ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ


Logo

Published Date: 23-Jun-2024 Link-Copied

ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ. ನರೇಂದ್ರ ನಾಯಕ್‌ರು ಶೈಕ್ಷಣಿಕ ಕ್ಷೇತ್ರದಲ್ಲೂ ಕೃಷಿಯ ಮೂಲಸತ್ವಗಳನ್ನು ಅಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನುಡಿದರು. ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್‌ನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ ತಜ್ಞ ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಕಾರ‍್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೋ. ನರೇಂದ್ರ ಎಲ್. ನಾಯಕ್, ಒಬ್ಬ ವ್ಯಕ್ತಿ, ತಾನು ಮಾಡುವ ಕೆಲಸದಿಂದ ಗೌರವ, ಪ್ರೀತಿಯನ್ನು ಗಳಿಸಲು ಸಾಧ್ಯ. ನಾನು ಪ್ರತೀ ಕೆಲಸವನ್ನು ನಿಸ್ವಾರ್ಥದಿಂದ, ಜೀವನದ ಪ್ರತಿ ಕ್ಷಣವನ್ನು ಅನುಭವಿಸುತ್ತಾ ಕಳೆಯುತ್ತೇನೆ. ಕುಪ್ಮಾದ ಇತರೆ ಸದಸ್ಯರ ಸಾಧನೆ ಮುಂದೆ ನನ್ನ ಸಾಧನೆ ಚಿಕ್ಕದು. ನಿಮ್ಮ ಸಾಧಕರ ಸಾಲಿನಲ್ಲಿ ನನಗೊಂದು ಪುಟ್ಟ ಸ್ಥಾನಕೊಡಿ, ಅಷ್ಟೇ ಸಾಕು ಎಂದು ಸಂತಸವನ್ನು ವ್ಯಕ್ತಪಡಿಸಿದರು. ಶಿಕ್ಷಣ ಪ್ರೇಮಿಗಳಿಂದ ಶಿಕ್ಷಣ ಸಂಸ್ಥೆ ಕುಪ್ಮಾದ ಜೊತೆ ಕಾರ‍್ಯದರ್ಶಿ ಮೈಸೂರಿನ ವಿಶ್ವನಾಥ ಶೇಷಾಚಲ ಮಾತನಾಡಿ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ರಾಜಕೀಯದ ಹಿನ್ನಲೆಯುಳ್ಳವರು ಸ್ಥಾಪಿಸಿದರೆ, ಕರಾವಳಿಯಲ್ಲಿ ಕಲೆ, ಸಾಹಿತ್ಯ, ಶಿಕ್ಷಣದ ಅಭಿರುಚಿಯುಳ್ಳವರು ಸ್ಥಾಪಿಸುತ್ತಿರುವುದು ಶ್ಲಾಘನೀಯ ಎಂದರು. ತಮ್ಮ ವರ್ತನೆಯಲ್ಲಿ ಆದರ್ಶ ತುಂಬಿಕೊಂಡಿರುವವರು ನರೇಂದ್ರ ನಾಯಕರು, ನಮಗೆಲ್ಲರಿಗೆ ಕಾರ‍್ಯಸಫಲತೆಯಲ್ಲಿ ಜೀವಂತ ಉದಾಹರಣೆ ಎಂದರು. ವಿದ್ಯೆ ವಿನಯವುಳ್ಳವನಿಗೆ ಸ್ಥಾನಮಾನ ಬರುತ್ತದೆ ಎಂಬುದಕ್ಕೆ ನರೇಂದ್ರ ನಾಯಕರು ಉತ್ತಮ ಉದಾಹರಣೆ ಎಂದು ದಾವಣಗೆರೆ ಕುಪ್ಮಾ ಘಟಕದ ಸಂಯೋಜಕ ಎಸ್. ಜೆ. ಶ್ರೀಧರ್ ನುಡಿದರು. ಜೀವನ ಮರಳಿ ಅರಳಲಿ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಪ್ಮಾದ ಗೌರವಾಧ್ಯಕ್ಷ ಡಾ. ಎಂ. ಬಿ. ಪುರಾಣಿಕ್, ಷಷ್ಟಬ್ದಿ ಆಚರಿಸುತ್ತಿರುವ ನರೇಂದ್ರ ನಾಯಕರ ಜೀವನ ಮರಳಿ ಅರಳಲಿ ಎಂದು ಹಾರೈಸಿದರು. ಕಾರ‍್ಯಕ್ರಮದಲ್ಲಿ ಪ್ರೋ. ನರೇಂದ್ರ ಎಲ್. ನಾಯಕ್ ಹಾಗೂ ಡಾ. ಉಷಾ ಪ್ರಭಾ ನಾಯಕ್ ದಂಪತಿಗಳನ್ನು ಕುಪ್ಮಾವತಿಯಿಂದ ಸನ್ಮಾನಿಸಲಾಯಿತು. ಕಾರ‍್ಯಕ್ರಮ ಆರಂಭದಲ್ಲಿ ಪ್ರೋ. ನರೇಂದ್ರ ಎಲ್. ನಾಯಕ್‌ರ ಜೀವನ ಆಧಾರಿತ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಶಕ್ತಿ ಶಿಕ್ಷಣ ಸಮೂಹದ ಡಾ. ಕೆ.ಸಿ. ನಾಕ್, ಎಕ್ಸ್ ಪರ್ಟ್ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ನಾಯಕ್ ಇದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ನಿರೂಪಿಸಿ, ಕುಪ್ಮಾ ಉಪಾಧ್ಯಕ್ಷ ಯುವರಾಜ್ ಜೈನ್ ಸ್ವಾಗತಿಸಿ, ಕುಪ್ಮಾ ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ ವಂದಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img