ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ


Logo

Published Date: 02-Aug-2024 Link-Copied

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕದ ಸ್ವಯಂಸೇವಕ ನಾಯಕ ರಾಮಕೃಷ್ಣ ಶರ್ಮ ಎನ್. ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ಸಹಯೋಗದೊಂದಿಗೆ ಆ.6 ರಿಂದ 12 ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು 20 ಸ್ವಯಂಸೇವಕರು ಪ್ರತಿನಿಧಿಸಲಿದ್ದು, ಎಸ್.ಡಿ.ಎಂ. ಎನ್.ಎಸ್.ಎಸ್. ಘಟಕವನ್ನು ರಾಮಕೃಷ್ಣ ಶರ್ಮ ಪ್ರತಿನಿಧಿಸಲಿದ್ದಾರೆ. ದ್ವಿತೀಯ ಬಿ.ಕಾಂ. ವಿದ್ಯಾರ್ಥಿಯಾಗಿರುವ ಇವರು ಬೆಳ್ತಂಗಡಿಯ ಎನ್. ಮಹಾಲಿಂಗೇಶ್ವರ ಭಟ್ ಮತ್ತು ವಿದ್ಯಾ ದಂಪತಿಯ ಪುತ್ರ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img