗ ತಜ್ಞರ ತಂಡವನ್ನು ಶ್ಲಾಘಿಸಿ, ಸನ್ಮಾನಿಸಿದರು. ಎಸ್.ಡಿ.ಎಂ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಲರಾಮ ನಾಯ್ಕ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಕೃತಿಕಾ ಗುತ್ತಲ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಕಿರಣ ಕುಮಾರ ಅವರು ವಂದನಾರ್ಪಣೆ ಸಲ್ಲಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img