ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ


Logo

Published Date: 03-Aug-2024 Link-Copied

ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕಾರ್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ ವಿಶಿಷ್ಟ ಧ್ವನಿಗಳನ್ನು ಅಭಿವೃದ್ಧಿ ಪಡಿಸಲು ಸಹಾಯ ಮಾಡುತ್ತವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಕ್ಷಕರಾದವರು ಕಲೆಗಾರರು, ನಾಟಕಗಾರರು ಆಗಿರಬೇಕು. ಯಾವುದೇ ವಿಷಯವನ್ನು ಕಲೆ ಮತ್ತು ನಾಟಕದ ಮೂಲಕ ಕಲಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ವಿಷಯವನ್ನು ಮನ ಮುಟ್ಟವಂತೆ ತಿಳಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ. ಶಂಕರಮೂರ್ತಿ ಹೆಚ್. ಕೆ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಜಾನೆಟ್ ಸ್ವಾಗತಿಸಿ, ಅಪೂರ್ವ ವಂದಿಸಿ, ಕಾವ್ಯ ಕೆ ಕಾರ್ಯಕ್ರಮ ನಿರೂಪಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img