ಎಕ್ಸಲೆಂಟ್: ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ


Logo

Published Date: 28-Jul-2024 Link-Copied

ನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರನ್ನು ಪ್ರತೀಕ್ಷಣ ಸ್ಮರಿಸಬೇಕು. ಸೈನಿಕರು ಭಾವಜೀವಿಗಳು, ನಚೀಕೇತ್, ಸೌರಭ್ ಕಾಲಿಯಾರಂತಹ ಮೊದಲಾದ ವೀರ ಯೋಧರ ಬಲಿದಾನದ ಪ್ರತಿಫಲವಾಗಿ ಇಂದಿನ ಭಾರತ ಭವ್ಯವಾಗಿದೆ. ಕಾರ್ಗಿಲ್ ಯುದ್ಧವಲ್ಲ ಅದೊಂದು ಕಾರ್ಯಾಚರಣೆ. ಯಾಕೆ ಭಾರತಕ್ಕೆ ಕಾರ್ಗಿಲ್ ಮುಖ್ಯವೆಂದರೆ 527 ಸೈನಿಕರು ತಮ್ಮ ಯಶಸ್ವಿ ಕಾರ್ಯಚರಣೆಯಿಂದ ಭಾರತಕ್ಕೆ ಜಯ ತಂದುಕೊಟ್ಟು ಹುತಾತ್ಮರಾದರು. ಇಂದು ಆ ಕಾರ್ಯಚರಣೆಯಲ್ಲಿ ಮಡಿದ ಅಷ್ಟೂ ಸೈನಿಕರನ್ನು ಸ್ಮರಿಸಿಕೊಳ್ಳುವುದು ಅತೀ ಮುಖ್ಯ ಎಂಬುದಾಗಿ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಗಣೇಶ್ ಅಭಿಪ್ರಾಯಪಟ್ಟರು. ಎಕ್ಸಲೆಂಟ್ ಶಿಕ್ಷನ ಸಂಸ್ಥೆಗಳು ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಇಲ್ಲಿಯ ತನಕ ಹುತಾತ್ಮರಾದ ಎಲ್ಲಾ ಸೈನಿಕರಿಗೂ ಎದೆಗೆ ಗುಂಡುಬಿದ್ದಿದೆಯೇ ವಿನಃ ಬೆನ್ನಿಗಲ್ಲ. ಅಷ್ಟಿದ್ದರೂ ದೇಶಕ್ಕಾಗಿ ಬದುಕಬೇಕು ಎಂಬ ಭಾವುಕತೆ ಸೈನಿಕರದ್ದು. ಅವರು ದೇಶದ ರಕ್ಷಣೆ ಕಣ್ಣಮುಂದೆ ಬಂದರೆ ಸದಾ ಬಲಿದಾನಕ್ಕೆ ಮುಂದಾಗುತ್ತಾರೆ. ಬಲಿದಾನಗೈದ ವೀರಯೋಧರ ಕನಸುಗಳನ್ನು ಹೊತ್ತ ಭೂಮಿ ಇದು ಕಾರ್ಗಿಲ್ ಎಂದಿಗೂ ಭಾರತದ ಭಾಗ ಅಲ್ಲಿ ಮಡಿದ ಯೋಧರ ಪರಿಶ್ರಮ ನಮ್ಮ ನೆಮ್ಮದಿಯ ನಿದ್ರೆಗೆ ಕಾರಣ. ಆದರೆ ಇಂದು ನಾವುಗಳು ಜಾತಿ ಮತ ಭಾಷೆ ಇತ್ಯಾದಿ ಬಂಧನಗಳಿಗೆ ಒಳಗಾಗಿದ್ದೇವೆ. ಅದರಿಂದ ಹೊರಬಂದು ನಾವೆಲ್ಲಾ ಒಂದೇ, ನಾವೆಲ್ಲಾ ಭಾರತೀಯರು ಎನ್ನುವ ಹೆಮ್ಮೆ ನಮಗಿರಬೇಕು. ಜೀವನದಲ್ಲಿ ಗುರಿಯ ಸ್ಪಷ್ಟತೆ ಇದ್ದರೆ ಎಂತಹ ಸಮಸ್ಯೆಗಳನ್ನು ಮೆಟ್ಟಿನಿಲ್ಲಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಯೋಧರ ತ್ಯಾಗ ಬಲಿದಾನಗಳನ್ನು ಸದಾ ಗೌರವಿಸಬೇಕು. ದೇಶ ಮೊದಲು ಎಂಬ ಮನೋಭಾವ ಎಲ್ಲರಲ್ಲಿಯೂ ಮೂಡಬೇಕು. ಯೋಧರ ಆದರ್ಶಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಈ ಕಾರ್ಗಿಲ್ ವಿಜಯ ಸುಲಭವಾಗಿ ಲಭಿಸಿದ್ದಲ್ಲ ಅದರಲ್ಲಿ ನೂರಾರು ಸೈನಿಕರು ವೀರತನದಿಂದ ಹೋರಾಡಿ ತಮ್ಮ ಬಲಿದಾನ ಮಾಡಿದ್ದಾರೆ. ಇಂದು ನಾವೆಲ್ಲಾ ಈ ಸಂಭ್ರಮಾಚರಣೆ ಮಾಡುತ್ತಿರುವುದು ಅವರಿಗೆ ಸಲ್ಲಿಸುತ್ತಿರುವ ಗೌರವ ಎಂದು ಹೇಳುತ್ತಾ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಅರಿವನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಉಪಮುಖ್ಯೋಪಾಧ್ಯಾಯ ಜಯಶೀಲ, ಎನ್ ಸಿ ಸಿ ನೌಕದಳದ ಕೇರ್‌ಟೇಕರ್ ಆಫೀಸರ್ ರೇಣುಕಾಚಾರ್ಯ, ಭೂದಳದ ಕೇರ್‌ಟೇಕರ್ ಆಫೀಸರ್ ಪ್ರಶಾಂತ್ ಜೈನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನಿಷಾ, ನವ್ಯ ಕಾರ್ಯಕ್ರಮ ನಿರೂಪಿಸಿದರು. ಹರ್ಷ ಅತಿಥಿಗಳನ್ನು ಪರಿಚಯಿಸಿದರು, ಗುಂಜನ್ ಕಾರ್ಗಿಲ್ ವಿಜಯ ದಿವಸದ ಮಹತ್ವ ತಿಳಿಸಿದರು. ಪ್ರನ್ಶು ವಂದಿಸಿದರು. ಇದೇ ಸಂದರ್ಭದಲ್ಲಿ ಕಾರ್ಗಿಲ್ ವಿಜಯ ದಿವಸದ ಸವಿನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img