Article Image

ಎಕ್ಸಲೆಂಟ್: ನಾಲ್ಕು ಕ್ಷೇತ್ರಗಳಲ್ಲಿ ಅರಳಿದ ಸಸ್ಯ ಶ್ಯಾಮಲಾ-2026ದ ದಿವ್ಯ ಸಂಕಲ್ಪ

Article Image

ಎಕ್ಸಲೆಂಟ್: ನಾಲ್ಕು ಕ್ಷೇತ್ರಗಳಲ್ಲಿ ಅರಳಿದ ಸಸ್ಯ ಶ್ಯಾಮಲಾ-2026ದ ದಿವ್ಯ ಸಂಕಲ್ಪ

ಮೂಡುಬಿದಿರೆ: ಮರವೆಂದರೆ ಪ್ರಕೃತಿಯ ಮೌನ ಪ್ರಾರ್ಥನೆ; ಅದನ್ನು ನೆಡುವ ಕೈಗಳು ಮಾನವೀಯತೆಯ ಮಹಾಮಂತ್ರ. ಭೂಮಿಗೆ ಹಸಿರು ಹೊದಿಸಿ, ಮುಂದಿನ ಪೀಳಿಗೆಗೆ ಜೀವಸಂಪತ್ತಿನ ಉಡುಗೊರೆ ನೀಡುವ ಮಹೋನ್ನತ ಧ್ಯೇಯದೊಂದಿಗೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ ಪರಿಸರ ಪ್ರೇಮಿ ರಸಿಕ ಅವರ ಪವಿತ್ರ ಸ್ಮರಣಾರ್ಥ ಆಯೋಜಿಸಲಾದ “ಸಸ್ಯ ಶ್ಯಾಮಲಾ–2026” ಸಾವಿರ ಗಿಡಗಳನ್ನು ನೆಡುವ ಹಾಗೂ ಹಂಚುವ ಹಸಿರು ಅಭಿಯಾನವು ಒಂದೇ ದಿನದಲ್ಲಿ ನಾಲ್ಕು ವಿವಿಧ ಪವಿತ್ರ ಕ್ಷೇತ್ರಗಳಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಪವಿತ್ರ ಕರೀಂಜೆ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭಕ್ತಿಭಾವ ಮತ್ತು ಪರಿಸರ ಪ್ರಜ್ಞೆಯ ಸಮ್ಮಿಲನದೊಂದಿಗೆ ಜರುಗಿದ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಅನುಗ್ರಹ ಸಂದೇಶ ನೀಡಿದರು. “ಪ್ರಕೃತಿಯೇ ಪರಬ್ರಹ್ಮನ ಪ್ರತ್ಯಕ್ಷ ರೂಪ. ಮರವನ್ನು ನೆಡುವುದು ಎಂದರೆ ಮಣ್ಣಿನಲ್ಲಿ ಸಸಿಯನ್ನಲ್ಲ, ಧರ್ಮದ ಬೀಜವನ್ನೇ ಬಿತ್ತುವುದು. ಪ್ರತಿಯೊಂದು ಗಿಡವೂ ದೇವರ ಉಸಿರು, ಪ್ರತಿಯೊಂದು ಮರದ ನೆರಳೂ ದೈವಾನುಗ್ರಹದ ವಿಸ್ತಾರ. ಪರಿಸರ ಸಂರಕ್ಷಣೆ ಇಂದಿನ ಅಗತ್ಯ ಮಾತ್ರವಲ್ಲ; ಅದು ಪ್ರತಿಯೊಬ್ಬರ ಆಧ್ಯಾತ್ಮಿಕ ಹೊಣೆಗಾರಿಕೆಯೂ ಆಗಿದೆ,” ಎಂದು ಸ್ವಾಮೀಜಿಯವರು ಆಶೀರ್ವಚನ ನೀಡಿದರು. ನಾಲ್ಕೂ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರು ಮಾತನಾಡಿ,“‘ಹಸಿರೇ ಉಸಿರಾಗಲಿ… ನೆನಪೇ ಬೆಳಕಾಗಲಿ…’ ಎಂಬ ನಮ್ಮ ಸಂಕಲ್ಪ ಕೇವಲ ಘೋಷಣೆಯಲ್ಲ; ಅದು ಮುಂದಿನ ಪೀಳಿಗೆಗೆ ನೀಡುತ್ತಿರುವ ಜೀವದ ವಾಗ್ದಾನ. ಪರಿಸರವನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು. ವಿದ್ಯಾರ್ಥಿಗಳ ಹೃದಯದಲ್ಲಿ ಪರಿಸರ ಪ್ರೀತಿಯ ಬೀಜ ಮೊಳಕೆಯೊಡೆದರೆ, ನಾಳೆಯ ಸಮಾಜ ಹಸಿರಿನ ಸಂಸ್ಕೃತಿಯಿAದ ಸಮೃದ್ಧವಾಗುತ್ತದೆ. ಪ್ರತಿಯೊಬ್ಬರೂ ಒಂದು ಗಿಡವನ್ನು ನೆಟ್ಟು, ಅದನ್ನು ಮರವಾಗಿ ಬೆಳೆಸುವವರೆಗೆ ಪಾಲನೆ ಮಾಡಬೇಕು,” ಎಂದು ಅವರು ಕರೆ ನೀಡಿದರು. ಪವಿತ್ರ ಕ್ಷೇತ್ರಗಳಲ್ಲಿ ಹಸಿರು ಯಜ್ಞದ ಪಯಣ: ಇರ್ವತ್ತೂರು: ಈ ಮಹತ್ವದ ಹಸಿರು ಅಭಿಯಾನಕ್ಕೆ ಕೊಳಕ್ಕೆ ಆದಿನಾಥ ಬಸದಿಯಲ್ಲಿ ಅರ್ಥಪೂರ್ಣ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ ಅವರು ಮಾತನಾಡಿ, ಶಿಕ್ಷಣದ ಜೊತೆಗೆ ಪರಿಸರ ಸಂರಕ್ಷಣೆಯ ಸಂಸ್ಕಾರವನ್ನು ಬೆಳೆಸುತ್ತಿರುವ ಎಕ್ಸಲೆಂಟ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ಪ್ರಗತಿಪರ ಕೃಷಿಕ ಸುಭಾಷ್‌ಚಂದ್ರ ಚೌಟ, ಚಂದ್ರರಾಜ ಅಧಿಕಾರಿi, ಧರಣೇಂದ್ರ ಜೈನ್ ಮಾಂಟ್ರಾಡಿ, ಶಕುಂತಳಾ ಜೈನ್ ಬಜಗೋಳಿ ಉಪಸ್ಥಿತರಿದ್ದರು. ಮರ್ಯಾಡಿ: ಮರ್ಯಾಡಿಯ ನಡ್ಯೋಡಿ ದೈವಸ್ಥಾನದ ಪಾವನ ಪರಿಸರದಲ್ಲಿ ಮೂರನೇ ಹಂತದ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಪ್ರಸನ್ನ ಹೆಗ್ಡೆ ಅವರು, ಕಾಲೇಜುಗಳು ಕೇವಲ ಪಠ್ಯದ ಕೇಂದ್ರಗಳಾಗದೆ ಪ್ರಕೃತಿಯ ಪರಮಪಾಠ ಕಲಿಸುವ ಸಂಸ್ಕಾರ ಕೇಂದ್ರಗಳಾಗಬೇಕು ಎಂದು ಎಕ್ಸಲೆಂಟ್ ಸಂಸ್ಥೆಯ ಹೆಜ್ಜೆಯನ್ನು ಪ್ರಶಂಸಿಸಿದರು. ಮಾರೂರು ಖಂಡಿಗೆ ರಾಮದಾಸ ಆಸ್ರಣ್ಣ, ವಿಶ್ವನಾಥ ಕೋಟ್ಯಾನ್, ಉದ್ಯಮಿ ಆರ್. ಕೆ. ಭಟ್ ಉಪಸ್ಥಿತರಿದ್ದರು. ಕಲ್ಲಬೆಟ್ಟು: ಶ್ರೀ ಮಹಾಮಾಯಿ ದೇವಸ್ಥಾನದ ಸನ್ನಿಧಿಯಲ್ಲಿ ನೆರವೇರಿತು. ದೇವಸ್ಥಾನದ ಕೋಶಾಧಿಕಾರಿ ರಮೇಶಚಂದ್ರ ಪಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇವಾಲಯಗಳು ಪ್ರಕೃತಿಯ ಸಂರಕ್ಷಣೆಯ ಸಂಕಲ್ಪ ಮೂಡುವ ಪುಣ್ಯಭೂಮಿಗಳಾಗಬೇಕು ಎಂದರು. ವೇದಿಕೆಯಲ್ಲಿ ದೇವಸ್ಥಾನದ ಅಧ್ಯಕ್ಷ ಸೂರ್ಯ ಭಟ್, ಶಿವಾನಂದ ಪೈ, ಕಾರ್ಯದರ್ಶಿ ಕಮಲಾಕ್ಷ ರಾವ್ ಉಪಸ್ಥಿತರಿದ್ದರು. ಜನಮನ ಸೆಳೆದ ಸಸಿಗಳ ವಿತರಣೆ: ಈ ನಿರಂತರ ಅಭಿಯಾನದ ಅಂಗವಾಗಿ ಮಾವು, ಪೇರಳೆ, ನೆಲ್ಲಿಕಾಯಿ, ನೇರಳೆ, ಬೇವು ಸೇರಿದಂತೆ ಸುಮಾರು ಐವತ್ತು ಬಗೆಯ ಫಲ ಹಾಗೂ ನೆರಳು ನೀಡುವ ಅಪರೂಪದ ಸಸಿಗಳನ್ನು ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು. ನಾಲ್ಕೂ ಕಾರ್ಯಕ್ರಮಗಳಲ್ಲಿ ಸಂಸ್ಥೆಯ ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ವರೂಪ್ ಜೈನ್, ಎನ್.ಎಸ್.ಎಸ್. ಅಧಿಕಾರಿ ಅಶೋಕ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ, ಶಿಕ್ಷಕಿಯರಾದ ರಂಜಿತಾ, ವಿಮಲಾ, ಹರ್ಷಿತ ಬಂಗೇರ ಸೇರಿದಂತೆ ಸಂಸ್ಥೆಯ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು, ದೇವಸ್ಥಾನದ ಪದಾಧಿಕಾರಿಗಳು ಹಾಗೂ ನೂರಾರು ಪರಿಸರಾಸಕ್ತ ಸಾರ್ವಜನಿಕರು ಭಾಗವಹಿಸಿ ಹಸಿರು ಸಂಕಲ್ಪಕ್ಕೆ ಸಾಕ್ಷಿಯಾದರು.

ಆಳ್ವಾಸ್‌: ಕನ್ನಡ ಗಾನ ಗುಚ್ಛ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ

Article Image

ಆಳ್ವಾಸ್‌: ಕನ್ನಡ ಗಾನ ಗುಚ್ಛ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ `ಕನ್ನಡ ಗಾನ ಗುಚ್ಛ' ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಸಂಯೋಜಿಸಿದ್ದಾರೆ. ಕನ್ನಡದ ವಿವಿಧ ಪ್ರಾಕಾರಗಳ ವೈವಿಧ್ಯಮಯ ಹಾಡುಗಳನ್ನು ರಂಗಸಾಧ್ಯತೆಗಳ ಮೂಲಕ ಪ್ರಸ್ತುತಪಡಿಸುವ ಎರಡು ಗಂಟೆಗಳ ವಿಶೇಷ ಕಾರ್ಯಕ್ರಮ ಇದಾಗಿದ್ದು ತಂಡದಲ್ಲಿ ಡಾ| ಜೀವನ್ ರಾಂ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ ಬೆಂಗಳೂರು, ವಿಸ್ಮಯ ಪೈ, ಸಿಂಚನಾ ಶೆಟ್ಟಿ ಹಾಗೂ ಕೃಪಾ ನಾಯಕ್ ಮುಂತಾದವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮ ಇರುವುದಿಲ್ಲ ಮತ್ತು ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಆರಂಭವಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಸೇವೆಯಲ್ಲಿರುವ ಸಂತೋಷ ಬೇರೆಲ್ಲಿಯೂ ಸಿಗಲಾರದು. ನಮ್ಮೆಲ್ಲಾ ವೈದ್ಯರಲ್ಲಿ ಆ ಸೇವಾ ಮನೋಭಾವವಿದೆ ಎಂದರು. ಅವರು ವೈದ್ಯರ ದಿನಾಚರಣೆಯ ಅಂಗವಾಗಿ ಇಲ್ಲಿನ ವೈದ್ಯರನ್ನು ಸನ್ಮಾನಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯರಿಗೆ ಅವರ ಪರಿವಾರದವರ ಸಹಕಾರ ಇರುವುದರಿಂದ ಮಾತ್ರ ಇಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಕೇವಲ ವೈದ್ಯಕೀಯ ಸಲಕರಣೆಗಳು ಇದ್ದರೆ ಸಾಲದು ಅದನ್ನು ಸರಿಯಾಗಿ ಬಳಸುವವರ ಮೂಲಕ ರೋಗಿಗಳಿಗೆ ಉಪಯುಕ್ತವಾಗಬೇಕು. ಅಂತಹ ಕೆಲಸ ಈ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ನಗರದ ಹೈಟೆಕ್ ವೈದ್ಯಕೀಯ ಸೇವೆ ಕಡಿಮೆ ಖರ್ಚಿನಲ್ಲಿ ಸಿಗಬೇಕು ಎಂಬ ಉದ್ದೇಶದಿಂದ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಇಲ್ಲಿನ ವೈದ್ಯಕೀಯ ಸೇವೆಯನ್ನು ಗಮನಿಸಿ ನಗರದ ವೈದ್ಯರು ಅತ್ಯಂತ ಉತ್ಸಾಹದಿಂದ ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಮುಂದೆ ಬರುತ್ತಿರುವುದು ಖುಷಿ ಕೊಟ್ಟಿದೆ. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಆಡಳಿತದಿಂದ ಆಸ್ಪತ್ರೆ ಬೆಳೆಯುತ್ತಿದೆ. ಅತೀ ಶೀಘ್ರದಲ್ಲಿ ಎಂ.ಆರ್ ಸ್ಕ್ಯಾನಿಂಗ್ ಸೇವೆ ಇಲ್ಲಿ ದೊರೆಯಲಿದೆ ಎಂದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಗಿಡ ಹೆಮ್ಮರವಾಗಿ ಬೆಳೆಯುವಂತೆ ನಮ್ಮ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಬೆಳೆಯುತ್ತಿದೆ. ಮರದ ರೆಂಬೆ ಕೊಂಬೆಗಳು ವಿಸ್ತಾರವಾಗುವಂತೆ ಇಲ್ಲಿ ಹೊಸ ಹೊಸ ವಿಭಾಗಗಳು ಕೂಡ ತೆರೆದುಕೊಳ್ಳುತ್ತಿವೆ. ಸೇವಾ ಮನೋಭಾವ ಹೊಂದಿರುವ ಇಲ್ಲಿನ ವೈದ್ಯರು ಕೇವಲ ವೃತ್ತಿಯಿಂದ ಮಾತ್ರ ಅಲ್ಲ ಹೃದಯದಿಂದ ವೈದ್ಯರಾಗಿದ್ದಾರೆ. ವೈದ್ಯರ ಸೇವೆಗೆ ಬೆಲೆ ಕಟ್ಟಲಾಗದು. ಅತ್ಯುತ್ತಮ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಎಸ್.ಡಿ.ಎಂ ಬ್ರಾಂಡ್‌ಗೆ ಹೊಸ ಗರಿಯಾಗಿ ಶೋಭಿಸುತ್ತಿದೆ. ಇದಕ್ಕೆಲ್ಲ ಕಾರಣ ಎಲ್ಲರ ಶ್ರಮದೊಂದಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಕಠಿಣ ಪರಿಶ್ರಮ ಮತ್ತು ಎಲ್ಲರನ್ನು ಒಗ್ಗೂಡಿ ಕೆಲಸ ಮಾಡಿಸುವ ಚಾಣಾಕ್ಯತೆ ಇದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 2025-26ರ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಸೇವೆಯನ್ನು ಡಾ. ಹೆಗ್ಗಡೆಯವರ ನಿದೇರ್ಶನದಂತೆ ಉಚಿತವಾಗಿ ನೀಡಲಾಗಿದೆ. 11 ಹಾಸಿಗೆಗಳ ಸುಸಜ್ಜಿತ ಹವಾನಿಯಂತ್ರಿತ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, 2025-26ರಲ್ಲಿ 1.44 ಕೋಟಿ ಮೊತ್ತದ 9644 ಉಚಿತ ಡಯಾಲಿಸಿಸ್ ಸೇವೆ ನೀಡಲಾಗಿದೆ. 60 ಕ್ಕೂ ಹೆಚ್ಚು ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯರು ಇಲ್ಲಿ ಲಭ್ಯವಿದ್ದಾರೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ಮಾತನಾಡಿ ಎಲ್ಲಾ ವಿಭಾಗಗಳಲ್ಲಿ ತಜ್ಞ ವೈದ್ಯರಿದ್ದು, ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ಇಲ್ಲಿ ನೀಡಲಾಗುತ್ತಿದೆ ಎಂದರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ದ.ಕ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹೊರತು ಪಡಿಸಿ ಅತೀ ಹೆಚ್ಚು ಹೆರಿಗೆ ನಡೆಸುವ ಆಸ್ಪತ್ರೆ ನಮ್ಮದಾಗಿದೆ. ಇಲ್ಲಿ 2 ಸುಸಜ್ಜಿತ ಆಪರೇಶನ್ ಥಿಯೇಟರ್ ಇದ್ದು, ದಿನ ಒಂದಕ್ಕೆ 10 ರಿಂದ 15 ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ 40 ಲಕ್ಷ ರೂಪಾಯಿ ಮೌಲ್ಯದ ಲ್ಯಾಪರೋಸ್ಕೋಪಿಕ್ ಯಂತ್ರ ಅಳವಡಿಸಿದ್ದು, ಕಳೆದ ಮೇ ತಿಂಗಳಲ್ಲಿ 100 ಕ್ಕೂ ಹೆಚ್ಚು ಲ್ಯಾಪರೋಸ್ಕೋಪಿಕ್ ಸರ್ಜರಿ ನಡೆಸಲಾಗಿದೆ. ಲೇಸರ್ ಶಸ್ತ್ರಚಿಕಿತ್ಸೆ ಲ್ಯಾಪರೋಸ್ಕೋಪಿಕ್ ಸರ್ಜರಿ, ಎಂಡೋಸ್ಕೋಪಿಕ್ ಸರ್ಜರಿ ಸೇವೆ ಇಲ್ಲಿ ಲಭ್ಯವಿದ್ದು, ನ್ಯೂರೋ ಸರ್ಜರಿ ಸೇವೆ, ಎಮರ್ಜೆನ್ಸಿ ಮೆಡಿಸಿನ್, ಇಬ್ಬರು ಸಾಮಾನ್ಯ ಸರ್ಜರಿ, 5 ಮಂದಿ ಆರ್ಥೋಪೆಡಿಕ್ ಸರ್ಜನ್, ಕಣ್ಣಿನ ಶಸ್ತ್ರಚಿಕಿತ್ಸಾ ತಜ್ಞರು, ಕಿವಿ-ಮೂಗು ಗಂಟಲು ಸರ್ಜನ್, ಇಬ್ಬರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರೊಂದಿಗೆ ನಮ್ಮ ಸರ್ಜರಿ ತಂಡ ಬಲಶಾಲಿಯಾಗಿದೆ. ನೋವು ರಹಿತ ಹೆರಿಗೆ, ಕ್ಲಿಷ್ಟಕರವಾದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ, ಸೊಂಟ ಮತ್ತು ಮೊಣಕಾಲು ಶಸ್ತ್ರಚಿಕಿತೆ, ಬಾಯಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು. ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಮಾತನಾಡಿ ಡಾ. ಹೆಗ್ಗಡೆರ ಸಹಕಾರದಿಂದ ಈ ಆಸ್ಪತ್ರೆಯಲ್ಲಿ ಸರ್ಜರಿ ಮತ್ತು ಡ್ಯೂರಲ್ ರಿಪೇರ್ ಶಸ್ತ್ರಚಿಕಿತ್ಸೆಯನ್ನು ಯಸಸ್ವಿಯಾಗಿ ನಡೆಸಿದ್ದು, ವಿಶ್ವ ಮಟ್ಟದಲ್ಲಿ ನಮ್ಮ ಆಸ್ಪತ್ರೆ ಗುರುತಿಸಲ್ಪಟ್ಟಿದೆ. ಈ ಹಿಂದೆ ಸರ್ಜರಿ ಮಾಡಿಸಲು ಮಂಗಳೂರಿಗೆ ಹೋಗುತ್ತಿದ್ದ ಜನ ಇವತ್ತಿನ ದಿನಗಳಲ್ಲಿ ಇಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಿ ಎಂದು ನಮ್ಮ ವೈದ್ಯರಲ್ಲಿ ವಿನಂತಿ ಮಾಡುತ್ತಿದ್ದಾರೆ ಎಂದರು. ಡಾ| ಉಷಾ ಜಿ. ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಾ, ಡಾ. ಹೆಗ್ಗಡೆರ ಸಂಸ್ಥೆಯಲ್ಲಿ ವೈದ್ಯ ವೃತ್ತಿ ನಡೆಸಲು ಹೆಮ್ಮೆ ಎನಿಸುತ್ತಿದೆ. ನಂಬಿಕೆ, ವಿಶ್ವಾಸಗಳಿಗೆ ಹೆಸರುವಾಸಿಯಾಗಿರುವ ಎಸ್.ಡಿ.ಎಂ ಸಂಸ್ಥೆಯಲ್ಲಿ ದುಡಿಯುವುದೇ ನಮ್ಮ ಸುಯೋಗ ಎಂದರು. ವೈದ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಉತ್ತಮ ವಾತಾವರಣ ಇದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ ಜನಾರ್ದನ್ ಅವರ ಸಹಕಾರ ಮತ್ತು ಉತ್ತಮ ಆಡಳಿತ ನಮಗೆಲ್ಲಾ ಹೊಸ ಸ್ಪೂರ್ತಿಯನ್ನು ನೀಡುತ್ತಿದೆ ಎಂದರು. ಧರ್ಮಸ್ಥಳ ಬೀಡಿನ ಕು| ಮಾನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಡಾ. ಹೆಗ್ಗಡೆಯವರು ಸನ್ಮಾನಿಸಿದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಸೇವೆಯಲ್ಲಿರುವ ಸಂತೋಷ ಬೇರೆಲ್ಲಿಯೂ ಸಿಗಲಾರದು. ನಮ್ಮೆಲ್ಲಾ ವೈದ್ಯರಲ್ಲಿ ಆ ಸೇವಾ ಮನೋಭಾವವಿದೆ ಎಂದರು. ಅವರು ವೈದ್ಯರ ದಿನಾಚರಣೆಯ ಅಂಗವಾಗಿ ಇಲ್ಲಿನ ವೈದ್ಯರನ್ನು ಸನ್ಮಾನಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯರಿಗೆ ಅವರ ಪರಿವಾರದವರ ಸಹಕಾರ ಇರುವುದರಿಂದ ಮಾತ್ರ ಇಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಕೇವಲ ವೈದ್ಯಕೀಯ ಸಲಕರಣೆಗಳು ಇದ್ದರೆ ಸಾಲದು ಅದನ್ನು ಸರಿಯಾಗಿ ಬಳಸುವವರ ಮೂಲಕ ರೋಗಿಗಳಿಗೆ ಉಪಯುಕ್ತವಾಗಬೇಕು. ಅಂತಹ ಕೆಲಸ ಈ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ನಗರದ ಹೈಟೆಕ್ ವೈದ್ಯಕೀಯ ಸೇವೆ ಕಡಿಮೆ ಖರ್ಚಿನಲ್ಲಿ ಸಿಗಬೇಕು ಎಂಬ ಉದ್ದೇಶದಿಂದ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಇಲ್ಲಿನ ವೈದ್ಯಕೀಯ ಸೇವೆಯನ್ನು ಗಮನಿಸಿ ನಗರದ ವೈದ್ಯರು ಅತ್ಯಂತ ಉತ್ಸಾಹದಿಂದ ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಮುಂದೆ ಬರುತ್ತಿರುವುದು ಖುಷಿ ಕೊಟ್ಟಿದೆ. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಆಡಳಿತದಿಂದ ಆಸ್ಪತ್ರೆ ಬೆಳೆಯುತ್ತಿದೆ. ಅತೀ ಶೀಘ್ರದಲ್ಲಿ ಎಂ.ಆರ್ ಸ್ಕ್ಯಾನಿಂಗ್ ಸೇವೆ ಇಲ್ಲಿ ದೊರೆಯಲಿದೆ ಎಂದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಗಿಡ ಹೆಮ್ಮರವಾಗಿ ಬೆಳೆಯುವಂತೆ ನಮ್ಮ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಬೆಳೆಯುತ್ತಿದೆ. ಮರದ ರೆಂಬೆ ಕೊಂಬೆಗಳು ವಿಸ್ತಾರವಾಗುವಂತೆ ಇಲ್ಲಿ ಹೊಸ ಹೊಸ ವಿಭಾಗಗಳು ಕೂಡ ತೆರೆದುಕೊಳ್ಳುತ್ತಿವೆ. ಸೇವಾ ಮನೋಭಾವ ಹೊಂದಿರುವ ಇಲ್ಲಿನ ವೈದ್ಯರು ಕೇವಲ ವೃತ್ತಿಯಿಂದ ಮಾತ್ರ ಅಲ್ಲ ಹೃದಯದಿಂದ ವೈದ್ಯರಾಗಿದ್ದಾರೆ. ವೈದ್ಯರ ಸೇವೆಗೆ ಬೆಲೆ ಕಟ್ಟಲಾಗದು. ಅತ್ಯುತ್ತಮ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಎಸ್.ಡಿ.ಎಂ ಬ್ರಾಂಡ್‌ಗೆ ಹೊಸ ಗರಿಯಾಗಿ ಶೋಭಿಸುತ್ತಿದೆ. ಇದಕ್ಕೆಲ್ಲ ಕಾರಣ ಎಲ್ಲರ ಶ್ರಮದೊಂದಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಕಠಿಣ ಪರಿಶ್ರಮ ಮತ್ತು ಎಲ್ಲರನ್ನು ಒಗ್ಗೂಡಿ ಕೆಲಸ ಮಾಡಿಸುವ ಚಾಣಾಕ್ಯತೆ ಇದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 2025-26ರ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಸೇವೆಯನ್ನು ಡಾ. ಹೆಗ್ಗಡೆಯವರ ನಿದೇರ್ಶನದಂತೆ ಉಚಿತವಾಗಿ ನೀಡಲಾಗಿದೆ. 11 ಹಾಸಿಗೆಗಳ ಸುಸಜ್ಜಿತ ಹವಾನಿಯಂತ್ರಿತ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, 2025-26ರಲ್ಲಿ 1.44 ಕೋಟಿ ಮೊತ್ತದ 9644 ಉಚಿತ ಡಯಾಲಿಸಿಸ್ ಸೇವೆ ನೀಡಲಾಗಿದೆ. 60 ಕ್ಕೂ ಹೆಚ್ಚು ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯರು ಇಲ್ಲಿ ಲಭ್ಯವಿದ್ದಾರೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ಮಾತನಾಡಿ ಎಲ್ಲಾ ವಿಭಾಗಗಳಲ್ಲಿ ತಜ್ಞ ವೈದ್ಯರಿದ್ದು, ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ಇಲ್ಲಿ ನೀಡಲಾಗುತ್ತಿದೆ ಎಂದರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ದ.ಕ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹೊರತು ಪಡಿಸಿ ಅತೀ ಹೆಚ್ಚು ಹೆರಿಗೆ ನಡೆಸುವ ಆಸ್ಪತ್ರೆ ನಮ್ಮದಾಗಿದೆ. ಇಲ್ಲಿ 2 ಸುಸಜ್ಜಿತ ಆಪರೇಶನ್ ಥಿಯೇಟರ್ ಇದ್ದು, ದಿನ ಒಂದಕ್ಕೆ 10 ರಿಂದ 15 ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ 40 ಲಕ್ಷ ರೂಪಾಯಿ ಮೌಲ್ಯದ ಲ್ಯಾಪರೋಸ್ಕೋಪಿಕ್ ಯಂತ್ರ ಅಳವಡಿಸಿದ್ದು, ಕಳೆದ ಮೇ ತಿಂಗಳಲ್ಲಿ 100 ಕ್ಕೂ ಹೆಚ್ಚು ಲ್ಯಾಪರೋಸ್ಕೋಪಿಕ್ ಸರ್ಜರಿ ನಡೆಸಲಾಗಿದೆ. ಲೇಸರ್ ಶಸ್ತ್ರಚಿಕಿತ್ಸೆ ಲ್ಯಾಪರೋಸ್ಕೋಪಿಕ್ ಸರ್ಜರಿ, ಎಂಡೋಸ್ಕೋಪಿಕ್ ಸರ್ಜರಿ ಸೇವೆ ಇಲ್ಲಿ ಲಭ್ಯವಿದ್ದು, ನ್ಯೂರೋ ಸರ್ಜರಿ ಸೇವೆ, ಎಮರ್ಜೆನ್ಸಿ ಮೆಡಿಸಿನ್, ಇಬ್ಬರು ಸಾಮಾನ್ಯ ಸರ್ಜರಿ, 5 ಮಂದಿ ಆರ್ಥೋಪೆಡಿಕ್ ಸರ್ಜನ್, ಕಣ್ಣಿನ ಶಸ್ತ್ರಚಿಕಿತ್ಸಾ ತಜ್ಞರು, ಕಿವಿ-ಮೂಗು ಗಂಟಲು ಸರ್ಜನ್, ಇಬ್ಬರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರೊಂದಿಗೆ ನಮ್ಮ ಸರ್ಜರಿ ತಂಡ ಬಲಶಾಲಿಯಾಗಿದೆ. ನೋವು ರಹಿತ ಹೆರಿಗೆ, ಕ್ಲಿಷ್ಟಕರವಾದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ, ಸೊಂಟ ಮತ್ತು ಮೊಣಕಾಲು ಶಸ್ತ್ರಚಿಕಿತೆ, ಬಾಯಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು. ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಮಾತನಾಡಿ ಡಾ. ಹೆಗ್ಗಡೆರ ಸಹಕಾರದಿಂದ ಈ ಆಸ್ಪತ್ರೆಯಲ್ಲಿ ಸರ್ಜರಿ ಮತ್ತು ಡ್ಯೂರಲ್ ರಿಪೇರ್ ಶಸ್ತ್ರಚಿಕಿತ್ಸೆಯನ್ನು ಯಸಸ್ವಿಯಾಗಿ ನಡೆಸಿದ್ದು, ವಿಶ್ವ ಮಟ್ಟದಲ್ಲಿ ನಮ್ಮ ಆಸ್ಪತ್ರೆ ಗುರುತಿಸಲ್ಪಟ್ಟಿದೆ. ಈ ಹಿಂದೆ ಸರ್ಜರಿ ಮಾಡಿಸಲು ಮಂಗಳೂರಿಗೆ ಹೋಗುತ್ತಿದ್ದ ಜನ ಇವತ್ತಿನ ದಿನಗಳಲ್ಲಿ ಇಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಿ ಎಂದು ನಮ್ಮ ವೈದ್ಯರಲ್ಲಿ ವಿನಂತಿ ಮಾಡುತ್ತಿದ್ದಾರೆ ಎಂದರು. ಡಾ| ಉಷಾ ಜಿ. ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಾ, ಡಾ. ಹೆಗ್ಗಡೆರ ಸಂಸ್ಥೆಯಲ್ಲಿ ವೈದ್ಯ ವೃತ್ತಿ ನಡೆಸಲು ಹೆಮ್ಮೆ ಎನಿಸುತ್ತಿದೆ. ನಂಬಿಕೆ, ವಿಶ್ವಾಸಗಳಿಗೆ ಹೆಸರುವಾಸಿಯಾಗಿರುವ ಎಸ್.ಡಿ.ಎಂ ಸಂಸ್ಥೆಯಲ್ಲಿ ದುಡಿಯುವುದೇ ನಮ್ಮ ಸುಯೋಗ ಎಂದರು. ವೈದ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಉತ್ತಮ ವಾತಾವರಣ ಇದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ ಜನಾರ್ದನ್ ಅವರ ಸಹಕಾರ ಮತ್ತು ಉತ್ತಮ ಆಡಳಿತ ನಮಗೆಲ್ಲಾ ಹೊಸ ಸ್ಪೂರ್ತಿಯನ್ನು ನೀಡುತ್ತಿದೆ ಎಂದರು. ಧರ್ಮಸ್ಥಳ ಬೀಡಿನ ಕು| ಮಾನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಡಾ. ಹೆಗ್ಗಡೆಯವರು ಸನ್ಮಾನಿಸಿದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಳ್ವಾಸ್: ಹಸಿರು ಸಂವಾದ ಅಭಿಯಾನಕ್ಕೆ ಚಾಲನೆ

Article Image

ಆಳ್ವಾಸ್: ಹಸಿರು ಸಂವಾದ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ಕರಾವಳಿ ನದಿಗಳ ಮೂಲಕ ಸಮುದ್ರ ಸೇರುವ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ಮೂಲದಲ್ಲೇ ತಡೆಗಟ್ಟುವ ಉದ್ದೇಶದಿಂದ ರೂಪಿಸಲಾದ ಮಹತ್ವಾಕಾಂಕ್ಷೆಯ ‘ಹಸಿರು ಸಂವಾದ’ ಅಭಿಯಾನಕ್ಕೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪರ್ಯಾವರಣ ಸಂರಕ್ಷಣಾ ತಂಡ ಹಾಗೂ ವಿವಿಧ ಶೈಕ್ಷಣಿಕ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು, ಕೈಗಾರಿಕೆಗಳು ಮತ್ತು ಆಡಳಿತ ವ್ಯವಸ್ಥೆಯ ಸಹಭಾಗಿತ್ವದಲ್ಲಿ ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಆರಂಭಗೊಂಡಿದ್ದು, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮತ್ತು ಸುಸ್ಥಿರ ಪರಿಸರ ಸಂರಕ್ಷಣೆಗೆ ಮಾದರಿಯಾಗುವ ಗುರಿ ಹೊಂದಿದೆ. ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ‍್ಯದರ್ಶಿ ಜಯಲಕ್ಷ್ಮೀ ರಾಯ್ಕೋಡ್ ಮಾತನಾಡಿ, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯ ಪರಸ್ಪರ ಸಂಬಂಧ ಹೊಂದಿದ್ದು, ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಜನರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯ. ಸರ್ಕಾರ ಮತ್ತು ಸಾರ್ವಜನಿಕರ ಸಹಕಾರ ಚಪ್ಪಾಳೆಯ ಎರಡು ಕೈಗಳಂತೆ ಒಂದಾದಾಗ ಮಾತ್ರ ಅಭಿವೃದ್ಧಿಯ ಸದ್ದು ಮೂಡುತ್ತದೆ. ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಪರಿಸರಕ್ಕೂ ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಅಪಾಯವನ್ನುಂಟು ಮಾಡುತ್ತಿದೆ. ಆರೋಗ್ಯಕರ ಜೀವನಶೈಲಿ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಆಳವಡಿಸಿಕೊಳ್ಳುವುದು ಇಂದಿನ ಅಗತ್ಯ. ಪರಿಸರದ ಬಗ್ಗೆ ಪ್ರತಿಯೊಬ್ಬರೂ ವೈಯಕ್ತಿಕ ಹೊಣೆಗಾರಿಕೆ ಹೊಂದಿದಾಗ ಮಾತ್ರ ಸುಸ್ಥಿರ ಅಭಿವೃದ್ಧಿಯ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಲವು ವರ್ಷಗಳಿಂದ ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಮೌಲ್ಯಾಧಾರಿತ ಕಾರ್ಯಕ್ರಮಗಳ ಮೂಲಕ ಮಾದರಿ ಕಾರ್ಯಗಳನ್ನು ನಡೆಸುತ್ತಿದೆ ಎಂದು ಶ್ಲಾಘಿಸಿದರು. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚುತ್ತಿರುವ ಕೆಲವು ಆರೋಗ್ಯ ಸಮಸ್ಯೆಗಳಿಗೆ, ವಿಶೇಷವಾಗಿ ಗರ್ಭಕೋಶ ಸಂಬಂಧಿತ ತೊಂದರೆಗಳಿಗೆ, ಒಂದು ಬಾರಿ ಬಳಸಿ ತ್ಯಜಿಸುವ ಸ್ಯಾನಿಟರಿ ಹಾಗೂ ಅಡಲ್ಟ್ ಪ್ಯಾಡ್‌ಗಳಲ್ಲಿ ಬಳಸಲಾಗುವ ಕೆಲವು ರಾಸಾಯನಿಕಗಳ ಪರಿಣಾಮವೂ ಕಾರಣವಾಗಿರಬಹುದೆಂಬ ಆತಂಕಗಳು ವ್ಯಕ್ತವಾಗುತ್ತಿವೆ. ಆದ್ದರಿಂದ ಇಂತಹ ಉತ್ಪನ್ನಗಳ ಬಳಕೆ, ಸುರಕ್ಷಿತ ವಿಲೇವಾರಿ ಹಾಗೂ ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಪರ್ಯಾವರಣ ಸಂರಕ್ಷಣಾ ತಂಡದ ಪ್ರಾಂತ ಸಂಯೋಜಕ ವೆಂಕಟೇಶ್ ಸಂಗನಾಳ್ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಸ್ವಚ್ಛತಾ ಅಭಿಯಾನವಾಗಿರದೆ, ಜನರ ಜೀವನಶೈಲಿಯಲ್ಲಿ ಬದಲಾವಣೆ ತರುವ ಸಾಮಾಜಿಕ ಚಳವಳಿಯಾಗಬೇಕು ಎಂದರು. ಹಸಿರು ಸಂವಾದ ಅಭಿಯಾನವು ಕೇವಲ ಒಂದು ಕಾರ್ಯಕ್ರಮವಲ್ಲ; ಅದು ಪ್ರತಿ ಮನೆ ಮತ್ತು ಪ್ರತಿ ಗ್ರಾಮವನ್ನು ತಲುಪುವ ಜನಾಂದೋಲನವಾಗಿ ಮೂಡಿಬರಬೇಕು ಎಂದರು. ಇಂದಿನ ದಿನಗಳಲ್ಲಿ ಜನರ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವಂತೆ ಬಳಕೆಯ ವಸ್ತುಗಳ ಪ್ರಮಾಣವೂ ಹೆಚ್ಚುತ್ತಿದ್ದು, ಅದರೊಂದಿಗೆ ತ್ಯಾಜ್ಯದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಬಳಕೆ ಆಧಾರಿತ ಜೀವನಶೈಲಿಯ ಪರಿಣಾಮವಾಗಿ ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾಗಿದೆ ಎಂದು ಹೇಳಿದರು. ಈ ಹಿಂದೆ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದ ಜೀವನಶೈಲಿಯ ಬದಲಾವಣೆಗಳು ಈಗ ಗ್ರಾಮೀಣ ಪ್ರದೇಶಗಳಿಗೂ ವೇಗವಾಗಿ ವ್ಯಾಪಿಸುತ್ತಿವೆ. ಇದರ ಪರಿಣಾಮವಾಗಿ ಗ್ರಾಮಗಳಲ್ಲಿಯೂ ಪ್ಲಾಸ್ಟಿಕ್ ಹಾಗೂ ಇತರ ಘನ ತ್ಯಾಜ್ಯದ ಸಮಸ್ಯೆ ಗಂಭೀರ ಸ್ವರೂಪ ಪಡೆಯುತ್ತಿದೆ. ಆದ್ದರಿಂದ ಸಮಸ್ಯೆ ಉಲ್ಬಣವಾಗುವ ಮುನ್ನವೇ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದರು. ಹಸಿರು ಸಂವಾದ ಅಭಿಯಾನದ ಮೂಲಕ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿ, ಗ್ರಾಮ ಮಟ್ಟದಲ್ಲೇ ಸುಸ್ಥಿರ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕರಾವಳಿ ಕರ್ನಾಟಕವು ಒಂದು ಕಡೆ ಅರಬ್ಬಿ ಸಮುದ್ರ ಹಾಗೂ ಮತ್ತೊಂದು ಕಡೆ ವಿಶ್ವದ ಜೀವವೈವಿಧ್ಯದ ಅತ್ಯಂತ ಸೂಕ್ಷ್ಮ ಪರಿಸರ ವಲಯಗಳಲ್ಲಿ ಒಂದಾದ ಪಶ್ಚಿಮ ಘಟ್ಟಗಳಿಂದ ಆವೃತವಾಗಿರುವ ಅಪರೂಪದ ಭೌಗೋಳಿಕ ಪ್ರದೇಶವಾಗಿದೆ. ಇಂತಹ ಅಮೂಲ್ಯ ನೈಸರ್ಗಿಕ ಪರಿಸರ ವ್ಯವಸ್ಥೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದರು. ಪಶ್ಚಿಮ ಘಟ್ಟಗಳು ಈ ಭಾಗದ ಜೀವನಾಡಿ ಹಾಗೂ ಶ್ವಾಸಕೋಶದಂತಿವೆ. ಅವು ಕೇವಲ ಜೀವವೈವಿಧ್ಯದ ತಾಣಗಳಷ್ಟೇ ಅಲ್ಲ, ಕರಾವಳಿ ಭಾಗದ ಹವಾಮಾನ ಸಮತೋಲನ, ಜಲಸಂಪನ್ಮೂಲ ಮತ್ತು ಪರಿಸರ ಆರೋಗ್ಯವನ್ನು ಕಾಪಾಡುವ ಪ್ರಮುಖ ನೈಸರ್ಗಿಕ ವ್ಯವಸ್ಥೆಯಾಗಿವೆ. ಆದ್ದರಿಂದ ಪರಿಸರ ಸಂರಕ್ಷಣೆಯನ್ನು ಅಭಿವೃದ್ಧಿಗೆ ವಿರುದ್ಧವಾದ ವಿಚಾರವಾಗಿ ನೋಡದೆ, ಸುಸ್ಥಿರ ಅಭಿವೃದ್ಧಿಯ ಅವಿಭಾಜ್ಯ ಅಂಗವಾಗಿ ಪರಿಗಣಿಸಬೇಕು ಎಂದರು. ‘ಹಸಿರು ಸಂವಾದ' ಅಭಿಯಾನವು ಕೇವಲ ತ್ಯಾಜ್ಯ ನಿರ್ವಹಣೆಯ ಕಾರ್ಯಕ್ರಮವಾಗಿರದೆ, ಸಮಾಜದಲ್ಲಿ ಪರಿಸರದ ಬಗ್ಗೆ ಜಾಗೃತಿ, ಹೊಣೆಗಾರಿಕೆ ಮತ್ತು ವರ್ತನಾತ್ಮಕ ಬದಲಾವಣೆಯನ್ನು ತರುವ ಜನಾಂದೋಲನವಾಗಿ ರೂಪುಗೊಳ್ಳಬೇಕು. ಈ ಅಭಿಯಾನದ ನಿಜವಾದ ಯಶಸ್ಸು ಸಾಮಾಜಿಕ ಪರಿವರ್ತನೆಯಲ್ಲಿ ಅಡಗಿದೆ ಎಂದರು. ‘ಹಸಿರು ಸಂವಾದ’ ಅಭಿಯಾನದ ಕುರಿತು ವಿವರಣೆ ನೀಡಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್, ಸಾಂಪ್ರದಾಯಿಕ ಸ್ವಚ್ಛತಾ ಕಾರ್ಯಾಚರಣೆಗಳನ್ನು ಮೀರಿ, ತ್ಯಾಜ್ಯವು ನದಿಗಳ ಮೂಲಕ ಸಮುದ್ರ ಸೇರಿ ಮೈಕ್ರೋಪ್ಲಾಸ್ಟಿಕ್ ಆಗಿ ಪರಿವರ್ತನೆಯಾಗುವುದನ್ನು ತಡೆಯಲು ಮೂಲ ಹಂತದಲ್ಲೇ ವೈಜ್ಞಾನಿಕ ಹಾಗೂ ಸಮುದಾಯ ಆಧಾರಿತ ವ್ಯವಸ್ಥೆಯನ್ನು ರೂಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜನರ ಪಾಲ್ಗೊಳ್ಳುವಿಕೆ, ಸ್ಥಳೀಯ ಆಡಳಿತದ ಹೊಣೆಗಾರಿಕೆ ಮತ್ತು ವಲಯ ಆರ್ಥಿಕತೆ ಆಧಾರಿತ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ನಿರ್ಮಿಸಲು ಅಭಿಯಾನ ಒತ್ತು ನೀಡಲಿದೆ. ಈ ಯೋಜನೆಯಡಿ ಪಾವಂಜೆ (ಗುರುಪುರ), ನಂದಿನಿ ಹಾಗೂ ಶಾಂಭವಿ ನದಿಗಳ ಜಲಾನಯನ ಪ್ರದೇಶದ 46 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ನದಿಗಳ ಮೂಲಕ ಸಮುದ್ರಕ್ಕೆ ಸೇರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿತಗೊಳಿಸಲು ಗ್ರಾಮ ಮಟ್ಟದಲ್ಲಿಯೇ ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಅಭಿಯಾನವನ್ನು ಮೂರು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತವು ಜುಲೈ–ಆಗಸ್ಟ್ 2026ರವರೆಗೆ ನಡೆಯಲಿದ್ದು, ಕ್ಷೇತ್ರ ಸಮೀಕ್ಷೆ, ಮಾಹಿತಿ ಸಂಗ್ರಹ, ತ್ಯಾಜ್ಯ ಸಮಸ್ಯೆಗಳ ಮೌಲ್ಯಮಾಪನ ಹಾಗೂ ಜನಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಸ್ಥಳೀಯ ಸಂಘಟನೆಗಳು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಪರಿಸರ ಸಂರಕ್ಷಣೆಯಲ್ಲಿ ಸಮುದಾಯದ ಪಾಲುದಾರಿಕೆಯನ್ನು ಬಲಪಡಿಸಲಾಗುತ್ತದೆ ಎಂದರು. ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಲು ‘ಚೋಟಾ ಕಾಪ್’ ಯೋಜನೆ ಜಾರಿಗೊಳ್ಳಲಿದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮತ್ತು ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಯುವಜನರಲ್ಲಿ ಹೊಸ ತಂತ್ರಜ್ಞಾನ ಹಾಗೂ ನವೀನ ಆಲೋಚನೆಗಳಿಗೆ ಉತ್ತೇಜನ ನೀಡಲು ಐಡಿಯಾಥಾನ್ ಆಯೋಜಿಸಲಾಗುತ್ತಿದ್ದು, ಆಯ್ಕೆಯಾಗುವ ಪರಿಸರ ಸ್ನೇಹಿ ಆವಿಷ್ಕಾರಗಳಿಗೆ ಅಭಿವೃದ್ಧಿ ನಿಧಿಯನ್ನೂ ಒದಗಿಸಲಾಗುತ್ತದೆ. ಎರಡನೇ ಹಂತವು ಆಗಸ್ಟ್ ನಿಂದ ನವೆಂಬರ್‌ವರೆಗೆ ನಡೆಯಲಿದ್ದು, ಘನ ತ್ಯಾಜ್ಯ ನಿರ್ವಹಣಾ ನಿಯಮಾವಳಿ–2026 ಅನುಸಾರ ವಿವಿಧ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ. ನದಿಗಳ ಮೇಲ್ಮೈ ಹಾಗೂ ನೀರಿನ ಅಡಿಯಲ್ಲಿರುವ ತ್ಯಾಜ್ಯ ತೆರವು, ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆ, ಸಂಗ್ರಹ ಮತ್ತು ಮರುಬಳಕೆ ವ್ಯವಸ್ಥೆ, ಮರುಸಂಸ್ಕರಣೆಗೆ ಅಸಾಧ್ಯವಾದ ತ್ಯಾಜ್ಯದ ಸೂಕ್ತ ವಿಲೇವಾರಿ, ‘ಸ್ವಚ್ಛ ಗ್ರಾಮ’ ಸ್ಪರ್ಧೆ, ಪರಿಸರ ಜಾಗೃತಿ ಮೂಡಿಸುವ ರೀಲ್ಸ್ ಸ್ಪರ್ಧೆ, ಫನ್ನಿ ರಿಪೋರ್ಟರ್ಸ್, ವಿದ್ಯಾರ್ಥಿ ಚಟುವಟಿಕೆಗಳು ಹಾಗೂ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಮೂರನೇ ಹಂತವಾಗಿ ಡಿಸೆಂಬರ್ 2026ರಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗುತ್ತದೆ. ಭಾಗವಹಿಸುವ ಗ್ರಾಮ ಪಂಚಾಯಿತಿಗಳು ತಮ್ಮ ತ್ಯಾಜ್ಯ ನಿರ್ವಹಣಾ ಅನುಭವ ಮತ್ತು ಸಾಧನೆಗಳನ್ನು ಪ್ರಸ್ತುತಪಡಿಸಲಿದ್ದು, ದೇಶದ ಖ್ಯಾತ ಪರಿಸರ ವಿಜ್ಞಾನಿಗಳು, ತಜ್ಞರು ಮತ್ತು ಪರಿಸರ ಹೋರಾಟಗಾರರು ವೈಜ್ಞಾನಿಕ ಅಧಿವೇಶನಗಳಲ್ಲಿ ಭಾಗವಹಿಸಲಿದ್ದಾರೆ. ಸ್ಥಳೀಯ ಮಟ್ಟದ ಯಶಸ್ವಿ ಮಾದರಿಗಳನ್ನು ರಾಷ್ಟ್ರೀಯ ಮಟ್ಟದ ಉತ್ತಮ ಪದ್ಧತಿಗಳೊಂದಿಗೆ ಸಂಪರ್ಕಿಸುವ ವೇದಿಕೆಯಾಗಲಿದೆ. ಸಮ್ಮೇಳನದ ಸಮಾರೋಪದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ನದಿಗಳಿಗೆ ಸೇರುವ ಪ್ರಮಾಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಕಡಿಮೆಗೊಳಿಸಿದ ಗ್ರಾಮಕ್ಕೆ ಪ್ರತಿಷ್ಠಿತ ‘ಸ್ವಚ್ಛ ಗ್ರಾಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಉತ್ತಮ ಸಾಧನೆ ತೋರಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪರಿಸರ ಪ್ರಶಸ್ತಿಗಳಿಗೆ ಶಿಫಾರಸು ಮಾಡಲಾಗುವುದು. ಪರಿಸರ ಸಂರಕ್ಷಣೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ‘ವೇಸ್ಟ್ ವಾರಿಯರ್ಸ್’, ವಿದ್ಯಾರ್ಥಿಗಳು ಹಾಗೂ ಸ್ಪರ್ಧೆಗಳ ವಿಜೇತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು. ಕರಾವಳಿ ಪರಿಸರ ಸಂರಕ್ಷಣೆಯಲ್ಲಿ ಸಮುದಾಯ, ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಆಡಳಿತ ಮತ್ತು ತಜ್ಞರನ್ನು ಒಂದೇ ವೇದಿಕೆಗೆ ತರುವ ಈ ‘ಹಸಿರು ಸಂವಾದ’ ಅಭಿಯಾನವು, ಕರಾವಳಿ ಕರ್ನಾಟಕದಲ್ಲಿ ವೈಜ್ಞಾನಿಕ ಹಾಗೂ ಶಾಶ್ವತ ತ್ಯಾಜ್ಯ ನಿರ್ವಹಣೆಗೆ ಹೊಸ ಮಾದರಿಯಾಗಿ ರೂಪುಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪರ್ಯಾವರಣ ಸಂರಕ್ಷಣಾ ತಂಡದ ಜಯರಾಮ್ ಬೊಳ್ಳಾಜೆ, ಹೊಸದಿಂಗತ ಪತ್ರಿಕೆಯ ಸಿಇಒ ಪಿ.ಎಸ್ ಪ್ರಕಾಶ್, ಪರಿಸರ ವಿಜ್ಞಾನಿ ಡಾ. ಬಿನಿಷಾ ಪಿ., ಘನ ತ್ಯಾಜ್ಯ ನಿರ್ವಹಣಾ ತಜ್ಞ ಹಾಗೂ ‘ಫ್ರೆಂಡ್ಸ್ ಆಫ್ ಲೇಕ್ಸ್’ ಸಂಸ್ಥೆಯ ಸಂಸ್ಥಾಪಕ ರಾಮಪ್ರಸಾದ್, ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಅರ್ಜುನ ಕುಮಾರ್ ಇದ್ದರು. ಹಸಿರು ಸಂವಾದ ಅಭಿಯಾನದ ಮಂಜುನಾಥ್ ಸ್ವಾಗತಿಸಿ, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಮಕಿತ ಸುಧೀರ ಕುರಕುರೆ ಅವರಿಗೆ ಬೆಳ್ಳಿ ಪದಕ

Article Image

ಸಮಕಿತ ಸುಧೀರ ಕುರಕುರೆ ಅವರಿಗೆ ಬೆಳ್ಳಿ ಪದಕ

2026ರ ಜೂನ್ 25ರಂದು ಬೆಂಗಳೂರಿನ ಎಂಎನ್ ಕೆಆರ್ ಬಾಸ್ಕೆಟ್ ಬಾಲ್ ಸ್ಟೇಡಿಯಂನಲ್ಲಿ ನಡೆದ ರಾಜ್ಯ (ಅಂಡರ್-16) ಯುವ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ನಲ್ಲಿ, ಸದರ್ನ್ ಬ್ಲೂಸ್ ತಂಡದ ಸದಸ್ಯರಾದ ಸಮಕಿತ ಸುಧೀರ ಕುರಕುರೆ ಅವರು ರನ್ನರ್ಸ್-ಅಪ್ ಟ್ರೋಫಿ ಹಾಗೂ ಬೆಳ್ಳಿ ಪದಕವನ್ನು ಪಡೆದಿದ್ದಾರೆ.

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026 ಪ್ರತಿಭೋತ್ಸವ

Article Image

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026 ಪ್ರತಿಭೋತ್ಸವ

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ “ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026” ಪ್ರತಿಭೋತ್ಸವದ ಅಂಗವಾಗಿ ಆಯೋಜಿಸಲಾದ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಭ್ರಮ, ಸಾಂಸ್ಕೃತಿ ಮತ್ತು ಕಲಾ ವೈಭವದ ನಡುವೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಹಾಗೂ ಸಾಂಸ್ಕೃತಿಕ ತೇರನ್ನು ಎಳೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ಅವರು, “ ಇಂತಹ ಸಾಂಸ್ಕೃತಿಕ ವಾತವರಣದಲ್ಲಿ ಬೆಳೆದು ಬರುತ್ತಿರುವ ವಿದ್ಯಾರ್ಥಿಗಳೇ ನಿಜವಾಗಿಯೂ ಧನ್ಯರು. ಶಿಕ್ಷಣದೊಂದಿಗೆ ಸಾಂಸ್ಕೃತಿಕ ಸಂಸ್ಕಾರ ಮತ್ತು ಉತ್ತಮ ಪರಿಸರವು ಅತ್ಯಂತ ಮುಖ್ಯ. ಶಾಲೆಯು ಕೇವಲ ಶಿಕ್ಷಣ ನೀಡುವ ಕೇಂದ್ರವಲ್ಲ; ಉತ್ತಮ ಸಂಸ್ಕಾರವನ್ನು ರೂಪಿಸುವ ಪವಿತ್ರ ಕ್ಷೇತ್ರವಾಗಿದೆ,” ಎಂದು ಹೇಳಿದರು. “ಭಗವಂತನು ಕೊಟ್ಟರುವ ಈ ದೇಹವನ್ನು ಸಮಾಜದ. ವಿಶೇಷವಾಗಿ ಬಡವರ ಮತ್ತು ನೊಂದವರ ಒಳಿತಿಗಾಗಿ ಮೀಸಲಿಡಬೇಕು. ಜೀವನದಲ್ಲಿ ತಂದೆ, ತಾಯಿ ಮತ್ತು ಗುರುಗಳಿಗೆ ಸದಾ ಋಣಿಗಳಾಗಿರಬೇಕು. ಅವರ ಆರ್ಶೀವಾದವೇ ನಮ್ಮ ಬದುಕಿನ ನಿಜವಾದ ಸಂಪತ್ತು,” ಎಂದು ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳ ಕುರಿತು ಕಿವಿಮಾತು ಹೇಳಿದರು. ನಂತರ “ಯಕ್ಷಗಾನಂ ವಿಶ್ವಗಾನಂ” ಎಂಬ ಘೋಷಣೆಯೊಂದಿಗೆ ತಮ್ಮ ಸುಮಧುರ ಕಂಠಸಿರಿಯ ಮೂಲಕ ಯಕ್ಷಗಾನದ ಗಾನಸುಧೆಯನ್ನು ಹರಿಸಿ ಸಭಿಕರನ್ನು ಮಂತ್ರಮುಗ್ಧರನ್ನಾಗಿಸಿದರು. ಅವರ ಭಾವಪೂರ್ಣ ಗಾಯನಕ್ಕೆ ಸಭಾಂಗಣ ಕರತಾಡನದಿಂದ ಮೊಳಗಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಪಟ್ಲ ಸತೀಶ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದ ಮಹವೀರ ಪಾಂಡಿ ಅವರು ಮಾತನಾಡಿ, “ಅವಕಾಶವನ್ನು ಗುರುತಿಸಿ ಶ್ರಮದಿಂದ ಸದುಪಯೋಗಪಡಿಸಿಕೊಡವರಿಗೆ ದೇವರ ಆರ್ಶೀವಾದ ಸದಾ ಜೊತೆಯಾಗಿರುತ್ತದೆ,” ಎಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಮಾತನಾಡಿ, “ಯಕ್ಷಗಾನದ ಮೂಲಕ ಕರಾವಳಿಯ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಪಟ್ಲ ಸತೀಶ್ ಶೆಟ್ಟಿಯವರ ಸಾಧನೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಪೂರ್ತಿದಾಯಕವಾಗಿದೆ. ಅವರನ್ನು ಆದರ್ಶವಾಗಿಟ್ಟುಕೊಂಡು ತಮ್ಮ ಪ್ರತಿಭೆಯನ್ನು ಬೆಳಸಿಕೊಂಡು ಸಾಧನೆಯ ಶಿಖರವನ್ನು ತಲುಪಬೇಕು, " ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರು, “ಯಕ್ಷಗಾನವನ್ನು ವಿಶ್ವಮಟ್ಟದಲ್ಲಿ ಪರಿಚಯಿಸಿ ಕರಾವಳಿಯ ಕೀರ್ತಿಯನ್ನು ಪಸರಿಸುವಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಕೊಡುಗೆ ಅಪಾರವಾಗಿದೆ. ಕಲೆಗೆ ಸಮಾಜವನ್ನು ಜಾಗೃತಗೊಳಿಸುವ ಅದ್ಭುತ ಶಕ್ತಿಯಿದೆ. ನಾವು ನಮ್ಮೊಂದಿಗೆ ಇತರರನ್ನೂ ಬೆಳೆಸುವ ಮನೋಭಾವವನ್ನು ಹೊಂದಿದಾಗ ಸಮಾಜವೂ ಅಭಿವೃದ್ಧಿಯಾಗುತ್ತದೆ. ಭಗವಂತ ಪ್ರತಿಯೊಬ್ಬರಿಗೂ ಯೋಗ ಮತ್ತು ಯೋಗ್ಯತೆಯನ್ನು ನೀಡುತ್ತಾನೆ. ಅದನ್ನು ಸಾರ್ಥಕಗೊಳಿಸುವ ರೀತಿಯಲ್ಲಿ ಜೀವನವನ್ನು ರೂಪಿಸಿಕೊಳ್ಳಬೇಕು,” ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಸಂಪತ್ ಕುಮಾರ್ ಜೈನ್, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೂಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸಿಬಿಎಸ್‌ಸಿ ಪ್ರಾಂಶುಪಾಲರಾದ ಶ್ರೀಪ್ರಸಾದ್, ಕೀಬೋರ್ಡ್ ಪರಿಣಿತ ಸದಾಶಿವ ಭಟ್ ಶಿವಗಿರಿ. ತಬಲಾ ಪರಿಣಿತ ಗೌರಿಪ್ರಸಾದ್ ಗುರುವಾಯನಕೆರೆ, ಭರತನಾಟ್ಯ ಕಲಾವಿದೆ ರಶ್ಮಿತಾ ಅರವಿಂದ್ ಕರಾಟೆ ತರಬೇತುದಾರ ಸರ್ಫರಾಜ್ ಎ.ಕೆ, ಚಿತ್ರಕಲೆ ಶಿಕ್ಷಕ ಭಾಸ್ಕರ ನೆಲ್ಯಾಡಿ, ಕೊಳಲು ವಾದಕ ಲೋಕೇಶ್ ಸಂಪಿಗೆ, ಚೆಂಡೆ ವಾದಕ ಚಂದ್ರಶೇಖರ ಆಚಾರ್, ಪಾಶ್ಚಾತ್ಯ ನೃತ್ಯ ತರಬೇತುದಾರ ರೂಪೇಶ್ ಕುಮಾರ್ ಹಾಗೂ ಕರಕುಶಲ ಕಲೆ ಶಿಕ್ಷಕಿ ಚೇತನಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿ ಪ್ರತಿಭೆಯ ಅನಾವರಣ ಮಾಡುವ ಮೂಲಕ ಕಾರ್ಯಕ್ರಮದ ಮೆರುಗನ್ನು ಇನ್ನಷ್ಟು ಹೆಚ್ಚಿಸಿದರು. ಶಿಕ್ಷಕಿ ಹರ್ಷಿತಾ ಸ್ವಾರ್ಗತಿಸಿದರು. ಮೌಲ್ಯ ವೈ ಆರ್ ಜೈನ್ ಅವರು ಪಟ್ಲ ಸತೀಶ್ ಶೆಟ್ಟಿಯವರ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ವಿಜೇತ ಹಾಗೂ ಶರ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ವನಿತಾ ವಂದಿಸಿದರು.

ಎಕ್ಸಲೆಂಟ್: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Article Image

ಎಕ್ಸಲೆಂಟ್: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು. ಅವರು ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನವು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ವಿವರಿಸಿದ ಅವರು, ಕ್ಷಣಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ಸ್ನೇಹ, ಸತ್ಪ್ರವೃತ್ತಿ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವಜನತೆ ವ್ಯಸನಮುಕ್ತ ಜೀವನಶೈಲಿಯನ್ನು ರೂಢಿಸಿಕೊಂಡಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪುಷ್ಪರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುವ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಸ್ವೀಕರಿಸಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಸಿಇಟಿ ಸಂಯೋಜಕರಾದ ರಂಜಿತ್ ಜೈನ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಶೃತಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಸುನಾದರಾಜ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

ಧರ್ಮಸ್ಥಳ: ಸ್ವಚ್ಛ ನೇತ್ರಾವತಿ ಅಭಿಯಾನ

Article Image

ಧರ್ಮಸ್ಥಳ: ಸ್ವಚ್ಛ ನೇತ್ರಾವತಿ ಅಭಿಯಾನ

ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು. ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅನೇಕ ಸ್ಥಳೀಯ ಸಂಘಟನೆಗಳ ಸದಸ್ಯರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ “ಸ್ವಚ್ಛತಾ ಸೂಚನಾ ಫಲಕ” ಅನಾವರಣಗೊಳಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಪಿ.ಡಿ.ಒ. ಗಾಯತ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ಧನ್ಯವಾದವಿತ್ತರು.

ಬೆಳ್ತಂಗಡಿ: ಡಾ. ಡಿ. ಹೆಗ್ಗಡೆ ದಂಪತಿಗಳು ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ

Article Image

ಬೆಳ್ತಂಗಡಿ: ಡಾ. ಡಿ. ಹೆಗ್ಗಡೆ ದಂಪತಿಗಳು ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಸಂಸ್ಥಾಪಕರಾದ ಹೇಮಾವತಿ ವಿ. ಹೆಗ್ಗಡೆಯವರು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಅಲ್ಲಿನ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಿದ ಹೆಗ್ಗಡೆ ದಂಪತಿಗಳು, ಸಿಬ್ಬಂದಿಗಳ ಕಾರ್ಯನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಶ್ಲಾಘಿಸಿ ಶುಭ ಹಾರೈಸಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ಧನ ಅವರು ಹೆಗ್ಗಡೆ ದಂಪತಿಗಳನ್ನು ಹಾಗೂ ಹೆಗ್ಗಡೆಯವರ ಮೊಮ್ಮಗಳಾದ ಮಾನ್ಯರವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಮಹೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತ ಹಾಗೂ ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರ ಶ್ರೇಯೋಭಿವೃದ್ಧಿಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಹೆಗ್ಗಡೆ ದಂಪತಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ರಾಜೇಶ್ ಪೈ, ಡಾ. ಹರೀಶ್ ಕೃಷ್ಣಸ್ವಾಮಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಎಕ್ಸಲೆಂಟ್: ಇ ವಿ ಎಂ ಮೂಲಕ ಶಾಲಾ ಸಂಸತ್ ಚುನಾವಣೆ

Article Image

ಎಕ್ಸಲೆಂಟ್: ಇ ವಿ ಎಂ ಮೂಲಕ ಶಾಲಾ ಸಂಸತ್ ಚುನಾವಣೆ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಅತ್ಯಂತ ವ್ಯವಸ್ಥಿತವಾಗಿ ಮತ್ತು ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಮತದಾನದ ಹಕ್ಕು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಚುನಾವಣೆಯನ್ನು ಆಯೋಜಿಸಲಾಗಿತ್ತು. ಭಾರತದ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ಈ ಚುನಾವಣೆ ನಡೆಸಲಾಗಿದ್ದು ಇಲೆಕ್ಟ್ರಾನಿಕ್ಸ್ ವೋಟಿಂಗ್ ಮೆಷಿನ್ ಮೂಲಕ ಮತದಾನ ಪ್ರಕ್ರಿಯೆ ಜರುಗಿತು. ವಿದ್ಯಾರ್ಥಿಗಳಿಗೆ ಮತದಾನದ ವಿಧಾನ, ಅಭ್ಯರ್ಥಿಗಳ ಆಯ್ಕೆ ಮತ್ತು ಮತ ಚಲಾಯಿಸುವ ಕ್ರಮಗಳ ಕುರಿತು ಪೂರ್ವಭಾವಿ ಮಾಹಿತಿ ನೀಡಲಾಯಿತು. ಬಳಿಕ ಮತಗಟ್ಟೆಗಳಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಸರದಿ ಸಾಲಿನಲ್ಲಿ ನಿಂತು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿದರು. ಇವಿಎಂ ಮೂಲಕ ನಡೆದ ಮತದಾನವು ವಿದ್ಯಾರ್ಥಿಗಳಿಗೆ ನೈಜ ಚುನಾವಣೆಯ ಅನುಭವವನ್ನು ನೀಡಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು, “ಪ್ರಜಾಪ್ರಭುತ್ವದ ಯಶಸ್ಸು ಜಾಗೃತ ಮತದಾರರ ಮೇಲೆ ಅವಲಂಬಿತವಾಗಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಮತದಾನದ ಮಹತ್ವವನ್ನು ಅರಿತುಕೊಳ್ಳುವುದು ಅಗತ್ಯ. ಇಂತಹ ಚುನಾವಣೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ್ವ, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ.” ಎಂದು ಹೇಳಿದರು. ಸ್ಪರ್ಧಿಸಿದ ಅಭ್ಯರ್ಥಿಗಳು ಮತ್ತು ಮತದಾರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮತದಾನ ಕೇಂದ್ರಕ್ಕೆ ಭೇಟಿ ನೀಡಿದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಿ ವಿದ್ಯಾರ್ಥಿಗಳ ಶಿಸ್ತು ಮತ್ತು ಉತ್ಸಾಹವನ್ನು ಶ್ಲಾಘಿಸಿದರು. ಇಂತಹ ಪ್ರಜಾಪ್ರಭುತ್ವ ಚÀಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ನಾಗರೀಕತ್ವದ ಗುಣಗಳನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು. ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನವೀನ್ ಅವರು ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಎಕ್ಸಲೆಂಟ್ ಶಾಲೆಯಲ್ಲಿ ಆಯೋಜಿಸಿದ ಚುನಾವಣಾ ಪ್ರಕ್ರಿಯೆಯನ್ನು ಪ್ರಶಂಶಿಸಿದರು. ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಧ್ಯೇಯಗಳನ್ನು ಬೆಳೆಸುವಲ್ಲಿ ಎಕ್ಸಲೆಂಟ್ ಶಾಲೆಯ ಪಾತ್ರವನ್ನು ಕೊಂಡಾಡಿದರು. ಶಾಲೆಯ ವಿದ್ಯಾರ್ಥಿನಿ ಮಾನ್ಯತಾ ಅವರ ಪೋಷಕರಾದ ಮಧುರ ಅವರು ಮತದಾನ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಪ್ರಜಾಪ್ರಭುತ್ವದ ಅರಿವು ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಅವರು ಮುಖ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಿಕೊಟ್ಟರು. ಉಪಮುಖ್ಯೋಪಾಧ್ಯಾಯರಾದ ಜಯಶೀಲ್ ಅವರು ಚುನಾವಣೆಯನ್ನು ಸಂಘಟಿಸಿ ಮತದಾನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮೂಡಿಬರುವಂತೆ ನೋಡಿಕೊಂಡರು. ಈ ಬಾರಿಯ ಶಾಲಾ ಸಂಸತ್ ಚುನಾವಣೆಯಲ್ಲಿ ಒಟ್ಟು 99.008 ಶೇಕಡ ಮತದಾನ ನಡೆದಿದೆ ಎಂಬುದಾಗಿ ಶಾಲಾ ಚುನಾವಣಾ ಆಯೋಗ ವರದಿಯನ್ನು ಮಾಡಿತು. ಮತದಾನ ಪ್ರಕ್ರಿಯೆ ಮುಗಿದು ಎರಡು ದಿನಗಳ ನಂತರ ಮತಎಣಿಕೆ ಕಾರ್ಯನಡೆದು ಚುನಾವಣಾ ಫಲಿತಾಂಶವನ್ನು ಘೋಷಿಸಲಾಯಿತು. ವಿಜೇತ ವಿದ್ಯಾರ್ಥಿಗಳಾದ ರಿಷಿಕೇಶ್, ಯಶ್ಮಿತ್, ತನ್ವಿ ಮತ್ತು ನಿಹಾರಿಕ ಅವರನ್ನು ಅಭಿನಂದಿಸಲಾಯಿತು. ಶಾಲೆಯ ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉತ್ತಮ ನಾಯಕತ್ವ ಮತ್ತು ಜವಾಬ್ದಾರಿಯುತ ನಾಗರೀಕತ್ವದ ಪಾಠವನ್ನು ಕಲಿಸುವಲ್ಲಿ ಸಫಲವಾಯಿತು.

ಸಿಎ ಅಂತಿಮ ಪರೀಕ್ಷೆ 2026: ಆಳ್ವಾಸ್‌ನ 8 ಜನ ಉತ್ತೀರ್ಣ

Article Image

ಸಿಎ ಅಂತಿಮ ಪರೀಕ್ಷೆ 2026: ಆಳ್ವಾಸ್‌ನ 8 ಜನ ಉತ್ತೀರ್ಣ

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸಿ ರಾಷ್ಟ್ರ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಇವರ ಜೊತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್, ಅಕ್ಷಯ ಬಿಎಸ್, ಸುದೀಪ್ ಉತ್ತೀರ್ಣರಾಗಿ ಸಾಧನೆ ಮೆರೆದಿದ್ದಾರೆ. ದೀಪಕ್ ಹೆಗ್ಡೆ ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣದ ಸೌಲಭ್ಯ ಪಡೆದು ಪ್ರೌಢಶಿಕ್ಷಣ, ಪದವಿಪೂರ್ವ ಹಾಗೂ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಪದವಿ ವ್ಯಾಸಂಗದ ಅವಧಿಯಲ್ಲೇ ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 10ನೇ ರ‍್ಯಾಂಕ್ ಗಳಿಸಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದ ಇವರು, ಇದೀಗ ಸಿಎ ಅಂತಿಮ ಪರೀಕ್ಷೆಯ ಎರಡೂ ಗ್ರೂಪ್‌ಗಳನ್ನು ಮೊದಲ ಪ್ರಯತ್ನದಲ್ಲೇ ಪಾಸಾಗಿ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್ ಗಳಿಸುವ ಮೂಲಕ ಮತ್ತೊಂದು ಗಮನಾರ್ಹ ಸಾಧನೆ ನಿರ್ಮಿಸಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ರ‍್ಯಾಂಕ್ ಗಳಿಸುತ್ತಿರುವುದು ಗುಣಮಟ್ಟದ ಶಿಕ್ಷಣ ಹಾಗೂ ಫಲಿತಾಂಶ ಕೇಂದ್ರಿತ ತರಬೇತಿಯ ಪ್ರತೀಕ. ಅಖಿಲ ಭಾರತ ಮಟ್ಟದಲ್ಲಿ 6, 10, 23, 28, 33ನೇ ರ‍್ಯಾಂಕ್‌ಗಳ ಜೊತೆಗೆ ನೂರಾರು ವಿದ್ಯಾರ್ಥಿಗಳು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿರುವುದು ವಿದ್ಯಾರ್ಥಿಗಳ ಪರಿಶ್ರಮ, ಅಧ್ಯಾಪಕರ ಸಮರ್ಪಿತ ಮಾರ್ಗದರ್ಶನ ಮತ್ತು ಸಂಸ್ಥೆಯ ಶೈಕ್ಷಣಿಕ ಬದ್ದತೆಗೆ ದೊರೆತ ಗೌರವವಾಗಿದೆ- ಡಾ ಎಂ ಮೋಹನ್ ಆಳ್ವ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪ್ರಾಚರ‍್ಯ ಡಾ ಕುರಿಯನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ ಎಂಡಿ, ಸಿಎ ಸಂಯೋಜಕಿ ಅಪರ್ಣಾ ಅಭಿನಂದಿಸಿದ್ದಾರೆ.

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Article Image

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಜೂನ್ ತಿಂಗಳಿನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸಿರಿ ಸಿಬ್ಬಂದಿಗಳಿಗೆ ಹಾಗೂ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗಳಿಗೆ ಶುಭ ಹಾರೈಸಿದರು. ನಂತರ ಅವರು ಮಾತನಾಡಿ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರು ಮಹಿಳಾ ಸಬಲೀಕರಣದ ಧ್ಯೇಯೋದ್ದೇಶದಿಂದ ಪ್ರಾರಂಭಿಸಿರುವ ಸಿರಿ ಸಂಸ್ಥೆಯಲ್ಲಿ ಎಲ್ಲಾ ಸಿರಿ ಸಿಬ್ಬಂದಿಗಳು ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಸಿರಿ ಬ್ರ‍್ಯಾಂಡನ್ನು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯುವ ಮೂಲಕ ದಂಪತಿಗಳ ಕನಸನ್ನು ನನಸಾಗಿಸಬೇಕೆಂದು ಪ್ರೇರಣಾತ್ಮಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಎ,ವಿ, ಶೆಟ್ಟಿ ಮತ್ತು ಅವರ ಧರ್ಮಪತ್ನಿ ಅರುಣ ವಿ ಶೆಟ್ಟಿಯವರನ್ನು ಅತ್ಯಂತ ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು, ಪ್ರಾಸ್ತಾವಿಕವಾಗಿ ಮಾತನಾಡಿ, ಸಿರಿ ಸಂಸ್ಥೆಯ ಸಮಗ್ರ ಏಳಿಗೆಗಾಗಿ ಶ್ರಮವಹಿಸಿ, ಸಂಪೂರ್ಣ ಸಹಕಾರ ನೀಡುತ್ತಾ ಬಂದಿರುವ ಎ,ವಿ, ಶೆಟ್ಟಿ ದಂಪತಿಗಳಿಗೆ ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು. ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ಧನರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಸಿರಿ ಸಿಬ್ಬಂದಿಗಳಿಗೆ ಶುಭಕೋರಿದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಖಾವಂದರು ಲೋಕಕಲ್ಯಾಣಾರ್ಥವಾಗಿ ನಡೆಸುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ವಿಡಿಯೋ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಸಿರಿ ಕ್ಲಬ್ ಅಧ್ಯಕ್ಷೆ ಉಷಾ, ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಿರಿ ಸಿಬ್ಬಂದಿಗಳು ಭಾಗವಹಿಸಿದ್ದರು. ಸಿರಿ ಸಂಸ್ಥೆಯ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನರವರು ವಂದಿಸಿದರು.

ಆಳ್ವಾಸ್: ಇಂಡಕ್ಷನ್ ಕಾರ್ಯಕ್ರಮ ಅಂಕುರ ಉದ್ಘಾಟನೆ

Article Image

ಆಳ್ವಾಸ್: ಇಂಡಕ್ಷನ್ ಕಾರ್ಯಕ್ರಮ ಅಂಕುರ ಉದ್ಘಾಟನೆ

ಮೂಡುಬಿದಿರೆ: ಜವಾಬ್ದಾರಿಯನ್ನು ಸ್ವೀಕರಿಸಿದಾಗ ಮಾತ್ರ ಬದುಕಿನಲ್ಲಿ ಸ್ಥಾನಮಾನ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಸ್ವಾಯತ್ತಾ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಇಂಡಕ್ಷನ್ ಕಾರ್ಯಕ್ರಮ ‘ಅಂಕುರ’ ಸೋಮವಾರ ಕೃಷಿಸಿರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 1998ರಲ್ಲಿ ಕೇವಲ 25 ವಿದ್ಯಾರ್ಥಿಗಳು, ಎರಡು ವಿಭಾಗ ಹಾಗೂ 11 ಅಧ್ಯಾಪಕರೊಂದಿಗೆ ತನ್ನ ಶೈಕ್ಷಣಿಕ ಪಯಣವನ್ನು ಆರಂಭಿಸಿದ್ದ ಆಳ್ವಾಸ್ ಸಂಸ್ಥೆ, ಇಂದು 54 ಶೈಕ್ಷಣಿಕ ಕಾರ್ಯಕ್ರಮಗಳು, 122 ತರಗತಿ ಕೊಠಡಿಗಳು, 188 ಶಿಕ್ಷಕರು ಹಾಗೂ 3,191 ವಿದ್ಯಾರ್ಥಿಗಳನ್ನು ಒಳಗೊಂಡ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ. ಸಂಸ್ಥೆಯ ಈ ಸಾಧನೆಯ ಹಿಂದಿನ ನಿಜವಾದ ಶಕ್ತಿ ಮತ್ತು ಬ್ರ‍್ಯಾಂಡ್ ಇಲ್ಲಿನ ವಿದ್ಯಾರ್ಥಿಗಳು. ಮಕ್ಕಳು ತಮ್ಮ ಪಾಲಕರ ತ್ಯಾಗ ಮತ್ತು ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಶಿಕ್ಷಣದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಕನಸುಗಳ ಜೊತೆಗೆ ಜವಾಬ್ದಾರಿಗಳನ್ನೂ ಹೊತ್ತು ಸಾಗಬೇಕು. ತರಗತಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ವ್ಯಕ್ತಿತ್ವ ವಿಕಸನಕ್ಕೆ ನೆರವಾಗುತ್ತದೆ. ಈ ಹಂತದಲ್ಲಿ ಗುರಿಯೆಡೆಗೆ ಗಮನ ಕೇಂದ್ರೀಕರಿಸಿ ಅನಗತ್ಯ ಆಕರ್ಷಣೆಗಳಿಂದ ದೂರವಿರಬೇಕು. ಕೃತಕ ಬುದ್ಧಿಮತ್ತೆ ಉದ್ಯೋಗಗಳನ್ನು ಕಸಿದುಕೊಳ್ಳದು, ಬದಲಾಗಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ತಂತ್ರಜ್ಞಾನದ ಬದಲಾವಣೆಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದರು. ಶ್ರೇಷ್ಠತೆ, ಉತ್ತಮ ಪರಿಸರ ನಿರ್ಮಾಣ ಮತ್ತು ಸಾಮಾಜಿಕ ಅರಿವಿನತ್ತ ಯುವಜನತೆ ಸಾಗಿದಾಗ ಮಾತ್ರ ಅರ್ಥಪೂರ್ಣ ಸಮಾಜ ನಿರ್ಮಾಣ ಸಾಧ್ಯ. ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯವನ್ನು ರೂಪಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಚಾರ್ಯ ಡಾ. ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಗೆ ಸುರಕ್ಷಿತ ಹಾಗೂ ಪ್ರೇರಣಾತ್ಮಕ ವಾತಾವರಣ ಅತ್ಯಗತ್ಯವಾಗಿದ್ದು, ಅಭದ್ರತೆ ಇರುವಲ್ಲಿ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದರು. ಒಂದು ರಾಷ್ಟ್ರದ ಭವಿಷ್ಯ ರೂಪುಗೊಳ್ಳುವುದು ತರಗತಿ ಕೊಠಡಿಗಳಲ್ಲಿಯೇ. ಆದ್ದರಿಂದ ಶಿಕ್ಷಣ ಸಂಸ್ಥೆಗಳ ಪರಿಸರವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಂತಿರಬೇಕು. ಈ ಕಾರಣಕ್ಕಾಗಿಯೇ ತರಗತಿ ಕೊಠಡಿಯನ್ನು ಇಡೀ ಜಗತ್ತಿನ ಅತಿದೊಡ್ಡ ಪವರ್‌ಹೌಸ್ ಎಂದು ಪರಿಗಣಿಸಲಾಗಿದೆ. ವಿದ್ಯಾರ್ಥಿಗಳು ಸದಾ ಸಕಾರಾತ್ಮಕ ಚಿಂತನೆ ಹೊಂದಿದವರೊಂದಿಗೆ ಬೆರೆಯಬೇಕು. ನಕಾರಾತ್ಮಕ ಮನೋಭಾವದ ವ್ಯಕ್ತಿಗಳಿಂದ ದೂರವಿರುವುದು ವೈಯಕ್ತಿಕ ಬೆಳವಣಿಗೆ ಮತ್ತು ಯಶಸ್ಸಿಗೆ ಸಹಕಾರಿಯಾಗುತ್ತದೆ. ಪರೀಕ್ಷಾಂಗ ಕುಲಸಚಿವ ಡಾ. ಎನ್.ಪಿ. ನಾರಾಯಣ ಶೆಟ್ಟಿ, ಕಾಲೇಜಿನ ಪರೀಕ್ಷಾ ವಿಭಾಗದ ಕಾರ್ಯವೈಖರಿ, ಪರೀಕ್ಷಾ ನಿಯಮಗಳು, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ವಿದ್ಯಾರ್ಥಿಗಳು ಅನುಸರಿಸಬೇಕಾದ ಶೈಕ್ಷಣಿಕ ಮಾರ್ಗಸೂಚಿಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರವೂ ಮಹತ್ವದ್ದಾಗಿದ್ದು, ಕಾಲೇಜು ಮತ್ತು ಪೋಷಕರ ನಡುವಿನ ನಿರಂತರ ಸಂಪರ್ಕ ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಶೈಕ್ಷಣಿಕ ಕುಲಸಚಿವ ಡಾ ಟಿಕೆ ರವೀಂದ್ರನ್ ಇದ್ದರು. ಡಾ ಯೋಗಿಶ್ ಕೈರೋಡಿ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ: ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Article Image

ಉಜಿರೆ: ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಜೂ.21 ಆದಿತ್ಯವಾರ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಸ್ತ್ರೀರೋಗ ತಪಾಸಣಾ ಶಿಬಿರ ನಡೆಯಲಿದೆ. ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಗರ್ಭಕಂಠ ಮತ್ತು ಗರ್ಭಾಶಯದ ಕ್ಯಾನ್ಸರ್ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಸ್ತನದ ಕ್ಯಾನ್ಸರ್, ಮೂತ್ರನಾಳದ ಸೋಂಕು ತಪಾಸಣೆಗಳನ್ನು ನಡೆಸಲಾಗುವುದು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ, ಡಾ| ಪ್ರಿಯಾಂಕ ಜಯದೇವ್ ಇವರು ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ಉಚಿತ ತಪಾಸಣೆಯೊಂದಿಗೆ, ಉಚಿತ ಪ್ಯಾಪ್ ಸ್ಮಯರ್ ಪರೀಕ್ಷೆ, ಲ್ಯಾಬ್ ಪರೀಕ್ಷೆಗಳಲ್ಲಿ 25%, ರೇಡಿಯಾಲಜಿ ಸೇವೆಗಳಲ್ಲಿ 25%, ಪ್ರಕ್ರಿಯೆಗಳಲ್ಲಿ 25%, ಔಷಧಿಗಳ ಮೇಲೆ 10%, ಒಳರೋಗಿ ಶುಲ್ಕಗಳಲ್ಲಿ 10%, ಲ್ಯಾಪರೋಸ್ಕೋಪಿಕ್ ಶಸ್ತ್ರ ಚಿಕಿತ್ಸೆಯಲ್ಲಿ 25% ರಿಯಾಯತಿ ದೊರೆಯಲಿದೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆಳ್ವಾಸ್‌: ಸನ್ಮಾನ ಕಾರ್ಯಕ್ರಮ

Article Image

ಆಳ್ವಾಸ್‌: ಸನ್ಮಾನ ಕಾರ್ಯಕ್ರಮ

ಮೂಡುಬಿದಿರೆ:ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಇಲ್ಲಿ ಬಾಹ್ಯಕಾಶವೇ ಮಿತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ ವಕೀಲ ವೃತ್ತಿಯಲ್ಲಿ ದೊರೆಯುವ ಹೆಸರು, ಗೌರವ ಮತ್ತು ಆರ್ಥಿಕ ಯಶಸ್ಸು ಬೇರೆ ಯಾವ ಕ್ಷೇತ್ರಗಳಲ್ಲೂ ಸಿಗಲಾರದು. ಇಲ್ಲಿ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ ಎಂದರು. ಮೂರನೇ ಚುನಾವಣೆಯಲ್ಲಿ ಗೆಲುವು ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ನಾಯಕತ್ವ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಬಳಿಕ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಎದುರಿಸಿದ್ದೆ. ಇದೀಗ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಮೂರನೇ ಪ್ರಮುಖ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದೇನೆ. ತಾನು ಮೂಲತಃ ವೈದ್ಯನಾಗುವ ಕನಸು ಕಂಡಿದ್ದೆ. ಆದರೆ ಪಿಸಿಎಂಬಿ ವಿಭಾಗದಲ್ಲಿ ಅನುತ್ತೀರ್ಣನಾದ ಬಳಿಕ ಕಲಾ ವಿಭಾಗಕ್ಕೆ ಸೇರ್ಪಡೆಗೊಂಡೆ. ಜೀವನದ ಸೋಲುಗಳೇ ನನ್ನ ಯಶಸ್ಸಿನ ದಾರಿಯನ್ನು ರೂಪಿಸಿದವು ಎಂದು ಹೇಳಿದರು. ವಕೀಲರು ಕೇವಲ ನ್ಯಾಯಾಲಯದೊಳಗೆ ಮಾತ್ರ ಸೀಮಿತರಾಗಿರಬೇಕಿಲ್ಲ. ಉತ್ತಮ ನಾಯಕರು, ನೀತಿ ರೂಪಿಸುವವರು ಹಾಗೂ ಕಾರ್ಪೊರೇಟ್ ವಲಯದ ತಜ್ಞರಾಗಿಯೂ ಬೆಳೆಯಬಹುದು. ಇತರ ಕ್ಷೇತ್ರಗಳಲ್ಲಿ ನಿವೃತ್ತಿಯ ವಯಸ್ಸು ಇದ್ದರೂ, ವಕೀಲ ವೃತ್ತಿಯಲ್ಲಿ ಜೀವಿತಾವಧಿಯವರೆಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಅವಕಾಶವಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಕೀಲ ವೃತ್ತಿಗೆ ವಿಶೇಷ ಗೌರವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಕೀಲ ವೃತ್ತಿಗೆ ವಿಶೇಷ ಗೌರವವಿದೆ. ವೃತ್ತಿಯ ಘನತೆ ಮತ್ತು ನೈತಿಕತೆಯನ್ನು ಕಾಪಾಡಿಕೊಂಡರೆ ಹಣ ಹಾಗೂ ಯಶಸ್ಸು ಸಹಜವಾಗಿಯೇ ಬರುತ್ತದೆ. ವೃತ್ತಿಪರರಾಗುವುದರ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಸಾಮಾಜಿಕ ಪ್ರಜ್ಞೆ ಜಾಗೃತವಾಗಿರಬೇಕು ಇಂದು ಸಮಾಜದಲ್ಲಿ ಹಕ್ಕುಗಳ ಬಗ್ಗೆ ಹೆಚ್ಚು ಮಾತನಾಡಲಾಗುತ್ತಿದೆ. ಆದರೆ ಕರ್ತವ್ಯಗಳ ಬಗ್ಗೆಯೂ ಸಮಾನ ಗಮನ ನೀಡಬೇಕು. ಪ್ರತಿಯೊಬ್ಬರೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡರೆ ಭಾರತವನ್ನು ವಿಶ್ವದ ಅಗ್ರ ರಾಷ್ಟ್ರವನ್ನಾಗಿ ರೂಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ ಮಾತನಾಡಿ, ಸಮಾಜದಲ್ಲಿ ನ್ಯಾಯ, ಸಮಾನತೆ ಮತ್ತು ಕಾನೂನಿನ ಅನುಷ್ಠಾನದಲ್ಲಿ ಮಹತ್ತರ ಜವಾಬ್ದಾರಿಯನ್ನು ವಕೀಲರು ನಿರ್ವಹಿಸುತ್ತಾರೆ. ಆದ್ದರಿಂದಲೇ ವಕೀಲ ವೃತ್ತಿಯನ್ನು ಅತ್ಯಂತ ಗೌರವಾನ್ವಿತ ಮತ್ತು ಶ್ರೇಷ್ಠ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಸಾಲದ ಕೋಟ್ ವಕೀಲನಾಗಿ ವೃತ್ತಿ ಆರಂಭಿಸುವ ಸಂದರ್ಭದಲ್ಲಿ ಕೋಟ್ ಖರೀದಿಸಲು ಸಹ ಗೆಳೆಯನಿಂದ 1,500 ರೂಪಾಯಿ ಸಾಲ ಪಡೆದಿದ್ದೆ. ಆದರೆ ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನದ ಮೂಲಕ ಇಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಅವಕಾಶ ದೊರೆತಿದೆ ಎಂದು ತಮ್ಮ ಜೀವನಾನುಭವ ಹಂಚಿಕೊಂಡರು. ಯುವಕರು ಸವಾಲುಗಳಿಗೆ ಹೆದರದೆ ತಮ್ಮ ಗುರಿಯತ್ತ ನಿರಂತರವಾಗಿ ಶ್ರಮಿಸಿದರೆ ಯಶಸ್ಸು ಖಂಡಿತ ಸಿಗುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕಾನೂನು ಚಿಂತನೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅಗತ್ಯವಾಗಿದೆ. ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಶಿಸ್ತು, ಪ್ರಾಮಾಣಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಹಕ್ಕುಗಳ ಬಗ್ಗೆ ನಾವು ಹೆಚ್ಚು ಮಾತನಾಡುತ್ತೇವೆ. ಆದರೆ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ. ಕಾನೂನು ಶಿಕ್ಷಣದ ಪಾವಿತ್ರ‍್ಯವನ್ನು ಕಾಪಾಡಿಕೊಂಡು ಸಮಾಜದಲ್ಲಿ ಕಾನೂನು ಜಾಗೃತಿ ಮೂಡಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಗುರಿಯತ್ತ ಸ್ಪಷ್ಟವಾದ ಗಮನ, ಶಿಸ್ತು ಮತ್ತು ನೈತಿಕತೆ ಯಶಸ್ಸಿನ ಮೂಲಮಂತ್ರ. ಹೊಂದಾಣಿಕೆ ಮಾಡಿಕೊಳ್ಳಬಹುದು, ಆದರೆ ತತ್ವಗಳಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕಾರ ಮಾಡಿದ ಜಗದೀಶ್ ಶೇಣವ, ಶರತ್ ಶೆಟ್ಟಿಯನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮೊಹಮ್ಮದ್ ಸಫ್ವಾನ್ ನಿರೂಪಿಸಿದರು. ಕಾರ‍್ಯಕ್ರಮದಲ್ಲಿ ಹಿರಿಯ ವಕೀಲರಾದ ಬಾಹುಬಲಿ ಪ್ರಸಾದ, ಶ್ವೇತಾ ಜೈನ್, ಮನೋಜ್ ಶೆಣೈ, ಜಯಪ್ರಕಾಶ್ ಭಂಡಾರಿ, ಆಳ್ವಾಸ್ ಕಾನೂನು ಕಾಲೇಜಿನ ಪ್ರಾಚಾರ್ಯ ಪ್ರೋ ಮಹಾಂತೇಶ್ ಜಿ ಎಸ್ ಇದ್ದರು.

ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

Article Image

ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಚತುರ್ವಿಧ ದಾನಪರಂಪರೆಯೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಮಾನವ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿರುವ ಬಹುಮುಖಿ ಸೇವಾಕಾರ್ಯಗಳು ಆದರ್ಶ ಹಾಗೂ ಅನುಕರಣೀಯವಾಗಿವೆ ಎಂದು ಕೊಡಗು ವಿರಾಜಪೇಟೆಯ ಪೂಜ್ಯ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಧರ್ಮಸ್ಥಳದ ವತಿಯಿಂದ ಬದುಕಿಗೆ ಬೇಕಾದ ಎಲ್ಲಾ ಅವಶ್ಯಕತೆಗಳನ್ನು ಮತ್ತು ಸೌಲಭ್ಯಗಳನ್ನು ಒದಗಿಸಿ ಫಲಾನುಭವಿಗಳ ಸ್ವಾವಲಂಬಿ ಜೀವನಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದವರು ಕಾರ್ಯ ಮಾಡದ ಸೇವಾ ಕ್ಷೇತ್ರವಿಲ್ಲ. ವ್ಯಸನಮುಕ್ತರು ದೃಢಸಂಕಲ್ಪದಿಂದ ಸಾರ್ಥಕ ಜೀವನ ನಡೆಸಬೇಕು. ಇದು ಅತ್ಯಂತ ಸಂತೋಷ ಮತ್ತು ಸಂಭ್ರಮದ ಸಮಾರಂಭವಾಗಿದ್ದು ವ್ಯಸನಮುಕ್ತರ ಮುಖದಲ್ಲಿರುವ ಮಂದಹಾಸ ಹಾಗೂ ತೃಪ್ತಿ ಆಶಾದಾಯಕವಾಗಿದೆ. ಪೂಜ್ಯ ಹೆಗ್ಗಡೆಯವರು ತಮ್ಮ ಎಲ್ಲಾ ಸೇವಾಕಾರ್ಯಗಳ ಯಶಸ್ಸನ್ನು ದೇವರ ಸೇವೆ ಎಂದೇ ಭಾವಿಸಿ, ಶ್ರೀ ಸ್ವಾಮಿಗೆ ಅರ್ಪಿಸಿ ಧನ್ಯತೆಯನ್ನು ಹೊಂದುತ್ತಾರೆ. ವ್ಯಸನಮುಕ್ತರು ಇಲ್ಲಿಗೆ ಬಂದು ಒಳ್ಳೆಯ ಜ್ಞಾನ ಹಾಗೂ ವಿಚಾರಗಳನ್ನು ಮನದಲ್ಲಿ ತುಂಬಿಕೊಂಡು ಮುಂದೆ ಸಾರ್ಥಕ ಜೀವನ ನಡೆಸಬೇಕು. ಏಕೆಂದರೆ ಇತರ ಕ್ಷೇತ್ರಗಳಲ್ಲಿ ಮಾಡಿದ ಪಾಪಕರ್ಮಗಳು ಪುಣ್ಯಕ್ಷೇತ್ರದಲ್ಲಿ ನಾಶವಾಗುತ್ತವೆ. ಪುಣ್ಯಕ್ಷೇತ್ರದಲ್ಲಿ ಪಾಪ ಮಾಡಿದರೆ ವಜ್ರಲೇಪದಂತೆ ಅದು ಬದುಕಿನಲ್ಲಿ ಶಾಶ್ವತವಾಗಿರುತ್ತದೆ ಎಂದು ಸ್ವಾಮೀಜಿ ಸಲಹೆ ನೀಡಿದರು. ನವಜೀವನ ಪ್ರಶಸ್ತಿ ಪ್ರದಾನ ಮಾಡಿದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ವ್ಯಸನಮುಕ್ತರು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು, ತಮ್ಮ ಕೆಲಸವನ್ನು ಸಂತೋಷದಿಂದ ಮಾಡಿ ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಬೇಕು ಎಂದು ಹೇಳಿದರು. ವಾರ್ಷಿಕ ವರದಿ ಬಿಡುಗಡೆಗೊಳಿಸಿದ ಹೇಮಾವತಿಯವರು ವೀ. ಹೆಗ್ಗಡೆ ಮಾತನಾಡಿ ಮದ್ಯಪಾನದಂತಹ ದುಶ್ಚಟಗಳಿಂದ ಕೊಲೆ, ಅನ್ಯಾಯ, ಅತ್ಯಾಚಾರ ಹೆಚ್ಚಾಗುತ್ತದೆ. ಮಹಿಳೆಯರ ಜೀವನ ನರಕಯಾತನೆಯಾಗುತ್ತದೆ. ಮಾನವಜನ್ಮ ಶ್ರೇಷ್ಠವಾಗಿದ್ದು ಬುದ್ಧಿ, ವಿವೇಕ ಮತ್ತು ಶಕ್ತಿಯ ಸದುಪಯೋಗ ಮಾಡಿ ಸುಖ-ಶಾಂತಿ, ನೆಮ್ಮದಿಯ ಕುಟುಂಬಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು. ಗ್ರಾಮಾಭಿವೃದ್ಧಿ ಯೋಜನೆಯ ಸಿ.ಇ.ಒ. ಅನಿಲ್ ಕುಮಾರ್ ಮಾತನಾಡಿ ಫಲಾನುಭವಿಗಳ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮಗಳ ಮಾಹಿತಿ ನೀಡಿದರು. “ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ” ಪ್ರಶಸ್ತಿ: ಹೊನ್ನಾವರದ ಮಂಜುನಾಯ್ಕ, ನಂಜನಗೂಡು ಮಣಿಕಂಠ ಮತ್ತು ಗದಗ ಜಿಲ್ಲೆಯ ನವಲಗುಂದದ ಜಗದೀಶ ಮಲ್ಲಪ್ಪ ಬ್ಯಾಳಿ ಅವರಿಗೆ “ಜಾಗೃತಿ ಅಣ್ಣ” ಹಾಗೂ ಹುಬ್ಬಳ್ಳಿಯ ಸಿದ್ದಪ್ಪ ಕಲ್ಲಪ್ಪ ನೀಲರಗಿ, ಅಥಣಿಯ ಅಂದಾನಿ ದುರದುಂಡೆಪ್ಪ, ಶಿವಮೊಗ್ಗದ ರಮೇಶ್, ಎಸ್.ಎಲ್. ಗದಗದ ಶಿವಾನಂದ ಕುರಿ, ತುಮಕೂರಿನ ರವಿಕುಮಾರ್ ಮತ್ತು ವಿಜಯಪುರದ ಬಬಲೇಶ್ವರ ಸುಭಾಶ್ ಅವರಿಗೆ “ಜಾಗೃತಿ ಮಿತ್ರ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪಾನಮುಕ್ತರ ಪರವಾಗಿ ಕೂಡ್ಲಿಗಿಯ ಸತೀಶ್ ಮತ್ತು ತುಮಕೂರಿನ ಮಂಜುಳಾ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವ್ಯಸನಮುಕ್ತರು ದೃಢಸಂಕಲ್ಪದಿಂದ ಇದ್ದು ಮುಂದೆ ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗಿ ಮತ್ತೆ ದುಶ್ಚಟಕ್ಕೆ ಬಲಿಯಾಗಬಾರದು. ತಾವು ಸಾರ್ಥಕ ಜೀವನ ನಡೆಸುವುದರೊಂದಿಗೆ, ಇತರ ಮದ್ಯವ್ಯಸನಿಗಳೂ ವ್ಯಸನಮುಕ್ತರಾಗುವಂತೆ ಪ್ರೇರಣೆ, ಸಹಕಾರ ನೀಡಬೇಕು ಎಂದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಮಾತನಾಡಿ, ಈ ವರೆಗೆ 2063 ಮದ್ಯವರ್ಜನ ಶಿಬಿರಗಳ ಮೂಲಕ 1,38,000 ಮದ್ಯವ್ಯಸನಿಗಳನ್ನು ವ್ಯಸನಮುಕ್ತರಾಗಿ ಪರಿವರ್ತನೆ ಮಾಡಿದ್ದು ಇದಕ್ಕಾಗಿ 75 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿ ಗಣೇಶ್ ಅಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಸ್ಥಳ: ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Article Image

ಧರ್ಮಸ್ಥಳ: ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

ಧರ್ಮಸ್ಥಳ, ಜೂ. 9: ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಬಿಡುಗಡೆ ಬಳಿಕ ಕಿರುಚಿತ್ರವನ್ನು ವೀಕ್ಷಿಸಿದ ಹೆಗ್ಗಡೆ‌ ದಂಪತಿಗಳು, ತುಳುನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ದೈವ ಆರಾಧನೆಯ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿರುವ ಯುವಕರ ಪ್ರಯತ್ನವನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಸ್ಥಳದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಅವರು ಕಿರುಚಿತ್ರವನ್ನು ವೀಕ್ಷಿಸಿ, ಚಿತ್ರದ ಕಲಾವಿದರು ಹಾಗೂ ತಾಂತ್ರಿಕ ತಂಡಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಕಲಾಕೇಂದ್ರದ ಪೋಷಕರಾದ ಸೋನಿಯಾ ಯಶೋವರ್ಮರವರು ಕೂಡ ಕಿರು ಚಿತ್ರ ವೀಕ್ಷೀಸಿ ಯುವಕರ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದರು. ಸುಮಾರು 15 ನಿಮಿಷಗಳ ಅವಧಿಯ ಈ ಕಿರುಚಿತ್ರವು ತುಳುನಾಡಿನ ದೈವ ಆರಾಧನೆಯ ಹಿನ್ನೆಲೆಯ ಕಥಾವಸ್ತುವನ್ನು ಒಳಗೊಂಡಿದ್ದು, ಯುವಕರು ಮತ್ತು ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಕಿರುಚಿತ್ರದ ನಿರ್ಮಾಪಕರಾಗಿ ಕಾರ್ತಿಕ್ ಸುಬ್ರಹ್ಮಣ್ಯ, ರಚನೆ ಹಾಗೂ ನಿರ್ದೇಶನವನ್ನು ನೂತನ ಅಮೀನ್, ಕಥೆ ಮತ್ತು ಸಂಭಾಷಣೆಯನ್ನು ಸುಜಿತ್ ಸೂರ್ಯ ನಿರ್ವಹಿಸಿದ್ದಾರೆ. ಭೂಷಣ್ ಪೂಜಾರಿ ಸಂಗೀತ ಸಂಯೋಜನೆ ಮಾಡಿದ್ದು, ಸಮರ್ಥನ್ ರಾವ್ ಹಿನ್ನೆಲೆ ಸಂಗೀತವನ್ನು ನೀಡಿದ್ದಾರೆ. ಗಗನ್ ರಾಜ್ ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಸುಬ್ರಹ್ಮಣ್ಯದ ಸ್ಥಳಿಯರಾದ ರೋಹಿತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಕಾರ್ತಿಕ್ ಶೋಬಿತ್, ಕಿರಣ್, ಜಯರಾಮ್ , ರಾಜಾರಾಮ್ ಹಾಗೂ ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುಚಿತ್ರದ ನಿರ್ಮಾಣದಲ್ಲಿ ಸುನಿಲ್ ಶೆಟ್ಟಿ ಕಲ್ಕೊಪ್ಪ ಹಾಗೂ ಯಶವಂತ್ ಬೆಳ್ತಂಗಡಿ (ನೀನಾಸಂ) ಅವರು ಸಲಹೆ ಮತ್ತು ಸಹಕಾರ ನೀಡಿದ್ದು, ಯುವ ಕಲಾವಿದರ ಈ ಪ್ರಯತ್ನಕ್ಕೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಒದಗಿಸಿದ್ದಾರೆ. ಯುವಕರ ಸೃಜನಶೀಲತೆ, ಸಾಂಸ್ಕೃತಿಕ ಬದ್ಧತೆ ಮತ್ತು ತುಳುನಾಡಿನ ಪರಂಪರೆಯ ಮೇಲಿನ ಅಭಿಮಾನವನ್ನು ಪ್ರತಿಬಿಂಬಿಸುವ ‘ಶ್ರೀಗಣ’ ಕಿರುಚಿತ್ರವು ಕುಕ್ಕೆಶ್ರಿ ಕ್ರೀಯೇಷನ್ಸ್ ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಮೂಡುಬಿದಿರೆ: ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Article Image

ಮೂಡುಬಿದಿರೆ: ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಕಲ್ಲಬೆಟ್ಟುವಿನಲ್ಲಿ ಪ್ರಸಾದ್ ನೇತ್ರಾಲಯ ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ವಿಭಾಗ ಮಂಗಳೂರು ದಕ್ಷಿಣ ಕನ್ನಡ, ಲಯನ್ಸ್ ಕ್ಲಬ್ ಮೂಡುಬಿದಿರೆ, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಹಾಗೂ ನಮ್ಮ ಕ್ಲಿನಿಕ್ ಗಂಟಲ್ ಕಟ್ಟೆ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವು ಗಂಟಲ್ ಕಟ್ಟೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟಣೆಯನ್ನು ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾಕ್ಟರ್ ಮಾನಸರವರು ಉದ್ಘಾಟಿಸಿ, ಜನರಿಗೆ ಕಣ್ಣಿನ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆಯ ಆಡಳಿತ ವೈದ್ಯಾಧಿಕಾರಿಯವರಾದ ಡಾಕ್ಟರ್ ಅಕ್ಷತಾ ನಾಯಕ್, ನ್ಯಾಯವಾದಿ ಎಂ ಬಾಹುಬಲಿ ಪ್ರಸಾದ್, ಸುರೇಶ್ ಕೋಟ್ಯಾನ್, ಕೃಷ್ಣರಾಜ ಹೆಗ್ಡೆ, ಪದ್ಮಯ ಬಿ ಸುವರ್ಣ, ಶ್ರೀಧರ್, ಶಾರದಾದೇವಿ, ಮುಖ್ಯೋಪಾದ್ಯಾಯಿನಿ ನಿಶಾ ಹಾಗೂ ಕ್ಲಿನಿಕ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸುಮಾರು 105 ಜನ ಫಲಾನುಭವಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು.

ರುಡ್‌ಸೆಟ್: ಉಚಿತ ಮಹಿಳಾ ಟೈಲರಿಂಗ್ ತರಬೇತಿ

Article Image

ರುಡ್‌ಸೆಟ್: ಉಚಿತ ಮಹಿಳಾ ಟೈಲರಿಂಗ್ ತರಬೇತಿ

ಉಜಿರೆ: ರುಡ್‌ಸೆಟ್ ಸಂಸ್ಥೆ, ವತಿಯಿಂದ ಆಸಕ್ತ ಮಹಿಳೆಯರಿಗೆ ಮತ್ತು ಯುವತಿಯರಿಗೆ ಉಚಿತ ಮಹಿಳಾ ಟೈಲರಿಂಗ್ ತರಬೇತಿಯು ಉಚಿತ ಊಟ ಮತ್ತು ವಸತಿಯೊಂದಿಗೆ ದಿನಾಂಕ:16.06.2026 ರಿಂದ 16.07.2026 ರ ವರೆಗೆ ನಡೆಯಲಿದೆ. ಅವಧಿ: 31 ದಿನಗಳು ಅರ್ಹತೆ: 18 ರಿಂದ 50 ವರ್ಷದೊಳಗಿನ ಮಹಿಳೆಯರು ಕನ್ನಡ ಓದು-ಬರಹ ತಿಳಿದಿರುವವರು ಸ್ವ ಉದ್ಯೋಗ ಆಸಕ್ತಿ ಇರುವವರು ಸ್ಥಳ:RUDSET Institute Siddhavana ಸಿದ್ದವನ, ಉಜಿರೆ https://maps.app.goo.gl/iQhbzzA9k3CrMuAv6 ಅರ್ಜಿ ನೋಂದಣಿ ಲಿಂಕ್:https://forms.gle/9LUE1UvHMAV21vRS7 ಸಂಪರ್ಕಿಸಿ: 6364561982 / 8296770307/9980885900 9448348569 / 8861514706 / 9591044014 / 9902594791 08256-236404 www.rudsetujire.com

ವಿಶ್ವ ಬೈಸಿಕಲ್ ದಿನಾಚರಣೆ ಮತ್ತು ಪರಿಸರ ದಿನಾಚರಣೆ

Article Image

ವಿಶ್ವ ಬೈಸಿಕಲ್ ದಿನಾಚರಣೆ ಮತ್ತು ಪರಿಸರ ದಿನಾಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯ ಹಾಗೂ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಜಂಟಿಯಾಗಿ ‘ವಿಶ್ವ ಬೈಸಿಕಲ್ ದಿನಾಚರಣೆ’ ಮತ್ತು ‘ವಿಶ್ವ ಪರಿಸರ ದಿನಾಚರಣೆ’ಯನ್ನು ಆಚರಿಸಿದವು. ಇದರೊಂದಿಗೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಹತ್ತನೇ ವರ್ಷದ ಯಶಸ್ವಿ ದಶಮಾನೋತ್ಸವ ಸಂಭ್ರಮಾಚರಣೆಯನ್ನು ಜೂ. 7ರಂದು ಅತ್ಯಂತ ಸಡಗರದಿಂದ ಆಚರಿಸಲಾಯಿತು.​ಭಾರತದ ಮೊದಲ ಕ್ಯಾನ್ಸರ್ ಮುಕ್ತ ಸಾಧಕ ಟ್ರಯಾಥ್ಲೆಟ್ ಹಾಗೂ ಐರನ್‌ಮ್ಯಾನ್ (Ironman) ಪ್ರಶಸ್ತಿ ವಿಜೇತರಾದ ಡಾ. ಮಯೂರಾ ಶಿವಾಲ್ಕರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ​ಈ ವಿಶೇಷ ಸಂದರ್ಭದ ಅಂಗವಾಗಿ ಎಸ್‌ಡಿಎಂ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗಾಗಿ 10 ಕಿಲೋಮೀಟರ್ ಉದ್ದದ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಮತ್ತು ಪರಿಸರ ಜಾಗೃತಿ ಮೂಡಿಸುವ ಈ ರ‍್ಯಾಲಿಯಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಸದಸ್ಯರು ಸೇರಿದಂತೆ 120ಕ್ಕೂ ಹೆಚ್ಚು ಸೈಕಲ್ ಸವಾರರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಇದೇ ವೇಳೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಸಾಧಕರಿಗೆ, ಗಣ್ಯರು ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಿದರು.​ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರಾದ ಡಾ. ವಿಜಯ್ ಕೆ. ಕುಲಕರ್ಣಿ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗಡೆ ಮತ್ತು ಸಂಘಟನಾ ಕಾರ್ಯದರ್ಶಿಯಾದ ಡಾ. ಮಹಾಂತೇಶ್ ಮಟ್ಟಿ ಮತ್ತಿತರರು ಉಪಸ್ಥಿತರಿದ್ದರು.​ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಅಧ್ಯಕ್ಷರಾದ ಶೆಟ್ಟೆಪ್ಪ ಪಿರಂಗಿ ಅವರು ಸ್ವಾಗತಿಸಿದರು. ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಕಾರ್ಯದರ್ಶಿಯಾದ ಶಿವಾನಂದ ದಂಡವತಿಮಠ ಅವರು ವಂದನಾರ್ಪಣೆ ಮಾಡಿದರು. ಡಾ. ವೈಷ್ಣವಿ ಮತ್ತು ಡಾ. ಅನಘಾ ಕಾರ್ಯಕ್ರಮವನ್ನು ನಿರೂಪಿಸಿದರು.

ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರಸ್ವಾಮಿ ಗೌಡರಿಗೆ ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ

Article Image

ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರಸ್ವಾಮಿ ಗೌಡರಿಗೆ ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಯತಿಕುಮಾರಸ್ವಾಮಿ ಗೌಡ ಅವರು ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘ, ಬೆಂಗಳೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯಲ್ಲಿ ಪ್ರದಾನ ಮಾಡಲಾದ ‘ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ. ಭವಿಷ್ಯದ ಆರೋಗ್ಯ ವೃತ್ತಿಪರರನ್ನು ರೂಪಿಸುವಲ್ಲಿ ಅತ್ಯುನ್ನತ ಮಟ್ಟದ ಬೋಧನೆ, ಮಾರ್ಗದರ್ಶನ ಹಾಗೂ ನರ್ಸಿಂಗ್ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ಯತಿಕುಮಾರಸ್ವಾಮಿ ಗೌಡ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಪತಿ ಡಾ. ಭಗವಾನ್ ಬಿ.ಸಿ. ಉಪಸ್ಥಿತರಿದ್ದರು.

ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಭೇಟಿ

Article Image

ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಭೇಟಿ

ಧರ್ಮಸ್ಥಳ, ಮೇ 31: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಅವರು ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಉಪರಾಷ್ಟ್ರಪತಿಗಳು ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಕ್ಷೇತ್ರವು ಸಮಾಜಮುಖಿ ಸೇವೆಯಲ್ಲಿ ಸಲ್ಲಿಸುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು. ಭೇಟಿಯ ಸಂದರ್ಭದಲ್ಲಿ ಹೆಗ್ಗಡೆಯವರ ಕುಟುಂಬ ಸದಸ್ಯರೂ ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಹಾಗೂ ಅಮಿತ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಧರ್ಮಸ್ಥಳದ ಜಿ. ಮಾಧುರ್ಯ ಶೇ. 100 ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ

Article Image

ಧರ್ಮಸ್ಥಳದ ಜಿ. ಮಾಧುರ್ಯ ಶೇ. 100 ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ

ಉಜಿರೆ: 2025-26ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ – 2ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾರೆ. ಇವರು ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಗಳ ಪುತ್ರಿ.

ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮ

Article Image

ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮ

ಉಜಿರೆ, ಮೇ 23: “ವ್ಯವಹಾರ ಹಾಗೂ ಉದ್ಯಮ ಕ್ಷೇತ್ರದಲ್ಲಿ ಅವಕಾಶಗಳು ಎಲ್ಲರಿಗೂ ಸಮಾನವಾಗಿ ಲಭ್ಯವಿರುತ್ತವೆ. ಆದರೆ ಆ ಅವಕಾಶಗಳನ್ನು ಗುರುತಿಸಿ, ಬಳಸಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ವೀರು ಶೆಟ್ಟಿ ಹೇಳಿದರು. ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ 30 ದಿನಗಳ ಕಾಲ ಆಯೋಜಿಸಲಾದ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಆಶಯದಂತೆ ರುಡ್‌ಸೆಟ್ ಸಂಸ್ಥೆ ಗ್ರಾಮೀಣ ಯುವಜನರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಉದ್ಯಮ ಅಥವಾ ವ್ಯವಹಾರ ನಡೆಸುವ ಸಂದರ್ಭದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು” ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿ ಉಜಿರೆಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ ಕುಮಾರ್ ಮಾತನಾಡಿ, “ರುಡ್‌ಸೆಟ್‌ನ ತರಬೇತಿಗಳು ಕೇವಲ ಕೌಶಲ್ಯಾಭಿವೃದ್ಧಿಗೆ ಮಾತ್ರ ಸೀಮಿತವಾಗಿಲ್ಲ. ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸುವ ದಿಕ್ಕಿನಲ್ಲಿ ಅವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ತರಬೇತಿಯ ಮೂಲಕ ಪಡೆದ ಜ್ಞಾನ ಮತ್ತು ಕೌಶಲ್ಯಗಳನ್ನು ಜೀವನದಲ್ಲಿ ಸದುಪಯೋಗಪಡಿಸಿಕೊಂಡು ಯಶಸ್ಸಿನತ್ತ ಸಾಗಬೇಕು” ಎಂದು ಹೇಳಿದರು. ಶ್ರವಣಿ ಮತ್ತು ಜಲಜಾಕ್ಷಿ ಅವರು ಪ್ರಾರ್ಥಿಸಿ, ಸಂಸ್ಥೆಯ ನಿರ್ದೇಶಕ ಅಜೇಯ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಉದಯ ಹಾಗೂ ನಿತೀಶ್ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡು, ರುಡ್‌ಸೆಟ್ ಸಂಸ್ಥೆಯ ತರಬೇತಿಯು ತಮ್ಮ ಜೀವನದಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದು, ಉದ್ಯೋಗ ಹಾಗೂ ಸ್ವಉದ್ಯೋಗದ ದಿಕ್ಕಿನಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದೆ ಎಂದು ಅಭಿಪ್ರಾಯಪಟ್ಟರು.

ಆಳ್ವಾಸ್:‌ ವಿಶೇಷ ಉಪನ್ಯಾಸ ಕಾರ್ಯಕ್ರಮ

Article Image

ಆಳ್ವಾಸ್:‌ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಪ್ರತಿಯೊಂದು ವೈಫಲ್ಯವೂ ಜೀವನದಲ್ಲಿ ಮಹತ್ವದ ಪಾಠವನ್ನು ಕಲಿಸಿ ವ್ಯಕ್ತಿಯನ್ನು ಯಶಸ್ಸಿಗೆ ಇನ್ನಷ್ಟು ಹತ್ತಿರಕ್ಕೆ ಕರೆದೊಯ್ಯಬಲ್ಲದು ಎಂದು ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಅಂಕಿತಾ ಶ್ರೀವಾಸ್ತವ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ “ಒಲಿವ್ ಗ್ರೀನ್ ಟು ಬ್ಯೂಟಿ ಕ್ವೀನ್ – ಎ ಜರ್ನಿ ವಿದಿನ್” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವಗಳು, ಎದುರಿಸಿದ ಸವಾಲುಗಳು, ವೈಫಲ್ಯಗಳು ಹಾಗೂ ಸಾಧನೆಗಳನ್ನು ಹಂಚಿಕೊಂಡರು. ಸಂಪೂರ್ಣ ಪುರುಷ ಸೈನಿಕರಿಂದ ಕೂಡಿದ ಘಟಕದಲ್ಲಿ ಮಹಿಳಾ ಅಧಿಕಾರಿಯಾಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವುದು ಅತ್ಯಂತ ದೊಡ್ಡ ಸವಾಲಾಗಿತ್ತು, ಆದರೆ ಆ ಸವಾಲನ್ನು ಸ್ವೀಕರಿಸಿ ಜಯಿಸಿದ ಪರಿ, ಸದಾ ಪ್ರೇರಣಾದಾಯಕ ಎಂದರು. ಯಶಸ್ಸು ಸಾಧಿಸಲು ಏಕಾಗ್ರತೆ, ದೃಢನಿಶ್ಚಯ ಮತ್ತು ಕ್ರಿಯಾಶೀಲತೆ ಅಗತ್ಯವೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಗಿಲ್ ಯುದ್ಧದ ಅವಧಿಯಲ್ಲಿ ಭಾರತ-ಚೀನಾ ಗಡಿಭಾಗದಲ್ಲಿ ಸೇವೆ ಸಲ್ಲಿಸಿದ ಸಂದರ್ಭವನ್ನು ನೆನಪಿಸಿಕೊಂಡ ಅವರು, ಕರ್ತವ್ಯದ ವೇಳೆ ಗಂಭೀರವಾಗಿ ಗಾಯಗೊಂಡರೂ ತಮ್ಮ ಶಸ್ತ್ರಾಸ್ತ್ರ ನೆಲಕ್ಕೆ ಬೀಳದಂತೆ ಕಾಪಾಡಿಕೊಂಡ ನಿದರ್ಶನವನ್ನು ವಿವರಿಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಮಹಿಳೆಯರು ತಮ್ಮನ್ನು ಸಾಬೀತುಪಡಿಸಲು ಕೃತಕ ಪುರುಷತ್ವದ ಗುಣಗಳನ್ನು ಅಳವಡಿಸಿಕೊಳ್ಳುವ ಬದಲು ತಮ್ಮತನವನ್ನು ಸ್ವೀಕರಿಸಿ ಮತ್ತಷ್ಟು ಬಲಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮಹಿಳಾ ಸೇನಾ ಅಧಿಕಾರಿಗಳ ಸೇವಾ ಅವಧಿಯನ್ನು 10 ವರ್ಷಗಳಿಂದ 14 ವರ್ಷಗಳಿಗೆ ವಿಸ್ತರಿಸುವ ಹೋರಾಟದಲ್ಲಿಯೂ ತಾವು ಪಾತ್ರವಹಿಸಿದ್ದಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಲೆಫ್ಟಿನೆಂಟ್ ಕರ್ನಲ್ ಅಂಕಿತಾ ಶ್ರೀವಾಸ್ತವ ಅವರ ಜೀವನಗಾಥೆ ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಪ್ರೇರಣೆದಾಯಕ. ವಿಮರ್ಶೆ ಮತ್ತು ತಿರಸ್ಕಾರಗಳು ಜೀವನದ ಅವಿಭಾಜ್ಯ ಅಂಗವಾಗಿದ್ದು, ಸಾರ್ವಜನಿಕ ಅಭಿಪ್ರಾಯಗಳಿಗೆ ಮಣಿಯದೆ ತಮ್ಮ ಗುರಿಯತ್ತ ದೃಢವಾಗಿ ಸಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಫೋರಂ ಅಧ್ಯಕ್ಷೆ ಡಾ. ದೀಪಾ ಕೊಠಾರಿ, ಸಕ್ಷಮ ಮಹಿಳಾ ಘಟಕದ ಸಂಚಾಲಕಿ ಡಾ ಗ್ರೀಷ್ಮಾ ವಿವೇಕ ಆಳ್ವ ಇದ್ದರು. ಶ್ರದ್ಧಾ ಹೆಗ್ಡೆ ನಿರೂಪಿಸಿ, ಫಾತಿಮಾ ವಂದಿಸಿದರು.

ಮೂಡುಬಿದಿರೆ: ಆಳ್ವಾಸ್‌ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ

Article Image

ಮೂಡುಬಿದಿರೆ: ಆಳ್ವಾಸ್‌ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ

ಮೂಡುಬಿದಿರೆ: ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ರಾಜ್ಯದ ಅಗ್ರಗಣ್ಯ 10 ರ‍್ಯಾಂಕ್‌ನ ಒಳಗೆ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ 103 ವಿದ್ಯಾರ್ಥಿಗಳ ಜೊತೆಯಲ್ಲಿ ಎಸ್‌ಎಸ್‌ಎಲ್‌ಸಿ ಹಂತದಲ್ಲಿ 50%ಕ್ಕಿಂತ ಕಡಿಮೆ ಅಂಕಗಳಿಸಿ, ನಂತರ ಪದವಿಪೂರ್ವ ಶಿಕ್ಷಣಕ್ಕೆ ಆಳ್ವಾಸ್ ಸೇರಿದ ನಂತರ 95%ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸುವ ಕರ‍್ಯಕ್ರಮ ಭಾನುವಾರ ನುಡಿಸಿರಿ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, ನೀವು ಈಗ ಕೇವಲ ನಮ್ಮ ವಿದ್ಯಾರ್ಥಿಗಳಲ್ಲ, ನಮ್ಮ ಸಂಸ್ಥೆಯ ರಾಯಭಾರಿಗಳಾಗುವವರು. ಇಲ್ಲಿ ಕಲಿತಿರುವ ಶಿಸ್ತಿನ ಜೊತೆಗೆ ಉತ್ತಮ ಸ್ವಭಾವ, ಹೋರಾಟ ಮನೋಭಾವ ಹಾಗೂ ಕೂಡಿ ಬಾಳುವ ಗುಣಗಳು ನಿಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗಲಿ ಎಂದರು. ಆಳ್ವಾಸ್‌ನ್ನು ‘ಮಿನಿ ಇಂಡಿಯಾ’ ಎಂದು ಕರೆಯಲಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಒಂದೇ ಕುಟುಂಬದAತೆ ಬೆರೆತು ಬದುಕುತ್ತಾರೆ. ಭಾಷೆ, ಸಂಸ್ಕೃತಿ, ಸಂಪ್ರದಾಯಗಳ ವೈವಿಧ್ಯತೆಯ ನಡುವೆಯೂ ಒಗ್ಗಟ್ಟಿನಿಂದ ಬದುಕುವುದನ್ನು ಕಲಿಸುತ್ತದೆ. ಈ ಅನುಭವವು ನಿಮ್ಮನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತದೆ. ನೀವು ಎಲ್ಲಿಗೆ ಹೋದರೂ ಈ ಒಗ್ಗಟ್ಟಿನ ಸಂದೇಶವನ್ನು ಸಮಾಜಕ್ಕೆ ಹಂಚುವ ಜವಾಬ್ದಾರಿ ನಿಮ್ಮ ಮೇಲಿದೆ. ಮುಂದಿನ ಶೈಕ್ಷಣಿಕ ವಿಸ್ತರಣೆಯ ಭಾಗವಾಗಿ, ಈ ವರ್ಷದಿಂದ ಎಂಬಿಬಿಎಸ್ ಕೋರ್ಸ್ನ್ನು ಪ್ರಾರಂಭಿಸಲಾಗುವುದು ಎಂದರು. ವೈದ್ಯಕೀಯ ಕ್ಷೇತ್ರದ ಮಹತ್ವವನ್ನು ತನ್ನ ಸ್ವಂತ ಅನುಭವದ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿದರು. ವೈದ್ಯಕೀಯ ಕ್ಷೇತ್ರದಲ್ಲಿ ಮಾನವೀಯ ಸ್ಪರ್ಶ ಅತ್ಯಂತ ಮುಖ್ಯ ಎಂದರು. ವಾಣಿಜ್ಯ ವಿಭಾಗದಲ್ಲಿ 600ಕ್ಕೇ 600 (ಪೂರ್ಣಾಂಕ) ಅಂಕ ಪಡೆದ ದಿಶಾಳಿಗೆ 3 ಲಕ್ಷ ನಗದು ಹಾಗೂ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾದ ರಕ್ಷಿತಾ ಮಂಜುನಾಥ್‌ಳಿಗೆ 2 ಲಕ್ಷ ನಗದಿನೊಂದಿಗೆ ಸನ್ಮಾನಿಸಲಾಯಿತು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಚರ‍್ಯ ಪ್ರೋ ಮೊಹಮ್ಮದ್ ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿ. ಎನ್. ಹಾಗೂ ವಿವಿಧ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು ಇದ್ದರು. ವೇಣುಗೋಪಾಲ ಶೆಟ್ಟಿ ಕರ‍್ಯಕ್ರಮ ನಿರ್ವಹಿಸಿದರು.

ಉಜಿರೆ: ಎಸ್‌.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಗ್ಗಿ ವಾಹನದ ಸೇವೆ

Article Image

ಉಜಿರೆ: ಎಸ್‌.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಗ್ಗಿ ವಾಹನದ ಸೇವೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲು ಕಷ್ಟಪಡುವ ರೋಗಿಗಳಿಗೆ ಬಗ್ಗಿ ವಾಹನದ ಸೇವೆ ಇನ್ನು ಮುಂದೆ ವಯೋವೃದ್ಧರಿಗೆ ಮತ್ತು ಅಶಕ್ತರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೊರ ಆವರಣದೊಳಗೆ ಸಂಚರಿಸಲು ಬಗ್ಗಿ ವಾಹನದ ಸೇವೆ ಲಭ್ಯವಿರಲಿದೆ. ಪರಿಸರ ಸ್ನೇಹಿ ಮತ್ತು ಶಬ್ದ ರಹಿತ ವಾಹನ ಇದಾಗಿದ್ದು, ನಡೆಯಲು ಕಷ್ಟ ಪಡುವವರಿಗೆ ಆಸ್ಪತ್ರೆಯ ಹೊರ ಆವರಣದಲ್ಲಿ ಸಂಚರಿಸಲು ಇದು ಬಹು ಉಪಯುಕ್ತವಾಗಿದೆ. 4.65 ಲಕ್ಷ ಮೌಲ್ಯದ ಈ ವಾಹನವನ್ನು ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನವರು ಉಚಿತವಾಗಿ ನೀಡಿದ್ದು, ಬ್ಯಾಂಕ್ ಆಫ್ ಬರೋಡಾ ಇದರ ಪ್ರಾದೇಶಿಕ ಮೇನೇಜರ್ ಗಣೇಶ್ ಉಜಿನ ಮತ್ತು ಜನರಲ್ ಮೆನೇಜರ್ ರಾಜೇಶ್ ಖನ್ನಾ ಇವರು ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬಗ್ಗಿ ವಾಹನದ ಕೀಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಉಜಿರೆ ಶಾಖೆಯ ಮೇನೇಜರ್ ಶಿವರಾಮ ಹಾಗೂ ಧರ್ಮಸ್ಥಳ ಶಾಖೆಯ ಮೆನೇಜರ್ ಚೈತನ್ಯಾನಂದ ಎನ್ ಉಪಸ್ಥಿತರಿದ್ದರು.

ಮೂಡಬಿದಿರೆ: ಸಂಸ್ಥಾಪನಾ ದಿನಾಚರಣೆ

Article Image

ಮೂಡಬಿದಿರೆ: ಸಂಸ್ಥಾಪನಾ ದಿನಾಚರಣೆ

ಮೂಡುಬಿದಿರೆ:: ಕನ್ನಡದ ಅಭಿವೃದ್ದಿಗೆ ಮಹತ್ತರ ಕೊಡುಗೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಮೂಡಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಆಶ್ರಯದಲ್ಲಿ ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ ಪ್ರಾಧ್ಯಾಪಕ ರಾಮಪ್ರಸಾದ ಕಾಂಚೋಡು ಮಾತನಾಡಿ, ಕನ್ನಡದ ಕಟ್ಟಾಳುಗಳ ಬೆವರಿನ ಫಲವೇ ಕನ್ನಡ ಸಾಹಿತ್ಯ ಪರಿಷತ್ತು. ಅದರ ಹುಟ್ಟುಹಬ್ಬವನ್ನು ಆಚರಿಸುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ. ಇಂದಿನ ಕನ್ನಡದ ವೈಭವದ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತು ಕೈಗೊಂಡ ಅನೇಕ ಕಾರ್ಯಗಳಿವೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸ, ಅದರ ಸೇವೆಗಳು ಮತ್ತು ಸಾಧನೆಗಳನ್ನು ಸ್ಮರಿಸಲಾಯಿತು. ಕನ್ನಡ ಭಾಷೆಯ ಅಭಿವೃದ್ಧಿಗೆ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತೀರುವ ಸಾಹಿತ್ಯ ಪರಿಷತ್ತು, ಗ್ರಂಥ ಪ್ರಕಾಶನ, ಸಂಶೋಧನೆ, ಸಾಹಿತ್ಯ ಸಮ್ಮೇಳನಗಳು ಹಾಗೂ ಸಂಸ್ಕೃತಿ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದೆ. ಮಹಾಕಾವ್ಯಗಳು, ಶಾಸನಗಳು ಮತ್ತು ಮೌಖಿಕ ಸಾಹಿತ್ಯವನ್ನು ಸಂಗ್ರಹಿಸಿ ಗ್ರಂಥರೂಪದಲ್ಲಿ ಉಳಿಸುವ ಮೂಲಕ ಕನ್ನಡದ ಪರಂಪರೆಯನ್ನು ಮುಂದಿನ ಪೀಳಿಗೆಗಳಿಗೆ ಪರಿಚಯಿಸುವ ಕಾರ್ಯವನ್ನು ಇದು ನಿರಂತರವಾಗಿ ಮಾಡುತ್ತಿದೆ ಎಂದರು. ಇಂದಿನ ಡಿಜಿಟಲ್ ಯುಗದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವುದು, ಆಂಗ್ಲಮಾಧ್ಯಮ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಬೆಳೆಸುವುದು ಹಾಗೂ ತಂತ್ರಜ್ಞಾನವನ್ನು ಅರ್ಥಪೂರ್ಣವಾಗಿ ಬಳಸಿಕೊಂಡು ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಅವರು ಕರೆ ನೀಡಿದರು. ಮೂಡಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ರಾಮಕೃಷ್ಣ ಶೆಟ್ಟಿ ಪ್ರಾರ್ಥಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಕಾರ್ಯಕ್ರಮವನ್ನು ನಿರೂಪಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ 'ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ಪ್ರಶಸ್ತಿ

Article Image

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ 'ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ಪ್ರಶಸ್ತಿ

ಉಜಿರೆ,ದಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ʼಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ' ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿ ನೀಡಿದ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಯೂ, ಹಲವು ದಶಕಗಳಿಂದ ಶಿಕ್ಷಣ ಮತ್ತು ತತ್ಸಂಬಂಧಿ ಕ್ಷೇತ್ರಗಳ ಬೆಳವಣಿಗೆಗೆ ಪವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಿರುವ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಶುಭಾಶಯ ತಿಳಿಸಿದರು. ಪ್ರಶಸ್ತಿಗೆ ಪಾತ್ರವಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಪ್ರಾಚಾರ್ಯರು, ಪೋಷಕರು ಹಾಗು ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿರುತ್ತಾರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಾಗುತ್ತಿರುವ ವಿಜ್ಞಾನ, ಆಯುರ್ವೇದ , ಕಾನೂನು, ತಂತ್ರಜ್ಞಾನ, ಪದವಿ, ಸ್ನಾತಕೋತ್ತರ, ಮೆಡಿಕಲ್ ಸೇರಿದಂತೆ ಸಂಸ್ಥೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ಶಿಸ್ತು, ಸಂಸ್ಕಾರ, ಮೌಲ್ಯ ಹಾಗು ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುತ್ತಿದೆ. ಈಗಾಗಲೇ ನೂರಾರು ಜನ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವಾರು ಸಂಘ ಸಂಸ್ಥೆಗಳು ಶ್ಲಾಘಿಸಿ ಗೌರವಿಸಿದೆ. ಇದೀಗ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ''ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ' ಪ್ರಶಸ್ತಿ ನೀಡಿ ಗೌರವಿಸಿರುವುದು ಸಂಸ್ಥೆಯ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಹೆಚ್ಚಿಸಿದೆ. ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕೃತಜ್ಞತೆಯನ್ನು ತಿಳಿಸುತ್ತೇನೆ - ಡಾ. ಸತೀಶ್ಚಂದ್ರ ಎಸ್ ಕಾರ್ಯದರ್ಶಿಗಳು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ

First Previous

Showing 1 of 16 pages

Next Last