ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಮೈಂಡ್ ಮ್ಯಾಪಿಂಗ್ ಕಾರ್ಯಾಗಾರ


Logo

Published Date: 11-Jul-2024 Link-Copied

ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೈಂಡ್ ಮ್ಯಾಪಿಂಗ್ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ರಿಯಾಗಿ ಮನಶಾಸ್ತ್ರಜ್ಞ, ಮೈಂಡ್ ಟ್ರೈನರ್ ಆಗಿರುವ ಮಂಗಳೂರಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ಸರ್ಫ್ರಾಜ್ ಜೆ. ಹಾಶಿಮ್ ಆಗಮಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸುಪ್ತ ಮನಸ್ಸಿಗೆ ಅದ್ಭುತವಾದ ಸಾಮರ್ಥ್ಯವಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಜೀವನದಲ್ಲಿ ನಾವು ಇಟ್ಟ ಗುರಿಯನ್ನು ತಲುಪಬಹುದು. ಋಣಾತ್ಮಕ ಆಲೋಚನೆಗಳು ಬಂದ ಸಂದರ್ಭದಲ್ಲಿ ಅದನ್ನು ನಿಯಂತ್ರಿಸಲು ಧನಾತ್ಮಕ ಆಲೋಚನೆಗಳನ್ನು ಮಾಡಬೇಕು. ನಮ್ಮ ಮನಸ್ಸು ನಮ್ಮ ಸ್ಥಿಮಿತದಲ್ಲಿದ್ದಲ್ಲಿ ಮಾತ್ರ ಹೊರಗಿನ ಪ್ರಪಂಚದಲ್ಲಿ ಏನೇ ಅನಿಶ್ಚಿತತೆ, ಸಮಸ್ಯೆಗಳಿದ್ದರೂ ಅದನ್ನು ಮೀರಿ ಬೆಳೆಯಲು ಸಾಧ್ಯ. ಸದಾ ಒಳಿತನ್ನೇ ಆಲೋಚಿಸಿ ಇತರರಿಗೂ ಕೇಡನ್ನು ಬಯಸದೇ ಇದ್ದಲ್ಲಿ ಶಾಂತಿಯಿಂದ ಬದುಕಬಹುದು ಎಂದರು. ಮನಸ್ಸಿನ ಸಾಮರ್ಥ್ಯ ವಿದ್ಯಾರ್ಥಿಗಳಿಗೆ ಅರಿವಾಗುವಂತೆ ಒಂದಷ್ಟು ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ವಿಕ್ರಮ್ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img